ಕರಾವಳಿ

ಭಾರೀ ಮಳೆ ಹಿನ್ನೆಲೆ| ನಾಳೆ (ಜು.26) ಎಲ್ಲಾ ಶಾಲೆ, ಪ.ಪೂ ಕಾಲೇಜುಗಳಿಗೆ ರಜೆ ಘೋಷಣೆ

ಸಮಗ್ರ ನ್ಯೂಸ್: ಕಳೆದ ಮೂರು ದಿನಗಳಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿದ್ದು, ರೆಡ್‌ ಅಲರ್ಟ್‌ ಘೋಷಣೆಯಾಗಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಶಾಲೆ, ಪ.ಪೂ ಕಾಲೇಜುಗಳಿಗೆ ಜು.26ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ. ಈಗಾಗಲೇ ಧಾರಾಕಾರ ಮಳೆಯಿಂದ ಸೋಮವಾರ ಮತ್ತು ಮಂಗಳವಾರ (ಜು. 24 ಮತ್ತು 25ರಂದು) ರಜೆ ಘೋಷಿಸಲಾಗಿತ್ತು. ಇದೀಗ ಕರಾವಳಿಯಾದ್ಯಂತ ಭಾರಿ ಮಳೆಯಾಗುವ ಸಾಧ್ಯತೆಯಿರುವುದರಿಂದ ಮುನ್ನೆಚ್ಚರಿಕಾ ಕ್ರಮವಾಗಿ ಬುಧವಾರ ಮೂರನೇ ದಿನವೂ ರಜೆ ನೀಡಿದ್ದಾರೆ.

ಭಾರೀ ಮಳೆ ಹಿನ್ನೆಲೆ| ನಾಳೆ (ಜು.26) ಎಲ್ಲಾ ಶಾಲೆ, ಪ.ಪೂ ಕಾಲೇಜುಗಳಿಗೆ ರಜೆ ಘೋಷಣೆ Read More »

ಸುಳ್ಯ ತಾ.ಪಂ. ಇಓ ಭವಾನಿ ಶಂಕರ್ ವರ್ಗಾವಣೆ| ನೂತನವಾಗಿ ರಾಜಣ್ಣ ಕರ್ತವ್ಯಕ್ಕೆ

ಸಮಗ್ರ ನ್ಯೂಸ್: ಸುಳ್ಯ ತಾಲೂಕು ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಭವಾನಿಶಂಕರ್ ಎನ್ ವರ್ಗಾವಣೆ. ಸುಳ್ಯಕ್ಕೆ ನೂತನವಾಗಿ ಬಂಟ್ವಾಳ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಾಜಣ್ಣರವರನ್ನು ನೇಮಕಗೊಳಿಸಲು ರಾಜ್ಯ ಸರ್ಕಾರ ಆದೇಶ.

ಸುಳ್ಯ ತಾ.ಪಂ. ಇಓ ಭವಾನಿ ಶಂಕರ್ ವರ್ಗಾವಣೆ| ನೂತನವಾಗಿ ರಾಜಣ್ಣ ಕರ್ತವ್ಯಕ್ಕೆ Read More »

