ಕರಾವಳಿ

ಎರಡೆರಡು ಆಟಿ ಅಮಾವಾಸ್ಯೆ| ಆಟಿ ಕಷಾಯ ಕುಡಿಯೋದು ಯಾವಾಗ ಮರ್ರೆ!?

ಸಮಗ್ರ ನ್ಯೂಸ್: ಕರಾವಳಿಗರಿಗೆ ಆಟಿ ಅಂದರೆ ಅದು ವಿಶೇಷವಾದ ತಿಂಗಳು. ಇನ್ನು ಆಟಿ ತಿಂಗಳಿನಲ್ಲಿ ಅಮಾವ್ಯಾಸೆಯಂದು ವಿಶೇಷವಾದ ಹಾಲೆ ಮರದ ಕಷಾಯವನ್ನು ತುಳುನಾಡಿನಾದ್ಯಂತ ಕುಡಿಯುವುದು ರೂಢಿ. ಆದರೆ ಈ ಬಾರಿ ಆಟಿ ತಿಂಗಳಿನಲ್ಲಿ ಎರಡೆರಡು ಅಮಾವ್ಯಾಸೆ ಬಂದು ಯಾವ ದಿನ ಮದ್ದು ಕುಡಿಬೇಕು ಅನ್ನೋ ಕನ್ಫ್ಯೂಷನ್ ನಲ್ಲಿದ್ದಾರೆ ಜನ. ಈಗ ಆ ಸಂಶಯಕ್ಕೆ ಉತ್ತರ ನಾವು ಹೇಳ್ತೇವೆ . ಈ ವರ್ಷ ಆಟಿಯಲ್ಲಿ ಎರಡು ಅಮಾವಾಸ್ಯೆ ಬರಲಿದೆ. ಒಂದು ಜುಲೈ 17 ಮತ್ತೊಂದು ಆಗಸ್ಟ್ 16. ಮೊದಲನೆಯದ್ದು […]

ಎರಡೆರಡು ಆಟಿ ಅಮಾವಾಸ್ಯೆ| ಆಟಿ ಕಷಾಯ ಕುಡಿಯೋದು ಯಾವಾಗ ಮರ್ರೆ!? Read More »

ಸಂಪಾಜೆ: ಆಸ್ತಿ ವಿವಾದ ಹಿನ್ನಲೆ| ಸಹೋದರರಿಂದಲೇ ಅಣ್ಣನ ಮರ್ಡರ್

ಸಮಗ್ರ ನ್ಯೂಸ್: ಆಸ್ತಿವಿವಾದ ಹಿನ್ನಲೆಯಲ್ಲಿ ಸ್ವಂತ ತಮ್ಮಂದಿರೇ ಅಣ್ಣನನ್ನು ಕೊಚ್ಚಿ ಕೊಲೆಗೈದ ಘಟನೆ ಮಡಿಕೇರಿ ತಾಲೂಕಿನ ಸಂಪಾಜೆ ಸಮೀಪದ ಚೆಂಬು ಗ್ರಾಮದಿಂದ ವರದಿಯಾಗಿದೆ. ಇಲ್ಲಿನ ಕುದ್ರೆಪಾಯ ನಿವಾಸಿ ಉಸ್ಮಾನ್ ಹತ್ಯೆಯಾದ ದುರ್ದೈವಿ. ಸತ್ತಾರ್, ರಫೀಕ್, ಇಸುಬು,ಅಬ್ಬಾಸ್, ಉಸ್ಮಾನ್ ಮೊದಲಾದ ಅಣ್ಣತಮ್ಮಂದಿರ ಕೃಷಿ ಭೂಮಿ ಸುಮಾರು 50 ಎಕ್ರೆ ಜಾಗ ಕುದ್ರೆಪಾಯದಲ್ಲಿದ್ದು ಜಾಗದ ತಕರಾರಿನಿಂದಾಗಿ ವಿವಾದವೆದ್ದಿದ್ದು, ಸಹೋದರರು ಸೇರಿ ಉಸ್ಮಾನ್ ಎಂಬವರನ್ನು ಇಂದು ಚೂರಿಯಿಂದ ಇರಿದು ಕೊಂದಿರುವುದಾಗಿ ಮಾಹಿತಿ ಲಭಿಸಿದೆ. ಉಸ್ಮಾನ್ ಕುದ್ರೆಪಾಯದಲ್ಲಿ ಭೂಮಿ ಹೊಂದಿದ್ದರು. ಅರಂತೋಡಿನಲ್ಲೂ ಇವರಿಗೆ

