ಕರಾವಳಿ

ಕರಾವಳಿಯಲ್ಲಿ ವರುಣಾರ್ಭಟ| ಮುಂದಿನ 24 ಗಂಟೆ ಭಾರೀ ಮಳೆ ಮುನ್ಸೂಚನೆ

ಸಮಗ್ರ ನ್ಯೂಸ್: ಕರಾವಳಿಯ ಹಲವು ಜಿಲ್ಲೆಗಳಲ್ಲಿ ನದಿಗಳು ಅಪಾಯದ ಮಟ್ಟ ಮೀರುವ ಮೂಲಕ ತಗ್ಗು ಪ್ರದೇಶಗಳು ಜಲಾವೃತಗೊಳ್ಳುತ್ತಿವೆ. ದಕ್ಷಿಣದ ಪ್ರಮುಖ ನದಿಗಳಾದ ಕುಮಾರಧಾರೆ ಹಾಗೂ ನೇತ್ರಾವತಿಯಲ್ಲಿ ನೀರಿನ ಮಟ್ಟ ಏರಿಕೆಯಾಗುತ್ತಿದ್ದು, ಪ್ರವಾಹದ ಭೀತಿ ಎದುರಾಗಿವೆ. ಅಲ್ಲದೆ ಕೊಡಗು, ಉತ್ತರ ಕನ್ನಡ, ಚಿಕ್ಕಮಗಳೂರು ಜಿಲ್ಲೆಗಳಲ್ಲಿಯೂ ಹಲವೆಡೆ ಮನೆಗಳಿಗೆ ನೀರು ನುಗ್ಗಿವೆ. ಮಲೆನಾಡು ಮತ್ತು ಕರಾವಳಿಯಲ್ಲಿ ಮುಂದಿನ 24ಗಂಟೆ ವ್ಯಾಪಕ ಮಳೆಯಾಗಲಿದೆ ಎಂದು ಐಎಂಡಿ ತಿಳಿಸಿದ್ದು ಅರೆಂಜ್ ಅಲರ್ಟ್ ಘೋಷಿಸಿದೆ. ಕೊಡಗು, ಉತ್ತರ ಕನ್ನಡ, ಚಿಕ್ಕಮಗಳೂರು, ಉಡುಪಿ, ದಕ್ಷಿಣ ಕನ್ನಡ

ಕರಾವಳಿಯಲ್ಲಿ ವರುಣಾರ್ಭಟ| ಮುಂದಿನ 24 ಗಂಟೆ ಭಾರೀ ಮಳೆ ಮುನ್ಸೂಚನೆ Read More »

ಕಲ್ಲುಗುಂಡಿ: ಭಾರತೀಯರ ಮಜ್ಜೂರ್ ಸಂಘದ ಸ್ಥಾಪನಾ ದಿನಾಚರಣೆ

ಸಮಗ್ರ ನ್ಯೂಸ್: ಭಾರತೀಯರ ಮಜ್ಜೂರ್ ಸಂಘದ ಸ್ಥಾಪನಾ ದಿನಾಚರಣೆಯ ಪ್ರಯುಕ್ತ ಕಲ್ಲುಗುಂಡಿ ಬಿ.ಯಂ.ಯಸ್ ಆಟೋಚಾಲಕರ ಸಂಘದ ವತಿಯಿಂದ ಜು 23 ರಂದು ತಾಯಿ ಭಾರತಮಾತೆಗೆ ದೀಪ ಬೆಳಗಿ ಪುಷ್ಪಾರ್ಚನೆ ಮಾಡಲಾಯಿತು. ಸಂಘದ ಅಧ್ಯಕ್ಷ ಕೇಶವ ಬಂಗ್ಲೆಗುಡ್ಡೆ ಮತ್ತು ರವಿಕಿರಣ್ ನಿಡಿಂಜಿಯವರು ಪ್ರಸ್ತಾವಿಕವಾಗಿ ಮಾತನಾಡಿದರು. ಈ ಸಂದರ್ಭದಲ್ಲಿ ಸಂಘದ ಎಲ್ಲಾ ಸದಸ್ಯರು ಉಪಸ್ಥಿತರಿದ್ದರು.

