ಕರಾವಳಿ

ಸುಳ್ಯ ತಾಲೂಕು ಆಸ್ಪತ್ರೆಗೆ ನೇಮಕಗೊಂಡಿದ್ದ ಯುವ ವೈದ್ಯೆ ಆತ್ಮಹತ್ಯೆ

ಸಮಗ್ರ ನ್ಯೂಸ್: ಸುಳ್ಯ ತಾಲೂಕು ಆಸ್ಪತ್ರೆಗೆ ನೇಮಕಗೊಂಡಿದ್ದ ಯುವ ವೈದ್ಯೆಯೊಬ್ಬರು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾಸರಗೋಡು ಜಿಲ್ಲೆಯ ಬದಿಯಡ್ಕ ಸಮೀಪದ ನೀರ್ಚಾಲಿನಲ್ಲಿ ನಡೆದಿದೆ. ಎಂಬಿಬಿಎಸ್‌ ಕೋರ್ಸ್‌ ಪೂರ್ತಿಗೊಳಿಸಿ ಗ್ರಾಮೀಣ ಸೇವೆನಡೆದಿದೆ ಕಾರ್ಯ ನಿರ್ವಹಿಸುತ್ತಿದ್ದ ಕನ್ಯಪ್ಪಾಡಿ ನಿವಾಸಿ ನಿವೃತ್ತ ಕ್ಯಾಂಪ್ಕೋ ಉದ್ಯೋಗಿ ಗೋಪಾಲಕೃಷ್ಣ ಭಟ್‌ ಅವರ ಪುತ್ರಿ ಯುವ ವೈದ್ಯೆ ಡಾ. ಪಲ್ಲವಿ ಜಿ.ಕೆ. (25) ಎಂದು ಗುರುತಿಸಲಾಗಿದೆ. ಇವರು ಜೂ. 5ರಂದು ರಾತ್ರಿ ಊಟ ಮಾಡಿ ನಿದ್ದೆ ಮಾಡಿದವರು ಬೆಳಗ್ಗೆ ಎದ್ದಿರಲಿಲ್ಲ. ಇದರಿಂದ ಮನೆಯವರು ಕೊಠಡಿಯ

ಸುಳ್ಯ ತಾಲೂಕು ಆಸ್ಪತ್ರೆಗೆ ನೇಮಕಗೊಂಡಿದ್ದ ಯುವ ವೈದ್ಯೆ ಆತ್ಮಹತ್ಯೆ Read More »

ಬೆಳ್ತಂಗಡಿ ಠಾಣೆಯಿಂದ ಸಿ.ಐ. ಸತ್ಯನಾರಾಯಣ ಅಲ್ದೂರಿಗೆ

ಸಮಗ್ರ ನ್ಯೂಸ್: ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಚಿಕ್ಕಮಗಳೂರಿನ ಆಲ್ದೂರಿನಿಂದ ಬೆಳ್ತಂಗಡಿ ಪೊಲೀಸ್ ಠಾಣೆಗೆ ವರ್ಗಾವಣೆಗೊಂಡಿದ್ದ ಸತ್ಯನಾರಾಯಣ ಅವರು ಚುನಾವಣಾ ಪ್ರಕ್ರಿಯೆ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ಮತ್ತೆ ಅಲ್ದೂರಿಗೆ ವರ್ಗಾವಣೆಗೊಂಡಿದ್ದಾರೆ. ಸತ್ಯನಾರಾಯಣ ಅವರು ವೃತ್ತ ನಿರೀಕ್ಷಕ ಶಿವಕುಮಾರ್ ಅವರಿಗೆ ಅಧಿಕಾರ ಹಸ್ತಾಂತರಿಸಿ ಆಲ್ದೂರಿಗೆ ತೆರಳಿದ್ದಾರೆ‌. ಇಲಾಖಾ ಸಿಬ್ಬಂದಿಗಳು ಅವರನ್ನು ಠಾಣೆಯಲ್ಲಿ‌ ಗೌರವಿಸಿದರು. ಬೆಳ್ತಗಂಡಿ ಪೊಲೀಸ್ ಠಾಣೆಗೆ ನೂತನ ಇನ್ ಸ್ಪೆಕ್ಟರ್ ಆಗಿ ನಾಗೇಶ್ ಕದ್ರಿ ನೇಮಕಗೊಳ್ಳುವ ಸಾಧ್ಯತೆಯಿದೆ‌ ಎಂದು ತಿಳಿದು ಬಂದಿದೆ.

