ಕರಾವಳಿ

ಸುಬ್ರಹ್ಮಣ್ಯ ಸ್ನಾನ ಘಟ್ಟಕ್ಕೆ ಗೃಹ ರಕ್ಷಕ ದಳದ ಸಮಾದೇಷ್ಟರ ಭೇಟಿ

ಸಮಗ್ರ ನ್ಯೂಸ್: ಘಟ್ಟದ ಮೇಲ್ಬಾಗದಲ್ಲಿ ಮತ್ತು ಕರಾವಳಿಯಲ್ಲಿ ವಿಪರೀತ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕರಾವಳಿಯ ನದಿಗಳು ತುಂಬಿಹರಿಯುತ್ತಿದ್ದು, ಸುಬ್ರಹ್ಮಣ್ಯದ ಕುಮಾರಧಾರ ಸ್ನಾನ ಘಟ್ಟ ಮುಳುಗಡೆ ಯಾಗಿದೆ. ರವಿವಾರ ಗೃಹ ರಕ್ಷಕ ದಳದ ದ.ಕ. ಜಿಲ್ಲಾ ಸಮಾದೇಷ್ಟ ಡಾ.ಮುರಲಿ ಮೋಹನ್ ಚೂಂತಾರು ಅವರು ಸುಬ್ರಹ್ಮಣ್ಯದ ಕುಮಾರಧಾರ ಸ್ನಾನ ಘಟ್ಟ ಸ್ಥಳಕ್ಕೆ ಭೇಟಿ ನೀಡಿ ಪ್ರವಾಹ ರಕ್ಷಣಾ ತಂಡದ ಸದಸ್ಯರಿಗೆ ಸಲಹೆ ಮತ್ತು ಮಾರ್ಗದರ್ಶನ ನೀಡಿದರು. ಕುಮಾರಧಾರ ನದಿ ತುಂಬಿ ಹರಿಯುತ್ತಿದ್ದು ಯಾವುದೇ ಕಾರಣಕ್ಕೂ ಪ್ರವಾಸಿಗರು ಮತ್ತು ಭಕ್ತರು ನೀರಿಗೆ ಇಳಿಯದಂತೆ […]

ಸುಬ್ರಹ್ಮಣ್ಯ ಸ್ನಾನ ಘಟ್ಟಕ್ಕೆ ಗೃಹ ರಕ್ಷಕ ದಳದ ಸಮಾದೇಷ್ಟರ ಭೇಟಿ Read More »

ಕಡಬ: ಉಕ್ಕೇರಿದ ಕುಮಾರಧಾರ; ಕುಕ್ಕೆ ಸುಬ್ರಹ್ಮಣ್ಯ ಸ್ನಾನಘಟ್ಟ ಸಂಪೂರ್ಣ ಜಲಾವೃತ| ಹೆದ್ದಾರಿಗೂ ನುಗ್ಗಿದ ನೆರೆನೀರು

ಸಮಗ್ರ ವಾರ್ತೆ: ಪುಷ್ಪಗಿರಿ ಪರಿಸರ ಹಾಗೂ ಘಟ್ಟ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರ ನದಿ ತುಂಬಿ ಹರಿಯುತ್ತಿದ್ದು, ಪ್ರವಾಹದ ನೀರು ಹೆದ್ದಾರಿಗೆ ನುಗ್ಗಿ ಸಂಚಾರಕ್ಕೆ ಅಡಚಣೆ ಉಂಟಾಯಿತು. ಕುಮಾರಧಾರ ನದಿಯಲ್ಲಿ ನೀರು ಹೆಚ್ಚಳದಿಂದ ಕುಮಾರಧಾರ ಸ್ನಾನಘಟ್ಟ ಸಂಪೂರ್ಣ ಮುಳುಗಡೆಯಾಗಿದೆ. ಇಲ್ಲಿನ ಲಗೇಜ್ ಕೊಠಡಿ, ಶೌಚಾಲಯ ಎಲ್ಲವೂ ಮುಳುಗಡೆಯಾಗಿದೆ. ಮಂಜೇಶ್ವರ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಗೆ ನದಿಯ ನೀರು ನುಗ್ಗಿ ವಾಹನ ಸಂಚಾರಕ್ಕೆ ಅಡ್ಡಿಯಾಯಿತು. ಮುಂಜಾಗ್ರತಾ ಹಿನ್ನೆಲೆಯಲ್ಲಿ ಸಂಚಾರ ನಿಷೇಧಿಸಲಾಗಿದೆ. ನದಿ ಸಮೀಪದ ತೋಟಗಳಿಗೂ

