ಕರಾವಳಿ

ಸುಳ್ಯ:ಜೂ.29 ರಂದು ಸ್ವರ್ಣ ಶ್ರೀ ಸೌಹಾರ್ದ ಕೋ- ಆಪರೇಟಿವ್ ಸೊಸೈಟಿ ಶುಭಾರಂಭ|ಠೇವಣಾತಿಗಳಿಗೆ ಆಕರ್ಷಕ ಬಡ್ಡಿ ದರ

ಸಮಗ್ರ ನ್ಯೂ ಸ್: ಸುಳ್ಯದಲ್ಲಿ ನೂತನವಾಗಿ ಸ್ಥಾಪನೆಯಾಗಿರುವ ಸ್ವರ್ಣ ಶ್ರೀ ಸೌಹಾರ್ದ ಕೋ- ಆಪರೇಟಿವ್ ಸೊಸೈಟಿಯ ಉದ್ಘಾಟನೆ ಜೂ.29 ರಂದು ನಡೆಯಲಿದೆ. ಸುಳ್ಯ ರಥಬೀದಿಯ ವಿನಾಯಕ ಬಿಲ್ಡಿಂಗ್‌ನ ಮೊದಲ ಮಹಡಿಯಲ್ಲಿ ಕಾರ್ಯಾರಂಭ ಮಾಡಲಿರುವ ಸ್ವರ್ಣ ಶ್ರೀ ಸೌಹಾರ್ದ ಕೋ- ಆಪರೇಟಿವ್ ಸೊಸೈಟಿಯನ್ನು ಸುಳ್ಯ ವೃತ್ತ ನಿರೀಕ್ಷಕರಾದ ನವೀನ್‌ಚಂದ್ರ ಜೋಗಿ ಉದ್ಘಾಟಿಸಲಿದ್ದಾರೆ.ಮುಖ್ಯ ಅತಿಥಿಯಾಗಿ ವೆಂಕಟ್ರಮಣ‌ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಅಧ್ಯಕ್ಷ ಪಿ.ಸಿ.ಜಯರಾಮ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಠೇವಣಾತಿ ಮೇಲೆ ಆಕರ್ಷಕ ಬಡ್ಡಿ ದರ:ಸಂಸ್ಥೆಯ ಉದ್ಘಾಟನೆಯ ಪ್ರಯುಕ್ತ ಠೇವಣಾತಿಗಳ‌ ಮೇಲೆ

ಸುಳ್ಯ:ಜೂ.29 ರಂದು ಸ್ವರ್ಣ ಶ್ರೀ ಸೌಹಾರ್ದ ಕೋ- ಆಪರೇಟಿವ್ ಸೊಸೈಟಿ ಶುಭಾರಂಭ|ಠೇವಣಾತಿಗಳಿಗೆ ಆಕರ್ಷಕ ಬಡ್ಡಿ ದರ Read More »

ತಹಶೀಲ್ದಾರ್ ಸೊರಕೆ ಅಜಿತ್ ಕುಮಾರ್ ರೈ ಮನೆ ಮೇಲೆ ಲೋಕಾಯುಕ್ತ ದಾಳಿ| ಬೃಹತ್ ಪ್ರಮಾಣದ ನೋಟಿನ ಕಂತೆ ಪತ್ತೆ

ಸಮಗ್ರ ನ್ಯೂಸ್: ಕೆ.ಆರ್.ಪುರ ತಹಶೀಲ್ದಾರ್ ರಾಗಿದ್ದ ಅಜಿತ್ ಕುಮಾರ್ ರೈ ಸೊರಕೆ ಮನೆ ಮತ್ತು ಅವರ ನಿಕಟವರ್ತಿಗಳಿಗೆ ಸಂಬಂಧಿಸಿದ ಸ್ಥಳಗಳ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ಮಾಡಿದ್ದು, ಈ ವೇಳೆ ಬೃಹತ್ ಪ್ರಮಾಣದ ಹಣದ ಕಂತೆಯೇ ಪತ್ತೆಯಾದ ಬಗ್ಗೆ ವರದಿಯಾಗಿದೆ. ಇವರ ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪದ ಮೇಲೆ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ ಅಡಿಯಲ್ಲಿ ಲೋಕಾಯುಕ್ತದ ಬೆಂಗಳೂರು ನಗರ ಘಟಕದ ಪೊಲೀಸರು ಅಜಿತ್ ಕುಮಾರ್ ರೈ ವಿರುದ್ಧ ಎಫ್‌ಐಆರ್ ದಾಖಲಿಸಿದ್ದು, ತನಿಖೆ ಆರಂಭಿಸಿದ್ದಾರೆ. ಲೋಕಾಯುಕ್ತ ಎಸ್

