ಕರಾವಳಿ

ಸಾಹಿತಿ ಭೀಮರಾವ್ ವಾಷ್ಠರ್ ರಾಷ್ಟ್ರೀಯ ಅಹಿಂದ ಕಲಾವಿದರ ಒಕ್ಕೂಟದ ದ.ಕ. ಜಿಲ್ಲಾಧ್ಯಕ್ಷರಾಗಿ ಆಯ್ಕೆ

ಸಮಗ್ರ ನ್ಯೂಸ್: ಸುಳ್ಯದ ಕವಿ, ಸಾಹಿತಿ, ಜ್ಯೋತಿಷಿಯಾಗಿರುವ ಎಚ್. ಭೀಮರಾವ್ ವಾಷ್ಠರ್ ಕೋಡಿಹಾಳ ಅವರು ಬೆಂಗಳೂರಿನ ರಾಷ್ಟ್ರೀಯ ಅಹಿಂದ ಸಂಘಟನೆಯ ರಾಷ್ಟ್ರೀಯ ಅಹಿಂದ ಕಲಾವಿದರ ಒಕ್ಕೂಟದ ದ.ಕ. ಜಿಲ್ಲಾಧ್ಯಕ್ಷರಾಗಿ ಆಯ್ಕೆ ಆಗಿದ್ದಾರೆ. ಗಾಯಕ, ಚಿತ್ರ ನಿರ್ದೇಶಕ, ಜ್ಯೋತಿಷಿ ಮತ್ತು ಸಂಘಟಕ ಎಚ್. ಭೀಮರಾವ್ ವಾಷ್ಠರ್ ರವರು ಸುಳ್ಯದಲ್ಲಿ 22 ವರ್ಷಗಳಿಂದ ಖಾಯಂ ನೆಲೆಸಿ ಸಂಗೀತ, ಸಾಹಿತ್ಯ, ಜ್ಯೋತಿಷ್ಯ, ಚಲನಚಿತ್ರ, ಸಂಘಟನೆ, ಕಿರುಚಿತ್ರ ಮತ್ತು ಸಮಾಜಸೇವೆಗಳ ಮೂಲಕ ಜನಮಾನಸ ಗೆದ್ದಿದ್ದಾರೆ. ರಾಷ್ಟ್ರಪ್ರಶಸ್ತಿಗಳ ಜೊತೆ 25ಕ್ಕೂ ಹೆಚ್ಚು ರಾಜ್ಯ ಪ್ರಶಸ್ತಿ […]

ಸಾಹಿತಿ ಭೀಮರಾವ್ ವಾಷ್ಠರ್ ರಾಷ್ಟ್ರೀಯ ಅಹಿಂದ ಕಲಾವಿದರ ಒಕ್ಕೂಟದ ದ.ಕ. ಜಿಲ್ಲಾಧ್ಯಕ್ಷರಾಗಿ ಆಯ್ಕೆ Read More »

ಧರ್ಮಸ್ಥಳ: ನೇತ್ರಾವತಿ ನದಿಯಲ್ಲಿ ದಂಪತಿ ಶವ ಪತ್ತೆ

ಸಮಗ್ರ ನ್ಯೂಸ್: ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದ ನೇತ್ರಾವತಿ ನದಿಯಲ್ಲಿ ದಂಪತಿಯ ಮೃತದೇಹ ಪತ್ತೆಯಾದ ಘಟನೆ ರವಿವಾರ (ನ.03) ನಡೆದಿದೆ. ಮೃತ ದಂಪತಿಯನ್ನು ಚಿಂತಾಮಣಿ ತಾಲೂಕಿನ ಮದ್ದಿರೆಡ್ಡಿ (61), ಈಶ್ವರಮ್ಮ (52) ಎಂದು ಗುರುತಿಸಲಾಗಿದೆ. ಚಿಂತಾಮಣಿಯಿಂದ ಕಾಣೆಯಾಗಿದ್ದ ದಂಪತಿಯ ಮೃತದೇಹ ಇದಾಗಿದೆ ಎಂದು ತಿಳಿದು ಬಂದಿದೆ. ಧರ್ಮಸ್ಥಳ ಗ್ರಾಮದ ನೇತ್ರಾವತಿ ನದಿಯ ದೊಂಡೊಲೆ ಪವರ್ ಪ್ರಾಜೆಕ್ಟ್ ಬಳಿ ರವಿವಾರ ಮಧ್ಯಾಹ್ನ ಮೃತದೇಹಗಳು ಪತ್ತೆಯಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಅ.31 ರಂದು ದಂಪತಿ ಮನೆಯಿಂದ ನಾಪತ್ತೆಯಾಗಿದ್ದು, ಈ ಬಗ್ಗೆ ಅನುಮಾನಗೊಂಡ

