ಕರಾವಳಿ

ಪ್ರಭಾಕರ್ ಭಟ್ ಹೇಳಿಕೆಗೆ ವಿರೋಧ ವ್ಯಕ್ತಪಡಿಸಿದ ಪ್ರಮೋದ್ ಮುತಾಲಿಕ್

ಸಮಗ್ರ ನ್ಯೂಸ್: ಪುತ್ತೂರಿನಲ್ಲಿ ನಡೆದ ಬ್ಯಾನರ್ ವಿವಾದದಲ್ಲಿ ಪೊಲೀಸರಿಂದ ಹಲ್ಲೆಗೊಳಲಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಿಂದೂ ಕಾರ್ಯಕರ್ತರ ಆರೋಗ್ಯವನ್ನು ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ವಿಚಾರಿಸಿದರು. ಪುತ್ತೂರಿಗೆ ಆಗಮಿಸಿದ ಅವರು ಆಸ್ಪತ್ರೆಗೆ ತೆರಳಿ ಪೊಲೀಸರಿಂದ ಹಲ್ಲೆಗೊಳಗಾದ ಹಿಂದೂ ಕಾರ್ಯಕರ್ತರ ಜೊತೆ ಮಾತುಕತೆ ನಡೆಸಿ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಪೊಲೀಸ್ ದೌರ್ಜನ್ಯವನ್ನು ಕಾಂಗ್ರೇಸ್ ಮೇಲೆ ಆರೋಪ ಹೊರಿಸಿದ ಆರ್ ಎಸ್ ಎಸ್ ಮುಖಂಡ ಕಲ್ಲಡ್ಕ್ ಪ್ರಭಾಕರ್ ಭಟ್ ಹೇಳಿಕೆಗೆ ವಿರೋಧ ವ್ಯಕ್ತಪಡಿಸಿದರು. ಪುತ್ತೂರಿನಲ್ಲಿ ನಡೆದ ಈ

ಪ್ರಭಾಕರ್ ಭಟ್ ಹೇಳಿಕೆಗೆ ವಿರೋಧ ವ್ಯಕ್ತಪಡಿಸಿದ ಪ್ರಮೋದ್ ಮುತಾಲಿಕ್ Read More »

ಕೆಟ್ಟು ನಿಂತ ಲಾರಿಗೆ ಕಾರು ಡಿಕ್ಕಿ

ಸಮಗ್ರ ನ್ಯೂಸ್: ಮಾಣಿ ಮೈಸೂರು ಹೆದ್ದಾರಿಯ ಕೊಯನಾಡು ಬಲಿ ಕೆಟ್ಟು ನಿಂತ ಲಾರಿಗೆ ಮಾರುತಿ 800 ಕಾರು ಡಿಕ್ಕಿಯಾದ ಘಟನೆ ಮೇ 20ರಂದು ಸಂಭವಿಸಿದೆ. ಮಡಿಕೇರಿಯಿಂದ ಸುಳ್ಯ ಕಡೆ ಹೋಗುತ್ತಿದ್ದ ಕಾರಿನಲ್ಲಿದ್ದ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.

ಕೆಟ್ಟು ನಿಂತ ಲಾರಿಗೆ ಕಾರು ಡಿಕ್ಕಿ Read More »

ಮುಳಿಯ ಜ್ಯುವೆಲ್ಸ್ ಪುತ್ತೂರು| ಇಂದು ಮೆಹೆಂದಿ ಸಂಭ್ರಮ!|

ಸಮಗ್ರ ನ್ಯೂಸ್: ಪುತ್ತೂರಿನ ಮುಳಿಯ ಜ್ಯುವೆಲ್ಸ್ ತನ್ನ ಚಿನ್ನೋತ್ಸವದ ‘ಮೆಹೆಂದಿ ಸಂಭ್ರಮ!’ ಆಚರಣೆಯೊಂದಿಗೆ ಹಮ್ಮಿಕೊಂಡಿದೆ. ಮೇ. 20 ರಂದು(ಇಂದು) ಮುಳಿಯ ಜ್ಯುವೆಲ್ಸ್ ಮಳಿಗೆಗೆ ಆಗಮಿಸುವ ಆಸಕ್ತ ಗ್ರಾಹಕರಿಗೆ ಮೆಹೆಂದಿ ಹಾಕಿಸಿಕೊಳ್ಳಲು ಇದು ಸುವರ್ಣಾವಕಾಶ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.