ಬೆಳ್ತಂಗಡಿ ಠಾಣೆಯಿಂದ ಸಿ.ಐ. ಸತ್ಯನಾರಾಯಣ ಅಲ್ದೂರಿಗೆ Read More »

ಮಂಗಳೂರು: ಮುಂಗಾರು ವಿಳಂಬ ಹಿನ್ನೆಲೆ| ಕೆಲವೆಡೆ ಶಾಲಾ – ಕಾಲೇಜುಗಳಿಗೆ ರಜೆ ಘೋಷಣೆ

ಸಮಗ್ರ ನ್ಯೂಸ್: ರಾಜ್ಯಕ್ಕೆ ಮುಂಗಾರು ಆಗಮನ ವಿಳಂಬವಾದ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನೀರಿನ ಬವಣೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಮನೆ, ಕಚೇರಿ, ಶಾಲಾ-ಕಾಲೇಜುಗಳಲ್ಲಿ ನೀರಿನ ಕೊರತೆ ಉಂಟಾಗಿ ತೊಂದರೆಯಾಗಿದೆ. ಇನ್ನು ಈಗಷ್ಟೇ ಶಾಲಾ-ಕಾಲೇಜುಗಳು ಆರಂಭವಾಗಿದ್ದು ನೀರಿನ ಕೊರತೆಯಿಂದ ಮಕ್ಕಳಿಗೆ ಸಾಕಷ್ಟು ತೊಂದರೆಯಾಗುತ್ತಿದೆ. ನೀರಿನ ಸಮಸ್ಯೆ ಉದ್ಭವವಾದುದರಿಂದ ಜಿಲ್ಲೆಯ ಕೆಲ ಖಾಸಗಿ ಶಿಕ್ಷಣ ಸಂಸ್ಥೆಗಳು ರಜೆ ಘೋಷಣೆ ಮಾಡಿವೆ. ಇನ್ನು ಕೆಲವೆಡೆ ಶಿಕ್ಷಣ ಸಂಸ್ಥೆಗಳು ಅರ್ಧ ದಿನ ತರಗತಿ ನಡೆಸುತ್ತಿವೆ. ಕಾಲೇಜು ವಿದ್ಯರ್ಥಿಗಳಿಗೆ ಆನ್​ ಲೈನ್​ ಮೂಲಕ

ಮಂಗಳೂರು: ಮುಂಗಾರು ವಿಳಂಬ ಹಿನ್ನೆಲೆ| ಕೆಲವೆಡೆ ಶಾಲಾ – ಕಾಲೇಜುಗಳಿಗೆ ರಜೆ ಘೋಷಣೆ Read More »

ಮಂಗಳೂರು: ಪಿಲಿಕುಳ ನಿಸರ್ಗಧಾಮದಲ್ಲಿ ಹುಲಿ ಹೃದಯಾಘಾತದಿಂದ ಸಾವು

ಸಮಗ್ರ ನ್ಯೂಸ್: ಪಿಲಿಕುಳದ ಡಾ| ಶಿವರಾಮ ಕಾರಂತ ಜೈವಿಕ ಮೃಗಾಲಯದಲ್ಲಿ ಹುಲಿಯೊಂದು ಇಂದು ಹೃದಯಾಘಾತವಾಗಿ ಸಾವನ್ನಪ್ಪಿದೆ. ಇತ್ತೀಚೆಗೆ ಎರಡು ಹುಲಿಗಳ ನಡುವೆ ಭೀಕರ ಕಾಳಗ ನಡೆದು ಗಾಯಗೊಂಡಿದ್ದ ಒಂದು ಹುಲಿಗೆ ಹೃದಯಾಘಾತವಾಗಿದೆ. ಗಾಯಗೊಂಡಿದ್ದ ಈ ಹುಲಿ ಚೇತರಿಸಿತ್ತು. ಆದರೆ ಬುಧವಾರ ಹೃದಯಾಘಾತದಿಂದ ಸಾವನ್ನಪ್ಪಿದೆ. ಮೃತಪಟ್ಟ ಹುಲಿಯ ಮರಣೋತ್ತರ ಪರೀಕ್ಷೆ ನಡೆಯುತ್ತಿದೆ.

