ಕರಾವಳಿ

ಕೊಡಗು: ವಿಶ್ವ ಹಿಂದೂ ಪರಿಷತ್ ಮುಖಂಡನಿಗೆ ನಕ್ಸಲ್ ಬೆದರಿಕೆ

ಸಮಗ್ರ ನ್ಯೂಸ್: ಕೊಡಗು ಜಿಲ್ಲೆಯ ವಿಶ್ವ ಹಿಂದೂ ಪರಿಷತ್ ಜಿಲ್ಲಾಧ್ಯಕ್ಷ ಹಾಗೂ ವಕೀಲ ಕೃಷ್ಣಮೂರ್ತಿ ಅವರಿಗೆ ಬೆದರಿಕೆ ಬಂದಿದ್ದು ಬೆದರಿಕೆ ಪತ್ರ ಕೊನೆಯಲ್ಲಿ ನಕ್ಸಲ್ ಬಾರಿ ಜಿಂದಾಬಾದ್ ಎಂಬ ಪದ ಉಲ್ಲೇಖವಾಗಿದ್ದು ಈ ಬಗ್ಗೆ ಕೃಷ್ಣಮೂರ್ತಿ ಮಡಿಕೇರಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಪೋಸ್ಟ್ ನಲ್ಲಿ ಬೆದರಿಕೆ ಪತ್ರ ಬಂದಿದ್ದು ಈ ಪತ್ರ ಓದಲು ನೀನು ಬದುಕಿರುವುದಕ್ಕೆ ಅಭಿನಂದನೆ ಗೌರಿ ಕೊಂದವರಿಗೆ ನಮ್ಮ ಸರಕಾರ ಇದ್ದಾಗ ಶಿಕ್ಷೆ ನೀಡಿದ್ದೇವೆ ಆರೋಪಿತರ ಬಿಡುಗಡೆ ಪ್ರಯತ್ನ ತಕ್ಷಣ ನಿಲ್ಲಿಸು ಇದಕ್ಕಾಗಿ […]

ಕೊಡಗು: ವಿಶ್ವ ಹಿಂದೂ ಪರಿಷತ್ ಮುಖಂಡನಿಗೆ ನಕ್ಸಲ್ ಬೆದರಿಕೆ Read More »

ಇಂದು ರಾಜ್ಯ ಬಜೆಟ್ ಮಂಡನೆ| ಜನಸಾಮಾನ್ಯರ ಕಿಸೆಗೆ ಕತ್ತರಿ ‘ಗ್ಯಾರಂಟಿ’ನಾ?…

ಸಮಗ್ರ ನ್ಯೂಸ್: ಐದು ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸುವ ಒತ್ತಡ, ಎತ್ತಿನಹೊಳೆ, ಮೇಕೆದಾಟು, ಕೃಷ್ಣಾ-ಭದ್ರಾ ಮೇಲ್ದಂಡೆ, ಆಲಮಟ್ಟಿಯಂತಹ ಬೃಹತ್‌ ನೀರಾವರಿ ಯೋಜನೆಗಳಿಗೆ ಹಣ ಮೀಸಲಿಡುವ ಅನಿವಾರ್ಯತೆ, ಸಿಬ್ಬಂದಿ ವೇತನ ಹೆಚ್ಚಳ, ರಾಜ್ಯದ ಆರ್ಥಿಕ ಸ್ಥಿತಿಯನ್ನು ಮೇಲೆತ್ತುವಂತಹ ಸಾಲು-ಸಾಲು ಸವಾಲುಗಳ ಒತ್ತಡದ ನಡುವೆ ಇಂದು(ಜು.7) 2023-24ನೇ ಸಾಲಿನ ಬಜೆಟ್‌ ಮಂಡನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಣಿಯಾಗಿದ್ದಾರೆ. ಇಂದು ಮಧ್ಯಾಹ್ನ 12 ಗಂಟೆಗೆ ಮಂಡಿಸಲಿರುವ ಆಯವ್ಯಯದಲ್ಲಿ ಗ್ಯಾರಂಟಿ ಯೋಜನೆಗಳ ಹೊರತಾಗಿ ಯಾವುದೇ ಜನಪ್ರಿಯ ಯೋಜನೆಗಳ ಘೋಷಣೆ ಸಾಧ್ಯತೆ ಕಡಿಮೆಯಿದ್ದರೂ, ಡೆಲಿವರಿ ಬಾಯ್‌ಗಳಂತಹ