ಮುಳಿಯ ಜ್ಯುವೆಲ್ಸ್ ಪುತ್ತೂರು| ಇಂದು ಮೆಹೆಂದಿ ಸಂಭ್ರಮ!| Read More »

ಪುತ್ತೂರಿನಲ್ಲಿ ದೌರ್ಜನ್ಯ ನಡೆಸಲು ಒತ್ತಡ ಹಾಕಿದವರ ಹೆಸರು ಎರಡು ದಿನಗಳಲ್ಲಿ ಬಹಿರಂಗ ಮಾಡುವೆ – ಅಶೋಕ್ ಕುಮಾರ್ ರೈ

ಸಮಗ್ರ ನ್ಯೂಸ್: ಬ್ಯಾನರ್‌ಗೆ ಚಪ್ಪಲಿ ಹಾರ ಹಾಕಿರುವ ಆರೋಪಿಗಳಿಗೆ ಡಿವೈಎಸ್‍ಪಿ ಕಚೇರಿಯಲ್ಲಿ ದೌರ್ಜನ್ಯ ನಡೆಯಲು, ಬಾಸುಂಡೆ ಬರುವ ರೀತಿಯಲ್ಲಿ ಹಲ್ಲೆಯಾಗಲು ಅಧಿಕಾರಿಗಳಿಗೆ ಬಿಜೆಪಿ ನಾಯಕರ ಒತ್ತಡವೇ ಕಾರಣವಾಗಿದೆ, ಯಾರೆಲ್ಲಾ ಅಧಿಕಾರಿಗಳಿಗೆ ಕರೆ ಮಾಡಿ ಒತ್ತಡ ಹಾಕಿದ್ದಾರೋ ಅವರ ಹೆಸರನ್ನು ಎರಡು ದಿನದಲ್ಲಿ ಬಹಿರಂಗಪಡಿಸುವೆ ಎಂದು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ತಿಳಿಸಿದ್ದಾರೆ. ಬ್ಯಾನರ್ ಹಾಕಿದ ಆರೋಪಿಗಳಿಗೆ ಹಲ್ಲೆ ನಡೆಸಿದ್ದು ಕಾಂಗ್ರೆ‌ಸ್‌ನವರೇ, ಕಾಂಗ್ರೆಸ್ ಸರಕಾರ ಬಂದರೆ ಹೀಗೆಲ್ಲಾ ಆಗುತ್ತದೆ ಎಂದು ಪುತ್ತೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಹೇಳಿಕೆ ನೀಡಿದ ಕಲ್ಲಡ್ಕ

ಪುತ್ತೂರಿನಲ್ಲಿ ದೌರ್ಜನ್ಯ ನಡೆಸಲು ಒತ್ತಡ ಹಾಕಿದವರ ಹೆಸರು ಎರಡು ದಿನಗಳಲ್ಲಿ ಬಹಿರಂಗ ಮಾಡುವೆ – ಅಶೋಕ್ ಕುಮಾರ್ ರೈ Read More »

ಸುಳ್ಯ: ನಗರ ಪಂಚಾಯತ್ ಮಾಜಿ ಅಧ್ಯಕ್ಷರ ಮನೆಯಿಂದ ಚಿನ್ನಾಭರಣ ದರೋಡೆ ಪ್ರಕರಣ|ಬೆಂಗಳೂರಿನಲ್ಲಿ ಆರೋಪಿಗಳ ಬಂಧನ

