ಕರಾವಳಿ

ಮದೆನಾಡಿನಲ್ಲಿ ಭೂ ಕುಸಿತ| ಮಾಣಿ – ಮೈಸೂರು ರಾ.ಹೆದ್ದಾರಿ ಸಂಚಾರ ಸಂಪೂರ್ಣ ಬಂದ್

ಸಮಗ್ರ ನ್ಯೂಸ್: ಮಾಣಿ – ಮೈಸೂರು ರಾ.ಹೆದ್ದಾರಿಯ ಮದೆನಾಡು ಸಮೀಪ ಕರ್ತೊಜಿಯಲ್ಲಿ ಮರಗಳ ಸಹಿತ ಭೂ ಕುಸಿತ ಉಂಟಾದ ಪರಿಣಾಮ ಹೆದ್ದಾರಿ ಸಂಚಾರ ಸಂಪೂರ್ಣ ಬಂದ್ ಆಗಿದೆ. ಇದರಿಂದಾಗಿ ಹೆದ್ದಾರಿಯಲ್ಲಿ ವಾಹನಗಳು ಸಾಲುಗಟ್ಟಿ ನಿಂತಿವೆ. ಸೋಮವಾರ ಸಂಜೆ ವೇಳೆಗೆ ದೊಡ್ಡ ಮರವೊಂದು ರಸ್ತೆಗೆ ಮಣ್ಣು ಕುಸಿದು ಬಿದ್ದಿದೆ. ಇದೀಗ ರಸ್ತೆಯ ಒಂದು ಬದಿಯ ಮಣ್ಣನ್ನು ತೆರವುಗೊಳಿಸಲು ಅಧಿಕಾರಿಗಳು ಹರಸಾಹಸ ಮಾಡುತ್ತಿದ್ದಾರೆ. ಜೆಸಿಬಿ -ಹಿಟಾಚಿ ಬಳಸಿ ಮಣ್ಣು ತೆರವಿನ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಸಂಪಾಜೆಯ ಗಡಿಕಲ್ಲು ತನಕ ವಾಹನಗಳು ಸರತಿ

ಮದೆನಾಡಿನಲ್ಲಿ ಭೂ ಕುಸಿತ| ಮಾಣಿ – ಮೈಸೂರು ರಾ.ಹೆದ್ದಾರಿ ಸಂಚಾರ ಸಂಪೂರ್ಣ ಬಂದ್ Read More »

ಸುಳ್ಯದ ಕುಂಕುಂ ಫ್ಯಾಷನ್ ವಸ್ತ್ರ ಮಳಿಗೆಯಲ್ಲಿ ಮಾನ್ಸೂನ್ ಸ್ಪೆಷಲ್ ಆಫರ್| ಇನ್ನು ಕೆಲವೇ ದಿನಗಳು ಮಾತ್ರ

ಸಮಗ್ರ ನ್ಯೂಸ್: ಸುಳ್ಯದ ಹೆಸರಾಂತ ವಸ್ತ್ರ ಮಳಿಗೆ ಸುಳ್ಯದ ಕುಂಕುಂ ಫ್ಯಾಷನ್ ವಸ್ತ್ರ ಮಳಿಗೆಯಲ್ಲಿ ಮಾನ್ಸೂನ್ ವಿಶೇಷ ಆಫರ್ ಆಕರ್ಷಕವಾಗಿ ನಡೆಯುತ್ತಿದ್ದು, ಈ ತಿಂಗಳ ಕೊನೆಯವರೆಗೆ ನಡೆಯಲಿದೆ. ಉತ್ತಮ ವಸ್ತ್ರಗಳ ಅಮೋಘ ಸಂಗ್ರಹವೇ ಇಲ್ಲಿದ್ದು, ಗ್ರಾಹಕರು ಇದರ ಪ್ರಯೋಜನ ಪಡೆಯಬಹುದು. ಮದುವೆ ಹಾಗೂ ಪೂಜಾ ಕಾರ್ಯಕ್ರಮಗಳ ವಸ್ತ್ರಗಳ ಬೃಹತ್ ಸಂಗ್ರಹವೇ ಲಭ್ಯವಿದೆ. ಸಾರಿ ರೂ 75ರಿಂದ ಆರಂಭ, ನೈಟಿ ರೂ.130, ಲೆಗ್ಗಿನ್ಸ್ ರೂ.80, ಪ್ಲಾಝ ಪ್ಯಾಂಟ್ ರೂ.80, ಲೇಡಿಸ್ ಟಾಪ್ ರೂ.120, ರೆಡಿಮೇಡ್ ಬ್ಲೌಸ್ ರೂ.100, ದುಪ್ಪಟ