ಮಂಗಳೂರು: ಪಿಲಿಕುಳ ನಿಸರ್ಗಧಾಮದಲ್ಲಿ ಹುಲಿ ಹೃದಯಾಘಾತದಿಂದ ಸಾವು Read More »

ಮಂಗಳೂರು: ಸಾಹಿತ್ಯ ಪುಸ್ತಕಗಳ ಕೊಡುಗೆ- ಜೂ.12ರೊಳಗೆ ನೋಂದಾಯಿಸಲು ಕರೆ

ಸಮಗ್ರನ್ಯೂಸ್: ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಆಶ್ರಯದಲ್ಲಿ ಬಿ.ಆರ್. ನರಸಿಂಹ ರಾವ್ ಉಡುಪಿ ಅವರು ಮಂಗಳೂರು ತಾಲೂಕಿನ ಕನ್ನಡ ಮಾಧ್ಯಮದ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ವಾಚನಾಲಯಕ್ಕೆ ಸಾಹಿತ್ಯಿಕ ಪುಸ್ತಕಗಳನ್ನು ಕೊಡುಗೆಯಾಗಿ ನೀಡಲಿದ್ದಾರೆ. ಈ ಕೊಡುಗೆಯನ್ನು ಪಡೆಯಲು ಶಾಲೆಗಳ ಮುಖ್ಯಸ್ಥರು ಇದೇ ಜೂ.12ರೊಳಗೆ ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸದಸ್ಯರಾದ ಅರುಣಾ ನಾಗರಾಜ್ ಮೊಬೈಲ್ ಸಂಖ್ಯೆ: 9141716602 ಅಥವಾ ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಂಘಟನಾ ಸಹ ಕಾರ್ಯದರ್ಶಿ

ಮಂಗಳೂರು: ಸಾಹಿತ್ಯ ಪುಸ್ತಕಗಳ ಕೊಡುಗೆ- ಜೂ.12ರೊಳಗೆ ನೋಂದಾಯಿಸಲು ಕರೆ Read More »

ಮಂಗಳೂರು: ಪ್ರಾದೇಶಿಕ ಕಚೇರಿ ಸ್ಥಳಾಂತರ

ಸಮಗ್ರನ್ಯೂಸ್: ಉರ್ವಾ ಸ್ಟೋರ್‌ನ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಕಟ್ಟಡದ ಮೂರನೇ ಮಹಡಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ನಾಗರೀಕ ಹಕ್ಕು ಜಾರಿ ನಿರ್ದೇಶನಾಲಯದ ಪ್ರಾದೇಶಿಕ ಕಚೇರಿ ಜೂ.5ರಿಂದ ಅದೇ ಕಟ್ಟಡದ ಎರಡನೇ ಮಹಡಿಗೆ ಸ್ಥಳಾಂತರಗೊಂಡಿದೆ ಎಂದು ನಾಗರೀಕ ಹಕ್ಕು ಜಾರಿ ನಿರ್ದೇಶನಾಲಯದ ಪೊಲೀಸ್ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಂಗಳೂರು: ಪ್ರಾದೇಶಿಕ ಕಚೇರಿ ಸ್ಥಳಾಂತರ Read More »

ಎಣ್ಣೆ ಪ್ರಿಯರಿಗೆ ಬಿಗ್ ಶಾಕ್| ಸದ್ದಿಲ್ಲದೆ ಹೆಚ್ಚಳವಾಯ್ತು ಮದ್ಯದ ದರ!?

