ಕರಾವಳಿ

ವಿಟ್ಲ: ಅಳಕೆಮಜಲು ನಿವಾಸಿ ಧೀರಜ್ ನೇಣುಬಿಗಿದು ಆತ್ಮಹತ್ಯೆ!

ಸಮಗ್ರನ್ಯೂಸ್ : ಬಿ.ಸಿ.ರೋಡ್ ನ ಹೋಂಡಾ ಶೋ ರೂಂ ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಧೀರಜ್ (30 ವ) ಮೇ.30ರಂದು ತಡರಾತ್ರಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲ ಅಳಕೆಮಜಲು ಸಮೀಪ ನಡೆದಿದೆ. ಮೃತರು ಒಂದು ವರುಷದ ಹಿಂದಷ್ಟೇ ವಿವಾಹವಾಗಿದ್ದರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.ಮೃತರು ತಂದೆ, ತಾಯಿ, ಪತ್ನಿ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

ವಿಟ್ಲ: ಅಳಕೆಮಜಲು ನಿವಾಸಿ ಧೀರಜ್ ನೇಣುಬಿಗಿದು ಆತ್ಮಹತ್ಯೆ! Read More »

ಪ್ರಧಾ‌ನಿ ಮೋದಿ ಮೇಲೆ ದಾಳಿ ಸಂಚು| ದ.ಕ ಜಿಲ್ಲೆ 16 ಕಡೆಗಳಲ್ಲಿ ಎನ್ಐಎ ಮಿಂಚಿನ ದಾಳಿ

ಸಮಗ್ರ ನ್ಯೂಸ್: ಬಿಹಾರದಲ್ಲಿ ಪ್ರಧಾನಿ ಮೋದಿ ಮೇಲೆ ದಾಳಿಗೆ ಸಂಚು ಪ್ರಕರಣ ಸಂಬಂಧ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬೆಳ್ಳಂಬೆಳಗ್ಗೆ 16 ಕಡೆ ಎನ್ ಐಎ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ, ಬೆಳ್ತಂಗಡಿ, ಉಪ್ಪಿಂನಗಡಿ, ವೇಣೂರು ಸೇರಿದಂತೆ 16 ಕಡೆ ಎನ್ ಐಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಹಲವರ ಮನೆ, ಕಚೇರಿ, ಆಸ್ಪತ್ರೆಗಳ ಮೇಲೆ ಏಕಕಾಲದಲ್ಲಿ ದಾಳಿ ನಡೆಸಿರುವ ಎನ್ ಐಎ ಅಧಿಕಾರಿಗಳ ತಂಡ ದಾಖಲೆಗಳ ಪರಿಶೀಲನೆ ನಡೆಸುತ್ತಿದೆ. ಇದೇ

ಪ್ರಧಾ‌ನಿ ಮೋದಿ ಮೇಲೆ ದಾಳಿ ಸಂಚು| ದ.ಕ ಜಿಲ್ಲೆ 16 ಕಡೆಗಳಲ್ಲಿ ಎನ್ಐಎ ಮಿಂಚಿನ ದಾಳಿ Read More »

ರಾಜ್ಯದಲ್ಲಿ ಪೂರ್ವ ಮುಂಗಾರು ಅಬ್ಬರ; ಸಿಡಿಲಿಗೆ ಇಬ್ಬರು ಬಲಿ

ಸಮಗ್ರ ನ್ಯೂಸ್: ರಾಜ್ಯದಲ್ಲಿ ‌ಮುಂಗಾರು ಪೂರ್ವ ಮಳೆ ಆರ್ಭಟ‌ ಮುಂದುವರೆದಿದ್ದು ಮಡಿಕೇರಿ, ಮೈಸೂರು, ಹಾಸನ, ಕೊಪ್ಪಳ, ಬೆಳಗಾವಿ, ಬೆಂಗಳೂರು ನಗರ, ಉಡುಪಿ, ಬೆಂಗಳೂರು ಗ್ರಾಮಾಂತರ ಜಿಲ್ಲೆ ಸೇರಿದಂತೆ ಹಲವೆಡೆ ಮಂಗಳವಾರವೂ ಧಾರಾಕಾರ ಮಳೆಯಾಗಿದೆ. ರಾಜ್ಯದಲ್ಲಿ ಸಿಡಿಲಿಗೆ ಮಹಿಳೆ ಸೇರಿದಂತೆ ಇಬ್ಬರು ಮೃತಪಟ್ಟಿದ್ದು, ಹಲವೆಡೆ ಜಾನುವಾರುಗಳೂ ಸಾವನ್ನಪ್ಪಿವೆ. ಮಳೆ‌ ಅವಾಂತರಕ್ಕೆ ಕೃಷಿ ಆಸ್ತಿಪಾಸ್ತಿ ಹಾನಿ ಸಂಭವಿಸಿದೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲ್ಲೂಕಿನ ಕಕಮರಿಯ ಗ್ರಾಮದ ಅಮೂಲ್‌ ಜೈಸಿಂಗ್‌ (24) ಹಾಗೂ ದೇಸರಹಟ್ಟಿಯ ವಿಠ್ಠಾಬಾಯಿ ಕಮಕಾರ (50) ಸಿಡಿಲು ಬಡಿದು

