ಕರಾವಳಿ

ಭ್ರಷ್ಟ ಅಧಿಕಾರಿ ಅಜಿತ್ ರೈ ನ್ಯಾಯಾಂಗ ಬಂಧನಕ್ಕೆ ‌ಕೋರ್ಟ್‌ ಆದೇಶ

ಸಮಗ್ರ ವಾರ್ತೆ: ಅಕ್ರಮ ಆಸ್ತಿ ಗಳಿಕೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರ ವಶದಲ್ಲಿದ್ದ ಅಜಿತ್ ರೈ ಯನ್ನು ಕೋರ್ಟ್ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶ ಹೊರಡಿಸಿದೆ. ಲೋಕಾಯುಕ್ತ ಕಸ್ಟಡಿ ಅವಧಿ ಜು.6ಕ್ಕೆ ಮುಕ್ತಾಯವಾದ ಹಿನ್ನೆಲೆ ಅಜಿತ್ ರೈ ಅವರನ್ನು ಇಂದು ಕೋರ್ಟ್ಗೆ ಹಾಜರುಪಡಿಸಿದ ಲೋಕಾಯುಕ್ತ ಅಧಿಕಾರಿಗಳು, ಮತ್ತೆ ಕಸ್ಟಡಿಗೆ ನೀಡುವಂತೆ ಮನವಿ ಮಾಡಿದ್ದರು. ಆದರೆ ವಿಚಾರಣೆ ನಡೆಸಿದ ಕೋರ್ಟ್ ‘ಅಜಿತ್ ರೈ’ ಯನ್ನು ನ್ಯಾಯಾಂಗ ವಶಕ್ಕೆ ನೀಡಿದ ವಿಶೇಷ ನ್ಯಾಯಾಲಯ ಜುಲೈ 11 ಕ್ಕೆ ವಿಚಾರಣೆ

ಭ್ರಷ್ಟ ಅಧಿಕಾರಿ ಅಜಿತ್ ರೈ ನ್ಯಾಯಾಂಗ ಬಂಧನಕ್ಕೆ ‌ಕೋರ್ಟ್‌ ಆದೇಶ Read More »

ದಶಪಥ ಹೆದ್ದಾರಿಯಲ್ಲಿ ವ್ಹೀಲಿಂಗ್ ಹುಚ್ಚಾಟ| ನಾಲ್ವರನ್ನು ಬಂಧಿಸಿ ಕೇಸ್ ಜಡಿದ ಪೊಲೀಸರು

ಸಮಗ್ರ ನ್ಯೂಸ್: ಬೆಂಗಳೂರು- ಮೈಸೂರು ದಶಪಥ ಹೆದ್ದಾರಿಯ ಪ್ಲೈ ಓವರ್ ಮೇಲೆ ಬೈಕ್ ವೀಲಿಂಗ್ ಮಾಡಿ ದುಸ್ಸಾಹಸ ತೋರಿದ್ದ ನಾಲ್ವರು ಪುಂಡರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರು ಮೊಹಮದ್ ಹುಸೇನ್, ವಾಸೀಂ ಖಾನ್, ಮುಜಾಮೀನ್, ಸುಲ್ತಾನ್ ಎಂದು ಗುರುತಿಸಲಾಗಿದೆ. ಓನ್ ವೇ ಯಲ್ಲಿ ಹುಡುಗಿಯರೊಂದಿಗೆ ವ್ಹೀಲಿಂಗ್ ಮಾಡಿ ಹುಚ್ಚಾಟ ತೋರಿದ್ದರು ಮಾತ್ರವಲ್ಲದೆ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದರು. ಕುಂಬಳಗೋಡು ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸಾಮಾಜಿಕ ಜಾಲತಾಣದಲ್ಲಿನ ವಿಡಿಯೋ ಆಧರಿಸಿ ನಾಲ್ವರ ಮೇಲೆ ಮೋಟಾರ್ ವೆಹಿಕಲ್ ಆಕ್ಟ್

ದಶಪಥ ಹೆದ್ದಾರಿಯಲ್ಲಿ ವ್ಹೀಲಿಂಗ್ ಹುಚ್ಚಾಟ| ನಾಲ್ವರನ್ನು ಬಂಧಿಸಿ ಕೇಸ್ ಜಡಿದ ಪೊಲೀಸರು Read More »