ಕಡಬ: ಉಕ್ಕೇರಿದ ಕುಮಾರಧಾರ; ಕುಕ್ಕೆ ಸುಬ್ರಹ್ಮಣ್ಯ ಸ್ನಾನಘಟ್ಟ ಸಂಪೂರ್ಣ ಜಲಾವೃತ| ಹೆದ್ದಾರಿಗೂ ನುಗ್ಗಿದ ನೆರೆನೀರು Read More »

ಹವಾಮಾನ ವರದಿ| ಇನ್ನೆರಡು ದಿನ ಭಾರೀ ಮಳೆ‌ ಸಾಧ್ಯತೆ

ಸಮಗ್ರ ನ್ಯೂಸ್: ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡು ಸೇರಿದಂತೆ ರಾಜ್ಯದ ಹಲವೆಡೆ ಭಾನುವಾರ (ಜುಲೈ 23) ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿಯ ಬಹುತೇಕ ಕಡೆ ಮತ್ತು ದಕ್ಷಿಣ ಒಳನಾಡಿನ ಹಲವೆಡೆ ಮಳೆಯಾಗಲಿದೆ ಎಂದು ತಿಳಿದು ಬಂದಿದೆ. ಕಳೆದ ಒಂದು ವಾರದಿಂದ ಕರಾವಳಿಯಲ್ಲಿ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು, ಇತರೆಡೆಗಳಲ್ಲೂ ವ್ಯಾಪಿಸಿದೆ. ಆದರೆ, ಕರಾವಳಿಯಲ್ಲಿ ಮಳೆ ಪ್ರಮಾಣ ಸಾಮಾನ್ಯವಾಗಿದೆ ಎಂದು ಹೇಳಿದೆ. ಉತ್ತರ ಒಳನಾಡಿನ ಬೆಳಗಾವಿ ಜಿಲ್ಲೆಯ ಒಂದೆರಡು ಕಡೆಗಳಲ್ಲಿ

ಹವಾಮಾನ ವರದಿ| ಇನ್ನೆರಡು ದಿನ ಭಾರೀ ಮಳೆ‌ ಸಾಧ್ಯತೆ Read More »

ಮಲೆನಾಡು, ಕರಾವಳಿಯಲ್ಲಿ ಅಬ್ಬರಿಸುತ್ತಿರುವ ವರುಣ| ಹಲವೆಡೆ ಹಾನಿ; ತುಂಬಿ ಹರಿಯುತ್ತಿರುವ ಜೀವನದಿಗಳು

ಸಮಗ್ರ ನ್ಯೂಸ್: ಮಲೆನಾಡು ಜಿಲ್ಲೆಗಳಾದ ಕೊಡಗು ಮತ್ತು ಚಿಕ್ಕಮಗಳೂರಿನಲ್ಲಿ ಅಬ್ಬರದ ಮಳೆ ಮುಂದುವರಿದಿದೆ. ಕೊಡಗಿನಲ್ಲಿ ಭಾರೀ ಗಾಳಿ ಸಹಿತ ಸುರಿದ ಮಳೆಗೆ ಹಲವು ಕಡೆ ಮರ, ವಿದ್ಯುತ್‌ ಕಂಬಗಳು ರಸ್ತೆಗೆ ಉರುಳಿ ಬಿದ್ದು ಹಲವು ಗ್ರಾಮಗಳಲ್ಲಿ ಕತ್ತಲು ಆವರಿಸಿದೆ. ಮಡಿಕೇರಿ ತಾಲೂಕಿನ ಬಾಡಗ ಶಾಲೆ ಮೇಲೆ ವಿದ್ಯುತ್‌ ಕಂಬ ಉರುಳಿಬಿದ್ದರೂ ಆ ಸಂದರ್ಭದಲ್ಲಿ ವಿದ್ಯಾರ್ಥಿಗಳು ಶಾಲೆಗೆ ಬಾರದ ಹಿನ್ನೆಲೆಯಲ್ಲಿ ಸಂಭಾವ್ಯ ಅಪಾಯ ತಪ್ಪಿದೆ. ಹಾರಂಗಿ ಜಲಾಶಯ ಭರ್ತಿಯಾಗಲು ಇನ್ನು ಕೇವಲ 6 ಅಡಿ ಅಷ್ಟೇ ಬಾಕಿ ಇದ್ದು,

