ಕರಾವಳಿ

ಚಾರ್ಮಾಡಿ ಘಾಟ್ ನಲ್ಲಿ ಬಸ್ ಗಳ ಮುಖಾಮುಖಿ ಡಿಕ್ಕಿ| ಚಾಲಕರು ಗಂಭೀರ; ನಡೆದೇ ಸಾಗಿದ ಪ್ರಯಾಣಿಕರು

ಸಮಗ್ರ ನ್ಯೂಸ್: ದಟ್ಟವಾದ ಮಂಜು ಆವರಿಸಿದ ಪರಿಣಾಮ ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯಲ್ಲಿ ಎರಡು ಸರ್ಕಾರಿ ಬಸ್ಸುಗಳ ನಡುವೆ ಅಪಘಾತ ಸಂಭವಿಸಿದ್ದು, ಇಬ್ಬರು ಚಾಲಕರ ಕಾಲುಗಳಿಗೆ ತೀವ್ರ ಗಾಯಗಳಾಗಿದ್ದು, ಮಂಗಳೂರು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಧರ್ಮಸ್ಥಳದಿಂದ ಚಿತ್ರದುರ್ಗಕ್ಕೆ ಸಾಗುತ್ತಿದ್ದ ಬಸ್ ಹುಬ್ಬಳ್ಳಿಯಿಂದ ಧರ್ಮಸ್ಥಳಕ್ಕೆ ಸಾಗುತ್ತಿದ್ದ ಬಸ್ ಗಳು ಇಕ್ಕಟ್ಟಾದ ರಸ್ತೆಯಲ್ಲಿ ಶುಕ್ರವಾರ ಸಂಜೆ ಮುಖಾಮುಖಿ ಢಿಕ್ಕಿಯಾಗಿ ಅವಘಡ ಸಂಭವಿಸಿದೆ. ಅಪಘಾತಕ್ಕೀಡಾದ ಬಸ್ಸುಗಳಲ್ಲಿ 80ಕ್ಕೂ ಹೆಚ್ಚು ಜನ ಪ್ರವಾಸಿಗರು ಇದ್ದರು. ಅಪಘಾತಕ್ಕೆ ರಸ್ತೆ ಕಾಮಗಾರಿ ಕಾರಣ […]

ಚಾರ್ಮಾಡಿ ಘಾಟ್ ನಲ್ಲಿ ಬಸ್ ಗಳ ಮುಖಾಮುಖಿ ಡಿಕ್ಕಿ| ಚಾಲಕರು ಗಂಭೀರ; ನಡೆದೇ ಸಾಗಿದ ಪ್ರಯಾಣಿಕರು Read More »

ಬೆಳ್ಳಾರೆ: ನೂತನ ಶ್ರೀಮಾತಾ ಸ್ವಸಹಾಯ ಸಂಘ ಉದ್ಘಾಟನೆ

ಸಮಗ್ರ ನ್ಯೂಸ್: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸುಳ್ಯ ತಾಲೂಕು, ಬೆಳ್ಳಾರೆ ವಲಯದ ದೇವರಕಾನ ಒಕ್ಕೂಟದಲ್ಲಿ ನೂತನವಾಗಿ ಶ್ರೀಮಾತಾ ಸ್ವಸಹಾಯ ಸಂಘವು ಜು.7ರಂದು ಉದ್ಘಾಟನೆಗೊಂಡಿತು. ಪ್ರಬಂಧಕರಾಗಿ ಅಜೇಯಕೃಷ್ಣ. ಕೆ, ಸಂಯೋಜಕರಾಗಿ ದೀಕ್ಷಿತ್. ಎಂ, ಕೋಶಾಧಿಕಾರಿಯಾಗಿ ವಿನೋದ್.ಕೆ ಯವರು ಆಯ್ಕೆಗೊಂಡರು.ವಲಯ ಮೇಲ್ವಿಚಾರಕರಾದ ಗೋಪಾಲಕೃಷ್ಣರವರು ಯೋಜನೆಯ, ಹಾಗೂ ಸಂಘದ ನಿರ್ವಹಣೆ ಬಗ್ಗೆ ಮಾಹಿತಿ ಮಾರ್ಗದರ್ಶನ ನೀಡಿದರು. ಸಂಘದ ದಾಖಲಾತಿಯನ್ನು ಪ್ರಗತಿಪರ ಕೃಷಿಕರಾದ ಬಾಲಕೃಷ್ಣರವರು ಸಂಘದ ದಾಖಲಾತಿಯನ್ನು ಸಂಘಕ್ಕೆ ಹಸ್ತಾಂತರಿಸಿದರು. ಈ ಸಂಧರ್ಭದಲ್ಲಿ ಸೇವಾಪ್ರತಿನಿಧಿಯಾದ ಶ್ರೀಮತಿ ಯಶೋಧ, ಹಾಗೂ ಸಂಘದ

