ಕರಾವಳಿ

ಪುತ್ತೂರು: ಎವಿಜಿ ಇಂಗ್ಲಿಷ್ ಮೀಡಿಯಂ ಸ್ಕೂಲಿನಲ್ಲಿ ಪೋಷಕರ ಸಭೆ , ಕೃತಜ್ಞತಾ ಸಭೆ

ಸಮಗ್ರ ನ್ಯೂಸ್: ಜು.29 ರಂದು ಬನ್ನೂರು ಕೃಷ್ಣನಗರ ಸಮೀಪದಲ್ಲಿರುವ ಎವಿಜಿ ಇಂಗ್ಲಿಷ್ ಮೀಡಿಯಂ ಸ್ಕೂಲಿನಲ್ಲಿ “ಪೋಷಕರ ಸಭೆ ಮತ್ತು ಕೃತಜ್ಞತಾ ಸಭೆ” ನಡೆಸಲಾಯಿತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಸವಣೂರು ವಿದ್ಯಾರಶ್ಮಿ ವಿದ್ಯಾಲಯದ ಪ್ರಾಂಶುಪಾಲರಾದ ಸೀತಾರಾಮ ಕೇವಳ ಇವರು ಶೈಕ್ಷಣಿಕ ಚಿಂತನೆಯ ಕುರಿತು ಶಾಲೆಯ ಪೋಷಕರಿಗೆ ಹಾಗೂ ಶಿಕ್ಷಕರಿಗೆ ಸಲಹೆ ಸೂಚನೆಯನ್ನು ನೀಡಿದರು. ರಾಮಕುಂಜೇಶ್ವರ ಪದವಿ ಪೂರ್ವ ಕಾಲೇಜಿನ ರಾಜ್ಯಶಾಸ್ತ್ರ ಉಪನ್ಯಾಸಕರಾದ ಗುಡ್ಡಪ್ಪ ಗೌಡ ಬಲ್ಯ ಇವರು ಕೃತಜ್ಞತಾ ನುಡಿಯನ್ನಾಡುತ್ತ ಎವಿಜಿ ವಿದ್ಯಾಸಂಸ್ಥೆಯು ಆರಂಭವಾಗಲು ಶ್ರಮಿಸಿದ ಎಲ್ಲರಿಗೂ

ಪುತ್ತೂರು: ಎವಿಜಿ ಇಂಗ್ಲಿಷ್ ಮೀಡಿಯಂ ಸ್ಕೂಲಿನಲ್ಲಿ ಪೋಷಕರ ಸಭೆ , ಕೃತಜ್ಞತಾ ಸಭೆ Read More »

ಮಂಗಳೂರು: ನೀರಿನಲ್ಲಿ ಮುಳುಗಿ ಯುವಕರಿಬ್ಬರು ಮೃತ್ಯು

ಸಮಗ್ರ ನ್ಯೂಸ್: ಮಂಗಳೂರು ನಗರದ ಪಡೀಲ್ ಅಳಪೆ ಪಡ್ಪು ರೈಲ್ವೇ ಬ್ರಿಡ್ಜ್ ಸಮೀಪ ನೀರಿನಲ್ಲಿ ಮುಳುಗಿ ಇಬ್ಬರು ಯುವಕರು ಮೃತಪಟ್ಟ ಘಟನೆ ಜು. 30 ರಂದು ನಡೆದಿದೆ. ಅಳಪೆ ಪಡ್ಪುರೆಂಜ ನಿವಾಸಿ ವರುಣ್ (27) ಮತ್ತು ಎಕ್ಕೂರು ಕೆಎಚ್‌ಬಿ ಕಾಲನಿ ನಿವಾಸಿ ವೀಕ್ಷಿತ್ (28) ಮೃತಪಟ್ಟ ಯುವಕರು. ಜು.30 ರಂದು ಸಂಜೆ ವೇಳೆ 6 ಮಂದಿ ಗೆಳೆಯರು ಒಟ್ಟಾಗಿ ಕ್ರಿಕೆಟ್ ಆಡಲು ತೆರಳಿದ್ದರು. ಈ ಸಂದರ್ಭ ವರುಣ್ ಮತ್ತು ವೀಕ್ಷಿತ್ ರೈಲ್ವೆಯ ಟ್ರಾಕ್ ಪಕ್ಕದ ಹಳ್ಳದ ದಡದಲ್ಲೇ

