ಕರಾವಳಿ

ಬೆಳ್ಳಾರೆ ಬೂಡುದ ಸ್ವಾಮಿ ಕೊರಗಜ್ಜ ವಿಡೀಯೋ ಭಕ್ತಿಗೀತೆ ಬಿಡುಗಡೆ ಕಾರ್ಯಕ್ರಮ

ಸಮಗ್ರ ನ್ಯೂಸ್:ಸುಳ್ಯದ ಭಾವನಾ ಮೀಡಿಯಾ ಅರ್ಪಿಸುವ ಬೆಳ್ಳಾರೆ ಬೂಡುದ ಸ್ವಾಮಿ ಕೊರಗಜ್ಜ ವೀಡಿಯೋ ಭಕ್ತಿಗೀತೆಯನ್ನು ಬೆಳ್ಳಾರೆ ಬೂಡುದ ಸ್ವಾಮಿ ಕೊರಗಜ್ಜ ಸನ್ನಿಧಾನದಲ್ಲಿ ಬಿಡುಗಡೆಗೊಂಡಿತು. ಬೂಡು ದೇವಸ್ಥಾನದ ಪೂಜಾರಿ ಹಾಗೂ ಅಧ್ಯಕ್ಷರಾದ ಶ್ರೀ ಸುಂದರ ರವರು ಕಾರ್ಯಕ್ರಮ ಉದ್ಘಾಟಿಸಿದರು.ಸುಳ್ಯದ ಖ್ಯಾತ ಜ್ಯೋತಿಷಿ ಹಾಗೂ ಸಾಹಿತಿ ಮತ್ತು ಗಾಯಕರಾದ ಎಚ್.ಭೀಮರಾವ್ ವಾಷ್ಠರ್ ರವರು ಭಕ್ತಿಗೀತೆಯನ್ನು ಬಿಡುಗಡೆ ಮಾಡಿ ಶುಭ ಹಾರೈಸಿದರು . ಈ ಭಕ್ತಿಗೀತೆಗೆ ಸಂಪೂರ್ಣ ಸಹಕಾರ ನೀಡಿದ ಐವರ್ನಾಡಿನ ಪೆರುಮಾಳ್ ಲಕ್ಷ್ಮಣ್ ರವರು ಸರ್ವರನ್ನು ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು.

ಬೆಳ್ಳಾರೆ ಬೂಡುದ ಸ್ವಾಮಿ ಕೊರಗಜ್ಜ ವಿಡೀಯೋ ಭಕ್ತಿಗೀತೆ ಬಿಡುಗಡೆ ಕಾರ್ಯಕ್ರಮ Read More »

