ಕರಾವಳಿ

ಬೆಂಗಳೂರು: ಗಂಡನ ಅನೈತಿಕ ಸಂಬಂಧಕ್ಕೆ ಬೇಸತ್ತು ಹೆಂಡತಿ ಆತ್ಮಹತ್ಯೆ

ಸಮಗ್ರ ನ್ಯೂಸ್ : ಗಂಡನ ಅನೈತಿಕ ಸಂಬಂಧಕ್ಕೆ ಬೇಸತ್ತು ಗೃಹಿಣಿಯೊಬ್ಬರು ಆತ್ಮಹತ್ಯೆಗೆ ಶರಣಾದ ಘಟನೆ ಕೆಂಗೇರಿ ಠಾಣಾ ವ್ಯಾಪ್ತಿಯಲ್ಲಿ ಜು. 2ರಂದು ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಆತ್ಮಹತ್ಯೆ ಮಾಡಿಕೊಂಡ ಮಹಿಳೆಯನ್ನು ಪವಿತ್ರಾ ಎಂದು ಗುರುತಿಸಲಾಗಿದೆ. ಪವಿತ್ರಾ ಮೊದಲ ಪತಿಗೆ ವಿಚ್ಛೇದನ ನೀಡಿ ಚೇತನ್ ಗೌಡ ಎಂಬಾತನನ್ನು ಎರಡನೇ ವಿವಾಹವಾಗಿದ್ದಳು. ಚೇತನ್​ ಕಂಪೆನಿಯೊಂದರ ಮಾಲೀಕನಾಗಿದ್ದು, ಇತ್ತೀಚೆಗೆ ಚೇತನ್​ಗೆ ಮತ್ತೊರ್ವ ಯುವತಿಯ ಸಂಪರ್ಕ ಬೆಳೆದಿದ್ದು, ಇದೇ ವಿಚಾರವಾಗಿ ಇಬ್ಬರ ಮಧ್ಯೆ ಆಗಾಗ ಜಗಳ ನಡೆಯುತ್ತಿತ್ತು. ಈ ಬಗ್ಗೆ ತನ್ನ […]

ಬೆಂಗಳೂರು: ಗಂಡನ ಅನೈತಿಕ ಸಂಬಂಧಕ್ಕೆ ಬೇಸತ್ತು ಹೆಂಡತಿ ಆತ್ಮಹತ್ಯೆ Read More »

ಸುಳ್ಯ:ಜು.6 ರಂದು ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘ ಉದ್ಘಾಟನಾ ಸಮಾರಂಭ

ಸಮಗ್ರ ನ್ಯೂ ಸ್: ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ 9ನೆಯ ಶಾಖೆ ಬೆಳ್ಳಾರೆಯ ಕಾತ್ಯಾಯಿನಿ ಕಾಂಪ್ಲೆಕ್ಸ್ ಜು.6 ರಂದು ಪೂ.11ಗಂಟೆಗೆ ಉದ್ಘಾಟನೆಗೊಳ್ಳಲಿದೆ. ಕಾರ್ಯಕ್ರಮದ ದ್ವೀಪ ಪ್ರಜ್ವಲೆಯನ್ನು ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಶಾಖಾ ಮಠ,ಕಾವೂರು ಮಂಗಳೂರು ಇಲ್ಲಿಯ ಪರಮಪೂಜ್ಯ ಶ್ರೀ ಶ್ರೀ ಡಾ| ಧರ್ಮಪಾಲನಾಥ ಸ್ವಾಮೀಜಿಯವರು ನೆರವೇರಿಸಲಿದ್ದಾರೆ.ಅಧ್ಯಕ್ಷತೆಯನ್ನು ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾದ ಶ್ರೀ ಚಿದಾನಂದ ಬೈಲಾಡಿ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸುಳ್ಯ ವಿಧಾನಸಭಾ ಕ್ಷೇತ್ರದ ಭಾಗೀರಥಿ ಮುರುಳ್ಯ,ಪುತ್ತೂರು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರಾದ

ಸುಳ್ಯ:ಜು.6 ರಂದು ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘ ಉದ್ಘಾಟನಾ ಸಮಾರಂಭ Read More »

ಬೇನಾಮಿ ಆಸ್ತಿ ಹೊಂದಿದ್ದ ಅಜಿತ್ ರೈ ಗ್ರೇಡ್ 2 ತಹಶಿಲ್ದಾರ್ ಆಗಿ ಸಿರಿವಾರಕ್ಕೆ ನಿಯೋಜನೆ| ಸರ್ಕಾರದ ನಡೆಗೆ ವ್ಯಾಪಕ ಆಕ್ರೋಶ

ಸಮಗ್ರ ವಾರ್ತೆ: 500 ಕೋಟಿಗೂ ಅಧಿಕ ಬೇನಾಮಿ ಆಸ್ತಿ ಸಂಪಾದಿಸಿದ ಆರೋಪ ಹೊತ್ತಿರುವ ಬೆಂಗಳೂರಿನ ಕೆಆರ್ ಪುರ ತಹಶೀಲ್ದಾರ್ ಗೆ ಅಜಿತ್ ಕುಮಾರ್ ರೈ ಅವರನ್ನು ರಾಯಚೂರು ಜಿಲ್ಲೆಯ ಸಿರಿವಾರ ತಾಲೂಕಿನ ಗ್ರೇಡ್ -2 ತಹಶೀಲ್ದಾರ್ ಹುದ್ದೆಗೆ ಸರ್ಕಾರ ನೇಮಕ ಮಾಡಿದ್ದು, ಸರ್ಕಾರದ ಈ ನಡೆಗೆ ಆಕ್ರೋಶ ವ್ಯಕ್ತವಾಗಿದೆ. ಆದಾಯಕ್ಕಿಂತ ಭಾರಿ ಪ್ರಮಾಣದಲ್ಲಿ ಆಸ್ತಿ ಸಂಪಾದಿಸಿರುವ ಅಜಿತ್ ರೈ ವಿರುದ್ಧ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಾಗಿ ತನಿಖೆ ಮುಂದುವರೆದಿದೆ. ಸಿರವಾರದಲ್ಲಿ ಗ್ರೇಡ್ 2 ತಹಶೀಲ್ದಾರ್ ಆಗಿದ್ದ ಪರಶುರಾಮ 500

ಬೇನಾಮಿ ಆಸ್ತಿ ಹೊಂದಿದ್ದ ಅಜಿತ್ ರೈ ಗ್ರೇಡ್ 2 ತಹಶಿಲ್ದಾರ್ ಆಗಿ ಸಿರಿವಾರಕ್ಕೆ ನಿಯೋಜನೆ| ಸರ್ಕಾರದ ನಡೆಗೆ ವ್ಯಾಪಕ ಆಕ್ರೋಶ Read More »

ಹವಾಮಾನ ವರದಿ| ರಾಜ್ಯಾದ್ಯಂತ ಬಿರುಸುಗೊಂಡ ಮುಂಗಾರು| ಮುಂದಿನ 4-5 ದಿನ ಭಾರೀ ಮಳೆ; ಹಲವು ಜಿಲ್ಲೆಗಳಿಗೆ ಅಲರ್ಟ್ ಘೋಷಿಸಿದ ಐಎಂಡಿ

