ಕರಾವಳಿ

ಬೆಳ್ತಂಗಡಿ: ರಿವರ್ಸ್ ತೆಗೆಯುವ ವೇಳೆ ಕಾರಿನಡಿಗೆ ಬಿದ್ದು ಬಾಲಕ‌ ಸಾವು

ಸಮಗ್ರ ನ್ಯೂಸ್: ಕಾರು ರಿವರ್ಸ್ ತೆಗೆಯುತ್ತಿದ್ದಾಗ ಕಾರಿನಡಿಗೆ ಬಿದ್ದು ಬಾಲಕ ಸಾವನ್ನಪ್ಪಿರುವ ಘಟನೆ ಬೆಳ್ತಂಗಡಿ ತಾಲೂಕಿನ ಕೊಕ್ಕಡದಲ್ಲಿ ಹಮೀದ್ ಎಂಬವರ ಮನೆಯ ಅಂಗಳದಲ್ಲಿ ನಡೆದಿದೆ. ಕೊಕ್ಕಡದ ಹಮೀದ್ ಎಂಬವರ ಪುತ್ರ ನವಾಫ್ (10) ಮೃತ ಬಾಲಕ. ಹಮೀದ್ ಅವರ ಮನೆಗೆ ಬಂದಿದ್ದ ಸಂಬಂಧಿಕರು ಮನೆಯಂಗಳದಲ್ಲಿ ಕಾರನ್ನು ಹಿಂದಕ್ಕೆ ಚಲಾಯಿಸಿದಾಗ ಕಾರಿನ ಹಿಂಬದಿ ನಿಂತಿದ್ದ ನವಾಫ್ ಅವರು ಕಾರಿನಡಿಗೆ ಬಿದ್ದಿದ್ದಾನೆ ಎನ್ನಲಾಗಿದೆ. ಅವರ ಮೇಲೆಯೇ ಕಾರು ಹರಿದ ಪರಿಣಾಮ ತಲೆ ಮತ್ತು ಕಾಲಿಗೆ ಗಂಭೀರ ಗಾಯಗಳಾಗಿ ಮೃತಪಟ್ಟಿದ್ದಾನೆ. ನವಾಫ್ […]

ಬೆಳ್ತಂಗಡಿ: ರಿವರ್ಸ್ ತೆಗೆಯುವ ವೇಳೆ ಕಾರಿನಡಿಗೆ ಬಿದ್ದು ಬಾಲಕ‌ ಸಾವು Read More »

ಕುಂದಾಪುರ: ಯಮ ಸ್ವರೂಪಿಯಾಗಿ ಬಂದ‌ ಟಿಪ್ಪರ್ |ಫುಟ್ಪಾತ್ ನಲ್ಲಿ ನಡೆದುಕೊಂಡು ಹೋಗುತ್ತಿದ್ದ ವಿದ್ಯಾರ್ಥಿ ಬಲಿ

ಸಮಗ್ರ ನ್ಯೂಸ್: ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ ಫುಟ್ಪಾತ್ ನಲ್ಲಿ ನಡೆದುಕೊಂಡು ಹೋಗುತ್ತಿದ್ದ ವಿದ್ಯಾರ್ಥಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಕುಂದಾಪುರ ತಾಲೂಕಿನ ಕೋಟೇಶ್ವರ ಹಾಲಾಡಿ ರಸ್ತೆಯ ಕಕ್ಕೇರಿ ಎಂಬಲ್ಲಿ ಮಂಗಳವಾರ ಮಧ್ಯಾಹ್ನ ನಡೆದಿದೆ. ಧನುಷ್(19 ಮೃತಪಟ್ಟ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ. ನಾಗೂರು ನಿವಾಸಿಯಾಗಿರುವ ಧನುಷ್ ಕೋಟೇಶ್ವರದ ಕಾಳವರ ವರದರಾಜ ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಥಮ ಬಿಎಸ್ ಸಿ ವಿದ್ಯಾರ್ಥಿ ಎಂದು ತಿಳಿದು ಬಂದಿದೆ. ಇಂದು ಮಧ್ಯಾಹ್ನ ಕಾಲೇಜು ಮುಗಿಸಿ ಸ್ನೇಹಿತರೊಂದಿಗೆ ಧನುಷ್ ಕೋಟೇಶ್ವರದತ್ತ ರಸ್ತೆ