ಸಂಪಾಜೆ: ಆಸ್ತಿ ವಿವಾದ ಹಿನ್ನಲೆ| ಸಹೋದರರಿಂದಲೇ ಅಣ್ಣನ ಮರ್ಡರ್ Read More »

ಪುತ್ತೂರು: ಸಹಾಯಕ ಆಯುಕ್ತ ಗಿರೀಶ್ ನಂದನ್ ವರ್ಗಾವಣೆಗೆ ತಡೆ

ಸಮಗ್ರ ನ್ಯೂಸ್: ಪುತ್ತೂರು ಸಹಾಯಕ ಆಯುಕ್ತರಾಗಿದ್ದು, ಎತ್ತಿನಹೊಳೆ ಯೋಜನೆಯ ಭೂಸ್ವಾಧೀನ ವಿಭಾಗಕ್ಕೆ ವರ್ಗಾವಣೆಗೊಂಡಿದ್ದ ಗಿರೀಶ್ ನಂದನ್ ಅವರ ವರ್ಗಾವಣೆಗೆ ಕರ್ನಾಟಕ ರಾಜ್ಯ ಆಡಳಿತಾತ್ಮಕ ಪ್ರಾಧಿಕಾರ ಅವಧಿಪೂರ್ಣ ವರ್ಗಾವಣೆ ಎಂಬ ನೆಲೆಯಲ್ಲಿ ತಡೆ ನೀಡಿರುವುದಾಗಿ ತಿಳಿದುಬಂದಿದೆ. ಗಿರೀಶ್ ನಂದನ್ ಅವರು ಸುಮಾರು ಒಂದೂವರೆ ವರ್ಷದಿಂದ ಪುತ್ತೂರು ಎಸಿ ಆಗಿದ್ದರು. ಅವರ ವರ್ಗಾವಣೆಯ ಬಳಿಕ ಮಂಗಳೂರಿ ಕೆಎಐಡಿಬಿಯಲ್ಲಿ ಭೂಸ್ವಾಧೀನಾಧಿಕಾರಿಯಾಗಿದ್ದ ಮಹೇಶ್ಚಂದ್ರ ಅವರು ಬಂದು ಅಧಿಕಾರ ವಹಿಸಿಕೊಂಡಿದ್ದಾರೆ. ಇದೀಗ ಕೆಎಟಿಯಿಂದ ವರ್ಗಾವಣೆ ಆದೇಶಕ್ಕೆ ತಡೆ ದೊರೆತಿರುವುದರಿಂದ ಮುಂದಿನ ಬೆಳವಣಿಗೆಗಳನ್ನು ಕಾದುನೋಡಬೇಕಾಗಿದೆ. ಅಡ್ವಕೇಟ್

ಪುತ್ತೂರು: ಸಹಾಯಕ ಆಯುಕ್ತ ಗಿರೀಶ್ ನಂದನ್ ವರ್ಗಾವಣೆಗೆ ತಡೆ Read More »