ರಾಜ್ಯದಲ್ಲಿ ಪೂರ್ವ ಮುಂಗಾರು ಅಬ್ಬರ; ಸಿಡಿಲಿಗೆ ಇಬ್ಬರು ಬಲಿ Read More »

ಕುಕ್ಕೆ ಸುಬ್ರಹ್ಮಣ್ಯ: ಗಜರಾಣಿ ಯಶಸ್ವಿ ಈಗ ಗಾಯಾಳು| ಡ್ರೈನೇಜ್ ನ ಸ್ಲಾಬ್ ಮುರಿದು ಏಟು ಮಾಡಿಕೊಂಡ ಆನೆ

ಸಮಗ್ರ ನ್ಯೂಸ್: ಯಾತ್ರಾಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೆ ಬರುವ ಭಕ್ತರ ಪ್ರಮುಖ ಆಕರ್ಷಣೆಗಳಲ್ಲಿ ಒಂದಾದ ಆನೆ ಯಶಸ್ವಿ ಇದೀಗ ಕಾಲುನೋವಿನಿಂದ ಬಳಲುತ್ತಿದೆ. ತುಂಟಾಟದಿಂದಲೇ ಗಮನ ಸೆಳೆಯುವ ಈ ಆನೆ ತನ್ನದೇ ಆದ ಅಭಿಮಾನಿ ಬಳಗವನ್ನು ಹೊಂದಿರುವ ಯಶಸ್ವಿ ಈಗ ನಡೆದಾಡಲು ಪರದಾಡುತ್ತಿದೆ. ಸೋಮವಾರ ಮಧ್ಯಾಹ್ನ ಆದಿ ಸುಬ್ರಮಣ್ಯ ಬಳಿ ಸಾಗುತ್ತಿದ್ದಾಗ ಯಶಸ್ವಿ ಡ್ರೈನೇಜ್ ಗಾಗಿ ಹಾಕಿದ್ದ ಕಲ್ಲಿನ ಮೇಲೆ ಕಾಲಿಟ್ಟಿದೆ. ಈ ವೇಳೆ ಕಲ್ಲು ತುಂಡಾಗಿ ಬಿದ್ದು ಅದರ ಕೈಗೆ ಗಾಯವಾಗಿದ್ದು ನಡೆದಾಡಲು ಕಷ್ಟಪಡುತ್ತಿದೆ. ಈಗಾಗಲೇ ಮೈಸೂರಿನ ತಜ್ಞ

ಕುಕ್ಕೆ ಸುಬ್ರಹ್ಮಣ್ಯ: ಗಜರಾಣಿ ಯಶಸ್ವಿ ಈಗ ಗಾಯಾಳು| ಡ್ರೈನೇಜ್ ನ ಸ್ಲಾಬ್ ಮುರಿದು ಏಟು ಮಾಡಿಕೊಂಡ ಆನೆ Read More »

ಮಂಗಳೂರು: ಹಣಕಾಸು ವಂಚನೆ ಪ್ರಕರಣಕ್ಕೆ ಸಂಬಂಧಿಸಿ ಮುಂಬೈ ಉದ್ಯಮಿ ಕಳತ್ತೂರು ವಿಶ್ವನಾಥ್ ಶೆಟ್ಟಿ ಬಂಧನ‌

