ಕರಾವಳಿ

ಬೆಳ್ತಂಗಡಿ: ನೇತ್ರಾವತಿ ಪೀಕ್ ಗೆ ಟ್ರಕ್ಕಿಂಗ್ ಗೆ ಬಂದಿದ್ದ ಯುವಕ ಹೃದಯಾಘಾತದಿಂದ ಸಾವು

ಸಮಗ್ರ ನ್ಯೂಸ್: ನೇತ್ರಾವತಿ ಪೀಕ್ ಪಾಯಿಂಟ್ ಗೆ ಟ್ರಕ್ಕಿಂಗ್ ಬಂದಿದ್ದ ಮೈಸೂರು ಮೂಲದ ಪ್ರವಾಸಿ ಯುವಕನೋರ್ವ ಹೃದಯಘಾತದಿಂದ ಸಾವನ್ನಪ್ಪಿದ ಘಟನೆ ನಡೆದಿದೆ. ಮೃತಪಟ್ಟವನನ್ನು ಮೈಸೂರಿನ ರಕ್ಷಿತ್ (27) ಎಂದು ಗುರುತಿಸಲಾಗಿದೆ. ಮೈಸೂರು ಮೂಲದ 7 ಯುವಕರ ತಂಡ ಟ್ರಕ್ಕಿಂಗ್ ಗೆ ಆಗಮಿಸಿದ್ದರು. ಕುದುರೆಮುಖದಿಂದ- ನೇತ್ರಾವತಿ ಪೀಕ್ ಸ್ಪಾಟ್ ಗೆ ತೆರಳಿದ್ದ ವೇಳೆ ಮಾರ್ಗ ಮಧ್ಯದಲ್ಲಿ ರಕ್ಷಿತ್‌ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಚಿಕ್ಕಮಗಳೂರು- ದಕ್ಷಿಣಕನ್ನಡ ಜಿಲ್ಲೆಯ ನೇತ್ರಾವತಿ ಪೀಕ್ ಸ್ಪಾಟ್ ನಿಂದ ಮೃತದೇಹವನ್ನ ಪೊಲೀಸರು ಕಳಸಕ್ಕೆ ತಂದಿದ್ದಾರೆ.

ಬೆಳ್ತಂಗಡಿ: ನೇತ್ರಾವತಿ ಪೀಕ್ ಗೆ ಟ್ರಕ್ಕಿಂಗ್ ಗೆ ಬಂದಿದ್ದ ಯುವಕ ಹೃದಯಾಘಾತದಿಂದ ಸಾವು Read More »

ಪದವಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ನೀಡಿದ ಕೆಎಸ್ಆರ್ ಟಿಸಿ| ಇಲ್ಲಿದೆ ಫುಲ್ ಡೀಟೈಲ್ಸ್

ಸಮಗ್ರ ನ್ಯೂಸ್: ರಾಜ್ಯದಲ್ಲಿ ವಿವಿಧ ಪದವಿ ಕೋರ್ಸ್‌ಗಳ ಪರೀಕ್ಷೆಗಳು ಆಗಸ್ಟ್‌ ನಲ್ಲಿ ನಡೆಯುವುದರಿಂದ ವಿದ್ಯಾರ್ಥಿಗಳ ಬಸ್ ಪಾಸ್ ಅವಧಿಯನ್ನು ವಿಸ್ತರಿಸಿರುವುದಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ತಿಳಿಸಿದೆ. ಈ ಹಿಂದೆ 2022-23 ಸಾಲಿನ ಸ್ನಾತಕೋತ್ತರ, ಡಿಪ್ಲೋಮಾ ಬಿ.ಫಾರ್ಮ, ಕಾನೂನು ಪದವಿ ಹಾಗೂ ಮುಂತಾದ ಕೋರ್ಸುಗಳ ಪದವಿವಿದ್ಯಾರ್ಥಿಗಳ ಬಸ್‌ಪಾಸ್ ಜೂನ್ 2023ರ ಅಂತ್ಯದವರೆಗೆ ಮಾತ್ರ ವಿಸ್ತರಿಸಲಾಗಿತ್ತು. ಆದರೆ ಪದವಿ ವಿದ್ಯಾರ್ಥಿಗಳಿಗೆ ಜುಲೈ/ಆಗಸ್ಟ್ ನಲ್ಲಿ ಪರೀಕ್ಷೆಗಳು ನಡೆಯಲಿದ್ದು ಈ ಕುರಿತು ಆಯಾ ವಿಶ್ವವಿದ್ಯಾನಿಲಯಗಳು ಅಧಿಸೂಚನೆಯನ್ನು ಹೊರಡಿಸಿವೆ. ಈ

ಪದವಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ನೀಡಿದ ಕೆಎಸ್ಆರ್ ಟಿಸಿ| ಇಲ್ಲಿದೆ ಫುಲ್ ಡೀಟೈಲ್ಸ್ Read More »

ಎಸ್ಎಸ್ಎಲ್ ಸಿ ಪೂರಕ ಪಲಿತಾಂಶ ಪ್ರಕಟ| ಬಾಲಕಿಯರೇ ಮೇಲುಗೈ

ಸಮಗ್ರ ನ್ಯೂಸ್: ಜೂನ್ ತಿಂಗಳಿನಲ್ಲಿ ನಡೆದಿದ್ದ ಎಸ್‌ಎಸ್‌ಎಲ್​ಸಿ ಪೂರಕ ಪರೀಕ್ಷೆಯ ಫಲಿತಾಂಶವನ್ನು ಇಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಿಸಿದ್ದು, ಬಾಲಕಿಯರು ಮೇಲುಗೈ ಸಾಧಿಸಿದ್ದಾರೆ. 1,11,781 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. 46,270 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಶೇ. 41.39ರಷ್ಟು ಫಲಿತಾಂಶ ಬಂದಿದೆ. ಮಂಡಳಿಯ ಅಧಿಕೃತ ವೆಬ್​ಸೈಟ್​ನಲ್ಲಿ ಫಲಿತಾಂಶ ವೀಕ್ಷಿಸಬಹುದು. ಎಸ್‌ಎಂಎಸ್ ಮೂಲಕವೂ ವಿದ್ಯಾರ್ಥಿಗಳಿಗೆ ಫಲಿತಾಂಶ ಕಳುಹಿಸಿಕೊಡಲಾಗುತ್ತದೆ ಎಂದು ಮಂಡಳಿ ತಿಳಿಸಿದೆ. ಪರೀಕ್ಷೆಗೆ ಹಾಜರಾದ 71,134 ಬಾಲಕರಲ್ಲಿ 27,705 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಶೇ.38 ಫಲಿತಾಂಶ ಬಂದಿದೆ.

ಎಸ್ಎಸ್ಎಲ್ ಸಿ ಪೂರಕ ಪಲಿತಾಂಶ ಪ್ರಕಟ| ಬಾಲಕಿಯರೇ ಮೇಲುಗೈ Read More »

ಸುಬ್ರಹ್ಮಣ್ಯ: ಕೆ. ಎಸ್.ಎಸ್. ಕಾಲೇಜಿನಲ್ಲಿ ಹಲಸು ಮೇಳ ಪ್ರದರ್ಶನ | ವಿದ್ಯಾರ್ಥಿಗಳಿಂದ ಹಲಸಿನ ಖಾದ್ಯಗಳ ಪ್ರದರ್ಶನ ಮತ್ತು ಮಾರಾಟ