ಮಲೆನಾಡು, ಕರಾವಳಿಯಲ್ಲಿ ಅಬ್ಬರಿಸುತ್ತಿರುವ ವರುಣ| ಹಲವೆಡೆ ಹಾನಿ; ತುಂಬಿ ಹರಿಯುತ್ತಿರುವ ಜೀವನದಿಗಳು Read More »

ಭಾರೀ ಮಳೆಗೆ ಉಕ್ಕಿ‌ ಹರಿಯುತ್ತಿರುವ ಕುಮಾರಧಾರಾ| ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸ್ನಾನಘಟ್ಟ ಮುಳುಗಡೆ

ಸಮಗ್ರ ನ್ಯೂಸ್: ಸುಬ್ರಹ್ಮಣ್ಯ ಪರಿಸರದಲ್ಲಿ ಹಾಗೂ ಘಟ್ಟ ಪ್ರದೇಶದಲ್ಲಿ ಬಾರೀ ಮಳೆಯಾಗುತ್ತಿರುವುದರಿಂದ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಕುಮಾರಧಾರ ನದಿ ತುಂಬಿ ಹರಿಯುತ್ತಿದ್ದು, ಕುಕ್ಕೆ ಸುಬ್ರಹ್ಮಣ್ಯ ಸಮೀಪದ ಕುಮಾರಧಾರ ಸ್ನಾನಘಟ್ಟ ಶನಿವಾರ ಮುಳುಗಡೆಗೊಂಡಿದೆ. ಶುಕ್ರವಾರ ರಾತ್ರಿಯಿಂದಲೇ ಬಾರೀ ಮಳೆಯಾಗುತ್ತಿದೆ. ಘಟ್ಟ ಪ್ರದೇಶದಲ್ಲೂ ಬಾರೀ ಮಳೆಯಾಗುತ್ತಿರುವುದರಿಂದ ಕುಮಾರಧಾರ ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಳಗೊಂಡಿದೆ. ಕುಮಾರಧಾರ ಸ್ನಾನ ಘಟ್ಟ ಹಾಗೂ ಕಿಂಡಿ ಅಣೆಕಟ್ಟು ಮುಳುಗಡೆಯಾಗಿದೆ. ನದಿಯಲ್ಲಿ ನೀರಿನ ಹರಿವು ಹೆಚ್ಚಾಗಿರುವುದರಿಂದ ಭಕ್ತಾಧಿಗಳಿಗೆ ನೀರಿಗಿಳಿಯದಂತೆ ಸೂಚನೆ ನೀಡಲಾಗಿದೆ. ನದಿ ದಡದಲ್ಲಿ ಸಿಬ್ಬಂದಿಗಳ ನಿಯೋಜಿಸಲಾಗಿದೆ. ಎಚ್ಚರಿಕಾ

ಭಾರೀ ಮಳೆಗೆ ಉಕ್ಕಿ‌ ಹರಿಯುತ್ತಿರುವ ಕುಮಾರಧಾರಾ| ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸ್ನಾನಘಟ್ಟ ಮುಳುಗಡೆ Read More »

ಸ್ಟೋರಿ ಆಫ್ ಸೌಜನ್ಯ ಸಿನಿಮಾ ನಿರ್ಮಾಣಕ್ಕೆ ಸೌಜನ್ಯ ಕುಟುಂಬದ ವಿರೋಧ| ನಮ್ಮ ಹೋರಾಟ ಸಿನಿಮಾ ಮಾಡುವುದಕ್ಕೆ ಅಲ್ಲ ಎಂದ ವಿಠಲ ಗೌಡ