ಸಮಗ್ರ ನ್ಯೂಸ್: ಸುಳ್ಯ ನಗರ ಪಂಚಾಯತ್ ಮಾಜಿ ಅಧ್ಯಕ್ಷ ಸಂಶುದ್ದೀನ್ ರವರ ಮನೆಗೆ ಮೇ. 3 ರಂದು ರಾತ್ರಿ ಕಳ್ಳರು ನುಗ್ಗಿ ಚಿನ್ನಾಭರಣ ಹಾಗೂ ನಗದು ದರೋಡೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಗಳನ್ನು ಬೆಂಗಳೂರು ಗೋವಿಂದರಾಜನಗರ ಪೊಲೀಸರು ಬಂಧಿಸಿರುವುದಾಗಿ ತಿಳಿದು ಬಂದಿದೆ. ಬೆಂಗಳೂರಿನಲ್ಲಿ ವ್ಯಕ್ತಿಯೊಬ್ಬ ಕಳ್ಳತನ ಮಾಡಿದ ಚಿನ್ನವನ್ನು ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದಾಗ, ಸಂಶಯಗೊಂಡ ಚಿನ್ನದಂಗಡಿಯವರು ಪೋಲೀಸರಿಗೆ ಮಾಹಿತಿ ನೀಡಿದರೆನ್ನಲಾಗಿದೆ. ಆ ವ್ಯಕ್ತಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಆತ ಮೈಸೂರಿನ ಇಬ್ಬರು ವ್ಯಕ್ತಿಗಳ ಹೆಸರು ಹೇಳಿದ.

ಸುಳ್ಯ: ನಗರ ಪಂಚಾಯತ್ ಮಾಜಿ ಅಧ್ಯಕ್ಷರ ಮನೆಯಿಂದ ಚಿನ್ನಾಭರಣ ದರೋಡೆ ಪ್ರಕರಣ|ಬೆಂಗಳೂರಿನಲ್ಲಿ ಆರೋಪಿಗಳ ಬಂಧನ Read More »

ಪೋಲೀಸ್ ದೌರ್ಜನ್ಯಕ್ಕೊಳಗಾದ ಯುವಕರನ್ನು ಭೇಟಿಯಾದ ಭಾಗೀರಥಿ ಮುರುಳ್ಯ

ಸಮಗ್ರ ನ್ಯೂಸ್: ಪುತ್ತೂರಿನಲ್ಲಿ ಅವಮಾನಕರ ಬ್ಯಾನರ್ ಹಾಕಿದ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರಿಂದ ದೌರ್ಜನ್ಯಕ್ಕೊಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಿಂದೂ ಕಾರ್ಯಕರ್ತರನ್ನು ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಆಸ್ಪತ್ರೆಯಲ್ಲಿ ಭೇಟಿ ಮಾಡಿ ಯೋಗ ಕ್ಷೇಮ ವಿಚಾರಿಸಿ ಸಾಂತ್ವನ ನೀಡಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿ ಅವರು ಹಿಂದೂ ಯುವಕರ ಮೇಲೆ ಈ ರೀತಿ ದೌರ್ಜನ್ಯ ನಡೆದಿರುವುದು ಖಂಡನೀಯ. ಸರಕಾರ ಬದಲಾಗಿ ಎರಡೇ ದಿವಸದಲ್ಲಿ ಹೀಗಾದರೆ ಮುಂದಿನ ಐದು ವರ್ಷದಲ್ಲಿ ನಮ್ಮ ಯುವಕರು ಪರಿಸ್ಥಿತಿ ಏನಾಗಬಹುದು ಎಂಬುದು ಚಿಂತೆಯಾಗಿದೆ.‌ ಹಿಂದುಗಳ

ಪೋಲೀಸ್ ದೌರ್ಜನ್ಯಕ್ಕೊಳಗಾದ ಯುವಕರನ್ನು ಭೇಟಿಯಾದ ಭಾಗೀರಥಿ ಮುರುಳ್ಯ Read More »

ಪುತ್ತೂರು: ಅಜಿತ್ ರೈ ಹೊಸಮನೆ ಅವರನ್ನು ತಳ್ಳಿ ಹೊರ ಹಾಕಿದ್ರ ಹಿಂದೂ ಕಾರ್ಯಕರ್ತರು?