ಮಂಗಳೂರು: ನೀರಿನಲ್ಲಿ ಮುಳುಗಿ ಯುವಕರಿಬ್ಬರು ಮೃತ್ಯು Read More »

ಸುಳ್ಯ:ದುಗ್ಗಲಡ್ಕ ಬೂತ್ ಕಾಂಗ್ರೇಸ್ ಸಭೆ|ಗೃಹಲಕ್ಷ್ಮಿ ಯೋಜನೆಯ ಶೀಘ್ರ ನೋಂದಾವಣೆಗೆ ಮನೆ ಮನೆ ಭೇಟಿ ಅಭಿಯಾನಕ್ಕೆ ನಿರ್ಧಾರ

ಸಮಗ್ರ ನ್ಯೂಸ್: ಸುಳ್ಯ ನಗರ ಪಂಚಾಯತ್ ವ್ಯಾಪ್ತಿಯ 1ನೇ ವಾರ್ಡ್ ದುಗ್ಗಲಡ್ಕ ಬೂತ್ ಕಾಂಗ್ರೇಸ್ ಸಮಿತಿ ಸಭೆ ಜು. 30 ರಂದು ಅಬೂಬಕ್ಕರ್ ಕೊಳಂಜಿಕೋಡಿಯವರ ಮನೆಯಲ್ಲಿ ನಡೆಯಿತು. ಬೂತ್ ಸಮಿತಿ ಅಧ್ಯಕ್ಷ ಚಂದ್ರಶೇಖರ ನಾಯ್ಕ ಕಂದಡ್ಕ ರವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಮಾಜಿ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ, ನಗರ ಪಂಚಾಯತ್ ಸದಸ್ಯ ಎಂ.ವೆಂಕಪ್ಪ ಗೌಡ ಮಾತನಾಡಿ ಸರಕಾರದ ಗ್ಯಾರಂಟಿ ಯೋಜನೆಗಳನ್ನು ಮನೆ ಮನೆಗೆ ತಲುಪಿಸಲು ಮುಖ್ಯವಾಗಿ ಗೃಹ ಲಕ್ಷ್ಮಿ ಯೋಜನೆಯ ಪಲಾನುಭವಿಗಳನ್ನು ಶೀಘ್ರ ನೋಂದಾವಣೆಗೆ ಪ್ರೆರೇಪಿಸಲು ಮನೆ

ಸುಳ್ಯ:ದುಗ್ಗಲಡ್ಕ ಬೂತ್ ಕಾಂಗ್ರೇಸ್ ಸಭೆ|ಗೃಹಲಕ್ಷ್ಮಿ ಯೋಜನೆಯ ಶೀಘ್ರ ನೋಂದಾವಣೆಗೆ ಮನೆ ಮನೆ ಭೇಟಿ ಅಭಿಯಾನಕ್ಕೆ ನಿರ್ಧಾರ Read More »

