ಕರಾವಳಿ

Breaking|ಮಂಗಳೂರು: ಕಾಲೇಜು ಮೇಲ್ಚಾವಣಿ ಕುಸಿತ; ತಪ್ಪಿದ ಭಾರೀ ಅನಾಹುತ

ಸಮಗ್ರ ನ್ಯೂಸ್: ಮಂಗಳೂರಿನಲ್ಲಿ ಕಳೆದ ಕೆಲ ದಿನಗಳಿಂದ ಅಬ್ಬರದ ಮಳೆಯಾಗುತ್ತಿದ್ದು, ತಲಪಾಡಿಯಲ್ಲಿರುವ ಕಾಲೇಜಿನ ಮೇಲ್ಚಾವಣಿ ಕುಸಿದಿರುವ ಘಟನೆ ನಡೆದಿದೆ. ತಲಪಾಡಿಯಲ್ಲಿರುವ ದೇವಿನಗರದ ಶಾರದಾ ವಿದ್ಯಾಲಯದ ಕ್ಯಾಂಪಸ್ ನಲ್ಲಿರುವ ಆರು ಮಹಡಿಯ ಕಾಲೇಜಿನ ಅಳವಡಿಸಲಾಗಿದ್ದ ಶೀಟ್ ಭಾರೀ ಮಳೆ, ಗಾಳಿಗೆ ಕುಸಿದು ಬಿದ್ದಿದೆ. ಮಳೆಯ ಹಿನ್ನೆಲೆಯಲ್ಲಿ ಕಾಲೇಜಿಗೆ ರಜೆ ಘೋಷಣೆ ಮಾಡಿರುವುದರಿಂದ ಭಾರೀ ಅನಾಹುತವೊಂದು ತಪ್ಪಿದಂತಾಗಿದೆ. ಮಂಗಳೂರಿನಲ್ಲಿ ಕಳೆದ ಮೂರು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ಬುಧವಾರ ಮತ್ತು ಗುರುವಾರ ರಜೆ […]

Breaking|ಮಂಗಳೂರು: ಕಾಲೇಜು ಮೇಲ್ಚಾವಣಿ ಕುಸಿತ; ತಪ್ಪಿದ ಭಾರೀ ಅನಾಹುತ Read More »

ಬೆಳ್ತಂಗಡಿಯ ಯುವಕ ದುಬೈ ನಲ್ಲಿ ಅನುಮಾನಾಸ್ಪದ ಸಾವು

ಸಮಗ್ರ ನ್ಯೂಸ್: ಬೆಳ್ತಂಗಡಿ ತಾಲೂಕಿನ ಉರುವಾಲು ಗ್ರಾಮದ ತುರ್ಕಳಿಕೆ ನಿವಾಸಿ ಮುಂಡೊಟ್ಟು ದಾವೂದ್ ಎಂಬವರ ಪುತ್ರ ಮುಹಮ್ಮದ್ ರಾಝಿಖ್ ಎಂಬವರು ದುಬೈನಲ್ಲಿ ಅನುಮಾನಸ್ಪದವಾಗಿ ಸಾವನ್ನಪ್ಪಿದ ಘಟನೆ ನಡೆದಿದೆ. ಇವರು ಇತ್ತೀಚೆಗಷ್ಟೇ ಮದುವೆಯಾಗಿದ್ದು, ನಾಲ್ಕು ತಿಂಗಳ ಮಗು ಕೂಡ ಇದೆ ಎನ್ನಲಾಗಿದೆ. ಮೃತರು ಪತ್ನಿ, ತಂದೆ ತಾಯಿ ಹಾಗೂ ಬಂಧುಮಿತ್ರರನ್ನು ಅಗಲಿದ್ದಾರೆ. ರಾಝಿಖ್ ರವರ ಸಾವಿಗೆ ನಿಖರ ಕಾರಣ ಇನ್ನಷ್ಟೇ ತಿಳಿದು ಬರಬೇಕಾಗಿದೆ.

