ಕರಾವಳಿ

ದ.ಕ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಮುಲ್ಲೈ ಮುಹಿಲನ್ ನೇಮಕ

ಸಮಗ್ರ ನ್ಯೂಸ್: ದ.ಕ.ಜಿಲ್ಲಾಧಿಕಾರಿ ರವಿ ಕುಮಾರ್ ಅವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಶುಕ್ರವಾರ ಆದೇಶ ಹೊರಡಿಸಿ ನೂತನ ಜಿಲ್ಲಾಧಿಕಾರಿಯಾಗಿ ಸ್ಮಾರ್ಟ್ ಗವರ್ನೆನ್ಸ್ ಬೆಂಗಳೂರು ಇದರ ಕಾರ್ಯನಿರ್ವಾಹಕ ನಿರ್ದೇಶಕ ಮುಲೈ ಮುಹಿಲನ್ ಎಂ.ಪಿ. ನೇಮಕಗೊಂಡಿದ್ದಾರೆ. ಜಿಲ್ಲಾ ಪಂಚಾಯತ್ ಕಾರ್ಯನಿರ್ವಾಹಣಾಧಿಕಾರಿಯಾಗಿದ್ದ ಡಾ. ಕುಮಾರ ಅವರು ಮಂಡ್ಯ ಜಿಲ್ಲಾಧಿಕಾರಿಯಾಗಿ ನೇಮಕಗೊಳಿಸಲಾಗಿದೆ. ಮುಲ್ಲೈ ಮುಹಿಲನ್ ತಮಿಳುನಾಡು ಮೂಲದವರಾಗಿದ್ದು, ದಿಂಡಿಗಲ್ ಅಣ್ಣಾ ವಿಶ್ವವಿದ್ಯಾಲಯದ ಪಿಎಸ್‌ಎನ್‌ಎ ಕಾಲೇಜ್ ಆಫ್ ಇಂಜಿನಿಯರಿಂಗ್ ಮತ್ತು ಟೆಕ್ನಾಲಜಿನಲ್ಲಿ ಓದಿ ಕಂಪ್ಯೂಟರ್ ವಿಷಯದಲ್ಲಿ ಪದವಿ ಪಡೆದಿದ್ದಾರೆ. 1986 ರಲ್ಲಿ ಜನಿಸಿದ ಅವರು

ದ.ಕ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಮುಲ್ಲೈ ಮುಹಿಲನ್ ನೇಮಕ Read More »

ಸಂಪಾಜೆಯಲ್ಲಿ ಹೆಚ್ಚುತ್ತಿರುವ ಕಳ್ಳತನ ಪ್ರಕರಣ

ಸಮಗ್ರ ನ್ಯೂಸ್: ಸಂಪಾಜೆ ಗ್ರಾಮದಲ್ಲಿ ಇತ್ತಿಚೇಗೆ ಕಳ್ಳತನ ಪ್ರಕರಣ ಹೆಚ್ಚಾಗುತ್ತಿದ್ದು ಸಂಪಾಜೆಯ ಹೈವೆ ಹೋಟೆಲ್ ಬಳಿ ಸ್ಕೂಟರ್ ಕಳ್ಳತನವಾಗಿದೆ. ಕಲ್ಲುಗುಂಡಿ ಸಂಗಮ್ ಅಂಗಡಿ ಬಳಿ ಬೈಕ್ ಕಳ್ಳತನವಾಗಿದೆ. ಕಡೆಪಾಲದಲ್ಲಿ ಸೇತುವೆ ಬಳಿ ಕಾಮಗಾರಿ ನಡೆಯುತ್ತಿದ್ದು ಇಲ್ಲಿಂದ ಸುಮಾರ್ 4೦೦ ಲೀ ಡೀಸಲ್ ಕಳ್ಳತನವಾಗಿದೆ. ಪಂಚಾಯತ್ ಸೋಲಾರ್‌ನ ಬ್ಯಾಟರಿ ಕಳ್ಳತನ, ಗಂಗಾಧರ ನಿಡಿಂಜಿ ಯವರ ಅಂಗಡಿಯಿಂದ ಹಂಚು ಕಳ್ಳತನ ಹೀಗೆ ಹಲವಾರು ಕಳ್ಳತನ ನಡೆಯುತ್ತಿದ್ದು ಸಾರ್ವಜನಿಕ ವಲಯದಲ್ಲಿ ಜನರಿಗೆ ಭೀತಿ ಪ್ರಾರಂಭಗೊಂಡಿದೆ. ಈ ಭೀತಿಯನ್ನು ಹೋಗಲಾಡಿಸಲು ಪೋಲಿಸ್ ಇಲಾಖೆ