ಇಂದು ರಾಜ್ಯ ಬಜೆಟ್ ಮಂಡನೆ| ಜನಸಾಮಾನ್ಯರ ಕಿಸೆಗೆ ಕತ್ತರಿ ‘ಗ್ಯಾರಂಟಿ’ನಾ?… Read More »

ಬೆಳ್ಳಾರೆ: ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ 9ನೇ ಶಾಖೆ ಉದ್ಘಾಟನೆ

ಸಮಗ್ರ ನ್ಯೂಸ್: ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘ ಪುತ್ತೂರು ಇದರ 9 ನೇ ಶಾಖೆ ಬೆಳ್ಳಾರೆಯಲ್ಲಿ ಉದ್ಘಾಟನೆಗೊಂಡಿದೆ. ಪರಸ್ಪರ ಸಹಕಾರ, ಪ್ರೀತಿ, ಶ್ರದ್ಧೆಯನ್ನು ಇಟ್ಟುಕೊಂಡಿರುವ ಸಹಕಾರಿ ಸಂಸ್ಥೆ ಆರ್ಥಿಕವಾಗಿ ಮುನ್ನಡೆಯುತ್ತದೆ. ಜ್ಞಾನ ಶಕ್ತಿ ಇಚ್ಛಾಶಕ್ತಿ ಕ್ರಿಯಾಶಕ್ತಿಗಳು ಅಂತರ್ಯದಲ್ಲಿ ಬೆಳೆಯಬೇಕು. ಪ್ರೀತಿ, ನಂಬಿಕೆ, ವಿಶ್ವಾಸಗಳಿಂದ ಸಹಕಾರಿ ಸಂಘದ ಅಭಿವೃದ್ಧಿ ಸಾಧ್ಯ. ಬ್ರಿಟಿಷರ ಖಜಾನೆಯೂ ಬೆಳ್ಳಾರೆಯಲ್ಲಿತ್ತು ಎಂದು ಹೇಳಿ ಕೆದಂಬಾಡಿ ರಾಮಯ್ಯ ಗೌಡರ ಹೋರಾಟವನ್ನು ನೆನಪಿಸಿಕೊಂಡರು. ಸಹಕಾರಿ ಸಂಘದ ಜೊತೆ ಆಧ್ಯಾತ್ಮಿಕ ಕೇಂದ್ರವನ್ನು ಕೂಡ ಸ್ಥಾಪಿಸಬೇಕು ಎಂದು ಆದಿಚುಂಚನಗಿರಿ

ಬೆಳ್ಳಾರೆ: ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ 9ನೇ ಶಾಖೆ ಉದ್ಘಾಟನೆ Read More »

ಮಡಿಕೇರಿ:ಸಂಚಾರ ನಿಯಮ ಉಲ್ಲಂಘನೆ ಶೇ.50 ರ ರಿಯಾಯಿತಿಯಲ್ಲಿ ದಂಡ ಪಾವತಿಸಲು ಅವಕಾಶ

ಸಮಗ್ರ ನ್ಯೂಸ್: ಆಯುಕ್ತರು, ಸಾರಿಗೆ ಮತ್ತು ರಸ್ತೆ ಸುರಕ್ಷತೆ ಬೆಂಗಳೂರು ಇವರು ಮಾನ್ಯ ಗೌರವಾನ್ವಿತ ಉಚ್ಛ ನ್ಯಾಯಾಲಯದ ನ್ಯಾಯಾಧೀಶರು ಹಾಗೂ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ನಿರ್ಣಯಿಸಿದಂತೆ, ಪೊಲೀಸ್ ಇಲಾಖೆಯ ಸಂಚಾರಿ ಇ-ಚಲನ್‍ನಲ್ಲಿ ದಾಖಲಾದ ಪ್ರಕರಣಗಳಿಗೆ ಅನ್ವಯವಾಗುವಂತೆ ಸಂಚಾರಿ ಇ-ಚಲನ್ ಮೂಲಕ ವಿಧಿಸಿದ ದಂಡದ ಮೊತ್ತದಲ್ಲಿ ಶೇ.50 ರಷ್ಟು ರಿಯಾಯಿತಿ ನೀಡಿ ಸರ್ಕಾರ ಆದೇಶ ಹೊರಡಿಸಿದೆ. ಈ ರಿಯಾಯಿತಿಯು 2023 ರ ಸೆಪ್ಟೆಂಬರ್, 09 ರವರೆಗೆ ಇತ್ಯರ್ಥಗೊಳ್ಳುವ ಪ್ರಕರಣಗಳಿಗೆ ಮಾತ್ರ

