ಕರಾವಳಿ

ಧರ್ಮಸ್ಥಳ: ಸೌಜನ್ಯ ಪ್ರಕರಣದ ನ್ಯಾಯಕ್ಕಾಗಿ ಸ್ಥಳೀಯರಿಂದ ಸಾಮೂಹಿಕ ಪ್ರಾರ್ಥನೆ

ಸಮಗ್ರ ನ್ಯೂಸ್: ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣ ಮುಂದಿಟ್ಟು ಶ್ರೀ ಕ್ಷೇತ್ರ ಧರ್ಮಸ್ಥಳ ಮತ್ತು ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರನ್ನು ಅವಹೇಳನ ಮಾಡಲಾಗುತ್ತಿದೆ ಎಂದು ಶ್ರೀ ಕ್ಷೇತ್ರದ ಭಕ್ತರು ಮತ್ತು ಸ್ಥಳೀಯರು ದೇವರ ಎದುರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದ್ದಾರೆ.ಧರ್ಮಸ್ಥಳ ಮಂಜುನಾಥ ಸ್ವಾಮಿ ದೇವಸ್ಥಾನದ ಮುಂಭಾಗ ಮತ್ತು ಅಣ್ಣಪ್ಪ ಬೆಟ್ಟದ ಮುಂಭಾಗದಲ್ಲಿ ಭಕ್ತರು ಅವಹೇಳನ ನಡೆಸುವವರಿಗೆ ಶಿಕ್ಷೆ ನೀಡುವಂತೆ ಸಾಮೂಹಿಕ ಪ್ರಾರ್ಥನೆ ಮಾಡಿದ್ದಾರೆ. ಮಂಜುನಾಥ ಸ್ವಾಮಿ ದೇವಸ್ಥಾನದ ಮುಂಭಾಗ ಪ್ರಾರ್ಥನೆ ಸಲ್ಲಿಸಿದ ಭಕ್ತರು, ಕೋರ್ಟ್‌ನಲ್ಲೂ ಸೌಜನ್ಯ ಅತ್ಯಾಚಾರ ಕೊಲೆ […]

ಧರ್ಮಸ್ಥಳ: ಸೌಜನ್ಯ ಪ್ರಕರಣದ ನ್ಯಾಯಕ್ಕಾಗಿ ಸ್ಥಳೀಯರಿಂದ ಸಾಮೂಹಿಕ ಪ್ರಾರ್ಥನೆ Read More »

ಕರಾವಳಿಯ ಕುಗ್ರಾಮಗಳಿಗೂ BSNL 4ಜಿ ಸೇವೆ| ಯಾವ ಗ್ರಾಮಕ್ಕೆ ಈ ಸೇವೆ ಲಭಿಸಲಿದೆ?| ಇಲ್ಲಿದೆ ಸಂಪೂರ್ಣ ಮಾಹಿತಿ

ಸಮಗ್ರ ನ್ಯೂಸ್: ಕೇಂದ್ರ ಸರಕಾರವು ಸಾರ್ವತ್ರಿಕ ಸೇವಾ ಬಾಧ್ಯತೆ ನಿಧಿ (Universal Service Obligation Fund)ಯಡಿ ದೇಶಾದ್ಯಂತ ಸ್ವಲ್ಪವೂ ನೆಟ್ವರ್ಕ್ ತಲುಪದ 3 ಲಕ್ಷಕ್ಕೂ ಅಧಿಕ ಕುಗ್ರಾಮಗಳಲ್ಲಿ BSNL 4ಜಿ ಸೇವೆಯನ್ನು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲೂ ಅನುಷ್ಠಾನಗೊಳ್ಳಲಿದೆ. ಇದರಿಂದ ಕರಾವಳಿಯ ಕುಗ್ರಾಮಗಳಿಗೂ ಇನ್ನು ನೆಟ್ವರ್ಕ್ ಲಭಿಸಲಿದೆ. ಸರಕಾರಿ ಸ್ವಾಮ್ಯದ BSNL ಗುಣಮಟ್ಟ ಹೆಚ್ಚಿಸುವ ಸಲುವಾಗಿ ಕೇಂದ್ರ ಸರಕಾರವು ಮೇಕ್ ಇನ್ ಇಂಡಿಯಾದಡಿ ಟಿಸಿಎಸ್ (Tata Consultancy Services) ಮತ್ತು ಐಟಿಐ ಲಿ. ಒಪ್ಪಂದದೊಂದಿಗೆ ದೇಶದ

