ಕರಾವಳಿ

ಜುಲೈ 19 ರಂದು ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಬೆಳ್ಳಿ ಹಬ್ಬ ಆಚರಣೆ| ಪದಾಧಿಕಾರಿಗಳಿಂದ ಸುದ್ದಿಗೋಷ್ಠಿ

ಸಮಗ್ರ ನ್ಯೂಸ್:‌ ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಬೆಳ್ಳಿಹಬ್ಬ ಆಚರಣೆ ಜುಲೈ19 ರಂದು ಸುಳ್ಯ ಕೇರ್ಪಳದ ಭಂಟರ ಭವನದಲ್ಲಿ ನಡೆಯಲಿದೆ. ಉದ್ಘಾಟನಾ ಸಮಾರಂಭ, ಮಾಧ್ಯಮ ವಿಚಾರ ಸಂಕಿರಣ, ಪತ್ರಕರ್ತರ ಸಮ್ಮಿಲನ, ಸಮಾರೋಪ ಸಮಾರಂಭ ಹಾಗೂ ಸನ್ಮಾನ, ಸಾಂಸ್ಕೃತಿಕ ಸಂಭ್ರಮ‌ ನಡೆಯಲಿದೆ ಎಂದು ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ದಯಾನಂದ‌ ಕೊರತ್ತೋಡಿ ತಿಳಿಸಿದ್ದಾರೆ‌. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕಾರ್ಯಕ್ರಮವನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಶಾಸಕರಾದ ಎ.ಎಸ್.ಪೊನ್ನಣ್ಣ ಉದ್ಘಾಟಿಸುವರು. ಕನ್ನಡ ಪ್ರಭ ಹಾಗೂ […]

ಜುಲೈ 19 ರಂದು ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಬೆಳ್ಳಿ ಹಬ್ಬ ಆಚರಣೆ| ಪದಾಧಿಕಾರಿಗಳಿಂದ ಸುದ್ದಿಗೋಷ್ಠಿ Read More »

ಸುಳ್ಯ: ಪದೋನ್ನತಿಗೊಂಡು ವರ್ಗಾವಣೆಯಾದ ಸಿಡಿಪಿಒ ರಶ್ಮಿಗೆ ಬೀಳ್ಕೊಡುಗೆ

ಸಮಗ್ರ ನ್ಯೂಸ್: ಸುಳ್ಯದಲ್ಲಿ ಸಿಡಿಪಿಒ ಆಗಿ ಕಾರ್ಯನಿರ್ವಹಿಸುತ್ತಿದ್ದು, ಇದೀಗ ಹಿರಿಯ ಸಹಾಯಕ ನಿರ್ದೇಶಕರಾಗಿ ಪದೋನ್ನತಿಗೊಂಡ ರಶ್ಮಿ ಅಶೋಕ್ ‌ನೆಕ್ರಾಜೆಯವರಿಗೆ ಬೀಳ್ಕೊಡುಗೆ ಸಮಾರಂಭ ಜು.15 ರಂದು ಸುಳ್ಯದ ಸ್ತ್ರೀ ಶಕ್ತಿ ಭವನದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ಸಿಡಿಪಿಒ ಶೈಲಜಾ ದಿನೇಶ್ ವಹಿಸಿದ್ದರು. ತಾಲೂಕು ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭವಾನಿಶಂಕರ್ ಎನ್. ರವರು ರಶ್ಮಿ ಅಶೋಕ್ ‌ನೆಕ್ರಾಜೆಯವರನ್ನು ಸನ್ಮಾನಿಸಿದರು. ಈ ಸಂದರ್ಭದಲ್ಲಿ ಸಿಡಿಪಿಒ ‌ಕಚೇರಿ‌ ವತಿಯಿಂದ ಸಹೋದ್ಯೋಗಿಗಳು ಮಡಿಲು ತುಂಬಿಸಿ ಬೀಳ್ಕೊಟ್ಟರು. ರಶ್ಮಿಯವರ‌ ಪತಿ ಅಶೋಕ್‌ ನೆಕ್ರಾಜೆಯವರ ಹುಟ್ಟುಹಬ್ಬವನ್ನು‌ ಕೂಡಾ