ಬೆಳ್ಳಾರೆ: ನೂತನ ಶ್ರೀಮಾತಾ ಸ್ವಸಹಾಯ ಸಂಘ ಉದ್ಘಾಟನೆ Read More »

ಬೆಳ್ತಂಗಡಿ- ಗಡಾಯಿಕಲ್ಲು ಚಾರಣಕ್ಕೆ ಬ್ರೇಕ್

ಸಮಗ್ರ ನ್ಯೂಸ್: ಐತಿಹಾಸಿಕ ಪ್ರವಾಸಿ ತಾಣವಾಗಿರುವ ಬೆಳ್ತಂಗಡಿಯ ನಡ ಗ್ರಾಮದಲ್ಲಿರುವ ಸಾವಿರ ಅಡಿ ಎತ್ತರದ ಗಡಾಯಿಕಲ್ಲು ಚಾರಣಕ್ಕೆ ತಾತ್ಕಾಲಿಕ ಬ್ರೇಕ್ ಹಾಕಲಾಗಿದೆ. ಧಾರಾಕಾರ ಸುರಿಯುತ್ತಿರುವ ಮಳೆಯಿಂದ ಬಂಡೆಯಲ್ಲಿ ನೀರು ಹರಿಯುತ್ತಿದ್ದು, ಮೆಟ್ಟಿಲುಗಳಲ್ಲಿ ಪಾಚಿ ಬೆಳೆದು ಜಾರುವ ಸಾಧ್ಯತೆಗಳು ಇರುವುದರಿಂದ ಜು.7ರಿಂದ ಮುಂದಿನ ಆದೇಶದ ತನಕ ಪ್ರವೇಶವನ್ನು ನಿಷೇಧಿಸಲಾಗಿದೆ ಎಂದು ಬೆಳ್ತಂಗಡಿ ವನ್ಯಜೀವಿ ಇಲಾಖೆಯ ವಲಯಾರಣ್ಯಧಿಕಾರಿ ಸ್ವಾತಿ ಅವರು ತಿಳಿಸಿದ್ದಾರೆ. ಧರ್ಮಸ್ಥಳಕ್ಕೆ ತುಂಬ ಹತ್ತಿರದಲ್ಲಿಯೇ ಗಡಾಯಿಕಲ್ಲು ಕೋಟೆಯಿದ್ದು ಇದು ಕುದುರೇಮುಖ ಪರ್ವತ ಶ್ರೇಣಿಯ ಭಾಗವಾಗಿದೆ. ಚಾರಣಪ್ರಿಯರು ತುಂಬಾ ಇಷ್ಟಪಡುವ

ಬೆಳ್ತಂಗಡಿ- ಗಡಾಯಿಕಲ್ಲು ಚಾರಣಕ್ಕೆ ಬ್ರೇಕ್ Read More »

ರಾಜ್ಯಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಯೋಗೇನ ಚಿತ್ತಸ್ಯ ಯೋಗ ಕೇಂದ್ರಕ್ಕೆ ಪ್ರಶಸ್ತಿ

ಸಮಗ್ರ ನ್ಯೂಸ್: ಸ್ನೇಹಮಯಿ ವಿವೇಕಾನಂದ ಯೋಗ ಕೇಂದ್ರ ಕಡೂರು ಇವರು ನಡೆಸಿದ ಮುಕ್ತ ರಾಜ್ಯಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಸುಳ್ಯದ ಯೋಗೇನ ಚಿತ್ತಸ್ಯ ಯೋಗ ಕೇಂದ್ರದ ಯೋಗಪಟುಗಳಿಗೆ ಹಲವು ಪ್ರಶಸ್ತಿ ಲಭಿಸಿದೆ. 8 ರಿಂದ 12ನೇ ವಯೋಮಾನದ ಬಾಲಕರ ವಿಭಾಗದಲ್ಲಿ ತನುಷ್ ಕೆ ಆರ್ ದ್ವಿತೀಯ ಸ್ಥಾನ, ತನುಷ್ ಮೋಂಟಡ್ಕ ತೃತೀಯ ಸ್ಥಾನ, 5 ರಿಂದ 7ನೇ ವಯೋಮಾನದ ಬಾಲಕರ ವಿಭಾಗದಲ್ಲಿ ಆಶ್ರಿತ್ ಎ.ಸಿ ಚತುರ್ಥ ಸ್ಥಾನ, 8 ರಿಂದ 12ನೇ ವಯೋಮಾನದ ಬಾಲಕಿಯರ ವಿಭಾಗದಲ್ಲಿ ಸೋನಾ ಅಡ್ಕಾರ್

