ಕರಾವಳಿ

ವಿಟ್ಲ: ಕೋಳಿ ಅಂಕಕ್ಕೆ ಪೊಲೀಸರ ದಾಳಿ

ಸಮಗ್ರ ನ್ಯೂಸ್: ಅಕ್ರಮವಾಗಿ ನಡೆಯುತ್ತಿದ್ದ ಕೋಳಿ ಅಂಕಕ್ಕೆ ವಿಟ್ಲ ಪೊಲೀಸರು ದಾಳಿ ನಡೆಸಿದ ಘಟನೆ ಪೆರುವಾಯಿಯ ಕೊಲ್ಲತಡ್ಕದಲ್ಲಿ ನಡೆದಿದೆ. ಪೆರುವಾಯಿಯಿಂದ ಮಾಣಿಲ ಕಡೆ ಹೋಗುವ ರಸ್ತೆಯ ಕೊಲ್ಲತಡ್ಕ ಎಂಬಲ್ಲಿ ಯಾವುದೇ ಕಾರಣವಿಲ್ಲದೇ ವ್ಯವಸ್ಥಿತ ರೀತಿಯಲ್ಲಿ ಮೂರು ದಿನದ ಕೋಳಿ ಅಂಕ ಏರ್ಪಡಿಸಲಾಗಿತ್ತು. ಶೀಟ್‌ ಹಾಕಿ ಕುಳಿತುಕೊಳ್ಳಲು ಗ್ಯಾಲರಿ ವ್ಯವಸ್ಥೆ ಮಾಡಿ ಕೋಳಿ ಅಂಕ ಏರ್ಪಡಿಸಲಾಗಿದ್ದು, ಕೋಳಿ ಅಂಕದ ಆಮಂತ್ರಣ ಕೂಡ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿತ್ತು. ಲೈಟ್‌ ಆಳವಡಿಸಿ ಹಗಲು-ರಾತ್ರಿ ನಡೆಯಬೇಕಿದ್ದ ಕೋಳಿ ಅಂಕಕ್ಕೆ ಖಚಿತ ಮಾಹಿತಿ ಮೇರೆಗೆ […]

ವಿಟ್ಲ: ಕೋಳಿ ಅಂಕಕ್ಕೆ ಪೊಲೀಸರ ದಾಳಿ Read More »

ಮಣಿಪುರ: ಮಹಿಳೆಯರ ಬೆತ್ತಲೆ ಮೆರವಣಿಗೆ ಪ್ರಕರಣ| ಆರೋಪಿಗಳ ಮನೆಗೆ ಬೆಂಕಿ ಹಚ್ಚಿ ಆಕ್ರೋಶ

ಸಮಗ್ರ ನ್ಯೂಸ್: ಮಣಿಪುರದಲ್ಲಿ ಇಬ್ಬರು ಮಹಿಳೆಯರನ್ನು ಗುಂಪೊಂದು ವಿವಸ್ತ್ರಗೊಳಿಸಿಗಿ ಮೆರವಣಿಗೆ ಮಾಡುತ್ತಿರುವ ವೀಡಿಯೊ ವೈರಲ್ ಆದ ಎರಡು ದಿನಗಳ ನಂತರ, ಪ್ರಮುಖ ಆರೋಪಿ ಹುಯಿರೆಮ್ ಹೆರೋದಾಸ್ ಮೈತೆಯ್ ಅವರ ಮನೆಯನ್ನು ಗುರುವಾರ ದುಷ್ಕರ್ಮಿಗಳು ಸುಟ್ಟು ಹಾಕಿದ್ದಾರೆ. ದೃಶ್ಯಗಳಲ್ಲಿ ಪ್ರತಿಭಟನಾಕಾರರ ಗುಂಪು ಆರೋಪಿಯ ಮನೆಗೆ ಬೆಂಕಿ ಹಚ್ಚುವುದು ಕಂಡು ಬಂದಿದೆ. ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಕಾದಾಡುತ್ತಿರುವ ಸಮುದಾಯವೊಂದರ ಮಹಿಳೆಯರನ್ನು ಇನ್ನೊಂದು ಕಡೆಯಿಂದ ಗುಂಪೊಂದು ಬೆತ್ತಲೆಯಾಗಿ ಮೆರವಣಿಗೆ ಮಾಡುತ್ತಿರುವ ವಿಡಿಯೋ ವೈರಲ್ ಆಗಿದೆ. ಘಟನೆಗೆ ಸಂಬಂಧಿಸಿದಂತೆ 4 ಮಂದಿ ಬಂಧಿಸಲಾಗಿದೆ.

