ಕರಾವಳಿ

ಎ.4-6 ಮಂಗಳೂರು- ಮಧೂರು ದೇವಸ್ಥಾನಕ್ಕೆ KSRTCಯಿಂದ ವಿಶೇಷ ಬಸ್

ಸಮಗ್ರ ನ್ಯೂಸ್: ಮಧೂರು ಕ್ಷೇತ್ರದಲ್ಲಿ ಬ್ರಹ್ಮಕಲಶೋತ್ಸವ ವಿಜೃಂಭಣೆಯಿಂದ ನಡೆಯುತ್ತಿದ್ದು, ಸಾರ್ವಜನಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಮಂಗಳೂರು ಕೆಎಸ್ಸಾರ್ಟಿಸಿ ವಿಭಾಗದಿಂದ ಮಂಗಳೂರು-ಮಧೂರು ನಡುವೆ ವಿಶೇಷ ಬಸ್ ಸೇವೆಯನ್ನು ಆರಂಭಿಸಿದೆ. ಎ.4ರಿಂದ ಈ ಬಸ್ ಸೇವೆ ಲಭಿಸಲಿದ್ದು, ಬಸ್ ಮಂಗಳೂರಿನ ಬಿಜೈ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದಿಂದ ಮಧೂರಿಗೆ ಬೆಳಗ್ಗೆ 10 ಗಂಟೆಗೆ ಮತ್ತು‌ 10.20ಕ್ಕೆ ಹೊರಡಲಿದೆ. ಮಧೂರಿನಿಂದ ಮಂಗಳೂರಿಗೆ 1.30 ಮತ್ತು 1.45ಕ್ಕೆ‌ ಹೊರಡಲಿದೆ ಎಂದು ಕೆಎಸ್ಸಾರ್ಟಿಸಿ ಅಧಿಕಾರಿಗಳು ತಿಳಿಸಿದ್ದಾರೆ.

ಎ.4-6 ಮಂಗಳೂರು- ಮಧೂರು ದೇವಸ್ಥಾನಕ್ಕೆ KSRTCಯಿಂದ ವಿಶೇಷ ಬಸ್ Read More »

ಪೋಕ್ಸೊ ಪ್ರಕರಣ| ನ್ಯಾಯಾಲಯಕ್ಕೆ ಖುದ್ದು ಹಾಜರಾಗುವುದರಿಂದ ಬಿ.ಎಸ್.ವೈ ಬಚಾವ್

ಬೆಂಗಳೂರು: ಮಾಜಿ ಸಿಎಂ ಬಿ.ಎಸ್.ವೈ ವಿರುದ್ಧದ ಪೋಕ್ಸೋ ಪ್ರಕರಣದಲ್ಲಿ ಖುದ್ದು ಹಾಜರಾಗುವಂತೆ ನೀಡಿದ್ದ ವಿಶೇಷ ನ್ಯಾಯಾಲಯದ ಆದೇಶಕ್ಕೆ ಹೈಕೋರ್ಟ್‌ ತಡೆ ನೀಡಿದೆ. ವಿಶೇಷ ನ್ಯಾಯಾಲಯದ ಸಮನ್ಸ್ ಹಾಗೂ ಕೋರ್ಟ್ ಕಾಗ್ನಿಜೆನ್ಸ್ ರದ್ದು ಮಾಡುವಂತೆ ಕೋರಿ ಬಿಎಸ್‍ವೈ ಮತ್ತು ಇತರ ಮೂವರು ಹೈಕೋರ್ಟ್ ಮೊರೆ ಹೋಗಿದ್ದರು. ಅರ್ಜಿಯ ವಿಚಾರಣೆ ನಡೆಸಿದ ನ್ಯಾ. ಪ್ರದೀಪ್ ಸಿಂಗ್ ಯೆರೂರ್ ಅವರಿದ್ದ ಏಕಸದಸ್ಯ ಪೀಠ ಸಮನ್ಸ್ ಆದೇಶಕ್ಕೆ ತಡೆ ನೀಡಿದೆ. ಮುಂದಿನ ವಿಚಾರಣೆಯವರೆಗೂ ಫಾಸ್ಟ್ ಟ್ರ್ಯಾಕ್ ಕೋರ್ಟ್‍ಗೆ ಹಾಜರಾತಿಗೆ ವಿನಾಯಿತಿ ನೀಡಲಾಗಿದೆ. ಈ

