ಕರಾವಳಿ

ಶಕ್ತಿ ಯೋಜನೆ’ಗೆ ‘ಮಹಿಳಾ ಪ್ರಯಾಣಿಕ’ರ ಭರ್ಜರಿ ರೆಸ್ಪಾನ್ | ಜೂ.21ರಂದು 57.88 ಲಕ್ಷ ಸಂಚಾರ

ಸಮಗ್ರ ನ್ಯೂಸ್: ರಾಜ್ಯ ಸರ್ಕಾರ ಜಾರಿಗೊಳಿಸಿರುವಂತ ಶಕ್ತಿ ಯೋಜನೆಗೆ ಮಹಿಳೆಯರ ರೆಸ್ಪಾನ್ ಮುಂದುವರೆದಿದೆ. ನಿನ್ನೆ ಬರೋಬ್ಬರಿ 57.88 ಲಕ್ಷ ಮಂದಿ ಯೋಜನೆಯ ಅಡಿಯಲ್ಲಿ ಸಂಚರಿಸಿ, ಪ್ರಯೋಜನ ಪಡೆದಿದ್ದಾರೆ. ಈ ಕುರಿತಂತೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಮಾಹಿತಿ ಬಿಡುಗಡೆ ಮಾಡಿದ್ದು, ದಿನಾಂಕ 20-06-2023ರಂದು ಕೆ ಎಸ್ ಆರ್ ಟಿ ಸಿ ಬಸ್ಸುಗಳಲ್ಲಿ 17,46,756, ಬಿಎಂಟಿಸಿಯಲ್ಲಿ 17,89,423, ಎನ್ ಡಬ್ಲ್ಯೂ ಕೆ ಆರ್ ಟಿಸಿ ಬಸ್ಸುಗಳಲ್ಲಿ 14,47,223 ಹಾಗೂ ಕೆಕೆ ಆರ್ ಟಿಸಿಯಲ್ಲಿ 8,05,072 ಮಂದಿ ಸೇರಿದಂತೆ

ಶಕ್ತಿ ಯೋಜನೆ’ಗೆ ‘ಮಹಿಳಾ ಪ್ರಯಾಣಿಕ’ರ ಭರ್ಜರಿ ರೆಸ್ಪಾನ್ | ಜೂ.21ರಂದು 57.88 ಲಕ್ಷ ಸಂಚಾರ Read More »

ಮಡಿಕೇರಿ: ಜಿಲ್ಲಾಡಳಿತದ ವತಿಯಿಂದ ಅಂತರಾಷ್ಟ್ರೀಯ 9ನೇ ಯೋಗ ದಿನಾಚರಣೆ

ಸಮಗ್ರ ನ್ಯೂಸ್:ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆಯುಷ್ ಇಲಾಖೆ ವತಿಯಿಂದ 9 ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯು “ವಸುದೈವ ಕುಟುಂಬಕ್ಕಾಗಿ ಯೋಗ’ ‘ಹರ್ ಆಂಗನ್ ಯೋಗ” ಎಂಬ ಘೋಷ ವ್ಯಾಕ್ಯದೊಂದಿಗೆ ಇಂದು ಬೆಳಗ್ಗೆ ಮಡಿಕೇರಿಯ ಕೆಳಗಿನ ಗೌಡ ಸಮಾಜದಲ್ಲಿ ಶಿಸ್ತು ಬದ್ಧವಾಗಿ ಜರುಗಿತು. ಜಿಲ್ಲಾಧಿಕಾರಿ ಡಾ.ಬಿ.ಸಿ ಸತೀಶ್ ಕಾರ್ಯಕ್ರಮ ಉದ್ಘಾಟಿಸಿದರು. ನಗರಸಭೆ ಅಧ್ಯಕ್ಷರಾದ ಅನಿತಾ ಪೂವಯ್ಯ, ಜಿಲ್ಲಾಧಿಕಾರಿ. ಜಿ.ಪಂ.ಸಿಇಒ ಡಾ.ಎಸ್.ಆಕಾಶ್, ಜಿಲ್ಲಾ ಆಯುಷ್ ಅಧಿಕಾರಿ ಡಾ.ಸಿ.ರೇಣುಕಾದೇವಿ ಇತರರು ಪಾಲ್ಗೊಂಡಿದ್ದರು. ಜಿಲ್ಲಾಧಿಕಾರಿಗಳು ಹಾಗೂ ಜಿ. ಪಂ. ಕಾರ್ಯನಿರ್ವಹಣಾಧಿಕಾರಿಗಳು ಯೋಗಾಭ್ಯಾಸದಲ್ಲಿ ಪಾಲ್ಗೊಂಡಿದ್ದರು.

