ಕರಾವಳಿ

ಎನ್ಎಸ್ ಯುಐ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸವಾದ್ ಸುಳ್ಯ ನೇಮಕ

ಸಮಗ್ರ ನ್ಯೂಸ್: ಎನ್‌ಎಸ್‌ಯುಐ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸವಾದ್ ಸುಳ್ಯ ಅವರನ್ನು ನೇಮಕಗೊಳಿಸಲಾಗಿದೆ. ಸುಳ್ಯದ ಗಾಂಧಿನಗರದ ಸವಾದ್ ಶಾಲಾ ದಿನಗಳಲ್ಲೇ ಕಾಂಗ್ರೆಸ್ ಬಾಲ ಸೇವಾದಳದಲ್ಲಿ ಸಕ್ರಿಯರಾಗಿದ್ದವರು.ಸುಳ್ಯದ ಕೆವಿಜಿ ನೆಹರೂ ಮೆಮೋರಿಯಲ್ ಕಾಲೇಜ್‌ನಲ್ಲಿ ಪಿಯುಸಿ ಓದುತ್ತಿರುವಾಗಲೇ ಎನ್‌ಎಸ್‌ಯುಐ ವಿದ್ಯಾರ್ಥಿ ಘಟಕಧ ಅಧ್ಯಕ್ಷರಾಗಿ, ಸುಳ್ಯ ನಗರ ಘಟಕದ ಅಧ್ಯಕ್ಷರಾಗಿ, ತಾಲೂಕು ಪ್ರಧಾನ ಕಾರ್ಯದರ್ಶಿಯಾಗಿ, ಸರ್ವ ಕಾಲೇಜು ಸಂಘದ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿದ್ದರು. ರಾಜ್ಯ ಕಾರ್ಯದರ್ಶಿಯಾಗಿ, ದ.ಕ.ಜಿಲ್ಲಾ ಸಮಿತಿಯ ಸಂಚಾಲಕರಾಗಿ, ಎನ್‌ಎಸ್‌ಯುಐ ದ.ಕ. ಜಿಲ್ಲಾ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ, ದ.ಕ. ಜಿಲ್ಲಾಧ್ಯಕ್ಷ ರಾಗಿಯೂ

ಎನ್ಎಸ್ ಯುಐ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸವಾದ್ ಸುಳ್ಯ ನೇಮಕ Read More »

ಇರಲಾರದೆ ಇರುವೆ ಬಿಟ್ಕೊಂಡ ಸುಳ್ಯ ಕಾಂಗ್ರೆಸ್| ಪಕ್ಷ ವಿರೋಧಿ ಚಟುವಟಿಕೆ ಆರೋಪಿಸಿ 17 ಮಂದಿ ಅಮಾನತು

ಸಮಗ್ರ ನ್ಯೂಸ್: 2023ರ ವಿಧಾನಸಭಾ ಚುನಾವಣೆಯ ಸಂದರ್ಭ ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿಸಿದ್ದಾರೆಂಬ ಕಾರಣಕ್ಕೆ ಕೆಪಿಸಿಸಿ ಸಂಯೋಜಕ ನಂದಕುಮಾರ್ ಮಡಿಕೇರಿ, ಕೆಪಿಸಿಸಿ ಮುಖಂಡ ಎಂ. ವೆಂಕಪ್ಪ ಗೌಡ, ಕಡಬ ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಬಾಲಕೃಷ್ಣ ಬಳ್ಳೇರಿ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವಂತೆ ಸುಳ್ಯ ಬ್ಲಾಕ್ ಕಾಂಗ್ರೆಸ್ ಶಿಫಾರಸ್ಸು ಮಾಡಿದೆ. ಅಲ್ಲದೇ ಸುಳ್ಯ ಮತ್ತು ಕಡಬ ಸೇರಿ ಸುಳ್ಯ ವಿಧಾನ ಸಭಾ ಕ್ಷೇತ್ರದ 17 ಮಂದಿ ಕಾಂಗ್ರೆಸ್ ಮುಖಂಡರನ್ನು ಅಮಾನತುಗೊಳಿಸಿ ಸುಳ್ಯ ಬ್ಲಾಕ್ ಕಾಂಗ್ರೆಸ್ ಆದೇಶ ಮಾಡಿದೆ.