ಕುಂದಾಪುರ: ಯಮ ಸ್ವರೂಪಿಯಾಗಿ ಬಂದ‌ ಟಿಪ್ಪರ್ |ಫುಟ್ಪಾತ್ ನಲ್ಲಿ ನಡೆದುಕೊಂಡು ಹೋಗುತ್ತಿದ್ದ ವಿದ್ಯಾರ್ಥಿ ಬಲಿ Read More »

ಉಪ್ಪಿನಂಗಡಿ: ಬಸ್ ಮತ್ತು ಸ್ಕೂಟಿ ನಡುವೆ ಅಪಘಾತ; ಸವಾರ ಗಂಭೀರ

ಸಮಗ್ರ ನ್ಯೂಸ್: ಸರ್ಕಾರಿ ಬಸ್ ಮತ್ತು ಸ್ಕೂಟಿ ನಡುವೆ ಅಪಘಾತ ಸಂಭವಿಸಿದ್ದು, ಸ್ಕೂಟಿ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಉಪ್ಪಿನಂಗಡಿ – ಪುತ್ತೂರು ಹೆದ್ದಾರಿಯ ಬೇರಿಕೆ ಸಮೀಪ ಸಂಭವಿಸಿದೆ. ಉಪ್ಪಿನಂಗಡಿಯಿಂದ ಪುತ್ತೂರಿಗೆ ಹೋಗುತ್ತಿದ್ದ ಸರ್ಕಾರಿ ಬಸ್ ಹಾಗೂ ಅದೇ ಕಡೆ ಸಾಗುತ್ತಿದ್ದ ಸ್ಕೂಟಿ ನಡುವೆ ಓವರ್ ಟೇಕ್ ಮಾಡುವ ಸಂದರ್ಭದಲ್ಲಿ ಅವಘಡ ಸಂಭವಿಸಿದೆ ಎನ್ನಲಾಗಿದೆ. ನಿಯಂತ್ರಣ ತಪ್ಪಿದ ಸ್ಕೂಟಿ ಸವಾರ ಬಸ್ ನ ಚಕ್ರದಡಿಗೆ ಬಿದ್ದಿದ್ದು, ಆತನ ಕೈನ ಮೇಲೆ ಬಸ್ ಚಕ್ರ ಹರಿದು, ಗಂಭೀರವಾಗಿ ಗಾಯಗೊಂಡಿರುವುದಾಗಿ

ಉಪ್ಪಿನಂಗಡಿ: ಬಸ್ ಮತ್ತು ಸ್ಕೂಟಿ ನಡುವೆ ಅಪಘಾತ; ಸವಾರ ಗಂಭೀರ Read More »

ಮಂಗಳೂರು: ಈಶ್ವರ್ ಮಲ್ಪೆ ತಂಡಕ್ಕೆ ಸನ್ಮಾನ

ಸಮಗ್ರ ನ್ಯೂಸ್: ಶಿರೂರು ದುರಂತ ಸಂದರ್ಭ ಲಾರಿ ಚಾಲಕ ಅರ್ಜುನನ ಮೃತದೇಹವನ್ನು ಮೇಲೆತ್ತುವ ಕಾರ್ಯಾಚರಣೆ ಹಾಗೂ ಮೃತ ದೇಹವನ್ನು ಅರ್ಜುನನ ಊರು ಕೇರಳದ ಕಲ್ಲಿಕೋಟೆಯ ಕನ್ನಡಿಕ್ಕಲ್‌ಗೆ ಕೊಂಡು ಹೋಗಿ ಆತನ ಕುಟುಂಬಿಕರಿಗೆ ಒಪ್ಪಿಸುವಲ್ಲಿ ಮುಖ್ಯ ಪಾತ್ರ ವಹಿಸಿದ ಖ್ಯಾತ ಮುಳುಗು ತಜ್ಞ ಈಶ್ವರ್‌ ಮಲ್ಪೆ ಮತ್ತು ತಂಡದವರನ್ನು ಮಂಗಳೂರಿಗೆ ವಾಪಾಸು ಬರುವ ಸಂದರ್ಭದಲ್ಲಿ ನಂತೂರಿನ ಮೊಂಟಿಯಾರಾ ಅಪಾರ್ಟ್‌ಮೆಂಟ್‌ನ ನಿವಾಸಿಗಳು ಸಮ್ಮಾನಿಸಿದರು. ನಿತ್ಯಾನಂದ ಶೆಟ್ಟಿ, ಸ್ವರೂಪ ಎನ್‌. ಶೆಟ್ಟಿ, ಪ್ರೇಮ್‌ ಡೇಸಾ, ಮೇರಿ ಲೋಬೋ, ಶ್ರೀನಾಥ್‌ ಅಡ್ಯಂತಾಯ, ಕೇದಾರ್‌ನಾಥ್‌