ಸುಳ್ಯದ ಕುಂಕುಂ ಫ್ಯಾಷನ್ ವಸ್ತ್ರ ಮಳಿಗೆಯಲ್ಲಿ ಮಾನ್ಸೂನ್ ಸ್ಪೆಷಲ್ ಆಫರ್| ಇನ್ನು ಕೆಲವೇ ದಿನಗಳು ಮಾತ್ರ Read More »

ಭಾರೀ ಮಳೆ ಹಿನ್ನಲೆ| ದ.ಕ ಜಿಲ್ಲೆಯಾದ್ಯಂತ ಶಾಲೆ, ಪಿಯು ಕಾಲೇಜುಗಳಿಗೆ ಜು.25ರಂದು ರಜೆ

ಸಮಗ್ರ ನ್ಯೂಸ್: ದ.ಕ. ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರಕಾರಿ, ಖಾಸಗಿ, ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲೆ, ಕಾಲೇಜುಗಳಿಗೆ ಜು.25ರಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ರಜೆ ಘೋಷಿಸಿದ್ದಾರೆ.

ಭಾರೀ ಮಳೆ ಹಿನ್ನಲೆ| ದ.ಕ ಜಿಲ್ಲೆಯಾದ್ಯಂತ ಶಾಲೆ, ಪಿಯು ಕಾಲೇಜುಗಳಿಗೆ ಜು.25ರಂದು ರಜೆ Read More »

ಬಿಸ್ಲೆ ಘಾಟ್ ನಲ್ಲಿ ಭೂಕುಸಿತ| ಬಿಸಿಲೆ- ಸುಬ್ರಹ್ಮಣ್ಯ ಸಂಚಾರ ಸ್ಥಗಿತ

ಸಮಗ್ರ ನ್ಯೂಸ್: ಬಿಸಿಲೆ ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿ 87 ಬಿಸ್ಲೆ ಸಮೀಪದ ಹಡ್ಲುಗದ್ದೆ ಸಮೀಪ ಭೂಕುಸಿತದಿಂದ ಬಂದ್ ಆಗಿದ್ದು ಇದರಿಂದ ಬಿಸಿಲೆ ಭಾಗದಿಂದ ಸುಬ್ರಹ್ಮಣ್ಯ ನಡುವಿನ ರಸ್ತೆ ಸಂಪೂರ್ಣವಾಗಿ ಸಂಪರ್ಕ ಕಡಿತವಾಗಿದೆ. ಪ್ರಯಾಣಿಕರು ಶಿರಾಡಿ ಘಾಟ್ ಮಾರ್ಗವಾಗಿ ಸುಬ್ರಹ್ಮಣ್ಯಕ್ಕೆ ತೆರಳಬೇಕಾಗಿದೆ. ಈಗಾಗಲೇ ಈ ಮಾರ್ಗದಲ್ಲಿ ತೆರಳಿದ ಪ್ರಯಾಣಿಕರು ಸಂಕಷ್ಟ ಅನುಭವಿಸುವಂತಾಗಿದೆ. ತೆರವು‌ ಕಾರ್ಯಾಚರಣೆ ನಡೆಯುತ್ತಿರುವುದಾಗಿ ವರದಿಗಳು ತಿಳಿಸಿವೆ.