ಮಡಿಕೇರಿ: ಜಿಲ್ಲಾಡಳಿತದ ವತಿಯಿಂದ ಅಂತರಾಷ್ಟ್ರೀಯ 9ನೇ ಯೋಗ ದಿನಾಚರಣೆ Read More »

ಬೆಳ್ತಂಗಡಿ: ಬರ್ತ್ ಡೇ ದಿನವೇ ಅಪಘಾತಕ್ಕೆ ಯುವಕ ಬಲಿ| ದೇವಸ್ಥಾನಕ್ಕೆ ಹೋಗಿ ಬಂದರೂ ಪಾಶ ಹಾಕಿದ ಯಮ!!

ಸಮಗ್ರ ನ್ಯೂಸ್: ಕೆಎಸ್ಸಾರ್ಟಿಸಿ ಬಸ್ಸಿಗೆ ಬೈಕ್ ಢಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಬುಧವಾರ ಬೆಳಗ್ಗೆ ಗರ್ಡಾಡಿ ಗ್ರಾಮದ ನಂದಿಬೆಟ್ಟ ಸಮೀಪ ಸಂಭವಿಸಿದೆ. ಮೃತ ಯುವಕ ಓಡೀಲು ನಿವಾಸಿಯಾಗಿರುವ ದೀಕ್ಷಿತ್ ಎಂದು ಗುರುತಿಸಲಾಗಿದೆ. ಇಂದು ದೀಕ್ಷಿತ್ ನ ಹುಟ್ಟುಹಬ್ಬವಾಗಿದ್ದು ಈ ಹಿನ್ನಲೆಯಲ್ಲಿ ಬೆಳಿಗ್ಗೆ ವೇಣೂರಿನ ದೇವಸ್ಥಾನಕ್ಕೆ ಹೋಗಿ ಹಿಂತಿರುಗುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಅಪಘಾತದ ತೀವ್ರತೆಗೆ ಯುವಕ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.

ಬೆಳ್ತಂಗಡಿ: ಬರ್ತ್ ಡೇ ದಿನವೇ ಅಪಘಾತಕ್ಕೆ ಯುವಕ ಬಲಿ| ದೇವಸ್ಥಾನಕ್ಕೆ ಹೋಗಿ ಬಂದರೂ ಪಾಶ ಹಾಕಿದ ಯಮ!! Read More »

ಪುತ್ತೂರು:ಹೆರಿಗೆ ವೇಳೆ ತೀವ್ರ ರಕ್ತಸ್ರಾವ|ಆಶಾ ಕಾರ್ಯಕರ್ತೆ ಮೃತ್ಯು

ಸಮಗ್ರ ನ್ಯೂಸ್: ಹೆರಿಗೆ ವೇಳೆ ತೀವ್ರ ರಕ್ತಸ್ರಾವಗೊಂಡ ಹಿನ್ನೆಲೆ ಬೆಳ್ತಂಗಡಿಯ ಕರಾಯ ಮಹಿಳೆಯೊಬ್ಬರು ಮೃತಪಟ್ಟ ಘಟನೆ ನಡೆದಿದೆ. ಆಶಾ ಕಾರ್ಯಕರ್ತೆ ಭವ್ಯ (29) ಹೆರಿಗೆಗಾಗಿ ಪುತ್ತೂರಿನ ಆಸ್ಪತ್ರೆಯೊಂದಕ್ಕೆ ದಾಖಲಾಗಿದ್ದು, ಈ ವೇಳೆ ತೀವ್ರ ರಕ್ತಸ್ರಾವಕ್ಕೊಳಗಾಗಿದ್ದರು ತಕ್ಷಣ ಪುತ್ತೂರಿನ ಆಸ್ಪತ್ರೆಯಿಂದ ಮಂಗಳೂರಿನ ವೆನ್‌ಲಾಕ್ ಆಸ್ಪತ್ರೆಗೆ ಕರೆದೊಯ್ಯಲಾಗಿ ಚಿಕಿತ್ಸೆ ನೀಡಲಾಗಿದ್ದು, ಅಲ್ಲಿಯೂ ಚಿಕಿತ್ಸೆ ಫಲಕಾರಿಯಾಗದೆ ಜೂ. 21ರಂದು ಬೆಳಿಗ್ಗೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಭವ್ಯರವರದ್ದು 3ನೇ ಹೆರಿಗೆಯಾಗಿದ್ದು, ಹಸುಗೂಸು ಗಂಡು ಮಗು ಆರೋಗ್ಯವಾಗಿರುವುದಾಗಿ ತಿಳಿದು ಬಂದಿದೆ. ಮೃತರು ಪತಿ