ಸಮಗ್ರ ನ್ಯೂಸ್: ಕಳೆಗುಂದಿದ್ದ ಮುಂಗಾರು ಮಾರುತ ಚುರುಕುಗೊಂಡಿದ್ದು ಕಳೆದೆರಡು ದಿನಗಳಿಂದ ರಾಜ್ಯದಲ್ಲಿ ಮಳೆ ಬಿರುಸಾಗಿದೆ. ಈ ನಡುವೆ ರಾಜ್ಯದಲ್ಲಿ ಮಳೆ ಕ್ರಮೇಣ ತೀವ್ರಗೊಳ್ಳಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇಂದಿನಿಂದ ಮುಂದಿನ 4-5 ದಿನಗಳ ಕಾಲ ರಾಜ್ಯದಲ್ಲಿ ಭಾರೀ ಮಳೆಯಾಗಲಿದ್ದು, ಜುಲೈ ತಿಂಗಳಿನಲ್ಲಿ ವಾಡಿಕೆಗಿಂತ ಅಧಿಕ ಮಳೆ ಸುರಿಯುವ ನಿರೀಕ್ಷೆ ಇದೆ. ಕರಾವಳಿ, ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಈ ತಿಂಗಳವಿಡಿ ಉತ್ತಮ ಮಳೆಯಾಗುವ ಸಾಧ್ಯತೆ ಇದೆ. ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗದಲ್ಲಿ

ಹವಾಮಾನ ವರದಿ| ರಾಜ್ಯಾದ್ಯಂತ ಬಿರುಸುಗೊಂಡ ಮುಂಗಾರು| ಮುಂದಿನ 4-5 ದಿನ ಭಾರೀ ಮಳೆ; ಹಲವು ಜಿಲ್ಲೆಗಳಿಗೆ ಅಲರ್ಟ್ ಘೋಷಿಸಿದ ಐಎಂಡಿ Read More »

80Km ಮೈಲೇಜ್ ಇರುವ ಹೀರೋ ಬೈಕ್ ಕೊಳ್ಳಲು ಹಾತೊರೆಯುತ್ತಿರುವ ಜನ! | ಇದರ ಬೆಲೆ ಎಷ್ಟು ಗೊತ್ತಾ? ಇಲ್ಲಿದೆ ಮಾಹಿತಿ

ಸಮಗ್ರ ನ್ಯೂಸ್: ಸಾಕಷ್ಟು ವರ್ಷಗಳಿಂದ ದ್ವಿಚಕ್ರ ವಾಹನ ಮಾರುಕಟ್ಟೆಯಲ್ಲಿ ಹೀರೋ ಮೋಟೋಕಾರ್ಪ್ (Hero Motocorp) ಸಂಸ್ಥೆಯ ಒಂದು ದ್ವಿಚಕ್ರ ವಾಹನ ತನ್ನ ಮಾರುಕಟ್ಟೆಯನ್ನು ವರ್ಷದಿಂದ ವರ್ಷಕ್ಕೆ ಹೆಚ್ಚಿಸಿಕೊಳ್ಳುತ್ತಲೇ ಇದೆ. ಬಜೆಟ್ ಹಾಗೂ ಮೈಲೇಜ್ ವಿಚಾರಕ್ಕೆ ಬಂದರೆ ಈ ಬೈಕಿನ ಮುಂದೆ ನಿಲ್ಲುವರು ಯಾರು ಇಲ್ಲ. ದಿನನಿತ್ಯದ ಪ್ರಯಾಣಕ್ಕೆ ವಾಹನವನ್ನು ಬಳಸುವ ಪ್ರತಿಯೊಬ್ಬರ ಫೇವರೆಟ್ ಬೈಕ್ ಇದಾಗಿದೆ. ಇದರ ಹೆಸರು ಹೇಳಿ ವಿವರಿಸಬೇಕಾದ ಅಗತ್ಯವಿಲ್ಲ. ಅದು Hero Splendor ಹೊರತು ಬೇರಾವುದಲ್ಲ. ಹೀರೋ ಸಂಸ್ಥೆಯ ಪ್ರತಿಯೊಂದು ಸೆಗ್ಮೆಂಟ್ ನಲ್ಲಿ

80Km ಮೈಲೇಜ್ ಇರುವ ಹೀರೋ ಬೈಕ್ ಕೊಳ್ಳಲು ಹಾತೊರೆಯುತ್ತಿರುವ ಜನ! | ಇದರ ಬೆಲೆ ಎಷ್ಟು ಗೊತ್ತಾ? ಇಲ್ಲಿದೆ ಮಾಹಿತಿ Read More »