ಸಮಗ್ರನ್ಯೂಸ್: ಹಣಕಾಸು ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈ ಉದ್ಯಮಿ ಕಳತ್ತೂರು ವಿಶ್ವನಾಥ ಶೆಟ್ಟಿ ಎಂಬವರನ್ನು ಮಂಗಳೂರು ಸೈಬರ್ ಕ್ರೈಂ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಎರಡು ದಿನಗಳ ಹಿಂದೆ ಮುಂಬೈನಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿದ ಅವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಮಂಗಳೂರಿನ ಹೆಸರಾಂತ ಕಟ್ಟಡ ನಿರ್ಮಾಣ ಸಂಸ್ಥೆ ʼರೋಹನ್ ಕಾರ್ಪೊರೇಷನ್ʼ ಆಡಳಿತ ನಿರ್ದೇಶಕ ರೋಹನ್ ಮುಂತೇರು ಮತ್ತು ತೊಕ್ಕೊಟ್ಟಿನ ಹರ್ಷ ಫೈನಾನ್ಸ್ ಮಾಲಕ ಹರೀಶ್ ಎಂಬವರಿಗೆ, 1. 75 ಕೋಟಿ ರೂಗಳನ್ನು ವಿಶ್ವನಾಥ್ ಶೆಟ್ಟಿ

ಮಂಗಳೂರು: ಹಣಕಾಸು ವಂಚನೆ ಪ್ರಕರಣಕ್ಕೆ ಸಂಬಂಧಿಸಿ ಮುಂಬೈ ಉದ್ಯಮಿ ಕಳತ್ತೂರು ವಿಶ್ವನಾಥ್ ಶೆಟ್ಟಿ ಬಂಧನ‌ Read More »

ರಾಜಕಾರಣ ಬದಿಗೊತ್ತಿ ಸಿಎಂ ಭೇಟಿ ಮಾಡಿ ಮಗನ ಮದುವೆ ಆಮಂತ್ರಣ ನೀಡಿದ ಸುಮಲತಾ

ಸಮಗ್ರ ನ್ಯೂಸ್: ರಾಜಕೀಯ ಕೆಸರೆರಚಾಟಗಳನ್ನು ಬದಿಗೊತ್ತಿದ ಸುಮಲತಾ ಅಂಬರೀಷ್ ಅವರು, ಮುಖ್ಯಮಂತ್ರಿ ಸಿದ್ದರಾಯ್ಯ ಅವರನ್ನು ಸೋಮವಾರ ಭೇಟಿ ಮಾಡಿದ್ದು, ಪುತ್ರ ಅಭಿಷೇಕ್ ಅಂಬರೀಷ್ ಮದುವೆಗೆ ಆಹ್ವಾನಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ, ಆಮಂತ್ರಣ ಪತ್ರಿಕೆ ನೀಡಿದ ಫೋಟೋಗಳನ್ನ ಸ್ವತಃ ಸುಮಲತಾ ಅವರೇ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ಅಭಿಷೇಕ್ ಅಂಬರೀಶ್ ಅವರ ವಿವಾಹ ಮಾಡೆಲ್ ಅವಿವಾ ಬಿದ್ದಪ್ ಜೊತೆಗೆ ಫಿಕ್ಸ್ ಆಗಿದ್ದು, ಜೂನ್ 5ರಂದು ಅದ್ದೂರಿಯಾಗಿ ವಿವಾಹ ಕಾರ್ಯಕ್ರಮ ಜರುಗಲಿದೆ. ಜೂನ್ 7ರಂದು ಭರ್ಜರಿಯಾಗಿ ಆರತಕ್ಷತೆ ಸಮಾರಂಭ

ರಾಜಕಾರಣ ಬದಿಗೊತ್ತಿ ಸಿಎಂ ಭೇಟಿ ಮಾಡಿ ಮಗನ ಮದುವೆ ಆಮಂತ್ರಣ ನೀಡಿದ ಸುಮಲತಾ Read More »

ಸುಬ್ರಹ್ಮಣ್ಯ: ಕಾಂಗ್ರೆಸ್ ಕಾರ್ಯಕರ್ತನಿಗೆ ಹಲ್ಲೆ ಪ್ರಕರಣ| ‘ ಸ್ಥಳದಲ್ಲಿರದ ನನ್ನ ತಂದೆ ವಿರುದ್ಧ ಷಡ್ಯಂತ್ರ ಮಾಡಲಾಗಿದೆ’| ಸುಂದರ ಗುಡ್ಡನಮನೆ ಪುತ್ರನಿಂದ ಸ್ಪಷ್ಟನೆ