ಜು. 8ರಂದು ಮಂಗಳೂರಿನ ಕೆಲವೆಡೆ ನಿಷೇದಾಜ್ಞೆ ಜಾರಿ

ಸಮಗ್ರ ನ್ಯೂಸ್: ಜು.8ರಂದು ಕರ್ನಾಟಕ ಭೂ ದಾಖಲೆಗಳ ಇಲಾಖೆ ವತಿಯಿಂದ ಲೈಸಸ್ಸ್ಡ್ ಸರ್ವೆಯರ್ ಆನ್ಲೈನ್ ಪರೀಕ್ಷೆ ಮೂಡುಬಿದರೆಯ ಯೆನಪೋಯ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಹಾಗೂ ಮಂಗಳೂರಿನ ಮಂಗಳೂರು ಮಣಿಪಾಲ್ ಇನ್ಸ್ಟಿಟ್ಯೂಟ್ ಆಫ್ ಕಂಪ್ಯೂಟರ್ ಎಜುಕೇಶನ್ ನಲ್ಲಿ ನಡೆಯಲಿದೆ. ಈ ಪರೀಕ್ಷೆಗಳು ಸುಗಮವಾಗಿ ನಡೆಯಲು ಅನುಕೂಲವಾಗುವಂತೆ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀಟರ್ ವ್ಯಾಪ್ತಿಯ ಪ್ರದೇಶದಲ್ಲಿ ಸಿ ಆರ್ ಪಿ ಸಿ ಕಲಂ 144 ರಂತೆ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಉಪ ಪೊಲೀಸ್ ಆಯುಕ್ತರು ಹಾಗೂ ವಿಶೇಷ

ಜು. 8ರಂದು ಮಂಗಳೂರಿನ ಕೆಲವೆಡೆ ನಿಷೇದಾಜ್ಞೆ ಜಾರಿ Read More »

ಅಬ್ಬರಿಸಿದ ಪುನರ್ವಸು ಮಳೆ| ಕರಾವಳಿ, ಮಲೆನಾಡಿಗೆ ಜಲ ಕಂಟಕ| ಇಂದೂ ಹಲವು ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ

ಸಮಗ್ರ ವಾರ್ತೆ: ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಮಳೆಯ ರುದ್ರ ನರ್ತನದಿಂದ ಬದುಕು ಮೂರಾಬಟ್ಟೆಯಾಗಿದೆ. ಇಡೀ ಕರಾವಳಿಯನ್ನು ಮಳೆ ಆಪೋಷನ ಪಡೆದಿದ್ದು ಎಲ್ಲೆಂದರಲ್ಲಿ ಜಲರಾಶಿಯೇ ಕಂಡುಬರುತ್ತಿದೆ.ಈ ನಡುವೆ ಮಲೆನಾಡು ಭಾಗದಲ್ಲಿ ಗುಡ್ಡ ಕುಸಿತ ಮತ್ತು ರಸ್ತೆ ಕುಸಿತವೂ ಆರಂಭವಾಗಿದ್ದು, ಅಪಾಯ ಎದುರಾಗಿದೆ. ಮುಂಜಾಗ್ರತಾ ಕ್ರಮವಾಗಿ ಹಲವು ಜಿಲ್ಲೆಗಳಲ್ಲಿ ಶಾಲೆ ಹಾಗೂ ಪಿಯು ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲೂಕಿನ ಕಲ್ಲಪ್ಪಳ್ಳಿಯಲ್ಲಿ ರಸ್ತೆ ಮೇಲೆ ಗುಡ್ಡ ಕುಸಿತದ ಪರಿಣಾಮ ಸಂಚಾರ ಬಂದ್ ಆಗಿದೆ.