ತಹಶೀಲ್ದಾರ್ ಸೊರಕೆ ಅಜಿತ್ ಕುಮಾರ್ ರೈ ಮನೆ ಮೇಲೆ ಲೋಕಾಯುಕ್ತ ದಾಳಿ| ಬೃಹತ್ ಪ್ರಮಾಣದ ನೋಟಿನ ಕಂತೆ ಪತ್ತೆ Read More »

ಟೊಮ್ಯಾಟೊ 100 ನಾಟೌಟ್; ಉಳಿದ ತರಕಾರಿಗಳೂ ಸೆಂಚುರಿ ಸನಿಹಕ್ಕೆ| ಇಲ್ಲಿದೆ ಮಾರುಕಟ್ಟೆಯ ದರಪಟ್ಟಿ

ಸಮಗ್ರ ನ್ಯೂಸ್: ಶತಕ ದಾಟಿರುವ ಟೊಮೆಟೋ ದರ ಮಂಗಳವಾರವೂ ದುಬಾರಿಯಾಗಿಯೇ ಮುಂದುವರಿದಿದ್ದು, ರಾಜ್ಯ ರಾಜಧಾನಿಯ ಪ್ರಮುಖ ಮಂಡಿಗಳಿಗೆ ತುಸು ಹೆಚ್ಚಿನ ಪ್ರಮಾಣದ ಟೊಮೆಟೋ ಬಂದಿದ್ದರಿಂದ ಬೆಲೆ ಕೊಂಚ ಇಳಿಕೆಯಾಗಿತ್ತು. ಸೋಮವಾರಕ್ಕೆ ಹೋಲಿಸಿದರೆ ಹಾಪ್‌ಕಾಮ್ಸ್‌ನಲ್ಲಿ 15 ಕಡಿಮೆಯಾಗಿ ಒಂದು ಕೆಜಿಗೆ 110ಗೆ ಮಾರಾಟವಾಗಿದ್ದರೆ, ಚಿಲ್ಲರೆ ಮಾರುಕಟ್ಟೆಯಲ್ಲೂ ಹೆಚ್ಚು ಕಡಿಮೆ ಇದೇ ದರವಿತ್ತು. ದರ ನೂರರ ಗಡಿ ದಾಟಿದೆ ಹೆಚ್ಚಾಗಿದೆ ಎಂಬ ಸುದ್ದಿಯಿಂದ ದಾಸ್ತಾನಿದ್ದ ಟೊಮೆಟೋ ಮಾರುಕಟ್ಟೆಗೆ ಹೆಚ್ಚಿನ ಪ್ರಮಾಣದಲ್ಲಿ ಬಂದ ಕಾರಣ ಬೆಲೆ ಸ್ವಲ್ಪ ಕಡಿಮೆಯಾಗಿತ್ತು. ಆದರೆ ಕೊಂಚ

ಟೊಮ್ಯಾಟೊ 100 ನಾಟೌಟ್; ಉಳಿದ ತರಕಾರಿಗಳೂ ಸೆಂಚುರಿ ಸನಿಹಕ್ಕೆ| ಇಲ್ಲಿದೆ ಮಾರುಕಟ್ಟೆಯ ದರಪಟ್ಟಿ Read More »

ಕರಾವಳಿ ಜಿಲ್ಲೆಗಳಲ್ಲಿ ಜು.2ರವರೆಗೆ ಉತ್ತಮ ಮಳೆ ನಿರೀಕ್ಷೆ| ರಾಜ್ಯದಲ್ಲಿ ಸಾಧಾರಣ ಮಳೆ ಸಂಭವ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಜುಲೈ 2ರವರೆಗೂ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಕಲಬುರಗಿ, ಕೊಪ್ಪಳ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಮಳೆಯಾಗಲಿದೆ. ಕರಾವಳಿಯ ಬಹುತೇಕ ಕಡೆಗಳಲ್ಲಿ, ದಕ್ಷಿಣ ಒಳನಾಡಿನ ಕೆಲವೆಡೆ ಹಾಗೂ ಉತ್ತರ ಒಳನಾಡಿನ ಒಂದೆರೆಡು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ

ಕರಾವಳಿ ಜಿಲ್ಲೆಗಳಲ್ಲಿ ಜು.2ರವರೆಗೆ ಉತ್ತಮ ಮಳೆ ನಿರೀಕ್ಷೆ| ರಾಜ್ಯದಲ್ಲಿ ಸಾಧಾರಣ ಮಳೆ ಸಂಭವ Read More »

ಸುಬ್ರಹ್ಮಣ್ಯ:ಕೆ ಎಸ್ ಎಸ್ ಕಾಲೇಜ್ ವತಿಯಿಂದ ವಿದ್ಯಾರ್ಥಿ ಕೇಂದ್ರಿತ ಚಟುವಟಿಕೆ ಕಾರ್ಯಕ್ರಮ

ಸಮಗ್ರ ನ್ಯೂಸ್: ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದ ಸಂಸ್ಕೃತ ವಿಭಾಗದ ವತಿಯಿಂದ ಶ್ರೀ ಸುಬ್ರಹ್ಮಣ್ಯೇಶ್ವರ ಪ್ರೌಢಶಾಲಾ(SSPU) ವಿಭಾಗದ ಸಂಸ್ಕೃತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ಕೇಂದ್ರಿತ ಚಟುವಟಿಕೆಗಳನ್ನು ಜೂ.27 ರಂದು ಹಮ್ಮಿಕೊಂಡರು. ಮಹಾವಿದ್ಯಾಲಯದ ಸಂಸ್ಕೃತ ವಿಭಾಗದ ವಿದ್ಯಾರ್ಥಿಗಳಾದ ಕು.ಪೃಥ್ವಿಶ್ರೀ, ಕು. ಮೋಕ್ಷಿತ, ಕು. ದೇವಿ ಪ್ರಸಾದ್ ಇವರು ಪ್ರೌಢಶಾಲಾ ಸಂಸ್ಕೃತ ವಿದ್ಯಾರ್ಥಿಗಳಿಗೆ ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳನ್ನು ನಡೆಸಿದರು. ಈ ಕಾರ್ಯಕ್ರಮದಲ್ಲಿ ಪ್ರೌಢಶಾಲಾ ವಿಭಾಗದ ಮುಖ್ಯ ಶಿಕ್ಷಕರಾದ ಶ್ರೀ ಯಶವಂತ ರೈ ಹಾಗೂ ಸಂಸ್ಕೃತ ಶಿಕ್ಷಕರಾದ ಶ್ರೀ ರಘು ಬಿಜೂರು

ಸುಬ್ರಹ್ಮಣ್ಯ:ಕೆ ಎಸ್ ಎಸ್ ಕಾಲೇಜ್ ವತಿಯಿಂದ ವಿದ್ಯಾರ್ಥಿ ಕೇಂದ್ರಿತ ಚಟುವಟಿಕೆ ಕಾರ್ಯಕ್ರಮ Read More »

ಸುಳ್ಯ: ಕೋವಿಯಿಂದ ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ!?

ಸಮಗ್ರ ನ್ಯೂಸ್: ಕೋವಿಯಿಂದ ತಾನೇ ಗುಂಡು ಹೊಡೆದುಕೊಂಡು ಯುವಕನೋರ್ವ ಆತ್ಮಹತ್ಯೆಗೆ ಶರಣಾಗಿರುವ ಘಟನೆ ದ.ಕ ಜಿಲ್ಲೆಯ ಸುಳ್ಯ ತಾಲೂಕಿನ‌ ಉಬರಡ್ಕದಲ್ಲಿ ನಡೆದಿದೆ. ಮೃತ ಯುವಕನನ್ನು ಅರಂತೋಡು ಗ್ರಾಮದ ರವಿ ಎಂದು ಗುರುತಿಸಲಾಗಿದೆ. ಈತ ಉಬರಡ್ಕ ಗ್ರಾಮದ ಬೆಳ್ರಂಪಾಡಿ‌ ಎಂಬಲ್ಲಿನ ಗುಡ್ಡದಲ್ಲಿ ಕೋವಿಯಿಂದ ಗುಂಡು‌ ಹೊಡೆದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಗಿ ಹೇಳಲಾಗಿದೆ. ಬೆಳ್ರಂಪಾಡಿಯ ಮನೆಯೊಂದರಲ್ಲಿ ರವಿ ಕೆಲಸಮಯದಿಂದ ಕೆಲಸಕ್ಕಿದ್ದು ಕುಡಿತದ ಚಟ ಹೊಂದಿದ್ದ ಎನ್ನಲಾಗಿದೆ. ಕಳೆದ ರಾತ್ರಿ ಕೋವಿ ಹಿಡಿದು ಗುಡ್ಡಕ್ಕೆ ಹೋಗಿದ್ದ ರವಿ ಅಲ್ಲಿ‌ ತಲೆಗೆ ಗುಂಡು ಹೊಡೆದುಕೊಂಡಿದ್ದಾನೆ

