ಕರಾವಳಿ

ಹವಾಮಾನ ವರದಿ| ರಾಜ್ಯದ ಈ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ ಮುನ್ಸೂಚನೆ

ಸಮಗ್ರ ನ್ಯೂಸ್: ಮುಂಗಾರು ಕೊಂಚ ಸುಧಾರಣೆಗೊಂಡಿದ್ದು, ರಾಜ್ಯದ ಹಲವು ಕಡೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು, ಕರಾವಳಿಯ ಜಿಲ್ಲೆಗಳು ಹಾಗೂ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು, ತುಮಕೂರು, ಚಿತ್ರದುರ್ಗ, ಹಾಸನ, ಮಂಡ್ಯ ಜಿಲ್ಲೆಗಳಲ್ಲಿ ಧಾರಾಕಾರವಾಗಿ ಮಳೆ ಸುರಿಯುವ ಸಾಧ್ಯತೆ ಇದೆ. ಕರಾವಳಿ ಭಾಗದಲ್ಲಿ ಗಾಳಿಯ ವೇಗವು ಗಂಟೆಗೆ 40-45 ರಿಂದ 50 ಕಿಲೋ ಮೀಟರ್ ವೇಗದಲ್ಲಿ ಬೀಸುವ ಸಾಧ್ಯತೆ ಇದೆ.

ಹವಾಮಾನ ವರದಿ| ರಾಜ್ಯದ ಈ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ ಮುನ್ಸೂಚನೆ Read More »

ಸಂಪಾಜೆ: ಸ್ವಿಫ್ಟ್ ಕಾರು – ಕಂಟೈನರ್ ನಡುವೆ ಭೀಕರ ಅಪಘಾತ| ಮೂವರು ಗಂಭೀರ

ಸಮಗ್ರ ನ್ಯೂಸ್: ಸ್ವಿಫ್ಟ್ ಕಾರು ಹಾಗೂ ಕಂಟೈನರ್ ಲಾರಿ ನಡುವೆ ಮಾಣಿ – ಮೈಸೂರು ರಾ.ಹೆದ್ದಾರಿಯ ಸಂಪಾಜೆ ಸಮೀಪದ ದೇವರಕೊಲ್ಲಿ ಬಳಿ ಭೀಕರ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಮೂವರು ಗಂಭೀರ ಗಾಯಗೊಂಡಿದ್ದಾರೆ. ಕಾರಿನಲ್ಲಿ ಐದು ಮಂದಿ ಪ್ರಯಾಣಿಸುತ್ತಿದ್ದು, ಇವರಲ್ಲಿ ಮೂರು ಮಂದಿಗೆ ತೀವ್ರ ಗಾಯಗಳಾಗಿದ್ದು,ಗಾಯಾಳುಗಳನ್ನು ಸಂಪಾಜೆ ಪ್ರಾ.ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಿ ಸುಳ್ಯದ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯಲ್ಲಿ ಕಂಟೈನರ್ ಚಾಲಕ ಕೂಡ ಗಂಭೀರ ಗಾಯಗೊಂಡಿದ್ದಾನೆ ಎಂದು ಹೇಳಲಾಗಿದೆ. ಕಂಟೈನರ್ ಮಡಿಕೇರಿ ಕಡೆಯಿಂದ ಮಂಗಳೂರು ಕಡೆಗೆ ಬರುತ್ತಿತ್ತು. ಕಾರು

ಸಂಪಾಜೆ: ಸ್ವಿಫ್ಟ್ ಕಾರು – ಕಂಟೈನರ್ ನಡುವೆ ಭೀಕರ ಅಪಘಾತ| ಮೂವರು ಗಂಭೀರ Read More »