ಪುತ್ತೂರು:ಹೆರಿಗೆ ವೇಳೆ ತೀವ್ರ ರಕ್ತಸ್ರಾವ|ಆಶಾ ಕಾರ್ಯಕರ್ತೆ ಮೃತ್ಯು Read More »

ಸುಳ್ಯದಲ್ಲಿ ಸೇವಾಭಾರತಿ ಹೆಲ್ಪ್ ಲೈನ್ ಆಂಬ್ಯುಲೆನ್ಸ್ ಲೋಕಾರ್ಪಣೆ

ಸಮಗ್ರ ನ್ಯೂಸ್: ಸೇವಾಭಾರತಿ ಹೆಲ್ಪ್ ಲೈನ್ ಟ್ರಸ್ಟ್ ಸುಳ್ಯ (ರಿ.) ಇದರ ನೂತನ ಆಂಬ್ಯುಲೆನ್ಸ್ ಲೋಕಾರ್ಪಣೆ ಕಾರ್ಯಕ್ರಮ ಇಂದು ಸುಳ್ಯದ ಕೇರ್ಪಳ ಶ್ರೀ ದುರ್ಗಾಪರಮೇಶ್ವರಿ ಕಲಾಮಂದಿರದಲ್ಲಿ ನಡೆಯಲಿದೆ. ಮಾಜಿ ಸಚಿವ ಎಸ್.ಅಂಗಾರ ಆಂಬ್ಯುಲೆನ್ಸ್ ಲೋಕಾರ್ಪಣೆ ಮಾಡಿ, ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿ, ಯಾವುದೇ ಸೇವೆ ಮಾಡುವುದು ಬದುಕಿನ ಪುಣ್ಯದ ಕಾರ್ಯ. ಇಂದು ಹಲವು ಎನ್.ಜಿ.ಒ.ಗಳು ಕೂಡ ಸೇವೆಯನ್ನು ಮಾಡುತ್ತದೆ. ಆದರೆ ಅವು ಅಪೇಕ್ಷೆಯನ್ನು ಇಟ್ಟುಕೊಂಡು ಸೇವೆ ಮಾಡುತ್ತದೆ. ಪ್ರತಿಫಲಾಪೇಕ್ಷೆ ಇಲ್ಲದ ಸೇವೆ ನಿಜವಾದ ಸೇವೆ ಎಂದರು.

ಸುಳ್ಯದಲ್ಲಿ ಸೇವಾಭಾರತಿ ಹೆಲ್ಪ್ ಲೈನ್ ಆಂಬ್ಯುಲೆನ್ಸ್ ಲೋಕಾರ್ಪಣೆ Read More »

ಸಿಎಂ ಪತ್ನಿ‌ ಪಾರ್ವತಿ ಅಸ್ವಸ್ಥ| ಮಣಿಪಾಲ ಆಸ್ಪತ್ರೆಗೆ ದಾಖಲು

ಸಮಗ್ರ ನ್ಯೂಸ್: ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪತ್ನಿ ಪಾರ್ವತಿ ಅವರು ಅನಾರೋಗ್ಯದಿಂದ ಬಳಲುತ್ತಿದ್ದು, ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕಳೆದ ಕೆಲ ದಿನಗಳಿಂದ ಪಾರ್ವತಿ ಅವರು ಜ್ವರದಿಂದ ಬಳಲುತ್ತಿದ್ದರು. ಹೀಗಾಗಿ ಅವರನ್ನು ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ಸಿಎಂ ಸಿದ್ದರಾಮಯ್ಯ ದೆಹಲಿ ಪ್ರವಾಸ ಕೈಗೊಂಡಿದ್ದಾರೆ. ಇಂದು ಬೆಳಗ್ಗೆ 9.50 ಕ್ಕೆ ದೆಹಲಿಗೆ ತೆರಳಬೇಕಿತ್ತು. ಆದರೆ ಪತ್ನಿ ಅನಾರೋಗ್ಯದ ಹಿನ್ನೆಲೆಯಲ್ಲಿ ದೆಹಲಿಗೆ ತೆರಳುವ ಮುನ್ನ ಮಣಿಪಾಲ್ ಆಸ್ಪತ್ರೆಗೆ ಭೇಟಿ ನೀಡಿ ಪತ್ನಿ ಆರೋಗ್ಯ ವಿಚಾರಿಸಲಿದ್ದಾರೆ. ಬಳಿಕ