ಸಮಗ್ರ ನ್ಯೂಸ್: ಧರ್ಮಸ್ಥಳದಲ್ಲಿ ಅತ್ಯಾಚಾರಕ್ಕೊಳಗಾಗಿ ಕೊಲೆಯಾದ ವಿದ್ಯಾರ್ಥಿನಿ ಸೌಜನ್ಯನ ಕಥೆಯನ್ನು ಸಿನಿಮಾ ಮಾಡಲು ಸಿನಿಮಾ ತಂಡವೊಂದು ನಿರ್ಧರಿಸಿ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಹೆಸರು ನೋಂದಾಯಿಸಿದ ಬೆನ್ನಲ್ಲೇ ಸಿನಿಮಾವನ್ನು ನಿರ್ಮಾಣಕ್ಕೆ ಸೌಜನ್ಯ ಕುಟುಂಬಸ್ಥರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಸೌಜನ್ಯಳ ಮಾವ ವಿಠಲ ಗೌಡ, ನಮ್ಮ ಒಪ್ಪಿಗೆ ಪಡೆಯದೇ ಅವರು ಹೇಗೆ ಸಿನಿಮಾ ಮಾಡುತ್ತಾರೆ? ನಮ್ಮನ್ನು ದಾರಿ ತಪ್ಪಿಸುವುದಕ್ಕೆ ಹೀಗೆ ಮಾಡುತ್ತಿದ್ದಾರೆಯೇ? ನಮ್ಮ ಉದ್ದೇಶ ಸಿನಿಮಾ ಮಾಡುವುದು ಅಲ್ಲ. ನಮಗೆ ನ್ಯಾಯ ಸಿಗಬೇಕು ಅಷ್ಟೇ ಎಂದಿದ್ದಾರೆ.

ಸ್ಟೋರಿ ಆಫ್ ಸೌಜನ್ಯ ಸಿನಿಮಾ ನಿರ್ಮಾಣಕ್ಕೆ ಸೌಜನ್ಯ ಕುಟುಂಬದ ವಿರೋಧ| ನಮ್ಮ ಹೋರಾಟ ಸಿನಿಮಾ ಮಾಡುವುದಕ್ಕೆ ಅಲ್ಲ ಎಂದ ವಿಠಲ ಗೌಡ Read More »

Moral policing| ಮಂಗಳೂರಿನಲ್ಲಿ ಮತ್ತೊಂದು ನೈತಿಕ ಪೊಲೀಸ್ ಗಿರಿ| ಹಿಂದೂ ಯುವತಿಯರ ಜೊತೆ ಬೀಚ್ ಗೆ ತೆರಳಿದ್ದ ವೈದ್ಯ ವಿದ್ಯಾರ್ಥಿ ಮೇಲೆ ಹಲ್ಲೆ

ಸಮಗ್ರ ನ್ಯೂಸ್: ಮಂಗಳೂರಿನಲ್ಲಿ ಮತ್ತೊಂದು ನೈತಿಕ ಪೊಲೀಸ್‌ಗಿರಿ ಪ್ರಕರಣ ವರದಿಯಾಗಿದೆ. ಹಿಂದೂ ಯುವತಿಯರ ಜತೆಗೆ ಬೀಚ್‌ಗೆ ತೆರಳಿದ ಮಂಗಳೂರಿನ ಪ್ರತಿಷ್ಠಿತ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿಯ ಮೇಲೆ ದುಷ್ಕರ್ಮಿಗಳ ತಂಡದಿಂದ ಹಲ್ಲೆ ನಡೆದಿದೆ. ಮಂಗಳೂರಿನ ಪ್ರತಿಷ್ಠಿತ ಎಜೆ ವೈದ್ಯಕೀಯ ಕಾಲೇಜಿನ ಹಾಸ್ಪಿಟಲ್ ಮ್ಯಾನೇಜ್ಮೆಂಟ್ ಕೋರ್ಸ್‌ನ ವಿದ್ಯಾರ್ಥಿಗಳು ಪಣಂಬೂರು ಬೀಚ್‌ಗೆ ವಿಹಾರಕ್ಕೆ ತೆರಳಿದ್ದರು. ಈ ಸಂದರ್ಭದಲ್ಲಿ ತಂಡವೊಂದು ಇವರನ್ನು ಹಿಂಬಾಲಿಸಿ ಬಂದಿದ್ದು, ಹಲ್ಲೆ ನಡೆಸಿದೆ. ಬೀಚ್‌ಗೆ 6 ಮಂದಿ ವಿದ್ಯಾರ್ಥಿ ವಿದ್ಯಾರ್ಥಿನಿಯರು ವಿಹಾರಕ್ಕೆ ತೆರಳಿದ್ದರು. ತಂಡದಲ್ಲಿ 4 ಮಂದಿ ಹಿಂದೂ