ಅಬ್ಬರಿಸಿದ ಪುನರ್ವಸು ಮಳೆ| ಕರಾವಳಿ, ಮಲೆನಾಡಿಗೆ ಜಲ ಕಂಟಕ| ಇಂದೂ ಹಲವು ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ Read More »

ಕೊಡಗು: ವಿಶ್ವ ಹಿಂದೂ ಪರಿಷತ್ ಮುಖಂಡನಿಗೆ ನಕ್ಸಲ್ ಬೆದರಿಕೆ

ಸಮಗ್ರ ನ್ಯೂಸ್: ಕೊಡಗು ಜಿಲ್ಲೆಯ ವಿಶ್ವ ಹಿಂದೂ ಪರಿಷತ್ ಜಿಲ್ಲಾಧ್ಯಕ್ಷ ಹಾಗೂ ವಕೀಲ ಕೃಷ್ಣಮೂರ್ತಿ ಅವರಿಗೆ ಬೆದರಿಕೆ ಬಂದಿದ್ದು ಬೆದರಿಕೆ ಪತ್ರ ಕೊನೆಯಲ್ಲಿ ನಕ್ಸಲ್ ಬಾರಿ ಜಿಂದಾಬಾದ್ ಎಂಬ ಪದ ಉಲ್ಲೇಖವಾಗಿದ್ದು ಈ ಬಗ್ಗೆ ಕೃಷ್ಣಮೂರ್ತಿ ಮಡಿಕೇರಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಪೋಸ್ಟ್ ನಲ್ಲಿ ಬೆದರಿಕೆ ಪತ್ರ ಬಂದಿದ್ದು ಈ ಪತ್ರ ಓದಲು ನೀನು ಬದುಕಿರುವುದಕ್ಕೆ ಅಭಿನಂದನೆ ಗೌರಿ ಕೊಂದವರಿಗೆ ನಮ್ಮ ಸರಕಾರ ಇದ್ದಾಗ ಶಿಕ್ಷೆ ನೀಡಿದ್ದೇವೆ ಆರೋಪಿತರ ಬಿಡುಗಡೆ ಪ್ರಯತ್ನ ತಕ್ಷಣ ನಿಲ್ಲಿಸು ಇದಕ್ಕಾಗಿ

ಕೊಡಗು: ವಿಶ್ವ ಹಿಂದೂ ಪರಿಷತ್ ಮುಖಂಡನಿಗೆ ನಕ್ಸಲ್ ಬೆದರಿಕೆ Read More »

ಇಂದು ರಾಜ್ಯ ಬಜೆಟ್ ಮಂಡನೆ| ಜನಸಾಮಾನ್ಯರ ಕಿಸೆಗೆ ಕತ್ತರಿ ‘ಗ್ಯಾರಂಟಿ’ನಾ?…

ಸಮಗ್ರ ನ್ಯೂಸ್: ಐದು ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸುವ ಒತ್ತಡ, ಎತ್ತಿನಹೊಳೆ, ಮೇಕೆದಾಟು, ಕೃಷ್ಣಾ-ಭದ್ರಾ ಮೇಲ್ದಂಡೆ, ಆಲಮಟ್ಟಿಯಂತಹ ಬೃಹತ್‌ ನೀರಾವರಿ ಯೋಜನೆಗಳಿಗೆ ಹಣ ಮೀಸಲಿಡುವ ಅನಿವಾರ್ಯತೆ, ಸಿಬ್ಬಂದಿ ವೇತನ ಹೆಚ್ಚಳ, ರಾಜ್ಯದ ಆರ್ಥಿಕ ಸ್ಥಿತಿಯನ್ನು ಮೇಲೆತ್ತುವಂತಹ ಸಾಲು-ಸಾಲು ಸವಾಲುಗಳ ಒತ್ತಡದ ನಡುವೆ ಇಂದು(ಜು.7) 2023-24ನೇ ಸಾಲಿನ ಬಜೆಟ್‌ ಮಂಡನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಣಿಯಾಗಿದ್ದಾರೆ. ಇಂದು ಮಧ್ಯಾಹ್ನ 12 ಗಂಟೆಗೆ ಮಂಡಿಸಲಿರುವ ಆಯವ್ಯಯದಲ್ಲಿ ಗ್ಯಾರಂಟಿ ಯೋಜನೆಗಳ ಹೊರತಾಗಿ ಯಾವುದೇ ಜನಪ್ರಿಯ ಯೋಜನೆಗಳ ಘೋಷಣೆ ಸಾಧ್ಯತೆ ಕಡಿಮೆಯಿದ್ದರೂ, ಡೆಲಿವರಿ ಬಾಯ್‌ಗಳಂತಹ

