ಕರಾವಳಿ

ಸುಳ್ಯ: ನವಂಬರ್ 4 ರ ತನಕ ಇನ್ನೂ ದಿನಪೂರ್ತಿ ತರಗತಿ

ಸಮಗ್ರ ನ್ಯೂಸ್: ಜೂನ್ ಮತ್ತು ಜುಲೈ ತಿಂಗಳಲ್ಲಿ ವರುಣನ ಆರ್ಭಟಕ್ಕೆ ನೀಡಿದ್ದ ರಜೆಗಳನ್ನು ಸರಿದೂಗಿಸಲು ನವಂಬರ್ 4ರ ತನಕ ಶನಿವಾರ ದಿನ ಪೂರ್ತಿ ತರಗತಿಗಳು ನಡೆಯಲಿದೆ. ಈ ವರ್ಷ ಮಳೆಯ ಕಾರಣ ಸುಳ್ಯದಲ್ಲಿ 6 ದಿನ ರಜೆ ನೀಡಲಾಗಿತ್ತು. ಇದನ್ನು ಸರಿದೂಗಿಸಲು ಶಿಕ್ಷಣ ಇಲಾಖೆ ಶನಿವಾರದಂದು ಸಹ ಪೂರ್ತಿ ದಿನ ತರಗತಿಗಳು ನಡೆಸಲು ನಿರ್ಧರಿಸಿದೆ. ಒಂದು‌ ದಿನದ ರಜೆಗೆ ಎರಡು ಶನಿವಾರ ತರಗತಿ ನಡೆಸಿ ರಜೆಯನ್ನು ಸರಿದೂಗಿಸಿ ವೇಳಾ ಪಟ್ಟಿ ಹೊರಡಿಸಿದೆ. ಅದರನ್ವಯ ನ.4 ರವರೆಗೆ ದಿನಪೂರ್ತಿ […]

ಸುಳ್ಯ: ನವಂಬರ್ 4 ರ ತನಕ ಇನ್ನೂ ದಿನಪೂರ್ತಿ ತರಗತಿ Read More »

ಕಾರ್ಕಳ: ವೈದ್ಯರ ತಂಡದ ಮೇಲೆ ನೈತಿಕ ಪೊಲೀಸ್ ಗಿರಿ| ಐವರು ಅರೆಸ್ಟ್

ಸಮಗ್ರ ನ್ಯೂಸ್: ಕಾರ್ಕಳದಲ್ಲಿ ಮಂಗಳೂರಿನ ವೈದ್ಯರ ತಂಡದ ಕಾರು ತಡೆದು ದುಷ್ಕರ್ಮಿಗಳು ಹಲ್ಲೆಗೆ ಯತ್ನಿಸಿದ್ದ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಕುಂಟಲ್ಪಾಡಿ ಗ್ರಾಮದ ಬಳಿ ಮಂಗಳೂರಿನ ಕಾಲೇಜಿನ ವೈದ್ಯರ ತಂಡ ತೆರಳುತ್ತಿದ್ದ ಕಾರು ತಡೆದು ಅವಾಜ್​ ಹಾಕಿ ನೈತಿಕ ಪೊಲೀಸ್​ಗಿರಿ ನಡೆಸಿದ್ದಾರೆ. ಈ ಸಂಬಂಧ ಕಾರ್ಕಳ ಪೊಲೀಸರು ಐವರನ್ನು ಬಂಧಿಸಿದ್ದಾರೆ. ಸಂತೋಷ್ ನಂದಳಿಕೆ, ಕಾರ್ತಿಕ್ ಪೂಜಾರಿ, ಸುನೀಲ್ ಮೂಲ್ಯ, ಸಂದೀಪ್ ಪೂಜಾರಿ, ಸುಜಿತ್ ಸಫಲಿಗ ಬಂಧಿತ ಆರೋಪಿಗಳು. ಮಾಳ ಎಸ್.ಕೆ. ಗಡಿ