ಬಿಸ್ಲೆ ಘಾಟ್ ನಲ್ಲಿ ಭೂಕುಸಿತ| ಬಿಸಿಲೆ- ಸುಬ್ರಹ್ಮಣ್ಯ ಸಂಚಾರ ಸ್ಥಗಿತ Read More »

ಸುಳ್ಯ: ಭಾರೀ ಮಳೆ ಹಿನ್ನೆಲೆ| ನಾಳೆ (ಜು.25) ತಾಲೂಕಿನ ಎಲ್ಲಾ ಶಾಲೆ ಹಾಗೂ ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಸಮಗ್ರ ನ್ಯೂಸ್:: ಸುಳ್ಯ ತಾಲೂಕಿನಲ್ಲಿ ಭಾರೀ ಮಳೆಯಾಗುತ್ತಿದ್ದು, ಇದೇ ಹವಾಮಾನ ಪರಿಸ್ಥಿತಿ ಮುಂದುವರಿಯುವ ಸೂಚನೆ ಹಿನ್ನಲೆಯಲ್ಲಿ ಆರೆಂಜ್ ಅಲರ್ಟ್ ಘೋಷಣೆಯಾಗಿದೆ. ಮಳೆಯ ತೀವ್ರತೆ ಹೆಚ್ಚಿರುವ ಹಿನ್ನಲೆಯಲ್ಲಿ ಸುಳ್ಯ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ ಮತ್ತು ಪ್ರೌಢಶಾಲೆ, ಪದವಿಪೂರ್ವ ಕಾಲೇಜು, ಸರಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ಜು. 25ರಂದು ರಜೆ ಘೋಷಿಸಿ ಸುಳ್ಯ ತಾಲೂಕು ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ತಹಶೀಲ್ದಾರ್ ಆದೇಶ ನೀಡಿದ್ದಾರೆ.

ಸುಳ್ಯ: ಭಾರೀ ಮಳೆ ಹಿನ್ನೆಲೆ| ನಾಳೆ (ಜು.25) ತಾಲೂಕಿನ ಎಲ್ಲಾ ಶಾಲೆ ಹಾಗೂ ಪಿಯು ಕಾಲೇಜುಗಳಿಗೆ ರಜೆ ಘೋಷಣೆ Read More »

ಕುಕ್ಕೆಸುಬ್ರಹ್ಮಣ್ಯ: ನೆರೆನೀರು ದಾಟಿ ಪರೀಕ್ಷೆ ಬರೆದ ಪದವಿ ವಿದ್ಯಾರ್ಥಿಗಳು

ಸಮಗ್ರ ನ್ಯೂಸ್: ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಮುಂದುವರಿದಿದ್ದು, ಸುಬ್ರಹ್ಮಣ್ಯ ಸಮೀಪದ ಕುಮಾರಧಾರ ಬಳಿ ಹೆದ್ದಾರಿ ಜಲಾವೃತಗೊಂಡಿದೆ. ಆದರೆ ಮಂಗಳೂರು ವಿ.ವಿ ಪದವಿ ವಿದ್ಯಾರ್ಥಿಗಳಿಗೆ ಸೆಮಿಸ್ಟರ್ ಪರೀಕ್ಷೆ ನಡೆಯುತ್ತಿದ್ದು, ಅಪಾಯಕಾರಿ ಸ್ಥಿತಿಯಲ್ಲಿ ಉಕ್ಕಿ ಹರಿದ ಪ್ರವಾಹ ನೀರಿನಲ್ಲಿ ಸಂಚರಿಸಿ ಪರೀಕ್ಷೆಗೆ ಬರೆದ ಘಟನೆ ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಡೆದಿದೆ. ಮಳೆ ಇದ್ದರೂ ಜಿಲ್ಲೆಯಲ್ಲಿ ಪದವಿ ವಿದ್ಯಾರ್ಥಿಗಳಿಗೆ ರಜೆ ಘೋಷಣೆ ಮಾಡಿರಲಿಲ್ಲ. ಮಾತ್ರವಲ್ಲದೆ ಪದವಿ ವಿದ್ಯಾರ್ಥಿಗಳಿಗೆ ಸೆಮಿಸ್ಟರ್ ಪರೀಕ್ಷೆ ನಡೆಯುತ್ತಿದೆ. ಪಂಜ ಭಾಗದಿಂದ ಸುಬ್ರಹ್ಮಣ್ಯ ಕೆಎಸ್ಎಸ್ ಕಾಲೇಜಿಗೆ ಪರೀಕ್ಷೆ ಹಾಜರಾಗಲು