ಸಂಪಾಜೆಯಲ್ಲಿ ಹೆಚ್ಚುತ್ತಿರುವ ಕಳ್ಳತನ ಪ್ರಕರಣ Read More »

ಸುಳ್ಯ:ಪೊಲೀಸ್ ಠಾಣಾ ಉಪ ನಿರೀಕ್ಷಕರಾಗಿ ಈರಯ್ಯ ದೂಂತೂರು

ಸಮಗ್ರ ನ್ಯೂಸ್: ಸುಳ್ಯ ಪೊಲೀಸ್ ಠಾಣಾ ಉಪ ನಿರೀಕ್ಷಕರಾಗಿ ಈರಯ್ಯ ದೂಂತೂರು ಅವರನ್ನು ನೇಮಕ‌ ಮಾಡಿ ಸರಕಾರ ಆದೇಶ ಮಾಡಿದೆ. ಕಳೆದ ಎರಡು ವರ್ಷಗಳಿಂದ ದಿಲೀಪ್ ಸುಳ್ಯ ಎಸ್ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದು ಇದೀಗ 2014ನೇ ಬ್ಯಾಚ್‌ನ ಅಧಿಕಾರಿಯಾದ ಈರಯ್ಯ ದೂಂತೂರು ಅವರು ನೇಮಕ ಗೊಂಡಿದ್ದಾರೆ. ಇನ್ನೂ ಇವರು ಅವರು ಬಂಟ್ವಾಳ ಹಾಗೂ ವಿಟ್ಲದಲ್ಲಿ ಪ್ರೊಬೇಷನರಿ ಎಸ್‌ಐ ಆಗಿ ಬಳಿಕ ಬೆಳ್ಳಾರೆ ಠಾಣೆಯಲ್ಲಿ ಉಪನಿರೀಕ್ಷಕರಾಗಿದ್ದರು. ಬಳಿಕ ಉಪ್ಪಿನಂಗಡಿ, ಶಿರಸಿಯಲ್ಲಿ ಕರ್ತವ್ಯ ನಿರ್ವಹಿಸಿ ಈಗ ಕುಂದಾಪುರದಲ್ಲಿ ಎಸ್‌ಐ ಆಗಿ

ಸುಳ್ಯ:ಪೊಲೀಸ್ ಠಾಣಾ ಉಪ ನಿರೀಕ್ಷಕರಾಗಿ ಈರಯ್ಯ ದೂಂತೂರು Read More »