ಮಂಗಳೂರು: ಪಡಿತರ ಚೀಟಿಯಿಂದ ಮೃತರ ಹೆಸರು ತೆಗೆಯಲು ಸೂಚನೆ

ಸಮಗ್ರ ನ್ಯೂಸ್: ದ.ಕ. ಜಿಲ್ಲೆಯ ಕೆಲವೊಂದು ಕುಟುಂಬಗಳ ಸದಸ್ಯರು ಮೃತರಾಗಿದ್ದರೂ, ಅವರ ಹೆಸರು ಪಡಿತರದಲ್ಲಿ ತೆಗೆದು ಹಾಕಿರುವುದಿಲ್ಲ. ಈ ರೀತಿಯ 13,133 ಫಲಾನುಭವಿಗಳ ಹೆಸರು ಪಡಿತರ ಚೀಟಿಯಲ್ಲಿ ಉಳಿಸಿರುವುದು ಅಕ್ರಮವಾಗಿದೆ. ಅಂತಹ ಪಡಿತರ ಚೀಟಿದಾರರು ಮೃತಪಟ್ಟವರ ದಾಖಲಾತಿಯನ್ನು ತಾಲೂಕು ಕಚೇರಿಗೆ ಸಲ್ಲಿಸಿ ಪಡಿತರ ಚೀಟಿಯಿಂದ ಮೃತಪಟ್ಟವರ ಹೆಸರನ್ನು ತೆಗೆಸಬೇಕು. ಮೃತರಾದವರ ಹೆಸರನ್ನು ಚೀಟಿಯಿಂದ ತೆಗೆಯದೇ ಇರುವಂತವರನ್ನು ನಿಯಾಮಾನುಸಾರ ಅನರ್ಹಗೊಳಿಸಲಾಗುವುದು ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟನೆ ತಿಳಿಸಿದೆ.

ಮಂಗಳೂರು: ಪಡಿತರ ಚೀಟಿಯಿಂದ ಮೃತರ ಹೆಸರು ತೆಗೆಯಲು ಸೂಚನೆ Read More »

ಐವರ್ನಾಡು: ಹೇರ್ ಟ್ರೆಂಡ್ ಬಾರ್ಬರ್ ಶಾಪ್ ಶುಭಾರಂಭ

ಸಮಗ್ರ ನ್ಯೂಸ್: ಐವರ್ನಾಡು ಗ್ರಾಮದ ಜನನಿ ಕಾಂಪ್ಲೆಕ್ಸ್ ನಲ್ಲಿ ಜು.30 ರಂದು ಹೇರ್ ಟ್ರೆಂಡ್ ಬಾರ್ಬರ್ ಶಾಪ್ ಶುಭಾರಂಭಗೊಂಡಿದೆ. ಈ ಸಂದರ್ಭದಲ್ಲಿ ರಿಬ್ಬನ್ ಕಟ್ ಮಾಡಿದ ಸತೀಶ್ ಕುಮಾರ್, ಜೀವನ್ ಜಬಳೆ, ರಾಜೇಂದ್ರ, ಮೋಹನ್ ಸುಂದರ್, ಜೋಸೆಫ್ , ಯಕ್ಷಿತ್, ಚರಣ್ ಜಬಳೆ, ವಾಸುದೇವ ಬೊಳುಬೈಲು, ಅಬ್ದುಲ್ಲಾ ಪರ್ಲಿಕಜೆ, ರಂಜಾನ್ ಪರ್ಲಿಕಜೆ, ಮುಝಮಿಲ್ ಮೊದಲಾದವರು ಉಪಸ್ಥಿತರಿದ್ದರು.

ಐವರ್ನಾಡು: ಹೇರ್ ಟ್ರೆಂಡ್ ಬಾರ್ಬರ್ ಶಾಪ್ ಶುಭಾರಂಭ Read More »

ಚೆನ್ನಮಣೆಯೆಂಬ ಚದುರಂಗದಾಟ ಮರೆಯಾಯಿತೇ…!!!