ಸಿಎಂ ಪತ್ನಿ‌ ಪಾರ್ವತಿ ಅಸ್ವಸ್ಥ| ಮಣಿಪಾಲ ಆಸ್ಪತ್ರೆಗೆ ದಾಖಲು Read More »

ಅಕ್ಕಿಗಾಗಿ ಹಕ್ಕಿನ ಹೋರಾಟ| ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಬೃಹನ್ನಾಟಕ‌!! ವಿವೇಕಾನಂದ ಎಚ್.ಕೆ

ಸಮಗ್ರ ವಿಶೇಷ: ರೈತರು ಕಷ್ಟ ಪಟ್ಟು ಬೆಳೆದ – ಉಗ್ರಾಣದಲ್ಲಿ ಇರುವ ಅಕ್ಕಿಯನ್ನು ಸಾರ್ವಜನಿಕರ ಮತಗಳಿಂದ ಗೆದ್ದು, ಸಾರ್ವಜನಿಕರ ತೆರಿಗೆ ಹಣದಿಂದಲೇ ಬದುಕುತ್ತಿರುವ ಎರಡು ಸರ್ಕಾರಗಳಿಗೆ ಹಂಚಿಕೊಂಡು ತಿನ್ನಲು‌ ಸಾಧ್ಯವಾಗದೆ ಬೀದಿಯಲ್ಲಿ ಜಗಳವಾಡುವ ಮಟ್ಟಕ್ಕೆ ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆಗೆ ದುರ್ಗತಿ ಬಂತೇ ಅಥವಾ ತಂದರೇ? ಕರ್ನಾಟಕ ಸರ್ಕಾರ ಕಾಂಗ್ರೇಸ್ ಪಕ್ಷದ ಮತ್ತು ಸಿದ್ದರಾಮಯ್ಯನವರ ಸ್ವಂತ ಆಸ್ತಿಯಲ್ಲ ಹಾಗೆಯೇ ಕೇಂದ್ರ ಸರ್ಕಾರ ಬಿಜೆಪಿ ಮತ್ತು ನರೇಂದ್ರ ಮೋದಿಯವರ ಸ್ವಂತ ಆಸ್ತಿಯಲ್ಲ. ಒಂದು ಸ್ಪಷ್ಟ ಮತ್ತು ಅತ್ಯುತ್ತಮ ಸಂವಿಧಾನದ ಅಡಿಯಲ್ಲಿ

ಅಕ್ಕಿಗಾಗಿ ಹಕ್ಕಿನ ಹೋರಾಟ| ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಬೃಹನ್ನಾಟಕ‌!! ವಿವೇಕಾನಂದ ಎಚ್.ಕೆ Read More »

ಚುರುಕುಗೊಂಡ ಮುಂಗಾರು| ಒಂದು ವಾರ ಕರಾವಳಿ ಮತ್ತು ರಾಜ್ಯಾದ್ಯಂತ ಭಾರೀ ಮಳೆ ಸಂಭವ|

ಸಮಗ್ರ ನ್ಯೂಸ್: ಮುಂದಿನ ಒಂದು ವಾರ ಬೆಂಗಳೂರು ಹಾಗೂ ಕರಾವಳಿಯ ಬಹುತೇಕ ಜಿಲ್ಲೆಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ಇದ್ದು, ಇತರೆ ಜಿಲ್ಲೆಗಳ ಕೆಲವು ಕಡೆಗಳಲ್ಲಿ ವರುಣ ಅಬ್ಬರಿಸುವ ಸಾಧ್ಯತೆ ಇದೆ. ಬೆಂಗಳೂರು, ತುಮಕೂರು, ಕೋಲಾರ, ರಾಮನಗರ, ಮಂಡ್ಯ, ದಕ್ಷಿಣ ಜಿಲ್ಲೆಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕಳೆದ ಎರಡು ದಿನಗಳಲ್ಲಿ ನೆರೆಯ ತಮಿಳುನಾಡಿನ ಚೆನ್ನೈ ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ವರುಣ ಆರ್ಭಟಿಸುತ್ತಿದ್ದಾನೆ. ಭಾರಿ ಮಳೆಯ ಹಿನ್ನೆಲೆಯಲ್ಲಿ ಹಿನ್ನೆ ತಮಿಳುನಾಡಿನ ಹಲವೆಡೆ

ಚುರುಕುಗೊಂಡ ಮುಂಗಾರು| ಒಂದು ವಾರ ಕರಾವಳಿ ಮತ್ತು ರಾಜ್ಯಾದ್ಯಂತ ಭಾರೀ ಮಳೆ ಸಂಭವ| Read More »