ಧರ್ಮಸ್ಥಳ: ನೇತ್ರಾವತಿ ನದಿಯಲ್ಲಿ ದಂಪತಿ ಶವ ಪತ್ತೆ Read More »

ಕರಾವಳಿಯಲ್ಲಿ ಉದ್ಯೋಗ ಸೃಷ್ಟಿಗೆ ಪ್ರತ್ಯೇಕ ಪ್ರವಾಸೋದ್ಯಮ ನೀತಿ – ಡಿಸಿಎಂ ಡಿ.ಕೆ ಶಿವಕುಮಾರ್

ಸಮಗ್ರ ನ್ಯೂಸ್: ಕರಾವಳಿಯಲ್ಲಿ ಉದ್ಯೋಗ ಸೃಷ್ಟಿಗೆ ಪ್ರತ್ಯೇಕ ಪ್ರವಾಸೋದ್ಯಮ ನೀತಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭರವಸೆ ನೀಡಿದರು. ಶನಿವಾರ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕ ಅಶೋಕ್ ರೈ ನೇತೃತ್ವದಲ್ಲಿ ಪುತ್ತೂರಿನಲ್ಲಿ ಕೊಂಬೆಟ್ಟು ಕಾಲೇಜು ಮೈದಾನದಲ್ಲಿ ನಡೆದ ‘ಅಶೋಕ ಜನಮನ’ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡುತ್ತಿದ್ದರು. ಕರಾವಳಿಗೆ ಪ್ರತ್ಯೇಕ ನೀತಿ ಹಾಗೂ ಟೂರಿಸಂ ಪಾಲಿಸಿ ರೂಪಿಸುತ್ತೇವೆ. ಮನಸ್ಸಿನ ಅಶಾಂತಿ ಸರಿಸಿ ಯುವಕರಿಗೆ ಉದ್ಯೋಗ ಸೃಷ್ಟಿಸಬೇಕಿದೆ ಎಂದು ಅವರು ಹೇಳಿದರು. ನಾನು

ಕರಾವಳಿಯಲ್ಲಿ ಉದ್ಯೋಗ ಸೃಷ್ಟಿಗೆ ಪ್ರತ್ಯೇಕ ಪ್ರವಾಸೋದ್ಯಮ ನೀತಿ – ಡಿಸಿಎಂ ಡಿ.ಕೆ ಶಿವಕುಮಾರ್ Read More »