ಇರಲಾರದೆ ಇರುವೆ ಬಿಟ್ಕೊಂಡ ಸುಳ್ಯ ಕಾಂಗ್ರೆಸ್| ಪಕ್ಷ ವಿರೋಧಿ ಚಟುವಟಿಕೆ ಆರೋಪಿಸಿ 17 ಮಂದಿ ಅಮಾನತು Read More »

ನಾಳೆಯಿಂದ ರಾಜ್ಯಾದ್ಯಂತ ‘ಶಕ್ತಿ’ ಯೋಜನೆ‌ ಅಧಿಕೃತ ಜಾರಿ| ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ

ಸಮಗ್ರ ನ್ಯೂಸ್: ರಾಜ್ಯ ಸರಕಾರದ ೫ ಗ್ಯಾರಂಟಿಗಳಲ್ಲಿ ಒಂದಾದ ಮಹಿಳೆಯರಿಗೆ ಉಚಿತ ಬಸ್ ನಾಳೆಯಿಂದಲೇ ಶುರುವಾಗಲಿದ್ದು, ಸ್ಟಿಕ್ಕರ್ ಇರುವ ಬಸ್ ಗಳಲ್ಲಿ ಮಾತ್ರ ಅವಕಾಶ ಕಲ್ಪಿಸಲಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಸದ್ಯ ಉಚಿತ ಪ್ರಯಾಣಕ್ಕೆ ಸ್ಮಾರ್ಟ್ ಕಾರ್ಡ್ ಬೇಡ.ಗುರುತಿನ ಚೀಟಿ ತೋರಿಸಿ ಪ್ರಯಾಣಿಸಬಹುದು. ಆದರೆ 3 ತಿಂಗಳ ಬಳಿಕ ಸ್ಮಾರ್ಟ್ ಕಾರ್ಡ್ ಕಡ್ಡಾಯ. ಮೂರು ತಿಂಗಳ ಒಳಗಾಗಿ ಉಚಿತ ಪ್ರಯಾಣ ಮಾಡುವ ಮಹಿಳೆಯರು ಸ್ಮಾರ್ಟ್ ಕಾರ್ಡ್ ಪಡೆದಿರಬೇಕು

ನಾಳೆಯಿಂದ ರಾಜ್ಯಾದ್ಯಂತ ‘ಶಕ್ತಿ’ ಯೋಜನೆ‌ ಅಧಿಕೃತ ಜಾರಿ| ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ Read More »

ಬೆಳ್ತಂಗಡಿ: ಸಚಿವ ಮಧು ಬಂಗಾರಪ್ಪರವರನ್ನು ಭೇಟಿ ಮಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ|ಶಾಲೆಗಳಿಗೆ ಮೂಲಭೂತ ಸೌಕರ್ಯ, ಶಿಕ್ಷಕರ ಕೊರತೆಯ ಬಗ್ಗೆ ಸಚಿವರಿಗೆ ಮನವಿ

ಸಮಗ್ರನ್ಯೂಸ್: ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪರವರನ್ನು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ ಮಾಡಿದರು. ಈ ವೇಳೆ ತಾಲೂಕಿನ ಸರಕಾರಿ ಶಾಲೆಗಳಿಗೆ ಅಗತ್ಯ ಮೂಲಭೂತ ಸೌಕರ್ಯವನ್ನು ಒದಗಿಸಿಕೊಡುವ ಬಗ್ಗೆ ಹಾಗೂ ಕೆಲ ಶಾಲೆಗಳಲ್ಲಿ ಮುಖ್ಯೋಪಧ್ಯಾಯರು, ಶಿಕ್ಷಕರು ದೈಹಿಕ ಶಿಕ್ಷಕರ ಕೊರತೆಯ ಬಗ್ಗೆ ಸಚಿವರಿಗೆ ಮನವಿ ನೀಡಿದರು. ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರವೀಣ್ ಪೆರ್ನಾಂಡಿಸ್ ಉಪಸ್ಥಿತರಿದ್ದರು.