ಸಮಗ್ರ ವಿಶೇಷ: ತುಳುನಾಡಿನ ಸಂಸ್ಕೃತಿ ಆಚಾರ ವಿಚಾರ ಸಂಪ್ರದಾಯ ಕಟ್ಟು ಕಟ್ಟಲೆಗಳು ಅನಾದಿಕಾಲದಿಂದಲೂ ನಡೆದುಕೊಂಡು ಬಂದಿದೆ. ಅದು ನಮ್ಮ ಹೆಮ್ಮೆ ಕೂಡ ಹೌದು. ಪ್ರತಿದಿನ ಪ್ರತಿಕ್ಷಣ ಸಂಭ್ರಮದ ವಾತಾವರಣ. ಹಚ್ಚ ಹಸಿರಿನ ನಡುವಿನ ಪರಿಸರದಲ್ಲಿ ಜೀವಿಸುವುದು ಮತ್ತಷ್ಟು ಹುಮ್ಮಸು ಮತ್ತು ಆನಂದ. ಇನ್ನು ಗ್ರಾಮೀಣ ಸೊಗಡಿನ ಆಟಗಳು ಮನಸ್ಸಿನ ಸಂತೋಷವನ್ನು ಇಮ್ಮಡಿಗೊಳಿಸುತ್ತದೆ. ಅದರಲ್ಲೂ ಚೆನ್ನೆಮನೆ ಆಟದ ಸೊಗಡಿನ ವಿಶೇಷತೆ ಬಹಳಷ್ಟಿದೆ. ಚೆನ್ನೆಮನೆ ಅಥವಾ ಚೆನ್ನೆದ ಮನೆ ತುಳುನಾಡು ಪ್ರದೇಶದಲ್ಲಿ ಆಟಿ ಮಾಸದಲ್ಲಿ ಆಡುವ ಜನಪ್ರಿಯ ಒಳಾಂಗಣ ಆಟವಾಗಿದೆ.

ಚೆನ್ನಮಣೆಯೆಂಬ ಚದುರಂಗದಾಟ ಮರೆಯಾಯಿತೇ…!!! Read More »

ಪುತ್ತೂರು: ಸವಣೂರು ಸೀತಾರಾಮ ರೈ ಸಾರಥ್ಯದಲ್ಲಿ ಆಟಿಡೊಂಜಿ ದಿನ| “ತುಳುವೆರ ಆಟಿ” ಲೇಖನ ಬಿಡುಗಡೆ

ಸಮಗ್ರ ನ್ಯೂಸ್: ಸವಣೂರು ವಿದ್ಯಾರಶ್ಮಿ ವಿದ್ಯಾಸಂಸ್ಥೆಗಳ ಸಂಚಾಲಕ ಸವಣೂರು ಕೆ. ಸೀತರಾಮಯ್ಯ ರೈ ಅವರ ಅಧ್ಯಕ್ಷತೆಯಲ್ಲಿ ಆಟಿಡೊಂಜಿ ದಿನ ಜು. 29ರಂದು ಪುತ್ತೂರಿನ ಪ್ರಶಾಂತ್ ಮಹಲ್ ನ ಸನ್ನಿಧಿ ಸಭಾ ಭವನದಲ್ಲಿ ನಡೆಯಿತು. ತುಳು ಜಾನಪದ ಸಾಂಸ್ಕೃತಿಕ ಕಾರ್ಯಕ್ರಮ, ಆಟಿಯ ಆಟಗಳು ಮತ್ತು ಸಭಾ ಕಾರ್ಯಕ್ರಮದ ಅಧ್ಯಕ್ಷರಾದ ಸವಣೂರು ವಿದ್ಯಾರಶ್ಮಿ ವಿದ್ಯಾಸಂಸ್ಥೆಗಳ ಸಂಚಾಲಕ ಸವಣೂರು ಕೆ. ಸೀತರಾಮಯ್ಯ ರೈ ಪ್ರಸ್ತಾವಿಕ ಮಾತುಗಳನ್ನಾಡಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಕನ್ನಡ ಪ್ರಾಧ್ಯಾಪಕ ಹಾಗೂ ಅಂಕಣಕಾರ ನರೇಂದ್ರ ರೈ ದೇರ್ಲ ಅವರು

ಪುತ್ತೂರು: ಸವಣೂರು ಸೀತಾರಾಮ ರೈ ಸಾರಥ್ಯದಲ್ಲಿ ಆಟಿಡೊಂಜಿ ದಿನ| “ತುಳುವೆರ ಆಟಿ” ಲೇಖನ ಬಿಡುಗಡೆ Read More »