ಸುಳ್ಯ: ಕೋವಿಯಿಂದ ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ!? Read More »

ಪಂಜ: ಪಂಚಶ್ರೀ ಜೆಸಿಐ ವತಿಯಿಂದ ಗದ್ದೆನಾಟಿ

ಸಮಗ್ರ ನ್ಯೂಸ್: ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನ ಪಂಜದಲ್ಲಿ ಜೇಸಿಐ ಪಂಜ ಪಂಚಶ್ರೀಯ ಬೆಳ್ಳಿ ಹಬ್ಬ ಸಂಭ್ರಮದ ಸವಿನೆನಪಿಗಾಗಿ ದಾನಿಗಳಿಂದ ದೇವಳದ ಗದ್ದೆಯಲ್ಲಿ ಎರಡನೇ ವರ್ಷದ ಸಾಗುವಳಿ ಮಾಡಲಾಯಿತು. ಜೇಸಿಐ ಪಂಜ ಪಂಚಶ್ರೀ ಹಾಗೂ ಶ್ರೀ ಪರಿವಾರ ಪಂಚಲಿಗೇಶ್ವರ ದೇವಸ್ಥಾನದ ಜಂಟಿ ಆಶ್ರಯದಲ್ಲಿ ದೇವಳದ ಗದ್ದೆಗೆ ತೆರಳಿ ನಾಟಿ ಮಾಡಲಾಯಿತು. ಜೇಸಿಐ ಪಂಜ ಪಂಚಶ್ರೀಯ ಪೂರ್ವ ಅಧ್ಯಕ್ಷರಾದ ಜೇಸಿ.ತೀರ್ಥಾನಂದ ಕೊಡಂಕಿರಿಯವರ ಮಾರ್ಗದರ್ಶನ ಹಾಗೂ ನೇತೃತ್ವದಲ್ಲಿ ನಡೆನಡೆಯಿತು. ಈ ಸಂದರ್ಭದಲ್ಲಿ ಪಂಜ ಜೇಸಿಐ ಪಂಚಶ್ರೀಯ ರಜತ ವರ್ಷದ ಅಧ್ಯಕ್ಷ

ಪಂಜ: ಪಂಚಶ್ರೀ ಜೆಸಿಐ ವತಿಯಿಂದ ಗದ್ದೆನಾಟಿ Read More »

ಕಡಬ: ಆಡನ್ನು ನುಂಗಲು ಯತ್ನಿಸಿದ ಹೆಬ್ಬಾವು !

ಸಮಗ್ರ ನ್ಯೂಸ್: ಭಾರೀ ಗಾತ್ರದ ಹೆಬ್ಬಾವು, ಆಡೊಂದನ್ನು ನುಂಗಲು‌ ಸುಮಾರು ಒಂದು ತಾಸು ಸೆಣಸಿ ವಿಫಲ ಯತ್ನ ನಡೆಸಿದ ಘಟನೆ ಮಂಗಳವಾರ ಸಂಜೆ ಕಡಬ ತಾಲೂಕಿನ ಐತ್ತೂರು ಗ್ರಾಮದ ಬ್ರಾಂತಿಕಟ್ಟೆ ಕೊಡೆಂಕಿರಿ ಎಂಬಲ್ಲಿ ನಡೆದಿದೆ. ಸ್ಥಳೀಯ ಜಾರ್ಜ್ ಕುಟ್ಟಿ ಎಂಬವರಿಗೆ ಸೇರಿದ ಸುಮಾರು 45 ಕೆಜಿ ತೂಕದ ಗಂಡು ಆಡು ಹೆಬ್ಬಾವಿನ ಉರುಳಿಗೆ ಸಿಕ್ಕಿ ಉಸಿರುಗಟ್ಟಿ ಪ್ರಾಣ ಬಿಟ್ಟಿದೆ. ಆಡಿನ ತಲೆಯ ಭಾಗವನ್ನು ಹೆಬ್ಬಾವು ನುಂಗಿದರೂ ಉಳಿದ ಭಾಗವನ್ನು ನುಂಗಲು ಸಾಧ್ಯವಾಗದೆ ಸೋತು ಸತ್ತ ಆಡನ್ನು ಸ್ಥಳದಲ್ಲೇ