ಗುಜರಾತ್ ಕರಾವಳಿಗೆ ಅಪ್ಪಳಿಸಿದ ಬಿಪರ್ ಜಾಯ್| ಬಿರುಗಾಳಿ ; ರಕ್ಕಸ ಅಲೆಗಳಿಗೆ ಕರಾವಳಿ ತತ್ತರ

ಸಮಗ್ರ ನ್ಯೂಸ್: ಬಿಪರ್​ಜಾಯ್ ಚಂಡಮಾರುತ ಗುರುವಾರ ರಾತ್ರಿ ಗುಜರಾತ್​ನ ಸೌರಾಷ್ಟ್ರ ಮತ್ತು ಕಛ್ ಕರಾವಳಿಗೆ ಅಪ್ಪಳಿಸಿದೆ. 125 ಕಿಮೀ ವೇಗದಲ್ಲಿ ಗಾಳಿ ಬೀಸುತ್ತಿದೆ. ಈ ಪ್ರದೇಶದಲ್ಲಿ ಭಾರಿ ಪ್ರಮಾಣದಲ್ಲಿ ಮಳೆಯಾಗುತ್ತಿದ್ದು, ಹಲವೆಡೆ ಅನಾಹುತಗಳು ಸಂಭವಿಸಿವೆ. ಕಛ್, ದೇವಭೂಮಿ ದ್ವಾರಕಾ, ಪೋರಬಂದರ್, ಜಾಮ್ಗರ ಮತ್ತು ಮೊರ್ಬಿ ಜಿಲ್ಲೆಗಳಲ್ಲಿ ಭಾರಿ ಪ್ರಮಾಣದಲ್ಲಿ ಗಾಳಿ, ಮಳೆ ಆಗುತ್ತಿದೆ. ತಗ್ಗು ಪ್ರದೇಶಗಳು ಮುಳುಗಡೆ ಆಗಬಹುದು ಎಂದು ಎಚ್ಚರಿಕೆ ನೀಡಲಾಗಿದೆ. ಅಲ್ಲಿನ ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ ಮಾಡಲಾಗಿದೆ. ಸಮುದ್ರದಲ್ಲಿ 2-3 ಮೀಟರ್ ಎತ್ತರದ

ಗುಜರಾತ್ ಕರಾವಳಿಗೆ ಅಪ್ಪಳಿಸಿದ ಬಿಪರ್ ಜಾಯ್| ಬಿರುಗಾಳಿ ; ರಕ್ಕಸ ಅಲೆಗಳಿಗೆ ಕರಾವಳಿ ತತ್ತರ Read More »

ಹವಾಮಾನ ವರದಿ| ರಾಜ್ಯದಲ್ಲಿ ಇಂದು ಸಾಧಾರಣ ಮಳೆ ನಿರೀಕ್ಷೆ

ಸಮಗ್ರ ನ್ಯೂಸ್: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮಳೆ ಅಬ್ಬರ ಕಡಿಮೆಯಾಗಿದ್ದು, ಶುಕ್ರವಾರದ ಇಂದು ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂಬುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಗುರುವಾರ ಉತ್ತರ ಕನ್ನಡ ಜಿಲ್ಲೆಯ ಕುಮಟಾ, ಕೊಡಗು ಜಿಲ್ಲೆಯ ಮಡಿಕೇರಿ, ಭಾಗಮಂಡಲದಲ್ಲಿ ತಲಾ 2 ಸೆಂಟಿ ಮೀಟರ್ ಮಳೆಯಾಗಿದೆ ಎಂದು ತಿಳಿಸಿದೆ. ಜೂನ್.16ರ ಇಂದು ಕರಾವಳಿಯ ಎಲ್ಲಾ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಒಳನಾಡಿನ ಕೆಲವು ಭಾಗಗಳಲ್ಲಿಯೂ ಮಳೆಯಾಗಲಿದೆ ಎಂಬುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಕೆಲವು

ಹವಾಮಾನ ವರದಿ| ರಾಜ್ಯದಲ್ಲಿ ಇಂದು ಸಾಧಾರಣ ಮಳೆ ನಿರೀಕ್ಷೆ Read More »