ಸುಳ್ಯ: ಸೌಜನ್ಯ ಹತ್ಯೆಯ ಘಟನೆಯ ಹಿಂದೆ ಯಾರೇ ಪ್ರಭಾವಿಗಳಿದ್ದರೂ ಕಾನೂನಾತ್ಮಕ ಶಿಕ್ಷೆಯಾಗಲಿ – ಭಜನಾ ಪರಿಷತ್ ಆಗ್ರಹ

ಸಮಗ್ರ ನ್ಯೂಸ್: ಬೆಳ್ತಂಗಡಿಯ ಸೌಜನ್ಯ ಹತ್ಯೆ ಪ್ರಕರಣದ ಹಿಂದೆ ಎಷ್ಟೇ ದೊಡ್ಡ ಪ್ರಭಾವಿಗಳಿದ್ದರೂ ಕಾನೂನಾತ್ಮಕ ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸಿ ಶಿಕ್ಷೆಗೊಳಪಡಿಸಬೇಕು ಎಂದು ಆಗ್ರಹಿಸಿರುವ ಸುಳ್ಯ ತಾಲೂಕು ಭಜನಾ ಪರಿಷತ್. ಈ ವಿಚಾರದಲ್ಲಿ ಧರ್ಮಸ್ಥಳ ಕ್ಷೇತ್ರದ ಹೆಸರನ್ನು ಹಾಗೂ ಖಾವಂದರ ಹೆಸರನ್ನು ಎಳೆದು ಅಪಪ್ರಚಾರ ಮಾಡುವುದನ್ನು ನಾವು ಸಹಿಸುವುದಿಲ್ಲ. ಇದು ಹೀಗೆ ಮುಂದುವರಿದರೆ ನಾವು ಬೃಹತ್ ಹೋರಾಟ ನಡೆಸಲಿದ್ದೇವೆ ಎಂದು ಹೇಳಿದ್ದಾರೆ. ಜು.29 ರಂದು ಸುಳ್ಯ ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಭಜನಾ ಪರಿಷತ್ ಅಧ್ಯಕ್ಷ

ಸುಳ್ಯ: ಸೌಜನ್ಯ ಹತ್ಯೆಯ ಘಟನೆಯ ಹಿಂದೆ ಯಾರೇ ಪ್ರಭಾವಿಗಳಿದ್ದರೂ ಕಾನೂನಾತ್ಮಕ ಶಿಕ್ಷೆಯಾಗಲಿ – ಭಜನಾ ಪರಿಷತ್ ಆಗ್ರಹ Read More »

ಕುಕ್ಕೆ ದೇವಳಕ್ಕೆ ನಿಯಮ ಬಾಹಿರ ದಿನಸಿ ಖರೀದಿಯ ಆರೋಪ

ಸಮಗ್ರ ನ್ಯೂಸ್: ಕುಕ್ಕೆ ಸುಬ್ರಹ್ಮಣ್ಯ ದೇವಳಕ್ಕೆ ಕಳೆದ ಮೂರು ವರ್ಷಗಳಿಂದ ದೇವಳಕ್ಕೆ ಬೇಕಾಗುವ ದಿನಸಿ ಸಾಮಾಗ್ರಿಗಳನ್ನು ಯಾವುದೇ ಟೆಂಡರ್ ನಡೆಸದೇ ನಿಯಮ ಬಾಹಿರವಾಗಿ ಮಂಗಳೂರಿನಿ ಜನತಾ ಬಜಾರ್‌ನಿಂದ ಖರೀದಿಸಲಾಗಿದ್ದು, ಇದರಿಂದ ಪ್ರತೀ ವರ್ಷ ಸುಮಾರು ೫ ಕೋಟಿ ಹೆಚ್ಚುವರಿ ಪಾವತಿಯಾಗಿ ನಷ್ಟ ಉಂಟಾಗುತ್ತಿದೆ ಎಂದು ಸುಬ್ರಹ್ಮಣ್ಯ ಕಾಂಗ್ರೆಸ್ ಗ್ರಾಮ ಸಮಿತಿ ಅಧ್ಯಕ್ಷ ಹರೀಶ್‌ಇಂಜಾಡಿ ಆರೋಪಿಸಿದರು. ಅವರು ಸುಬ್ರಹ್ಮಣ್ಯದಲ್ಲಿ ಗುರುವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದರು. ಟೆಂಡರ್ ನಡೆಸದೇ ಸಾಮಾಗ್ರಿ ಖರೀದಿ ಬಗ್ಗೆ ಕಳೆದ ಬಿಜೆಪಿ ಸರಕಾರದ ಅವಧಿಯಲ್ಲಿ ಅಧಿವೇಶನದಲ್ಲಿ