ಮಣಿಪುರ: ಮಹಿಳೆಯರ ಬೆತ್ತಲೆ ಮೆರವಣಿಗೆ ಪ್ರಕರಣ| ಆರೋಪಿಗಳ ಮನೆಗೆ ಬೆಂಕಿ ಹಚ್ಚಿ ಆಕ್ರೋಶ Read More »

ತುಳು ಸಾಹಿತ್ಯ ಅಕಾಡೆಮಿಗೆ ಕಿಶೋರ್ ಶೆಟ್ಟಿ ಆಯ್ಕೆಗೆ ಬೆಂಬಲಿಗರ ಒತ್ತಾಯ

ಸಮಗ್ರ ನ್ಯೂಸ್: ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ನೂತನ ಅಧ್ಯಕ್ಷ ಸ್ಥಾನಕ್ಕೆ ಈಗಾಗಲೇ ಹಲವರ ಹೆಸರು ಚಾಲ್ತಿಯಲ್ಲಿದ್ದು ತುಳುನಾಡ ಜಾನಪದ ಕಲೆ, ಸಂಸ್ಕೃತಿಯನ್ನು ಪ್ರಚುರಪಡಿಸುವಲ್ಲಿ ತಮ್ಮದೇ ಆದ ಕಾರ್ಯ ನಿರ್ವಹಿಸುತ್ತ ಬಂದಿರುವ ಕಿಶೋರ್ ಶೆಟ್ಟಿ ದೆಪ್ಪುಣಿಗುತ್ತು ಅವರನ್ನು ಆಯ್ಕೆ ಮಾಡಬೇಕು ಎಂದು ಬೆಂಬಲಿಗರು ಒತ್ತಾಯಿಸಿದ್ದಾರೆ. ಕಿಶೋರ್ ಶೆಟ್ಟಿ ಅವರು ಕಲೆ, ಸಾಹಿತ್ಯ ಹಾಗೂ ಧಾರ್ಮಿಕ ಚಟುವಟಿಕೆಗಳಲ್ಲಿ ಸಕ್ರಿಯರಾಗಿದ್ದು ದೈವಾರಾಧನೆ ಕ್ಷೇತ್ರದಲ್ಲಿ ಸಾಧನೆ ಮಾಡಿದವರು. ಅವರ ದೈವದ ನುಡಿಗಟ್ಟು ತುಳು ಭಾಷೆ ಮತ್ತು ಸಂಸ್ಕೃತಿಯನ್ನು ಇನ್ನಷ್ಟು ಶ್ರೀಮಂತಗೊಳಿಸಿದ್ದು ಅವರನ್ನು

ತುಳು ಸಾಹಿತ್ಯ ಅಕಾಡೆಮಿಗೆ ಕಿಶೋರ್ ಶೆಟ್ಟಿ ಆಯ್ಕೆಗೆ ಬೆಂಬಲಿಗರ ಒತ್ತಾಯ Read More »