ರಾಜ್ಯಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಯೋಗೇನ ಚಿತ್ತಸ್ಯ ಯೋಗ ಕೇಂದ್ರಕ್ಕೆ ಪ್ರಶಸ್ತಿ Read More »

ಜು.09: ಬೆಳ್ತಂಗಡಿಯ ಸೋಮಂತಡ್ಕದಲ್ಲಿ ವೆಂಕಟರಮಣ ಕ್ರೆಡಿಟ್ ಕೋ.ಆ. ಸೊಸೈಟಿಯ 22ನೇ ಶಾಖೆ ಲೋಕಾರ್ಪಣೆ| ಶಾಸಕ ಹರೀಶ್ ಪೂಂಜಾ ಸೇರಿ ಹಲವು ಗಣ್ಯರು ಭಾಗಿ

ಸಮಗ್ರ ನ್ಯೂಸ್: ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ನಿ, ಸುಳ್ಯ ಇದರ ನೂತನ 22 ನೇ ಶಾಖೆಯ ಉದ್ಘಾಟನೆ ಜು.9 ರಂದು ಬೆಳ್ತಂಗಡಿ ತಾಲೂಕಿನ ಸೋಮಂತಡ್ಕದ ಡಿ’ಸೋಜಾ ಕಾಂಪ್ಲೆಕ್ಸ್ ನಲ್ಲಿ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಪಿ.ಸಿ.ಜಯರಾಮ ಹೇಳಿದರು. ಅವರು ಜು.5 ರಂದು ಬೆಳ್ತಂಗಡಿ ಪತ್ರಿಕಾ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಸಂಘವು 1997ರಲ್ಲಿ ಗೌಡರ ಯುವ ಸೇವಾ ಸಂಘ ಇವರಿಂದ ಪ್ರವರ್ತಿಸಲ್ಪಟ್ಟಿದ್ದು ಪ್ರಾರಂಭದಲ್ಲಿ 435 ಜನರಿಂದ ಪ್ರಾರಂಭವಾದ ಈ ಸಂಘದಲ್ಲಿ ಪ್ರಸ್ತುತ 17,596

ಜು.09: ಬೆಳ್ತಂಗಡಿಯ ಸೋಮಂತಡ್ಕದಲ್ಲಿ ವೆಂಕಟರಮಣ ಕ್ರೆಡಿಟ್ ಕೋ.ಆ. ಸೊಸೈಟಿಯ 22ನೇ ಶಾಖೆ ಲೋಕಾರ್ಪಣೆ| ಶಾಸಕ ಹರೀಶ್ ಪೂಂಜಾ ಸೇರಿ ಹಲವು ಗಣ್ಯರು ಭಾಗಿ Read More »

ಬುರ್ಖಾದೊಳಗೆ ಅವಳಲ್ಲ ಅವನು! ಉಚಿತ ಪ್ರಯಾಣದ ಆಸೆಯಿಂದ ಪೇಚಿಗೆ ಸಿಲುಕಿದ ಆತ!!

ಸಮಗ್ರ ನ್ಯೂಸ್: ಸರ್ಕಾರದ ಯೋಜನೆಗಳನ್ನು ಪಡೆಯಲು ಜನರು ನಕಲಿ ಆಧಾರ್, ವೋಟರ್ ಐಡಿ ಸೇರಿದಂತೆ ಅನೇಕ ಖೊಟ್ಟಿ ದಾಖಲೆಗಳನ್ನು ಸೃಷ್ಟಿಸಿ ಸಿಕ್ಕಿಬಿದ್ದ ಸಾಕಷ್ಟು ನಿದರ್ಶನಗಳಿವೆ. ಅಂತಹುದೇ ಮತ್ತೊಂದು ಪ್ರಸಂಗ ಸಂಶಿಯಲ್ಲಿ ನಡೆದಿದೆ. ಸಂಶಿಯ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದಲ್ಲಿ ಗುರುವಾರ ಬುರ್ಖಾ ತೊಟ್ಟು ಕುಳಿತಿದ್ದ ವ್ಯಕ್ತಿಯನ್ನು ಗ್ರಾಮಸ್ಥರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಬಸ್‌ನಲ್ಲಿ ಉಚಿತವಾಗಿ ಪ್ರಯಾಣಿಸಲು ಮಾಡಿರುವ ತಂತ್ರ ಎಂದು ಅನುಮಾನಿಸಿ ಹಿಡಿದಿದ್ದಾರೆ. ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಬುರ್ಖಾ ತೊಟ್ಟಿದ್ದ ವ್ಯಕ್ತಿ ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ

ಬುರ್ಖಾದೊಳಗೆ ಅವಳಲ್ಲ ಅವನು! ಉಚಿತ ಪ್ರಯಾಣದ ಆಸೆಯಿಂದ ಪೇಚಿಗೆ ಸಿಲುಕಿದ ಆತ!! Read More »

ಭ್ರಷ್ಟ ಅಧಿಕಾರಿ ಅಜಿತ್ ರೈ ನ್ಯಾಯಾಂಗ ಬಂಧನಕ್ಕೆ ‌ಕೋರ್ಟ್‌ ಆದೇಶ

ಸಮಗ್ರ ವಾರ್ತೆ: ಅಕ್ರಮ ಆಸ್ತಿ ಗಳಿಕೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರ ವಶದಲ್ಲಿದ್ದ ಅಜಿತ್ ರೈ ಯನ್ನು ಕೋರ್ಟ್ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶ ಹೊರಡಿಸಿದೆ. ಲೋಕಾಯುಕ್ತ ಕಸ್ಟಡಿ ಅವಧಿ ಜು.6ಕ್ಕೆ ಮುಕ್ತಾಯವಾದ ಹಿನ್ನೆಲೆ ಅಜಿತ್ ರೈ ಅವರನ್ನು ಇಂದು ಕೋರ್ಟ್ಗೆ ಹಾಜರುಪಡಿಸಿದ ಲೋಕಾಯುಕ್ತ ಅಧಿಕಾರಿಗಳು, ಮತ್ತೆ ಕಸ್ಟಡಿಗೆ ನೀಡುವಂತೆ ಮನವಿ ಮಾಡಿದ್ದರು. ಆದರೆ ವಿಚಾರಣೆ ನಡೆಸಿದ ಕೋರ್ಟ್ ‘ಅಜಿತ್ ರೈ’ ಯನ್ನು ನ್ಯಾಯಾಂಗ ವಶಕ್ಕೆ ನೀಡಿದ ವಿಶೇಷ ನ್ಯಾಯಾಲಯ ಜುಲೈ 11 ಕ್ಕೆ ವಿಚಾರಣೆ

ಭ್ರಷ್ಟ ಅಧಿಕಾರಿ ಅಜಿತ್ ರೈ ನ್ಯಾಯಾಂಗ ಬಂಧನಕ್ಕೆ ‌ಕೋರ್ಟ್‌ ಆದೇಶ Read More »

ದಶಪಥ ಹೆದ್ದಾರಿಯಲ್ಲಿ ವ್ಹೀಲಿಂಗ್ ಹುಚ್ಚಾಟ| ನಾಲ್ವರನ್ನು ಬಂಧಿಸಿ ಕೇಸ್ ಜಡಿದ ಪೊಲೀಸರು

ಸಮಗ್ರ ನ್ಯೂಸ್: ಬೆಂಗಳೂರು- ಮೈಸೂರು ದಶಪಥ ಹೆದ್ದಾರಿಯ ಪ್ಲೈ ಓವರ್ ಮೇಲೆ ಬೈಕ್ ವೀಲಿಂಗ್ ಮಾಡಿ ದುಸ್ಸಾಹಸ ತೋರಿದ್ದ ನಾಲ್ವರು ಪುಂಡರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರು ಮೊಹಮದ್ ಹುಸೇನ್, ವಾಸೀಂ ಖಾನ್, ಮುಜಾಮೀನ್, ಸುಲ್ತಾನ್ ಎಂದು ಗುರುತಿಸಲಾಗಿದೆ. ಓನ್ ವೇ ಯಲ್ಲಿ ಹುಡುಗಿಯರೊಂದಿಗೆ ವ್ಹೀಲಿಂಗ್ ಮಾಡಿ ಹುಚ್ಚಾಟ ತೋರಿದ್ದರು ಮಾತ್ರವಲ್ಲದೆ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದರು. ಕುಂಬಳಗೋಡು ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸಾಮಾಜಿಕ ಜಾಲತಾಣದಲ್ಲಿನ ವಿಡಿಯೋ ಆಧರಿಸಿ ನಾಲ್ವರ ಮೇಲೆ ಮೋಟಾರ್ ವೆಹಿಕಲ್ ಆಕ್ಟ್

