ಕರಾವಳಿ

ಯೋಗಾಸನ ಚಾಂಪಿಯನ್ ಶಿಪ್ ನಲ್ಲಿ ಗೌರಿತಾ ಕೆ.ಜಿ. ಐದನೇ ಸ್ಥಾನ

ಸಮಗ್ರ ನ್ಯೂಸ್: 9ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಪ್ರಯುಕ್ತ ಜು.9 ರಂದು ಕೋರಮಂಗಲ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ 9ನೇ ಯೋಗಾಸನ ಚಾಂಪಿಯನ್ ಶಿಪ್ ನಲ್ಲಿ 9 ವರ್ಷದ ಒಳಗಿನ ಬಾಲಕಿಯರ ವಿಭಾಗದಲ್ಲಿ “ನಿರಂತರ ಯೋಗ ತರಬೇತಿ ಕೇಂದ್ರ” ಸುಬ್ರಹ್ಮಣ್ಯದ ವಿದ್ಯಾರ್ಥಿನಿ ಗೌರಿತಾ ಕೆ.ಜಿ. 5ನೇ ಸ್ಥಾನಗಳಿಸುತ್ತಾರೆ. ಇವರು ಕುಮಾರಸ್ವಾಮಿ ವಿದ್ಯಾಲಯ ಸುಬ್ರಹ್ಮಣ್ಯದಲ್ಲಿ 3ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಯೋಗ ಗುರು ಶರತ್ ಮರ್ಗಿಲಡ್ಕ ಅವರು ಮಾರ್ಗದರ್ಶನ ನೀಡಿರುತ್ತಾರೆ.

ಯೋಗಾಸನ ಚಾಂಪಿಯನ್ ಶಿಪ್ ನಲ್ಲಿ ಗೌರಿತಾ ಕೆ.ಜಿ. ಐದನೇ ಸ್ಥಾನ Read More »

ಯೋಗ ಸ್ಪರ್ಧೆಯಲ್ಲಿ ಯೋಗೇನ ಚಿತ್ತಸ್ಯ ಯೋಗ ಕೇಂದ್ರಕ್ಕೆ ರಾಷ್ಟ್ರಮಟ್ಟದ ಪ್ರಶಸ್ತಿ

ಸಮಗ್ರ ನ್ಯೂಸ್: ಬೆಂಗಳೂರಿನ ಕೋರಮಂಗಲದ ಒಳಾಂಗಣ ಕ್ರೀಡಾಂಗಣದಲ್ಲಿ ಜು.9 ರಂದು ನಡೆದ ಮುಕ್ತ ರಾಷ್ಟ್ರೀಯ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಯೋಗೇನ ಚಿತ್ತಸ್ಯ ಯೋಗ ಕೇಂದ್ರಕ್ಕೆ ಹಲವು ಪ್ರಶಸ್ತಿ ಲಭಿಸಿದೆ. ಶರತ್ ಅಡ್ಕಾರ್ ಹಾಗೂ ಶೋಭಾಕುಮಾರಿ ದಂಪತಿಗಳ ಪುತ್ರಿ ಸೋನಾ ಅಡ್ಕಾರ್ 9 ರಿಂದ 12ನೇ ವಯೋಮಾನದ ಬಾಲಕಿಯರ ಟ್ರೆಡಿಷನಲ್ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ. ಕುಶಾಲಪ್ಪ ಹಾಗೂ ಪುಷ್ಪಾವತಿ ದಂಪತಿಗಳ ಪುತ್ರಿ ಹಾರ್ದಿಕ ಕೆರೆಕ್ಕೋಡಿ 7ನೇ ಸ್ಥಾನ ಹಾಗೂ ಸ್ವಂತ ಆಯ್ಕೆ ವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡಿರುತ್ತಾರೆ.