ಸುಳ್ಯ ಪ್ರೆಸ್ ಕ್ಲಬ್ ವತಿಯಿಂದ ಶಾಸಕಿ ಭಾಗೀರಥಿ ಮುರುಳ್ಯ ಅವರಿಗೆ ಸನ್ಮಾನ

ಸಮಗ್ರ ನ್ಯೂಸ್:ಸುಳ್ಯ ಪ್ರೆಸ್ ಕ್ಲಬ್ ವತಿಯಿಂದ ಸುಳ್ಯದ ನೂತನ ಶಾಸಕಿ ಭಾಗೀರಥಿ ಮುರುಳ್ಯ ಅವರಿಗೆ ಸನ್ಮಾನ ಕಾರ್ಯಕ್ರಮ ಪ್ರೆಸ್ ಕ್ಲಬ್ ನಲ್ಲಿ ಶನಿವಾರ ನಡೆಯಿತು. ಹಿರಿಯ ಪತ್ರಕರ್ತ ಗಂಗಾಧರ ಮಟ್ಟಿ ಅವರು ಶಾಸಕಿ ಭಾಗೀರಥಿ ಮುರುಳ್ಯ ಅವರನ್ನು ಸನ್ಮಾನಿಸಿ,ಗೌರವಿಸಿದರು. ಪ್ರೆಸ್ ಕ್ಲಬ್ ಅಧ್ಯಕ್ಷ ಹರೀಶ್ ಬಂಟ್ವಾಳ ಅಧ್ಯಕ್ಷತೆ ವಹಿಸಿದ್ದರು. ದುರ್ಗಾಕುಮಾರ್ ನಾಯರ್ ಕೆರೆ ಅಭಿನಂದನಾ ಭಾಷಣ ಮಾಡಿದರು. ಪ್ರೆಸ್ ಕ್ಲಬ್ ಕೋಶಾಧಿಕಾರಿ ರಮೇಶ್ ನೀರಬಿದಿರೆ ಕಾರ್ಯಕ್ರಮ ನಿರೂಪಿಸಿದರು. ಕಾರ್ಯದರ್ಶಿ ಜಯಪ್ರಕಾಶ್ ಕುಕ್ಕೆಟ್ಟಿ ಸ್ವಾಗತಿಸಿದರು. ಪ್ರೆಸ್ ಕ್ಲಬ್ ಸದಸ್ಯರು

ಸುಳ್ಯ ಪ್ರೆಸ್ ಕ್ಲಬ್ ವತಿಯಿಂದ ಶಾಸಕಿ ಭಾಗೀರಥಿ ಮುರುಳ್ಯ ಅವರಿಗೆ ಸನ್ಮಾನ Read More »

ಇನ್ಮುಂದೆ JEE ಅಡ್ವಾನ್ಸ್ ಪರೀಕ್ಷೆ ಬರೆಯಬೇಕಿಲ್ಲ

ಸಮಗ್ರ ನ್ಯೂಸ್: ಪರೀಕ್ಷಾ ಮಾದರಿಯನ್ನು ಪರಿಶೀಲಿಸಲು ಐಐಟಿ ಕೌನ್ಸಿಲ್ ಅನ್ನು ಕೇಳಲಾಗಿದ್ದು. ಇದರಿಂದ ಕೋಚಿಂಗ್‌ಗಳನ್ನು ಕಡಿಮೆ ಮಾಡಬಹುದು. ಇದಕ್ಕಾಗಿ ಐಐಟಿ ದೆಹಲಿಗೆ ೫ ತಿಂಗಳೊಳಗೆ ವರದಿ ಸಲ್ಲಿಸುವಂತೆ ತಿಳಿಸಲಾಗಿದೆ ಐಐಟಿ ಅಡ್ವಾನ್ಸ್ ಬದಲಿಗೆ ಜಂಟಿ ಎಂಜಿನಿಯರಿಂಗ್ ಪ್ರವೇಶ ಪರೀಕ್ಷೆಯನ್ನು ಕೇಂದ್ರ ಸರ್ಕಾರ ಪರಿಗಣಿಸುತ್ತಿದೆ ಎಂದು ಹೇಳಲಾಗುತ್ತಿದೆ. ವರದಿಗಳ ಪ್ರಕಾರ, ಐಐಟಿ ಕೌನ್ಸಿಲ್ ಸಭೆಯಲ್ಲೂ ಕೇಂದ್ರ ಸರ್ಕಾರ ಈ ಬಗ್ಗೆ ಸಲಹೆಯನ್ನು ಮುಂದಿಟ್ಟಿದ್ದು, ಸಿಎಫ್‌ಟಿಐ, ಐಐಟಿ, ಎನ್‌ಐಟಿ ಸೇರಿದಂತೆ ದೇಶದ ಇತರೆ ಕೇಂದ್ರ ಅನುದಾನಿತ ತಾಂತ್ರಿಕ ಸಂಸ್ಥೆಗಳಲ್ಲಿ ಪ್ರವೇಶಕ್ಕೆ

ಇನ್ಮುಂದೆ JEE ಅಡ್ವಾನ್ಸ್ ಪರೀಕ್ಷೆ ಬರೆಯಬೇಕಿಲ್ಲ Read More »

