ಕರಾವಳಿ

‘ಗೃಹಲಕ್ಷ್ಮಿ’ ಯೋಜನೆಯಡಿ ಅತ್ತೆಗೆ ಮಾತ್ರ ₹ 2000!?

ಸಮಗ್ರ ನ್ಯೂಸ್: ಕಾಂಗ್ರೆಸ್ ನೀಡಿದ್ದ ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯಂತೆ ಪ್ರತಿ ತಿಂಗಳು ಮನೆಯ ಒಡತಿಗೆ 2 ಸಾವಿರ ರೂಪಾಯಿ ಕೊಡುತ್ತೇವೆ ಎಂದು ಸರ್ಕಾರ ಹೇಳುತ್ತಿದೆ. ಇದೀಗ ಮನೆಯೊಡತಿ ಯಾರು ಎನ್ನುವುದನ್ನು ಗುರುತಿಸುವುದೇ ಸರ್ಕಾರಕ್ಕೆ ದೊಡ್ಡ ಸವಾಲಾಗಿ ಪರಿಣಮಿಸಿತ್ತು. ಇದಕ್ಕೆ ಕಾರಣ ಅವಿಭಕ್ತ ಕುಟುಂಬಗಳು. ಹೌದು ಅವಿಭಕ್ತ ಕುಟುಂಬಗಳಲ್ಲಿ 2000 ಸಾವಿರ ರೂಪಾಯಿಯನ್ನು ಅತ್ತೆಗೆ ಕೊಡಬೇಕಾ ಅಥವಾ ಸೊಸೆಗೆ ಕೊಡಬೇಕಾ ಎನ್ನುವುದು ಗೊಂದಲ ಸೃಷ್ಟಿಸಿತ್ತು. ಬೆಳಗಾವಿಯಲ್ಲಿ ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​, ನಮ್ಮ

‘ಗೃಹಲಕ್ಷ್ಮಿ’ ಯೋಜನೆಯಡಿ ಅತ್ತೆಗೆ ಮಾತ್ರ ₹ 2000!? Read More »

ಕಡಬದ ಯುವಕ ವಿದೇಶದಲ್ಲಿ ಆತ್ಮಹತ್ಯೆ

ಸಮಗ್ರ ನ್ಯೂಸ್: ಕಡಬ ತಾಲೂಕಿನ ಕೊಯಿಲ ಗ್ರಾಮದ ಯುವಕನೋರ್ವ ವಿದೇಶದಲ್ಲಿ ತನ್ನ ಕೊಠಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಕೊಯಿಲ ಗ್ರಾಮದ ಸುಣ್ಣಾಡಿ ನಿವಾಸಿ ದಿ|ಮೋನಪ್ಪ ಪೂಜಾರಿಯವರ ಪುತ್ರ ಅವಿವಾಹಿತ ಸಂದೇಶ್ (32) ಎಂದು ಗುರುತಿಸಲಾಗಿದೆ. ಇವರು ಕೊಲ್ಲಿ ರಾಷ್ಟ್ರದ ಓಮನ್ ದೇಶದ ಮಸ್ಕತ್‌ನಲ್ಲಿ ನೀರಿನ ಕಂಪನಿಯೊಂದರಲ್ಲಿ ಲೈನ್ ಸೇಲ್ ಉದ್ಯೋಗ ಮಾಡುತ್ತಿದ್ದು, ಎಂಟು ತಿಂಗಳ ಹಿಂದೆಯಷ್ಟೆ ಕೆಲಸಕ್ಕೆ ಸೇರಿದ್ದರು. ಇವರ ಸಹೋದರ ಸಂತೋಷ್ ಕೂಡಾ ಮಸ್ಕತ್‌ನಲ್ಲೇ ಉದ್ಯೋಗದಲ್ಲಿದ್ದು ಒಂದೇ

ಕಡಬದ ಯುವಕ ವಿದೇಶದಲ್ಲಿ ಆತ್ಮಹತ್ಯೆ Read More »

ಕುಕ್ಕೆಸುಬ್ರಮಣ್ಯ: ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಬಿಜೆಪಿ ಬೆಂಬಲಿಗರಿಂದ ಮಾರಣಾಂತಿಕ ಹಲ್ಲೆ