ಸಮಗ್ರ ನ್ಯೂಸ್: ಮೇ.27 ರಂದು ಕೊಲ್ಲಮೊಗ್ರುವಿನ ಕಟ್ಟದಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತನ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ಹಲ್ಲೆ ನಡೆದಾಗ ಸ್ಥಳದಲ್ಲಿ ನನ್ನ ತಂದೆ ಸುಂದರ ಅವರು ಸ್ಥಳದಲ್ಲಿ ಇಲ್ಲದಿದ್ದರೂ ದುರುದ್ದೇಶದಿಂದ ಪ್ರಕರಣದಲ್ಲಿ ಸಿಲುಕಿಸಲಾಗಿದೆ ಎಂದು ಸುಂದರ ಗುಡ್ಡನಮನೆ ಅವರ ಮಗ ಪವನ್ ಸ್ಪಷ್ಟನೆ ನೀಡಿದ್ದಾರೆ. ಘಟನೆ ನಡೆದ ದಿನ ನನ್ನ ತಂದೆ ಗುತ್ತಿಗಾರಿಗೆ ಪೆಟ್ರೋಲ್ ತರಲೆಂದು ಮನೆಯಿಂದ ಹೊರಟಿದ್ದು ಕಲ್ಮಕಾರಿ ಗೆ ಬಂದಾಗ ಸತೀಶ್ ಟಿ.ಎನ್ ರವರು ಸಿಕ್ಕಿದ್ದು ಇವರೊಂದಿಗೆ ತಂದೆಯವರು ಹರಿಹರ ತನಕ ಬರುತ್ತೇನೆಂದು

ಸುಬ್ರಹ್ಮಣ್ಯ: ಕಾಂಗ್ರೆಸ್ ಕಾರ್ಯಕರ್ತನಿಗೆ ಹಲ್ಲೆ ಪ್ರಕರಣ| ‘ ಸ್ಥಳದಲ್ಲಿರದ ನನ್ನ ತಂದೆ ವಿರುದ್ಧ ಷಡ್ಯಂತ್ರ ಮಾಡಲಾಗಿದೆ’| ಸುಂದರ ಗುಡ್ಡನಮನೆ ಪುತ್ರನಿಂದ ಸ್ಪಷ್ಟನೆ Read More »

ಬೆಳ್ತಂಗಡಿ: ಮಹೇಶ್ ಶೆಟ್ಟಿ ತಿಮರೋಡಿ ಪರ ವಾಟ್ಸಾಪ್ ಸ್ಟೇಟಸ್.. ಮೊಬೈಲ್ ಅಂಗಡಿ ಉದ್ಯೋಗಿಗೆ ಹಲ್ಲೆ!

ಸಮಗ್ರನ್ಯೂಸ್: ಮಹೇಶ್ ಶೆಟ್ಟಿ ತಿಮರೋಡಿ ಪರ ವಾಟ್ಸಾಪ್ ಸ್ಟೇಟಸ್ ಹಾಕಿದ ವಿಚಾರಕ್ಕೆ ಸಂಬಂಧಿಸಿ ಜಾತಿ ನಿಂದನೆ ಮಾಡಿ ಹಲ್ಲೆ ನಡೆಸಿ ಜೀವ ಬೆದರಿಕೆ ಒಡ್ಡಿದ ಆರೋಪದಡಿ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ. ಬೆಳ್ತಂಗಡಿ ಕಸಬಾ ಗ್ರಾಮದ ರೆಂಕೆದಗುತ್ತು ಕೆಂಬರ್ಜೆಯ ಶೇಖರ ನಾಯ್ಕ ಎಂಬವರ ಪುತ್ರ ಯಶವಂತ ನಾಯ್ಕ(19ವ)ರವರು ನೀಡಿದ ದೂರಿನಂತೆ ಉಮೇಶ್ ಕುಲಾಲ್, ರಂಜಿತ್ ಮತ್ತಿತರರ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಕಲಂ 504, 506, 323 ಜೊತೆಗೆ 34 ಐಪಿಸಿ ಮತ್ತು ಕಲಂ 3(1)(S)

ಬೆಳ್ತಂಗಡಿ: ಮಹೇಶ್ ಶೆಟ್ಟಿ ತಿಮರೋಡಿ ಪರ ವಾಟ್ಸಾಪ್ ಸ್ಟೇಟಸ್.. ಮೊಬೈಲ್ ಅಂಗಡಿ ಉದ್ಯೋಗಿಗೆ ಹಲ್ಲೆ! Read More »

ಚಿಕ್ಕಮಗಳೂರು: ಸಾವಿರಾರು ಹಾವುಗಳನ್ನು ಸೆರೆ ಹಿಡಿದಿದ್ದ ಉರಗ ತಜ್ಞ ಸಾವು|ಚೀಲದ ತುಂಬೆಲ್ಲಾ ಹಾವೋ… ಹಾವು…