ರಾಜೀನಾಮೆ ಬೆನ್ನಲ್ಲೇ ಉಲ್ಟಾ ಹೊಡೆದ ಕಟೀಲ್| ನಾನು ರಾಜೀನಾಮೆ ಕೊಡೋದಾಗಿ ಹೇಳಿಲ್ಲ‌‌ ಎಂದ ಬಿಜೆಪಿ ರಾಜ್ಯಾಧ್ಯಕ್ಷ

ಸಮಗ್ರ ನ್ಯೂಸ್: ಪಕ್ಷದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿಲ್ಲ. ಈ ಕುರಿತಂತೆ ಮಾಧ್ಯಮಗಳಲ್ಲಿ ಬರುತ್ತಿರುವ ಮಾಹಿತಿ ಸತ್ಯಕ್ಕೆ ದೂರವಾದುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್‌ ಕುಮಾರ್ ಕಟೀಲ್ ಅವರು ತಿಳಿಸಿದ್ದಾರೆ. ಇಂದು ಪತ್ರಿಕಾ ಹೇಳಿಕೆ ನೀಡಿರುವ ಅವರು, ಬಳ್ಳಾರಿಯಲ್ಲಿ ವಿ. ಸೋಮಣ್ಣ ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷೆಯನ್ನು ಪ್ರಕಟಿಸಿದ ಕುರಿತ ಪ್ರಶ್ನೆಗೆ ಉತ್ತರಿಸುವ ವೇಳೆ ಸೋಲಿನ ನೈತಿಕ ಹೊಣೆ ಹೊರುತ್ತೇನೆ. ಸೋಲಿನ ಕಾರಣಗಳ ಕುರಿತಂತೆ ಪಕ್ಷದ ಹಿರಿಯರಿಗೆ ಮಾಹಿತಿ ನೀಡಿದ್ದೇನೆ. 4 ವರ್ಷಗಳಿಂದ ನಾನು ಅಧ್ಯಕ್ಷ

ರಾಜೀನಾಮೆ ಬೆನ್ನಲ್ಲೇ ಉಲ್ಟಾ ಹೊಡೆದ ಕಟೀಲ್| ನಾನು ರಾಜೀನಾಮೆ ಕೊಡೋದಾಗಿ ಹೇಳಿಲ್ಲ‌‌ ಎಂದ ಬಿಜೆಪಿ ರಾಜ್ಯಾಧ್ಯಕ್ಷ Read More »

ಬೆಂಗಳೂರು: ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಳಿನ್ ಕುಮಾರ್ ಕಟೀಲ್ ರಾಜೀನಾಮೆ

ಸಮಗ್ರ ನ್ಯೂಸ್:ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಳಿನ್ ಕುಮಾರ್ ಕಟೀಲ್ ರಾಜೀನಾಮೆ ಘೋಷಣೆ ಮಾಡಿದ್ದಾರೆ. ಶನಿವಾರ ಬಳ್ಳಾರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆ ಸೋಲಿನ ಹಿನ್ನೆಲೆ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡುವುದಾಗಿ ಹೇಳಿದ್ದಾರೆ.  ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಸೋಲಿನ ನೈತಿಕ ಹೊಣೆ ಹೊತ್ತು ಈಗಾಗಲೇ ನನ್ನ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಸಂಸದ ನಳೀನ್‌ ಕುಮಾರ್‌ ಕಟೀಲ್‌ ಹೇಳಿದ್ದಾರೆ. ಈಗಾಗಲೇ ನಾನು ಲಿಖಿತ ಹಾಗೂ ಮೌಖಿಕವಾಗಿ ರಾಜೀನಾಮೆ ಸಲ್ಲಿಕೆ ಮಾಡಿದ್ದೇನೆ ಎಂದು ಹೇಳಿದ್ದಾರೆ.