ಸೌಜನ್ಯ ಅತ್ಯಾಚಾರ ಪ್ರಕರಣ| ನ್ಯಾಯಕ್ಕಾಗಿ ಕಾನತ್ತೂರು, ಧರ್ಮಸ್ಥಳದ ಕಾರಣಿಕ ಶಕ್ತಿಗಳಿಗೆ ಹರಕೆ ಹೊತ್ತ ವಿಠಲ ಗೌಡ

ಸಮಗ್ರ ನ್ಯೂಸ್: ಧರ್ಮಸ್ಥಳದ ಸಮೀಪ ಅತ್ಯಾಚಾರಕ್ಕೆ ಒಳಗಾಗಿ ಕೊಲೆಯಾಗಿದ್ದ ಸೌಜನ್ಯ ಹತ್ಯೆ ಪ್ರಕರಣ ಮತ್ತೆ ಮುನ್ನಲೆಗೆ ಬಂದಿದ್ದು ಪ್ರಕರಣ ದಿನಕ್ಕೊಂದು ಸ್ವರೂಪ ಪಡೆದುಕೊಳ್ಳುತ್ತಿದೆ. ಸಿಬಿಐ ವಿಶೇಷ ಕೋರ್ಟ್‌ ನಲ್ಲಿ ಸಂತೋಷ್ ರಾವ್ ನಿರಪರಾಧಿ ಎಂದು ತೀರ್ಪು ಬರುತ್ತಲೇ ನಿಜವಾದ ಅಪರಾಧಿ ಯಾರು ಅನ್ನುವ ಪ್ರಶ್ನೆ ಎದ್ದಿದೆ. ಈ ನಡುವೆಯೇ ಸೌಜನ್ಯಳ ಮಾವ ಇದೀಗ ದೈವ ದೇವರಿಗೆ ಹರಕೆ ಹೊತ್ತಿರುವುದು ಸುದ್ದಿಯಾಗಿದ್ದು, ಕೊಲೆಗೆ ಕಾರಣವಾದ ಅಪರಾಧಿಗಳಿಗೆ ಇನ್ನು ಆರು ತಿಂಗಳ ಒಳಗಾಗಿ ಸರಿಯಾದ ಶಿಕ್ಷೆಯಾಗಬೇಕು ಎಂದು ವಿಠಲ ಗೌಡ

ಸೌಜನ್ಯ ಅತ್ಯಾಚಾರ ಪ್ರಕರಣ| ನ್ಯಾಯಕ್ಕಾಗಿ ಕಾನತ್ತೂರು, ಧರ್ಮಸ್ಥಳದ ಕಾರಣಿಕ ಶಕ್ತಿಗಳಿಗೆ ಹರಕೆ ಹೊತ್ತ ವಿಠಲ ಗೌಡ Read More »

ಸುರಕ್ಷಾ ದಂತ ಚಿಕಿತ್ಸಾಲಯದ 27ನೆಯ ಸಂಸ್ಥಾಪನಾ ದಿನಾಚರಣೆ

ಸಮಗ್ರ ನ್ಯೂಸ್: ಸುರಕ್ಷಾ ದಂತ ಚಿಕಿತ್ಸಾ ಲಯದ ೨೭ ನೆಯ ಸಂಸ್ಥಾಪನಾ ದಿನಾಚರಣೆ ಅಂಗವಾಗಿ ದಿನಾಂಕ ೩ ಜುಲೈ ೨೦೨೩ ರಂದು ಚೂಂತಾರು ಸರೋಜಿನಿ ಭಟ್ ಪ್ರತಿಷ್ಟಾನದ ವತಿಯಿಂದ ವನಮಹೋತ್ಸವ ಕಾರ್ಯಕ್ರಮ ಜರುಗಿತು.ಸುಮಾರು ೫೫ ಮಂದಿಗೆ ಹಣ್ಣಿನ ಗಿಡಗಳನ್ನು ವಿತರಿಸಲಾಯಿತು. ನಿವ್ರತ್ತ ಬ್ಯಾಂಕ್ ಉದ್ಯೋಗಿ ಶ್ರೀ ವಾಸುದೇವ ಹೊಳ್ಳ ಅವರಿಗೆ ಹಲಸಿನಹಣ್ಣಿನ ಗಿಡವನ್ನು ಡಾ ಮುರಲಿ ಮೋಹನ್ ಚೂಂತಾರು ಅವರು ನೀಡುವುದರ ಮೂಲಕ ವನಮಹೋತ್ಸವ ಕಾರ್ಯಕ್ರಮ ಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಡಾ ರಾಜಶ್ರೀ ಮೋಹನ್,ದಂತ