ಸುಳ್ಯ: ಪದೋನ್ನತಿಗೊಂಡು ವರ್ಗಾವಣೆಯಾದ ಸಿಡಿಪಿಒ ರಶ್ಮಿಗೆ ಬೀಳ್ಕೊಡುಗೆ Read More »

ಕೆವಿಜಿ ಐಪಿಎಸ್ ನಲ್ಲಿ ಐ.ಆರ್.ಸಿ.ಎಂ.ಡಿ ಶಿಕ್ಷಣ ಸಂಸ್ಥೆಯಿಂದ ‘ಅಬಾಕಸ್’ ಗಣಿತ ತರಗತಿ ಉದ್ಘಾಟನೆ

ಸಮಗ್ರ ನ್ಯೂಸ್: ಸುಳ್ಯದ ಕೆವಿಜಿ ಇಂಟರ್ನ್ಯಾಷನಲ್ ಪಬ್ಲಿಕ್ ಶಾಲೆಯಲ್ಲಿ ಜು.15ರಂದು ‘ಅಬಾಕಸ್ ‘ ಗಣಿತ ತರಗತಿಯ ಉದ್ಘಾಟನಾ ಕಾರ್ಯಕ್ರಮವು ಶಾಲಾ ಆಡಿಟೋರಿಯಮ್ ನಲ್ಲಿ ದೀಪವನ್ನು ಬೆಳಗಿಸುವುದರ ಮೂಲಕ ‘ಅಬಾಕಸ್ ‘ ತರಬೇತಿ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಲಾಯಿತು. ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಶಾಲಾ ಪ್ರಾಂಶುಪಾಲ ಅರುಣ್ ಕುಮಾರ್ ‘ಅಬಾಕಸ್ ‘ ತರಗತಿಯನ್ನು ವಿದ್ಯಾರ್ಥಿಗಳಿಗೆ ನೀಡುವುದರಿಂದ ವಿದ್ಯಾರ್ಥಿಗಳು ಗಣಿತದಲ್ಲಿ ಬರುವ ಎಲ್ಲಾ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳುತ್ತಾರೆ ಜೊತೆಗೆ ಅವರ ಬೌದ್ಧಿಕ ಸಾಮರ್ಥ್ಯ ವೃದ್ಧಿಗೊಳ್ಳುತ್ತದೆ ಎಂದು ತಿಳಿಸಿದರು. ‘ಅಬಾಕಸ್ ‘ ತರಗತಿಯ ಬಗ್ಗೆ

ಕೆವಿಜಿ ಐಪಿಎಸ್ ನಲ್ಲಿ ಐ.ಆರ್.ಸಿ.ಎಂ.ಡಿ ಶಿಕ್ಷಣ ಸಂಸ್ಥೆಯಿಂದ ‘ಅಬಾಕಸ್’ ಗಣಿತ ತರಗತಿ ಉದ್ಘಾಟನೆ Read More »

ಪತ್ರಕರ್ತ‌ ನಿಶಾಂತ್ ಬಿಲ್ಲಂಪದವು ಮೇಲಿನ ದೌರ್ಜನ್ಯಕ್ಕೆ ಜರ್ನಲಿಸ್ಟ್ ಯೂನಿಯನ್ ಖಂಡನೆ| ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ: ಪ್ರತಿಭಟನೆಯ ಎಚ್ಚರಿಕೆ

ಸಮಗ್ರ ನ್ಯೂಸ್: ವಿಜಯವಾಣಿ ಮತ್ತು ದಿಗ್ವಿಜಯ ವಾಹಿನಿಯ ಪುತ್ತೂರು ವರದಿಗಾರರಾಗಿ ಕಾರ್ಯ ನಿರ್ವಹಿಸುತ್ತಿರುವ ನಿಶಾಂತ್ ಬಿಲ್ಲಂಪದವು ಅವರ ಮೇಲೆ ಜುಲೈ 15ರಂದು ಪುತ್ತೂರಿನ ಬಪ್ಪಳಿಗೆಯಲ್ಲಿ ನಡೆದಿರುವ ದೌರ್ಜನ್ಯವನ್ನು ಜರ್ನಲಿಸ್ಟ್ ಯೂನಿಯನ್ ಪುತ್ತೂರು ತಾಲೂಕು‌ ಘಟಕ ಖಂಡಿಸುತ್ತದೆ. ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯರಾಗಿರುವ ನಿಶಾಂತ್ ಬಿಲ್ಲಂಪದವು ಅವರು ಕಾರ್ಯ ನಿರತರಾಗಿದ್ದ ವೇಳೆ ಅಮಾನವೀಯವಾಗಿ ವರ್ತಿಸಿ ಅವರಿಗೆ ಹಲ್ಲೆ ನಡೆಸಿ ಮೊಬೈಲ್ ಫೋನ್‌ ಹುಡಿ ಮಾಡಿ ಜೀವ ಬೆದರಿಕೆ‌ ಒಡ್ಡಿರುವ ಘಟನೆಯನ್ನು‌ ಜರ್ನಲಿಸ್ಟ್ ಯೂನಿಯನ್ ಪುತ್ತೂರು ತಾಲೂಕು ಘಟಕ ಗಂಭೀರವಾಗಿ