ಸಮಗ್ರ ನ್ಯೂಸ್: ಕೆಲವು ಉಚಿತಗಳನ್ನು ನೀಡಿ ಹಲವು ಸರಕುಗಳಿಗೆ ಬೆಲೆ ಏರಿಸಲಾಗಿದೆ ಎಂಬ ಆರೋಪದ ನಡುವೆಯೇ ಸದ್ದಿಲ್ಲದೆ ಮದ್ಯದ ದರಗಳನ್ನು ಕೂಡ ಹೆಚ್ಚಳ ಮಾಡಲಾಗಿದೆ. ಈ ಮೂಲಕ ಎಣ್ಣೆ ಪ್ರಿಯರಿಗೆ ಬಿಗ್ ಶಾಕ್ ನೀಡಲಾಗಿದೆ. ಮದ್ಯಪ್ರಿಯರಿಗೆ ಶಾಕ್ ಎನ್ನುವಂತೆ ಬಿಯರ್ ಸೇರಿದಂತೆ ಹಾರ್ಡ್ ಡ್ರಿಂಕ್ಸ್ ಗಳ ಬೆಲೆಯನ್ನು ಹೆಚ್ಚಳ ಮಾಡಲಾಗಿದೆ. ಮಾಹಿತಿಯ ಪ್ರಕಾರ ಕರ್ನಾಟಕ ವಿಧಾನಸಭಾ ಚುನಾವಣೆಯ ನಂತರ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬರುವ ಮುನ್ನವೇ ಎಣ್ಣೆ ದರವನ್ನು ಹೆಚ್ಚಳ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ. ಈ‌

ಎಣ್ಣೆ ಪ್ರಿಯರಿಗೆ ಬಿಗ್ ಶಾಕ್| ಸದ್ದಿಲ್ಲದೆ ಹೆಚ್ಚಳವಾಯ್ತು ಮದ್ಯದ ದರ!? Read More »

ಚಂಡಮಾರುತವಾಗಿ ರೂಪುಗೊಂಡ ವಾಯುಭಾರ ಕುಸಿತ| ಕರ್ನಾಟಕದ ಕರಾವಳಿಗೆ ಹೈ ಅಲರ್ಟ್

ಸಮಗ್ರ ನ್ಯೂಸ್: ಅರಬ್ಬೀ ಸಮುದ್ರದಲ್ಲಿ ಕಳೆದ ಕೆಲ ದಿನಗಳಿಂದ ಕುಸಿತಗೊಂಡಿರುವ ವಾಯುಭಾರವು ಸದ್ಯ ಚಂಡಮಾರುತವಾಗಿ ರೂಪುಗೊಂಡಿದೆ. ಮುಂದಿನ 24 ಗಂಟೆಗಳ ಕಾಲ ಇದೇ ರೀತಿಯಲ್ಲಿ ಹವಾಮಾನ ಮುಂದುವರಿದರೆ ಕರಾವಳಿಗೆ ಬಿಪೋರ್ಜಾಯ್ ಚಂಡಮಾರುತ ಅಪ್ಪಳಿಸುವ ಸಾಧ್ಯತೆ ಹೆಚ್ಚಾಗಿದೆ. ಈ ಚಂಡಮಾರುತದಿಂದ ಮುಂಗಾರು ಮಳೆ ರಾಜ್ಯಕ್ಕೆ ಆಗಮಿಸುವುದು ಮತ್ತಷ್ಟು ವಿಳಂಬವಾಗಲಿದೆ. ಮುಂದಿನ 24 ಗಂಟೆಯಲ್ಲಿ ಚಂಡಮಾರುತ ಅಪ್ಪಳಿಸಲಿದ್ದು, ಇದರಿಂದ ದಕ್ಷಿಣ ಭಾರತದ ಪಶ್ಚಿಮ ತೀರಗಳು ಅಪಾಯವನ್ನು ಎದುರಿಸಲಿವೆ ಎಂದು ಮುನ್ನೆಚ್ಚರಿಕೆ ನೀಡಲಾಗಿದೆ. ಪ್ರಸ್ತುತ ಉತ್ತರದತ್ತ ಮುಖ ಮಾಡಿರುವ ಚಂಡಮಾರುತದಿಂದ ನಾಳೆಯಿಂದ

ಚಂಡಮಾರುತವಾಗಿ ರೂಪುಗೊಂಡ ವಾಯುಭಾರ ಕುಸಿತ| ಕರ್ನಾಟಕದ ಕರಾವಳಿಗೆ ಹೈ ಅಲರ್ಟ್ Read More »

ಬೆಂಗಳೂರು: ಪ್ರವಾಸಿ ತಾಣಗಳ ಮಾಹಿತಿ ಪಡೆದು ಮನೆ ಬಿಟ್ಟ ಯುವಕ|ಕರಾವಳಿ ಭಾಗದಲ್ಲಿ ಮಗನಿಗಾಗಿ ಪೋಷಕರ ಹುಡುಕಾಟ