ಮಂಗಳೂರು: ಈಶ್ವರ್ ಮಲ್ಪೆ ತಂಡಕ್ಕೆ ಸನ್ಮಾನ Read More »

ಪುತ್ತೂರು: ರಾಜಕೀಯ ಮುಖಂಡನ ಕಾಮಕಾಂಡ ವಿಡಿಯೋ ವೈರಲ್

ಸಮಗ್ರ ನ್ಯೂಸ್: ಆನ್ ಲೈನ್ ನಲ್ಲಿ ಕಾಮದ ತೀಟೆ ತೀರಿಸಿಕೊಂಡ ಪುತ್ತೂರಿನ ರಾಜಕೀಯ ಮುಖಂಡ ಒಬ್ಬರ ವೀಡಿಯೋ ಒಂದು ಸಾಮಾಜಿಕ ಜಾಲ ತಾಣಗಳಲ್ಲಿ ವೈರಲ್ ಆಗಿದ್ದು ವ್ಯಾಪಕ ಸದ್ದು ಮಾಡುತ್ತಿದೆ. ಸದಾ ಬರಹಗಳ ಮೂಲಕ ಸಾಮಾಜಿಕ ಜಾಲತಾಣಗಳಲ್ಲಿ ಸುದ್ದಿಯಲ್ಲಿರುತ್ತಿರುವ ಈತ ಧಾರ್ಮಿಕ ಕೇಂದ್ರದ ಆವರಣದಲ್ಲಿ ವೀಡಿಯೋ ಕಾಲ್ ಮಾಡಿ ಮಹಿಳೆಯೊಂದಿಗೆ ಅಶ್ಲೀಲವಾಗಿ ಮಾತನಾಡುತ್ತಿರುವ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ. ವಿಡಿಯೋ ಕಾಲ್‌ನಲ್ಲಿ ಮಹಿಳೆಯೊಬ್ಬರು ನಗ್ನವಾಗಿರುವ ಮತ್ತು ಇತ್ತ ಕಡೆಯಿಂದ ನಗ್ನ ವಿಡಿಯೋ ನೋಡಿ ವ್ಯಕ್ತಿಯೊಬ್ಬರು ಸೂಪರ್ ಎಂದು

ಪುತ್ತೂರು: ರಾಜಕೀಯ ಮುಖಂಡನ ಕಾಮಕಾಂಡ ವಿಡಿಯೋ ವೈರಲ್ Read More »

ಮಂಗಳೂರು: ಸಹ್ಯಾದ್ರಿ ಕಾಲೇಜು ಬಳಿ ಹೊತ್ತಿ ಉರಿದ ಬಿಎಂಡಬ್ಲ್ಯೂ

ಸಮಗ್ರ ನ್ಯೂಸ್: ಮಂಗಳೂರು ನಗರದ ಹೊರವಲಯದ ಅಡ್ಯಾರ್ ಸಹ್ಯಾದ್ರಿ ಕಾಲೇಜ್ ಬಳಿ ಬಿಎಂಡಬ್ಲ್ಯೂ ಕಾರೊಂದು ಹೊತ್ತಿ ಉರಿದು ಸಂಪೂರ್ಣ ಭಸ್ಮವಾದ ಘಟನೆ ಇಂದು(ಸೆ.28) ಮಧ್ಯಾಹ್ನ ನಡೆದಿದೆ. ಶಾರ್ಟ್ ಸರ್ಕ್ಯೂಟ್ ನಿಂದ ಕಾರಿಗೆ ಬೆಂಕಿ ಹೊತ್ತಿಕೊಂಡಿದೆ ಎನ್ನಲಾಗುತ್ತಿದ್ದು, ಕಾರಿನಲ್ಲಿ ಹೊಗೆ ಕಾಣಿಸಿಕೊಂಡ ಕೂಡಲೇ ಚಾಲಕ ಕಾರಿನಿಂದ ಕೆಳಗಿಳಿದಿದ್ದಾರೆ ಎಂದು ತಿಳಿದು ಬಂದಿದೆ. ದೆಹಲಿ ನೋಂದಾಯಿತ ಬಿಎಂಡಬ್ಲ್ಯೂ ಕಾರು ಅರ್ಧಗಂಟೆಯಿಂದ ಹೊತ್ತಿ ಉರಿಯುತ್ತಿದ್ದು, ಸಂಪೂರ್ಣ ಭಸ್ಮವಾಗಿದೆ.