ಬೆಳ್ತಂಗಡಿಯ ಯುವಕ ದುಬೈ ನಲ್ಲಿ ಅನುಮಾನಾಸ್ಪದ ಸಾವು Read More »

ಸುಳ್ಯದ ಐವರ್ನಾಡಿನಲ್ಲಿ ಪ್ರಸನ್ನ ಕ್ಲಿನಿಕ್ ಸ್ಥಳಾಂತರಗೊಂಡು ಶುಭಾರಂಭ

ಸಮಗ್ರ ನ್ಯೂಸ್: ಸುಳ್ಯದ ಐವರ್ನಾಡಿನ ನೆಕ್ರಪ್ಪಾಡಿ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಡಾ.ಗೌರಿಶಂಕರ ಸಿ.ಕೆಯವರ ಮಾಲಕತ್ವದ ಪ್ರಸನ್ನ ಕ್ಲಿನಿಕ್ ಐವರ್ನಾಡು ಮುಖ್ಯ ರಸ್ತೆ ಸಮೀಪ ನೂತನವಾಗಿ ನಿರ್ಮಾಣವಾದ ನೆಕ್ರಪ್ಪಾಡಿ ಕಾಂಪ್ಲೆಕ್ಸ್ ಗೆ ಸ್ಥಳಾಂತರಗೊಂಡು ಜು.06 ರಂದು ಶುಭಾರಂಭಗೊಂಡಿತು. ವಿಶ್ರಾಂತ ಪ್ರಾಂಶುಪಾಲರಾದ ಡಾ.ವಿಘ್ನೇಶ್ವರ ವರ್ಮುಡಿ ದೀಪ ಬೆಳಗಿಸಿ ಉದ್ಘಾಟಿಸಿ ಶುಭಹಾರೈಸಿದರು. ಬೆಳಿಗ್ಗೆ ಪುರೋಹಿತ ಉದನೇಶ್ವರ ಭಟ್ ಮಂಜಳಗಿರಿ ಇವರು ಗಣಹೋಮ ನೆರವೇರಿಸಿದರು. ಈ ಸಂದರ್ಭದಲ್ಲಿ ಶ್ರೀಮತಿ ಪ್ರಸನ್ನ ಕುಮಾರಿ, ಶ್ರೇಯಸ್ವಿ ಗೌರಿಶಂಕರ್, ಕಾಂಪ್ಲೆಕ್ಸ್ ಮಾಲಕ ಕೃಷ್ಣಪ್ಪ ಗೌಡ ನೆಕ್ರಪ್ಪಾಡಿ, ಶ್ರೀಮತಿ ಪೂರ್ಣಶ್ರೀ

ಸುಳ್ಯದ ಐವರ್ನಾಡಿನಲ್ಲಿ ಪ್ರಸನ್ನ ಕ್ಲಿನಿಕ್ ಸ್ಥಳಾಂತರಗೊಂಡು ಶುಭಾರಂಭ Read More »