ಸುಳ್ಯ: ವ್ಯಕ್ತಿ ಮೇಲೆ ಹಲ್ಲೆ, ಜೀವಬೆದರಿಕೆ – ದೂರು ದಾಖಲು

ಸಮಗ್ರ ನ್ಯೂಸ್: ವ್ಯಕ್ತಿಯೋರ್ವರಿಗೆ ಹಲ್ಲೆ ನಡೆಸಿ ಜೀವಬೆದರಿಕೆ ಒಡ್ಡಿರುವ ಬಗ್ಗೆ ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸುಳ್ಯ ತಾಲೂಕಿನ ಕಸಬಾ ಗ್ರಾಮದ ಗಾಂಧಿನಗರದ ನಾವೂರು ನಿವಾಸಿ ಅಬ್ದುಲ್ ನಾಜೀರ್ (31) ಈ ಬಗ್ಗೆ ದೂರು ನೀಡಿದ್ದಾರೆ. ಅಬ್ದುಲ್ ನಾಜೀರ್ ಆರೋಪಿ ಶಾಬೀತ್ ಎಂಬವರು ಸುಳ್ಯ ತಾಲೂಕು ಸುಳ್ಯ ಕಸಬಾ ಗ್ರಾಮದ ಮೊಗರ್ಪಣೆ, ಹಳೆಗೇಟು ಎಂಬಲ್ಲಿ ಆಟೋ ಕ್ಯಾರ್ ಎಂಬ ಸರ್ವಿಸ್ ಸ್ಟೇಷನ್ ಅನ್ನು ಪಾರ್ಟನರ್ ಶೀಫ್ ನಲ್ಲಿ ವ್ಯವಹಾರ ನಡೆಸುತ್ತಿದ್ದು, ತಮ್ಮ ವ್ಯವಹಾರದಲ್ಲಿ ತಮ್ಮೊಳಗೆ ತಕರಾರು

ಸುಳ್ಯ: ವ್ಯಕ್ತಿ ಮೇಲೆ ಹಲ್ಲೆ, ಜೀವಬೆದರಿಕೆ – ದೂರು ದಾಖಲು Read More »

ಬೆಳ್ತಂಗಡಿ: ಸೈನೇಡ್ ಸೇವಿಸಿ ಯುವಕ ಆತ್ಮಹತ್ಯೆ

ಸಮಗ್ರ ನ್ಯೂಸ್: ಯುವಕನೋರ್ವ ಸೈನೇಡ್ ಸೇವಿಸಿ ಆತ್ಮಹತ್ಯೆಗೈದ ಘಟನೆ ಬೆಳ್ತಂಗಡಿ ತಾಲೂಕಿನ ಪುಂಜಾಲಕಟ್ಟೆಯಲ್ಲಿ ಗುರುವಾರ ಸಂಭವಿಸಿದೆ. ಇಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರದ ಬಳಿಯ ನಿವಾಸಿ ಗಣೇಶ ಆಚಾರ್ಯ ಅವರ ಪುತ್ರ ರೂಪೇಶ್ ಆಚಾರ್ಯ(31) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಸ್ವರ್ಣ ಕುಸುರಿ ಕೆಲಸಗಾರರಾಗಿದ್ದ ರೂಪೇಶ್ ಅವರು ಸ್ಥಳೀಯ ಸಂಸ್ಥೆಯಲ್ಲಿ ನೌಕರರಾಗಿದ್ದು, ಇತ್ತೀಚೆಗೆ ಕೆಲಸ ಬಿಟ್ಟಿದ್ದರು. ಮದ್ಯವ್ಯಸನಿಯಾಗಿದ್ದ ಅವರು ಗುರುವಾರ ಮಧ್ಯಾಹ್ನ ತನ್ನ ಕೊಠಡಿಯಲ್ಲಿ ಸೈನೇಡ್ ಸೇವಿಸಿದ್ದರು. ಇದನ್ನು ಗಮನಿಸಿದ ಮನೆ ಮಂದಿ ಕೂಡಲೇ 108 ಅಂಬ್ಯುಲೆನ್ಸ್ ಮೂಲಕ ಮಂಗಳೂರು

ಬೆಳ್ತಂಗಡಿ: ಸೈನೇಡ್ ಸೇವಿಸಿ ಯುವಕ ಆತ್ಮಹತ್ಯೆ Read More »