ಬೆಂಗಳೂರು: ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಳಿನ್ ಕುಮಾರ್ ಕಟೀಲ್ ರಾಜೀನಾಮೆ Read More »

ಚುರುಕು ಪಡೆದ ಮುಂಗಾರುಮಳೆ| ಕರ್ನಾಟಕ ಸೇರಿದಂತೆ ದೇಶದ ಹಲವು ರಾಜ್ಯಗಳಲ್ಲಿ ಉತ್ತಮ ಮಳೆ ನಿರೀಕ್ಷೆ

ಸಮಗ್ರ ನ್ಯೂಸ್: ಮುಂದಿನ ನಾಲ್ಕೈದು ದಿನಗಳು ದೇಶದ ಇತರೆ ಭಾಗಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆಯ ಸೂಚನೆ ನೀಡಿದೆ. ಮುಂದಿನ ಮೂರ್ನಾಲ್ಕು ದಿನಗಳಲ್ಲಿ ಮಹಾರಾಷ್ಟ್ರ, ಕರ್ನಾಟಕ ಹಾಗೂ ತೆಲಂಗಾಣದ ಕೆಲವು ಭಾಗಗಳಲ್ಲಿ ಮುಂಗಾರು ಮತ್ತಷ್ಟು ಚುರುಕುಗೊಳ್ಳುವ ಪರಿಸ್ಥಿತಿಗಳಿವೆ ಎಂದು ಹೇಳಿದೆ. ಮುಂದಿನ ಐದು ದಿನಗಳಲ್ಲಿ ಪೂರ್ವ ಮಧ್ಯಭಾಗ ಹಾಗೂ ವಾಯವ್ಯ ಭಾರತದ ಕೆಲವು ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಒಡಿಶಾ, ಅರುಣಾಚಲಪ್ರದೇಶ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್,

ಚುರುಕು ಪಡೆದ ಮುಂಗಾರುಮಳೆ| ಕರ್ನಾಟಕ ಸೇರಿದಂತೆ ದೇಶದ ಹಲವು ರಾಜ್ಯಗಳಲ್ಲಿ ಉತ್ತಮ ಮಳೆ ನಿರೀಕ್ಷೆ Read More »

ಕಡಬ: ಬೈಲು-ಬಿಳಿನೆಲೆ ಸರಕಾರಿ ಶಾಲಾ ದೈಹಿಕ ಶಿಕ್ಷಣ ಶಿಕ್ಷಕರ ವರ್ಗಾವಣೆಗೆ ವಿರೋಧ

ಸಮಗ್ರ ನ್ಯೂಸ್: ಕಡಬ ತಾಲೂಕಿನ ಬಿಳಿನೆಲೆ ಗ್ರಾಮದ ಬೈಲು ಬಿಳಿನೆಲೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರನ್ನು ಬೇರೆ ಶಾಲೆಗೆ ವರ್ಗಾವಣೆಗೆ ಶಾಲಾ ಎಸ್.ಡಿ.ಎಂ.ಸಿ., ಪೋಷಕರು ವಿರೋಧ ವ್ಯಕ್ತಪಡಿಸಿರುವ ಘಟನೆ ನಡೆದಿದೆ. ಈ ಬಗ್ಗೆ ಶಾಲೆಯಲ್ಲಿ ಗುರುವಾರ ಹಾಗೂ ಶುಕ್ರವಾರ ಸಭೆಗಳನ್ನು ನಡೆಸಿ ಶಿಕ್ಷಕರ ವರ್ಗಾವಣೆ ತಡೆ ಹಿಡಿಯುವಂತೆ ಆಗ್ರಹಿಸಿದ್ದಾರೆ. ಮುಂದಿನ ಹೋರಾಟದ ಬಗ್ಗೆ ಚರ್ಚಿಸಿದ್ದಾರೆ. ಗುರುವಾರ ನಡೆದ ಸಭೆಯಲ್ಲಿ ಮಾತನಾಡಿದ ವಿನೀಶ್ ಬಿಳಿನೆಲೆ ಮಾತನಾಡಿ, ಬೈಲು ಬಿಳಿನೆಲೆ ಶಾಲೆಯಲ್ಲಿ 90ಕ್ಕೂ ಅಧಿಕ ಮಕ್ಕಳಿದ್ದು,