ಕುಕ್ಕೆಸುಬ್ರಹ್ಮಣ್ಯ: ನೆರೆನೀರು ದಾಟಿ ಪರೀಕ್ಷೆ ಬರೆದ ಪದವಿ ವಿದ್ಯಾರ್ಥಿಗಳು Read More »

ಕರಾವಳಿಯಲ್ಲಿ ಕುಂಭದ್ರೋಣ ಮಳೆ| ಹವಾಮಾನ ಇಲಾಖೆಯಿಂದ ರೆಡ್ ಅಲರ್ಟ್ ಘೋಷಣೆ

ಸಮಗ್ರ ವಾರ್ತೆ: ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಯಲ್ಲಿ‌ ಭಾರೀ ಮಳೆಯಾಗುತ್ತಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ. ಕರಾವಳಿಯಲ್ಲಿ 204.4 ಮಿ.ಮೀ. ಗಿಂತಲೂ ಅಧಿಕ ಭಾರೀ ಮಳೆಯಾಗುವ ಹಿನ್ನೆಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಜಲಾವೃತಗೊಳ್ಳುವ ಪ್ರದೇಶಗಳಲ್ಲಿ ಮುನ್ನೆಚ್ಚರಿಕೆ ವಹಿಸಲು ಸೂಚಿಸಲಾಗಿದ್ದು, ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆ ಪ್ರಕಟನೆ ತಿಳಿಸಿದೆ.

ಕರಾವಳಿಯಲ್ಲಿ ಕುಂಭದ್ರೋಣ ಮಳೆ| ಹವಾಮಾನ ಇಲಾಖೆಯಿಂದ ರೆಡ್ ಅಲರ್ಟ್ ಘೋಷಣೆ Read More »

ಕಾರ್ಕಳ:ಬಸ್ಸು, ಟಿಪ್ಪರ್ ನಡುವೆ ಅಪಘಾತ|ಬಸ್ಸು ಚಾಲಕ ಗಂಭೀರ

ಸಮಗ್ರ ನ್ಯೂಸ್: ಕಾರ್ಕಳದ ಬೈಲೂರು ಸಮೀಪದ ಜಾರ್ಕಳ ಬಸ್ರಿಶಾಲೆಯ ರಾಜ್ಯ ಹೆದ್ದಾರಿ ಯಲ್ಲಿ ಬಸ್ಸು ಹಾಗೂ ಟಿಪ್ಪರ್ ನಡುವೆ ಅಪಘಾತ ಸಂಭವಿಸಿದ್ದು, ಬಸ್ಸು ಚಾಲಕ ಗಂಭೀರ ಗಾಯಗೊಂಡ ಘಟನೆ ಸೋಮವಾರ ಸಂಭವಿಸಿದೆ. ಉಡುಪಿ ಯಿಂದ ಕಾರ್ಕಳ ಕಡೆ ಬರುತ್ತಿದ್ದ ಖಾಸಗಿ ಬಸ್ಸೊಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ( ಕೆ ಎಸ್ ಆರ್ ಟಿ ಸಿ) ಬಸ್ಸನ್ನು ಹಿಂತಿಕುವ ಭರದಲ್ಲಿ ಅತೀ ವೇಗ ಹಾಗೂ ನಿರ್ಲಕ್ಷ್ಯ ರೀತಿಯಲ್ಲಿ ಚಲಾಯಿಸಿ ಬಂದು ಬಸ್ರಿಶಾಲಾ ತಿರುವಿನಲ್ಲಿ ಟಿಪ್ಪರ್ ಗೆ