ಮಡಿಕೇರಿ:ಸಂಚಾರ ನಿಯಮ ಉಲ್ಲಂಘನೆ ಶೇ.50 ರ ರಿಯಾಯಿತಿಯಲ್ಲಿ ದಂಡ ಪಾವತಿಸಲು ಅವಕಾಶ Read More »

ಭಾರೀ ಮಳೆ ಹಿನ್ನೆಲೆ| ಉಡುಪಿ ಜಿಲ್ಲೆಯಲ್ಲಿ ನಾಳೆ(ಜು.7) ಶಾಲೆ, ಪಿಯು ಕಾಲೇಜುಗಳಿಗೆ ರಜೆ

ಸಮಗ್ರ ನ್ಯೂಸ್: ಉಡುಪಿ ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತ ಕ್ರಮವಾಗಿ ನಾಳೆ(ಜು.7) ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ ಹಾಗೂ ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ರಜೆಯನ್ನು ಘೋಷಿಸಲಾಗಿದೆ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಜು.7ರಂದು ಉಡುಪಿ ಜಿಲ್ಲೆಯಾದ್ಯಂತ ಶಾಲಾ- ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಕೂರ್ಮಾರಾವ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಭಾರೀ ಮಳೆ ಹಿನ್ನೆಲೆ| ಉಡುಪಿ ಜಿಲ್ಲೆಯಲ್ಲಿ ನಾಳೆ(ಜು.7) ಶಾಲೆ, ಪಿಯು ಕಾಲೇಜುಗಳಿಗೆ ರಜೆ Read More »

ಮುಂದುವರಿದ ಧಾರಾಕಾರ ಮಳೆ| ನಾಳೆ(ಜು.7) ಕೂಡಾ ದ.ಕ ಜಿಲ್ಲೆಯಲ್ಲಿ ಶಾಲೆ ಹಾಗೂ ಪಿಯು ಕಾಲೇಜುಗಳಿಗೆ ರಜೆ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಸುರಿಯುತ್ತಿರುವ ಪರಿಣಾಮ ಅಂಗನವಾಡಿ, ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಜು.7ರ ಶುಕ್ರವಾರ ರಜೆ ಘೋಷಿಸಿ ಆದೇಶಿಸಲಾಗಿದೆ. ದ.ಕ‌ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಈ ಕುರಿತಂತೆ ಆದೇಶಿಸಿದ್ದು, ಮಳೆ ವಿಪರೀತವಾಗಿ ಸುರಿಯುತ್ತಿರುವ ಪರಿಣಾಮ ಎಚ್ಚರಿಕೆ ವಹಿಸಲು ಪ್ರಾಕೃತಿಕ ವಿಕೋಪ ಪಡೆ ಹಾಗೂ ಆಡಳಿತಕ್ಕೆ ಸೂಚಿಸಿದ್ದಾರೆ. ಪ್ರಾಕೃತಿಕ ವಿಕೋಪಕ್ಕೆ ಸಂಬಂಧಿಸಿದ ಯಾವುದೇ ಸಮಸ್ಯೆಗಳಿಗೆ ಕಂಟ್ರೋಲ್ ರೂಂ 1077 ಹಾಗೂ ದೂರವಾಣಿ: 0824 – 2442590‌ ಸಂಪರ್ಕಿಸುವಂತೆ ಜಿಲ್ಲಾ ವಿಪತ್ತು

ಮುಂದುವರಿದ ಧಾರಾಕಾರ ಮಳೆ| ನಾಳೆ(ಜು.7) ಕೂಡಾ ದ.ಕ ಜಿಲ್ಲೆಯಲ್ಲಿ ಶಾಲೆ ಹಾಗೂ ಪಿಯು ಕಾಲೇಜುಗಳಿಗೆ ರಜೆ Read More »