ದಶಪಥ ಹೆದ್ದಾರಿಯಲ್ಲಿ ವ್ಹೀಲಿಂಗ್ ಹುಚ್ಚಾಟ| ನಾಲ್ವರನ್ನು ಬಂಧಿಸಿ ಕೇಸ್ ಜಡಿದ ಪೊಲೀಸರು Read More »

ಜು. 8ರಂದು ಮಂಗಳೂರಿನ ಕೆಲವೆಡೆ ನಿಷೇದಾಜ್ಞೆ ಜಾರಿ

ಸಮಗ್ರ ನ್ಯೂಸ್: ಜು.8ರಂದು ಕರ್ನಾಟಕ ಭೂ ದಾಖಲೆಗಳ ಇಲಾಖೆ ವತಿಯಿಂದ ಲೈಸಸ್ಸ್ಡ್ ಸರ್ವೆಯರ್ ಆನ್ಲೈನ್ ಪರೀಕ್ಷೆ ಮೂಡುಬಿದರೆಯ ಯೆನಪೋಯ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಹಾಗೂ ಮಂಗಳೂರಿನ ಮಂಗಳೂರು ಮಣಿಪಾಲ್ ಇನ್ಸ್ಟಿಟ್ಯೂಟ್ ಆಫ್ ಕಂಪ್ಯೂಟರ್ ಎಜುಕೇಶನ್ ನಲ್ಲಿ ನಡೆಯಲಿದೆ. ಈ ಪರೀಕ್ಷೆಗಳು ಸುಗಮವಾಗಿ ನಡೆಯಲು ಅನುಕೂಲವಾಗುವಂತೆ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀಟರ್ ವ್ಯಾಪ್ತಿಯ ಪ್ರದೇಶದಲ್ಲಿ ಸಿ ಆರ್ ಪಿ ಸಿ ಕಲಂ 144 ರಂತೆ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಉಪ ಪೊಲೀಸ್ ಆಯುಕ್ತರು ಹಾಗೂ ವಿಶೇಷ

ಜು. 8ರಂದು ಮಂಗಳೂರಿನ ಕೆಲವೆಡೆ ನಿಷೇದಾಜ್ಞೆ ಜಾರಿ Read More »

ಅಬ್ಬರಿಸಿದ ಪುನರ್ವಸು ಮಳೆ| ಕರಾವಳಿ, ಮಲೆನಾಡಿಗೆ ಜಲ ಕಂಟಕ| ಇಂದೂ ಹಲವು ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ

ಸಮಗ್ರ ವಾರ್ತೆ: ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಮಳೆಯ ರುದ್ರ ನರ್ತನದಿಂದ ಬದುಕು ಮೂರಾಬಟ್ಟೆಯಾಗಿದೆ. ಇಡೀ ಕರಾವಳಿಯನ್ನು ಮಳೆ ಆಪೋಷನ ಪಡೆದಿದ್ದು ಎಲ್ಲೆಂದರಲ್ಲಿ ಜಲರಾಶಿಯೇ ಕಂಡುಬರುತ್ತಿದೆ.ಈ ನಡುವೆ ಮಲೆನಾಡು ಭಾಗದಲ್ಲಿ ಗುಡ್ಡ ಕುಸಿತ ಮತ್ತು ರಸ್ತೆ ಕುಸಿತವೂ ಆರಂಭವಾಗಿದ್ದು, ಅಪಾಯ ಎದುರಾಗಿದೆ. ಮುಂಜಾಗ್ರತಾ ಕ್ರಮವಾಗಿ ಹಲವು ಜಿಲ್ಲೆಗಳಲ್ಲಿ ಶಾಲೆ ಹಾಗೂ ಪಿಯು ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲೂಕಿನ ಕಲ್ಲಪ್ಪಳ್ಳಿಯಲ್ಲಿ ರಸ್ತೆ ಮೇಲೆ ಗುಡ್ಡ ಕುಸಿತದ ಪರಿಣಾಮ ಸಂಚಾರ ಬಂದ್ ಆಗಿದೆ.

ಅಬ್ಬರಿಸಿದ ಪುನರ್ವಸು ಮಳೆ| ಕರಾವಳಿ, ಮಲೆನಾಡಿಗೆ ಜಲ ಕಂಟಕ| ಇಂದೂ ಹಲವು ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ Read More »