ಕಡಬ: ಆಡನ್ನು ನುಂಗಲು ಯತ್ನಿಸಿದ ಹೆಬ್ಬಾವು ! Read More »

ಅಬ್ಬಾ..! ಚಿಕನ್, ಮಟನ್ ರೇಟೂ| ಹಿಂಗಾದ್ರೆ ನಾನ್ ವೆಜ್ ತಿನ್ನೋದೆಂಗೆ!?

ಸಮಗ್ರ ನ್ಯೂಸ್: ರಾಜ್ಯದಲ್ಲಿ ಹಿಂದೆಂದೂ ಕಾಣದಂತೆ ಮಾಂಸದ ಬೆಲೆ ಏರಿಕೆಯಾಗುತ್ತಲೇ ಇದ್ದು, ಬಾಡೂಟ ಪ್ರಿಯರಿಗೆ ಕೋಳಿ ಮಾಂಸ ಈಗ ಬಲು ದುಬಾರಿಯಾಗಿದೆ. ಬೇಸಿಗೆಯಲ್ಲಿ ಉತ್ಪಾದನೆ ಕಡಿಮೆ ಹಾಗೂ ಬೇಡಿಕೆ ಹೆಚ್ಚು ಜೊತೆಗೆ ಕೋಳಿ ಆಹಾರದ ಬೆಲೆ ಹೆಚ್ಚಳದ ಪರಿಣಾಮ ಚಿಕನ್ ಬೆಲೆ ಗಗನಕ್ಕೇರಿದ್ದು, ಮಾಂಸ ಪ್ರಿಯರಿಗೆ ಬಾರಿ ಹೊರೆಯಾಗಿ ಪರಿಣಮಿಸಿದೆ. ಕೋಳಿ ಮಾಂಸ ಹಾಗೂ ಮೊಟ್ಟೆ ತಿನ್ನುವವರು ಈಗ ಖರೀದಿಸಲು ಹಿಂದೆ ಮುಂದೆ ನೋಡುವಂತಾಗಿದೆ. ಚಿಕನ್ ದರವು ಈಗ ಪ್ರತಿ ಕೆಜಿಗೆ 280-300 ತನಕ ಏರಿಕೆಯಾಗಿದೆ. ಪ್ರತಿ

ಅಬ್ಬಾ..! ಚಿಕನ್, ಮಟನ್ ರೇಟೂ| ಹಿಂಗಾದ್ರೆ ನಾನ್ ವೆಜ್ ತಿನ್ನೋದೆಂಗೆ!? Read More »

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ| ದ.ಕ ಮತ್ತು ಕೊಡಗಿನ 6 ಕಡೆ ಎನ್ಐಎ ದಾಳಿ

ಸಮಗ್ರ ನ್ಯೂಸ್: ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಮತ್ತು ಕೊಡಗು ಜಿಲ್ಲೆಯಲ್ಲಿ ಎನ್ ಐ ಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ದಕ್ಷಿಣ ಕನ್ನಡ ಮತ್ತು ಕೊಡಗು ಜಿಲ್ಲೆಯಲ್ಲಿ ಎನ್ ಐ ಎ ದಾಳಿ ನಡೆಸಿದ್ದು, ನಿಷೇಧಿತ ಪಿಎಫ್ಐ ಸಂಘಟನೆ ಕಾರ್ಯಕರ್ತರ ಮನೆ ಮೇಲೂ ದಾಳಿ ನಡೆದಿದೆ. ಒಟ್ಟು 6 ಕಡೆ ಏಕಕಾಲಕ್ಕೆ ಎನ್ ಐ ಎ ಅಧಿಕಾರಿಗಳು ದಾಳಿ ನಡೆಸಿದ್ದು, ಎಲೆಕ್ಟ್ರಾನಿಕ್ ಡಿವೈಸ್ ಸೇರಿದಂತೆ ಮಹತ್ವದ ದಾಖಲೆಗಳನ್ನು ಅಧಿಕಾರಿಗಳು ವಶಕ್ಕೆ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ| ದ.ಕ ಮತ್ತು ಕೊಡಗಿನ 6 ಕಡೆ ಎನ್ಐಎ ದಾಳಿ Read More »