ನೀಲೇಶ್ವರ ಪಟಾಕಿ ಸ್ಪೋಟ ಪ್ರಕರಣ| ಮೂವರು ಅರೆಸ್ಟ್; ಗಾಯಾಳುಗಳು ಗಂಭೀರ

ಸಮಗ್ರ ನ್ಯೂಸ್: ಕಾಸರಗೋಡು ಜಿಲ್ಲೆಯ ನೀಲೇಶ್ವರದ ವೀರರ್‌ಕಾವ್ ದೈವಸ್ಥಾನದಲ್ಲಿ ಸಂಭವಿಸಿದ ಪಟಾಕಿ ಸ್ಫೋಟಕ್ಕೆ ಸಂಬಂಧಿಸಿ ದೈವಸ್ಥಾನ ಸಮಿತಿಯ ಮೂವರನ್ನು ಬಂಧಿಸಲಾಗಿದ್ದು, ಅವರಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಸಮಿತಿಯ ಅಧ್ಯಕ್ಷ ಪಡನ್ನಕ್ಕಾಡ್ ಚಂದ್ರಶೇಖರನ್, ಕಾರ್ಯದರ್ಶಿ ಮಂದಂಪುರಂ ನಿವಾಸಿ ಕೆ.ಟಿ. ಭರತನ್, ಸದಸ್ಯ ಕೊಟ್ರಚ್ಚಾಲ್ ನಿವಾಸಿ ಪಳ್ಳಿಕ್ಕರೆ ರತೀಶ್ ಬಂಧಿತರು. ಕೊಟ್ರಚ್ಚಾಲ್‌ನ ವಿಜಯನ್ ತಲೆಮರೆಸಿಕೊಂಡಿದ್ದಾರೆ. ಪ್ರಕರಣದಲ್ಲಿ ಸಮಿತಿಯ ಒಟ್ಟು 8 ಪದಾಧಿಕಾರಿಗಳನ್ನು ಆರೋಪಿಗಳೆಂದು ಪಟ್ಟಿ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಯಲ್ಲಿ 154 ಮಂದಿ ಗಾಯಗೊಂಡಿದ್ದರು. ಅವರನ್ನು ಮಂಗಳೂರಿನ ಎಜೆ,

ನೀಲೇಶ್ವರ ಪಟಾಕಿ ಸ್ಪೋಟ ಪ್ರಕರಣ| ಮೂವರು ಅರೆಸ್ಟ್; ಗಾಯಾಳುಗಳು ಗಂಭೀರ Read More »

ಕಡಬ: ಚಲಿಸುತ್ತಿದ್ದ ಸ್ಕೂಟರ್ ಮೇಲೆ ಬಿದ್ದ ಮರ| ಸವಾರ ದಾರುಣ ಸಾವು

ಸಮಗ್ರ ನ್ಯೂಸ್: ಚಲಿಸುತ್ತಿದ್ದ ಸ್ಕೂಟರ್‌ಗೆ ಮರ ಬಿದ್ದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಶನಿವಾರದಂದು ಪಂಜ ಕಡಬ ರಸ್ತೆಯ ಕಡಬ ಸಮೀಪದ ಪುಳಿಕುಕ್ಕು ಎಂಬಲ್ಲಿ ನಡೆದಿದೆ. ಎಡಮಂಗಲ ಗ್ರಾಮದ ದೇವಸ್ಯ ಸುಬ್ಬಣ್ಣ ಗೌಡ ಅವರ ಪುತ್ರ, ಎಡಮಂಗಲ ಸಿ. ಎ. ಬ್ಯಾಂಕ್ ನ ಪಿಗ್ಮಿ ಸಂಗ್ರಾಹಕ ಸೀತಾರಾಮ ಗೌಡ (58) ಸ್ಧಳದಲ್ಲೇ ಸಾವನ್ನಪ್ಪಿದ ಸವಾರ. ಮೃತ ಸೀತಾರಾಮ ಗೌಡ ಪತ್ನಿ, ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ. ಮನೆಯಲ್ಲಿ ದೀಪಾವಳಿ ಪ್ರಯುಕ್ತ ಹರಕೆ ಇದ್ದುದರಿಂದ ಕೋಳಿ ತರುವುದಕ್ಕಾಗಿ

ಕಡಬ: ಚಲಿಸುತ್ತಿದ್ದ ಸ್ಕೂಟರ್ ಮೇಲೆ ಬಿದ್ದ ಮರ| ಸವಾರ ದಾರುಣ ಸಾವು Read More »

ಮಂಗಳೂರು: ಪಿಲಿಕುಳ ನಿಸರ್ಗಧಾಮದಲ್ಲಿ ಅಗ್ನಿ ಅವಘಡ| ಹೊತ್ತಿ‌ ಉರಿದ ಟಿಕೆಟ್ ಕೌಂಟರ್, ಎಲೆಕ್ಟ್ರಿಕ್ ವಾಹನ