ಕಲ್ಲುಗುಂಡಿ: ಭಾರತೀಯರ ಮಜ್ಜೂರ್ ಸಂಘದ ಸ್ಥಾಪನಾ ದಿನಾಚರಣೆ Read More »

ಮಂಗಳೂರು: ರಾಜ್ಯಮಟ್ಟದ ಭಾವೈಕ್ಯತಾ ಸಮ್ಮಿಲನ -ಕವಿಗೋಷ್ಠಿ | ವಿಧಾನ ಸಭಾಧ್ಯಕ್ಷರಿಗೆ ಪ್ರಶಸ್ತಿ ಪ್ರಧಾನ ಸಮಾರಂಭ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ಕರ್ನಾಟಕ ಭಾವೈಕ್ಯತಾ ಪರಿಷತ್ ಆಯೋಜಿಸಿದ ಭಾವೈಕ್ಯತಾ ಸಮ್ಮಿಲನ ಸಮಾರಂಭವು ಜು.30 ರಂದು ಭಾನುವಾರ ಮಂಗಳೂರಿನ ಕಂಕನಾಡಿ ಜೆಪ್ಪು ಮರಿಯಾ ಸಭಾಂಗಣದಲ್ಲಿ ನಡೆಯಲಿದೆ. ಚಿತ್ರ ನಿರ್ದೇಶಕ, ಗಾಯಕ ಮತ್ತು ಸಂಘಟಕರಾದ ಎಚ್. ಭೀಮರಾವ್ ವಾಷ್ಠರ್ ಕೋಡಿಹಾಳರವರು ಈ ಸಮಾರಂಭವನ್ನು ನೆರವೇರಿಸಲಿದ್ದಾರೆ. ಕರ್ನಾಟಕ ಭಾವೈಕ್ಯತಾ ಪರಿಷತ್ ಅಧ್ಯಕ್ಷರಾದ ಕೆ.ಎಂ.ಇಕ್ಬಾಲ್ ಬಾಳಿಲ ಅವರ ಅಧ್ಯಕ್ಷತೆಯಲ್ಲಿ ನಾಡಿನ ನೂರು ಕವಿಗಳ ಕವನ ವಾಚನ, ಸೌಹಾರ್ದ ಗೀತೆ ಬಿಡುಗಡೆ, ಚರ್ಚಾ ಗೋಷ್ಠಿ, ಸಾಧಕರಿಗೆ ಪ್ರಶಸ್ತಿ ಪ್ರದಾನ ಕಾರ್ಯಕ್ರಮ

ಮಂಗಳೂರು: ರಾಜ್ಯಮಟ್ಟದ ಭಾವೈಕ್ಯತಾ ಸಮ್ಮಿಲನ -ಕವಿಗೋಷ್ಠಿ | ವಿಧಾನ ಸಭಾಧ್ಯಕ್ಷರಿಗೆ ಪ್ರಶಸ್ತಿ ಪ್ರಧಾನ ಸಮಾರಂಭ Read More »