ಸುಳ್ಯದ ಐವರ್ನಾಡಿನಲ್ಲಿ ಕ್ಷುಲ್ಲಕ ವಿಚಾರಕ್ಕೆ ತಲವಾರುನಲ್ಲಿ ಹಲ್ಲೆಗೆ ಯತ್ನ; ಪೊಲೀಸ್ ದೂರು

ಸಮಗ್ರ ನ್ಯೂಸ್: ಕ್ಷುಲ್ಲಕ ಕಾರಣಕ್ಕೆ ತಲವಾರು ಹಿಡಿದು ಹಲ್ಲೆಗೆ ಯತ್ನಿಸಿದ ಘಟನೆ ಸುಳ್ಯ ತಾಲೂಕಿನ ಐವರ್ನಾಡು ಗ್ರಾಮದಲ್ಲಿ ನಡೆದಿದೆ. ಇಲ್ಲಿನ ಶ್ರೀ ಪಂಚಲಿಂಗೇಶ್ವರ ಪೆಟ್ರೋಲ್ ಪಂಪ್ ಬಳಿ ಇರುವ ನಿಸರ್ಗ ಕಾಂಪ್ಲೆಕ್ಸ್ ನಲ್ಲಿ ವಾಸ್ತವ್ಯವಿರುವ ಪ್ರವೀಣ ಎಂಬವರು ಇನ್ನೊರ್ವ ನಿವಾಸಿ ಧರ್ಮಲಿಂಗಂ ಎಂಬವರೊಂದಿಗೆ ಕ್ಷುಲ್ಲಕ ವಿಚಾರಕ್ಕೆ ಜಗಳವಾಡಿ ತಮ್ಮ ವಾಹನದಿಂದ ತಲವಾರು ತೆಗೆದು ಹಲ್ಲೆ ನಡೆಸಲು ಮುಂದಾಗಿದ್ದಾಗಿ‌ ವರದಿಯಾಗಿದೆ. ಘಟನೆ ಸಂದರ್ಭದಲ್ಲಿ ಅಲ್ಲಿಯ ಸ್ಥಳೀಯರು ತಡೆದಿದ್ದಾರೆ. ಈ ಬಗ್ಗೆ ಧರ್ಮಲಿಂಗಂ ರವರು ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ದೂರು

ಸುಳ್ಯದ ಐವರ್ನಾಡಿನಲ್ಲಿ ಕ್ಷುಲ್ಲಕ ವಿಚಾರಕ್ಕೆ ತಲವಾರುನಲ್ಲಿ ಹಲ್ಲೆಗೆ ಯತ್ನ; ಪೊಲೀಸ್ ದೂರು Read More »

ಬರ್ತಾ ಇದೆ ಸೌಜನ್ಯ ಮರ್ಡರ್ ಮಿಸ್ಟ್ರಿ| ‘ಸ್ಟೋರಿ ಆಫ್ ಸೌಜನ್ಯ’ ಹೆಸರಲ್ಲಿ ಟೈಟಲ್ ನೋಂದಣಿ

ಸಮಗ್ರ ನ್ಯೂಸ್: ಇತ್ತೀಚೆಗಷ್ಟೇ ಸೌಜನ್ಯಾ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿ ಸಂತೋಷ್ ರಾವ್​ನನ್ನು ನ್ಯಾಯಾಲಯ ಖುಲಾಸೆಗೊಳಿಸಿತ್ತು. ಆದರೆ ಈ ಪ್ರಕರಣಕ್ಕೆ ತಾರ್ಕಿಕ ಅಂತ್ಯ ಸಿಗುವ ಮುನ್ನವೇ ಸೌಜನ್ಯ ಹೆಸರಲ್ಲಿ ಜಿ.ಕೆ ವೆಂಚರ್ಸ್​ ಹೆಸರಿನ ಸಂಸ್ಥೆಯೊಂದು ಸಿನಿಮಾ ಮಾಡಲು ಮುಂದಾಗಿದ್ದು ಚಲನಚಿತ್ರ ಮಂಡಳಿಯಲ್ಲಿ ಶೀರ್ಷಿಕೆಯನ್ನು ನೋಂದಣಿ ಕೂಡ ಮಾಡಲಾಗಿದೆ. ಈ ಸಿನಿಮಾದ ಹೆಸರನ್ನು ‘ಸ್ಟೋರಿ ಆಫ್ ಸೌಜನ್ಯ’ ಎಂದು ಇಡಲಾಗಿದೆ. ಈ ಸಿನಿಮಾದ ನಿರ್ದೇಶನವನ್ನು ವಿ. ಲವ ಎನ್ನುವವವರು ಮಾಡಲಿದ್ದಾರೆ. ಇದೊಂದು ಸಾಮಾಜಿಕ ಚಿತ್ರವಾಗಿರಲಿದೆ ಎನ್ನಲಾಗುತ್ತಿದೆ.