ಮಂಗಳೂರು: ಸಹ್ಯಾದ್ರಿ ಕಾಲೇಜು ಬಳಿ ಹೊತ್ತಿ ಉರಿದ ಬಿಎಂಡಬ್ಲ್ಯೂ Read More »

ಬೆಳ್ತಂಗಡಿ: ನಿಡ್ಲೆ ಗ್ರಾಮ ಲೆಕ್ಕಾಧಿಕಾರಿಪೃಥ್ವಿರಾಜ್ ಪಿ.ಶೆಟ್ಟಿ ಗೆ ವರ್ಷದ ಅತ್ಯುತ್ತಮ ಕಂದಾಯ ಅಧಿಕಾರಿ ಪ್ರಶಸ್ತಿ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಪೃಥ್ವಿರಾಜ್ ಪಿ. ಶೆಟ್ಟಿ ಯವರು ಸೆ.27 ರಂದು ಮಾನ್ಯ ಕಂದಾಯ ಸಚಿವರ ಅಧ್ಯಕ್ಷತೆಯಲ್ಲಿ ವಿಕಾಸ ಸೌಧದ ಕೊಠಡಿ ಸಂಖ್ಯೆ 419 ರಲ್ಲಿ ನಡೆದ ಕಂದಾಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ಹಾಗೂ ಅಭಿನಂದನಾ ಸಭೆಯಲ್ಲಿ ಅತ್ಯುತ್ತಮ ಕಂದಾಯ ಅಧಿಕಾರಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಈ ಪ್ರಶಸ್ತಿಯನ್ನು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಸಾರ್ವಜನಿಕರಿಗೆ ಅಚ್ಚುಕಟ್ಟಾಗಿ ಒದಗಿಸಿರುವ ಅಧಿಕಾರಿಗಳ ಸೇವೆಯನ್ನು ಗುರುತಿಸಿ ಜಿಲ್ಲಾಧಿಕಾರಿಗಳಿಗೆ, ಸಹಾಯಕ ಆಯುಕ್ತರುಗಳಿಗೆ, ತಹಶೀಲ್ದಾರಗಳಿಗೆ ಹಾಗೂ ಗ್ರಾಮಾಡಳಿತ

ಬೆಳ್ತಂಗಡಿ: ನಿಡ್ಲೆ ಗ್ರಾಮ ಲೆಕ್ಕಾಧಿಕಾರಿಪೃಥ್ವಿರಾಜ್ ಪಿ.ಶೆಟ್ಟಿ ಗೆ ವರ್ಷದ ಅತ್ಯುತ್ತಮ ಕಂದಾಯ ಅಧಿಕಾರಿ ಪ್ರಶಸ್ತಿ Read More »

ಮುಂದುವರಿದ ಮಳೆಯಬ್ಬರ| ಕರಾವಳಿ ಸೇರಿದಂತೆ ಹಲವು ಜಿಲ್ಲೆಗಳಿಗೆ ಎಲ್ಲೋ ಅಲರ್ಟ್

ಸಮಗ್ರ ನ್ಯೂಸ್: ಕರ್ನಾಟಕದ ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಮುಂದಿನ ಎರಡು ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಕಲಬುರಗಿ, ವಿಜಯಪುರ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ವಿಜಯನಗರ, ತುಮಕೂರು, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಕೊಡಗು, ಹಾಸನ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಯಾದಗಿರಿ, ರಾಯಚೂರು, ಕೊಪ್ಪಳ, ಹಾವೇರಿ, ಗದಗ, ಧಾರವಾಡದಲ್ಲಿ

ಮುಂದುವರಿದ ಮಳೆಯಬ್ಬರ| ಕರಾವಳಿ ಸೇರಿದಂತೆ ಹಲವು ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ Read More »