ಕುಮಾರಧಾರ ಸ್ನಾನಘಟ್ಟ ಬಳಿ ತೆರಳದಂತೆ ಕಡಬ ತಹಶೀಲ್ದಾರ್ ಸೂಚನೆ

ಸಮಗ್ರ ನ್ಯೂಸ್: ಅಪಾಯ ಮಟ್ಟದಲ್ಲಿ ತುಂಬಿ ಹರಿಯುತ್ತಿರುವ ಸುಬ್ರಹ್ಮಣ್ಯದ ಕುಮಾರಧಾರ ಸ್ನಾನಘಟ್ಟ ಬಳಿ ತೆರಳದಂತೆ ಕಡಬ ತಹಶೀಲ್ದಾರ್ ರಮೇಶ್ ಬಾಬು ಸೂಚನೆ ನೀಡಿದ್ದಾರೆ. ಕಡಬ ತಾಲೂಕಿನಾದ್ಯಂತ ಕಳೆದ 2 ದಿನಗಳಿಂದ ನಿರಂತರ ಮಳೆ ಸುರಿಯುತ್ತಿದ್ದು, ಸುಬ್ರಹ್ಮಣ್ಯ ಗ್ರಾಮದ ಸುಬ್ರಹ್ಮಣ್ಯ ಸ್ನಾನಘಟ್ಟದಲ್ಲಿ ಕುಮಾರಧಾರ ನದಿಯು ಅಪಾಯ ಮಟ್ಟದಲ್ಲಿ ಹರಿಯುತ್ತಿದ್ದು ಕುಕ್ಕೇ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭಕ್ತಾದಿಗಳು ಹಾಗೂ ಪ್ರವಾಸಿಗಳು ಬಂದು ಸ್ನಾನಘಟ್ಟದಲ್ಲಿ ಸ್ನಾನ ಮಾಡುವ ಉದ್ದೇಶಕ್ಕೆ ಇಳಿಯುತ್ತಿದ್ದು ಮುಂದೆ ಸಂಭವಿಸಬಹುದಾದಂತಹ ಅನಾಹುತಗಳನ್ನು ತಪ್ಪಿಸುವ ಹಿತದೃಷ್ಟಿಯಿಂದ ಸ್ನಾನಘಟ್ಟದ ಬಳಿ ತೆರಳದಂತೆ

ಕುಮಾರಧಾರ ಸ್ನಾನಘಟ್ಟ ಬಳಿ ತೆರಳದಂತೆ ಕಡಬ ತಹಶೀಲ್ದಾರ್ ಸೂಚನೆ Read More »

ಸುಬ್ರಹ್ಮಣ್ಯ ಸ್ನಾನ ಘಟ್ಟಕ್ಕೆ ಗೃಹ ರಕ್ಷಕ ದಳದ ಸಮಾದೇಷ್ಟರ ಭೇಟಿ

ಸಮಗ್ರ ನ್ಯೂಸ್: ಘಟ್ಟದ ಮೇಲ್ಬಾಗದಲ್ಲಿ ಮತ್ತು ಕರಾವಳಿಯಲ್ಲಿ ವಿಪರೀತ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕರಾವಳಿಯ ನದಿಗಳು ತುಂಬಿಹರಿಯುತ್ತಿದ್ದು, ಸುಬ್ರಹ್ಮಣ್ಯದ ಕುಮಾರಧಾರ ಸ್ನಾನ ಘಟ್ಟ ಮುಳುಗಡೆ ಯಾಗಿದೆ. ರವಿವಾರ ಗೃಹ ರಕ್ಷಕ ದಳದ ದ.ಕ. ಜಿಲ್ಲಾ ಸಮಾದೇಷ್ಟ ಡಾ.ಮುರಲಿ ಮೋಹನ್ ಚೂಂತಾರು ಅವರು ಸುಬ್ರಹ್ಮಣ್ಯದ ಕುಮಾರಧಾರ ಸ್ನಾನ ಘಟ್ಟ ಸ್ಥಳಕ್ಕೆ ಭೇಟಿ ನೀಡಿ ಪ್ರವಾಹ ರಕ್ಷಣಾ ತಂಡದ ಸದಸ್ಯರಿಗೆ ಸಲಹೆ ಮತ್ತು ಮಾರ್ಗದರ್ಶನ ನೀಡಿದರು. ಕುಮಾರಧಾರ ನದಿ ತುಂಬಿ ಹರಿಯುತ್ತಿದ್ದು ಯಾವುದೇ ಕಾರಣಕ್ಕೂ ಪ್ರವಾಸಿಗರು ಮತ್ತು ಭಕ್ತರು ನೀರಿಗೆ ಇಳಿಯದಂತೆ

ಸುಬ್ರಹ್ಮಣ್ಯ ಸ್ನಾನ ಘಟ್ಟಕ್ಕೆ ಗೃಹ ರಕ್ಷಕ ದಳದ ಸಮಾದೇಷ್ಟರ ಭೇಟಿ Read More »