ಪತ್ರಕರ್ತ‌ ನಿಶಾಂತ್ ಬಿಲ್ಲಂಪದವು ಮೇಲಿನ ದೌರ್ಜನ್ಯಕ್ಕೆ ಜರ್ನಲಿಸ್ಟ್ ಯೂನಿಯನ್ ಖಂಡನೆ| ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ: ಪ್ರತಿಭಟನೆಯ ಎಚ್ಚರಿಕೆ Read More »

ತೆಕ್ಕಿಲ್ ಪ್ರತಿಷ್ಠಾನದ ವತಿಯಿಂದ ಮೊಹಮ್ಮದ್ ಹಾಜಿ ಅವರ 50ನೇ ಪುಣ್ಯಸ್ಮರಣೆ

ಸಮಗ್ರ ನ್ಯಸ್:ತೆಕ್ಕಿಲ್ ಪ್ರತಿಷ್ಠಾನದ ವತಿಯಿಂದ ಮೊಹಮ್ಮದ್ ಹಾಜಿ ಅವರ 50ನೇ ವರ್ಷದ ಪುಣ್ಯಸ್ಮರಣೆ, ಪ್ರಶಸ್ತಿ ಪ್ರಧಾನ ಮತ್ತು 50 ಕಾರ್ಯಕ್ರಮಗಳಿಗೆ ಚಾಲನಾ ಕಾರ್ಯಕ್ರಮ ಜು.23 ರಂದು ಅರಂತೋಡು ತೆಕ್ಕಿಲ್ ಸಮುದಾಯ ಭವನದಲ್ಲಿ ನಡೆಯಲಿದೆ. ಈ ಕುರಿತು ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ತೆಕ್ಕಿಲ್ ಪ್ರತಿಷ್ಠಾನದ ಸ್ಥಾಪಕಾಧ್ಯಕ್ಷರಾದ ಟಿ.ಎಮ್. ಶಹೀದ್ ಕಳೆದ ನೂರು ವರ್ಷಗಳಿಂದ ಸುಳ್ಯ ತಾಲೂಕಿನ ಸಂಪಾಜೆ ಗ್ರಾಮದ ಪೇರಡ್ಕ ಗೂನಡ್ಕ, ಅರಂತೋಡು ಸಹಿತ ಕರ್ನಾಟಕ ಕೇರಳ ಮತ್ತು ಇತರ ವಿವಿಧ ಭಾಗಳಲ್ಲಿ ಸಾಮಾಜಿಕ, ಶೈಕ್ಷಣಿಕ, ಧಾರ್ಮಿಕ ಮತ್ತು

ತೆಕ್ಕಿಲ್ ಪ್ರತಿಷ್ಠಾನದ ವತಿಯಿಂದ ಮೊಹಮ್ಮದ್ ಹಾಜಿ ಅವರ 50ನೇ ಪುಣ್ಯಸ್ಮರಣೆ Read More »

ಸುಳ್ಯದಲ್ಲಿ ಕಾಂಗ್ರೆಸ್ ವಿರುದ್ಧ ಬಿಜೆಪಿ ವತಿಯಿಂದ ಪ್ರತಿಭಟನೆ|ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ಕಾನೂನು ವ್ಯವಸ್ಥೆ ಹದಗೆಟ್ಟಿದೆ:ಹರೀಶ್ ಕಂಜಿಪಿಲಿ|ಕಾಂಗ್ರೆಸ್ ದೂರದೃಷ್ಟಿ ಇಲ್ಲದೆ ಆಡಳಿತ ನಡೆಸುತ್ತಿದೆ:ಎಸ್.ಎನ್.ಮನ್ಮಥ