ಬೆಳ್ತಂಗಡಿ: ಸಚಿವ ಮಧು ಬಂಗಾರಪ್ಪರವರನ್ನು ಭೇಟಿ ಮಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ|ಶಾಲೆಗಳಿಗೆ ಮೂಲಭೂತ ಸೌಕರ್ಯ, ಶಿಕ್ಷಕರ ಕೊರತೆಯ ಬಗ್ಗೆ ಸಚಿವರಿಗೆ ಮನವಿ Read More »

ಬೆಳ್ತಂಗಡಿ: ಮಳೆಯಿಂದಾಗಿ ಚಾಲಕರ ಹತೋಟಿ ತಪ್ಪಿ ಸರಣಿ ವಾಹನ ಪಲ್ಟಿ

ಸಮಗ್ರನ್ಯೂಸ್: ಕೊಟ್ಟಿಗೆಹಾರ ಕಡೆಯಿಂದ ಉಜಿರೆಯತ್ತ ಸಂಚರಿಸುತ್ತಿದ್ದ ಟೆಂಪೋ ಟ್ರಾವೆಲರ್ ಮತ್ತು ತರಕಾರಿ ಸಾಗಾಟದ ವಾಹನ ಚಾರ್ಮಾಡಿ ಪೇಟೆಯಲ್ಲಿ ಪಲ್ಟಿಯಾದ ಘಟನೆ ಜೂ.10 ರಂದು ನಡೆದಿದೆ. ಮಧ್ಯಾಹ್ನದ ವೇಳೆಗೆ ಅಂಗಡಿಯೊಂದರ ಮುಂಭಾಗ ಚಾಲಕನ ನಿಯಂತ್ರಣ ತಪ್ಪಿದ ಟೆಂಪೋ ಟ್ರಾವೆಲರ್ ಉರುಳಿ ಬಿದ್ದಿದೆ. ಅದೃಷ್ಟವಶಾತ್ ಟಿಟಿ ಅಂಗಡಿಯಿಂದ ಅನತಿ ದೂರದಲ್ಲಿ ಪಲ್ಟಿಯಾದ ಕಾರಣ ಹೆಚ್ಚಿನ ಅನಾಹುತ ಉಂಟಾಗುವುದು ತಪ್ಪಿದೆ. ಈ ಘಟನೆ ನಡೆದ ಕೊಂಚ ಹೊತ್ತಿನಲ್ಲಿ ಇಲ್ಲಿಂದ 100ಮೀ. ಮುಂಭಾಗದಲ್ಲಿ ತರಕಾರಿ ಸಾಗಾಟದ ವಾಹನ ರಸ್ತೆ ಬದಿಗೆ ಜಾರಿ ಚರಂಡಿಗೆ

ಬೆಳ್ತಂಗಡಿ: ಮಳೆಯಿಂದಾಗಿ ಚಾಲಕರ ಹತೋಟಿ ತಪ್ಪಿ ಸರಣಿ ವಾಹನ ಪಲ್ಟಿ Read More »

ಬೆಳ್ತಂಗಡಿ: ಸೇತುವೆ ಅಡಿಯಲ್ಲಿ ಎರಡು ಕಾಣಿಕೆ ಡಬ್ಬಿಗಳು ಪತ್ತೆ..!