ಸಮಗ್ರ ನ್ಯೂಸ್: ಸುಬ್ರಹ್ಮಣ್ಯ ಎಸ್.ಎಸ್. ಕಾಲೇಜಿನಲ್ಲಿ ಆಂತರಿಕ ಗುಣಮಟ್ಟ ಭರವಸ ಕೋಶ ಹಾಗೂ ವಾಣಿಜ್ಯ ಮತ್ತು ಉದ್ಯಮಾಡಳಿತ ವಿಭಾಗ ಇದರ ಆಶ್ರಯದಲ್ಲಿ ಜೂನ್ 30 ರಂದು ಹಲಸು ಮೇಳ-2023 ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಉದ್ಘಾಟನೆಯನ್ನು ಕಡಬ ಸರಸ್ವತಿ ವಿದ್ಯಾಲಯದ ಸಂಚಾಲಕ ಶ್ರೀ ಮಂಕುಡೆ ವೆಂಕಟರಮಣ ರಾವ್ ನೆರವೇರಿಸಿದರು. ಮುಖ್ಯ ಅಭ್ಯಾಗತರಾಗಿ ಕಾಲೇಜು ಆಡಳಿತ ಮಂಡಳಿಯ ಕಾರ್ಯದರ್ಶಿ ಮತ್ತು ಸುಬ್ರಹ್ಮಣ್ಯ ದೇವಸ್ಥಾನದ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಯಾಗಿ ಡಾ.ನಿಂಗಯ್ಯ ಭಾಗವಹಿಸಿದ್ದರು. ವಿದ್ಯಾರ್ಥಿಗಳೇ ತಯಾರಿಸಿದ ಹೊಸ ರೀತಿಯ ಸ್ವಾದಿಷ್ಟವಾದ ಹಲಸಿನ ಖಾದ್ಯಗಳ

ಸುಬ್ರಹ್ಮಣ್ಯ: ಕೆ. ಎಸ್.ಎಸ್. ಕಾಲೇಜಿನಲ್ಲಿ ಹಲಸು ಮೇಳ ಪ್ರದರ್ಶನ | ವಿದ್ಯಾರ್ಥಿಗಳಿಂದ ಹಲಸಿನ ಖಾದ್ಯಗಳ ಪ್ರದರ್ಶನ ಮತ್ತು ಮಾರಾಟ Read More »

ಈ ಸ್ಪುರದ್ರೂಪಿ ಯುವಕ ವಧು ಸಿಗಲಿಲ್ಲವೆಂದು ಆತ್ಮಹತ್ಯೆಗೆ ಶರಣಾದ| ಕೃಷಿಕರ ಮಕ್ಕಳಿಗೆ ಹೆಣ್ಣು ಕೊಡೋರೇ ಇಲ್ಲ!!

ಸಮಗ್ರ ನ್ಯೂಸ್: ಕರಾವಳಿ ಮತ್ತು ಮಲೆನಾಡು ಭಾಗದಲ್ಲಂತೂ ಕೃಷಿಕರಿಗೆ, ಬಾಣಸಿಗರಿಗೆ, ಅರ್ಚಕರಿಗೆ, ಸಣ್ಣ ಪುಟ್ಟ ಉದ್ಯೋಗ ಮಾಡಿಕೊಂಡಿರುವವರಿಗೆ ಮದುವೆಯೇ ಮರೀಚಿಕೆಯಾದಂತಿದೆ. ಇಂಥಹುದೇ ಪರಿಸ್ಥಿತಿಯನ್ನು ಎದುರಿಸಿದ ಯುವಕನೊಬ್ಬ ನೇಣು ಬಿಗಿದುಕೊಂಡು ಪ್ರಾಣ ಕಳೆದುಕೊಂಡಿದ್ದಾನೆ. ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದ ತೇಲಂಗಾರ ನಿವಾಸಿ ಕಿರಗಾರಿ ಮನೆಯ ನಾಗರಾಜ ಗಣಪತಿ ಗಾಂವ್ಕರ (35) ಮೃತ ಯುವಕ. ಕಳೆದ ಹಲವಾರು ವರ್ಷಗಳಿಂದ ಹುಡುಗಿ ಹುಡುಕುತ್ತಿದ್ದ ಅವರಿಗೆ ಕೊನೆಗೂ ಒಂದು ಮದುವೆ ಸೆಟ್‌ ಆಗಲೇ ಇಲ್ಲ. ಇದರಿಂದ ನೊಂದು ಪ್ರಾಣವನ್ನೇ ಕಳೆದುಕೊಳ್ಳುವ ತೀರ್ಮಾನಕ್ಕೆ ಬಂದಿದ್ದಾರೆ