ಸಮಗ್ರ ನ್ಯೂಸ್: ಕಾಂಗ್ರೆಸ್ ನೇತೃತ್ವದ ರಾಜ್ಯ ಸರಕಾರ ರಾಜ್ಯದಲ್ಲಿ ಅರಾಜಕತೆ ಮತ್ತು ದುರಾಡಳಿತ ನಡೆಸುತ್ತಿದೆ ಎಂದು ಆರೋಪಿಸಿ ಸುಳ್ಯದ ಮಿನಿ ವಿಧಾನ ಸೌಧದ ಎದುರು ಸುಳ್ಯ ಬಿಜೆಪಿ ಮಂಡಲ ಸಮಿತಿ ವತಿಯಿಂದ ಶನಿವಾರ ಪ್ರತಿಭಟನಾ ಸಭೆ ನಡೆಸಲಾಯಿತು. ಎಸ್.ಎನ್.ಮನ್ಮಥ ಮಾತನಾಡಿ, ಕಾಂಗ್ರೆಸ್ ನೀಡಿದ ಭರವಸೆಯನ್ನು ಮೊದಲು ಈಡೇರಿಸಬೇಕು. ಸಿದ್ದರಾಮಯ್ಯ ನೇತೃತ್ವದ ಸರಕಾರ ಕರ್ನಾಟಕವನ್ನು ದಿವಾಳಿ ಮಾಡುವ ಚಿಂತನೆ ಅವರಲ್ಲಿದೆ. ದೂರದೃಷ್ಟಿ ಇಲ್ಲದೆ ಆಡಳಿತ ನಡೆಸುತ್ತಿದೆ ಎಂದು ಆರೋಪಿಸಿದರು.ಬಿಜೆಪಿ ನಾಯಕರಾದ ವಿನಯಕುಮಾರ್ ಕಂದಡ್ಕ, ಎ.ವಿ.ತೀರ್ಥರಾಮ, ವೆಂಕಟ ವಳಲಂಬೆ, ಡಾ.ರಾಮಯ್ಯ

ಸುಳ್ಯದಲ್ಲಿ ಕಾಂಗ್ರೆಸ್ ವಿರುದ್ಧ ಬಿಜೆಪಿ ವತಿಯಿಂದ ಪ್ರತಿಭಟನೆ|ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ಕಾನೂನು ವ್ಯವಸ್ಥೆ ಹದಗೆಟ್ಟಿದೆ:ಹರೀಶ್ ಕಂಜಿಪಿಲಿ|ಕಾಂಗ್ರೆಸ್ ದೂರದೃಷ್ಟಿ ಇಲ್ಲದೆ ಆಡಳಿತ ನಡೆಸುತ್ತಿದೆ:ಎಸ್.ಎನ್.ಮನ್ಮಥ Read More »

ಕೊರಗಜ್ಜ ದೈವದ ಕಟ್ಟೆಗೆ ಬೆಂಕಿಯಿಟ್ಟ ಪ್ರಕರಣಕ್ಕೆ ಬಿಗ್ ಟ್ವಿಸ್ಟ್

ಸಮಗ್ರ ನ್ಯೂಸ್: ದೈವದ ಕಟ್ಟೆಗೆ ಬೆಂಕಿ ನೀಡಲು ಕುಮ್ಮಕ್ಕು ನೀಡಿದ 13 ಮಂದಿ ನೈಜ ಆರೋಪಿಗಳ ವಿರುದ್ದ ದೈವನಿಂದನೆ, ಕೊಲೆ ಬೆದರಿಕೆ ಪ್ರಕರಣ ದಾಖಲಾಗಿದೆ. ಬಜಿರೆ ಗ್ರಾಮದ ಬಡಾರು ನಿವಾಸಿಗಳಾದ ಪ್ರದೀಪ್ ಕುಮಾರ್ ಹೆಗ್ಡೆ, ಉಮೇಶ್ ಪೂಜಾರಿ ತಿಮರಡ್ಕ, ಸಂದೀಪ್ ಕುಮಾರ್ ಹೆಗ್ಡೆ, ಪ್ರಸಾದ್, ದಿನೇಶ್ ಪೂಜಾರಿ, ವಿಜಯ ಶೇಖರ, ಮೋಹನಂದ ಪೂಜಾರಿ, ಹರಿಪ್ರಸಾದ್, ಮನುಗೌಡ, ಶ್ರೀಧರ್ ಪೂಜಾರಿ, ವಸಂತಿ ಪೂಜಾರ್ತಿ, ದಯಾನಂದ ಪೂಜಾರಿ, ಹರೀಶ್ ಪೂಜಾರಿ ಎಂಬವರ ಮೇಲೆ ಡಾ.ರಾಜೇಶ್ ಅವರು ವೇಣೂರು ಪೊಲೀಸ್ ಠಾಣೆಯಲ್ಲಿ