ಪೋಕ್ಸೊ ಪ್ರಕರಣ| ನ್ಯಾಯಾಲಯಕ್ಕೆ ಖುದ್ದು ಹಾಜರಾಗುವುದರಿಂದ ಬಿ.ಎಸ್.ವೈ ಬಚಾವ್ Read More »

ಕರಾವಳಿಯನ್ನು ಕಡೆಗಣಿಸಿದ್ರೆ ಪ್ರತ್ಯೇಕ ವಿಧಾನಸೌಧ ಕಟ್ಟಿಸಿಕೊಂಡು ಮಾತಾಡುತ್ತೇವೆ| ವಿಧಾನ ಮಂಡಲ ಅಧಿವೇಶನದಲ್ಲಿ ಶಾಸಕ ಹರೀಶ್ ಪೂಂಜಾ ಆಕ್ರೋಶ

ಸಮಗ್ರ ನ್ಯೂಸ್ : ಕರಾವಳಿ ಅಭಿವೃದ್ಧಿ ಕಡೆಗಣಿಸಿದ್ರೆ ನಾವು ಪ್ರತ್ಯೇಕ ವಿಧಾನಸೌಧ ಕಟ್ಟಿಸಿಕೊಂಡು ಮಾತಾಡುವ ವ್ಯವಸ್ಥೆ ತರಬೇಕಾಗುತ್ತದೆ ಎಂದು ಬಿಜೆಪಿ ಶಾಸಕ ಹರೀಶ್ ಪೂಂಜಾ ಈ ಕೂಗೆಬ್ಬಿಸಿದ್ದಾರೆ. ವಿಧಾನಸಭೆಯಲ್ಲಿ 69 ನಿಯಮದಡಿಯಲ್ಲಿ ಕರಾವಳಿ ಜಿಲ್ಲೆಗಳ ಸಮಸ್ಯೆಗಳ ಬಗ್ಗೆ ಇಂದು ಚರ್ಚೆ ನಡೆಯಿತು. ಈ ವೇಳೆ ಸುನಿಲ್ ಕುಮಾರ್ ಮಾತನಾಡಿ, ಸದನದಲ್ಲಿ ಉತ್ತರ ಕರ್ನಾಟಕ, ಬೆಂಗಳೂರು ಬಗ್ಗೆ ಚರ್ಚೆ ಆಗುತ್ತದೆ. ಆದರೆ ಕರಾವಳಿ ಬಗ್ಗೆ ಯಾವತ್ತೂ ಚರ್ಚೆಗಳು ನಡೆದಿಲ್ಲ. ಟೆಂಪಲ್ ಟೂರಿಸಂ ವಿಚಾರವಾಗಿ ಕರಾವಳಿಯನ್ನು ಅಭಿವೃದ್ಧಿ ಪಡಿಸಬೇಕು. 330 ಕಿ.ಮೀ

ಕರಾವಳಿಯನ್ನು ಕಡೆಗಣಿಸಿದ್ರೆ ಪ್ರತ್ಯೇಕ ವಿಧಾನಸೌಧ ಕಟ್ಟಿಸಿಕೊಂಡು ಮಾತಾಡುತ್ತೇವೆ| ವಿಧಾನ ಮಂಡಲ ಅಧಿವೇಶನದಲ್ಲಿ ಶಾಸಕ ಹರೀಶ್ ಪೂಂಜಾ ಆಕ್ರೋಶ Read More »

ಸ್ವಿಟ್ಜರ್ಲೆಂಡ್ ಪ್ರವಾಸಿಗರ ಆಟೋಸಫಾರಿ: 7,000 ಕಿ.ಮೀ. ದಕ್ಷಿಣ ಭಾರತ ಸಂಚಾರ!