ಯೋಗ ಸ್ಪರ್ಧೆಯಲ್ಲಿ ಯೋಗೇನ ಚಿತ್ತಸ್ಯ ಯೋಗ ಕೇಂದ್ರಕ್ಕೆ ರಾಷ್ಟ್ರಮಟ್ಟದ ಪ್ರಶಸ್ತಿ Read More »

ಭ್ರಷ್ಟಾಚಾರ ಅಭಿಯಾನ V/s ಜಾಹೀರಾತು ರಹಿತ ವರದಿ| ಜಾಹೀರಾತು ಮೂಲಗಳು ಭ್ರಷ್ಟಾಚಾರ ರಹಿತವಾಗಿದ್ದರೆ ಮಾತ್ರವೇ ನಿಜವಾದ ಉದ್ದೇಶ ಸಾಕಾರ : ಶೈಲೇಶ್ ಅಂಬೆಕಲ್ಲು

ಸಮಗ್ರ ನ್ಯೂಸ್: ಸುಳ್ಯ ತಾಲೂಕಿನ ಸ್ಥಳೀಯ ಪತ್ರಿಕೆಯೊಂದು ಗ್ರಾಮಸಭೆಯಲ್ಲಿ ಭ್ರಷ್ಟಾಚಾರದ ವಿರುದ್ಧ ಅಭಿಯಾನ ನಡೆಸಲು ಮುಂದಾಗಿದ್ದು, ಗ್ರಾಮ ಪಂಚಾಯತ್ ಸದಸ್ಯರೋರ್ವರು ಕಾರ್ಯಕ್ರಮದಲ್ಲಿ ಸ್ಪಷ್ಟನೆ ಕೇಳಿದ್ದಾರೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಆ ಪತ್ರಿಕೆಯ ವರದಿಗಾರರೊಂದಿಗೆ ನಡೆದ ಚರ್ಚೆ ವೇಳೆ ಜಾಹೀರಾತು ರಹಿತವಾಗಿ ಪತ್ರಿಕೆ ನಡೆಸಿ ಎಂದು ಸದಸ್ಯರು ಹೇಳಿರುವುದಾಗಿ ವರದಿಯಾಗಿದ್ದು, ಈ ಹಿನ್ನೆಲೆಯಲ್ಲಿ ಸುಳ್ಯ ತಾಲೂಕಿನ ದೇವಚಳ್ಳ ಗ್ರಾ.ಪಂ ಸದಸ್ಯ ಸ್ಪಷ್ಟನೆ ನೀಡಿದ್ದಾರೆ. ಘಟನೆಯ ವಿವರ: ಸುಳ್ಯ ತಾಲೂಕಿನ ದೇವಚಳ್ಳ ಗ್ರಾ.ಪಂ ನ ಗ್ರಾಮಸಭೆ ನಡೆದಿದ್ದು, ಸಭೆಯಲ್ಲಿ ಸ್ಥಳೀಯ

ಭ್ರಷ್ಟಾಚಾರ ಅಭಿಯಾನ V/s ಜಾಹೀರಾತು ರಹಿತ ವರದಿ| ಜಾಹೀರಾತು ಮೂಲಗಳು ಭ್ರಷ್ಟಾಚಾರ ರಹಿತವಾಗಿದ್ದರೆ ಮಾತ್ರವೇ ನಿಜವಾದ ಉದ್ದೇಶ ಸಾಕಾರ : ಶೈಲೇಶ್ ಅಂಬೆಕಲ್ಲು Read More »

ರಕ್ಷಾ ಆಯುರ್ವೇದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ “ಬ್ರಹ್ಮಗಂಟು” ಖ್ಯಾತಿಯ ಭರತ್ ಬೋಪಣ್ಣ

ಸಮಗ್ರ ನ್ಯೂಸ್: ಝೀ ಕನ್ನಡ “ಬ್ರಹ್ಮಗಂಟು” ಧಾರವಾಹಿ “ಲಕ್ಕಿ” ಖ್ಯಾತಿಯ ಬಹುಭಾಷಾ ನಾಯಕ ನಟ “ಭರತ್ ಬೋಪಣ್ಣ” ಅವರು ಇತ್ತೀಚೆಗೆ ಬೆಳ್ಳಾರೆಯ ನೆಟ್ಟಾರಿನ “ರಕ್ಷಾ ಆಯುರ್ವೇದ” ಆಸ್ಪತ್ರೆಯಲ್ಲಿ ಪಂಚಕರ್ಮ ಚಿಕಿತ್ಸೆಗಾಗಿ ದಾಖಲಾಗಿದ್ದರು. ಇವರು “ವಿಜಯಾನಂದ”, “ಡೆಮೋಪೀಸ್”, “ಗಿರಿಜಾ ಕಲ್ಯಾಣ” ಇತ್ಯಾದಿ ಕನ್ನಡ, ತೆಲುಗು, ತಮಿಳು ಸಿನಿಮಾ ಹಾಗೂ ಧಾರವಾಹಿಗಳಲ್ಲಿ ನಟಿಸಿರುವ ಪ್ರತಿಭಾನ್ವಿತ ನಟರಾಗಿದ್ದಾರೆ. ಡಿಸ್ಕ್ ಸಮಸ್ಯೆಯಿಂದ ಬಳಲುತಿದ್ದ ಇವರು ರಕ್ಷಾ ಆಯುರ್ವೇದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಚೇತರಿಸಿಕೊಂಡಿದ್ದಾರೆ. ಆಸ್ಪತ್ರೆಯಿಂದ ನಿರ್ಗಮಿಸುವ ವೇಳೆ ಆಸ್ಪತ್ರೆಯ ಸಂಸ್ಥಾಪಕ ವೈದ್ಯರಾದ ಡಾ|