ಸುರಕ್ಷಾ ದಂತ ಚಿಕಿತ್ಸಾಲಯದ 27ನೆಯ ಸಂಸ್ಥಾಪನಾ ದಿನಾಚರಣೆ Read More »

SSLC ವಿದ್ಯಾರ್ಥಿಗಳೇ ನಿಮಗೊಂದು ಮುಖ್ಯವಾದ ಮಾಹಿತಿ| ಪೂರಕ ಪರೀಕ್ಷೆಯ ಸ್ಕ್ಯಾನ್ಡ್‌ ಪ್ರತಿ ಬಗ್ಗೆ ಇಲ್ಲಿದೆ ವಿವರ

ಸಮಗ್ರ ನ್ಯೂಸ್ : ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ಈಗ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ಮಾಹಿತಿಯೊಂದನ್ನು ವಿದ್ಯಾರ್ಥಿಗಳಿಗೆ ನೀಡಿದ್ದು, ಉತ್ತರ ಪತ್ರಿಕೆ ಸ್ಕ್ಯಾನ್ ಪ್ರತಿ , ಮರುಎಣಿಕೆಗೆ ಅರ್ಜಿಯನ್ನು ಆಹ್ವಾನಿಸಿದೆ.‌ ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆ ಸ್ಕ್ಯಾನ್ಡ್‌ ಪ್ರತಿ, ಮರು ಮೌಲ್ಯಮಾಪನಕ್ಕಾಗಿ ವಿದ್ಯಾರ್ಥಿಗಳು https://kseab.karnataka.gov.in ಈ ಲಿಂಕ್‌ ಮೂಲಕ ಭೇಟಿ ನೀಡಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 06-07-2023 ಆಗಿರುತ್ತದೆ. ಉತ್ತರ ಪತ್ರಿಕೆಗಳ ಮರಎಣಿಕೆಗೆ ಅರ್ಜಿ ಸಲ್ಲಿಸಲು ದಿನಾಂಕ 04-07-2023 ರಿಂದ

SSLC ವಿದ್ಯಾರ್ಥಿಗಳೇ ನಿಮಗೊಂದು ಮುಖ್ಯವಾದ ಮಾಹಿತಿ| ಪೂರಕ ಪರೀಕ್ಷೆಯ ಸ್ಕ್ಯಾನ್ಡ್‌ ಪ್ರತಿ ಬಗ್ಗೆ ಇಲ್ಲಿದೆ ವಿವರ Read More »

ಕರ್ನಾಟಕ ಸೇರಿ ಐದು ರಾಜ್ಯಗಳಿಗೆ ಬಿಜೆಪಿಯಿಂದ ಇಂದು ನೂತನ ರಾಜ್ಯಾಧ್ಯಕ್ಷರ ನೇಮಕ ಸಾಧ್ಯತೆ| ಕರ್ನಾಟಕದ ಸಾರಥ್ಯ ವಹಿಸುವವರು ಯಾರು?