ಕಬಕ: ಕಾರು-ಟಿಪ್ಪರ್ ಲಾರಿ ನಡುವೆ ಭೀಕರ ಅಪಘಾತ| ನಾಲ್ವರು ಗಂಭೀರ

ಸಮಗ್ರ ನ್ಯೂಸ್: ಮಾಣಿ- ಮೈಸೂರು ಹೆದ್ದಾರಿಯ ಮಿತ್ತೂರು ಸಮೀಪದ ಪರ್ಲೋಟ್ಟು ಎಂಬಲ್ಲಿ ಕಾರು ಮತ್ತು ಟಿಪ್ಪರ್ ಲಾರಿ ನಡುವೆ ಭೀಕರ ಅಪಘಾತ ಜು.25 ರಂದು ಸಂಭವಿಸಿದೆ. ಕಾರಿನಲ್ಲಿದ್ದ ನಾಲ್ವರು ಗಂಭೀರ ಗಾಯಗೊಂಡಿದ್ದಾರೆ. ಮುಂಬೈ ಮೂಲದ ಪ್ರಯಾಣಿಕರು, ಮಂಗಳೂರಿನಿಂದ ಮೈಸೂರಿಗೆ ತೆರಳುತ್ತಿದ್ದಾಗ ಪುತ್ತೂರು ಕಡೆಯಿಂದ ಮಂಗಳೂರಿಗೆ ತೆರಳುತ್ತಿದ್ದ ಟಿಪ್ಪರ್ ಲಾರಿ ನಡುವೆ ಅಪಘಾತ ಸಂಭವಿಸಿದೆ. ಕಾರಿನಲ್ಲಿದ್ದ ಇಬ್ಬರು ಮಹಿಳೆಯರು ಸಹಿತ ನಾಲ್ವರು ಗಾಯಗೊಂಡಿದ್ದು, ಪುತ್ತೂರಿನ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಘಟನೆಯಿಂದ ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೆ ಅಡಚಣೆಯುಂಟಾಗಿದೆ. ಘಟನಾ ಸ್ಥಳಕ್ಕೆ

ಕಬಕ: ಕಾರು-ಟಿಪ್ಪರ್ ಲಾರಿ ನಡುವೆ ಭೀಕರ ಅಪಘಾತ| ನಾಲ್ವರು ಗಂಭೀರ Read More »

ಕರ್ತೋಜಿ ಸಮೀಪ ಭೂ-ಕುಸಿತ| ಮಡಿಕೇರಿ-ಮಂಗಳೂರು ಹೆದ್ದಾರಿ ಸುಗಮ ಸಂಚಾರಕ್ಕೆ ಅನುವು

ಸಮಗ್ರ ನ್ಯೂಸ್: ಮಡಿಕೇರಿ -ಮಂಗಳೂರು ಹೆದ್ದಾರಿ ಮದೆ ಸಮೀಪದ ಕರತೋಜಿ ಬಳಿ ಹೆಚ್ಚಿನ ಮಳೆಯಿಂದಾಗಿ ಭೂ ಕುಸಿತದಿಂದ ಬೃಹತ್ ಮರ ರಸ್ತೆಗೆ ಬಿದ್ದ ಪರಿಣಾಮ ಬಂದ್ ಆಗಿದ್ದ ರಸ್ತೆಯನ್ನು ರಾತ್ರಿಯೇ ತೆರವುಗೊಳಿಸಿ ಸುಗಮ ಅನುವು ಮಾಡಿ ಕೊಡಲಾಯಿತು. ಈ ಸಂಧರ್ಭದಲ್ಲಿ ಉಪ ವಿಭಾಗಾಧಿಕಾರಿ ಡಾ.ಯತೀಶ್‌ ಉಲ್ಲಾಳ್, ತಹಶಿಲ್ದಾರರಾದ ಕಿರಣ್ ಗೌರಯ್ಯ, ರಾಷ್ಟ್ರೀಯ ಹೆದ್ದಾರಿ ವಿಭಾಗದ ಅಭಿಯಂತರರು, ಅರಣ್ಯ ಇಲಾಖೆಯ ಸಿಬ್ಬಂದಿಯವರು, ಸ್ಥಳೀಯರ ಸಹಕಾರದೊಂದಿಗೆ ಮರವನ್ನು ತೆರವುಗೊಳಿಸಿ ಸುಗಮ ಸಾರಿಗೆ ಸಂಚಾರಕ್ಕೆ ಅನುವು ಮಾಡಿಕೊಡಲಾಯಿತು.

ಕರ್ತೋಜಿ ಸಮೀಪ ಭೂ-ಕುಸಿತ| ಮಡಿಕೇರಿ-ಮಂಗಳೂರು ಹೆದ್ದಾರಿ ಸುಗಮ ಸಂಚಾರಕ್ಕೆ ಅನುವು Read More »