ರಕ್ಷಾ ಆಯುರ್ವೇದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ “ಬ್ರಹ್ಮಗಂಟು” ಖ್ಯಾತಿಯ ಭರತ್ ಬೋಪಣ್ಣ Read More »

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ವತಿಯಿಂದ ವಿಶ್ವ ತಂಬಾಕು ವಿರೋಧಿ ದಿನಾಚರಣೆ

ಸಮಗ್ರ ನ್ಯೂಸ್: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ.ಸಿ ಟ್ರಸ್ಟ್ ಸುಳ್ಯ ತಾಲ್ಲೂಕು ಅಖಿಲ ಕರ್ನಾಟಕ ಜನ ಜಾಗೃತಿ ವೇದಿಕೆ ಮತ್ತು ಪ್ರಗತಿ ಬಂಧು, ಸ್ವಸಹಾಯ ಸಂಘಗಳ ಒಕ್ಕೂಟ ಬೆಳ್ಳಾರೆ ವಲಯದ ವತಿಯಿಂದ ವಿಶ್ವ ಮಾದಕ ವಸ್ತು ವಿರೋಧಿ ದಿನಾಚರಣೆಯನ್ನು ಬಾಳಿಲ ಒಕ್ಕೂಟದಲ್ಲಿ ಮಾಡಲಾಯಿತು. ಕಾರ್ಯ ಕ್ರಮದ ಅಧ್ಯಕ್ಷತೆಯನ್ನು ಬಾಳಿಲ ಒಕ್ಕೂಟದ ಅಧ್ಯಕ್ಷರಾದ ಶ್ರೀಮತಿ ತ್ರಿವೇಣಿ ರವರು ವಹಿಸಿದ್ದರು. ಕಾರ್ಯಕ್ರಮದ ಉದ್ಘಾಟನೆಯನ್ನು ಬೆಳ್ಳಾರೆ ವಲಯದ ವಲಯ ಅಧ್ಯಕ್ಷರು ಶ್ರೀಮತಿ ವೇದ ಶೆಟ್ಟಿ.ಹೆಚ್ ರವರು ದೀಪ ಬೆಳಗುವುದರ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ವತಿಯಿಂದ ವಿಶ್ವ ತಂಬಾಕು ವಿರೋಧಿ ದಿನಾಚರಣೆ Read More »

ಸುಳ್ಯ: ಹೊಳೆಗೆ ಬಿದ್ದು ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ

ಸಮಗ್ರ ನ್ಯೂಸ್:‌ ಆಲೆಟ್ಟಿ ಗ್ರಾಮದ ಕೂರ್ನಡ್ಕ ಎಂಬಲ್ಲಿ ಪಾಲ ದಾಟುತ್ತಿರುವ ವೇಳೆ ಕಾಲು ಸಂಕದಿಂದ ಹೊಳೆಗೆ ಬಿದ್ದು ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ. ನಾಪತ್ತೆಯಾದ ಮೂರು ದಿವಸದಿಂದ ಕಾರ್ಯಾಚರಣೆ ಮಾಡುತ್ತಿದ್ದರೂ ಮೃತದೇಹ ಪತ್ತೆಯಾಗಿರಲಿಲ್ಲ. ಇದೀಗ ನಾಲ್ಕನೇ ದಿವಸದ ಕಾರ್ಯಾಚರಣೆ ಬಳಿಕ ಪೆರಾಜೆಯ ನೆಡ್ಚಿಲ್ ಸಮೀಪದ ಕಣಿ ಎಂಬಲ್ಲಿ ಮೃತದೇಹ ಪತ್ತೆಯಾಗಿದೆ. ಅಗ್ನಿಶಾಮಕ ದಳ, ಎಸ್‌ಡಿಆಎರ್‌ ಎಫ್‌ ತಂಡ, ಅಗ್ನಿಶಾಮಕ ದಳ ಸುಳ್ಯ, ಸುಳ್ಯ ಪೊಲೀಸ್ ಠಾಣಾ ಸಿಬ್ಬಂದಿ, SKSSF ಅರಂತೋಡು ಕಲ್ಲುಗುಂಡಿ ವಿಖಾಯ ತಂಡ, ಕಂದಾಯ ಇಲಾಖೆ,