ಸಂಪಾಜೆ: ವಲಸೆ ಕಾರ್ಮಿಕರ ತಪಾಸಣೆ

ಸಮಗ್ರ ನ್ಯೂಸ್: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕೊಡಗು, ಜಿಲ್ಲಾ ಆಸ್ಪತ್ರೆ ಐಸಿಟಿಸಿ ವಿಭಾಗ, ಪ್ರಾಥಮಿಕ ಆರೋಗ್ಯ ಕೇಂದ್ರ ಸಂಪಾಜೆ, ಉದ್ಭವ್ ಸಂಸ್ಥೆ ಬೆಂಗಳೂರು, ಆಶೋದಯ ಸಮಿತಿ ಕೊಡಗು ಜಿಲ್ಲೆ ಇವರ ಸಂಯುಕ್ತಾಶ್ರಯದಲ್ಲಿ ಜೂ.21ರ ಬುಧವಾರ ವಲಸೆ ಕಾರ್ಮಿಕರ ತಪಾಸಣೆ ನಡೆಯಿತು. ಕೊಯಾನಾಡು ಎಸ್ಟೇಟ್ ನ ವಲಸೆ ಕಾರ್ಮಿಕರು ಮತ್ತು ಅಲ್ಲಿ ಕೆಲಸ ಮಾಡುವ ಸ್ಥಳೀಯ ಕಾರ್ಮಿಕರಿಗೆ, ICTC ವಿಭಾಗ ಮತ್ತು NCD ವಿಭಾಗ ಹಾಗೂ TB, ಲೇಪರ್ಸಿ ಹಾಗೂ ಇನ್ನಿತರ NHP ಕಾರ್ಯಕ್ರಮದ ಬಗ್ಗೆ

ಸಂಪಾಜೆ: ವಲಸೆ ಕಾರ್ಮಿಕರ ತಪಾಸಣೆ Read More »

ಸುಳ್ಯ:ಜು.19 ಪತ್ರಕರ್ತರ ಸಂಘದ ಬೆಳ್ಳಿ ಹಬ್ಬ | ಆಮಂತ್ರಣ ಪತ್ರಿಕೆ ಬಿಡುಗಡೆ ‌

ಸಮಗ್ರ ನ್ಯೂಸ್: ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ 25 ವರ್ಷ ಪೂರ್ಣಗೊಳಿಸಿದ ನೆನಪಿಗಾಗಿ ಜು.19 ರಂದು ನಡೆಯಲಿರುವ ಬೆಳ್ಳಿ ಹಬ್ಬ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ ‌ಸಮಾರಂಭ ಜೂ.21 ರಂದು ಸುಳ್ಯ ಪ್ರೆಸ್ ಕ್ಲಬ್ ನಲ್ಲಿ‌ ನಡೆಯಿತು. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿ ಶುಭಹಾರೈಸಿದರು. ಆ ಬಳಿಕ ಸಂಘದ ಸದಸ್ಯರಿಗೆ ಗುರುತಿನ ಚೀಟಿ ವಿತರಣೆ ನಡೆಯಿತು. ತಾಲೂಕು ಪತ್ರಕರ್ತ ಸಂಘದ ಅಧ್ಯಕ್ಷ ದಯಾನಂದ ಕೊರತ್ತೋಡಿ ಅಧ್ಯಕ್ಷತೆ

ಸುಳ್ಯ:ಜು.19 ಪತ್ರಕರ್ತರ ಸಂಘದ ಬೆಳ್ಳಿ ಹಬ್ಬ | ಆಮಂತ್ರಣ ಪತ್ರಿಕೆ ಬಿಡುಗಡೆ ‌ Read More »

ದೇವಾಲಯಗಳಲ್ಲಿ ಹಿರಿಯ ನಾಗರಿಕರು ಇನ್ಮುಂದೆ ಕ್ಯೂ ನಿಲ್ಲಂಗಿಲ್ಲ| ನೇರ ದರ್ಶನಕ್ಕೆ ಅವಕಾಶ ನೀಡಿದ ಮುಜುರಾಯಿ ಇಲಾಖೆ

ಸಮಗ್ರ ನ್ಯೂಸ್: ಕರ್ನಾಟಕದ ಹಿಂದೂ ಧಾರ್ಮಿಕ ದೇವಾಲಯಗಳಾದ ಎ ವರ್ಗ ಹಾಗೂ ಬಿ ವರ್ಗ ಸಂಸ್ಥೆಗಳಲ್ಲಿ 65 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರಿಗೆ ನೇರವಾಗಿ ದೇವರ ದರ್ಶನ ಸೌಲಭ್ಯವನ್ನು ಕಲ್ಪಿಸಿ ಸರ್ಕಾರ ಆದೇಶಿಸಿದೆ. ಹಿರಿಯ ನಾಗರೀಕರಿಗೆ ಸರದಿ ಸಾಲಿನಲ್ಲಿ ನಿಂತುಕೊಂಡು ದೇವರ ದರ್ಶನ ಪಡೆಯುವುದಕ್ಕೆ ತುಂಬಾ ತೊಂದರೆಯಾಗುತ್ತಿದೆ. ಹೀಗಾಗಿ ವಯಸ್ಸಿನ ಆಧಾರದ ಮೇಲೆ ಸರದಿ ಸಾಲಿನಲ್ಲಿ ನಿಲ್ಲದಂತೆ ನೇರವಾಗಿ ದೇವರ ದರ್ಶನಕ್ಕೆ ಅನುವು ಮಾಡಿಕೊಡಬೇಕೆಂದು ಅಖಿಲ ಕರ್ನಾಟಕ ಹಿಂದೂ ದೇವಾಲಯಗಳ ಅರ್ಚಕರ, ಆಗಮಿಕರ ಮತ್ತು ಉಪಾಧಿವಂತರ ಒಕ್ಕೂಟ(ರಿ)