ಸೌಜನ್ಯ ಕೊಲೆ ಪ್ರಕರಣ| ಇಂದು(ಜೂ.16) ಸಿಬಿಐ ವಿಶೇಷ ನ್ಯಾಯಾಲಯದಿಂದ ತೀರ್ಪು

ಸಮಗ್ರ ನ್ಯೂಸ್: ಧರ್ಮಸ್ಥಳ ಗ್ರಾಮದ ಪಾಂಗಾಳ ನಿವಾಸಿ ಚಂದಪ್ಪ ಗೌಡ ಮತ್ತು ಕುಸುಮಾವತಿ ದಂಪತಿ ಪುತ್ರಿ ಸೌಜನ್ಯ ಕೊಲೆ ಪ್ರಕರಣದ ತೀರ್ಪನ್ನು ಸಿಬಿಐ ವಿಶೇಷ ನ್ಯಾಯಾಲಯ ಜೂನ್‌ 16ರಂದು ಪ್ರಕಟಿಸಲಿದೆ. ಉಜಿರೆ ಕಾಲೇಜು ವಿದ್ಯಾರ್ಥಿನಿಯಾಗಿದ್ದ ಸೌಜನ್ಯಾ ಅವರು 2012ರ ಅಕ್ಟೋಬರ್‌ 9ರಂದು ಸಂಜೆ ಕಾಲೇಜಿನಿಂದ ಮನೆಗೆ ಹೋಗುವಾಗ ನಾಪತ್ತೆಯಾಗಿದ್ದರು. ಮರುದಿನ ರಾತ್ರಿ ಧರ್ಮಸ್ಥಳದ ಮಣ್ಣಸಂಕ ಬಳಿ ವಿದ್ಯಾರ್ಥಿನಿಯ ಶವ ಪತ್ತೆಯಾಗಿತ್ತು. ಬಳಿಕ ಬೆಳ್ತಂಗಡಿಯ ಪೊಲೀಸ್‌ ಠಾಣೆಯಲ್ಲಿ ಅತ್ಯಾಚಾರ ಮತ್ತು ಕೊಲೆ ಪ್ರಕರಣ ದಾಖಲಾಗಿತ್ತು.

ಸೌಜನ್ಯ ಕೊಲೆ ಪ್ರಕರಣ| ಇಂದು(ಜೂ.16) ಸಿಬಿಐ ವಿಶೇಷ ನ್ಯಾಯಾಲಯದಿಂದ ತೀರ್ಪು Read More »

ಕರ್ನಾಟಕದಲ್ಲಿ ಮತಾಂತರ ನಿಷೇಧ ಕಾಯ್ದೆ ರದ್ದು| ರಾಜ್ಯ ಸರ್ಕಾರದಿಂದ ಮಹತ್ವದ ನಿರ್ಧಾರ

ಸಮಗ್ರ ನ್ಯೂಸ್: ರಾಜ್ಯ ಸರ್ಕಾರ ಮತ್ತೊಂದು ಮಹತ್ವದ ನಿರ್ಧಾರ ತೆಗೆದುಕೊಂಡಿದ್ದು, ಹಿಂದಿನ ಬಿಜೆಪಿ ಸರ್ಕಾರ ಪರಿಚಯಿಸಿದ ಮತಾಂತರ ವಿರೋಧಿ ಕಾನೂನನ್ನು ರದ್ದುಗೊಳಿಸಲು ರಾಜ್ಯ ಸಚಿವ ಸಂಪುಟ ನಿರ್ಧರಿಸಿದೆ. ಇನ್ನು ಪಠ್ಯ ಪರಿಷ್ಕರಣೆಯ ಅಂತಿಮ ವರದಿ ಸಿದ್ಧವಾಗಿದ್ದು, ಆರ್‌ಎಸ್‌ಎಸ್ ಸಂಸ್ಥಾಪಕ ಕೆ.ಬಿ.ಹೆಡ್ಗೆವಾರ್ ಮತ್ತು ಇತರರ ಶಾಲಾ ಪಠ್ಯಪುಸ್ತಕ ಪಾಠಗಳನ್ನ ತೆಗೆದುಹಾಕಲು ಕ್ಯಾಬಿನೆಟ್ ನಿರ್ಧರಿಸಿದೆ. ಇನ್ನೊಂದು ಮಹತ್ವದ ನಿರ್ಧಾರ ಎನ್ನುವಂತೆ, ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಶಾಲೆಗಳು ಮತ್ತು ಕಾಲೇಜುಗಳಲ್ಲಿ ಸಂವಿಧಾನದ ಪೀಠಿಕೆಯನ್ನು ಓದುವುದನ್ನು ಕಡ್ಡಾಯಗೊಳಿಸಲು ಸರ್ಕಾರ ನಿರ್ಧರಿಸಿದೆ.