Moral policing| ಮಂಗಳೂರಿನಲ್ಲಿ ಮತ್ತೊಂದು ನೈತಿಕ ಪೊಲೀಸ್ ಗಿರಿ| ಹಿಂದೂ ಯುವತಿಯರ ಜೊತೆ ಬೀಚ್ ಗೆ ತೆರಳಿದ್ದ ವೈದ್ಯ ವಿದ್ಯಾರ್ಥಿ ಮೇಲೆ ಹಲ್ಲೆ Read More »

ಮಂಗಳೂರು:‌ರಾಷ್ಟ್ರೀಯ ನಾವಿಕರ ಸಂಘದ 23ನೇ ಶಾಖೆ ಉದ್ಘಾಟನೆ

ಸಮಗ್ರ ನ್ಯೂಸ್: ನ್ಯಾಶನಲ್ ಯೂನಿಯನ್ ಓಫ್ ಸೀಫೆರರ್ ಓಫ್ ಇಂಡಿಯ(NUSI/ಭಾರತೀಯ ರಾಷ್ಟ್ರೀಯ ನಾವಿಕರ ಸಂಘ)ದ 23ನೇ ಶಾಖೆ ಮಂಗಳೂರಿನ  ಕೂಳೂರಿನಲ್ಲಿ ಜು.19ರಂದು ಶುಭಾರಂಭ ಗೊಂಡಿತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ, ಶ್ರೀ ಲೂಯಿಸ್ ಗೊಂಮಿಸ್(ವೈಸ್,ಪ್ರೆಸಿಡೆಂಟ್ NUSI)ರವರು ಭಾರತೀಯ   ರಾಷ್ಟ್ರೀಯ ನಾವಿಕರ ಸಂಘ)ದ 23ನೇ ಶಾಖೆಯು ಕರಾವಳಿಯ ಮತ್ತು  ಕರ್ನಾಟಕದ ನಾವಿಕರ ಯಶಸ್ಸಿನ ಒಂದು ಮೈಲಿಗಲ್ಲು ಮತ್ತು ಭಾರತದ  ಅಂಡಮಾನ್- ನಿಕೋಬಾರ್ ಸಹಿತ ಕರಾವಳಿಯ ಎಲ್ಲಾ ರಾಜ್ಯಗಳಲ್ಲಿ ಭಾರತೀಯ ರಾಷ್ಟ್ರೀಯ ನಾವಿಕರ ಸಂಘ(NUSI) ತನ್ನ ಶಾಖೆಯನ್ನು ವಿಸ್ತರಿಸಿದೆ ಎಂದರು. ಸಂಪನ್ಮೂಲ ವ್ಯಕ್ತಿಯಾಗಿ

ಮಂಗಳೂರು:‌ರಾಷ್ಟ್ರೀಯ ನಾವಿಕರ ಸಂಘದ 23ನೇ ಶಾಖೆ ಉದ್ಘಾಟನೆ Read More »

ಬೆಳ್ತಂಗಡಿ: ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ| ಮಾನಹಾನಿಕರ ವರದಿ ಪ್ರಕಟಿಸದಂತೆ ಕೋರ್ಟ್ ನಿಂದ ತಡೆಯಾಜ್ಞೆ| ಪ್ರಕಟಿಸಿದ ವರದಿ ಡಿಲಿಟ್ ಮಾಡಲು ಆದೇಶ