ಸಮಗ್ರನ್ಯೂಸ್: ಬೆಳ್ತಂಗಡಿ ತಾಲೂಕು ಲಾಯಿಲ ಗ್ರಾಮದ ಬಜಕ್ರೆಸಾಲು ಸೇತುವೆ ಅಡಿಯಲ್ಲಿ ಎರಡು ಕಾಣಿಕೆ ಡಬ್ಬಿಗಳು ಪತ್ತೆಯಾಗಿದೆ. ಜೂ.10 ರಂದು ಮಧ್ಯಾಹ್ನ ಬಜಕ್ರೆಸಾಲು ಎಂಬಲ್ಲಿ ಸೇತುವೆಯ ಅಡಿ ಭಾಗದಲ್ಲಿ ಸ್ಥಳೀಯ ನಿವಾಸಿ ರಾಜು ಅವರು ಕಲ್ಲಿನ ಮೇಲೆ ಇರುವ ಪ್ಲಾಸ್ಟಿಕ್ ಗೋಣಿಗಳನ್ನು ಗಮನಿಸಿ ಹತ್ತಿರ ಹೋಗಿ ನೋಡಿದಾಗ ಎರಡು ಸ್ಟೀಲ್ ಡಬ್ಬಗಳು ಪತ್ತೆಯಾಗಿವೆ. ಈ ಕುರಿತು ಅವರು ಸ್ಥಳೀಯ ಗ್ರಾಮ ಪಂಚಾಯತ್ ಸದಸ್ಯ ಪ್ರಸಾದ್ ಶೆಟ್ಟಿ ಎಣಿಂಜೆಯವರಿಗೆ ತಿಳಿಸಿದ್ದು, ಅವರು ಪೊಲೀಸ್‌ಗೆ ಮಾಹಿತಿ ನೀಡಿದ್ದಾರೆ. ಕಳೆದ ರಾತ್ರಿ ಕಾಣಿಕೆ

ಬೆಳ್ತಂಗಡಿ: ಸೇತುವೆ ಅಡಿಯಲ್ಲಿ ಎರಡು ಕಾಣಿಕೆ ಡಬ್ಬಿಗಳು ಪತ್ತೆ..! Read More »

ಕಾಣಿಯೂರು: ಪುಣ್ಚತ್ತಾರು ಶ್ರೀ ವಿಷ್ಣುಮೂರ್ತಿ ದೈವಸ್ಥಾನ, ಶ್ರೀ ಕಾಳಿಕಾಂಬ ದೇವಿ ದೇವಸ್ಥಾನದಲ್ಲಿ ಪುನಃ ಪ್ರತಿಷ್ಠಾ ಬ್ರಹ್ಮಕಲಶೋತ್ಸವ

ಸಮಗ್ರ ನ್ಯೂಸ್: ಪುಣ್ಚತ್ತಾರು ವಿಷ್ಣುಪುರ ಕರಿಮಜಲು ಶ್ರೀ ವಿಷ್ಣುಮೂರ್ತಿ ದೈವಸ್ಥಾನ, ಶ್ರೀ ಕಾಳಿಕಾಂಬ ದೇವಿ ದೇವಸ್ಥಾನದ ಶ್ರೀ ವಿಷ್ಣುಮೂರ್ತಿ ದೈವ, ಶ್ರೀ ಕಾಳಿಕಾಂಬ ದೇವಿ ಮತ್ತು ಪರಿವಾರ ದೈವಗಳ ಪುನಃ ಪ್ರತಿಷ್ಠಾ ಬ್ರಹ್ಮಕಲಶೋತ್ಸವವು ಕೆಮ್ಮಿಂಜೆ ಬ್ರಹ್ಮಶ್ರೀ ವೇದಮೂರ್ತಿ ತಂತ್ರಿ ಸುಬ್ರಹ್ಮಣ್ಯ ಬಳ್ಳಕ್ಕುರಾಯರ ನೇತೃತ್ವದಲ್ಲಿ ಜೂ.11ರಿಂದ ಜೂ13ರವರೆಗೆ ನಡೆಯಲಿದೆ. ಜೂ.11ರಂದು ಬೆಳಿಗ್ಗೆ ಹೊರಕಾಣಿಕೆ ಸಂಗ್ರಹ ಮಾಡಿ, ಸಂಜೆ ಕಾಣಿಯೂರು ಶ್ರೀ ಅಮ್ಮನವರ ದೇವಸ್ಥಾನದಿಂದ ಪುಣ್ಚತ್ತಾರು ಕರಿಮಜಲು ದೈವಸ್ಥಾನದವರೆಗೆ ಶ್ರೀ ವಿಷ್ಣುಮೂರ್ತಿ ದೈವದ ಬೆಳ್ಳಿಯ ಮೊಗ ಮತ್ತು ಹಸಿರು ಹೊರೆಕಾಣಿಕೆಯ