ಕರ್ನಾಟಕದಲ್ಲಿ ಮತಾಂತರ ನಿಷೇಧ ಕಾಯ್ದೆ ರದ್ದು| ರಾಜ್ಯ ಸರ್ಕಾರದಿಂದ ಮಹತ್ವದ ನಿರ್ಧಾರ Read More »

‘ಗೃಹಲಕ್ಷ್ಮಿ’ ಯೋಜನೆಗೆ ಅರ್ಜಿ ಸಲ್ಲಿಕೆ ಹೇಗೆ? ಯಾವಾಗಿಂದ ಅರ್ಜಿ ಸ್ವೀಕಾರ| ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ನೀಡಿದ ಮಾಹಿತಿ ಹೀಗಿದೆ

ಸಮಗ್ರ ನ್ಯೂಸ್: ರಾಜ್ಯ ವಿಧಾನ ಸಭೆ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಕಾಂಗ್ರೆಸ್ ಘೋಷಿಸಿದ್ದ ಐದು ಗ್ಯಾರಂಟಿಗಳ ಪೈಕಿ ಒಂದಾಗಿರುವ ‘ಗೃಹ ಲಕ್ಷ್ಮಿ’ ಯೋಜನೆಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಜೂ.16 ಶುಕ್ರವಾರದಿಂದ ಆರಂಭಿಸುವುದಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ. ಈ ಕುರಿತು ಮಾಹಿತಿ ನೀಡಿದ ಅವರು, ‘ಗೃಹ ಲಕ್ಷ್ಮಿ’ ಯೋಜನೆಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಜೂ.16 ಶುಕ್ರವಾರದಿಂದ ಆರಂಭಿಸಲಾಗುವುದು. ಅರ್ಜಿ ಸಲ್ಲಿಸಲು ಯಾವುದೇ ಕೊನೆಯ ದಿನಾಂಕ ಇರುವುದಿಲ್ಲ. ಅರ್ಜಿ ಸಲ್ಲಿಸಲು ಪ್ರಕ್ರಿಯೆ

‘ಗೃಹಲಕ್ಷ್ಮಿ’ ಯೋಜನೆಗೆ ಅರ್ಜಿ ಸಲ್ಲಿಕೆ ಹೇಗೆ? ಯಾವಾಗಿಂದ ಅರ್ಜಿ ಸ್ವೀಕಾರ| ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ನೀಡಿದ ಮಾಹಿತಿ ಹೀಗಿದೆ Read More »

ಪೊಲೀಸರ ಮಹತ್ವದ ಕ್ರಮ| ಇನ್ಮುಂದೆ ವಾಟ್ಸಪ್ ಮೂಲಕವೂ ದೂರು ನೀಡಬಹುದು!