ಸಮಗ್ರ ನ್ಯೂಸ್: ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಬಿಜೆಪಿ ಬೆಂಬಲಿತರು ಮಾರಣಾಂತಿಕವಾಗಿ ಹಲ್ಲೆ ಮಾಡಿರುವ ಸಂಬಂಧ ಸುಬ್ರಮಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೊಲ್ಲಮೊಗ್ರು ಗ್ರಾಪಂ ಮಾಜಿ ಅಧ್ಯಕ್ಷ ಟಿ.ಎನ್.ಸತೀಶ್, ಮಾಜಿ ಉಪಾಧ್ಯಕ್ಷ ಮಣಿಕಂಠ ಮತ್ತು ಇವರ ಬೆಂಬಲಿಗರಾದ ದುರ್ಗಾದಾಸ್ ಬಂಬಿಲ, ಸುಂದರ ಗುಡ್ಡನ ಮನೆ ಎಂಬವರು ಕಾಂಗ್ರೆಸ್ ಕಾರ್ಯಕರ್ತರಾದ ಕುಮಾರ್‌ ಎಂಬವರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಹತ್ತು ದಿನಗಳ ಹಿಂದೆ ಬಿಜೆಪಿಯ ಬೆಂಬಲಿತ ಮಣಿಕಂಠ ಮತ್ತು ಕಾಂಗ್ರೆಸ್ ಕಾರ್ಯಕರ್ತ ಕುಮಾರ್‌ ಎಂಬವರ ನಡುವೆ ಕೌಟುಂಬಿಕ

ಕುಕ್ಕೆಸುಬ್ರಮಣ್ಯ: ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಬಿಜೆಪಿ ಬೆಂಬಲಿಗರಿಂದ ಮಾರಣಾಂತಿಕ ಹಲ್ಲೆ Read More »

ಐದು ಲಕ್ಷಕ್ಕೂ ಅಧಿಕ ವೀಕ್ಷಣೆಯೊಂದಿಗೆ ಭರ್ಜರಿ ಹವಾ ಸೃಷ್ಟಿಸಿದೆ ಬೇರ ಸಿನಿಮಾದ ಟ್ರೈಲರ್

ಸಮಗ್ರ ನ್ಯೂಸ್: ದಿವಾಕರ್ ದಾಸ್ ನೇರ್ಲಾಜೆ ನಿರ್ಮಾಣದ ಎಸ್ ಎಲ್ ವಿ ಕಲರ್ಸ್ ಲಾಂಛನದಲ್ಲಿ ಮೂಡಿಬಂದ ವಿನು ಬಳಂಜ ನಿರ್ದೇಶನದ ಬೇರ ಸಿನಿಮಾದ ಟೀಸರ್ ನ್ನು ಕರುನಾಡ ಚಕ್ರವರ್ತಿ ಡಾ. ಶಿವರಾಜ್ ಕುಮಾರ್ ರವರು ಬಿಡುಗಡೆಗೊಳಿಸಿದ್ದು ಈಗಾಗಲೇ ಹತ್ತು ಲಕ್ಷಕ್ಕೂ ಅಧಿಕ ವೀಕ್ಷಣೆ ಪಡೆದು ಭಾರೀ ವೈರಲ್ ಆಗ್ತಾ ಇದೆ. ಇದೀಗ ಬೇರ ಚಿತ್ರದ ಟ್ರೈಲರ್ ಆನಂದ್ ಆಡಿಯೋ ಯೂಟ್ಯೂಬ್ ಚಾನೆಲ್‌ನಲ್ಲಿ ಬಿಡುಗಡೆಗೊಂಡಿದ್ದು, ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆಯವರು ವೀಕ್ಷಿಸಿ ಶುಭ

ಐದು ಲಕ್ಷಕ್ಕೂ ಅಧಿಕ ವೀಕ್ಷಣೆಯೊಂದಿಗೆ ಭರ್ಜರಿ ಹವಾ ಸೃಷ್ಟಿಸಿದೆ ಬೇರ ಸಿನಿಮಾದ ಟ್ರೈಲರ್ Read More »

ಯಾವುದೇ ಷರತ್ತುಗಳಿಲ್ಲದೆ ಮಹಿಳೆಯರಿಗೆ ಸಾರಿಗೆ ಬಸ್ ನಲ್ಲಿ ಉಚಿತ ಪ್ರಯಾಣ| ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಘೋಷಣೆ

ಸಮಗ್ರ ನ್ಯೂಸ್: ರಾಜ್ಯದ ಎಲ್ಲ ಮಹಿಳೆಯರಿಗೆ ಸಾರಿಗೆ ಬಸ್ ಗಳಲ್ಲಿ ಉಚಿತ ಪ್ರಯಾಣ ಹಾಗೂ ಬಿಪಿಎಲ್, ಎಪಿಎಲ್ ಸೇರಿದಂತೆ ಯಾವುದೇ ಷರತ್ತುಗಳಿಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಘೋಷಣೆ ಮಾಡಿದ್ದಾರೆ. ನಾಳೆ ಸಿಎಂ ಸಚಿವರ ಸಭೆ ಕರೆದಿದ್ದಾರೆ. ಸಭೆಯಲ್ಲಿ ಸಂಪೂರ್ಣ ಮಾಹಿತಿಯನ್ನು ನೀಡಲಾಗುವುದು. ನಾವು ನಮ್ಮ ಪ್ರಣಾಳಿಕೆಯಲ್ಲಿ ಯಾವುದೇ ಷರತ್ತು ಹಾಕಿಲ್ಲ. ಎಲ್ಲ ಮಹಿಳೆಯರಿಗೂ ಉಚಿತ ಪ್ರಯಾಣ ಖಚಿತ ಎಂದು ತಿಳಿಸಿದ್ದಾರೆ. ಕೊರೋನಾ ಸಂದರ್ಭದಲ್ಲಾದ ನಷ್ಟದ ಬಗ್ಗೆ ಚರ್ಚೆ ನಡೆಸಿದ್ದೇನೆ. ನಮ್ಮ ಸಾರಿಗೆ ಇಲಾಖೆ ದೇಶದಲ್ಲೇ ಪ್ರತಿಷ್ಠಿತ

ಯಾವುದೇ ಷರತ್ತುಗಳಿಲ್ಲದೆ ಮಹಿಳೆಯರಿಗೆ ಸಾರಿಗೆ ಬಸ್ ನಲ್ಲಿ ಉಚಿತ ಪ್ರಯಾಣ| ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಘೋಷಣೆ Read More »

ಬಳಕೆದಾರರೇ ಗಮನಿಸಿ| ಗ್ಯಾರಂಟಿ ನಂಬಿ ಬಿಲ್ ಕಟ್ಟದಿದ್ರೆ ಕನೆಕ್ಷನ್ ಕಟ್ ಆಗುತ್ತೆ!!

ಸಮಗ್ರ ನ್ಯೂಸ್: ಕರೆಂಟ್ ಬಿಲ್ ಕಟ್ಟದ ಜನತೆಗೆ ಇಂಧನ ಇಲಾಖೆ ಶಾಕ್ ನೀಡಿದ್ದು, ಕರೆಂಟ್ ಬಿಲ್ ಕಟ್ಟದಿದ್ದರೆ ಕನೆಕ್ಷನ್ ಕಟ್ ಮಾಡುವಂತೆ ಎಲ್ಲಾ ಎಸ್ಕಾಂಗಳಿಗೆ ಖಡಕ್ ಸೂಚನೆ ನೀಡಿದೆ. ರಾಜ್ಯ ಕಾಂಗ್ರೆಸ್ ಸರ್ಕಾರ ಘೋಷಿಸಿದ್ದ ಗೃಹಜ್ಯೋತಿ ಗ್ಯಾರಂಟಿ ಯೋಜನೆ ಇನ್ನೂ ಜಾರಿಯಾಗಿಲ್ಲ. ಆದರೆ ಜನರು ಕರೆಂಟ್ ಬಿಲ್ ಕಟ್ಟಲು ಹಿಂದೇಟು ಹಾಕುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಇಂಧನ ಇಲಾಖೆ ಕರೆಂಟ್ ಬಿಲ್ ಕಟ್ಟದಿದ್ದರೆ ಕನೆಕ್ಷನ್ ಕಟ್ ಮಾಡುವಂತೆ ರಾಜ್ಯದ ಎಲ್ಲಾ ಎಸ್ಕಾಂಗಳಿಗೆ ಸೂಚನೆ ನೀಡಿದೆ. ಜನರು ಬಾಕಿ ಇರುವ,

ಬಳಕೆದಾರರೇ ಗಮನಿಸಿ| ಗ್ಯಾರಂಟಿ ನಂಬಿ ಬಿಲ್ ಕಟ್ಟದಿದ್ರೆ ಕನೆಕ್ಷನ್ ಕಟ್ ಆಗುತ್ತೆ!! Read More »