ಕೊರಗಜ್ಜ ದೈವದ ಕಟ್ಟೆಗೆ ಬೆಂಕಿಯಿಟ್ಟ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ Read More »

ಬೆಳ್ತಂಗಡಿ: ಬಿಜೆಪಿ ಕಾರ್ಯಕರ್ತರಿಂದಲೇ ಅಕ್ರಮ ಜಾನುವಾರು ಸಾಗಾಟ| ನಾಲ್ಕು ಮಂದಿಯ ಬಂಧಿಸಿದ ಪೊಲೀಸರು

ಸಮಗ್ರ ನ್ಯೂಸ್: ಹಿಂಸಾತ್ಮಕವಾಗಿ ದನ-ಕರುಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಕಾರ್ಯಕರ್ತರ ಸಹಿತ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಬೆಳ್ತಂಗಡಿ ತಾಲೂಕಿನ ನಾವೂರು ಗ್ರಾಮದ ಮೋರ್ತಾಜೆ ನಿವಾಸಿ ಪ್ರಮೋದ್ ಸಾಲ್ಯಾನ್, ಒಳಗದ್ದೆ ನಿವಾಸಿ ಪುಷ್ಪರಾಜ್ ಹಾಗೂ ಹಾಸನ ಜಿಲ್ಲೆಯ ಕಸಬಾ ಹೋಬಳಿ, ಅರಕಲಗೂಡು ನಿವಾಸಿ ಚೆನ್ನಕೇಶವ ಮತ್ತು ಹೊಳೆನರಸೀಪುರ ನಿವಾಸಿ ಸಂದೀಪ್ ಹಿರೇಬೆಳಗುಳಿ ಬಂಧಿತ ಆರೋಪಿಗಳಾಗಿದ್ದಾರೆ. ಇವರು ಬಿಜೆಪಿಯ ಸಕ್ರಿಯ ಕಾರ್ಯಕರ್ತರೆನ್ನಲಾಗಿದೆ. ಇವರಿಂದ ಸಾಗಾಟಕ್ಕೆ ಬಳಸಿದ ಮೂರು ವಾಹನಗಳು, 6 ದನ ಮತ್ತು 2 ಗಂಡು

ಬೆಳ್ತಂಗಡಿ: ಬಿಜೆಪಿ ಕಾರ್ಯಕರ್ತರಿಂದಲೇ ಅಕ್ರಮ ಜಾನುವಾರು ಸಾಗಾಟ| ನಾಲ್ಕು ಮಂದಿಯ ಬಂಧಿಸಿದ ಪೊಲೀಸರು Read More »

ಬೆಳ್ತಂಗಡಿ ಕಾಂಗ್ರೆಸ್ ನಲ್ಲೂ ಭುಗಿಲೆದ್ದ ಭಿನ್ನಮತ| ರಕ್ಷಿತ್ ಶಿವರಾಂ ಟೀಮ್ ಗೆ ಗೇಟ್ ಪಾಸ್ ನೀಡಿದ ಬ್ಲಾಕ್ ಕಾಂಗ್ರೆಸ್