ಕಾಣಿಯೂರು: ಪುಣ್ಚತ್ತಾರು ಶ್ರೀ ವಿಷ್ಣುಮೂರ್ತಿ ದೈವಸ್ಥಾನ, ಶ್ರೀ ಕಾಳಿಕಾಂಬ ದೇವಿ ದೇವಸ್ಥಾನದಲ್ಲಿ ಪುನಃ ಪ್ರತಿಷ್ಠಾ ಬ್ರಹ್ಮಕಲಶೋತ್ಸವ Read More »

ಬೆಳ್ತಂಗಡಿ: ಗಾಳಿ-ಮಳೆಯಿಂದಾಗಿ ವಿದ್ಯುತ್ ಕಂಬಗಳಿಗೆ ಹಾನಿ

ಸಮಗ್ರನ್ಯೂಸ್: ಮರವೊಂದು ವಿದ್ಯುತ್ ಕಂಬದ ಮೇಲೆ ಬಿದ್ದ ಪರಿಣಾಮ ಕಂಬ ಮುರಿದು ಬಿದ್ದ ಘಟನೆ ಸವಣಾಲು ರಸ್ತೆಯ ಪುಲ್ತಡ್ಕ ಎಂಬಲ್ಲಿ ಜೂ.10 ರಂದು ನಡೆದಿದೆ. ಇಂದು ಬೆಳಗ್ಗಿನಿಂದ ತಾಲೂಕಿನ ಹಲವೆಡೆಗಳಲ್ಲಿ ‌ಸುರಿದ ಮಳೆ ಹಾಗೂ ಜೋರಾದ ಗಾಳಿಯಿಂದಾಗಿ ಸವಣಾಲು ಹೋಗುವ ರಸ್ತೆಯ ಲಾಯಿಲ ಗ್ರಾಮದ ಪುಲ್ತಡ್ಕದಲ್ಲಿ ಬೃಹತ್ ಮರವೊಂದು ವಿದ್ಯುತ್ ಕಂಬದ ಮೇಲೆ ಉರುಳಿ ಬಿದ್ದಿದೆ. ಪರಿಣಾಮ ಕಂಬ ಮುರಿದು ವಿದ್ಯುತ್ ತಂತಿಗಳು ತುಂಡಾಗಿ ರಸ್ತೆಗೆ ಬಿದ್ದಿದೆ. ಈ ಬಗ್ಗೆ ಮಾಹಿತಿ ತಿಳಿದ ಮೆಸ್ಕಾಂ ಸಿಬ್ಬಂದಿ ಕಿಟ್ಟಣ

ಬೆಳ್ತಂಗಡಿ: ಗಾಳಿ-ಮಳೆಯಿಂದಾಗಿ ವಿದ್ಯುತ್ ಕಂಬಗಳಿಗೆ ಹಾನಿ Read More »

ಚಿರತೆ ಓಡಿಸಲು ಬಾವಿಗೆ ಬೆಂಕಿ ಹಾಕಿದ ಅರಣ್ಯ ಇಲಾಖೆಯ ಸಿಬ್ಬಂದಿ..!

