ಕರಾವಳಿ

ಕಡಬ: 5 ಜನರ ಮೇಲಿನ ರೌಡಿ ಶೀಟರ್ ಹೈಕೋರ್ಟ್ ನಲ್ಲಿ ರದ್ದು

ಸಮಗ್ರ ನ್ಯೂಸ್: ಕಡಬ ತಾಲೂಕಿನ 5 ಜನರ ಮೇಲೆ ಆಗಿನ ಕಡಬ ಪೊಲೀಸ್ ಠಾಣೆಯ ಸರ್ಕಲ್ ಇನ್ಸ್ಪೆಕ್ಟರ್ ರವರು ಸೆಕ್ಷನ್ 143,147,323,326,307,395 ಹಾಗೂ 149 IPC ಅಡಿಯಲ್ಲಿ ಕ್ಷುಲ್ಲಕ ಕಾರಣಗಳಿಗೆ ದೊಂಬಿ, ಗಲಾಟೆಗಳನ್ನು ಮಾಡುತ್ತಾ ಸಾರ್ವಜನಿಕ ಅಶಾಂತಿಯನ್ನು ಉಂಟು ಮಾಡುವ ಸಲುವಾಗಿ 2017 ರಲ್ಲಿ ರೌಡಿ ಶೀಟರ್ ದಾಖಲಿಸಿರುವುದು ಹೈಕೋರ್ಟ್ ನಲ್ಲಿ ರದ್ದುಗೊಂಡಿದೆ. ತಮ್ಮ ಮೇಲಿನ ರೌಡಿ ಶೀಟರ್ ಅನ್ನು ರದ್ದುಗೊಳಿಸುವಂತೆ ಕೋರಿ ಮಾನ್ಯ ಉಚ್ಚನ್ಯಾಯಾಲಯದ ಮೊರೆ ಹೋಗಿದ್ದ ಆರೋಪಿಗಳವಾದವನ್ನು ಆಲಿಸಿದ ಉಚ್ಚನ್ಯಾಯಾಲಯದ ನ್ಯಾಯಮೂರ್ತಿ ಹೇಮಂತ್ ಚಂದನ್ […]

ಕಡಬ: 5 ಜನರ ಮೇಲಿನ ರೌಡಿ ಶೀಟರ್ ಹೈಕೋರ್ಟ್ ನಲ್ಲಿ ರದ್ದು Read More »

ಹವಾಮಾನ ವರದಿ| ರಾಜ್ಯದಲ್ಲಿ ನಾಲ್ಕು ದಿನ ಮಳೆ ಮುನ್ಸೂಚನೆ| ದಸರಾಗೆ ಬಿರುಸಾಗಲಿದೆ ವರ್ಷಧಾರೆ

ಸಮಗ್ರ ನ್ಯೂಸ್: ಲಕ್ಷದ್ವೀಪದಿಂದ ಪ್ರಾರಂಭವಾಗುವ ಬಿರುಗಾಳಿ ಮಾರುತಗಳು ಅಕ್ಟೋಬರ್ 3 ಮತ್ತು ಅಕ್ಟೋಬರ್ 9 ರ ನಡುವೆ ಬೆಂಗಳೂರು ಸೇರಿದಂತೆ ಹಲವಾರು ಪ್ರದೇಶಗಳಲ್ಲಿ ಭಾರಿ ಮಳೆಯನ್ನು ತರುತ್ತವೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ. ಈ ಹವಾಮಾನ ಮಾದರಿ ಕರ್ನಾಟಕದ ದಕ್ಷಿಣ ಒಳನಾಡು ಮತ್ತು ಕರಾವಳಿ ಜಿಲ್ಲೆಗಳ ಮೇಲೆ ಗಮನಾರ್ಹವಾಗಿ ಪರಿಣಾಮ ಬೀರುವ ನಿರೀಕ್ಷೆಯಿದೆ. ಹವಾಮಾನ ವರದಿಗಳ ಪ್ರಕಾರ, ಮಾಲ್ಡೀವ್ಸ್ ಮತ್ತು ಸುತ್ತಮುತ್ತಲಿನ ಪ್ರದೇಶಗಳ ಮೇಲೆ ಚಂಡಮಾರುತದ ಪರಿಚಲನೆ ರೂಪುಗೊಂಡಿದೆ, ಇದು ಈಗ ಲಕ್ಷದ್ವೀಪದ

ಹವಾಮಾನ ವರದಿ| ರಾಜ್ಯದಲ್ಲಿ ನಾಲ್ಕು ದಿನ ಮಳೆ ಮುನ್ಸೂಚನೆ| ದಸರಾಗೆ ಬಿರುಸಾಗಲಿದೆ ವರ್ಷಧಾರೆ Read More »

ಬೆಳ್ತಂಗಡಿ: ರಾತ್ರಿ ಅಕ್ರಮ ಗೋ ಸಾಗಾಟ ಪತ್ತೆ..!