ಸುಳ್ಯ: ಕೋಲ್ಚಾರಿನಲ್ಲಿ ಅಪಾಯಕಾರಿ ಮರಗಳ ತೆರವುಗೊಳಿಸಲು ತಹಶಿಲ್ದಾರ್ ಗೆ ಮನವಿ

ಸಮಗ್ರ ನ್ಯೂಸ್: ಸುಳ್ಯದಿಂದ ಕೋಲ್ಚಾರಿಗೆ ಸಂಪರ್ಕ ಕಲ್ಪಿಸುವ ರಸ್ತೆಯ ಬದಿಯಲ್ಲಿ ಇರುವ ಸುಮಾರು 40 ರಷ್ಟು ಅಪಾಯಕಾರಿ ಮರಗಳನ್ನು ತೆರವುಗೊಳಿಸಿ ಪ್ರಾಕೃತಿಕ ವಿಕೋಪದಿಂದ ಹಾನಿ ಸಂಭವಿಸದಂತೆ ಮುಂಜಾಗ್ರತಾ ಕಾರ್ಯವಾಗಬೇಕೆಂದು ಸುಳ್ಯ ತಹಶಿಲ್ದಾರವರಿಗೆ ಮನವಿ ಸಲ್ಲಿಸಲಾಯಿತು. ಈಗಾಗಲೇ ಸುರಿಯುತ್ತಿರುವ ವಿಪರೀತ ಮಳೆಗೆ ರಸ್ತೆಯ ಬದಿಯ ಮರ ಹಾಗೂ ಮಣ್ಣು ಕುಸಿದು ಸಂಚಾರಕ್ಕೆ ಅಡಚಣೆಯಾಗುತ್ತಿದೆ. ಸಾಕಷ್ಟು ಮರಗಳು ರಸ್ತೆ ಮೇಲೆ ವಾಲಿಕೊಂಡಿದ್ದು ಬೀಳುವ ಸಾಧ್ಯತೆ ಹೆಚ್ಚಿದ್ದು ಹಾನಿ ಸಂಭವಿಸುವ ಮೊದಲು ಮುನ್ನೆಚ್ಚರಿಕೆ ವಹಿಸಿ ಸಂಬಂಧಪಟ್ಟ ಇಲಾಖೆಗೆ ಮರಗಳ ತೆರವಿಗೆ ಸೂಚಿಸಬೇಕಾಗಿ

ಸುಳ್ಯ: ಕೋಲ್ಚಾರಿನಲ್ಲಿ ಅಪಾಯಕಾರಿ ಮರಗಳ ತೆರವುಗೊಳಿಸಲು ತಹಶಿಲ್ದಾರ್ ಗೆ ಮನವಿ Read More »

ಭಾರೀ ಮಳೆ ಹಿನ್ನಲೆ| ನಾಳೆ(ಜು.25) ನಡೆಯಬೇಕಿದ್ದ ಮಂಗಳೂರು ವಿ.ವಿ ಪದವಿ ಪರೀಕ್ಷೆ ಮುಂದೂಡಿಕೆ

ಸಮಗ್ರ ನ್ಯೂಸ್: ಕೊಡಗು, ದಕ್ಷಿಣ ಕನ್ನಡ ಹಾಗು ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ, ನಾಳೆ(ಜು.25) ನಡೆಯಬೇಕಿದ್ದ ಮಂಗಳೂರು ವಿಶ್ವವಿದ್ಯಾನಿಲಯದ ಎಲ್ಲಾ ಪದವಿ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಈ ಕುರಿತು ವಿ.ವಿ ಪರೀಕ್ಷಾಂಗ ಪ್ರಕಟಣೆ ಹೊರಡಿಸಿದ್ದು, ಮುಂದೂಡಿದ ಪರೀಕ್ಷೆಗಳ ಪರಿಷ್ಕೃತ ದಿನಾಂಕವನ್ನು ಮರುನಿಗದಿಪಡಿಸಿ ಎಲ್ಲಾ ಸಂಯೋಜಿತ ಕಾಲೇಜುಗಳಿಗೆ ಶೀಘ್ರದಲ್ಲಿ ತಿಳಿಸಲಾಗುವುದು. ಈ ಹಿಂದೆ ಪ್ರಕಟಿಸಿದ ಉಳಿದ ವೇಳಾಪಟ್ಟಿಯಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಈ ಮೂಲಕ ಪರೀಕ್ಷಾಂಗ ಕುಲಸಚಿವರು ತಿಳಿಸಿದ್ದಾರೆ.