ಭಾರೀ ಮಳೆ ಸಾಧ್ಯತೆ| ಕರಾವಳಿ ಸೇರಿದಂತೆ ಆರು ಜಿಲ್ಲೆಗಳಿಗೆ ಎಲ್ಲೋ‌‌‌ ಅಲರ್ಟ್

ಸಮಗ್ರ ನ್ಯೂಸ್: ರಾಜ್ಯದಲ್ಲಿ ಭಾರೀ ಮಳೆ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲೆ ಸೇರಿ 6 ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಿಸಲಾಗಿದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಕೊಡಗು ಜಿಲ್ಲೆಗೆ ‘ಯೆಲ್ಲೋ ಅಲರ್ಟ್’ ನೀಡಲಾಗಿದೆ. ಕರಾವಳಿಯ ಬಹುತೇಕ ಕಡೆ ಹಾಗೂ ದಕ್ಷಿಣ ಒಳನಾಡಿನ ಹಲವು ಕಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಕೆಲವೆಡೆ ಮಳೆಯಾಗುವ ಸಂಭವವಿದೆ ಎಂದು ಇಲಾಖೆ ತಿಳಿಸಿದೆ. ಕರಾವಳಿಯಲ್ಲಿ ಬಿರುಗಾಳಿಯ ವೇಗವು ಗಂಟೆಗೆ 40–45 ಕಿ.ಮೀ ಇಂದ

ಭಾರೀ ಮಳೆ ಸಾಧ್ಯತೆ| ಕರಾವಳಿ ಸೇರಿದಂತೆ ಆರು ಜಿಲ್ಲೆಗಳಿಗೆ ಎಲ್ಲೋ‌‌‌ ಅಲರ್ಟ್ Read More »

ಸುಳ್ಯ ನಗರ ಪಂಚಾಯತ್ ವ್ಯಾಪ್ತಿಯ ತುರ್ತು ಸಮಸ್ಯೆಗಳಿಗೆ ಕ್ರಮ ಕೈಗೊಳ್ಳುವಂತೆ ಕಾಂಗ್ರೆಸ್ ಮುಖಂಡರಿಂದ ಮನವಿ

ಸಮಗ್ರ ನ್ಯೂಸ್: ಸುಳ್ಯ ನಗರ ಪಂಚಾಯತ್ ವ್ಯಾಪ್ತಿಯ ಇಂದಿರಾ ಕ್ಯಾಂಟೀನ್ ನಿರ್ವಹಣೆ, ದಾರಿದೀಪ ಸಮಸ್ಯೆ ಕುಡಿಯುವ ನೀರಿನ ಪೈಪ್ ಲೈನ್ ಸಮಸ್ಯೆ, ಕೇರ್ಪಳದ ಹಿಂದೂ ರುಧ್ರಭೂಮಿ ನಿರ್ವಹಣೆ, ಪುರಭವನ ನಿರ್ವಹಣೆ, ಸಾರ್ವಜನಿಕ ಶೌಚಾಲಯ ಶುಚಿತ್ವ, ಮಳೆಗಾಲದ ಚರಂಡಿ ಸ್ವಚ್ಛತೆ ಸೇರಿದಂತೆ ತುರ್ತು ಸಮಸ್ಯೆಗಳಿಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ನಗರ ಪಂಚಾಯತ್ ಮುಖ್ಯಾಧಿಕಾರಿಗಳಿಗೆ ಸುಳ್ಯದ ಕಾಂಗ್ರೆಸ್ ಮುಖಂಡರಾದ ಮಾಜಿ ನಗರ ಪಂಚಾಯತ್ ಉಪಾಧ್ಯಕ್ಷ ಗೋಕುಲ್ ದಾಸ್, ನಗರ ಕಾಂಗ್ರೇಸ್ ಮಾಜಿ ಅಧ್ಯಕ್ಷ ಶಶಿಧರ್ ಎಂ ಜೆ, ಭವಾನಿಶಂಕರ್ ಕಲ್ಮಡ್ಕ,