ಸಮಗ್ರ ನ್ಯೂಸ್: ಅಕ್ರಮವಾಗಿ ನಡೆಯುತ್ತಿದ್ದ ಗೋ ಸಾಗಾಟವನ್ನು ಸ್ಥಳೀಯರ ಸಹಕಾರದೊಂದಿಗೆ ಪತ್ತೆ ಹಚ್ಚಿ ಬೆಳ್ತಂಗಡಿ ಪೊಲೀಸರು ನಾಲ್ವರು ಆರೋಪಿಗಳನ್ನು ಅ.3 ರಂದು ರಾತ್ರಿ ಬಂಧಿಸಿದ್ದಾರೆ. ಎರಡು ಪಿಕಪ್ ವಾಹನಗಳು ಹಾಗೂ ಐದು ದನಗಳನ್ನು ವಶಪಡಿಸಿಕೊಂಡಿದ್ದಾರೆ. ಮಲವಂತಿಗೆ ಗ್ರಾಮದ ಎಳನೀರು ದಿಡುಪೆ ರಸ್ತೆಯಲ್ಲಿ ಪಿಕಪ್ ವಾಹನದಲ್ಲಿ ಅಕ್ರಮವಾಗಿ ದನಗಳನ್ನು ಸಾಗಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿಯ ಆಧಾರದಲ್ಲಿ ಬೆಳ್ತಂಗಡಿ ಪೊಲೀಸರು ಈ ಕಾರ್ಯಾಚರಣೆ ನಡೆಸಿದ್ದಾರೆ.

ಬೆಳ್ತಂಗಡಿ: ರಾತ್ರಿ ಅಕ್ರಮ ಗೋ ಸಾಗಾಟ ಪತ್ತೆ..! Read More »

ಮಂಗಳೂರು ಗಾಂಜಾ ಮಾರಾಟ ಆರೋಪಿ ಪೊಲೀಸ್ ವಶಕ್ಕೆ

ಸಮಗ್ರ ನ್ಯೂಸ್:ಬೆಳ್ತಂಗಡಿ ತಾಲೂಕಿನ ಕುಕ್ಕೇಡಿ ಗ್ರಾಮ ಗೋಳಿಯಂಗಡಿ ಹೌಸ್ ನಿವಾಸಿ ಅಬುತಾಹಿರ್ ಯಾನೇ ಅನ್ನಮ್ (25) ಗಾಂಜಾ ಮಾರಾಟ ಮಾಡುತ್ತಿದ್ದವನನ್ನು ಪತ್ತೆ ಹಚ್ಚಿ 4 ಕೆ.ಜಿ. ಗಾಂಜಾವನ್ನು ಆರೋಪಿಸಿಯಿಂದ ವಶಪಡಿಸಿಕೊಂಡ ಘಟನೆ ಮಂಗಳೂರಿನಲ್ಲಿ ನಡೆದಿದೆ. ಗಾಂಜಾ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ಕಂಕನಾಡಿ ನಗರ ಪೊಲೀಸ್‌ ಠಾಣಾ ವ್ಯಾಪ್ತಿಯ ಪಡೀಲ್ ಪರಿಸರದಲ್ಲಿ ವಾಹನವೊಂದರಲ್ಲಿ ಅಕ್ರಮವಾಗಿ ಮಾದಕ ವಸ್ತು ಗಾಂಜಾ ಮಾರಾಟ ಮಾಡುತ್ತಿದ್ದ ಅತನನ್ನು ವಶಕ್ಕೆ ಪಡೆದಿದ್ದಾರೆ.