ಕುಕ್ಕೆ ದೇವಳಕ್ಕೆ ನಿಯಮ ಬಾಹಿರ ದಿನಸಿ ಖರೀದಿಯ ಆರೋಪ Read More »

ಕಡಬ:ರಸ್ತೆ ಸಂಪರ್ಕ ಇಲ್ಲದೆ ಸಮಸ್ಯೆ; ಅನಾರೋಗ್ಯ ಪೀಡಿತ ಮಹಿಳೆಯನ್ನು ಹೊತ್ತುಯ್ಯಬೇಕಾದ ಅನಿವಾರ್ಯತೆ !

ಸಮಗ್ರ ನ್ಯೂಸ್: ಅನಾರೋಗ್ಯದಿಂದ ಬಳಲುತ್ತಿರುವ ಮಹಿಳೆಯೋರ್ವರ ಮನೆಗೆ ಹೋಗಲು ಸಮರ್ಪಕ ರಸ್ತೆ ಇಲ್ಲದೇ ಇರುವುದರಿಂದ ಮಹಿಳೆಯನ್ನು ಹೊತ್ತುಕೊಂಡೇ ಆಸ್ಪತ್ರೆಗೆ ಕರೆದೊಯ್ಯುತ್ತಿರುವ ಪ್ರಕರಣವೊಂದು ಕಡಬ ತಾಲೂಕಿನ ಇಚ್ಲಂಪಾಡಿ ಗ್ರಾಮದಲ್ಲಿ ನಡೆದಿದೆ. ಇಚ್ಲಂಪಾಡಿ ಗ್ರಾಮದ ಕೆರ್ನಡ್ಕ ನಿವಾಸಿ ಕೆ.ಗೋಪಾಲನ್ ಎಂಬವರ ಪತ್ನಿ ಸಾವಿತ್ರಿ(69) ಅನಾರೋಗ್ಯದಿಂದ ಬಳಲುತ್ತಿದ್ದು ಅವರನ್ನು ಹೊತ್ತುಕೊಂಡೇ ಮನೆಯವರು ಆಸ್ಪತ್ರೆಗೆ ಸಾಗಿಸಬೇಕಾದ ಅನಿವಾರ್ಯತೆಗೆ ಸಿಲುಕಿದ್ದಾರೆ. ಕೊರಮೇರು ಅಂಗನವಾಡಿ ಕೇಂದ್ರದ ನಿವೃತ್ತ ಸಹಾಯಕಿಯಾಗಿರುವ ಸಾವಿತ್ರಿ ಅವರು ಎರಡೂ ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದು ಪುತ್ತೂರಿನ ಸಿಟಿ ಆಸ್ಪತ್ರೆಗೆ ದಿನ ಬಿಟ್ಟು ದಿನ

ಕಡಬ:ರಸ್ತೆ ಸಂಪರ್ಕ ಇಲ್ಲದೆ ಸಮಸ್ಯೆ; ಅನಾರೋಗ್ಯ ಪೀಡಿತ ಮಹಿಳೆಯನ್ನು ಹೊತ್ತುಯ್ಯಬೇಕಾದ ಅನಿವಾರ್ಯತೆ ! Read More »