ಕಡಬ: ಬೈಲು-ಬಿಳಿನೆಲೆ ಸರಕಾರಿ ಶಾಲಾ ದೈಹಿಕ ಶಿಕ್ಷಣ ಶಿಕ್ಷಕರ ವರ್ಗಾವಣೆಗೆ ವಿರೋಧ Read More »

ಬೆಳ್ತಂಗಡಿ: ಅಂಗನವಾಡಿಯಿಂದ ಪುಟಾಣಿಗಳಿಗೆ ಕೊಟ್ಟ ಮೊಟ್ಟೆಯೊಳಗೆ ಮರಿ! ಗುಣಮಟ್ಟ ಕಳೆದ ಆಹಾರದ ವಿರುದ್ಧ ಪೋಷಕರ ಆಕ್ರೋಶ

ಸಮಗ್ರ ನ್ಯೂಸ್: ಅಂಗನವಾಡಿ ಶಾಲಾ ಮಕ್ಕಳಿಗೆ ಸರ್ಕಾರದಿಂದ ಕೊಡಮಾಡುವ ಪೌಷ್ಟಿಕ ಆಹಾರ ಮೊಟ್ಟೆಯಲ್ಲಿ ಬೇಯಿಸಿದಾಗ ಮರಿ ಪತ್ತೆಯಾದ ಪ್ರಕರಣವೊಂದು ಬೆಳ್ತಂಗಡಿ ತಾಲೂಕಿನ ರೆಖ್ಯ, ಅರಸಿನಮಕ್ಕಿಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಕೆಲ ವರ್ಷಗಳಿಂದ ಶಾಲಾ ಮಕ್ಕಳಿಗೆ ಹಾಲು, ಮೊಟ್ಟೆ,ದವಸ ಧಾನ್ಯಗಳನ್ನು ಅಂಗನವಾಡಿ ಮೂಲಕ ಎಲ್ಲಾ ಮನೆಗಳಿಗೂ ತಲುಪಿಸುವ ಕಾರ್ಯ ಕೈಗೊಳ್ಳಲಾಗಿತ್ತು. ಅಪೌಷ್ಟಿಕತೆ ನೀಗಿಸುವ ಸರ್ಕಾರದ ಉತ್ತಮ ಕಾರ್ಯದಿಂದ ಬೆಳೆಯುವ ಮಕ್ಕಳು ಪೌಷ್ಟಿಕವಾಗಿ ಬೆಳೆಯುತ್ತಾರೆ ಎನ್ನುವ ಯೋಜನೆ ಇಲಾಖೆಯದ್ದು. ಇದಕ್ಕಾಗಿ ಇದೆಲ್ಲದರ ಲೆಕ್ಕಾಚಾರ, ವಿತರಣೆ ಹೊಣೆ ಅಂಗನವಾಡಿ ಕಾರ್ಯಕರ್ತೆಯರ ಮೇಲೆ

ಬೆಳ್ತಂಗಡಿ: ಅಂಗನವಾಡಿಯಿಂದ ಪುಟಾಣಿಗಳಿಗೆ ಕೊಟ್ಟ ಮೊಟ್ಟೆಯೊಳಗೆ ಮರಿ! ಗುಣಮಟ್ಟ ಕಳೆದ ಆಹಾರದ ವಿರುದ್ಧ ಪೋಷಕರ ಆಕ್ರೋಶ Read More »