ಗಗನ ಕುಸುಮವಾದ ಟೊಮ್ಯಾಟೊ| ಕೆಲವು ನಗರಗಳಲ್ಲಿ ಪೆಟ್ರೋಲ್ ಗಿಂತಲೂ ರೇಟ್ ಜಾಸ್ತಿ

ಸಮಗ್ರ ನ್ಯೂಸ್: ದೇಶದಲ್ಲಿ ಟೊಮ್ಯಾಟೊ ಬೆಲೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಇನ್ನು ಹಲವು ನಗರಗಳಲ್ಲಿ ಟೊಮ್ಯಾಟೊ ದರ ಪೆಟ್ರೋಲ್ ಬೆಲೆಯನ್ನು ಹಿಮ್ಮೆಟ್ಟಿಸಿದೆ. ಪೆಟ್ರೋಲ್ 102-108 ರೂಪಾಯಿಗೆ ಮಾರಾಟವಾಗುತ್ತಿದೆ. ಇತ್ತ ಮಾರುಕಟ್ಟೆಯಲ್ಲಿ ಈಗ ಪೆಟ್ರೋಲ್‌ಗಿಂತ ಟೊಮ್ಯಾಟೊ 140-150 ರೂ.ಗೆ ಮಾರಾಟವಾಗುತ್ತಿದೆ ಎಂದು ಅನೇಕ ಗ್ರಾಹಕರು ಬಹಿರಂಗವಾಗಿ ಒಪ್ಪಿಕೊಂಡಿದ್ದಾರೆ. ಬೆಂಗಳೂರಿನ ಮಾರುಕಟ್ಟೆಯಲ್ಲಿ ಟೊಮ್ಯಾಟೊ ಬೆಲೆ ಕೆಜಿಗೆ 100-125 ರೂ.ಗೆ ಮಾರಾಟವಾಗುತ್ತಿದೆ. ಇತ್ತ ಪೆಟ್ರೋಲ್​​ ಬೆಲೆ 101-108 ರೂ. ಇದೆ. ದಿನನಿತ್ಯ ವಸ್ತುಗಳಲ್ಲಿ ಆಗಿರುವ ಬೆಲೆ ಏರಿಕೆಯಿಂದಾಗಿ ಗ್ರಾಹಕರು ಕಂಗೆಟ್ಟಿದ್ದಾರೆ. ಬಿಹಾರದಲ್ಲಿ

ಗಗನ ಕುಸುಮವಾದ ಟೊಮ್ಯಾಟೊ| ಕೆಲವು ನಗರಗಳಲ್ಲಿ ಪೆಟ್ರೋಲ್ ಗಿಂತಲೂ ರೇಟ್ ಜಾಸ್ತಿ Read More »

ದುಡಿಯಲು ಸಮರ್ಥಳಾದ ಪತ್ನಿ ಹೆಚ್ಚಿನ ಜೀವನಾಂಶ ಕೇಳುವಂತಿಲ್ಲ: ಹೈಕೋರ್ಟ್ ತೀರ್ಪು

ಸಮಗ್ರ ನ್ಯೂಸ್: ದುಡಿಯಲು ಸಮರ್ಥ ಪತ್ನಿ ಹೆಚ್ಚಿನ ಜೀವನಾಂಶ ಕೋರುವಂತಿಲ್ಲವೆಂದು ಕರ್ನಾಟಕ ಹೈಕೋರ್ಟ್ ತೀರ್ಪು ನೀಡಿದೆ. ಜತೆಗೆ, ಪ್ರಕರಣವೊಂದರಲ್ಲಿ ಪತ್ನಿಗೆ ಪತಿ ನೀಡಬೇಕಿದ್ದ ಮಾಸಿಕ ಜೀವನಾಂಶದ ಮೊತ್ತವನ್ನು 10 ಸಾವಿರ ರೂಪಾಯಿಯಿಂದ 5 ಸಾವಿರ ರೂಪಾಯಿಗಳಿಗೆ ಕಡಿಮೆ ಮಾಡಿದ ಸೆಷನ್ಸ್ ಕೋರ್ಟ್ ಆದೇಶವನ್ನು ಎತ್ತಿಹಿಡಿದಿದೆ. ವಿವಾಹಕ್ಕೆ ಮುನ್ನ ಉದ್ಯೋಗದಲ್ಲಿದ್ದ ಪತ್ನಿ ಈಗ ಮತ್ತೆ ಕೆಲಸಕ್ಕೆ ಸೇರದಿರಲು ಸಮರ್ಪಕ ಕಾರಣಗಳಿಲ್ಲ. ಆಲಸ್ಯದಿಂದ ಮನೆಯಲ್ಲಿಯೇ ಕುಳಿತು ಪತಿಯಿಂದಲೇ ಸಂಪೂರ್ಣ ಜೀವನಾಂಶ ಕೇಳುವುದು ಸಮಂಜಸವಲ್ಲ. ತನ್ನ ಜೀವನ ನಿರ್ವಹಣೆಗೆ ಪತ್ನಿ ಪ್ರಯತ್ನಿಸಬೇಕು.