ಸಮಗ್ರ ನ್ಯೂಸ್: ಭಾರತದ ಸಂಸ್ಕೃತಿ, ಪ್ರಕೃತಿ ಸೌಂದರ್ಯ, ಮತ್ತು ಊಟದ ರುಚಿಯ ಆಶಯದಲ್ಲಿ ಸ್ವಿಟ್ಜರ್ಲೆಂಡ್‌ನ ಮೂವರು ಪ್ರವಾಸಿಗರು ಆಟೋದಲ್ಲಿ 7,000 ಕಿ.ಮೀ. ಪ್ರಯಾಣ ನಡೆಸಿದ್ದಾರೆ. ಗೋವಾದಿಂದ ಆಟೋ ಬಾಡಿಗೆ ತೆಗೆದುಕೊಂಡ ಈ ವಿದೇಶಿ ಪ್ರವಾಸಿಗರು, ತಾವೇ ವಾಹನ ಓಡಿಸುತ್ತಾ ಕರ್ನಾಟಕ, ಕೇರಳ, ತಮಿಳುನಾಡು, ಮಹಾರಾಷ್ಟ್ರ, ಮತ್ತು ಗೋವಾದ ದಟ್ಟ ಅರಣ್ಯ, ಕಡಲು, ಬೆಟ್ಟ ಮತ್ತು ನಗರ ಜೀವರಾಸಿಕೆಯನ್ನು ಅನುಭವಿಸಿದ್ದಾರೆ. ಚಿಕ್ಕಮಗಳೂರಿಗೂ ಭೇಟಿ:ಪ್ರಕೃತಿಯ ಸೌಂದರ್ಯದ ಗುಂಗಿನಲ್ಲಿ, ಈ ಪ್ರವಾಸಿಗರು ಕರ್ನಾಟಕದ ಪ್ರಸಿದ್ಧ ಹಿಲ್‌ಸ್ಟೇಷನ್‌ ಚಿಕ್ಕಮಗಳೂರಿಗೂ ಭೇಟಿ ನೀಡಿದ್ದಾರೆ. ಇಲ್ಲಿನ

ಸ್ವಿಟ್ಜರ್ಲೆಂಡ್ ಪ್ರವಾಸಿಗರ ಆಟೋಸಫಾರಿ: 7,000 ಕಿ.ಮೀ. ದಕ್ಷಿಣ ಭಾರತ ಸಂಚಾರ! Read More »

ಮಂಗಳೂರು: ಪತ್ನಿಯ ಕೊಲೆ, ಪತಿಗೆ ಜೀವಾವಧಿ ಶಿಕ್ಷೆ

ಸಮಗ್ರ ನ್ಯೂಸ್:  ಪತ್ನಿಯ ಮೇಲೆ ಹಲ್ಲೆ ನಡೆಸಿ ಕೊಲೆಗೈದ ವ್ಯಕ್ತಿಗೆ ನ್ಯಾಯಾಧೀಶೆ ಸಂಧ್ಯಾ ಎಸ್ ಅಧ್ಯಕ್ಷತೆಯ ಮಂಗಳೂರಿನ ಮೂರನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿದೆ. ಶಿಕ್ಷೆಗೊಳಗಾದ ಆರೋಪಿಯನ್ನು ಉಳ್ಳಾಲ ತಾಲೂಕಿನ ಸೋಮೇಶ್ವರ ಗ್ರಾಮದ ಕುಂಪಲ ಚೇತನ್ ನಗರದ ನಿವಾಸಿ ಜೋಸೆಫ್ ಫ್ರಾನ್ಸಿಸ್ ರೆನ್ಸನ್ ಅಲಿಯಾಸ್ ರೆನ್ಸನ್ (53) ಎಂದು ಗುರುತಿಸಲಾಗಿದೆ. ಅವರ ಪತ್ನಿ ಶೈಮಾ ಬಲಿಯಾದವರು. ಜೋಸೆಫ್ ಫ್ರಾನ್ಸಿಸ್ ರೆನ್ಸನ್ ಮದ್ಯಪಾನ, ಜೂಜಾಟ ಮತ್ತು ಇತರ ದುಶ್ಚಟಗಳಿಗೆ ವ್ಯಸನಿಯಾಗಿದ್ದಳರು ಎಂದು ವರದಿಯಾಗಿದೆ.