ಸಮಗ್ರ ನ್ಯೂಸ್: ಬೆಂಗಳೂರಿನ ಯಲಹಂಕ ನ್ಯೂ ಟೌನ್ ನ್ಯಾಶನಲ್ ಪಬ್ಲಿಕ್ ನ 9ನೇ ತರಗತಿ ಓದುತ್ತಿದ್ದ ಆದಿತ್ಯಾ ಎಂಬ ಬಾತಾಯಕೆಲಮದಿನಗಳಿಂದ ನಾಪತ್ತೆಯಾಗಿದ್ದು ಇದೀಗ ಆತನ ಮನೆಯವ್ರು ಹುಡುಕುತ್ತಾ ಕರಾವಳಿಯ ಮಲ್ಪೆಗೆ ಬಂದಿದ್ದಾರೆ. ತನ್ನ ತಾಯಿಯ ಮೊಬೈಲ್​ನಲ್ಲಿ ಕೆಲವು ಪ್ರವಾಸಿ ತಾಣಗಳ ಬಗ್ಗೆ ಸರ್ಚ್ ಮಾಡಿ ಮಾಹಿತಿ ಸಂಗ್ರಹಿಸಿ ಬ್ಯಾಗ್​ನಲ್ಲಿ ಬಟ್ಟೆ ತುಂಬಿಕೊಂಡು ಮನೆ ಬಿಟ್ಟಿದ್ದು ಪೋಷಕರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಆದಿತ್ಯಾ ಅಮ್ಮನ ಫೋನ್​ನಲ್ಲಿ ಮಂಗಳೂರು, ಮಲ್ಪೆ, ಮೈಸೂರಿನ ಕೆಲ ಭಾಗಗಳ ಬಗ್ಗೆ ಸರ್ಚ್ ಮಾಡಿ

ಬೆಂಗಳೂರು: ಪ್ರವಾಸಿ ತಾಣಗಳ ಮಾಹಿತಿ ಪಡೆದು ಮನೆ ಬಿಟ್ಟ ಯುವಕ|ಕರಾವಳಿ ಭಾಗದಲ್ಲಿ ಮಗನಿಗಾಗಿ ಪೋಷಕರ ಹುಡುಕಾಟ Read More »

ಚಿಕ್ಕಮಗಳೂರು : ಮಹಿಳೆ ಮೇಲೆ ಹುಲಿ ದಾಳಿ

ಸಮಗ್ರ ನ್ಯೂಸ್: ಕಾಫಿತೋಟದ ಕಾರ್ಮಿಕ ಮಹಿಳೆ ಮೇಲೆ ಹುಲಿ ದಾಳಿ ಮಾಡಿದ ಘಟನೆ ಚಿಕ್ಕಮಗಳೂರು ತಾಲೂಕಿನ ಪಂಡರವಳ್ಳಿಯ ನಡೆದಿದೆ. ಅಸ್ಸಾಂ ಮೂಲದ ಕಾರ್ಗಂಭೀರವಾಗಿಯಾಗಿದ್ದು ಹುಲಿ ದಾಳಿಯಿಂದ ಹಣೆ ಮತ್ತು ಮುಖಕ್ಕೆ ಗಂಭೀರವಾಗಿ ಗಾಯಗೊಂಡಿದ್ದು ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇನ್ನೂ 8 ವರ್ಷದ ಹಿಂದೆ ಪಂಡರವಳ್ಳಿಯಲ್ಲಿ ಹುಲಿ ದಾಳಿಗೆ ಮಹಿಳೆ ಬಲಿಯಾಗಿದ್ದರು ಇದೀಗ ಮತ್ತೆ ಹುಲಿ ದಾಳಿಯಾಗಿರುವುದು ಗ್ರಾಮಸ್ಥರಲ್ಲಿ ಆತಂಕ ಉಂಟುಮಾಡಿದೆ.

ಚಿಕ್ಕಮಗಳೂರು : ಮಹಿಳೆ ಮೇಲೆ ಹುಲಿ ದಾಳಿ Read More »