ಬರ್ತಾ ಇದೆ ಸೌಜನ್ಯ ಮರ್ಡರ್ ಮಿಸ್ಟ್ರಿ| ‘ಸ್ಟೋರಿ ಆಫ್ ಸೌಜನ್ಯ’ ಹೆಸರಲ್ಲಿ ಟೈಟಲ್ ನೋಂದಣಿ Read More »

ಮಂಗಳೂರು: ಭಜರಂಗದಳದ ಮೂವರು ಕಾರ್ಯಕರ್ತರ ಗಡಿಪಾರು!? ಡಿಸಿಪಿ ಎದುರು ಹಾಜರಾಗಲು ಬುಲಾವ್

ಸಮಗ್ರ ನ್ಯೂಸ್: ಮಂಗಳೂರು ನಗರದ ಸುಲ್ತಾನ್ ಜ್ಯುವೆಲರಿ ಹಾಗೂ ಹೋಳಿ ಆಚರಣೆ ವೇಳೆ ನಡೆದ ನೈತಿಕ ಪೊಲೀಸ್ ಗಿರಿಯಲ್ಲಿ ಭಾಗಿಯಾಗಿದ್ದ ಮೂವರನ್ನು ಗಡಿಪಾರು ಮಾಡಲು ದಕ್ಷಿಣ ಕನ್ನಡ ಜಿಲ್ಲೆ ಪೊಲೀಸ್ ಇಲಾಖೆ ನಿರ್ಧರಿಸಿದ್ದು, ಗಡಿಪಾರು ಪ್ರಕ್ರಿಯೆ ಆರಂಭಿಸಿದೆ ಎಂದು ತಿಳಿದುಬಂದಿದೆ. ಇಂದು (ಜು.21) ಮೂವರು ಬಜರಂಗದಳ ಕಾರ್ಯಕರ್ತರಿಗೆ ಕಾನೂನು ಸುವ್ಯವಸ್ಥೆ ಖಾತ್ರಿ ಪಡಿಸಲು ಡಿಸಿಪಿ ಎದುರು ಹಾಜರಾಗಲು ಸೂಚನೆ ನೀಡಲಾಗಿದೆ. ಬಳಿಕ ಅಧಿಕೃತವಾಗಿ ಒಂದು ವರ್ಷ ಕಾಲ ಗಡಿಪಾರು ಮಾಡುವ ಸಾಧ್ಯತೆ ಇದೆ. ಹೀಗಾಗಿ ಸ್ಥಳೀಯ ಠಾಣೆಗಳ

ಮಂಗಳೂರು: ಭಜರಂಗದಳದ ಮೂವರು ಕಾರ್ಯಕರ್ತರ ಗಡಿಪಾರು!? ಡಿಸಿಪಿ ಎದುರು ಹಾಜರಾಗಲು ಬುಲಾವ್ Read More »

ಸುಳ್ಯ: ಬೇಲಿ ನಾಶ, ಜಾತಿನಿಂದನೆ| ಪೆರುವಾಜೆ ಗ್ರಾ.ಪಂ. ಸದಸ್ಯ ಸಚಿನ್ ರಾಜ್ ವಿರುದ್ದ ಪ್ರಕರಣ ದಾಖಲು

ಸಮಗ್ರ ನ್ಯೂಸ್: ಸುಳ್ಯ ತಾಲೂಕಿನ ಪೆರುವಾಜೆ ಗ್ರಾಮದ ಪೆಲತಡ್ಕ ಎಂಬಲ್ಲಿ ಬೇಲಿ ನಾಶ ಮಾಡಿರುವುದಾಗಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು ಜಾತಿನಿಂದನೆ ಮಾಡಿರುವುದಾಗಿ ಪೆರುವಾಜೆ ಗ್ರಾಮ ಪಂಚಾಯತ್ ಸದಸ್ಯರ ವಿರುದ್ಧ ವ್ಯಕ್ತಿಯೋರ್ವರು ಜು.18 ರಂದು ದೂರು ನೀಡಿದ್ದು ಈ ಬಗ್ಗೆ ಬೆಳ್ಳಾರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೆರುವಾಜೆ ಗ್ರಾಮದ ಪೆಲತಡ್ಕ ನಿವಾಸಿ ದಾಮೋದರ ನಾಯ್ಕ ಎಂಬವರ ಮನೆ ಸಮೀಪ ಸಾರ್ವಜನಿಕ ರಸ್ತೆ ಕಾಮಗಾರಿ ನಡೆಯುತ್ತಿದ್ದು , ಮನೆಯ ಜಮೀನಿನ ಬೇಲಿಯು ಅರ್ಧದಷ್ಟು ನಾಶವಾಗಿದ್ದು ಈ ಬಗ್ಗೆ ಕಾಮಗಾರಿ