ರಾಜ್ಯದಲ್ಲಿ ಪೂರ್ವಮುಂಗಾರು ಅಬ್ಬರ; ಸಿಡಿಲಿಗೆ ನಾಲ್ವರು ಬಲಿ| ಮುಂದಿನ ಮೂರು ದಿನ ಭಾರೀ‌ ಮಳೆ‌ ಸಾಧ್ಯತೆ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಮುಂಗಾರಿಗೂ ಮುನ್ನವೇ ವರುಣನ ಅಬ್ಬರ ಜೋರಾಗಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಇನ್ನೂ 3 ದಿನ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲವೆಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೊಡಗು, ಚಾಮರಾಜನಗರ, ತುಮಕೂರು, ಮಂಡ್ಯ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ರಾಮನಗರ ಜಿಲ್ಲೆಗಳಲ್ಲಿ ಜೂನ್ 2ರವರೆಗೂ ಅಧಿಕ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಮೇ.

ರಾಜ್ಯದಲ್ಲಿ ಪೂರ್ವಮುಂಗಾರು ಅಬ್ಬರ; ಸಿಡಿಲಿಗೆ ನಾಲ್ವರು ಬಲಿ| ಮುಂದಿನ ಮೂರು ದಿನ ಭಾರೀ‌ ಮಳೆ‌ ಸಾಧ್ಯತೆ Read More »

ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯಿಂದ ಮೇಜರ್ ಸರ್ಜರಿ| ಮೂರು ಲಕ್ಷಕ್ಕೂ ಅಧಿಕ ಅನರ್ಹ ಪಡಿತರ ಕಾರ್ಡ್ ಗಳು ರದ್ದು

ಸಮಗ್ರ ನ್ಯೂಸ್: ಸುಳ್ಳು ಮಾಹಿತಿ ನೀಡಿ ಪಡಿತರ ಚೀಟಿ ಪಡೆದವರಿಗೆ ಆಹಾರ ಇಲಾಖೆ ಬಿಗ್ ಶಾಕ್ ನೀಡಿದೆ. ನಿಯಮ ಉಲ್ಲಂಘಿಸಿ ರಾಜ್ಯಾದ್ಯಂತ ಆರ್ಥಿಕ ಸಬಲರು ಪಡೆದಿದ್ದ, ಮೂರು ಲಕ್ಷಕ್ಕೂ ಅಧಿಕ ರೇಷನ್ ಕಾರ್ಡ್ ಗಳನ್ನು ರದ್ದುಪಡಿಸಲಾಗಿದೆ. ಆಹಾರ ಇಲಾಖೆಯ ಮಾಹಿತಿ ಪ್ರಕಾರ ರಾಜ್ಯಾದ್ಯಂತ 3,30,002 ರೇಷನ್ ಕಾರ್ಡ್ ಗಳನ್ನು ರದ್ದುಪಡಿಸಲಾಗಿದೆ. ಇದರಲ್ಲಿ 21,679 ಅಂತ್ಯೋದಯ ಮತ್ತು 3,08,345 ಬಿಪಿಎಲ್ ಕಾರ್ಡ್ ಗಳಿವೆ. ಕೆಲ ಕಾರ್ಡ್ ಗಳನ್ನು ಎಪಿಎಲ್ ಗೂ ಪರಿವರ್ತಿಸಲಾಗಿದೆ. ಬೆಂಗಳೂರಿನಲ್ಲಿ 34,705, ವಿಜಯಪುರದಲ್ಲಿ 28, 735,

ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯಿಂದ ಮೇಜರ್ ಸರ್ಜರಿ| ಮೂರು ಲಕ್ಷಕ್ಕೂ ಅಧಿಕ ಅನರ್ಹ ಪಡಿತರ ಕಾರ್ಡ್ ಗಳು ರದ್ದು Read More »

ಮಂಗಳೂರು: ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ | ಪ್ರಾಕೃತಿಕ ವಿಕೋಪಗಳಿಂದಾಗುವ ಹಾನಿಗಳ ತಡೆಗೆ ಯತ್ನಿಸಲು ಸ್ವೀಕರ್ ಯು.ಟಿ. ಖಾದರ್ ಸೂಚನೆ