ಸುಬ್ರಹ್ಮಣ್ಯ ಡಾ. ತ್ರಿಮೂರ್ತಿ ಅವರಿಗೆ ರಾಜ್ಯಮಟ್ಟದ ಕಾಯಕ ರತ್ನ ಪ್ರಶಸ್ತಿ

ಸಮಗ್ರ ನ್ಯೂಸ್: ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತು (ರಿ.) ದೊಡ್ಡಬಳ್ಳಾಪುರ, ಬೆಂಗಳೂರು ವತಿಯಿಂದ ನೀಡುವ ರಾಜ್ಯಮಟ್ಟದ ಕಾಯಕ ರತ್ನ ಪ್ರಶಸ್ತಿಗೆ ವೈದ್ಯಕೀಯ ಕ್ಷೇತ್ರದಲ್ಲಿ ಸಲ್ಲಿಸಿದ ಸೇವೆಗಾಗಿ ಸುಬ್ರಹ್ಮಣ್ಯ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ತ್ರಿಮೂರ್ತಿ ಅವರು ಆಯ್ಕೆಯಾಗಿದ್ದಾರೆ. ಜೂನ್ 25ರಂದು ದೊಡ್ಡಬಳ್ಳಾಪುರದಲ್ಲಿ ನಡೆಯುವ ಕಾಯಕ ರತ್ನ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಅಧ್ಯಕ್ಷ ಗೋಪಾಲಕೃಷ್ಣ ತಿಳಿಸಿದ್ದಾರೆ.

ಸುಬ್ರಹ್ಮಣ್ಯ ಡಾ. ತ್ರಿಮೂರ್ತಿ ಅವರಿಗೆ ರಾಜ್ಯಮಟ್ಟದ ಕಾಯಕ ರತ್ನ ಪ್ರಶಸ್ತಿ Read More »

ರಾಜ್ಯಾದ್ಯಂತ ಉತ್ತಮ ಮಳೆ; ಸಿಡಿಲಿಗೆ ಓರ್ವ ಬಲಿ| ಶಿವಮೊಗ್ಗದಲ್ಲಿ ತೇಲಿದ ವಾಹನಗಳು

ಸಮಗ್ರ ನ್ಯೂಸ್: ರಾಜ್ಯದ ಬೆಂಗಳೂರು, ಮಂಡ್ಯ, ದಾವಣಗೆರೆ, ಶಿವಮೊಗ್ಗ, ಚಿತ್ರದುರ್ಗ, ಕೊಡಗು, ಕೋಲಾರ ಸೇರಿದಂತೆ ವಿವಿಧೆಡೆ ಮಂಗಳವಾರ ಮಳೆಯಾಗಿದೆ. ಮಂಡ್ಯ ಜಿಲ್ಲೆಯ ಕೆ.ಆರ್. ಪೇಟೆ ತಾಲ್ಲೂಕಿನ ಬೀರುವಳ್ಳಿಯ ರೈತ ಮಂಜುನಾಥ್ ಮೃತಪಟ್ಟಿದ್ದು, ಮತ್ತೊಬ್ಬ ರೈತ ರಾಜು ಗಾಯಗೊಂಡಿದ್ದಾರೆ. ದಾವಣಗೆರೆ, ಶಿವಮೊಗ್ಗ ಹಾಗೂ ಚಿತ್ರದುರ್ಗ ಜಿಲ್ಲೆಗಳ ವಿವಿಧೆಡೆ ಮಂಗಳವಾರ ಉತ್ತಮ ಮಳೆ ಸುರಿದಿದ್ದು, ರೈತರ ಮೊಗದಲ್ಲಿ ಮಂದಹಾಸ ಮೂಡಿಸಿದೆ. ಶಿವಮೊಗ್ಗ ನಗರದಲ್ಲಿ ಮಧ್ಯಾಹ್ನದ ಬಳಿಕ ಗಂಟೆಗೂ ಹೆಚ್ಚು ಕಾಲ ಮಳೆ ಸುರಿಯಿತು. ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ಸೇರಿದಂತೆ ಕೆಲವೆಡೆ

ರಾಜ್ಯಾದ್ಯಂತ ಉತ್ತಮ ಮಳೆ; ಸಿಡಿಲಿಗೆ ಓರ್ವ ಬಲಿ| ಶಿವಮೊಗ್ಗದಲ್ಲಿ ತೇಲಿದ ವಾಹನಗಳು Read More »