ಭಾರೀ ಮಳೆ ಹಿನ್ನಲೆ| ನಾಳೆ(ಜು.25) ನಡೆಯಬೇಕಿದ್ದ ಮಂಗಳೂರು ವಿ.ವಿ ಪದವಿ ಪರೀಕ್ಷೆ ಮುಂದೂಡಿಕೆ Read More »

ಮದೆನಾಡಿನಲ್ಲಿ ಭೂ ಕುಸಿತ| ಮಾಣಿ – ಮೈಸೂರು ರಾ.ಹೆದ್ದಾರಿ ಸಂಚಾರ ಸಂಪೂರ್ಣ ಬಂದ್

ಸಮಗ್ರ ನ್ಯೂಸ್: ಮಾಣಿ – ಮೈಸೂರು ರಾ.ಹೆದ್ದಾರಿಯ ಮದೆನಾಡು ಸಮೀಪ ಕರ್ತೊಜಿಯಲ್ಲಿ ಮರಗಳ ಸಹಿತ ಭೂ ಕುಸಿತ ಉಂಟಾದ ಪರಿಣಾಮ ಹೆದ್ದಾರಿ ಸಂಚಾರ ಸಂಪೂರ್ಣ ಬಂದ್ ಆಗಿದೆ. ಇದರಿಂದಾಗಿ ಹೆದ್ದಾರಿಯಲ್ಲಿ ವಾಹನಗಳು ಸಾಲುಗಟ್ಟಿ ನಿಂತಿವೆ. ಸೋಮವಾರ ಸಂಜೆ ವೇಳೆಗೆ ದೊಡ್ಡ ಮರವೊಂದು ರಸ್ತೆಗೆ ಮಣ್ಣು ಕುಸಿದು ಬಿದ್ದಿದೆ. ಇದೀಗ ರಸ್ತೆಯ ಒಂದು ಬದಿಯ ಮಣ್ಣನ್ನು ತೆರವುಗೊಳಿಸಲು ಅಧಿಕಾರಿಗಳು ಹರಸಾಹಸ ಮಾಡುತ್ತಿದ್ದಾರೆ. ಜೆಸಿಬಿ -ಹಿಟಾಚಿ ಬಳಸಿ ಮಣ್ಣು ತೆರವಿನ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಸಂಪಾಜೆಯ ಗಡಿಕಲ್ಲು ತನಕ ವಾಹನಗಳು ಸರತಿ

ಮದೆನಾಡಿನಲ್ಲಿ ಭೂ ಕುಸಿತ| ಮಾಣಿ – ಮೈಸೂರು ರಾ.ಹೆದ್ದಾರಿ ಸಂಚಾರ ಸಂಪೂರ್ಣ ಬಂದ್ Read More »

ಸುಳ್ಯದ ಕುಂಕುಂ ಫ್ಯಾಷನ್ ವಸ್ತ್ರ ಮಳಿಗೆಯಲ್ಲಿ ಮಾನ್ಸೂನ್ ಸ್ಪೆಷಲ್ ಆಫರ್| ಇನ್ನು ಕೆಲವೇ ದಿನಗಳು ಮಾತ್ರ

ಸಮಗ್ರ ನ್ಯೂಸ್: ಸುಳ್ಯದ ಹೆಸರಾಂತ ವಸ್ತ್ರ ಮಳಿಗೆ ಸುಳ್ಯದ ಕುಂಕುಂ ಫ್ಯಾಷನ್ ವಸ್ತ್ರ ಮಳಿಗೆಯಲ್ಲಿ ಮಾನ್ಸೂನ್ ವಿಶೇಷ ಆಫರ್ ಆಕರ್ಷಕವಾಗಿ ನಡೆಯುತ್ತಿದ್ದು, ಈ ತಿಂಗಳ ಕೊನೆಯವರೆಗೆ ನಡೆಯಲಿದೆ. ಉತ್ತಮ ವಸ್ತ್ರಗಳ ಅಮೋಘ ಸಂಗ್ರಹವೇ ಇಲ್ಲಿದ್ದು, ಗ್ರಾಹಕರು ಇದರ ಪ್ರಯೋಜನ ಪಡೆಯಬಹುದು. ಮದುವೆ ಹಾಗೂ ಪೂಜಾ ಕಾರ್ಯಕ್ರಮಗಳ ವಸ್ತ್ರಗಳ ಬೃಹತ್ ಸಂಗ್ರಹವೇ ಲಭ್ಯವಿದೆ. ಸಾರಿ ರೂ 75ರಿಂದ ಆರಂಭ, ನೈಟಿ ರೂ.130, ಲೆಗ್ಗಿನ್ಸ್ ರೂ.80, ಪ್ಲಾಝ ಪ್ಯಾಂಟ್ ರೂ.80, ಲೇಡಿಸ್ ಟಾಪ್ ರೂ.120, ರೆಡಿಮೇಡ್ ಬ್ಲೌಸ್ ರೂ.100, ದುಪ್ಪಟ