ಸುಳ್ಯ: ಹೊಳೆಗೆ ಬಿದ್ದು ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ Read More »

ಭಾರೀ ಗಾಳಿ, ಮಳೆ ಸಾಧ್ಯತೆ|ಕೊಡಗು, ಕರಾವಳಿಗೆ ಎಲ್ಲೋ ಅಲರ್ಟ್|

ಸಮಗ್ರ ನ್ಯೂಸ್: ಕರಾವಳಿ ಜಿಲ್ಲೆಗಳಲ್ಲಿ ಕಳೆದ ಒಂದು ವಾರದಿಂದಲೂ ಎಡೆಬಿಡದೆ ಸುರಿಯುತ್ತಿರುವ ಮಳೆ ರಾಯ ಮತ್ತೆ ಆರ್ಭಟಿಸುವ ಕುರಿತು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ಉಡುಪಿ, ದಕ್ಷಿಣ ಕನ್ನಡ ಮಾತ್ರವಲ್ಲದೇ ಕೊಡಗು ಜಿಲ್ಲೆಯಲ್ಲಿ ಇಂದು ಭಾರೀ ಮಳೆಯಾಗಲಿದ್ದು, ನಾಳೆ ಭಾರೀ ಗಾಳಿ ಬೀಸಲಿದೆ. ಅಲ್ಲದೇ ಜುಲೈ 13ರಿಂದ ಮತ್ತೆ ರಾಜ್ಯದಲ್ಲಿ ಭಾರೀ ಪ್ರಮಾಣದಲ್ಲಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮೂರು ದಿನಗಳ ಕಾಲ ರೆಡ್‌ ಅಲರ್ಟ್‌

ಭಾರೀ ಗಾಳಿ, ಮಳೆ ಸಾಧ್ಯತೆ|ಕೊಡಗು, ಕರಾವಳಿಗೆ ಎಲ್ಲೋ ಅಲರ್ಟ್| Read More »

ಉಳ್ಳಾಲ: ದನಗಳ ಮೇಲೆ ಹರಿದ ಕಾರು ಪಲ್ಟಿ- ನಾಲ್ವರಿಗೆ ಗಂಭೀರ ಗಾಯ

ಸಮಗ್ರ ನ್ಯೂಸ್: ರಸ್ತೆಯಲ್ಲಿ ಮಲಗಿದ್ದ ದನಗಳ ಮೇಲೆ ಕಾರೊಂದು ಹರಿದು ಪಲ್ಟಿಯಾದ ಘಟನೆ ತೊಕ್ಕೊಟ್ಟು ಸಮೀಪದ ಕುತ್ತಾರು ಪಂಡಿತ್ ಹೌಸ್ ಎಂಬಲ್ಲಿ ಇಂದು ಮುಂಜಾನೆ ನಡೆದಿದ್ದು, ಘಟನೆಯಲ್ಲಿ ನಾಲ್ವರಿಗೆ ಗಂಭೀರ ಗಾಯಗಳಾಗಿವೆ. ಬೆಳಗ್ಗಿನ ಜಾವ 3:30ರ ಸುಮಾರಿಗೆ ಈ ಅಪಘಾತ ಸಂಭವಿಸಿದೆ. ರಸ್ತೆಯಲ್ಲಿ ಮಲಗಿದ್ದ ದನಗಳ ಮೇಲೆ ವೇಗವಾಗಿದ್ದ ಕಾರು ಹರಿದ ಪರಿಣಾಮ ಈ ಅಪಘಾತ ಸಂಭವಿಸಿದೆ. ಇದರಿಂದ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಲ್ಲೇ ಉರುಳಿಬಿದ್ದಿದ್ದು, ಸಂಪೂರ್ಣ ಜಖಂಗೊಂಡಿದೆ. ಘಟನೆಯಿಂದ ಮೂರು ದನಗಳು ಸಾವಿಗೀಡಾಗಿವೆ ಎಂದು