ಸುಳ್ಯ: ಬೇಲಿ ನಾಶ, ಜಾತಿನಿಂದನೆ| ಪೆರುವಾಜೆ ಗ್ರಾ.ಪಂ. ಸದಸ್ಯ ಸಚಿನ್ ರಾಜ್ ವಿರುದ್ದ ಪ್ರಕರಣ ದಾಖಲು Read More »

ಮಂಗಳೂರು: ಕ್ಷುಲ್ಲಕ ಕಾರಣಕ್ಕೆ ಸಹಪಾಠಿಗೆ ಚೂರಿ ಎಸೆದು‌ ಹಲ್ಲೆ

ಸಮಗ್ರ ನ್ಯೂಸ್: ಮಂಗಳೂರು ನಗರದ ಮೊಂಟೆಪದವು ಕರ್ನಾಟಕ ಪಬ್ಲಿಕ್ ಸ್ಕೂಲ್ ನ ಇಬ್ಬರು ವಿದ್ಯಾರ್ಥಿಗಳ ಮಧ್ಯೆ ಬಟ್ಟೆಗೆ ಸಾಂಬಾರು ಚೆಲ್ಲಿದ ವಿಚಾರಕ್ಕೆ ಜಗಳವಾಗಿ ಒಬ್ಬ ವಿದ್ಯಾರ್ಥಿ ತನ್ನ ಸಹಪಾಠಿಗೆ ಚೂರಿ ಎಸೆದು ಗಾಯಗೊಳಿಸಿದ ಘಟನೆ ಬುಧವಾರ ನಡೆದಿದೆ. ಮಧ್ಯಾಹ್ನ ಊಟದ ಹೊತ್ತಿನಲ್ಲಿ ಒಬ್ಬ ವಿದ್ಯಾರ್ಥಿಯ ತಟ್ಟೆಯಿಂದ ಸಾಂಬಾರು ಚೆಲ್ಲಿದ್ದಕ್ಕೆ ಪ್ರತಿಯಾಗಿ ಬಟ್ಟೆಯಲ್ಲಿ ಕಲೆ ಆಯಿತೆಂದು ಕೆರಳಿದ ವಿದ್ಯಾರ್ಥಿ ಸಾಂಬಾರು ಚೆಲ್ಲಿದ ವಿದ್ಯಾರ್ಥಿಗೆ ಕಪಾಳ ಮೋಕ್ಷ ಮಾಡಿ ಅಲ್ಲಿಂದ ಮುಂದೆ ಹೋಗುತ್ತಿರುವಾಗ ಪೆಟ್ಟು ತಿಂದ ವಿದ್ಯಾರ್ಥಿ ಬ್ಯಾಗ್ ನಿಂದ

ಮಂಗಳೂರು: ಕ್ಷುಲ್ಲಕ ಕಾರಣಕ್ಕೆ ಸಹಪಾಠಿಗೆ ಚೂರಿ ಎಸೆದು‌ ಹಲ್ಲೆ Read More »

ಸೌಜನ್ಯ ಕೊಲೆ ಪ್ರಕರಣ| ಮತ್ತೆ ನ್ಯಾಯಕ್ಕಾಗಿ ಹೋರಾಟ| ಜಾಲತಾಣಗಳಲ್ಲಿ ಭಾರೀ ಸಂಚಲನ ಸೃಷ್ಟಿ!!