ಕರಾವಳಿಯ ಕುಗ್ರಾಮಗಳಿಗೂ BSNL 4ಜಿ ಸೇವೆ| ಯಾವ ಗ್ರಾಮಕ್ಕೆ ಈ ಸೇವೆ ಲಭಿಸಲಿದೆ?| ಇಲ್ಲಿದೆ ಸಂಪೂರ್ಣ ಮಾಹಿತಿ Read More »

ಸುಳ್ಯ:INFYTECH ಕಂಪ್ಯೂಟರ್ ಶಿಕ್ಷಣ ಮತ್ತು ಫ್ಯಾಷನ್ ಡಿಸೈನಿಂಗ್ ಸಂಸ್ಥೆಯಲ್ಲಿ ಮಾನ್ಸೂನ್ ಸ್ಪೆಷಲ್ ಆಫರ್

ಸಮಗ್ರ ನ್ಯೂಸ್: ಸುಳ್ಯದ ಶ್ರೇಯಸ್ ಕಾಂಪ್ಲೆಕ್ಸ್ ನಲ್ಲಿರುವ ಕೆನರಾ ಬ್ಯಾಂಕ್ ಬಳಿಯ INFYTECH ಕಂಪ್ಯೂಟರ್ ಶಿಕ್ಷಣ ಮತ್ತು ಫ್ಯಾಷನ್ ಡಿಸೈನಿಂಗ್ ಸಂಸ್ಥೆಯಲ್ಲಿ ಡಿಸಿಎ ಕೋರ್ಸ್ ಗಳು ಮಾನ್ಸೂನ್ ವಿಶೇಷ ಆಫರ್ ಗಳೊಂದಿಗೆ ಪ್ರವೇಶಾತಿ ಆರಂಭಗೊಂಡಿದೆ. ಈ ಸಂಸ್ಥೆಯಲ್ಲಿ ನೋಟ್ ಪ್ಯಾಡ್, ವರ್ಡ್ ಪ್ಯಾಡ್, ಪೈಂಟ್, ನುಡಿ, ಎಮ್‌ಎಸ್ ವರ್ಡ್, ಎಮ್‌ಎಸ್ ಎಕ್ಸೆಲ್, ಎಮ್‌ಎಸ್ ಪವರ್ ಪಾಯಿಂಟ್, ಎಮ್‌ಎಸ್ ಆಸೆಸ್, ಇಂಟರ್ನೆಟ್, ಸಿಂಗಲ್ ಎಂಟ್ರಿ, ಇನ್ವೆಂಟರಿ, ವೊಚರ್, VAT, GST, ಫೋಟೊ ಎಡಿಟಿಂಗ್ ಮತ್ತು ಕಟ್ಟಿಂಗ್, ಪ್ಯಾಂಪ್ಲೆಟ್ ಮತ್ತು

ಸುಳ್ಯ:INFYTECH ಕಂಪ್ಯೂಟರ್ ಶಿಕ್ಷಣ ಮತ್ತು ಫ್ಯಾಷನ್ ಡಿಸೈನಿಂಗ್ ಸಂಸ್ಥೆಯಲ್ಲಿ ಮಾನ್ಸೂನ್ ಸ್ಪೆಷಲ್ ಆಫರ್ Read More »

ಉಡುಪಿ: ವೀಡಿಯೋ ಚಿತ್ರೀಕರಣ ಪ್ರಕರಣ|ಸರ್ಕಾರದ ವಿರುದ್ಧ ಮಂಗಳೂರಿನಲ್ಲಿ ಬಿಜೆಪಿ ಬೃಹತ್ ಪ್ರತಿಭಟನೆ

ಸಮಗ್ರ ನ್ಯೂಸ್: ಈಗಾಗಲೇ ರಾಷ್ಟ್ರ ಮಟ್ಟದಲ್ಲಿ ಸುದ್ದಿ ಮಾಡುತ್ತಿರುವ ಉಡುಪಿಯ ನೇತ್ರ ಕಾಲೇಜಿನ ಶೌಚಾಲಯದಲ್ಲಿ ವಿದ್ಯಾರ್ಥಿನಿಯರ ವೀಡಿಯೋ ಚಿತ್ರೀಕರಣ ನಡೆಸಿದ ಘಟನೆಯನ್ನು ಖಂಡಿಸಿ ಮಂಗಳೂರು ಪುರಭವನದ ಎದುರು ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ವತಿಯಿಂದ ಬೃಹತ್ ಪ್ರತಿಭಟನೆ ನಡೆಯಿತು. ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಶಾಸಕರಾದ ಡಾ.ವೈ. ಭರತ್ ಶೆಟ್ಟಿ, ವೇದವ್ಯಾಸ ಕಾಮತ್, ರಾಜೇಶ್ ನಾಯ್ಕ್, ಭಾಗೀರಥಿ ಮುರುಳ್ಯ, ಉಮಾನಾಥ ಕೋಟ್ಯಾನ್, ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ

ಉಡುಪಿ: ವೀಡಿಯೋ ಚಿತ್ರೀಕರಣ ಪ್ರಕರಣ|ಸರ್ಕಾರದ ವಿರುದ್ಧ ಮಂಗಳೂರಿನಲ್ಲಿ ಬಿಜೆಪಿ ಬೃಹತ್ ಪ್ರತಿಭಟನೆ Read More »

ಸುಳ್ಯ: ನೂತನ ಉಪತಹಶೀಲ್ದಾರ್ ಆಗಿ ಮಂಜುನಾಥ್‌ ಆಯ್ಕೆ

ಸಮಗ್ರ ನ್ಯೂಸ್:ಮಂಜುನಾಥ್ ಕೆ.ಎಂ ಇವರು ತಾಲೂಕು ಕಚೇರಿಯಲ್ಲಿ ದ್ವಿ ದ ಸಹಾಯಕರಾಗಿದ್ದ ಅವರು 2015 ರಲ್ಲಿ ಜಿಲ್ಲಾಧಿಕಾರಿ ಕಚೇರಿಗೆ ವರ್ಗಾವಣೆಗೊಂಡಿದ್ದರು.ಅಲ್ಲಿ ಪ್ರಮೋಷನ್ ಆಗಿ ಕಚೇರಿ ಅಧೀಕ್ಷಕರಾಗಿದ್ದರು. ಸುಳ್ಯ ತಾಲೂಕು ಕಚೇರಿಗೆ ನೂತನ ಉಪತಹಶೀಲ್ದಾರ್ ಆಗಿ ವರ್ಗಾವಣೆಯಾಗಿದ್ದು ಇಂದು ಕರ್ತವ್ಯಕ್ಕೆ ಹಾಜರಾಗಿದ್ದಾರೆ.

ಸುಳ್ಯ: ನೂತನ ಉಪತಹಶೀಲ್ದಾರ್ ಆಗಿ ಮಂಜುನಾಥ್‌ ಆಯ್ಕೆ Read More »

ಮಂಗಳೂರು: ಮಾಜಿ ಉಪಕುಲಪತಿ ಕೆ.ಬೈರಪ್ಪ ನಿಧನ

ಸಮಗ್ರ ನ್ಯೂಸ್: ಮಂಗಳೂರು ವಿಶ್ವವಿದ್ಯಾನಿಲಯದ ಮಾಜಿ ಉಪಕುಲಪತಿ ಪ್ರೊ.ಕೆ.ಬೈರಪ್ಪ(69) ಅವರು ಜು .31 ರಂದು ಬೆಳಿಗ್ಗೆ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಇವರು 2014 ಜೂನ್ ನಿಂದ 2019 ಜೂನ್ ವರೆಗೆ ಮಂಗಳೂರು ವಿಶ್ವ ವಿದ್ಯಾಲಯದಲ್ಲಿ ಉಪ ಕುಲಪತಿಗಳಾಗಿ ಕಾರ್ಯನಿರ್ವಹಿಸಿದ್ದಾರೆ. ಬಳಿಕ ನಿವೃತ್ತಿ ಹೊಂದಿ ಆದಿ ಚುಂಚನ ಗಿರಿಯಲ್ಲಿ ಸಹಕುಲಪತಿಗಳಾಗಿ ಕಾರ್ಯ ನಿರ್ವಹಿಸುತಿದ್ದರು. ಬೆಳಗಾವಿಯಲ್ಲಿ ನಡೆಯುತ್ತಿದ್ದ ಕಾರ್ಯಕ್ರಮವೊಂದಕ್ಕೆ ತೆರಳಲು ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿದ್ದ ಸಂದರ್ಭದಲ್ಲಿ ತೀವ್ರ ಹೃದಯಾಘಾತಗೊಂಡು ಕೊನೆಯುಸಿರೆಳೆದಿದ್ದಾರೆ.