ಉಕ್ಕಿ ಹರಿದ ಮಧು ವಾಹಿನಿ ಹೊಳೆ| ಮಧೂರು ದೇವಸ್ಥಾನದ ಆವರಣ ದೊಳಗೆ ನುಗ್ಗಿದ ನೀರು

ಸಮಗ್ರ ನ್ಯೂಸ್: ಜಿಲ್ಲೆಯಲ್ಲಿ ಗುರುವಾರವೂ ಮಳೆಯ ಆರ್ಭಟ ಮುಂದುವರಿದಿದ್ದು ನದಿಗಳು ಉಕ್ಕಿ ಹರಿಯುತ್ತಿವೆ, ತಗ್ಗು ಪ್ರದೇಶಗಳು ಜಲಾವೃತ ಗೊಂಡಿದೆ. ಇದೇ ರೀತಿ ಮಧು ವಾಹಿನಿ ಹೊಳೆಯಲ್ಲಿ ನೀರು ಉಕ್ಕಿ ಹರಿಯುತ್ತಿದ್ದು, ಮಧೂರು ದೇವಸ್ಥಾನದ ಆವರಣ ದೊಳಗೆ ನೀರು ನುಗ್ಗಿದೆ. ಜಿಲ್ಲೆಯ ಎಲ್ಲಾ ನದಿ ಗಳು ಉಕ್ಕಿ ಹರಿಯುತ್ತಿರುವುದರಿಂದ ತಗ್ಗು ಪ್ರದೇಶದ ಹಲವಾರು ಮನೆಗಳಿಗೆ ನೀರು ನುಗ್ಗಿದೆ. ಹಲವು ಕುಟುಂಬಗಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ. ವಿದ್ಯುತ್ ಸಂಪರ್ಕ ಅಸ್ತವ್ಯಸ್ತಗೊಂಡಿದೆ . ಹಲವಾರು ಕಂಬಗಳು ಧರಶಾಯಿ ಯಾಗಿದೆ. ಹಲವೆಡೆ ಗುಡ್ಡಗಳು

ಉಕ್ಕಿ ಹರಿದ ಮಧು ವಾಹಿನಿ ಹೊಳೆ| ಮಧೂರು ದೇವಸ್ಥಾನದ ಆವರಣ ದೊಳಗೆ ನುಗ್ಗಿದ ನೀರು Read More »

ಸ್ಪೀಕರ್ ಟು ಕನ್ನಡ ಆಪ್ ಹಾಕಿಕೊಡಿ: ಯತ್ನಾಳ್ನನ್ನ ಕನ್ನಡ ಹೆಚ್ಚು ಕಡಿಮೆ ಇರ್ಬೋದು, ಆದ್ರೆ ಪ್ರೀತಿಯ ಭಾಷೆ: ಖಾದರ್

ಸಮಗ್ರ ನ್ಯೂಸ್: ನನ್ನ ಕನ್ನಡ ಹೆಚ್ಚು ಕಡಿಮೆ ಇರಬಹುದು, ಆದರೆ ಅದು ನಮ್ಮ ಪ್ರೀತಿಯ ಭಾಷೆ. ಪ್ರೀತಿ, ಸೋದರತೆ ಸಾಮರಸ್ಯದ ಭಾಷೆ. ಅದಕ್ಕೆ ನಾನು ಯತ್ನಾಳ್‌ ಅವರಿಗೆ ಕೃತಜ್ಞತೆ ಹೇಳುತ್ತಿದ್ದೇನೆ ಎಂದು ಸ್ಪೀಕರ್ ಯು.ಟಿ ಖಾದರ್ ಹೇಳಿದ್ದಾರೆ. ಸ್ಪೀಕರ್ ಟು ಕನ್ನಡ ಆಪ್ ಹಾಕಿಕೊಡಿ ಎಂದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆಯಿಂದ ವಿಧಾನಸಭೆಯಲ್ಲಿ ಖಾದರ್ ಅವರ ಕನ್ನಡದ ಬಗ್ಗೆ ಸ್ವಾರಸ್ಯಕರ ಮಾತು ನಡೆಯಿತು. ಸ್ಪೀಕರ್ ಕನ್ನಡದ ಬಗ್ಗೆ ಚರ್ಚೆಯ ಹಿನ್ನೆಲೆಯಲ್ಲಿ ವಿಷಯ ಪ್ರಸ್ತಾಪ ಮಾಡಿದ ಖಾದರ್,

ಸ್ಪೀಕರ್ ಟು ಕನ್ನಡ ಆಪ್ ಹಾಕಿಕೊಡಿ: ಯತ್ನಾಳ್ನನ್ನ ಕನ್ನಡ ಹೆಚ್ಚು ಕಡಿಮೆ ಇರ್ಬೋದು, ಆದ್ರೆ ಪ್ರೀತಿಯ ಭಾಷೆ: ಖಾದರ್ Read More »