ಇಂದು ರಾಜ್ಯ ಬಜೆಟ್ ಮಂಡನೆ| ಜನಸಾಮಾನ್ಯರ ಕಿಸೆಗೆ ಕತ್ತರಿ ‘ಗ್ಯಾರಂಟಿ’ನಾ?… Read More »

ಬೆಳ್ಳಾರೆ: ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ 9ನೇ ಶಾಖೆ ಉದ್ಘಾಟನೆ

ಸಮಗ್ರ ನ್ಯೂಸ್: ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘ ಪುತ್ತೂರು ಇದರ 9 ನೇ ಶಾಖೆ ಬೆಳ್ಳಾರೆಯಲ್ಲಿ ಉದ್ಘಾಟನೆಗೊಂಡಿದೆ. ಪರಸ್ಪರ ಸಹಕಾರ, ಪ್ರೀತಿ, ಶ್ರದ್ಧೆಯನ್ನು ಇಟ್ಟುಕೊಂಡಿರುವ ಸಹಕಾರಿ ಸಂಸ್ಥೆ ಆರ್ಥಿಕವಾಗಿ ಮುನ್ನಡೆಯುತ್ತದೆ. ಜ್ಞಾನ ಶಕ್ತಿ ಇಚ್ಛಾಶಕ್ತಿ ಕ್ರಿಯಾಶಕ್ತಿಗಳು ಅಂತರ್ಯದಲ್ಲಿ ಬೆಳೆಯಬೇಕು. ಪ್ರೀತಿ, ನಂಬಿಕೆ, ವಿಶ್ವಾಸಗಳಿಂದ ಸಹಕಾರಿ ಸಂಘದ ಅಭಿವೃದ್ಧಿ ಸಾಧ್ಯ. ಬ್ರಿಟಿಷರ ಖಜಾನೆಯೂ ಬೆಳ್ಳಾರೆಯಲ್ಲಿತ್ತು ಎಂದು ಹೇಳಿ ಕೆದಂಬಾಡಿ ರಾಮಯ್ಯ ಗೌಡರ ಹೋರಾಟವನ್ನು ನೆನಪಿಸಿಕೊಂಡರು. ಸಹಕಾರಿ ಸಂಘದ ಜೊತೆ ಆಧ್ಯಾತ್ಮಿಕ ಕೇಂದ್ರವನ್ನು ಕೂಡ ಸ್ಥಾಪಿಸಬೇಕು ಎಂದು ಆದಿಚುಂಚನಗಿರಿ

ಬೆಳ್ಳಾರೆ: ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ 9ನೇ ಶಾಖೆ ಉದ್ಘಾಟನೆ Read More »

ಮಡಿಕೇರಿ:ಸಂಚಾರ ನಿಯಮ ಉಲ್ಲಂಘನೆ ಶೇ.50 ರ ರಿಯಾಯಿತಿಯಲ್ಲಿ ದಂಡ ಪಾವತಿಸಲು ಅವಕಾಶ

ಸಮಗ್ರ ನ್ಯೂಸ್: ಆಯುಕ್ತರು, ಸಾರಿಗೆ ಮತ್ತು ರಸ್ತೆ ಸುರಕ್ಷತೆ ಬೆಂಗಳೂರು ಇವರು ಮಾನ್ಯ ಗೌರವಾನ್ವಿತ ಉಚ್ಛ ನ್ಯಾಯಾಲಯದ ನ್ಯಾಯಾಧೀಶರು ಹಾಗೂ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ನಿರ್ಣಯಿಸಿದಂತೆ, ಪೊಲೀಸ್ ಇಲಾಖೆಯ ಸಂಚಾರಿ ಇ-ಚಲನ್‍ನಲ್ಲಿ ದಾಖಲಾದ ಪ್ರಕರಣಗಳಿಗೆ ಅನ್ವಯವಾಗುವಂತೆ ಸಂಚಾರಿ ಇ-ಚಲನ್ ಮೂಲಕ ವಿಧಿಸಿದ ದಂಡದ ಮೊತ್ತದಲ್ಲಿ ಶೇ.50 ರಷ್ಟು ರಿಯಾಯಿತಿ ನೀಡಿ ಸರ್ಕಾರ ಆದೇಶ ಹೊರಡಿಸಿದೆ. ಈ ರಿಯಾಯಿತಿಯು 2023 ರ ಸೆಪ್ಟೆಂಬರ್, 09 ರವರೆಗೆ ಇತ್ಯರ್ಥಗೊಳ್ಳುವ ಪ್ರಕರಣಗಳಿಗೆ ಮಾತ್ರ

