ಹಾಸನದಲ್ಲಿ ನಡುಗಿದ ಭೂಮಿ; ಮನೆಯಿಂದ ಹೊರಗೋಡಿದ ಜನತೆ
ಸಮಗ್ರ ನ್ಯೂಸ್: ಹಾಸನ ಜಿಲ್ಲೆಯ ಅರಕಲಗೂಡು ಪಟ್ಟಣ ಸೇರಿದಂತೆ ವಿವಿಧೆಡೆ ಮಂಗಳವಾರ ಬೆಳಿಗ್ಗೆ ಭೂಮಿ ಕಂಪಿಸಿದ್ದು, ಜನರು ಆತಂಕದಿಂದ ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ. ಹಾಸನ ಪಟ್ಟಣದಲ್ಲಿ ಕೆಲವು ಕಡೆ ಬೆಳಿಗ್ಗೆ 10.25, ಇನ್ನೂ ಕೆಲವು ಕಡೆ 10.34 ರ ಸಮಯದಲ್ಲಿ ಭೂಮಿ ಕಂಪಿಸಿದೆ. ಜನರಿಗೆ ಭೂಕಂಪನದ ಅನುಭವವಾಗಿದ್ದು, ಗಾಬರಿಯಿಂದ ಮನೆಯಿಂದ ಹೊರಗೆ ಓಡಿ ಬಂದಿದ್ದರು. ಭೂಮಿ ಕಂಪಿಸಿದ್ದರಿಂದ ಜನರಲ್ಲಿ ಆತಂಕ ಮನೆ ಮಾಡಿದ್ದು, ಭೂಕಂಪನದ ಅನುಭವದಿಂದ ಮನೆಯ ಹೊರಗಡೆಯೇ ಸ್ಥಳೀಯರು ನಿಂತಿದ್ದರು. ಸ್ಥಳಕ್ಕೆ ಅಧಿಕಾರಿಗಳು ದೌಡಾಯಿಸಿದ್ದು,
ಹಾಸನದಲ್ಲಿ ನಡುಗಿದ ಭೂಮಿ; ಮನೆಯಿಂದ ಹೊರಗೋಡಿದ ಜನತೆ Read More »