ಸಮಗ್ರನ್ಯೂಸ್: ರಾಜ್ಯ ವಿಧಾನಸಭಾ ಅಧ್ಯಕ್ಷ ಯು.ಟಿ ಖಾದರ್‌ ಮೇ.29 ರಂದು ಮಂಗಳೂರಿನಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆಯನ್ನು ನಡೆಸಿದ್ದಾರೆ. ಮಳೆಗಾಲದಲ್ಲಿ ಪ್ರಾಕೃತಿಕ ವಿಕೋಪದ ಸಂದರ್ಭದಲ್ಲಿ ಪೂರ್ವ ಸಿದ್ಧತೆಯೊಂದಿಗೆ ಕಾರ್ಯನಿರ್ವಹಿಸಲು ಜಿಲ್ಲೆಯ ವಿವಿಧ ಇಲಾಖೆಗಳ ಉನ್ನತ ಮಟ್ಟದ ಅಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿ, ತುರ್ತು ಸಂದರ್ಭದಲ್ಲಿ ಜನರಿಗೆ ನೆರವು ನೀಡಲು ಕಟ್ರೋಲ್ ರೂಂ ಆರಂಭಿಸಲು ಜಿಲ್ಲಾಡಳಿತ, ಸ್ಥಳೀಯಾಡಳಿತ ಸಂಸ್ಥೆಗಳಿಗೆ ಸೂಚನೆ ನೀಡಿರುವುದಾಗಿ ಯು.ಟಿ.ಖಾದರ್ ತಿಳಿಸಿದ್ದಾರೆ. ಪ್ರಾಕೃತಿಕ ವಿಕೋಪ, ಮಳೆ ಹಾನಿಗೆ ಸಂಬಂಧಿಸಿದಂತೆ ತುರ್ತು ನೆರವು ನೀಡಲು ಜಿಲ್ಲೆಗೆ ರೂ.3.5ಕೋಟಿ ನಿಧಿ

ಮಂಗಳೂರು: ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ | ಪ್ರಾಕೃತಿಕ ವಿಕೋಪಗಳಿಂದಾಗುವ ಹಾನಿಗಳ ತಡೆಗೆ ಯತ್ನಿಸಲು ಸ್ವೀಕರ್ ಯು.ಟಿ. ಖಾದರ್ ಸೂಚನೆ Read More »

ಭಾರೀ ಗಾಳಿ ಮಳೆ| ಕಡಬ- ಸುಬ್ರಹ್ಮಣ್ಯ ಸಂಪರ್ಕ ರಸ್ತೆ ಸಂಚಾರ ಅಸ್ತವ್ಯಸ್ತ

ಸಮಗ್ರ ನ್ಯೂಸ್: ವಿಪರೀತ ಗಾಳಿ ಮತ್ತು ಮಳೆಯ ಪರಿಣಾಮ ಕಡಬ – ಸುಬ್ರಹ್ಮಣ್ಯ ರಸ್ತೆ ಸಂಚಾರ ಸಂಪೂರ್ಣ ಬಂದ್ ಆಗಿದೆ. ಮರ್ಧಾಳದಲ್ಲಿ ಪ್ರವಾಸಿಗರ ಟಿಟಿ ವಾಹನವೊಂದರ ಮೇಲೆ ಮರ ಬಿದ್ದ ಪರಿಣಾಮ ಪ್ರಯಾಣಿಕರು ಜಖಂಗೊಂಡಿದ್ದಾರೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ನೆಟ್ಟಣ, ಬಿಳಿನೆಲೆ, ಕೈಕಂಬ ಪ್ರದೇಶಗಳಲ್ಲಿ ರಸ್ತೆಗೆ ಮರಗಳು ಉರುಳಿದ ಪರಿಣಾಮ ರಸ್ತೆ ಸಂಪರ್ಕ ಬಂದ್ ಆಗಿದ್ದು ವಾಹನ ಸವಾರರು ಪರದಾಡುತ್ತಿದ್ದಾರೆ. ಸ್ಥಳಕ್ಕೆ ಕಡಬ ಪೊಲೀಸರು ಭೇಟಿ ನೀಡಿದ್ದು, ಅಗ್ನಿಶಾಮಕ ದಳ ತಂಡ ಕಾರ್ಯಾಚರಣೆ ನಡೆಸುತ್ತಿದೆ.

ಭಾರೀ ಗಾಳಿ ಮಳೆ| ಕಡಬ- ಸುಬ್ರಹ್ಮಣ್ಯ ಸಂಪರ್ಕ ರಸ್ತೆ ಸಂಚಾರ ಅಸ್ತವ್ಯಸ್ತ Read More »