ಮಂಗಳೂರು: ಮಾಜಿ ಉಪಕುಲಪತಿ ಕೆ.ಬೈರಪ್ಪ ನಿಧನ Read More »

ಪುತ್ತೂರು: ಎವಿಜಿ ಇಂಗ್ಲಿಷ್ ಮೀಡಿಯಂ ಸ್ಕೂಲಿನಲ್ಲಿ ಪೋಷಕರ ಸಭೆ , ಕೃತಜ್ಞತಾ ಸಭೆ

ಸಮಗ್ರ ನ್ಯೂಸ್: ಜು.29 ರಂದು ಬನ್ನೂರು ಕೃಷ್ಣನಗರ ಸಮೀಪದಲ್ಲಿರುವ ಎವಿಜಿ ಇಂಗ್ಲಿಷ್ ಮೀಡಿಯಂ ಸ್ಕೂಲಿನಲ್ಲಿ “ಪೋಷಕರ ಸಭೆ ಮತ್ತು ಕೃತಜ್ಞತಾ ಸಭೆ” ನಡೆಸಲಾಯಿತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಸವಣೂರು ವಿದ್ಯಾರಶ್ಮಿ ವಿದ್ಯಾಲಯದ ಪ್ರಾಂಶುಪಾಲರಾದ ಸೀತಾರಾಮ ಕೇವಳ ಇವರು ಶೈಕ್ಷಣಿಕ ಚಿಂತನೆಯ ಕುರಿತು ಶಾಲೆಯ ಪೋಷಕರಿಗೆ ಹಾಗೂ ಶಿಕ್ಷಕರಿಗೆ ಸಲಹೆ ಸೂಚನೆಯನ್ನು ನೀಡಿದರು. ರಾಮಕುಂಜೇಶ್ವರ ಪದವಿ ಪೂರ್ವ ಕಾಲೇಜಿನ ರಾಜ್ಯಶಾಸ್ತ್ರ ಉಪನ್ಯಾಸಕರಾದ ಗುಡ್ಡಪ್ಪ ಗೌಡ ಬಲ್ಯ ಇವರು ಕೃತಜ್ಞತಾ ನುಡಿಯನ್ನಾಡುತ್ತ ಎವಿಜಿ ವಿದ್ಯಾಸಂಸ್ಥೆಯು ಆರಂಭವಾಗಲು ಶ್ರಮಿಸಿದ ಎಲ್ಲರಿಗೂ

ಪುತ್ತೂರು: ಎವಿಜಿ ಇಂಗ್ಲಿಷ್ ಮೀಡಿಯಂ ಸ್ಕೂಲಿನಲ್ಲಿ ಪೋಷಕರ ಸಭೆ , ಕೃತಜ್ಞತಾ ಸಭೆ Read More »

ಮಂಗಳೂರು: ನೀರಿನಲ್ಲಿ ಮುಳುಗಿ ಯುವಕರಿಬ್ಬರು ಮೃತ್ಯು

ಸಮಗ್ರ ನ್ಯೂಸ್: ಮಂಗಳೂರು ನಗರದ ಪಡೀಲ್ ಅಳಪೆ ಪಡ್ಪು ರೈಲ್ವೇ ಬ್ರಿಡ್ಜ್ ಸಮೀಪ ನೀರಿನಲ್ಲಿ ಮುಳುಗಿ ಇಬ್ಬರು ಯುವಕರು ಮೃತಪಟ್ಟ ಘಟನೆ ಜು. 30 ರಂದು ನಡೆದಿದೆ. ಅಳಪೆ ಪಡ್ಪುರೆಂಜ ನಿವಾಸಿ ವರುಣ್ (27) ಮತ್ತು ಎಕ್ಕೂರು ಕೆಎಚ್‌ಬಿ ಕಾಲನಿ ನಿವಾಸಿ ವೀಕ್ಷಿತ್ (28) ಮೃತಪಟ್ಟ ಯುವಕರು. ಜು.30 ರಂದು ಸಂಜೆ ವೇಳೆ 6 ಮಂದಿ ಗೆಳೆಯರು ಒಟ್ಟಾಗಿ ಕ್ರಿಕೆಟ್ ಆಡಲು ತೆರಳಿದ್ದರು. ಈ ಸಂದರ್ಭ ವರುಣ್ ಮತ್ತು ವೀಕ್ಷಿತ್ ರೈಲ್ವೆಯ ಟ್ರಾಕ್ ಪಕ್ಕದ ಹಳ್ಳದ ದಡದಲ್ಲೇ

ಮಂಗಳೂರು: ನೀರಿನಲ್ಲಿ ಮುಳುಗಿ ಯುವಕರಿಬ್ಬರು ಮೃತ್ಯು Read More »