ದೇವಾಲಯಗಳಲ್ಲಿ ಹಿರಿಯ ನಾಗರಿಕರು ಇನ್ಮುಂದೆ ಕ್ಯೂ ನಿಲ್ಲಂಗಿಲ್ಲ| ನೇರ ದರ್ಶನಕ್ಕೆ ಅವಕಾಶ ನೀಡಿದ ಮುಜುರಾಯಿ ಇಲಾಖೆ Read More »

ಕೆ.ಎಂ.ಎಫ್ ಅಧ್ಯಕ್ಷರಾಗಿ ಶಾಸಕ ಭೀಮಾನಾಯ್ಕ್ ಅವಿರೋಧ ಆಯ್ಕೆ

ಸಮಗ್ರ ನ್ಯೂಸ್: ಕರ್ನಾಟಕ ಹಾಲು ಒಕ್ಕೂಟ (ಕೆಎಂಎಫ್) ಅಧ್ಯಕ್ಷ ಸ್ಥಾನಕ್ಕೆ ಹಗರಿಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕ ಭೀಮಾನಾಯ್ಕ್‌ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕೆಎಂಎಫ್‌ ಅಧ್ಯಕ್ಷ ಚುನಾವಣೆಗೆ ಶಾಸಕ ಭೀಮಾನಾಯ್ಕ್‌ ಒಬ್ಬರೇ ನಾಮಪತ್ರವನ್ನು ಸಲ್ಲಿಕೆ ಮಾಡಿದ್ದರು. ಇವರ ವಿರೋಧವಾಗಿ ಯಾವುದೇ ನಾಮಪತ್ರ ಸಲ್ಲಿಕೆಯಾಗದ ಹಿನ್ನೆಲೆಯಲ್ಲಿ ಚುನಾವಣಾ ಅಧಿಕಾರಿ ನಾಮಪತ್ರ ಸಲ್ಲಿಕೆ ಮಾಡಿದ ಶಾಸಕ ಭೀಮಾನಾಯ್ಕ್‌ ಅವರನ್ನೇ ಅವಿರೋಧವಾಗಿ ಕೆಎಂಎಫ್‌ ಅಧ್ಯಕ್ಷರೆಂದು ಆಯ್ಕೆ ಮಾಡಿದ್ದಾರೆ. ನಾಮಪತ್ರ ಸಲ್ಲಿಕೆ ಅವಧಿ ಮುಗಿದರೂ ಭೀಮಾನಾಯ್ಕ್‌ಗೆ ವಿರೋಧವಾಗಿ ಯಾರೊಬ್ಬರೂ ನಾಮಪತ್ರ ಸಲ್ಲಿಕೆ ಮಾಡಿಲ್ಲ. ಹೀಗಾಗಿ, ಭೀಮಾನಾಯ್ಕ್‌

ಕೆ.ಎಂ.ಎಫ್ ಅಧ್ಯಕ್ಷರಾಗಿ ಶಾಸಕ ಭೀಮಾನಾಯ್ಕ್ ಅವಿರೋಧ ಆಯ್ಕೆ Read More »