ದುಡಿಯಲು ಸಮರ್ಥಳಾದ ಪತ್ನಿ ಹೆಚ್ಚಿನ ಜೀವನಾಂಶ ಕೇಳುವಂತಿಲ್ಲ: ಹೈಕೋರ್ಟ್ ತೀರ್ಪು Read More »

ಸಕಾಲಿಕ ಚಿಂತನೆ| ವಿಧಾನ ಮಂಡಲ ಅನುಭಾವ ತುಂಬಿದ ಅನುಭವ ಮಂಟಪವಾಗಬೇಕಲ್ಲದೆ ಹುಚ್ಚರ ಸಂತೆಯಾಗಬಾರದು..!

ಸಮಗ್ರ ವಿಶೇಷ: ವಿಧಾನ ಮಂಡಲದ ಉಭಯ ಸದನಗಳ ಕಾರ್ಯಕಲಾಪಗಳನ್ನು ನೇರವಾಗಿ ವೀಕ್ಷಿಸುವ ಯುವ ಜನಾಂಗದ ಮನಸ್ಸುಗಳು ಹೇಗೆ ಯೋಚಿಸಬಹುದು? ಕನಿಷ್ಠ ಶಾಲೆಗಳಲ್ಲಿ ಇರುವಷ್ಟು ಶಿಸ್ತು ಅಥವಾ ಬಸ್ಸು ರೈಲು ನಿಲ್ದಾಣಗಳಲ್ಲಿ ಇರಬಹುದಾದಷ್ಟು ಶಿಸ್ತು, ಮದುವೆಯ ಆರತಕ್ಷತೆಯಲ್ಲಿ ಇರುವ ಶಿಸ್ತು, ಮತದಾನ ಮಾಡುವಾಗ ಇರುವಷ್ಟು ಶಿಸ್ತು, ಉಪನ್ಯಾಸ – ವಿಚಾರ ಸಂಕಿರಣಗಳಲ್ಲಿ ಇರುವ ಶಿಸ್ತು ಅಥವಾ ಸಿನಿಮಾ ಮಂದಿರಗಳಲ್ಲಿ ಇರಬಹುದಾದಷ್ಟು ಶಿಸ್ತು ಕೂಡ ಇವರಲ್ಲಿ ಇಲ್ಲವಾಯಿತೇ? ಎಂದು ಒಂದು ಕ್ಷಣ ಅನಿಸಬಹುದೇ. ಎಷ್ಟೊಂದು ವ್ಯವಸ್ಥಿತವಾಗಿ, ಎಷ್ಟೊಂದು ಬುದ್ದಿವಂತ ಅಧಿಕಾರಿಗಳ

ಸಕಾಲಿಕ ಚಿಂತನೆ| ವಿಧಾನ ಮಂಡಲ ಅನುಭಾವ ತುಂಬಿದ ಅನುಭವ ಮಂಟಪವಾಗಬೇಕಲ್ಲದೆ ಹುಚ್ಚರ ಸಂತೆಯಾಗಬಾರದು..! Read More »

ಕೊಡಗು ಜಿಲ್ಲೆಯಲ್ಲಿ ಭಾರೀ ಮಳೆ| ಎಲ್ಲೋ ಅಲರ್ಟ್ ಘೋಷಣೆ| ಸಂಪರ್ಕ ಕಡಿತದ ಭೀತಿಯಲ್ಲಿ ಸಂಪಾಜೆ ಘಾಟ್!