ಕಡಬ: ಉಕ್ಕೇರಿದ ಕುಮಾರಧಾರ; ಕುಕ್ಕೆ ಸುಬ್ರಹ್ಮಣ್ಯ ಸ್ನಾನಘಟ್ಟ ಸಂಪೂರ್ಣ ಜಲಾವೃತ| ಹೆದ್ದಾರಿಗೂ ನುಗ್ಗಿದ ನೆರೆನೀರು

ಸಮಗ್ರ ವಾರ್ತೆ: ಪುಷ್ಪಗಿರಿ ಪರಿಸರ ಹಾಗೂ ಘಟ್ಟ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರ ನದಿ ತುಂಬಿ ಹರಿಯುತ್ತಿದ್ದು, ಪ್ರವಾಹದ ನೀರು ಹೆದ್ದಾರಿಗೆ ನುಗ್ಗಿ ಸಂಚಾರಕ್ಕೆ ಅಡಚಣೆ ಉಂಟಾಯಿತು. ಕುಮಾರಧಾರ ನದಿಯಲ್ಲಿ ನೀರು ಹೆಚ್ಚಳದಿಂದ ಕುಮಾರಧಾರ ಸ್ನಾನಘಟ್ಟ ಸಂಪೂರ್ಣ ಮುಳುಗಡೆಯಾಗಿದೆ. ಇಲ್ಲಿನ ಲಗೇಜ್ ಕೊಠಡಿ, ಶೌಚಾಲಯ ಎಲ್ಲವೂ ಮುಳುಗಡೆಯಾಗಿದೆ. ಮಂಜೇಶ್ವರ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಗೆ ನದಿಯ ನೀರು ನುಗ್ಗಿ ವಾಹನ ಸಂಚಾರಕ್ಕೆ ಅಡ್ಡಿಯಾಯಿತು. ಮುಂಜಾಗ್ರತಾ ಹಿನ್ನೆಲೆಯಲ್ಲಿ ಸಂಚಾರ ನಿಷೇಧಿಸಲಾಗಿದೆ. ನದಿ ಸಮೀಪದ ತೋಟಗಳಿಗೂ

ಕಡಬ: ಉಕ್ಕೇರಿದ ಕುಮಾರಧಾರ; ಕುಕ್ಕೆ ಸುಬ್ರಹ್ಮಣ್ಯ ಸ್ನಾನಘಟ್ಟ ಸಂಪೂರ್ಣ ಜಲಾವೃತ| ಹೆದ್ದಾರಿಗೂ ನುಗ್ಗಿದ ನೆರೆನೀರು Read More »

ಹವಾಮಾನ ವರದಿ| ಇನ್ನೆರಡು ದಿನ ಭಾರೀ ಮಳೆ‌ ಸಾಧ್ಯತೆ

ಸಮಗ್ರ ನ್ಯೂಸ್: ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡು ಸೇರಿದಂತೆ ರಾಜ್ಯದ ಹಲವೆಡೆ ಭಾನುವಾರ (ಜುಲೈ 23) ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿಯ ಬಹುತೇಕ ಕಡೆ ಮತ್ತು ದಕ್ಷಿಣ ಒಳನಾಡಿನ ಹಲವೆಡೆ ಮಳೆಯಾಗಲಿದೆ ಎಂದು ತಿಳಿದು ಬಂದಿದೆ. ಕಳೆದ ಒಂದು ವಾರದಿಂದ ಕರಾವಳಿಯಲ್ಲಿ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು, ಇತರೆಡೆಗಳಲ್ಲೂ ವ್ಯಾಪಿಸಿದೆ. ಆದರೆ, ಕರಾವಳಿಯಲ್ಲಿ ಮಳೆ ಪ್ರಮಾಣ ಸಾಮಾನ್ಯವಾಗಿದೆ ಎಂದು ಹೇಳಿದೆ. ಉತ್ತರ ಒಳನಾಡಿನ ಬೆಳಗಾವಿ ಜಿಲ್ಲೆಯ ಒಂದೆರಡು ಕಡೆಗಳಲ್ಲಿ