ಸಮಗ್ರ ನ್ಯೂಸ್: ಪಿಲಿಕುಳ ನಿಸರ್ಗ ಧಾಮದಲ್ಲಿ ಇಂದು ಅಗ್ನಿ ಅನಾಹುತ ಸಂಭವಿಸಿದೆ. ಮಂಗಳೂರು ನಗರದ ಹೊರವಲಯದ ಮೂಡುಶೆಡ್ಡೆ ಸಮೀಪದಲ್ಲಿರುವ ನಿಸರ್ಗಧಾಮದ ಟಿಕೆಟ್ ಕೌಂಟರ್ ಬಳಿ ಅಗ್ನಿ ಅವಘಡ ನಡೆದಿದ್ದು, ಟಿಕೆಟ್ ಕೌಂಟರ್ ಸೇರಿ ಎರಡು ಎಲೆಕ್ಟ್ರಿಕ್ ವಾಹನಗಳು ಸುಟ್ಟು ಹೋಗಿವೆ. ನಿಸರ್ಗಧಾಮದ ವರ್ಕ್ ಶಾಪ್ ನಲ್ಲಿ ಚಾರ್ಜ್ ಗೆ ಹಾಕಿದ್ದ ಒಂದು ಎಲೆಕ್ಟ್ರಿಕ್ ವಾಹನದಲ್ಲಿ ಸ್ಪಾರ್ಕ್ ನಿಂದಾಗಿ ಬೆಂಕಿ ಹೊತ್ತಿಕೊಂಡಿದೆ ಎಂದು ಹೇಳಲಾಗಿದ್ದು, ಎರಡು ವಾಹನಗಳು ಸಂಪೂರ್ಣವಾಗಿ ಉರಿದು ಹೋಗಿವೆ. ನಿಸರ್ಗಧಾಮದ ಆವರಣದಲ್ಲಿ ಪ್ರವಾಸಿಗರನ್ನು ಕರೆದೊಯ್ಯುವ ಹತ್ತಕ್ಕೂ

ಮಂಗಳೂರು: ಪಿಲಿಕುಳ ನಿಸರ್ಗಧಾಮದಲ್ಲಿ ಅಗ್ನಿ ಅವಘಡ| ಹೊತ್ತಿ‌ ಉರಿದ ಟಿಕೆಟ್ ಕೌಂಟರ್, ಎಲೆಕ್ಟ್ರಿಕ್ ವಾಹನ Read More »

ಕರಾವಳಿಯಲ್ಲಿ ಮತ್ತೊಂದು ‘ಲವ್ ಜಿಹಾದ್’ ವಾಸನೆ| ಪುತ್ತೂರು ಮಹಾಲಿಂಗೇಶ್ವರ ದೇವರಿಗೆ ಬರೆದ ಪತ್ರ ವೈರಲ್!!

ಸಮಗ್ರ ನ್ಯೂಸ್: ರಾಜ್ಯದ ಕರಾವಳಿ ಭಾಗದಲ್ಲಿ ಮತ್ತೊಂದು ಲವ್ ಜಿಹಾದ್ ಪ್ರಕರಣ ಬೆಳಕಿಗೆ ಬಂದಿದೆ. ತಮ್ಮ ಮಗಳ ಲವ್ ಜಿಹಾದ್‌ ಕಹಾನಿಯಿಂದ ನೊಂದ ಕುಟುಂಬ ದೇವರಿಗೆ ಪತ್ರ ಬರೆದು ತಮ್ಮ ನೋವನ್ನ ತೋಡಿಕೊಂಡಿದ್ದಾರೆ. ಸದ್ಯ ಈ ಪತ್ರ ಈಗ ವ್ಯಾಪಕ ಸದ್ದು ಮಾಡುತ್ತಿದೆ. ಈ ಪತ್ರದಲ್ಲಿ ಉಲ್ಲೇಖಿಸಿರುವಂತೆ, ಸಮೀರ್ ಎಂಬಾತನಿಂದಾಗಿ ನನ್ನ ಮಗಳ ಜೀವನ ಹಾಳಾಗಿದೆ, ಇವತ್ತು ನಾನು ನನ್ನ ಮಗಳು ಬೀದಿಯಲ್ಲಿ ಇದ್ದೇವೆ, ನಮ್ಮ ಜೀವನ‌ ಹಾಳು ಮಾಡಿದ ಸಮೀರ್ ನ ಜೀವನ ಕೂಡ ಹಾಳಾಗಬೇಕು,