ಸುಳ್ಯ ನಗರ ಪಂಚಾಯತ್ ವ್ಯಾಪ್ತಿಯ ತುರ್ತು ಸಮಸ್ಯೆಗಳಿಗೆ ಕ್ರಮ ಕೈಗೊಳ್ಳುವಂತೆ ಕಾಂಗ್ರೆಸ್ ಮುಖಂಡರಿಂದ ಮನವಿ Read More »

ಜು. 19: ಸುಳ್ಯ ತಾ| ಕಾರ್ಯನಿರತ ಪತ್ರಕರ್ತರ ಸಂಘದ ಬೆಳ್ಳಿ ಹಬ್ಬ ಆಚರಣೆ| ಮಾಧ್ಯಮ ಸಮ್ಮಿಲನ; ಪತ್ರಕರ್ತರ ಸ್ನೇಹ ಸಂಗಮ

ಸಮಗ್ರ ನ್ಯೂಸ್: ಸುಳ್ಯ ತಾಲೂಕಿನಲ್ಲಿ 25 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರುವ ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಬೆಳ್ಳಿ ಹಬ್ಬ ಆಚರಣೆ ಜು.19 ರಂದು ಬಂಟರ ಭವನ ಕೇರ್ಪಳ, ಸುಳ್ಯ ಇಲ್ಲಿ ನಡೆಯಲಿದ್ದು ಈ ಪ್ರಯುಕ್ತ ರಾಜ್ಯದ ವಿವಿಧ ಕಡೆ ಕಾರ್ಯನಿರ್ವಹಿಸುತ್ತಿರುವ ಸುಳ್ಯದ ಪತ್ರಕರ್ತರ ಸ್ನೇಹ ಸಂಗಮ‌ ಸಂಜೆ 3ರಿಂದ ನಡೆಯಲಿದೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ದಯಾನಂದ ಕೊರತ್ತೋಡಿ, ಮುಖ್ಯ ಅತಿಥಿಯಾಗಿ ರಾಷ್ಟ್ರೀಯ ಕಾರ್ಯಕಾರಿಣಿ ಸಮಿತಿ ಸದಸ್ಯರಾದ ಮತ್ತು ಭಾರತೀಯ ಕಾರ್ಯನಿರತ

ಜು. 19: ಸುಳ್ಯ ತಾ| ಕಾರ್ಯನಿರತ ಪತ್ರಕರ್ತರ ಸಂಘದ ಬೆಳ್ಳಿ ಹಬ್ಬ ಆಚರಣೆ| ಮಾಧ್ಯಮ ಸಮ್ಮಿಲನ; ಪತ್ರಕರ್ತರ ಸ್ನೇಹ ಸಂಗಮ Read More »

ಉಳ್ಳಾಲ: ಶಾಲೆಯ ಪಕ್ಕದಲ್ಲೆ ತಲೆ ಎತ್ತಿದ ಬಾರ್‌|ವಿಧ್ಯಾರ್ಥಿಗಳಿಂದ ಪ್ರತಿಭಟನೆ

ಸಮಗ್ರ ನ್ಯೂಸ್: ಸಾವಿರಾರು ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿರುವ ಶಾಲೆಯ ಆವರಣದ ಪಕ್ಕದಲ್ಲೇ ಬಾರ್ & ರೆಸ್ಟೋರೆಂಟ್ ಪ್ರಾರಂಭವಾದ ಬೆನ್ನಲ್ಲೇ ವಿಧ್ಯಾರ್ಥಿಗಳು ಪ್ರತಿಭಟನೆಗಿಳಿದ ಘಟನೆ ಬಾಳೆಪುಣಿ ಗ್ರಾಮದ ಪುಣ್ಯಕೋಟಿ ನಗರದಲ್ಲಿ ನಡೆದಿದೆ. ನಗರದ ಶಾರದಾ ಗಣಪತಿ ವಿದ್ಯಾಕೇಂದ್ರದ ಆವರಣದ‌ ಬಳಿಯಲ್ಲೇ ಬಾರ್& ರೆಸ್ಟೋರೆಂಟ್ ನಿರ್ಮಾಣಗೊಂಡಿದ್ದು, ಇದೀಗ ಮದ್ಯ ಕೇಂದ್ರವನ್ನು ಸ್ಥಳಾಂತರಿಸುವಂತೆ ವಿದ್ಯಾರ್ಥಿಗಳು ಜಿಟಿ, ಜಿಟಿ ಮಳೆಯ ನಡುವಲ್ಲೂ ಪಂಚಾಯತ್ ಕಚೇರಿಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಿಯಮಗಳನ್ನು ಗಾಳಿಗೆ ತೂರಿ ಈ ಬಾರ್ ಗೆ ಸ್ಥಳೀಯ ಪಂಚಾಯತ್ ಆಡಳಿತವು