ಹವಾಮಾನ ವರದಿ| ಇನ್ನೆರಡು ದಿನ ಭಾರೀ ಮಳೆ‌ ಸಾಧ್ಯತೆ Read More »

ಮಲೆನಾಡು, ಕರಾವಳಿಯಲ್ಲಿ ಅಬ್ಬರಿಸುತ್ತಿರುವ ವರುಣ| ಹಲವೆಡೆ ಹಾನಿ; ತುಂಬಿ ಹರಿಯುತ್ತಿರುವ ಜೀವನದಿಗಳು

ಸಮಗ್ರ ನ್ಯೂಸ್: ಮಲೆನಾಡು ಜಿಲ್ಲೆಗಳಾದ ಕೊಡಗು ಮತ್ತು ಚಿಕ್ಕಮಗಳೂರಿನಲ್ಲಿ ಅಬ್ಬರದ ಮಳೆ ಮುಂದುವರಿದಿದೆ. ಕೊಡಗಿನಲ್ಲಿ ಭಾರೀ ಗಾಳಿ ಸಹಿತ ಸುರಿದ ಮಳೆಗೆ ಹಲವು ಕಡೆ ಮರ, ವಿದ್ಯುತ್‌ ಕಂಬಗಳು ರಸ್ತೆಗೆ ಉರುಳಿ ಬಿದ್ದು ಹಲವು ಗ್ರಾಮಗಳಲ್ಲಿ ಕತ್ತಲು ಆವರಿಸಿದೆ. ಮಡಿಕೇರಿ ತಾಲೂಕಿನ ಬಾಡಗ ಶಾಲೆ ಮೇಲೆ ವಿದ್ಯುತ್‌ ಕಂಬ ಉರುಳಿಬಿದ್ದರೂ ಆ ಸಂದರ್ಭದಲ್ಲಿ ವಿದ್ಯಾರ್ಥಿಗಳು ಶಾಲೆಗೆ ಬಾರದ ಹಿನ್ನೆಲೆಯಲ್ಲಿ ಸಂಭಾವ್ಯ ಅಪಾಯ ತಪ್ಪಿದೆ. ಹಾರಂಗಿ ಜಲಾಶಯ ಭರ್ತಿಯಾಗಲು ಇನ್ನು ಕೇವಲ 6 ಅಡಿ ಅಷ್ಟೇ ಬಾಕಿ ಇದ್ದು,

ಮಲೆನಾಡು, ಕರಾವಳಿಯಲ್ಲಿ ಅಬ್ಬರಿಸುತ್ತಿರುವ ವರುಣ| ಹಲವೆಡೆ ಹಾನಿ; ತುಂಬಿ ಹರಿಯುತ್ತಿರುವ ಜೀವನದಿಗಳು Read More »

ಭಾರೀ ಮಳೆಗೆ ಉಕ್ಕಿ‌ ಹರಿಯುತ್ತಿರುವ ಕುಮಾರಧಾರಾ| ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸ್ನಾನಘಟ್ಟ ಮುಳುಗಡೆ

ಸಮಗ್ರ ನ್ಯೂಸ್: ಸುಬ್ರಹ್ಮಣ್ಯ ಪರಿಸರದಲ್ಲಿ ಹಾಗೂ ಘಟ್ಟ ಪ್ರದೇಶದಲ್ಲಿ ಬಾರೀ ಮಳೆಯಾಗುತ್ತಿರುವುದರಿಂದ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಕುಮಾರಧಾರ ನದಿ ತುಂಬಿ ಹರಿಯುತ್ತಿದ್ದು, ಕುಕ್ಕೆ ಸುಬ್ರಹ್ಮಣ್ಯ ಸಮೀಪದ ಕುಮಾರಧಾರ ಸ್ನಾನಘಟ್ಟ ಶನಿವಾರ ಮುಳುಗಡೆಗೊಂಡಿದೆ. ಶುಕ್ರವಾರ ರಾತ್ರಿಯಿಂದಲೇ ಬಾರೀ ಮಳೆಯಾಗುತ್ತಿದೆ. ಘಟ್ಟ ಪ್ರದೇಶದಲ್ಲೂ ಬಾರೀ ಮಳೆಯಾಗುತ್ತಿರುವುದರಿಂದ ಕುಮಾರಧಾರ ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಳಗೊಂಡಿದೆ. ಕುಮಾರಧಾರ ಸ್ನಾನ ಘಟ್ಟ ಹಾಗೂ ಕಿಂಡಿ ಅಣೆಕಟ್ಟು ಮುಳುಗಡೆಯಾಗಿದೆ. ನದಿಯಲ್ಲಿ ನೀರಿನ ಹರಿವು ಹೆಚ್ಚಾಗಿರುವುದರಿಂದ ಭಕ್ತಾಧಿಗಳಿಗೆ ನೀರಿಗಿಳಿಯದಂತೆ ಸೂಚನೆ ನೀಡಲಾಗಿದೆ. ನದಿ ದಡದಲ್ಲಿ ಸಿಬ್ಬಂದಿಗಳ ನಿಯೋಜಿಸಲಾಗಿದೆ. ಎಚ್ಚರಿಕಾ