ಈ ಸ್ಪುರದ್ರೂಪಿ ಯುವಕ ವಧು ಸಿಗಲಿಲ್ಲವೆಂದು ಆತ್ಮಹತ್ಯೆಗೆ ಶರಣಾದ| ಕೃಷಿಕರ ಮಕ್ಕಳಿಗೆ ಹೆಣ್ಣು ಕೊಡೋರೇ ಇಲ್ಲ!! Read More »

ಶ್ರೀಮಂತ ದೇಗುಲಗಳ ಪಟ್ಟಿ ರಿಲೀಸ್ ಮಾಡಿದ ಮುಜುರಾಯಿ ಇಲಾಖೆ| ಈ ಬಾರಿಯೂ ಕುಕ್ಕೆ ಸುಬ್ರಹ್ಮಣ್ಯನೇ ಅತೀ ಶ್ರೀಮಂತ ದೇವರು

ಸಮಗ್ರ ನ್ಯೂಸ್: ರಾಜ್ಯ ಮುಜರಾಯಿ ಇಲಾಖೆ ಆದಾಯ ತರುವ ರಾಜ್ಯದ ಟಾಪ್ 10 ದೇವಾಲಯಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. 2022-23ರ ಅವಧಿಯಲ್ಲಿ ದೇವಾಲಯ ಗಳಿಸಿರುವ ಒಟ್ಟು ಆದಾಯ ಮತ್ತು ಒಟ್ಟು ವೆಚ್ಚದ ಪಟ್ಟಿಯನ್ನು ಬಿಡುಗಡೆ ಮಾಡಿದೆ. ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನಲ್ಲಿರುವ ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಮೊದಲ ಸ್ಥಾನ ಪಡೆದಿದೆ. ಕೊಲ್ಲೂರಿನ ಶ್ರೀ ಮೂಕಾಂಬಿಕಾ ದೇವಸ್ಥಾನ, ಮೈಸೂರಿನ ಚಾಮುಂಡಿ ಬೆಟ್ಟದಲ್ಲಿರುವ ಶ್ರೀ ಚಾಮುಂಡೇಶ್ವರಿ ದೇವಸ್ಥಾನ ಕ್ರಮವಾಗಿ ಎರಡು ಮತ್ತು ಮೂರನೇ ಸ್ಥಾನವನ್ನು ಪಡೆದಿದೆ. ಯಾವ

ಶ್ರೀಮಂತ ದೇಗುಲಗಳ ಪಟ್ಟಿ ರಿಲೀಸ್ ಮಾಡಿದ ಮುಜುರಾಯಿ ಇಲಾಖೆ| ಈ ಬಾರಿಯೂ ಕುಕ್ಕೆ ಸುಬ್ರಹ್ಮಣ್ಯನೇ ಅತೀ ಶ್ರೀಮಂತ ದೇವರು Read More »

ಯತ್ನಾಳ್, ರೇಣುಕಾಚಾರ್ಯ ಕಿವಿಹಿಂಡಿದ ಬಿಜೆಪಿ| ಪಕ್ಷದ ವಿರುದ್ದ ಬಹಿರಂಗ ಹೇಳಿಕೆ ನೀಡದಂತೆ ನೋಟೀಸ್