ಕರಾವಳಿಯಲ್ಲಿ ಮತ್ತೊಂದು ‘ಲವ್ ಜಿಹಾದ್’ ವಾಸನೆ| ಪುತ್ತೂರು ಮಹಾಲಿಂಗೇಶ್ವರ ದೇವರಿಗೆ ಬರೆದ ಪತ್ರ ವೈರಲ್!! Read More »

ಪುತ್ತೂರು: ಕೋಳಿ ಅಂಕಕ್ಕೆ ಖಾಕಿ ರೈಡ್| ಅಂಕದ ಕೋಳಿಗಳು ಹಾಗೂ ಐವರು ಪೊಲೀಸ್ ವಶಕ್ಕೆ

ಸಮಗ್ರ ನ್ಯೂಸ್: ಗುಡ್ಡಗಾಡು ಪ್ರದೇಶದಲ್ಲಿ ರಾಜರೋಷವಾಗಿ ನಡೆಯುತ್ತಿದ್ದ ಕೋಳಿ ಅಂಕಕ್ಕೆ ಪುತ್ತೂರು ಗ್ರಾಮಾಂತರ ಪೊಲೀಸರು ದಾಳಿ ನಡೆಸಿದ್ದು ಅಂಕದ ಕೋಳಿಗಳೊಂದಿಗೆ ಜನರನ್ನು ವಶಕ್ಕೆ ಪಡೆದ ಘಟನೆ ಪುತ್ತೂರಿನಿಂದ ವರದಿಯಾಗಿದೆ. ಪುತ್ತೂರು ತಾಲೂಕಿನ ಒಳಮೊಗ್ರು ಗ್ರಾಮ ಬಳಿಯ ಗೇರುಬೀಜ ನೆಡುತೋಪು ಗುಡ್ಡದಲ್ಲಿ ಈ ಕೋಳಿ ಅಂಕ ರಾಜರೋಷವಾಗಿ ನಡೆಯುತ್ತಿತ್ತು ಎಂದು ಹೇಳಲಾಗಿದೆ. ಪೊಲೀಸರು ದಾಳಿ ಮಾಡಿ ಐವರನ್ನು ವಶಕ್ಕೆ ಪಡೆದಿರುವ ಘಟನೆ ಒಳಮೊಗ್ರು ಗ್ರಾಮದಿಂದ ವರದಿಯಾಗಿದೆ. ಒಳಮೊಗ್ರು ಗ್ರಾಮದ ಕುಟೀನೋಪಿನಡ್ಕ ಎಂಬಲ್ಲಿನ ಗೇರುಬೀಜ ನೆಡುತೋಪು ಗುಡ್ಡದಲ್ಲಿ ಕೋಳಿ ಅಂಕ

ಪುತ್ತೂರು: ಕೋಳಿ ಅಂಕಕ್ಕೆ ಖಾಕಿ ರೈಡ್| ಅಂಕದ ಕೋಳಿಗಳು ಹಾಗೂ ಐವರು ಪೊಲೀಸ್ ವಶಕ್ಕೆ Read More »

ಹವಾಮಾನ ವರದಿ| ದೀಪಾವಳಿಗೆ ಮತ್ತೆ ಅಬ್ಬರಿಸಲಿದ್ದಾನೆ ಮಳೆರಾಯ| ಕರಾವಳಿ, ದ. ಒಳನಾಡಿನಲ್ಲಿ ಭಾರೀ ಮಳೆ ಮುನ್ಸೂಚನೆ