ಭಾರೀ ಮಳೆಗೆ ಉಕ್ಕಿ‌ ಹರಿಯುತ್ತಿರುವ ಕುಮಾರಧಾರಾ| ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸ್ನಾನಘಟ್ಟ ಮುಳುಗಡೆ Read More »

ಸ್ಟೋರಿ ಆಫ್ ಸೌಜನ್ಯ ಸಿನಿಮಾ ನಿರ್ಮಾಣಕ್ಕೆ ಸೌಜನ್ಯ ಕುಟುಂಬದ ವಿರೋಧ| ನಮ್ಮ ಹೋರಾಟ ಸಿನಿಮಾ ಮಾಡುವುದಕ್ಕೆ ಅಲ್ಲ ಎಂದ ವಿಠಲ ಗೌಡ

ಸಮಗ್ರ ನ್ಯೂಸ್: ಧರ್ಮಸ್ಥಳದಲ್ಲಿ ಅತ್ಯಾಚಾರಕ್ಕೊಳಗಾಗಿ ಕೊಲೆಯಾದ ವಿದ್ಯಾರ್ಥಿನಿ ಸೌಜನ್ಯನ ಕಥೆಯನ್ನು ಸಿನಿಮಾ ಮಾಡಲು ಸಿನಿಮಾ ತಂಡವೊಂದು ನಿರ್ಧರಿಸಿ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಹೆಸರು ನೋಂದಾಯಿಸಿದ ಬೆನ್ನಲ್ಲೇ ಸಿನಿಮಾವನ್ನು ನಿರ್ಮಾಣಕ್ಕೆ ಸೌಜನ್ಯ ಕುಟುಂಬಸ್ಥರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಸೌಜನ್ಯಳ ಮಾವ ವಿಠಲ ಗೌಡ, ನಮ್ಮ ಒಪ್ಪಿಗೆ ಪಡೆಯದೇ ಅವರು ಹೇಗೆ ಸಿನಿಮಾ ಮಾಡುತ್ತಾರೆ? ನಮ್ಮನ್ನು ದಾರಿ ತಪ್ಪಿಸುವುದಕ್ಕೆ ಹೀಗೆ ಮಾಡುತ್ತಿದ್ದಾರೆಯೇ? ನಮ್ಮ ಉದ್ದೇಶ ಸಿನಿಮಾ ಮಾಡುವುದು ಅಲ್ಲ. ನಮಗೆ ನ್ಯಾಯ ಸಿಗಬೇಕು ಅಷ್ಟೇ ಎಂದಿದ್ದಾರೆ.

ಸ್ಟೋರಿ ಆಫ್ ಸೌಜನ್ಯ ಸಿನಿಮಾ ನಿರ್ಮಾಣಕ್ಕೆ ಸೌಜನ್ಯ ಕುಟುಂಬದ ವಿರೋಧ| ನಮ್ಮ ಹೋರಾಟ ಸಿನಿಮಾ ಮಾಡುವುದಕ್ಕೆ ಅಲ್ಲ ಎಂದ ವಿಠಲ ಗೌಡ Read More »