ಉಳ್ಳಾಲ: ದನಗಳ ಮೇಲೆ ಹರಿದ ಕಾರು ಪಲ್ಟಿ- ನಾಲ್ವರಿಗೆ ಗಂಭೀರ ಗಾಯ Read More »

ಮಂಗಳೂರು: ಕೆಲಸಕ್ಕಿದ್ದ ಕಾರ್ಮಿಕನ ಕೊಲೆ|ಮಾಲೀಕ ಬಂಧನ

ಮಂಗಳೂರು : ತನ್ನ ಬಳಿ ಕೆಲಸಕ್ಕಿದ್ದ ಕಾರ್ಮಿಕನನ್ನು ಮಾಲೀಕನೇ ಬೆಂಕಿಹಚ್ಚಿ ಸುಟ್ಟು ಕೊಲೆ ಮಾಡಿರುವ ಘಟನೆ ಮಂಗಳೂರು ನಗರದ ಮುಳಿಹಿತ್ಲು ಜಂಕ್ಷನ್ ನಲ್ಲಿ ಶನಿವಾರ ನಡೆದಿದೆ. ಕೊಲೆಯಾದವನನ್ನು ಗಜ್ಞಾನ್ ಜಗು ಎಂದು ಗುರುತಿಸಲಾಗಿದ್ದು, ಅಂಗಡಿ ಮಾಲೀಕ ಪಾಂಡೇಶ್ವರ ನಿವಾಸಿ ತೌಸಿಫ್ ಹಸನ್ ( 32 ) ಕೊಲೆ ಆರೋಪಿ ಎಂದು ಪೊಲೀಸ್ ಮೂಲಗಳು ತಿಳಿಸಿವೆ.ಮುಳಿಹಿತ್ಲು ಮಾಷುಪಾ ಜನರಲ್ ಸ್ಕೋರ್ ಎಂಬ ಅಂಗಡಿಯಲ್ಲಿ ಕೆಲಸಕ್ಕಿದ್ದ ಗಜ್ಞಾನ್ ಜಗು ಎಂಬ ಕಾರ್ಮಿಕನಿಗೆ ಮಾಲೀಕ ಕ್ಷುಲ್ಲಕ ಕಾರಣಕ್ಕೆ ಬೆಂಕಿ ಹಚ್ಚಿದ್ದಾನೆ. ನಂತರ

ಮಂಗಳೂರು: ಕೆಲಸಕ್ಕಿದ್ದ ಕಾರ್ಮಿಕನ ಕೊಲೆ|ಮಾಲೀಕ ಬಂಧನ Read More »

ನೆಲ್ಯಾಡಿ: ಕಂದಕಕ್ಕೆ ಬಿದ್ದ ಲಾರಿ

ಸಮಗ್ರ ನ್ಯೂಸ್: ಹಣ್ಣಿನ ಲಾರಿಯೊಂದು ರಸ್ತೆ ಯ ಪಕ್ಕದ ಕಂದಕಕ್ಕೆ ಬಿದ್ದ ಘಟನೆ ರಾಷ್ಟ್ರೀಯ ಹೆದ್ದಾರಿ 75ರ ಬೆಂಗಳೂರು ಮಂಗಳೂರಿನ ಮಧ್ಯೆ ನೆಲ್ಯಾಡಿ ಸಮೀಪದ ಎಂಜಿರ ಎಂಬಲ್ಲಿ ‌ ಜು.9 ರಂದು ಸಂಭವಿಸಿದೆ. ಹಾಸನದಿಂದ ಮಂಗಳೂರಿಗೆ ಹಣ್ಣುಗಳನ್ನು ಹೊತ್ತೊಯ್ದ ಲಾರಿ ಎಂಜಿರ ಸಮೀಪಿಸುತ್ತಿದ್ದಂತೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಬದಿಯಲ್ಲಿ ಇರುವ ಕಂದಕಕ್ಕೆ ಬಿದ್ದಿದೆ. ಲಾರಿಯಲ್ಲಿ ಚಾಲಕ ಹಾಗೂ ಕ್ಲೀನರ್ ಇಬ್ಬರೂ ಇದ್ದು ಅದೃಷ್ಟವಶಾತ್ ಪಾರಾಗಿದ್ದಾರೆ.

ನೆಲ್ಯಾಡಿ: ಕಂದಕಕ್ಕೆ ಬಿದ್ದ ಲಾರಿ Read More »