ಸಮಗ್ರ ನ್ಯೂಸ್:ಸಾರ್ವಜನಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಬೆಂಗಳೂರು ಪೊಲೀಸರು ಮತ್ತೊಂದು ಮಹತ್ವದ ಕ್ರಮಕ್ಕೆ ಮುಂದಾಗಿದ್ದು, ಇನ್ಮುಂದೆ ವಾಟ್ಸಪ್ ಮೂಲಕವೂ ದೂರು ಪಡೆಯಲು ಮುಂದಾಗಿದ್ದಾರೆ. ಈ ಬಗ್ಗೆ ಟ್ವೀಟರ್ ನಲ್ಲಿ ಮಾಹಿತಿ ನೀಡಿರುವ ಬೆಂಗಳೂರು ಪೊಲೀಸ್ ಕಮಿಷನರ್ ಬಿ.ದಯಾನಂದ್ ಅವರು, ದಯಾನಂದ್, ‘ನಮ್ಮ 112 ಉನ್ನತೀಕರಿಸಲು ಮೊದಲ ಹೆಜ್ಜೆ ಇರಿಸಲಾಗಿದೆ. ನಾಗರಿಕರು ತುರ್ತು ಸಂದರ್ಭದಲ್ಲಿ ಸಹಾಯಕ್ಕೆ ಹಾಗೂ ಇತರೆ ಯಾವುದೇ ರೀತಿಯ ದೂರುಗಳು ಇದ್ದರೆ ಇನ್ನು ಮುಂದೆ 9480801000 ವಾಟ್ಸ್‌ಆಯಪ್ ನಂಬರ್‌ಗೆ ಕಳುಹಿಸಬಹುದು ಎಂದು ಹೇಳಿದ್ದಾರೆ. ನಮ್ಮ 112 ನಿಯಂತ್ರಣ

ಪೊಲೀಸರ ಮಹತ್ವದ ಕ್ರಮ| ಇನ್ಮುಂದೆ ವಾಟ್ಸಪ್ ಮೂಲಕವೂ ದೂರು ನೀಡಬಹುದು! Read More »

ಭಾರತದಲ್ಲಿ ಫೇಸ್‌ಬುಕ್ ಬಂದ್‌ ಮಾಡ್ತೀವಿ|ಸೋಷಿಯಲ್‌ ಮೀಡಿಯಾ ದೈತ್ಯನಿಗೆ ಕರ್ನಾಟಕ ಹೈಕೋರ್ಟ್ ಎಚ್ಚರಿಕೆ

ಸಮಗ್ರ ನ್ಯೂಸ್: ಸೌದಿ ಅರೇಬಿಯಾದಲ್ಲಿ ಜೈಲಿನಲ್ಲಿರುವ ಭಾರತೀಯ ಪ್ರಜೆಯೊಬ್ಬರ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ರಾಜ್ಯ ಪೊಲೀಸರೊಂದಿಗೆ ಅಸಹಕಾರ ತೋರಿದ ಹಿನ್ನೆಲೆಯಲ್ಲಿ ಭಾರತದಲ್ಲಿ ಸಾಮಾಜಿಕ ಮಾಧ್ಯಮದ ದೈತ್ಯ ಚಟುವಟಿಕೆಗಳನ್ನು ಮುಚ್ಚುವ ಆದೇಶವನ್ನು ಹೊರಡಿಸುವ ಬಗ್ಗೆ ಪರಿಗಣಿಸುವುದಾಗಿ ಕರ್ನಾಟಕ ಹೈಕೋರ್ಟ್ ಬುಧವಾರ ಎಚ್ಚರಿಕೆ ನೀಡಿದೆ. ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಸಮೀಪದ ಬಿಕರ್ನಕಟ್ಟೆ ನಿವಾಸಿ ಕವಿತಾ ಅವರು ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆಗೆ ಕೈಗೆತ್ತಿಕೊಂಡ ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ಪೀಠ ಈ ಎಚ್ಚರಿಕೆ ನೀಡಿದೆ. ‘ಅಗತ್ಯ ಮಾಹಿತಿಯೊಂದಿಗೆ ಸಂಪೂರ್ಣ ವರದಿಯನ್ನು

ಭಾರತದಲ್ಲಿ ಫೇಸ್‌ಬುಕ್ ಬಂದ್‌ ಮಾಡ್ತೀವಿ|ಸೋಷಿಯಲ್‌ ಮೀಡಿಯಾ ದೈತ್ಯನಿಗೆ ಕರ್ನಾಟಕ ಹೈಕೋರ್ಟ್ ಎಚ್ಚರಿಕೆ Read More »