ಸಮಗ್ರ ನ್ಯೂಸ್: ಕರ್ನಾಟಕ ಸೇರಿದಂತೆ 5 ರಾಜ್ಯಗಳ ಬಿಜೆಪಿ ರಾಜ್ಯಾಧ್ಯಕ್ಷರ ಅವಧಿ ಅಂತ್ಯಗೊಂಡಿದೆ. ಹೀಗಾಗಿ ನೂತನ ರಾಜ್ಯಾಧ್ಯಕ್ಷರ ಆಯ್ಕೆಗೆ ಹಲವು ಸುತ್ತಿನ ಕಸರತ್ತು ನಡೆದಿದ್ದು, ಇದೀಗ ಅಂತಿಮ ಪಟ್ಟಿ ರೆಡಿ ಮಾಡಲಾಗಿದೆ. ಇಂದು ಸಂಜೆಯೊಳಗೆ 5 ರಾಜ್ಯಗಳಿಗೆ ನೂತನ ಬಿಜೆಪಿ ಸಾರಥಿಗಳನ್ನು ಘೋಷಿಸುವ ಸಾಧ್ಯತೆ ಇದೆ. ಕರ್ನಾಟಕ, ಗುಜರಾತ್, ಮದ್ಯಪ್ರದೇಶ, ತೆಲಂಗಾಣ, ಪಂಜಾಬ್ ರಾಜ್ಯಗಳಿಗೆ ಬಿಜೆಪಿ ರಾಜ್ಯಾಧ್ಯಕ್ಷರ ನೇಮಕವಾಗಬೇಕಿದೆ. ಇದರಲ್ಲಿ ನಾಲ್ಕು ರಾಜ್ಯಗಳ ರಾಜ್ಯಧ್ಯಕ್ಷರ ಪಟ್ಟಿ ಅಂತಿಮಗೊಂಡಿದೆ. ಆದರೆ ಕರ್ನಾಟಕದ ಆಯ್ಕೆಯಲ್ಲಿ ಕೆಲ ಗೊಂದಲಗಳು ಎರ್ಪಟ್ಟಿದೆ. ವಿಪಕ್ಷ

ಕರ್ನಾಟಕ ಸೇರಿ ಐದು ರಾಜ್ಯಗಳಿಗೆ ಬಿಜೆಪಿಯಿಂದ ಇಂದು ನೂತನ ರಾಜ್ಯಾಧ್ಯಕ್ಷರ ನೇಮಕ ಸಾಧ್ಯತೆ| ಕರ್ನಾಟಕದ ಸಾರಥ್ಯ ವಹಿಸುವವರು ಯಾರು? Read More »

ಉಡುಪಿ: ಟಿಪ್ಪರ್ ಪಿಕಪ್ ಡಿಕ್ಕಿ ಓರ್ವ ಸ್ಥಳದಲ್ಲೇ ಸಾವು

ಉಡುಪಿ: ಟಿಪ್ಪರ್ ಮತ್ತು ಪಿಕಪ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಸಮೀಪದ ಮಾಸ್ತಿಕಟ್ಟೆಯಲ್ಲಿ ಸಂಭವಿಸಿದೆ. ಪಿಕಪ್ ವಾಹನದಲ್ಲಿದ್ದ ರಾಜು ಗೌಡ (46) ಮೃತ ವ್ಯಕ್ತಿ, ಗಂಭೀರವಾಗಿ ಗಾಯಗೊಂಡ ಪಿಕಪ್ ಚಾಲಕ ಶಿವರಾಜ ಅವರನ್ನು ಕುಂದಾಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಾಸ್ತಿಕಟ್ಟೆಯಲ್ಲಿ ಟಿಪ್ಪರ್ ಪಿಕಪ್ ವಾಹನಕ್ಕೆ ಡಿಕ್ಕಿ ಹೊಡೆದಿದ್ದು, ಘಟನೆಗೆ ಟಿಪ್ಪರ್ ಚಾಲಕನ ಅಜಾಗರೂಕತೆಯ ಚಾಲನೆಯೇ ಕಾರಣ ಎಂದು ಆರೋಪಿಸಲಾಗಿದೆ. ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಕೊಲ್ಲೂರು

ಉಡುಪಿ: ಟಿಪ್ಪರ್ ಪಿಕಪ್ ಡಿಕ್ಕಿ ಓರ್ವ ಸ್ಥಳದಲ್ಲೇ ಸಾವು Read More »