ಕಾರ್ಕಳ: ವೈದ್ಯರ ತಂಡದ ಮೇಲೆ ನೈತಿಕ ಪೊಲೀಸ್ ಗಿರಿ| ಐವರು ಅರೆಸ್ಟ್ Read More »

ವಿಟ್ಲ: ಸಂಘ ಪರಿವಾರದವರಿಂದ ಬಾಲಕಿಯ ನಿರಂತರ ಅತ್ಯಾಚಾರ| ಬಿಜೆಪಿ ಬಾಯಿ ಮುಚ್ಚಿ ಕುಳಿತಿರುವುದ್ಯಾಕೆ?-ಕಾಂಗ್ರೆಸ್ ಪ್ರಶ್ನೆ

ಸಮಗ್ರ ನ್ಯೂಸ್:‌ ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲದಲ್ಲಿ ಸಂಘ ಪರಿವಾರದವರಿಂದ ನಿರಂತರ ಅತ್ಯಾಚಾರಕ್ಕೆ ಒಳಪಟ್ಟ ದಲಿತ ಬಾಲಕಿಯ ಬಗ್ಗೆ ಬಿಜೆಪಿಯವರ ಮೌನವೇಕೆ? ಎಂದು ಕಾಂಗ್ರೆಸ್ ಪ್ರಶ್ನೆ ಮಾಡಿದೆ. ಈ ಕುರಿತು ಟ್ವೀಟ್ ಮಾಡಿರುವ ಕಾಂಗ್ರೆಸ್,” ದಲಿತ ಹೆಣ್ಣುಮಗಳು ಎಂಬ ಕಾರಣಕ್ಕೆ ಅಸಡ್ಡೆಯೇ? ಹಿಂದೂ ಹೆಣ್ಣುಮಕ್ಕಳಿಗೆ ನ್ಯಾಯ ಕೊಡಿಸುವ ಶೋಭಾ ಕರಂದ್ಲಾಜೆ ಅವರ ಬಾಯಿಯನ್ನು ಈಗ ಅದುಮಿ ಹಿಡಿದವರು ಯಾರು?” ಎಂದು ಕೇಂದ್ರ ಸಚಿವೆಯನ್ನು ತರಾಟಗೆ ತೆಗದುಕೊಂಡಿದೆ.”ಉಡುಪಿಯಲ್ಲಿ ಇಲಿಯನ್ನು ಹುಲಿ ಮಾಡಲು ಹೊರಟಿರುವ ಬಿಜೆಪಿ ನಾಯಕರಿಗೆ ಅದೇ ಕರಾವಳಿಯ

ವಿಟ್ಲ: ಸಂಘ ಪರಿವಾರದವರಿಂದ ಬಾಲಕಿಯ ನಿರಂತರ ಅತ್ಯಾಚಾರ| ಬಿಜೆಪಿ ಬಾಯಿ ಮುಚ್ಚಿ ಕುಳಿತಿರುವುದ್ಯಾಕೆ?-ಕಾಂಗ್ರೆಸ್ ಪ್ರಶ್ನೆ Read More »