ಸಮಗ್ರ ನ್ಯೂಸ್: ಚಿಕ್ಕಮಗಳೂರು ಜಿಲ್ಲೆಯಾದ್ಯಂತ “ಸ್ನೇಕ್ ನರೇಶ್” ಎಂದೇ ಖ್ಯಾತಿ ಪಡೆದಿದ್ದ ಉರಗ ತಜ್ಞ ನರೇಶ್(51) ಸೆರೆ ಹಿಡಿದಿದ್ದ ಹಾವಿನಿಂದಲೇ ಜೀವಾಂತ್ಯ ಕಂಡಿದ್ದಾರೆ. ಬೆಳಗ್ಗೆ ನಾಗರಹಾವು ಹಿಡಿದುಕೊಂಡು ಬಂದಿದ್ದ ನರೇಶ್ ಮಧ್ಯಾಹ್ನ ಮತ್ತೊಂದು ಹಾವು ಹಿಡಿಯಲು ಕರೆ ಬಂತೆಂದು ಸ್ಕೂಟಿಯಲ್ಲಿದ್ದ ಹಾವಿನ ಚೀಲದ ಗಂಟು ಬಿಗಿ ಮಾಡಲು ಡಿಕ್ಕಿ ಓಪನ್ ಮಾಡಿದ್ದರು. ಈ ಸಂದರ್ಭದಲ್ಲಿ ಡಿಕ್ಕಿ ಓಪನ್ ಆದ ಕೂಡಲೇ ನಾಗರಹಾವು ಕಚ್ವಿರುವುದಾಗಿ ತಿಳಿದುಬಂದಿದೆ. ತಕ್ಷಣ ಅವರನ್ನು ಆಸ್ಪತ್ರೆಗೆ ಕರೆತರಲಾದರು ದಾರಿ ಮಧ್ಯದಲ್ಲೇ ಸಾವನ್ನಪ್ಪಿದರು. ಇನ್ನು ಇವರು

ಚಿಕ್ಕಮಗಳೂರು: ಸಾವಿರಾರು ಹಾವುಗಳನ್ನು ಸೆರೆ ಹಿಡಿದಿದ್ದ ಉರಗ ತಜ್ಞ ಸಾವು|ಚೀಲದ ತುಂಬೆಲ್ಲಾ ಹಾವೋ… ಹಾವು… Read More »

ಕರಾವಳಿಯಲ್ಲಿ ಖಾಸಗಿ ಬಸ್ ಗಳಿಗೂ ಉಚಿತ ಪ್ರಯಾಣ ಸೌಲಭ್ಯ ವಿಸ್ತರಿಸಿ – ಶಾಸಕ ಸುನಿಲ್ ಕುಮಾರ್

ಸರ್ಕಾರಿ ಬಸ್‌ ಗಳೊಂದಿಗೆ ಖಾಸಗಿ ಬಸ್‌ ಗಳಲ್ಲಿಯೂ ಮಹಿಳೆಯರಿಗೆ ಉಚಿತ ಪ್ರಯಾಣದ ಸೌಲಭ್ಯವನ್ನು ಕಲ್ಪಿಸಬೇಕೆಂದು ಶಾಸಕ ಸುನಿಲ್ ಕುಮಾರ್ ಆಗ್ರಹಿಸಿದ್ದಾರೆ. ಕಾಂಗ್ರೆಸ್ ಗ್ಯಾರಂಟಿಗಳಲ್ಲಿ ಒಂದಾದ ರಾಜ್ಯದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಅನುಷ್ಠಾನಕ್ಕೆ ಬರುವುದಾಗಿ ನೂತನ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಭರವಸೆ ನೀಡಿದ್ದಾರೆ. ಇದರ ಬೆನ್ನಲ್ಲೇ ಟ್ವೀಟ್ ಮಾಡಿರುವ ಸುನಿಲ್ ಕುಮಾರ್ ಉಡುಪಿ, ದಕ್ಷಿಣ ಕನ್ನಡ ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿನ ಜನರಿಗೆ ಇದರಿಂದ ಅನ್ಯಾಯವಾಗಲಿದೆ ಎಂದು ಹೇಳಿದ್ದಾರೆ. ಈ ಬಗ್ಗೆ ಸುನಿಲ್ ಕುಮಾರ್ ಟ್ವೀಟ್‌ನಲ್ಲಿ ಬರೆದುಕೊಂಡಿದ್ದು, ಉಡುಪಿ,

ಕರಾವಳಿಯಲ್ಲಿ ಖಾಸಗಿ ಬಸ್ ಗಳಿಗೂ ಉಚಿತ ಪ್ರಯಾಣ ಸೌಲಭ್ಯ ವಿಸ್ತರಿಸಿ – ಶಾಸಕ ಸುನಿಲ್ ಕುಮಾರ್ Read More »