ಮಂಗಳೂರು ಗಾಂಜಾ ಮಾರಾಟ ಆರೋಪಿ ಪೊಲೀಸ್ ವಶಕ್ಕೆ Read More »

ಪುತ್ತೂರುದ ಪಿಲಿಗೊಬ್ಬು, ಫುಡ್ ಪೆಸ್ಟ್ – ಸೀಸನ್ -2 | ದಕ್ಷಿಣ ಕನ್ನಡ ಜಿಲ್ಲೆಯ ಪ್ರಖ್ಯಾತ ಆಯ್ದ 9 ಹುಲಿವೇಷ ತಂಡಗಳು ಭಾಗಿ

ಸಮಗ್ರ ನ್ಯೂಸ್:ಪಿಲಿಗೊಬ್ಬು ಹಾಗೂ ಪುತ್ತೂರು ಫುಡ್ ಫೆಸ್ಟ್ ಅ.5 ಹಾಗೂ ಅ.6 ರಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ಆಯೋಜಿಸಲಾಗಿದೆ ಎಂದು ಪುತ್ತೂರು ವಿಜಯ ಸಾಮ್ರಾಟ್ ನ, ಪಿಲಿಗೊಬ್ಬು ಸಾರಥಿ ಸಹಜ್‌ ರೈ ಬಳಜ್ಜ ಹೇಳಿದ್ದಾರೆ. ಕಾರ್ಯಕ್ರಮದ ಉದ್ಘಾಟನೆಯನ್ನು ಶಾಸಕ ಅಶೋಕ್‌ ಕುಮಾ‌ರ್ ರೈ ಮಾಡಲಿದ್ದು, ಸಂಸದ ನಳಿನ್ ಕುಮಾರ್ ಕಟೀಲ್ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಪುತ್ತೂರು ಸಹಾಯಕ ಆಯುಕ್ತ ಜುಬಿನ್ ಮೊಹಪಾತ್ರ, ಹಿರಿಯ ವೃದ್ಯ ಡಾ.ಪ್ರಸಾದ್ ಭಂಡಾರಿ, ಡಿವೈಎಸ್ ಪಿ ಅರುಣ್

ಪುತ್ತೂರುದ ಪಿಲಿಗೊಬ್ಬು, ಫುಡ್ ಪೆಸ್ಟ್ – ಸೀಸನ್ -2 | ದಕ್ಷಿಣ ಕನ್ನಡ ಜಿಲ್ಲೆಯ ಪ್ರಖ್ಯಾತ ಆಯ್ದ 9 ಹುಲಿವೇಷ ತಂಡಗಳು ಭಾಗಿ Read More »

ಉಡುಪಿಗೂ ಬಂತು ಚೀನದ ಬೆಳ್ಳುಳ್ಳಿ

ಸಮಗ್ರ ನ್ಯೂಸ್: ವಿಪರೀತ ಬೆಲೆ ಏರಿಕೆ ಪರಿಣಾಮ ಕಳ್ಳದಾರಿಯ ಮೂಲಕ ಬರುತ್ತಿದೆ ಚೀನದ ಬೆಳ್ಳುಳ್ಳಿ ನಿಷೇಧಿಸಲಾಗಿತ್ತು. ಇದೀಗ ಚೀನದ ಬೆಳ್ಳುಳ್ಳಿ ಉಡುಪಿ ಎಪಿಎಂಸಿ ಮಾರುಕಟ್ಟೆಯಲ್ಲಿ ಮಾರಾಟವಾಗುತ್ತಿರುವ ಬಗ್ಗೆ ದೂರು ಬಂದ ಹಿನ್ನೆಲೆಯಲ್ಲಿ ಉಡುಪಿ ನಗರಸಭೆ ಅಧಿಕಾರಿಗಳು ದಾಳಿ ನಡೆಸಿ ಗುಣಮಟ್ಟದ ಶಂಕೆ ಹಿನ್ನೆಲೆಯಲ್ಲಿ 12 ಟನ್‌ ಬೆಳ್ಳುಳ್ಳಿ ವಶಪಡಿಸಿಕೊಂಡಿದ್ದಾರೆ. ಚೀನದಿಂದ ಬೆಳ್ಳುಳ್ಳಿಯನ್ನು ಕಳ್ಳದಾರಿಯ ಮೂಲಕ ತರಿಸಿ ದೇಶಿ ಬೆಳ್ಳುಳ್ಳಿ ಜೊತೆ ಬೆರಕೆ ಮಾಡಿ ಮಾಡುತ್ತಿರುವ ದಂಧೆ ವ್ಯಾಪಕವಾಗಿ ನಡೆಯುತ್ತಿದೆ.ಉಡುಪಿ ಎಪಿಎಂಸಿ ಮಾರುಕಟ್ಟೆಗೂ ಚೀನ ಬೆಳ್ಳುಳ್ಳಿ ಪ್ರವೇಶಿಸಿದ ಕುರಿತು

ಉಡುಪಿಗೂ ಬಂತು ಚೀನದ ಬೆಳ್ಳುಳ್ಳಿ Read More »