ಚಾರ್ಜರ್ ಪಿನ್‌ಗೆ ಬಾಯಿ ಹಾಕಿದ 8 ತಿಂಗಳ ಕಂದಮ್ಮ ಸಾವು

ಸಮಗ್ರ ನ್ಯೂಸ್: ಮೊಬೈಲ್ ಚಾರ್ಜರ್ ಪಿನ್‌ಗೆ ಬಾಯಿ ಹಾಕಿ 8 ತಿಂಗಳ ಕಂದಮ್ಮ ಸಾವನಪ್ಪಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಸಿದ್ದರದಲ್ಲಿ ನಡೆದಿದೆ. ಸಂತೋಷ್ ಕಲ್ಗುಟ್ಕರ್ ಹಾಗೂ ಸಂಜನಾ ಎಂಬವರ 8 ತಿಂಗಳ ಮಗು ಸಾನಿಧ್ಯ ಸಾವನಪ್ಪಿದ ಮಗು, ಮೊಬೈಲ್ ಚಾರ್ಜ್ ಮಾಡಿದ ಬಳಿಕ ಪೋಷಕರು ಪ್ಲಗ್‌ಅನ್ನು ಆಫ್ ಮಾಡದೇ ನಿರ್ಲಕ್ಷ್ಯವಹಿಸಿದ್ದರು. ಈ ವೇಳೆ ಮಗು ಆಟವಾಡುತ್ತಾ ಚಾರ್ಜರ್ ಪಿನ್ ಅನ್ನು ಬಾಯಿಗೆ ಹಾಕಿಕೊಂಡಿತ್ತು. ಇದರಿಂದಾಗಿ ಶಾಕ್ ಹೊಡೆದು ಮಗು ಸಾವನ್ನಪ್ಪಿದೆ. ಘಟನೆ ಸಂಬಂಧ ಕಾರವಾರ

ಚಾರ್ಜರ್ ಪಿನ್‌ಗೆ ಬಾಯಿ ಹಾಕಿದ 8 ತಿಂಗಳ ಕಂದಮ್ಮ ಸಾವು Read More »

ಹವಾಮಾನ ವರದಿ: ಕರಾವಳಿಯಲ್ಲಿ ನಾಳೆಯಿಂದ ಮತ್ತೆ ಮಳೆ ಸಾಧ್ಯತೆ

ಸಮಗ್ರ ನ್ಯೂಸ್: ರಾಜ್ಯದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಆಗಸ್ಟ್​ 3 ರಿಂದ ವರುಣಾರ್ಭಟ ಶುರುವಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಬಿಟ್ಟು ಉಳಿದ ಭಾಗಗಳಾದ ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ಶಿವಮೊಗ್ಗ

ಹವಾಮಾನ ವರದಿ: ಕರಾವಳಿಯಲ್ಲಿ ನಾಳೆಯಿಂದ ಮತ್ತೆ ಮಳೆ ಸಾಧ್ಯತೆ Read More »

ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ| ಸೂಕ್ತ ನ್ಯಾಯ ಒದಗಿಸಿ ಕೊಡಬೇಕು ಎಂದು ಒತ್ತಾಯಿಸುತ್ತೇನೆ :ಡಾ.ವೀರೇಂದ್ರ ಹೆಗ್ಗಡೆ

ಸಮಗ್ರ ನ್ಯೂಸ್: ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಸರ್ಕಾರ ಹಾಗು ತನಿಖಾ ಸಂಸ್ಥೆ ಸೂಕ್ತ ನ್ಯಾಯ ಒದಗಿಸಿ ಕೊಡಲು ಒತ್ತಾಯಿಸುತ್ತೇನೆ ಎಂದು ಡಾ. ವೀರೇಂದ್ರ ಹೆಗ್ಗಡೆ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಸೌಜನ್ಯ ಸಾವು ಪ್ರಕರಣ ಪ್ರಸ್ತುತ ನ್ಯಾಯಾಲಯ, ಸರ್ಕಾರ ಮತ್ತು ತನಿಖಾ ಸಂಸ್ಥೆಯ ವ್ಯಾಪ್ತಿಯಲ್ಲಿ ಇರುವುದರಿಂದ ಸೌಜನ್ಯಳ ಸಾವಿಗೆ ಸಂಬಂಧಿಸಿದಂತೆ ಸರ್ಕಾರ ಹಾಗು ತನಿಖಾ ಸಂಸ್ಥೆ ಸೂಕ್ತ ನ್ಯಾಯ ಒದಗಿಸಿ ಕೊಡಬೇಕು ಎಂದು ಒತ್ತಾಯಿಸುತ್ತೇನೆ ಹಾಗು ಈ ವಿಚಾರವಾಗಿ ಕ್ಷೇತ್ರದ ಬಗ್ಗೆ ಅವಹೇಳನಕಾರಿ, ಸುಳ್ಳು ಹೇಳಿಕೆ

ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ| ಸೂಕ್ತ ನ್ಯಾಯ ಒದಗಿಸಿ ಕೊಡಬೇಕು ಎಂದು ಒತ್ತಾಯಿಸುತ್ತೇನೆ :ಡಾ.ವೀರೇಂದ್ರ ಹೆಗ್ಗಡೆ Read More »

ಮಂಗಳೂರು: ಕಡಲ್ಕೊರೆತ ಸ್ಥಳಕ್ಕೆ ಮುಖ್ಯಮಂತ್ರಿ ಬೇಟಿ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ಪ್ರಗತಿ ಪರಿಶೀಲನೆ ಹಾಗೂ ಪ್ರಾಕೃತಿಕ ವಿಕೋಪ ನಿರ್ವಹಣಾ ಸಭೆ ನಡೆಸಲು ಆಗಮಿಸಿದಂತಹ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆ.1 ಮಂಗಳವಾರ ಸಂಜೆ ಉಳ್ಳಾಲ ತಾಲೂಕಿನ ಬಟ್ಟಪಾಡಿಯ ಕಡಲ್ಕೊರೆತಕ್ಕೆ ಹಾನಿಯಾದಂತಹ ಪ್ರದೇಶಕ್ಕೆ ಭೇಟಿ ನೀಡಿ, ಸ್ಥಳೀಯರೊಂದಿಗೆ‌ ಮಾತನಾಡಿ ಈಗಿನ ಸ್ಥಿತಿಗತಿಯನ್ನು ಪರಿಶೀಲಿಸಿದರು. ಈ ಸಂದರ್ಭದಲ್ಲಿ ರಾಜ್ಯ ವಿಧಾನಸಭೆಯ ಸ್ವೀಕರ್ ಯು.ಟಿ. ಖಾದರ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್,ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎಲ್.ಕೆ. ಅತೀಕ್, ಜಿಲ್ಲಾಧಿಕಾರಿ

ಮಂಗಳೂರು: ಕಡಲ್ಕೊರೆತ ಸ್ಥಳಕ್ಕೆ ಮುಖ್ಯಮಂತ್ರಿ ಬೇಟಿ Read More »

ಸೌಜನ್ಯ ಪ್ರಕರಣವನ್ನು ನಾನೇ ಸ್ಟಡಿ ಮಾಡ್ತೇನೆ; ಮೇಲ್ಮನವಿಗೆ ಅವಕಾಶ ಇದೆಯಾ ಎಂದು ನೋಡೋಣ| ಮಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿಕೆ

ಸಮಗ್ರ ನ್ಯೂಸ್: ಕಳೆದೊಂದು ದಶಕದ ಹಿಂದೆ ಧರ್ಮಸ್ಥಳದಲ್ಲಿ ನಡೆದಿದ್ದ ಸೌಜನ್ಯಳ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಕೋರ್ಟ್‌ನಿಂದ ಜಡ್ಜ್‌ಮೆಂಟ್‌ ಬಂದಿದೆ. ಈ ಬಗ್ಗೆ ನಾನು ಲಾಯರ್‌ ಆಗಿ ಹೇಳೋದಾದರೆ ಹೈಕೋರ್ಟ್‌ಗೆ ಅಪೀಲ್‌ ಹೋಗಬೇಕು. ಸಿಬಿಐ ಕೋರ್ಟ್‌ ಜಡ್ಜ್‌ಮೆಂಟ್‌ ಕಾಪಿಯನ್ನು ಓದಿ ಅಪೀಲ್‌ಗೆ ಹೋಗಲು ಅವಕಾಶವಿದೆಯೇ ಎಂಬುದನ್ನು ನೋಡುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಮಂಗಳೂರು ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಕೇಂದ್ರೀಯ ತನಿಖಾ

ಸೌಜನ್ಯ ಪ್ರಕರಣವನ್ನು ನಾನೇ ಸ್ಟಡಿ ಮಾಡ್ತೇನೆ; ಮೇಲ್ಮನವಿಗೆ ಅವಕಾಶ ಇದೆಯಾ ಎಂದು ನೋಡೋಣ| ಮಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿಕೆ Read More »