ಅಮೇರಿಕಾ ಪ್ರವಾಸ ಮುಗಿಸಿ ತಾಯ್ನಾಡಿಗೆ ವಾಪಸಾದ ಪಟ್ಲ ಸತೀಶ್ ಶೆಟ್ಟಿ ಯಕ್ಷತಂಡ

ಸಮಗ್ರ ನ್ಯೂಸ್: ಅಮೇರಿಕ ಪ್ರವಾಸ ಕೈಗೊಂಡಿದ್ದ ಯಕ್ಷಧ್ರುವ ಪಟ್ಲ ಫೌಂಡೇಶನ್ ಸ್ಥಾಪಕ ಪಟ್ಲಗುತ್ತು ಸತೀಶ್ ಶೆಟ್ಟಿ ಅವರು ತಮ್ಮ ತಂಡದ ಜೊತೆ ತಾಯ್ನಾಡಿಗೆ ಮರಳಿದ್ದು ಬಜ್ಪೆ ವಿಮಾನ ನಿಲ್ದಾಣದಲ್ಲಿ ಟ್ರಸ್ಟ್ ನ ಪದಾಧಿಕಾರಿಗಳು ಸ್ವಾಗತ ಕೋರಿದರು. ಪಟ್ಲ ಸತೀಶ್ ಶೆಟ್ಟಿ ಅವರ ನೇತೃತ್ವದಲ್ಲಿ 9 ಮಂದಿಯ ತಂಡ ಅಮೇರಿಕ ದೇಶದ ಬೇರೆ ಬೇರೆ ತಾಣಗಳಲ್ಲಿ ಯಕ್ಷಗಾನ ಪ್ರದರ್ಶಿಸಿ 75 ದಿನಗಳ ಬಳಿಕ ತಾಯ್ನಾಡಿಗೆ ಮರಳಿದೆ. ಈ ವೇಳೆ ತಮ್ಮ ಅಮೇರಿಕ ಪ್ರವಾಸದ ಕಥನವನ್ನು ಮಾಧ್ಯಮ ಪ್ರತಿನಿಧಿಗಳೊಂದಿಗೆ ಹಂಚಿಕೊಂಡ

ಅಮೇರಿಕಾ ಪ್ರವಾಸ ಮುಗಿಸಿ ತಾಯ್ನಾಡಿಗೆ ವಾಪಸಾದ ಪಟ್ಲ ಸತೀಶ್ ಶೆಟ್ಟಿ ಯಕ್ಷತಂಡ Read More »

ಪುತ್ತೂರಿನಿಂದ‌‌ ರೋಗಿಯನ್ನು ಸಾಗಿಸುತ್ತಿದ್ದ ಅಂಬ್ಯುಲೆನ್ಸ್ ಪಲ್ಟಿ| ರೋಗಿ‌ ಸಾವು; ಮೂವರಿಗೆ ಗಾಯ

ಸಮಗ್ರ ನ್ಯೂಸ್: ಪುತ್ತೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಆಂಬುಲೆನ್ಸ್ ಪಲ್ಟಿಯಾದ ಪರಿಣಾಮ ಆಂಬ್ಯುಲೆನ್ಸ್ ನಲ್ಲಿದ್ದ ರೋಗಿಯೋರ್ವರು ಮೃತಪಟ್ಟು, ಅವರ ಪತ್ನಿ, ಮಗ ಹಾಗೂ ಸಂಬಂಧಿಕರೋರ್ವ ಗಾಯಗೊಂಡ ಘಟನೆ ಮಂಗಳೂರು ಪಡೀಲು ಸಮೀಪ ನಡೆದಿದೆ. ಮೃತ ರೋಗಿಯನ್ನು ಕಡಬ ತಾಲೂಕಿನ ಹಳೆನೇರೆಂಕಿ ಗ್ರಾಮದ ರಾಮಜಾಲು ನಿವಾಸಿ ದಾಸಪ್ಪ ರೈ(73) ಎಂದು ಗುರುತಿಸಲಾಗಿದೆ. ಹಳೆನೇರೆಂಕಿ ಗ್ರಾಮದ ಕದ್ರ ನಿವಾಸಿ, ಕೂಲಿಕಾರ್ಮಿಕ ದಾಸಪ್ಪ ರೈಯವರಿಗೆ ಮಂಗಳವಾರದಂದು ತಡರಾತ್ರಿ 1.30ರ ವೇಳೆಗೆ ಸ್ಟ್ರೋಕ್ ಆಗಿ ಅನಾರೋಗ್ಯ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರ ಮನೆ ಸಮೀಪದ ನಿವಾಸಿ,

ಪುತ್ತೂರಿನಿಂದ‌‌ ರೋಗಿಯನ್ನು ಸಾಗಿಸುತ್ತಿದ್ದ ಅಂಬ್ಯುಲೆನ್ಸ್ ಪಲ್ಟಿ| ರೋಗಿ‌ ಸಾವು; ಮೂವರಿಗೆ ಗಾಯ Read More »