ಜೂ.25: ಬಂಟ್ವಾಳದ ನರಿಕೊಂಬಿನಲ್ಲಿ ಉಚಿತ ನೇತ್ರ ತಪಾಸಣೆ ಮತ್ತು ನೇತ್ರದಾನ ನೋಂದಣಿ ಶಿಬಿರ

ಸಮಗ್ರ ನ್ಯೂಸ್: ಜೆಸಿಐ ಜೋಡುಮಾರ್ಗ ನೇತ್ರಾವತಿ,ವಿಜಯಶ್ರೀ ಚಿಕಿತ್ಸಾಲಯ ಮೊಗರ್ನಾಡು,ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ, ಮಂಗಳೂರುನೇತ್ರ ಜ್ಯೋತಿ ಚಾರಿಟೇಬಲ್ ಟ್ರಸ್ಟ್ ಉಡುಪಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ ( ಅಂಧತ್ವ ವಿಭಾಗ) ಮಂಗಳೂರು,ಡಾ. ಪಿ.ದಯಾನಂದ ಪೈ ಮತ್ತು ಸತೀಶ್ ಪೈ ಚಾರಿಟೇಬಲ್ ಟ್ರಸ್ಟ್ (ರಿ) ಸೆಂಚುರಿ ಗ್ರೂಪ್ಸ್ ಬೆಂಗಳೂರು ಇದರ ಜಂಟಿ ಆಶ್ರಯದಲ್ಲಿಉಚಿತ ನೇತ್ರ ತಪಾಸಣಾ ಹಾಗೂ ಚಿಕಿತ್ಸಾ ಶಿಬಿರ ಮತ್ತು ನೇತ್ರದಾನ ನೋಂದಾವಣೆ ಕಾರ್ಯಕ್ರಮ ಜೂ.25ರಂದು ನರಿಕೊಂಬು ಮೊಗರ್ನಾಡು ಅನ್ನಪೂರ್ಣ ಸಭಾಭವನದಲ್ಲಿ

ಜೂ.25: ಬಂಟ್ವಾಳದ ನರಿಕೊಂಬಿನಲ್ಲಿ ಉಚಿತ ನೇತ್ರ ತಪಾಸಣೆ ಮತ್ತು ನೇತ್ರದಾನ ನೋಂದಣಿ ಶಿಬಿರ Read More »

ಅಪ್ರಾಪ್ತೆಯ ಅತ್ಯಾಚಾರ; ಆರೋಪಿ ಅಂದರ್

ಸಮಗ್ರ ನ್ಯೂಸ್: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರ ಎಸಗಿರುವ ಪ್ರಕರಣ ಸುಳ್ಯ ತಾಲೂಕಿನ ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಈಕೆ ಬೆಳ್ಳಾರೆಯ ಕೊಡಿಯಾಲ ಮೂಲದ ಬಾಲಕಿ ಎಂದು ಗುರುತಿಸಲಾಗಿದೆ. ಸುಬ್ರಹ್ಮಣ್ಯದ ಕಾಲೋಜೊಂದರಲ್ಲಿ ಪ್ರಥಮ ಪಿಯುಸಿ ಓದುತ್ತಿದ್ದ ಬಾಲಕಿಯನ್ನು ಪರಿಚಯದ ಯುವಕನೊಬ್ಬ ಪುಸಲಾಯಿಸಿ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದಾನೆ ಎಂದು ಬಾಲಕಿಯ ತಂದೆ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಸದ್ಯ ಯುವಕನ ವಿರುದ್ಧ ಫೋಕ್ಸೋ ಕಾಯಿದೆಯಡಿ ಕೇಸು ದಾಖಲಾಗಿದೆ. ಯುವತಿಯನ್ನು ಅತ್ಯಾಚಾರ

ಅಪ್ರಾಪ್ತೆಯ ಅತ್ಯಾಚಾರ; ಆರೋಪಿ ಅಂದರ್ Read More »