ಸಮಗ್ರ ನ್ಯೂಸ್: ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿನಕಾರಣ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರ ಮತ್ತು ಅವರ ಕುಟುಂಬ ಸದಸ್ಯರು ಹಾಗೂ ಸಂಸ್ಥೆಗಳ ಬಗ್ಗೆ ಮಾನಹಾನಿಕರ ವರದಿ ಪ್ರಸಾರ ಮಾಡುತ್ತಿರುವ ಬಗ್ಗೆ ಶ್ರೀ ಕ್ಷೇತ್ರ ಧರ್ಮಸ್ಥಳದ ಸಿಬ್ಬಂದಿಗಳು ಬೆಂಗಳೂರು ಸಿಟಿ ಸಿವಿಲ್ ಮತ್ತು ಸೆಕ್ಷನ್ಸ್ ಕೋರ್ಟ್ ನಲ್ಲಿ ಸುಳ್ಳು ವರದಿಗಳನ್ನು ಪ್ರಸಾರ ಮಾಡದಂತೆ ವಕೀಲರ ಮೂಲಕ ಅರ್ಜಿ ಸಲ್ಲಿಸಿದ್ದು, ಇದೀಗ 7 ಮಂದಿ ಸೇರಿ 54 ಮಾಧ್ಯಮ ಸಂಸ್ಥೆಗಳಿಗೆ ಬೆಂಗಳೂರು

ಬೆಳ್ತಂಗಡಿ: ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ| ಮಾನಹಾನಿಕರ ವರದಿ ಪ್ರಕಟಿಸದಂತೆ ಕೋರ್ಟ್ ನಿಂದ ತಡೆಯಾಜ್ಞೆ| ಪ್ರಕಟಿಸಿದ ವರದಿ ಡಿಲಿಟ್ ಮಾಡಲು ಆದೇಶ Read More »

ಸುಳ್ಯ: ವಳಲಂಬೆಯಲ್ಲಿ ಸಾರ್ವಜನಿಕ ಕೈ ಪಂಪ್ ಕಾಣೆ! ಸುದ್ದಿ ಹಂಚಿಕೊಂಡಾತನಿಗೆ ಪಂ.ಸದಸ್ಯನಿಂದ ಧಮ್ಕಿ..?

ಸಮಗ್ರ ನ್ಯೂಸ್: ಸುಳ್ಯ ತಾಲೂಕಿನ ಗುತ್ತಿಗಾರಿನ ಪಂಚಾಯತ್ ವ್ಯಾಪ್ತಿಯಲ್ಲಿರುವ ವಳಲಂಬೆಯಲ್ಲಿ ಹೆದ್ದಾರಿ ಬದಿರುವ ಬೋರ್ ವೆಲ್ ಕೈಪಂಪ್ ಕಾಣೆಯಾಗಿದೆ ಎನ್ನಲಾಗಿದ್ದು, ಈ ಕುರಿತ ವರದಿಯೊಂದನ್ನು ಪಂಚಾಯತ್ ವಾಟ್ಸಪ್ ಗ್ರೂಪ್ ನಲ್ಲಿ ಹಂಚಿಕೊಂಡಾತನಿಗೆ ಕರೆಮಾಡಿ ಪಂಚಾಯತ್ ಸದಸ್ಯ ವೆಂಕಟ್ ವಳಲಂಬೆ ಧಮ್ಕಿ ಹಾಕಿರುವ ಘಟನೆ ನಡೆದಿದ್ದು, ಈ ಕುರಿತ ಆಡಿಯೋ ವೈರಲ್ ಆಗಿದೆ. ಜಾಲ್ಸೂರು – ಸುಬ್ರಹ್ಮಣ್ಯ ಹೆದ್ದಾರಿಯಲ್ಲಿ ಸಿಗುವ ವಳಲಂಬೆ ಎಂಬ ಪ್ರದೇಶದಲ್ಲಿ ಕೆಲದಿನಗಳ ಹಿಂದೆ ಗುತ್ತಿಗಾರು ಗ್ರಾಮ ಪಂಚಾಯತ್ ಸದಸ್ಯ ವೆಂಕಟ್ ವಳಲಂಬೆ ಎಂಬವರು ತನ್ನ

ಸುಳ್ಯ: ವಳಲಂಬೆಯಲ್ಲಿ ಸಾರ್ವಜನಿಕ ಕೈ ಪಂಪ್ ಕಾಣೆ! ಸುದ್ದಿ ಹಂಚಿಕೊಂಡಾತನಿಗೆ ಪಂ.ಸದಸ್ಯನಿಂದ ಧಮ್ಕಿ..? Read More »