ಸಮಗ್ರ ವಾರ್ತೆ: ಕೊಎಗು ಜಿಲ್ಲೆಯಲ್ಲಿ ಮಳೆ ಬಿರುಸು ಪಡೆದಿದ್ದು, ಹವಾಮಾನ ಇಲಾಖೆಯು ಯೆಲ್ಲೋ ಆಲರ್ಟ್ ಘೋಷಣೆ ಮಾಡಿದೆ. ಕಳೆದ ಹಲವು ದಿನಗಳಿಂದ ಬಿಡುವು ಕೊಟ್ಟಿದ್ದ ಮಳೆ ಮತ್ತೆ ಚುರುಕು ಪಡೆದುಕೊಂಡಿದೆ. ಜಿಲ್ಲೆಯ ಮಡಿಕೇರಿ, ನಾಪೋಕ್ಲು, ಗಾಳಿಬೀಡು, ವಿರಾಜಪೇಟೆ ಸೇರಿದಂತೆ ವಿವಿಧ ಭಾಗದಲ್ಲಿ ವ್ಯಾಪಕ ಮಳೆಯಾಗುತ್ತಿದೆ. ಹವಾಮಾನ ಇಲಾಖೆ ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಿದೆ. ಕೊಡಗಿನ ಹಲವು ಭಾಗಗಳಲ್ಲಿ ಮಳೆ ಜೊತೆಗೆ ಗಾಳಿಯೂ ಹೆಚ್ಚಾಗಿದ್ದು, ಮರಗಳು ಧರೆಗುರುಳಿವೆ. ಬೋಹಿಕೇರಿ ಮತ್ತು ಕುಶಾಲನಗರಕ್ಕೆ ತೆರಳುವ ರಸ್ತೆಯಲ್ಲಿ ಮರ

ಕೊಡಗು ಜಿಲ್ಲೆಯಲ್ಲಿ ಭಾರೀ ಮಳೆ| ಎಲ್ಲೋ ಅಲರ್ಟ್ ಘೋಷಣೆ| ಸಂಪರ್ಕ ಕಡಿತದ ಭೀತಿಯಲ್ಲಿ ಸಂಪಾಜೆ ಘಾಟ್! Read More »

ಹವಾಮಾನ ವರದಿ| ಕರ್ನಾಟಕ ಸೇರಿದಂತೆ 8 ರಾಜ್ಯಗಳಲ್ಲಿ ಜು.8ರವರೆಗೆ ಭಾರೀ ಮಳೆ‌ ಮುನ್ಸೂಚನೆ

ಸಮಗ್ರ ನ್ಯೂಸ್: ಜುಲೈ 8 ರವರೆಗೆ ದಕ್ಷಿಣ ಪೆನಿನ್ಸುಲರ್ ಭಾರತದಲ್ಲಿ ತೀವ್ರವಾದ ಮಳೆ ಮುಂದುವರಿಯುವ ಸಾಧ್ಯತೆಯಿದೆ ಎಂದು ಭಾರತ ಹವಾಮಾನ ಇಲಾಖೆ (ಐಎಂಡಿ) ಬುಧವಾರ ತಿಳಿಸಿದೆ. ಉತ್ತರಾಖಂಡ, ಹಿಮಾಚಲ ಪ್ರದೇಶ, ಗೋವಾ, ಗುಜರಾತ್, ಕರ್ನಾಟಕ, ಕೇರಳ ಸೇರಿದಂತೆ ಹಲವಾರು ರಾಜ್ಯಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಕೇಂದ್ರ ಹವಾಮಾನ ಮುನ್ಸೂಚನೆ ಸಂಸ್ಥೆ ಮುನ್ಸೂಚನೆ ನೀಡಿದೆ. ಜುಲೈ 6 ರಂದು ಮಹಾರಾಷ್ಟ್ರದ ನಾಲ್ಕು ಜಿಲ್ಲೆಗಳಾದ ಸತಾರಾ, ಪುಣೆ, ರತ್ನಾಗಿರಿ ಮತ್ತು ರಾಯಗಡ್ನಲ್ಲಿ ಭಾರಿ ಮಳೆಯಾಗಲಿದೆ ಎಂದು ಐಎಂಡಿ ಮುನ್ಸೂಚನೆ ನೀಡಿದೆ.