ಮಡಿಕೇರಿ:ಸಂಚಾರ ನಿಯಮ ಉಲ್ಲಂಘನೆ ಶೇ.50 ರ ರಿಯಾಯಿತಿಯಲ್ಲಿ ದಂಡ ಪಾವತಿಸಲು ಅವಕಾಶ Read More »

ಭಾರೀ ಮಳೆ ಹಿನ್ನೆಲೆ| ಉಡುಪಿ ಜಿಲ್ಲೆಯಲ್ಲಿ ನಾಳೆ(ಜು.7) ಶಾಲೆ, ಪಿಯು ಕಾಲೇಜುಗಳಿಗೆ ರಜೆ

ಸಮಗ್ರ ನ್ಯೂಸ್: ಉಡುಪಿ ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತ ಕ್ರಮವಾಗಿ ನಾಳೆ(ಜು.7) ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ ಹಾಗೂ ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ರಜೆಯನ್ನು ಘೋಷಿಸಲಾಗಿದೆ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಜು.7ರಂದು ಉಡುಪಿ ಜಿಲ್ಲೆಯಾದ್ಯಂತ ಶಾಲಾ- ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಕೂರ್ಮಾರಾವ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಭಾರೀ ಮಳೆ ಹಿನ್ನೆಲೆ| ಉಡುಪಿ ಜಿಲ್ಲೆಯಲ್ಲಿ ನಾಳೆ(ಜು.7) ಶಾಲೆ, ಪಿಯು ಕಾಲೇಜುಗಳಿಗೆ ರಜೆ Read More »

ಮುಂದುವರಿದ ಧಾರಾಕಾರ ಮಳೆ| ನಾಳೆ(ಜು.7) ಕೂಡಾ ದ.ಕ ಜಿಲ್ಲೆಯಲ್ಲಿ ಶಾಲೆ ಹಾಗೂ ಪಿಯು ಕಾಲೇಜುಗಳಿಗೆ ರಜೆ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಸುರಿಯುತ್ತಿರುವ ಪರಿಣಾಮ ಅಂಗನವಾಡಿ, ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಜು.7ರ ಶುಕ್ರವಾರ ರಜೆ ಘೋಷಿಸಿ ಆದೇಶಿಸಲಾಗಿದೆ. ದ.ಕ‌ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಈ ಕುರಿತಂತೆ ಆದೇಶಿಸಿದ್ದು, ಮಳೆ ವಿಪರೀತವಾಗಿ ಸುರಿಯುತ್ತಿರುವ ಪರಿಣಾಮ ಎಚ್ಚರಿಕೆ ವಹಿಸಲು ಪ್ರಾಕೃತಿಕ ವಿಕೋಪ ಪಡೆ ಹಾಗೂ ಆಡಳಿತಕ್ಕೆ ಸೂಚಿಸಿದ್ದಾರೆ. ಪ್ರಾಕೃತಿಕ ವಿಕೋಪಕ್ಕೆ ಸಂಬಂಧಿಸಿದ ಯಾವುದೇ ಸಮಸ್ಯೆಗಳಿಗೆ ಕಂಟ್ರೋಲ್ ರೂಂ 1077 ಹಾಗೂ ದೂರವಾಣಿ: 0824 – 2442590‌ ಸಂಪರ್ಕಿಸುವಂತೆ ಜಿಲ್ಲಾ ವಿಪತ್ತು

ಮುಂದುವರಿದ ಧಾರಾಕಾರ ಮಳೆ| ನಾಳೆ(ಜು.7) ಕೂಡಾ ದ.ಕ ಜಿಲ್ಲೆಯಲ್ಲಿ ಶಾಲೆ ಹಾಗೂ ಪಿಯು ಕಾಲೇಜುಗಳಿಗೆ ರಜೆ Read More »