ಸುಳ್ಯದ ಕುಂಕುಂ ಫ್ಯಾಷನ್ ವಸ್ತ್ರ ಮಳಿಗೆಯಲ್ಲಿ ಮಾನ್ಸೂನ್ ಸ್ಪೆಷಲ್ ಆಫರ್| ಇನ್ನು ಕೆಲವೇ ದಿನಗಳು ಮಾತ್ರ Read More »

ಭಾರೀ ಮಳೆ ಹಿನ್ನಲೆ| ದ.ಕ ಜಿಲ್ಲೆಯಾದ್ಯಂತ ಶಾಲೆ, ಪಿಯು ಕಾಲೇಜುಗಳಿಗೆ ಜು.25ರಂದು ರಜೆ

ಸಮಗ್ರ ನ್ಯೂಸ್: ದ.ಕ. ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರಕಾರಿ, ಖಾಸಗಿ, ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲೆ, ಕಾಲೇಜುಗಳಿಗೆ ಜು.25ರಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ರಜೆ ಘೋಷಿಸಿದ್ದಾರೆ.

ಭಾರೀ ಮಳೆ ಹಿನ್ನಲೆ| ದ.ಕ ಜಿಲ್ಲೆಯಾದ್ಯಂತ ಶಾಲೆ, ಪಿಯು ಕಾಲೇಜುಗಳಿಗೆ ಜು.25ರಂದು ರಜೆ Read More »

ಬಿಸ್ಲೆ ಘಾಟ್ ನಲ್ಲಿ ಭೂಕುಸಿತ| ಬಿಸಿಲೆ- ಸುಬ್ರಹ್ಮಣ್ಯ ಸಂಚಾರ ಸ್ಥಗಿತ

ಸಮಗ್ರ ನ್ಯೂಸ್: ಬಿಸಿಲೆ ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿ 87 ಬಿಸ್ಲೆ ಸಮೀಪದ ಹಡ್ಲುಗದ್ದೆ ಸಮೀಪ ಭೂಕುಸಿತದಿಂದ ಬಂದ್ ಆಗಿದ್ದು ಇದರಿಂದ ಬಿಸಿಲೆ ಭಾಗದಿಂದ ಸುಬ್ರಹ್ಮಣ್ಯ ನಡುವಿನ ರಸ್ತೆ ಸಂಪೂರ್ಣವಾಗಿ ಸಂಪರ್ಕ ಕಡಿತವಾಗಿದೆ. ಪ್ರಯಾಣಿಕರು ಶಿರಾಡಿ ಘಾಟ್ ಮಾರ್ಗವಾಗಿ ಸುಬ್ರಹ್ಮಣ್ಯಕ್ಕೆ ತೆರಳಬೇಕಾಗಿದೆ. ಈಗಾಗಲೇ ಈ ಮಾರ್ಗದಲ್ಲಿ ತೆರಳಿದ ಪ್ರಯಾಣಿಕರು ಸಂಕಷ್ಟ ಅನುಭವಿಸುವಂತಾಗಿದೆ. ತೆರವು‌ ಕಾರ್ಯಾಚರಣೆ ನಡೆಯುತ್ತಿರುವುದಾಗಿ ವರದಿಗಳು ತಿಳಿಸಿವೆ.

ಬಿಸ್ಲೆ ಘಾಟ್ ನಲ್ಲಿ ಭೂಕುಸಿತ| ಬಿಸಿಲೆ- ಸುಬ್ರಹ್ಮಣ್ಯ ಸಂಚಾರ ಸ್ಥಗಿತ Read More »