ಸಮಗ್ರ ನ್ಯೂಸ್: ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷದ ಸೋಲು-ಗೆಲುವಿನ ಕುರಿತು ಪರಾಮರ್ಶೆ ನಡೆಸುವ ವೇಳೆ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಹೈಡ್ರಾಮಾ ನಡೆದ ಘಟನೆ ಜು.14 ರಂದು ಸಂಜೆ ನಡೆದಿದೆ. ಬೆಳ್ತಂಗಡಿ ಮೂರು ಮಾರ್ಗದ ಬಳಿ ಕಾಂಗ್ರೆಸ್ ಕಚೇರಿಯಲ್ಲಿ ಮಾಜಿ ಶಾಸಕಿ ಶಕುಂತಲಾ ಶೆಟ್ಟಿ, ಜಿ.ಪಂ. ಮಾಜಿ ಅಧ್ಯಕ್ಷೆ ಮಮತಾ ಗಟ್ಟಿ, ರಾಜ್ಯಸಭಾ ಮಾಜಿ ಸದಸ್ಯ ಇಬ್ರಾಹಿಂ, ಸಹಿತ ಅಶ್ವಿನ್ ರೈ ಬಂಟ್ವಾಳ್ ವೀಕ್ಷಕರಾಗಿ ಸೇರಿದ್ದರು. ಸಭೆ ಆರಂಭವಾಗುತ್ತಲೆ ರಕ್ಷಿತ್ ಶಿವರಾಂ ಆಪ್ತ ಬಳಗದಲ್ಲಿ ಗುರುತಿಸಿಕೊಂಡ

ಬೆಳ್ತಂಗಡಿ ಕಾಂಗ್ರೆಸ್ ನಲ್ಲೂ ಭುಗಿಲೆದ್ದ ಭಿನ್ನಮತ| ರಕ್ಷಿತ್ ಶಿವರಾಂ ಟೀಮ್ ಗೆ ಗೇಟ್ ಪಾಸ್ ನೀಡಿದ ಬ್ಲಾಕ್ ಕಾಂಗ್ರೆಸ್ Read More »

ಕಡಬ: ನಂದಕುಮಾರ್ v/s ಜಿ.ಕೃಷ್ಣಪ್ಪ| ಎರಡು ಬಣದ ನಡುವೆ ಮಾರಾಮಾರಿ..!

ಸಮಗ್ರ ನ್ಯೂಸ್: ಕಡಬ ಬ್ಲಾಕ್‌ನ ನಡೆದ ಕಾಂಗ್ರೆಸ್‌ನ ಪರಾಮರ್ಶೆ ಸಭೆಯಲ್ಲಿ ಜಿ.ಕೃಷ್ಣಪ್ಪ ಹಾಗೂ ನಂದಕುಮಾರ್ ಬಣದ ನಡುವೆ ಮಾರಾಮಾರಿಯಾದ ಘಟನೆ ಕಡಬ ಅಂಬೇಡ್ಕರ್ ಭವನದಲ್ಲಿ ಜು.14ರಂದು ಸಭೆ ನಡೆದಿದೆ. ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಸೋಲಿನ ಪರಾಮರ್ಶೆ ಅಭಿಪ್ರಾಯ ಸಂಗ್ರಹಿಸಲು ಕಾಂಗ್ರೆಸ್ ಸಮಿತಿಯ ಮುಖಂಡರು ಆಗಮಿಸಿದ್ದರೆನ್ನಲಾಗಿದೆ.ಕಳೆದ ವಿಧಾನಸಭಾ ಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ ನಡೆಸಿದ್ದಾರೆ. ಎಂಬ ಆರೋಪದಲ್ಲಿ ಇತ್ತೀಚೆಗಷ್ಟೆ ಕಾಂಗ್ರೆಸ್ ಶಿಸ್ತು ಸಮಿತಿಯಿಂದ ಉಚ್ಛಾಟನೆಗೊಳಗಾದ ನಾಯಕರು ಈ ಸಭೆಗೆ ಆಗಮಿಸಿದ್ದ ವೇಳೆ ಜಿ.ಕೃಷ್ಣಪ್ಪ ಬೆಂಬಲಿಗರು ತೀವ್ರ ಆಕ್ಷೇಪ ವ್ಯಕ್ತಪಡಿಸಿದರೆನ್ನಲಾಗಿದೆ.

ಕಡಬ: ನಂದಕುಮಾರ್ v/s ಜಿ.ಕೃಷ್ಣಪ್ಪ| ಎರಡು ಬಣದ ನಡುವೆ ಮಾರಾಮಾರಿ..! Read More »