ವಿಧಾನಸಭೆಯಲ್ಲಿ ಪ್ರತಿಧ್ನಿಸಿದ ಮಡಿಕೇರಿಯ ತಡೆಗೋಡೆ

ಸಮಗ್ರ ನ್ಯೂಸ್: ಕೊಡಗು ಜಿಲ್ಲೆಯ ಜಿಲ್ಲಾಡಳಿತ ಭವನದ ತಡೆಗೋಡೆಯ ಕಾಮಗಾರಿಯ ಬಗ್ಗೆ ವಿಧಾನಸಭೆಯಲ್ಲೂ ಪ್ರಸ್ತಾಪವಾಗಿದೆ. ಸದನದಲ್ಲಿ ತಡೆಗೋಡೆ ವಿಚಾರ ಪ್ರಸ್ತಾಪಿಸಿ ಮಾತನಾಡಿದ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾಕ್ಟರ್ ಮಂತರ್ ಗೌಡ ಕಾಮಗಾರಿಕ್ಕೆ ತಂತ್ರಜ್ಞಾನ ಸರಿಯಾಗಿ ಬಳಸಿಲ್ಲ ಅಪಾಯಕಾರಿ ಸ್ಥಿತಿಯಲ್ಲಿದ ತಡೆಗೋಡೆಯನ್ನು ತೆರೆವು ಮಾಡಿ ಮತ್ತೆ ಜೋಡಣೆ ಮಾಡಲಾಗುತ್ತಿದೆ ಗುಡ್ಡ ಕುಸಿಯುವ ಜೊತೆಗೆ ಜಿಲ್ಲಾಡಳಿತ ಕಟ್ಟಡವು ಕೂಡ ಕುಸಿವ ಆತಂಕವಿದೆ ಎಂದು ಗಮನ ಸೆಳೆದರು ಹಾಗೂ ಈ ಕಾಮಗಾರಿ ಬಗ್ಗೆ ತನಿಖೆಯಾಗಬೇಕೆಂದು ಆಗ್ರಹಿಸಿದರು. ಇದಕ್ಕೆ ಪ್ರತಿಕ್ರಿಸಿದ ಲೋಕೋಪಯೋಗಿ

ವಿಧಾನಸಭೆಯಲ್ಲಿ ಪ್ರತಿಧ್ನಿಸಿದ ಮಡಿಕೇರಿಯ ತಡೆಗೋಡೆ Read More »

ಕರಾವಳಿಯಲ್ಲಿ ಮಳೆ ಹಾನಿ ಪರಿಶೀಲಿಸಿ ಕೂಡಲೇ ಪರಿಹಾರ ಕ್ರಮ ಕೈಗೊಳ್ಳಿ|ಸಚಿವರಿಗೆ ಸಿಎಂ ಸೂಚನೆ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮಳೆಯಿಂದ ಹಾನಿ ಸಂಭವಿಸಿದ್ದು ಕೂಡಲೇ ಪರಿಹಾರ ಕ್ರಮಗಳನ್ನು ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವರುಗಳಾದ ದಿನೇಶ್ ಗುಂಡೂರಾವ್, ಲಕ್ಷ್ಮೀ ಹೆಬ್ಬಾಳಕರ್ ಹಾಗೂ ಮಾಂಕಾಳ ವೈದ್ಯ ಅವರಿಗೆ ಸಿಎಂ ಸೂಚನೆ ನೀಡಿದ್ದಾರೆ. ಮಳೆ ಹಾನಿ ಕುರಿತು ಮುಖ್ಯ ಕಾರ್ಯದರ್ಶಿಗಳಿಂದ ಮಾಹಿತಿ ಪಡೆದ ಮುಖ್ಯಮಂತ್ರಿಗಳು ಪರಿಹಾರ ಕಾಮಗಾರಿಗಳಿಗೆ ಅಧಿಕಾರಿಗಳನ್ನು ತುರ್ತಾಗಿ ಸಜ್ಜುಗೊಳಿಸುವಂತೆ ಆದೇಶಿಸಿದರು.

ಕರಾವಳಿಯಲ್ಲಿ ಮಳೆ ಹಾನಿ ಪರಿಶೀಲಿಸಿ ಕೂಡಲೇ ಪರಿಹಾರ ಕ್ರಮ ಕೈಗೊಳ್ಳಿ|ಸಚಿವರಿಗೆ ಸಿಎಂ ಸೂಚನೆ Read More »