ಸಮಗ್ರ ನ್ಯೂಸ್: ದೀಪಾವಳಿ ಹಬ್ಬದ ದಿನದಿಂದಲೇ ರಾಜ್ಯದಲ್ಲಿ ಮತ್ತೆ ಮಳೆ ಚುರುಕಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಅಕ್ಟೋಬರ್ 31 ಮತ್ತು ನವೆಂಬರ್ 1 ರಂದು ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಕೂಡ ನವೆಂಬರ್ 1ರಂದು ವ್ಯಾಪಕ ಮಳೆಯಾಗಲಿದ ಎಂದು ಹವಾಮಾನ ಇಲಾಖೆ ಹೇಳಿದೆ. ಅದುವರೆಗೂ ದಕ್ಷಿಣ ಒಳನಾಡಿನಲ್ಲಿ ವ್ಯಾಪಕ ಮಳೆಯ ಸಾಧ್ಯತೆ ಇಲ್ಲ ಎಂದು ತಿಳಿಸಿದೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ ಭಾರಿ ಮಳೆಯ ಮುನ್ಸೂಚನೆ

ಹವಾಮಾನ ವರದಿ| ದೀಪಾವಳಿಗೆ ಮತ್ತೆ ಅಬ್ಬರಿಸಲಿದ್ದಾನೆ ಮಳೆರಾಯ| ಕರಾವಳಿ, ದ. ಒಳನಾಡಿನಲ್ಲಿ ಭಾರೀ ಮಳೆ ಮುನ್ಸೂಚನೆ Read More »

ಕಾಸರಗೋಡು: ನೀಲೇಶ್ವರಂ ಜಾತ್ರೆಯಲ್ಲಿ ಪಟಾಕಿ ಸ್ಪೋಟ| 8 ಮಂದಿ ಗಂಭೀರ; ಹಲವರಿಗೆ ಗಾಯ

ಸಮಗ್ರ ನ್ಯೂಸ್: ಕೇರಳದ ಕಾಸರಗೋಡಿನ ನೀಲೇಶ್ವರಂ ಬಳಿ ಸೋಮವಾರ ತಡರಾತ್ರಿ ದೇವಸ್ಥಾನದ ಉತ್ಸವದ ವೇಳೆ ಪಟಾಕಿ ದುರಂತದಲ್ಲಿ ಎಂಟು ಮಂದಿ ಗಂಭೀರವಾಗಿ ಸೇರಿದಂತೆ 150 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ನೀಲೇಶ್ವರಂನ ಅಂಜೂಟ್ಟಂಬಳಂ ವೀರರ್ ಕಾವು ತೆಯ್ಯಂ ಕಟ್ಟೆ ಮಹೋತ್ಸವದ ವೇಳೆ ಪಟಾಕಿ ಸಂಗ್ರಹ ಪ್ರದೇಶದಲ್ಲಿ ಬೆಂಕಿ ಕಾಣಿಸಿಕೊಂಡು 150 ಮಂದಿಗೆ ಗಾಯವಾಗಿದ್ದು, 8 ಮಂದಿ ಗಂಭೀರವಾಗಿದ್ದಾರೆ ಎಂಬುದಾಗಿ ತಿಳಿದುಬಂದಿದೆ. ಮೂವಳಂಕುಳಿ ಚಾಮುಂಡಿ ತೆಯ್ಯಂನ ಕುಳಿಚು ತೊಟ್ಟಂ ಆಚರಣೆಯ ವೇಳೆ ಮಧ್ಯರಾತ್ರಿ 12 ಗಂಟೆ

ಕಾಸರಗೋಡು: ನೀಲೇಶ್ವರಂ ಜಾತ್ರೆಯಲ್ಲಿ ಪಟಾಕಿ ಸ್ಪೋಟ| 8 ಮಂದಿ ಗಂಭೀರ; ಹಲವರಿಗೆ ಗಾಯ Read More »