ಕಾರ್ಕಳ:ಬಸ್ಸು, ಟಿಪ್ಪರ್ ನಡುವೆ ಅಪಘಾತ|ಬಸ್ಸು ಚಾಲಕ ಗಂಭೀರ Read More »

ಭಾರಿ ಮಳೆ ಹಿನ್ನಲೆ| ಕಡಬ ತಾಲೂಕಿನ ಎಲ್ಲಾ ಶಾಲೆಗಳಿಗೆ ರಜೆ

ಸಮಗ್ರ ನ್ಯೂಸ್: ಕಡಬ ತಾಲ್ಲೂಕಿನಲ್ಲಿ ಇಂದು ಭಾರಿ ಮಳೆಯಾಗುತ್ತಿರುವುದರಿಂದ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ ಪ್ರಾಥಮಿಕ ಶಾಲೆಗಳಿಗೆ ಮತ್ತು ಪ್ರೌಢ ಶಾಲೆಗಳಿಗೆ ಮಾತ್ರ ಮುನ್ನೆಚ್ಚರಿಕಾ ಕ್ರಮವಾಗಿ ರಜೆ ಘೋಷಿಸಲಾಗಿದೆ.

ಭಾರಿ ಮಳೆ ಹಿನ್ನಲೆ| ಕಡಬ ತಾಲೂಕಿನ ಎಲ್ಲಾ ಶಾಲೆಗಳಿಗೆ ರಜೆ Read More »

ಸುಳ್ಯ: ಭಾರೀ ಮಳೆ ಹಿನ್ನೆಲೆ | ಈ ಶಾಲೆಗಳಿಗೆ ರಜೆ ಘೋಷಣೆ

ಸಮಗ್ರ ನ್ಯೂಸ್: ಭಾರೀ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಸುಳ್ಯ ತಾಲೂಕಿನ ಹರಿಹರ ಕ್ಲಸ್ಟರ್ ನ ಎಲ್ಲಾ ಶಾಲೆಗಳಿಗೆ ಹಾಗೂ ಸುಬ್ರಹ್ಮಣ್ಯ ಕ್ಲಸ್ಟರ್ ನ ಆಯ್ದ ಶಾಲೆಗಳಿಗೆ ರಜೆ ಘೋಷಣೆ ಮಾಡಿ ಕ್ಷೇತ್ರ ಶಿಕ್ಷಣಾಧಿಕಾರಿಗಳು ಆದೇಶ ಮಾಡಿದ್ದಾರೆ. ಸುಬ್ರಹ್ಮಣ್ಯ ಕ್ಲಸ್ಟರ್ ಗೊಳಪಡುವ – ‌ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಸುಬ್ರಹ್ಮಣ್ಯ,ಎಸ್ ಎಸ್ ಪಿ ಯು ಸುಬ್ರಹ್ಮಣ್ಯ, ಕುಮಾರಸ್ವಾಮಿ ವಿದ್ಯಾಲಯ ಸುಬ್ರಹ್ಮಣ್ಯ, ವಾಲ್ಮೀಕಿ ಆಶ್ರಮ ಶಾಲೆ ಸುಬ್ರಹ್ಮಣ್ಯ, ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ದೇವರಹಳ್ಳಿ, ಸರಕಾರಿ ಕಿರಿಯ ಪ್ರಾಥಮಿಕ ಶಾಲೆ

ಸುಳ್ಯ: ಭಾರೀ ಮಳೆ ಹಿನ್ನೆಲೆ | ಈ ಶಾಲೆಗಳಿಗೆ ರಜೆ ಘೋಷಣೆ Read More »