ಸುಳ್ಯ:ದುಗ್ಗಲಡ್ಕ ಬೂತ್ ಕಾಂಗ್ರೇಸ್ ಸಭೆ|ಗೃಹಲಕ್ಷ್ಮಿ ಯೋಜನೆಯ ಶೀಘ್ರ ನೋಂದಾವಣೆಗೆ ಮನೆ ಮನೆ ಭೇಟಿ ಅಭಿಯಾನಕ್ಕೆ ನಿರ್ಧಾರ

ಸಮಗ್ರ ನ್ಯೂಸ್: ಸುಳ್ಯ ನಗರ ಪಂಚಾಯತ್ ವ್ಯಾಪ್ತಿಯ 1ನೇ ವಾರ್ಡ್ ದುಗ್ಗಲಡ್ಕ ಬೂತ್ ಕಾಂಗ್ರೇಸ್ ಸಮಿತಿ ಸಭೆ ಜು. 30 ರಂದು ಅಬೂಬಕ್ಕರ್ ಕೊಳಂಜಿಕೋಡಿಯವರ ಮನೆಯಲ್ಲಿ ನಡೆಯಿತು. ಬೂತ್ ಸಮಿತಿ ಅಧ್ಯಕ್ಷ ಚಂದ್ರಶೇಖರ ನಾಯ್ಕ ಕಂದಡ್ಕ ರವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಮಾಜಿ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ, ನಗರ ಪಂಚಾಯತ್ ಸದಸ್ಯ ಎಂ.ವೆಂಕಪ್ಪ ಗೌಡ ಮಾತನಾಡಿ ಸರಕಾರದ ಗ್ಯಾರಂಟಿ ಯೋಜನೆಗಳನ್ನು ಮನೆ ಮನೆಗೆ ತಲುಪಿಸಲು ಮುಖ್ಯವಾಗಿ ಗೃಹ ಲಕ್ಷ್ಮಿ ಯೋಜನೆಯ ಪಲಾನುಭವಿಗಳನ್ನು ಶೀಘ್ರ ನೋಂದಾವಣೆಗೆ ಪ್ರೆರೇಪಿಸಲು ಮನೆ

ಸುಳ್ಯ:ದುಗ್ಗಲಡ್ಕ ಬೂತ್ ಕಾಂಗ್ರೇಸ್ ಸಭೆ|ಗೃಹಲಕ್ಷ್ಮಿ ಯೋಜನೆಯ ಶೀಘ್ರ ನೋಂದಾವಣೆಗೆ ಮನೆ ಮನೆ ಭೇಟಿ ಅಭಿಯಾನಕ್ಕೆ ನಿರ್ಧಾರ Read More »

ಮಂಗಳೂರು: ಪಡಿತರ ಚೀಟಿಯಿಂದ ಮೃತರ ಹೆಸರು ತೆಗೆಯಲು ಸೂಚನೆ

ಸಮಗ್ರ ನ್ಯೂಸ್: ದ.ಕ. ಜಿಲ್ಲೆಯ ಕೆಲವೊಂದು ಕುಟುಂಬಗಳ ಸದಸ್ಯರು ಮೃತರಾಗಿದ್ದರೂ, ಅವರ ಹೆಸರು ಪಡಿತರದಲ್ಲಿ ತೆಗೆದು ಹಾಕಿರುವುದಿಲ್ಲ. ಈ ರೀತಿಯ 13,133 ಫಲಾನುಭವಿಗಳ ಹೆಸರು ಪಡಿತರ ಚೀಟಿಯಲ್ಲಿ ಉಳಿಸಿರುವುದು ಅಕ್ರಮವಾಗಿದೆ. ಅಂತಹ ಪಡಿತರ ಚೀಟಿದಾರರು ಮೃತಪಟ್ಟವರ ದಾಖಲಾತಿಯನ್ನು ತಾಲೂಕು ಕಚೇರಿಗೆ ಸಲ್ಲಿಸಿ ಪಡಿತರ ಚೀಟಿಯಿಂದ ಮೃತಪಟ್ಟವರ ಹೆಸರನ್ನು ತೆಗೆಸಬೇಕು. ಮೃತರಾದವರ ಹೆಸರನ್ನು ಚೀಟಿಯಿಂದ ತೆಗೆಯದೇ ಇರುವಂತವರನ್ನು ನಿಯಾಮಾನುಸಾರ ಅನರ್ಹಗೊಳಿಸಲಾಗುವುದು ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟನೆ ತಿಳಿಸಿದೆ.

ಮಂಗಳೂರು: ಪಡಿತರ ಚೀಟಿಯಿಂದ ಮೃತರ ಹೆಸರು ತೆಗೆಯಲು ಸೂಚನೆ Read More »