ಇಂದಿನಿಂದ ಕುಮಾರ ಪರ್ವತ ಚಾರಣ ಆರಂಭ| ಆನ್ ಲೈನ್ ಬುಕ್ಕಿಂಗ್ ಮಾಡಿದವರಿಗಷ್ಟೇ ಚಾರಣಕ್ಕೆ ಅವಕಾಶ

ಸಮಗ್ರ ನ್ಯೂಸ್: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಸಮೀಪದ ಕುಮಾರ ಪರ್ವತ ಚಾರಣ ಪಥವು ಅ.3 (ಗುರುವಾರ)ರಂದು ಮರು ಪ್ರಾರಂಭವಾಗಲಿದೆ. ಜ. 26 ಹಾಗೂ 27ರಂದು ಮಿತಿಗೂ ಮೀರಿದ ಚಾರಣಿಗರು ಆಗಮಿಸಿದ್ದ ಕಾರಣ ಜನದಟ್ಟಣೆ ಉಂಟಾಗಿತ್ತು. ಆದ್ದರಿಂದ, ನಿರ್ದಿಷ್ಟ ಸಂಖ್ಯೆಯ ಚಾರಣಿಗರಿಗೆ ಮಾತ್ರವೇ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಫೆ.1ರಿಂದ ಚಾರಣ ಪಥವನ್ನು ಸ್ಥಗಿತಗೊಳಿಸಲಾಗಿತ್ತು. ಕುಮಾರ ಪರ್ವತಕ್ಕೆ ನಿರ್ದಿಷ್ಟ ಸಂಖ್ಯೆಯ ಚಾರಣಿಗರಿಗೆ ಮಾತ್ರವೇ ಅವಕಾಶ ಕಲ್ಪಿಸಲು ಸ್ಥಗಿತಗೊಳಿಸಲಾಗಿದ್ದ ಚಾರಣ ನಾಳೆಯಿಂದ ಆರಂಭವಾಗಲಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ

ಇಂದಿನಿಂದ ಕುಮಾರ ಪರ್ವತ ಚಾರಣ ಆರಂಭ| ಆನ್ ಲೈನ್ ಬುಕ್ಕಿಂಗ್ ಮಾಡಿದವರಿಗಷ್ಟೇ ಚಾರಣಕ್ಕೆ ಅವಕಾಶ Read More »

ವಿಧಾನ ಪರಿಷತ್ ಉಪಚುನಾವಣೆ|ದ.ಕ ಸ್ಥಳೀಯ ಸಂಸ್ಥೆಗಳ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿಯಾಗಿ ರಾಜು ಪೂಜಾರಿ ಆಯ್ಕೆ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಉಪ ಚುನಾವಣೆಗೆ ಈಗಾಗಲೇ ಬಿಜೆಪಿಯಿಂದ ಅಭ್ಯರ್ಥಿಯನ್ನು ಘೋಷಣೆ ಮಾಡಲಾಗಿತ್ತು. ಈಗ ಕಾಂಗ್ರೆಸ್ ಕೂಡ ರಾಜು ಪೂಜಾರಿಯವರನ್ನು ಅಭ್ಯರ್ಥಿಯನ್ನಾಗಿ ಘೋಷಿಸಿದೆ. ಈ ಸಂಬಂಧ ಎಐಸಿಸಿ ಜನರಲ್ ಸೆಕ್ರೇಟರಿ ಕೆ.ಸಿ ವೇಣುಗೋಪಾಲ್ ಅವರು ಆದೇಶ ಹೊರಡಿಸಿದ್ದು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸೂಚನೆಯ ಮೇರೆಗೆ ರಾಜು ಪೂಜಾರಿ ಅವರನ್ನು ದಕ್ಷಿಣ ಕನ್ನಡ ವಿಧಾನ ಪರಿಷತ್ ಉಪ ಚುನಾವಣೆಗೆ ಅಭ್ಯರ್ಥಿಯನ್ನಾಗಿ ಘೋಷಿಸಲಾಗಿದೆ ಎಂದಿದ್ದಾರೆ.