ಹವಾಮಾನ ವರದಿ| ಕರ್ನಾಟಕ ಸೇರಿದಂತೆ 8 ರಾಜ್ಯಗಳಲ್ಲಿ ಜು.8ರವರೆಗೆ ಭಾರೀ ಮಳೆ‌ ಮುನ್ಸೂಚನೆ Read More »

ಮುಂಗಾರು ಅಬ್ಬರಕ್ಕೆ ರಾಜ್ಯದಲ್ಲಿ ನಾಲ್ಕು ಬಲಿ| ಇಂದೂ ಸುರಿಯಲಿದೆ ಭಾರೀ ಮಳೆ| ಕರಾವಳಿ ಜಿಲ್ಲೆಯಲ್ಲಿ ಶಾಲೆ, ಕಾಲೇಜುಗಳಿಗೆ ರಜೆ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಮಳೆಯ ಆರ್ಭಟ ಮುಂದುವರೆದಿದ್ದು, ಕರಾವಳಿ ಭಾಗದಲ್ಲಿ ಮಳೆ ಸಂಬಂಧಿ ಅವಘಡಗಳಲ್ಲಿ ನಾಲ್ವರು ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಮಳೆಯ ಅಬ್ಬರದಿಂದಾಗಿ ಮಂಗಳೂರು, ಉಡುಪಿ, ಕುಂದಾಪುರ, ಕಾರವಾರ ತಾಲೂಕಿನಲ್ಲಿ ತಲಾ ಒಬ್ಬರು ಸಾವನ್ನಪ್ಪಿದ್ದಾರೆ. ಮಳೆಯಿಂದಾಗಿ ಕರಾವಳಿ, ಮಲೆನಾಡು ಭಾಗದ ನದಿಗಳಲ್ಲಿ ನೀರಿನ ಹರಿವು ಹೆಚ್ಚಿದ್ದು, ಉಡುಪಿ ಸಮೀಪದ ಬಜೆ ಹಾಗೂ ಶಿವಮೊಗ್ಗದ ಗಾಜನೂರು ಜಲಾಶಯಗಳು ಭರ್ತಿಯಾಗಿವೆ. ರಾಜ್ಯಾದ್ಯಂತ 2 ದಿನ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಹಾವೇರಿ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಿಗೆ ರೆಡ್

ಮುಂಗಾರು ಅಬ್ಬರಕ್ಕೆ ರಾಜ್ಯದಲ್ಲಿ ನಾಲ್ಕು ಬಲಿ| ಇಂದೂ ಸುರಿಯಲಿದೆ ಭಾರೀ ಮಳೆ| ಕರಾವಳಿ ಜಿಲ್ಲೆಯಲ್ಲಿ ಶಾಲೆ, ಕಾಲೇಜುಗಳಿಗೆ ರಜೆ Read More »

ಕರ್ನಾಟಕ ವಕ್ಫ್ ಬೋರ್ಡ್ ಸ್ಥಾನಕ್ಕೆ ಶಾಫಿ ಸ ಅದಿ ರಾಜೀನಾಮೆ

ಸಮಗ್ರ ನ್ಯೂಸ್: ಕರ್ನಾಟಕ ವಕ್ಫ್ ಬೋರ್ಡ್ ಅಧ್ಯಕ್ಷ ಸ್ಥಾನಕ್ಕೆ ಎನ್.ಕೆ.ಮುಹಮ್ಮದ್ ಶಾಫಿ ಸಅದಿ ಇಂದು (ಜು.5) ರಾಜೀನಾಮೆ ಸಲ್ಲಿಸಿದ್ದಾರೆ. ಶಾಫಿ ಸಅದಿ ಅವರು ಸಲ್ಲಿಸಿದ್ದ ರಾಜೀನಾಮೆಯನ್ನು ಸರಕಾರವು ಅಂಗೀಕರಿಸಿದ್ದು, ನೂತನ ಅಧ್ಯಕ್ಷರ ಆಯ್ಕೆಯಾಗುವವರೆಗೆ ಶಾಫಿ ಸಅದಿ ಅವರೇ ಹಂಗಾಮಿ ಅಧ್ಯಕ್ಷರಾಗಿ ಮುಂದುವರಿಯಲಿದ್ದಾರೆ ಎಂದು ತಿಳಿದುಬಂದಿದೆ.

ಕರ್ನಾಟಕ ವಕ್ಫ್ ಬೋರ್ಡ್ ಸ್ಥಾನಕ್ಕೆ ಶಾಫಿ ಸ ಅದಿ ರಾಜೀನಾಮೆ Read More »