ಸಮಗ್ರ ನ್ಯೂಸ್: ಸೌಜನ್ಯ ಪ್ರಕರಣದ ತನಿಖೆ ಎಲ್ಲವೂ ಮುಗಿಯಿತು, ತೀರ್ಪು ಬಂತು ಅನ್ನೋವಷ್ಟರಲ್ಲೇ, ಈ ಪ್ರಕರಣ ಮುಕ್ತಾಯವಾಗಿಲ್ಲ, ಈಗಷ್ಟೇ ಆರಂಭಗೊಂಡಿದೆ ಎಂಬಂತೆ ಮತ್ತೆ ಹೋರಾಟ ಎದ್ದು ನಿಂತಿದೆ. ಈ ಬಾರಿ ಹೋರಾಟ ದಕ್ಷಿಣ ಕನ್ನಡ ಜಿಲ್ಲೆಗೆ ಮಾತ್ರವೇ ಸೀಮಿತವಾಗದೇ ಇಡೀ ರಾಜ್ಯದಲ್ಲೇ ಆರಂಭವಾಗುವ ಮುನ್ಸೂಚನೆ ಲಭ್ಯವಾಗಿದೆ. ಇದು ಕೇವಲ ಒಬ್ಬಳು ಸೌಜನ್ಯಳಿಗಾಗಿ ನಡೆಯುತ್ತಿರುವ ಹೋರಾಟವಲ್ಲ, ಮುಂದಿನ ಪೀಳಿಗೆಯ ನೂರಾಟ ಸೌಜನ್ಯರಿಗಾಗಿ ನಡೆಯುತ್ತಿರುವ ಹೋರಾಟವಾಗಿದೆ. ಮೈಸೂರಿನ ಒಡನಾಡಿ ಸಂಸ್ಥೆ ಕೂಡ ಸೌಜನ್ಯ ಹೋರಾಟಕ್ಕೆ ಧುಮುಕಿದ್ದು, ಈಗಾಗಲೇ ಹೋರಾಟ ಆರಂಭಿಸಿದೆ.

ಸೌಜನ್ಯ ಕೊಲೆ ಪ್ರಕರಣ| ಮತ್ತೆ ನ್ಯಾಯಕ್ಕಾಗಿ ಹೋರಾಟ| ಜಾಲತಾಣಗಳಲ್ಲಿ ಭಾರೀ ಸಂಚಲನ ಸೃಷ್ಟಿ!! Read More »

ಮಂಗಳೂರು: ನೀರು ತುಂಬಿದ್ದ ಬಕೆಟ್ ಗೆ ಬಿದ್ದು 8 ತಿಂಗಳ ಮಗು ಸಾವು

ಸಮಗ್ರ ನ್ಯೂಸ್: ನೀರು ತುಂಬಿದ್ದ ಬಕೆಟ್ ಗೆ ಬಿದ್ದು ಒಂದು ವರ್ಷ 8 ತಿಂಗಳ ಮಗುವೊಂದು ಮೃತಪಟ್ಟ ಘಟನೆ ಕಾವೂರಿನಲ್ಲಿ ನಡೆದಿದೆ. ಕಾವೂರು ಮಸೀದಿ ಬಳಿ ಬಾಡಿಗೆ ಮನೆಯಲ್ಲಿ ವಾಸವಿದ್ದ ಫಿರೋಝ್ ಅನ್ಸಾರಿ ಎಂಬವರ ಪುತ್ರಿ ಆಯಿಶ ಮೃತ ಮಗು ಎಂದು ತಿಳಿದು ಬಂದಿದೆ. ಜಾರ್ಖಂಡ್ ಮೂಲದವರಾದ ಫಿರೋಝ್ ಅನ್ಸಾರಿ ದಂಪತಿ ಕಾವೂರು ಮಸೀದಿಯ ಬಳಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದಾರೆ. ಬುಧವಾರ ಸಂಜೆ ಮಗು ಆಯಿಶ ಮನೆಯಲ್ಲಿ ಆಟವಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ನೀರು ತುಂಬಿದ್ದ ಬಕೆಟ್ ಗೆ

ಮಂಗಳೂರು: ನೀರು ತುಂಬಿದ್ದ ಬಕೆಟ್ ಗೆ ಬಿದ್ದು 8 ತಿಂಗಳ ಮಗು ಸಾವು Read More »