ವಿಧಾನ ಪರಿಷತ್ ಉಪಚುನಾವಣೆ|ದ.ಕ ಸ್ಥಳೀಯ ಸಂಸ್ಥೆಗಳ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿಯಾಗಿ ರಾಜು ಪೂಜಾರಿ ಆಯ್ಕೆ Read More »

ಬಿಎಂಟಿಸಿ ಬಸ್ ಕಂಡಕ್ಟರ್ ಮೇಲೆ ಪ್ರಯಾಣಿಕನೋರ್ವನಿಂದ ಚಾಕು ಇರಿತ

ಸಮಗ್ರ ನ್ಯೂಸ್: ಬಿಎಂಟಿಸಿ ಬಸ್ ಕಂಡಕ್ಟರ್ ನನ್ನು ಪ್ರಯಾಣಿಕನೋರ್ವ ಚಾಕುವಿನಿಂದ ಇರಿದಿರುವ ಘಟನೆ ಬೆಂಗಳೂರಿನ ವೈಟ್ಫೀಲ್ಡ್ ಬಳಿಯ ITPL ಬಸ್ ಸ್ಟಾಪ್ ಬಳಿ ನಡೆದಿದೆ. ಅಕ್ಟೋಬರ್ 01 ಸಂಜೆ ವೈಟ್ ಫೀಲ್ಡ್ ಬಳಿಯ ಐಟಿಪಿಎಲ್ ಬಸ್ ಸ್ಟಾಪ್ ನಲ್ಲಿ KA- 57-F0015 ವೋಲ್ವೋ ಬಸ್ ಕಂಡಕ್ಟರ್ ಯೋಗೇಶ್ಗೆ ಅಪರಿಚಿತ ವ್ಯಕ್ತಿ ಎರಡ್ಮೂರು ಬಾರಿ ಚಾಕುವಿನಿಂದ ಇರಿದಿದ್ದಾನೆ. ಪ್ರಯಾಣಿಕರು ತುಂಬಿದ್ದ ಬಸ್ ‌ನಲ್ಲಿ ಈ ದುಷ್ಕೃತ್ಯ ನಡೆದಿದೆ. ನಂತರ ಬಸ್ನಲ್ಲಿದ್ದ ಸುತ್ತಿಗೆ ತೆಗೆದುಕೊಂಡು ಗಾಜು ಪುಡಿಗಟ್ಟಿ ಹುಚ್ಚನಂತೆ ವರ್ತಿಸಿದ್ದಾನೆ.

ಬಿಎಂಟಿಸಿ ಬಸ್ ಕಂಡಕ್ಟರ್ ಮೇಲೆ ಪ್ರಯಾಣಿಕನೋರ್ವನಿಂದ ಚಾಕು ಇರಿತ Read More »

ಬೆಳ್ತಂಗಡಿ: ರಿವರ್ಸ್ ತೆಗೆಯುವ ವೇಳೆ ಕಾರಿನಡಿಗೆ ಬಿದ್ದು ಬಾಲಕ‌ ಸಾವು

ಸಮಗ್ರ ನ್ಯೂಸ್: ಕಾರು ರಿವರ್ಸ್ ತೆಗೆಯುತ್ತಿದ್ದಾಗ ಕಾರಿನಡಿಗೆ ಬಿದ್ದು ಬಾಲಕ ಸಾವನ್ನಪ್ಪಿರುವ ಘಟನೆ ಬೆಳ್ತಂಗಡಿ ತಾಲೂಕಿನ ಕೊಕ್ಕಡದಲ್ಲಿ ಹಮೀದ್ ಎಂಬವರ ಮನೆಯ ಅಂಗಳದಲ್ಲಿ ನಡೆದಿದೆ. ಕೊಕ್ಕಡದ ಹಮೀದ್ ಎಂಬವರ ಪುತ್ರ ನವಾಫ್ (10) ಮೃತ ಬಾಲಕ. ಹಮೀದ್ ಅವರ ಮನೆಗೆ ಬಂದಿದ್ದ ಸಂಬಂಧಿಕರು ಮನೆಯಂಗಳದಲ್ಲಿ ಕಾರನ್ನು ಹಿಂದಕ್ಕೆ ಚಲಾಯಿಸಿದಾಗ ಕಾರಿನ ಹಿಂಬದಿ ನಿಂತಿದ್ದ ನವಾಫ್ ಅವರು ಕಾರಿನಡಿಗೆ ಬಿದ್ದಿದ್ದಾನೆ ಎನ್ನಲಾಗಿದೆ. ಅವರ ಮೇಲೆಯೇ ಕಾರು ಹರಿದ ಪರಿಣಾಮ ತಲೆ ಮತ್ತು ಕಾಲಿಗೆ ಗಂಭೀರ ಗಾಯಗಳಾಗಿ ಮೃತಪಟ್ಟಿದ್ದಾನೆ. ನವಾಫ್

ಬೆಳ್ತಂಗಡಿ: ರಿವರ್ಸ್ ತೆಗೆಯುವ ವೇಳೆ ಕಾರಿನಡಿಗೆ ಬಿದ್ದು ಬಾಲಕ‌ ಸಾವು Read More »