ಬೆಳ್ಳಾರೆ: ಶ್ರೀ ಲಕ್ಷ್ಮೀ ಇಲೆಕ್ಟ್ರಿಕಲ್ಸ್ ಶುಭಾರಂಭಗೊಂಡಿದೆ

ಸಮಗ್ರ ನ್ಯೂಸ್: ಮಿಥುನ್ ಶುಂಠಿತ್ತಡ್ಕ ಅವರ ಮಾಲಕತ್ವದಲ್ಲಿ ಶ್ರೀ ಲಕ್ಷ್ಮೀ ಇಲೆಕ್ಟ್ರಿಕಲ್ಸ್ ಜೂ.21 ರಂದು ಬೆಳ್ಳಾರೆ ಮುಖ್ಯ ರಸ್ತೆಯ ಹಾಲಿನ ಡೈರಿ ಬಳಿ ಶುಭಾರಂಭಗೊಂಡಿದೆ. ಬೆಳ್ಳಾರೆ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅರ್ಚಕರಾದ ಉದಯಕುಮಾರ್ ಕೆ.ಟಿ. ಅವರ ನೇತೃತ್ವದಲ್ಲಿ ಗಣಹೋಮ ನಡೆಯಿತು. ಈ ಸಂದರ್ಭದಲ್ಲಿ ನಾರಾಯಣ ಗೌಡ ಶುಂಠಿತ್ತಡ್ಕ, ಶ್ರೀಮತಿ ಪದ್ಮಾವತಿ, ಚರಿತ್ ಕುಮಾರ್, ಶ್ರೀಮತಿ ಮಧುರಾ, ಸುರೇಶ್ ಶುಂಠಿತ್ತಡ್ಕ, ಶ್ರೀಮತಿ ಮೇಘಶ್ರೀ, ಸೂರಪ್ಪ ಗೌಡ ಜಬಳೆ, ವಿನೋದ್ ಕುಳ್ಳಂಪಾಡಿ, ದೇವಿಪ್ರಸಾದ್ ಶುಂಠಿತ್ತಡ್ಕ, ರಮೇಶ ಮಿತ್ತಮೂಲೆ, ಗಣೇಶ್

ಬೆಳ್ಳಾರೆ: ಶ್ರೀ ಲಕ್ಷ್ಮೀ ಇಲೆಕ್ಟ್ರಿಕಲ್ಸ್ ಶುಭಾರಂಭಗೊಂಡಿದೆ Read More »

ಅಪ್ರಾಪ್ತರಿಗೆ ವಾಹನ ಚಾಲನೆಗೆ ಅವಕಾಶ ನೀಡುವ ಪೋಷಕರಿಗೆ ಬಿಗ್ ಶಾಕ್ | 20 ಸಾವಿರ ರೂ. ದಂಡ ವಿಧಿಸಿದ ಕೋರ್ಟ್!

ಸಮಗ್ರ ನ್ಯೂಸ್: ಅಪ್ರಾಪ್ತ ಬಾಲಕರಿಗೆ ವಾಹನ ಚಾಲನೆ ಮಾಡುವ ನೀಡುವ ಪೋಷಕರಿಗೆ ಕೋರ್ಟ್ ಬಿಗ್ ಶಾಕ್ ನೀಡಿದ್ದು, ಬರೋಬ್ಬರಿ 20 ಸಾವಿರ ರೂ. ದಂಡ ವಿಧಿಸಿ ಕೋರ್ಟ್ ತೀರ್ಪು ನೀಡಿದೆ. ಅಪ್ರಾಪ್ತ ಬಾಲಕ ಬೈಕ್‌ ಚಾಲನೆ ಮಾಡಿದ ತಪ್ಪಿಗೆ ಪೋಷಕರಿಗೆ 20 ಸಾವಿರ ರೂ. ದಂಡ ವಿಧಿಸಿ ತೀರ್ಥಹಳ್ಳಿ ನ್ಯಾಯಾಲಯ ತೀರ್ಪು ನೀಡಿದೆ. ತೀರ್ಥಹಳ್ಳಿಯ ಕುಶಾವತಿ ಬಳಿ ಡಿವೈಎಸ್‌ಪಿ ಗಜಾನನ ವಾಮನ ಸುತರ ವಾಹನ ತಪಾಸಣೆ ‌ನಡೆಸುತ್ತಿದ್ದರು. ವಾಹನ ತಪಾಸಣೆ ವೇಳೆ ಹೆಲ್ಮೆಟ್ ಧರಿಸದೇ ಅಪ್ರಾಪ್ತ ಬೈಕ್

ಅಪ್ರಾಪ್ತರಿಗೆ ವಾಹನ ಚಾಲನೆಗೆ ಅವಕಾಶ ನೀಡುವ ಪೋಷಕರಿಗೆ ಬಿಗ್ ಶಾಕ್ | 20 ಸಾವಿರ ರೂ. ದಂಡ ವಿಧಿಸಿದ ಕೋರ್ಟ್! Read More »