ಸಮಗ್ರ ನ್ಯೂಸ್: ಇತ್ತೀಚಿಗೆ ಸ್ವಪಕ್ಷೀಯ ನಾಯಕರ ವಿರುದ್ಧ, ಬಿಜೆಪಿ ವಿರುದ್ಧ ಕಿಡಿಕಾರುತ್ತಿರುವಂತ ನಾಯಕರ ಸಂಖ್ಯೆ ಹೆಚ್ಚಾಗಿದೆ. ಇದನ್ನು ನಿಯಂತ್ರಿಸಲು ಮುಂದಾಗಿರುವ ಬಿಜೆಪಿ, ಬಹಿರಂಗವಾಗಿ ಪಕ್ಷದ ವಿರುದ್ಧ, ನಾಯಕರ ವಿರುದ್ಧ ಹೇಳಿಕೆ ಕೊಡುತ್ತಿರುವವರಿಗೆ ಹೇಳಿಕೆ ನೀಡದಂತೆ ಎಚ್ಚರಿಕೆಯ ನೋಟಿಸ್ ಜಾರಿಗೊಳಿಸಿದೆ. ಬಿಜೆಪಿ ಶಿಸ್ತು ಪಾಲನಾ ಸಮಿತಿ ನೀಡಿರುವಂತ ನೋಟಿಸ್ ಬಹಿರಂಗವಾಗಿ ಬಿಜೆಪಿ ವಿರುದ್ಧ, ನಾಯಕರ ವಿರುದ್ಧ ಹೇಳಿಕೆ ನೀಡದಂತೆ ಎಚ್ಚರಿಕೆಯನ್ನು ನೀಡಲಾಗಿದೆ. ಈ ಮೂಲಕ ಬಸನಗೌಡ ಪಾಟೀಲ್ ಯತ್ನಾಳ್, ಎಂ.ಪಿ ರೇಣುಕಾಚಾರ್ಯ ಸೇರಿದಂತೆ ಹಲವು ಬಿಜೆಪಿ ನಾಯಕರಿಗೆ ಬಿಸಿ

ಯತ್ನಾಳ್, ರೇಣುಕಾಚಾರ್ಯ ಕಿವಿಹಿಂಡಿದ ಬಿಜೆಪಿ| ಪಕ್ಷದ ವಿರುದ್ದ ಬಹಿರಂಗ ಹೇಳಿಕೆ ನೀಡದಂತೆ ನೋಟೀಸ್ Read More »

ಗೃಹಲಕ್ಷ್ಮಿ ಯೋಜನೆ ಅರ್ಜಿ ಸಲ್ಲಿಕೆ ಸಂಪೂರ್ಣ ಉಚಿತ – ಲಕ್ಷ್ಮೀ ಹೆಬ್ಬಾಳ್ಕರ್

ಸಮಗ್ರ ನ್ಯೂಸ್: ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಜಾರಿಗೊಳಿಸಿರುವ ವಿವಿಧ ಯೋಜನೆಗಳಿಗೆ ಅರ್ಜಿ ಸಲ್ಲಿಸಲು ರೂ.150 ಸೇವಾ ಕೇಂದ್ರಗಳು ವಸೂಲಿ ಮಾಡುತ್ತಿವೆ ಎನ್ನಲಾಗುತ್ತಿತ್ತು. ಈಗ ಗೃಹ ಲಕ್ಷ್ಮೀ ಯೋಜನೆಗೂ ಹಾಗೆ ವಸೂಲಿ ಮಾಡಲಾಗುತ್ತಿದೆ ಎನ್ನಲಾಗಿತ್ತು. ಹೀಗಾಗಿ ಗೃಹಲಕ್ಷ್ಮೀಯರಿಗೆ ಮತ್ತೊಂದು ಗುಡ್ ನ್ಯೂಸ್ ಎನ್ನುವಂತೆ ಒಂದು ರೂ ಕೂಡ ಅರ್ಜಿ ಸಲ್ಲಿಸಲು ಕೊಡುವಂತಿಲ್ಲ. ಉಚಿತ ಎಂಬುದಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ. ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೃಹ ಲಕ್ಷ್ಮೀ ಯೋಜನೆಗೆ ಒಂದು

ಗೃಹಲಕ್ಷ್ಮಿ ಯೋಜನೆ ಅರ್ಜಿ ಸಲ್ಲಿಕೆ ಸಂಪೂರ್ಣ ಉಚಿತ – ಲಕ್ಷ್ಮೀ ಹೆಬ್ಬಾಳ್ಕರ್ Read More »