ಮಂಗಳೂರು: ಪತ್ನಿಯ ಕೊಲೆ, ಪತಿಗೆ ಜೀವಾವಧಿ ಶಿಕ್ಷೆ Read More »

16 ದಿನಗಳಿಂದ ನಿಗೂಢವಾಗಿ ನಾಪತ್ತೆಯಾಗಿದ್ದ ದಿಗಂತ್  ತಾಯಿ ಮಡಿಲಿಗೆ

ಸಮಗ್ರ ನ್ಯೂಸ್:  ರಾಜ್ಯಾದ್ಯಂತ ಗಮನ ಸೆಳೆದಿದ್ದ ದಿಗಂತ್ ಯೆಂಬ ಯುವಕನ ನಾಪತ್ತೆ ಪ್ರಕರಣ ಸುಖಾಂತ್ಯ ಕಂಡಿದೆ. ಫರಂಗಿಪೇಟೆ ಬಳಿಯ ಕಿಡೆಬೆಟ್ಟುವಿನ ಪದ್ಮನಾಭ ಅವರ ಮಗ ದಿಗಂತ್ ಫೆ. 25 ರ ರಾತ್ರಿ ಫರಂಗಿಪೇಟೆ ರೈಲ್ವೆ ಹಳಿಗಳಿಂದ ನಾಪತ್ತೆಯಾಗಿದ್ದ. ತನ್ನ ಕಾಲೇಜಿನಿಂದ ಪಿಯುಸಿ ಪರೀಕ್ಷೆಯ ಪ್ರವೇಶ ಪತ್ರವನ್ನು ಪಡೆದ ನಂತರ, ಸಂಜೆ ದೇವಸ್ಥಾನಕ್ಕೆ ಹೋಗಿ ಅಲ್ಲಿಂದ ನಾಪತ್ತೆಯಾಗಿದ್ದ ಎಂದು ವರದಿಯಾಗಿತ್ತು. ಈ ನಿಗೂಢ ಕಣ್ಮರೆ ಹಲವು ಗೊಂದಲಕ್ಕೆ ಕಾರಣವಾಗಿದಲ್ಲದೆ ವಿವಿಧ ವದಂತಿಗಳಿಗೆ ಕಾರಣವಾಗಿತ್ತು. I ನಡುವೆ ಆತನನ್ನು ಸುರಕ್ಷಿತವಾಗಿ

16 ದಿನಗಳಿಂದ ನಿಗೂಢವಾಗಿ ನಾಪತ್ತೆಯಾಗಿದ್ದ ದಿಗಂತ್  ತಾಯಿ ಮಡಿಲಿಗೆ Read More »

ಕರಾವಳಿಯ ವಿವಿಧೆಡೆ ತಂಪೆರೆದ ವರುಣ| ಕಡಬ, ಸುಳ್ಯ, ಪುತ್ತೂರು ತಾಲೂಕಿನ ಹಲವೆಡೆ ಮಳೆಯ ಸಿಂಚನ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಕಡೆಗಳಲ್ಲಿ ಬುಧವಾರ ಸಂಜೆ ಉತ್ತಮ‌ ಮಳೆಯಾಗಿದೆ. ಬಿಸಿಲ ಧಗೆಯಿಂದ ಬೇಸತ್ತು ಹೋಗಿದ್ದ ಕರಾವಳಿಯಲ್ಲಿ ಕೊನೆಗೂ ವರ್ಷಧಾರೆಯಾಗಿದ್ದು, ಇಂದು ಸಂಜೆ ಸುರಿದ ಮಾರ್ಚ್ ತಿಂಗಳ ಮೊದಲ ಮಳೆಯಿಂದಾಗಿ ತಾಪಮಾನ ಕೊಂಚ ಇಳಿಕೆಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ , ಕಡಬ, ಪುತ್ತೂರು ತಾಲೂಕಿನಲ್ಲಿ ತುಂತುರು ಮಳೆಯಾಗಿದೆ. ಮಧ್ಯಾಹ್ನ ಬಳಿಕ ಮೋಡ ಕವಿದ ವಾತಾವರಣ ಇದ್ದು ಸಂಜೆ 3.30 ರ ವೇಳೆಗೆ ಸುಳ್ಯ ,ಹರಿಹರ , ಅಜ್ಜಾವರ, ಮಂಡೆಕೋಲು, ಅರಂತೋಡು, ಸೋಣಂಗೇರಿ