ನಾಲ್ಕನೇ ದಿನವೂ ಗೃಹ ಯೋಜನೆಗೆ ಸರ್ವರ್ ಸಮಸ್ಯೆ| ಅರ್ಜಿ ಸಲ್ಲಿಸಲು ಗ್ರಾಹಕರ ಪರದಾಟ

ಸಮಗ್ರ ನ್ಯೂಸ್: ಪ್ರತಿಮನೆಗೆ 200 ಯುನಿಟ್ ಉಚಿತ ವಿದ್ಯುತ್ ನೀಡುವ ಗೃಹ ಜ್ಯೋತಿ ಯೋಜನೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಶುರುವಾಗಿದ್ದು, ನಾಲ್ಕನೇ ದಿವೂ ಸರ್ವರ್ ಸಮಸ್ಯೆ ಎದುರಾಗಿದೆ. ಗೃಹಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಸುವ ಪೋರ್ಟಲ್ ಬ್ಯೂಸಿ ಆದ ಕಾರಣ ಹಲವಡೆ ಸರ್ವರ್ ಸಮಸ್ಯೆಯಿಂದಾಗಿ ಅರ್ಜಿ ಸಲ್ಲಿಸಲು ಹೋದವರು ಪರದಾಡುವಂತಾಗಿದೆ. ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ ಗೃಹ ಜ್ಯೋತಿ ಯೋಜನೆಯಡಿ ಪ್ರತಿ ಗೃಹ ಬಳಕೆಯ ಗ್ರಾಹಕರಿಗೆ ಮಾಸಿಕ 200 ಯೂನಿಟ್ ವರೆಗೆ ಉಚಿತ ವಿದ್ಯುತ್ ನೀಡುವಂತ ಯೋಜನೆಗೆ ಅರ್ಜಿ ಸಲ್ಲಿಕೆ

ನಾಲ್ಕನೇ ದಿನವೂ ಗೃಹ ಯೋಜನೆಗೆ ಸರ್ವರ್ ಸಮಸ್ಯೆ| ಅರ್ಜಿ ಸಲ್ಲಿಸಲು ಗ್ರಾಹಕರ ಪರದಾಟ Read More »

ಎಸ್‌ಡಿಪಿಐ ಸಂಸ್ಥಾಪನ ದಿನಾಚರಣೆಯ ಅಂಗವಾಗಿ ಗೂನಡ್ಕಲ್ಲಿ ಧ್ವಜಾರೋಹಣ ಕಾರ್ಯಕ್ರಮ

ಸಮಗ್ರ ನ್ಯೂಸ್:ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾದ 15ನೇಯ ಸಂಸ್ಥಾಪನ ದಿನಾಚರಣೆಯ ಅಂಗವಾಗಿ ಗೂನಡ್ಕದಲ್ಲಿ ಧ್ವಜಾರೋಹಣ ಕಾರ್ಯಕ್ರಮ ಜೂ.21 ರಂದು ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್ಡಿಪಿಐ ಸುಳ್ಯ ರೂರಲ್ ಬ್ಲಾಕ್ ಉಪಾಧ್ಯಕ್ಷರಾದ ಸಲೀಂ ಗೂನಡ್ಕ ವಹಿಸಿದರು ಧ್ವಜಾರೋಹಣವನ್ನು ಎಸ್ಡಿಪಿಐ ಸಂಪಾಜೆ ಗ್ರಾಮ ಸಮಿತಿ ಕಾರ್ಯದರ್ಶಿ ಸಾಜೀದ್ ಐ ಜಿ ನೆರವೇರಿಸಿದರು. ಸಂದೇಶ ಭಾಷಣಗೈದ ಎಸ್ಡಿಪಿಐ ಸುಳ್ಯ ವಿಧಾನ ಸಭಾ ಕ್ಷೇತ್ರ ಸಮಿತಿ ಉಸ್ತುವಾರಿ ಅಬ್ದುಲ್ ಕಲಾಂ ಸುಳ್ಯ ಪಕ್ಷ 14ವರ್ಷದಲ್ಲಿ ನಡೆದು ಬಂದ ಹಾದಿಯನ್ನು, ಪಕ್ಷದ ಧ್ಯೇಯವನ್ನು

ಎಸ್‌ಡಿಪಿಐ ಸಂಸ್ಥಾಪನ ದಿನಾಚರಣೆಯ ಅಂಗವಾಗಿ ಗೂನಡ್ಕಲ್ಲಿ ಧ್ವಜಾರೋಹಣ ಕಾರ್ಯಕ್ರಮ Read More »