ಉಳ್ಳಾಲ: ಶಾಲೆಯ ಪಕ್ಕದಲ್ಲೆ ತಲೆ ಎತ್ತಿದ ಬಾರ್‌|ವಿಧ್ಯಾರ್ಥಿಗಳಿಂದ ಪ್ರತಿಭಟನೆ Read More »

ಸುಳ್ಯದ ಕುಮ್ ಕುಮ್ ಪ್ಯಾಷನ್ ನಲ್ಲಿ ಮಾನ್ಸೂನ್ ಸೇಲ್|ಈಗಲೇ ಭೇಟಿ ನೀಡಿ ಉತ್ತಮ ಆಯ್ಕೆ ನಿಮ್ಮದಾಗಿಸಿ

ಸಮಗ್ರ ನ್ಯೂಸ್: ಸುಳ್ಯದ ಪ್ರತಿಷ್ಠಿತ ಬಟ್ಟೆ ಮಳಿಗೆಯಲ್ಲಿ ಉತ್ತಮ ಗುಣಮಟ್ಟದ ಬಟ್ಟೆಗಳ wholesale ಮಾರಾಟ. ಬ್ರಾಂಡೆಡ್ ಮತ್ತು ಕಲರ್ ಫುಲ್ ಬಟ್ಟೆಗಳನ್ನು ಆಕರ್ಷಕ ದರದಲ್ಲಿ ಮಾರಾಟ ಮಾಡಲಾಗುತ್ತಿದೆ ಎಂದು ಮಾಲಕರು ತಿಳಿಸಿದ್ದಾರೆ. ಈ ಮಳೆಗಾಲದಲ್ಲಿ ಓಡಾಟ ಮಾಡಲು, ಹೊಸ ಬಟ್ಟೆಗಳ ಆಯ್ಕೆಗಾಗಿ ಬಟ್ಟೆ ಮಳಿಗೆಯನ್ನು ಹುಡುಕುತ್ತಿದ್ದೀರಾ….? ಹಾಗಿದ್ರೆ, ಉತ್ತಮ ಗುಣಮಟ್ಟದ ನವನವೀನ ಶೈಲಿಯ ಸಾರಿ, ನೈಟಿ, ಸ್ಕರ್ಟ್, ಲೆಗ್ಗಿನ್ಸ್, ಫ್ಲಜಾ ಪ್ಯಾಂಟ್, ಲೇಡಿಸ್ ಟಾಪ್, ರೆಡಿಮೇಡ್ ಬ್ಲೌಸ್, ಚೂಡಿದಾರ್, ಮಕ್ಕಳ ಟಾಪ್, ಪುರುಷರ ಪ್ಯಾಂಟ್ ಮತ್ತು ಕಾಟನ್

ಸುಳ್ಯದ ಕುಮ್ ಕುಮ್ ಪ್ಯಾಷನ್ ನಲ್ಲಿ ಮಾನ್ಸೂನ್ ಸೇಲ್|ಈಗಲೇ ಭೇಟಿ ನೀಡಿ ಉತ್ತಮ ಆಯ್ಕೆ ನಿಮ್ಮದಾಗಿಸಿ Read More »