ಕರಾವಳಿಯ ವಿವಿಧೆಡೆ ತಂಪೆರೆದ ವರುಣ| ಕಡಬ, ಸುಳ್ಯ, ಪುತ್ತೂರು ತಾಲೂಕಿನ ಹಲವೆಡೆ ಮಳೆಯ ಸಿಂಚನ Read More »

ಅಡಿಕೆ ಮಾರುಕಟ್ಟೆಯಲ್ಲಿ ಚೇತರಿಕೆ| ₹.400 ಗಡಿ ದಾಟಿದ ಹೊಸ ಅಡಿಕೆ

ಸಮಗ್ರ ನ್ಯೂಸ್: ಹೊಸ ಅಡಿಕೆ, ರಬ್ಬರ್‌, ಕಾಳುಮೆಣಸು ಧಾರಣೆ ಮತ್ತೆ ಏರಿಕೆ ಕಂಡಿದೆ. ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ಧಾರಣೆ 400 ರೂ. ದಾಟಿದೆ. ಕ್ಯಾಂಪ್ಕೋ ಮಾರುಕಟ್ಟೆಯಲ್ಲಿ ಮಾ. 11ರಂದು ಹೊಸ ಅಡಿಕೆ ಧಾರಣೆ ಕೆ.ಜಿ.ಗೆ 400 ರೂ. ಇದ್ದರೆ, ಹೊರ ಮಾರುಕಟ್ಟೆಯಲ್ಲಿ 405 ರೂ. ಇತ್ತು. ಸಿಂಗಲ್‌ ಚೋಲ್‌ 455 ರೂ., ಡಬ್ಬಲ್‌ ಚೋಲ್‌ 495 ರೂ. ಧಾರಣೆ ಇದ್ದು, ಏರಿಕೆ ಕಂಡಿಲ್ಲ. ಮಾ. 11ರಂದು ರಬ್ಬರ್‌ ಗ್ರೇಡ್‌ಗೆ 190.50 ರೂ., ರಬ್ಬರ್‌ ಸ್ಕ್ರಾಪ್‌

ಅಡಿಕೆ ಮಾರುಕಟ್ಟೆಯಲ್ಲಿ ಚೇತರಿಕೆ| ₹.400 ಗಡಿ ದಾಟಿದ ಹೊಸ ಅಡಿಕೆ Read More »

‘ಮದುವೆಯಾಗಲು ಹುಡುಗಿ ಸಿಗದವರು ಅನ್ಯಧರ್ಮೀಯರನ್ನು ಪ್ರೀತಿಸಿ ಮದುವೆಯಾಗಿ’| ಉಳ್ಳಾಲದಲ್ಲಿ ಬಿಟ್ಟಿ ಸಲಹೆ ನೀಡಿದ ಚಕ್ರವರ್ತಿ ಸೂಲಿಬೆಲೆ

ಸಮಗ್ರ ನ್ಯೂಸ್: ‘ಮದುವೆಯಾಗಲು ಹುಡುಗಿ ಸಿಗದ ಹಿಂದೂ ಹುಡುಗರು ಅನ್ಯಧರ್ಮೀಯ ಯುವತಿಯರನ್ನು ಪ್ರೀತಿಸಿ ವಿವಾಹವಾಗಿ’ ಎಂದು ಚಕ್ರವರ್ತಿ ಸೂಲಿಬೆಲೆ ಬಿಟ್ಟಿ ಸಲಹೆ ನೀಡಿದ್ದಾರೆ. ವಿಶ್ವ ಹಿಂದೂ ಪರಿಷತ್ ವತಿಯಿಂದ ಭಾನುವಾರ ಮಂಗಳೂರಿನ ಕದ್ರಿ ಮಂಜುನಾಥ ಕ್ಷೇತ್ರದಿಂದ ಕುತ್ತಾರಿನ ಕೊರಗಜ್ಜನ ಆದಿಕ್ಷೇತ್ರಕ್ಕೆ ನಡೆದ ‘ಕೊರಗಜ್ಜನ ಆದಿಕ್ಷೇತ್ರಕ್ಕೆ ನಮ್ಮ ನಡೆ’ ಪಾದಯಾತ್ರೆಯ ಸಮಾರೋಪದಲ್ಲಿ ಅವರು ಮಾತನಾಡಿದರು. ‘ಮತಾಂತರ, ಲವ್ ಜಿಹಾದ್ ವಿಚಾರಗಳನ್ನು ಬಿಟ್ಟು ಬಿಡಿ. ಹಿಂದೂಧರ್ಮದಿಂದ ಮತಾಂತರವಾದವರನ್ನ ಮತ್ತೆ ‘ಘರ್ ವಾಪಸಿ’ ಮಾಡುವುದು ಹೇಗೆಂದು ನಮ್ಮ ಯುವಕರನ್ನ ತರಬೇತುಗೊಳಿಸಿ. ಈಗ