ಸಮಗ್ರ ನ್ಯೂಸ್: ಬಾವಿಗೆ ಬಿದ್ದ ಚಿರತೆಯೊಂದುಮೇಲೆ‌ ಬಾರದೇ ಇದ್ದಾಗ ಬೆಂಕಿಯಿಂದ ಬೆದರಿಸಿ ಚಿರತೆಯನ್ನು ಓಡಿಸಿದ ಘಟನೆ ಉಡುಪಿ ಜಿಲ್ಲೆಯ ಬ್ರಹ್ಮಾವರದ ಕೆಂಜೂರು ಎಂಬಲ್ಲಿ ನಡೆದಿದೆ. ಕಾಡಿನಿಂದ ನಾಡಿಗೆ ಆಹಾರ ಹುಡುಕಿಕೊಂಡು ಬಂದ ಚಿರತೆ ಬ್ರಹ್ಮಾವರದ ಕೆಂಜೂರಿನ ಮನೆಯೊಂದರ ಬಾವಿಗೆ ಬಿದ್ದಿತ್ತು. ಕೂಡಲೇ ಮನೆಯವರು ಅರಣ್ಯ ಇಲಾಖೆಗೆ ತಿಳಿಸಿದ್ದು, ಸ್ಥಳಕ್ಕೆ ಧಾವಿಸಿದ ಅರಣ್ಯ ಇಲಾಖೆಯ ಸಿಬಂದಿ ದೊಡ್ಡ ಏಣಿಯೊಂದನ್ನು ಇಟ್ಟು ಚಿರತೆ ಮೇಲೆ ಬರಬಹುದು ಎಂದು ತುಂಬಾ ಹೊತ್ತು ಕಾದು ನೋಡಿದರು. ಆದರೆ ಭಯಗೊಂಡ ಚಿರತೆ ಬಾವಿಯಿಂದ ಮೇಲಕ್ಕೆ

ಚಿರತೆ ಓಡಿಸಲು ಬಾವಿಗೆ ಬೆಂಕಿ ಹಾಕಿದ ಅರಣ್ಯ ಇಲಾಖೆಯ ಸಿಬ್ಬಂದಿ..! Read More »

ಪುತ್ತೂರು: ಗುಜರಿ ವ್ಯವಹಾರ ಮಾಡುತ್ತಿದ್ದವರು ಮಂತ್ರವಾದಿಯ ಮುಖವಾಡ| ಬಿಸಿ ಬಿಸಿ ಕಜ್ಜಾಯ ನೀಡಿ ಮುಖವಾಡ ಕಳಚಿದ ಯುವಕರ ತಂಡ

ಸಮಗ್ರ ನ್ಯೂಸ್: ಗುಜರಿ ವ್ಯವಹಾರ ಮಾಡುತ್ತಿದ್ದವರು ಮಂತ್ರವಾದಿಯ ಮುಖವಾಡ ಹಾಕಿ ಜನರಿಗೆ ಮೋಸ ಮಾಡುತ್ತಿದ್ದ ಇಬ್ಬರಿಗೆ ಸ್ಥಳೀಯ ಯುವಕರು ಬಿಸಿ ಬಿಸಿ ಕಜ್ಜಾಯ ನೀಡಿ ಮುಖವಾಡ ಕಳಚಿದ ಘಟನೆ ಪುತ್ತೂರಿನ ಉಪ್ಪಿನಂಗಡಿ ಠಾಣಾ ವ್ಯಾಪ್ತಿಯ ವಳಾಲು ಪರಿಸರದಲ್ಲಿ ನಡೆದಿದೆ. ಈ ಬಗ್ಗೆ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಕಡಬ ಕೋಡಿಂಬಾಳ ಗ್ರಾಮದ ನಿವಾಸಿಗಳಾದ ಆಲಿ ಮತ್ತು ಮಮ್ಮು ಎಂಬವರು ಈ ಹಿಂದೆ ಗುಜರಿ ವ್ಯವಹಾರ ಮಾಡುತ್ತಿದ್ದರು. ಬಳಿಕ ಮಂತ್ರವಾದಿಯ ಮುಖವಾಡದಲ್ಲಿ ಹಲವೆಡೆ ಪರಿಚಿತರಾಗಿದ್ದರು. ಹೀಗಾಗಿ ಉಪ್ಪಿನಂಗಡಿ ಸಮೀಪದ

ಪುತ್ತೂರು: ಗುಜರಿ ವ್ಯವಹಾರ ಮಾಡುತ್ತಿದ್ದವರು ಮಂತ್ರವಾದಿಯ ಮುಖವಾಡ| ಬಿಸಿ ಬಿಸಿ ಕಜ್ಜಾಯ ನೀಡಿ ಮುಖವಾಡ ಕಳಚಿದ ಯುವಕರ ತಂಡ Read More »