ಪೌರ ಕಾರ್ಮಿಕರಿಗೆ ಶುಭ ಸುದ್ದಿ| ಶೀಘ್ರದಲ್ಲೇ ಸೇವೆ ಖಾಯಂ ಸಾಧ್ಯತೆ

ಸಮಗ್ರ ನ್ಯೂಸ್: ಕಾಯಂ ನೇಮಕಾತಿಗಾಗಿ ಕಾಯುತ್ತಿರುವ ಗುತ್ತಿಗೆ ಪೌರ ಕಾರ್ಮಿಕರ ಸೇವೆ ಕಾಯಂಗೊಳಿಸಲು ಕ್ರಮ ಕೈಗೊಳ್ಳಲಾಗಿದ್ದು, ಶೀಘ್ರದಲ್ಲೇ ಪೌರಕಾರ್ಮಿಕರಿಗೆ ಶುಭ ಸುದ್ದಿ ಸಿಗುವ ಸಾಧ್ಯತೆ ಇದೆ. ಬಿಬಿಎಂಪಿ ಸೇರಿದಂತೆ ರಾಜ್ಯದ 32 ಸ್ಥಳೀಯ ಸಂಸ್ಥೆಗಳಲ್ಲಿ ಗುತ್ತಿಗೆ ಮತ್ತು ಹೊರಗುತ್ತಿಗೆ ಹಾಗೂ ನೇರ ವೇತನ ಪಾವತಿ ಅಡಿ ಕಾರ್ಯ ನಿರ್ವಹಿಸುತ್ತಿರುವ 40 ಸಾವಿರಕ್ಕೂ ಅಧಿಕ ಪೌರಕಾರ್ಮಿಕರನ್ನು ಹಂತ ಹಂತವಾಗಿ ಕಾಯಂಗೊಳಿಸಲು ಹಿಂದಿನ ಸರ್ಕಾರ ನಿರ್ಧರಿಸಿ ಆದೇಶ ಹೊರಡಿಸಿದೆ. ಆದೇಶದ ಅನ್ವಯ ರಾಜ್ಯದ ವಿವಿಧ ಮಹಾನಗರ ಪಾಲಿಕೆ ಮತ್ತು ಸ್ಥಳೀಯ

ಪೌರ ಕಾರ್ಮಿಕರಿಗೆ ಶುಭ ಸುದ್ದಿ| ಶೀಘ್ರದಲ್ಲೇ ಸೇವೆ ಖಾಯಂ ಸಾಧ್ಯತೆ Read More »

ಜೂ.30: SSLC ಪೂರಕ ಪರೀಕ್ಷೆ ಫಲಿತಾಂಶ ಪ್ರಕಟ| ರಿಸಲ್ಟ್ ನೋಡೋದು ಹೇಗೆ ಗೊತ್ತಾ?

ಸಮಗ್ರ ನ್ಯೂಸ್: ಎಸ್ ಎಸ್ ಎಲ್ ಸಿ ಪೂರಕ ಪರೀಕ್ಷೆ ಫಲಿತಾಂಶ ನಾಳೆ (ಜೂ.30) ಪ್ರಕಟಗೊಳ್ಳಲಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ತಿಳಿಸಿದೆ. ಈಗ ಎಲ್ಲಾ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಮುಕ್ತಾಯವಾಗಿದೆ. ಫಲಿತಾಂಶವನ್ನು https://karresults.nic.in ಜಾಲತಾಣದಲ್ಲಿ ದಿನಾಂಕ:30.06.2023 ರಂದು ಬೆಳಿಗ್ಗೆ 11.00 ಗಂಟೆಯ ನಂತರ ವೀಕ್ಷಿಸಬಹುದಾಗಿದೆ ಎಂದು ಹೇಳಿದ್ದಾರೆ. ನಾಳೆ ಬೆಳಿಗ್ಗೆ ವಿದ್ಯಾರ್ಥಿಗಳು 11 ಗಂಟೆಯ ಬಳಿಕ ಮಂಡಳಿಯ ಜಾಲತಾಣ https://karresults.nic.in ಗೆ ಭೇಟಿ ನೀಡಿ ನಿಮ್ಮ ಫಲಿತಾಂಶವನ್ನು

ಜೂ.30: SSLC ಪೂರಕ ಪರೀಕ್ಷೆ ಫಲಿತಾಂಶ ಪ್ರಕಟ| ರಿಸಲ್ಟ್ ನೋಡೋದು ಹೇಗೆ ಗೊತ್ತಾ? Read More »