ಸಂಪಾಜೆಯಲ್ಲಿ ಚಿರತೆ ಗೋಚರ| ಕಲಾವಿದ ತೇಜಸ್ ಮನೆಯ, ಶ್ವಾನದ ಮೇಲೆ ದಾಳಿ

ಸಮಗ್ರ ನ್ಯೂಸ್: ಸಂಪಾಜೆ ಪರಿಸರದಲ್ಲಿ ಚಿರತೆ ಕಾಟ ಶುರುವಾಗಿದೆ. ಮನೆಯ ಮುಂದೆ ಮಲಗಿದ್ದ ನಾಯಿ ಮೇಲೆ ಚಿರತೆ ದಾಳಿ ಮಾಡಿದ್ದು ಸ್ಥಳೀಯರು ತೀವ್ರ ಆತಂಕಕ್ಕೆ ಒಳಗಾಗಿದ್ದಾರೆ. ಸುಳ್ಯ ತಾಲೂಕಿನ ಸಂಪಾಜೆಯ ಬಂಟೋಡಿಯ ತೇಜೇಶ್ವರ್ ಬಂಟೋಡಿ ಅವರ ಮನೆಯ ಎದುರಲ್ಲಿ ಚಿರತೆ ಕಾಣಿಸಿಕೊಂಡಿದ್ದು, ಅಂಗಳದಲ್ಲಿದ್ದ ಶ್ವಾನದ ಮೇಲೆ ದಾಳಿ ನಡೆಸಿ ಓಡಿದೆ. ಈ ಬಗ್ಗೆ ಜೊತೆಗೆ ಮಾತನಾಡಿದ ತೇಜಸ್ ಬಂಟೋಡಿಯವರು, ಚಿರತೆ ಬಂದು ಮನೆಯಲ್ಲಿದ್ದ ಶ್ವಾನದ ಮೇಲೆ ದಾಳಿ ಮಾಡಿದೆ. ನಾವು ಕಿರುಚಿಕೊಂಡಾಗ ಅದು ಶಬ್ಧಕ್ಕೆ ಹೆದರಿ ಅಲ್ಲಿಂದ

ಸಂಪಾಜೆಯಲ್ಲಿ ಚಿರತೆ ಗೋಚರ| ಕಲಾವಿದ ತೇಜಸ್ ಮನೆಯ, ಶ್ವಾನದ ಮೇಲೆ ದಾಳಿ Read More »

ಆ.1 ರಂದು ಕರಾವಳಿಗೆ ಸಿಎಂ ಸಿದ್ದರಾಮಯ್ಯ ಭೇಟಿ

ಸಮಗ್ರ ನ್ಯೂಸ್: ಆಗಸ್ಟ್ 1 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗೆ ಆಗಮಿಸಲಿದ್ದಾರೆ. ನಾಳೆ ಬೆಳಿಗ್ಗೆ 9.55ಕ್ಕೆ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೊರಟು, 11 ಗಂಟೆಗೆ ಬಜಪೆಯ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವರು. ಮಧ್ಯಾಹ್ನ 3.30ಕ್ಕೆ ಉಡುಪಿಯಿಂದ ನಿರ್ಗಮಿಸಿ ಸಂಜೆ 4.15ಕ್ಕೆ ಮಂಗಳೂರು ನಗರದ ಜಿಲ್ಲಾ ಪಂಚಾಯತ್‍ನ ಸಭಾಂಗಣದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪ್ರಗತಿ ಪರಿಶೀಲನೆ ಸಭೆ ನಡೆಸುವರು. ಬಳಿಕ ರಾತ್ರಿ 9.50ಕ್ಕೆ ಮಂಗಳೂರಿನಿಂದ ವಿಮಾನದ ಮೂಲಕ

ಆ.1 ರಂದು ಕರಾವಳಿಗೆ ಸಿಎಂ ಸಿದ್ದರಾಮಯ್ಯ ಭೇಟಿ Read More »