‘ಮದುವೆಯಾಗಲು ಹುಡುಗಿ ಸಿಗದವರು ಅನ್ಯಧರ್ಮೀಯರನ್ನು ಪ್ರೀತಿಸಿ ಮದುವೆಯಾಗಿ’| ಉಳ್ಳಾಲದಲ್ಲಿ ಬಿಟ್ಟಿ ಸಲಹೆ ನೀಡಿದ ಚಕ್ರವರ್ತಿ ಸೂಲಿಬೆಲೆ Read More »

ನಾಪತ್ತೆಯಾಗಿ 10 ದಿನ ಕಳೆದರೂ ಪತ್ತೆಯಾಗದ ದಿಗಂತ್| ಕುಟುಂಬಸ್ಥರಿಂದ ಹೈಕೋರ್ಟ್ ಗೆ ಹೆಬಿಯಸ್ ಕಾರ್ಪಸ್ ಅರ್ಜಿ| ಮಾ 12ರ ಒಳಗಾಗಿ‌ ವರದಿ ಸಲ್ಲಿಸಲು ಕೋರ್ಟ್ ಆದೇಶ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಫರಂಗಿಪೇಟೆಯ ವಿದ್ಯಾರ್ಥಿ ದಿಗಂತ್ ಫೆ. 25ರಿಂದ ನಿಗೂಢ ರೀತಿಯಲ್ಲಿ ನಾಪತ್ತೆಯಾಗಿದ್ದ. ನಾಪತ್ತೆಯಾಗಿ 10 ದಿನವಾದರೂ ವಿದ್ಯಾರ್ಥಿಯ ಸುಳಿವು ಸಿಗದ ಕಾರಣ, ಪೋಷಕರು ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ ಸಲ್ಲಿಸಿದ್ದಾರೆ. ನ್ಯಾಯಾಲಯವು ಪೊಲೀಸರಿಗೆ ತನಿಖೆ ನಡೆಸಿ ಮಾ.12ರೊಳಗೆ ವರದಿ ಸಲ್ಲಿಸುವಂತೆ ಆದೇಶಿಸಿದೆ. ವಿದ್ಯಾರ್ಥಿ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೋಷಕರು ಹೈಕೋರ್ಟ್ ಮೊರೆ ಹೋಗಿದ್ದರು. ಮಗನನ್ನು ಪತ್ತೆ ಮಾಡಿಕೊಡಲು ಪೊಲೀಸರಿಗೆ ನಿರ್ದೇಶಿಸುವಂತೆ ಕೋರಿ ದಿಗಂತ್ ತಂದೆ ಪದ್ಮನಾಭ್ ಹೇಬಿಯಸ್ ಕಾರ್ಪಸ್

ನಾಪತ್ತೆಯಾಗಿ 10 ದಿನ ಕಳೆದರೂ ಪತ್ತೆಯಾಗದ ದಿಗಂತ್| ಕುಟುಂಬಸ್ಥರಿಂದ ಹೈಕೋರ್ಟ್ ಗೆ ಹೆಬಿಯಸ್ ಕಾರ್ಪಸ್ ಅರ್ಜಿ| ಮಾ 12ರ ಒಳಗಾಗಿ‌ ವರದಿ ಸಲ್ಲಿಸಲು ಕೋರ್ಟ್ ಆದೇಶ Read More »