ಸಮಗ್ರ ನ್ಯೂಸ್: ಬ್ಯಾನರ್ ಅಳವಡಿಕೆ ನಂತರ ಪುತ್ತೂರಿನಲ್ಲಿ ಗಂಭೀರ ನಾಟಕವೇ ನಡೆಯುತ್ತಿದೆ. ಬಿಜೆಪಿ ಕಾರ್ಯಕರ್ತರ ಮೇಲೆ ಪೊಲೀಸರು ಅಮಾನುಷವಾಗಿ ಹಲ್ಲೆ ಮಾಡಿದ್ದು ಎಲ್ಲೆಡೆ ಖಂಡನೆ ವ್ಯಕ್ತವಾಗುತ್ತಿದ್ದು, ಈ ಪ್ರಕರಣ ರಾಜ್ಯಾದ್ಯಂತ ಸುದ್ದಿಯಾಗಿತ್ತಿದೆ. ಈ ಸಮಯದಲ್ಲಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಪುತ್ತೂರಿಗೆ ಆಗಮಿಸಿ ಅರುಣ್ ಕುಮಾರ್ ಪುತ್ತಿಲ ಅವರೊಂದಿಗೆ ಹಲ್ಲೆಗೊಳಗಾದವರನ್ನು ಭೇಟಿ ಮಾಡಲು ಮುಂದಾಗಿದ್ದಾರೆ. ಈ ನಡುವೆ ಬಿಜೆಪಿಯ ಅಜಿತ್ ರೈ ಹೊಸಮನೆಯನ್ನು ಹಿಂದೂ ಕಾರ್ಯಕರ್ತರು ತಳ್ಳಿ ಹೊರಹಾಕಿದ ಘಟನೆ ನಡೆದಿದೆ. ಈ ಹಿಂದೆ ಹಿಂದೂ

ಪುತ್ತೂರು: ಅಜಿತ್ ರೈ ಹೊಸಮನೆ ಅವರನ್ನು ತಳ್ಳಿ ಹೊರ ಹಾಕಿದ್ರ ಹಿಂದೂ ಕಾರ್ಯಕರ್ತರು? Read More »

ಪುತ್ತೂರಿಗೆ: ಪೊಲೀಸರಿಂದ ದೌರ್ಜನ್ಯಕ್ಕೊಳಗಾದವರ ಭೇಟಿಯಾದ ಯತ್ನಾಳ್

ಸಮಗ್ರ ನ್ಯೂಸ್: ಬ್ಯಾನರ್‌ ಪ್ರಕರಣದಲ್ಲಿ ಪೊಲೀಸರಿಂದ ದೌರ್ಜನ್ಯಕ್ಕೆ ಒಳಗಾಗಿ ಆಸ್ಪತ್ರೆಯಲ್ಲಿ ದಾಖಲಾಗಿರುವ ಗಾಯಾಳುಗಳ ಯೋಗಕ್ಷೇಮವನ್ನು ವಿಚಾರಿಸಲು ಬಿಜೆಪಿ ಶಾಸಕ, ಮಾಜಿ ಕೇಂದ್ರ ಸಚಿವ ಬಸನಗೌಡ ಪಾಟೀಲ್‌ ಯತ್ನಾಳ್‌ ಪುತ್ತೂರಿಗೆ ಆಗಮಿಸಿದ್ದಾರೆ. ಮುಂಜಾನೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿ ಬಳಿಕ ಪುತ್ತೂರಿನ ಪಂಚಪಟಿಗೆ ಆಗಮಿಸಿದ್ದಾರೆ, ಈ ವೇಳೆ ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಸಹಿತ ಪಕ್ಷದ ಹಲವಾರು ಮಂದಿ ನಾಯಕರು ಉಪಸ್ಥಿತರಿದ್ದರು. ಬಳಿಕ ಅಲ್ಲಿಂದ ಪುತ್ತೂರಿನ ಮಹಹಾವೀರ ಆಸ್ಪತ್ರೆಗೆ ಆಗಮಿಸಿ ಪೊಲೀಸರಿಂದ ದೌರ್ಜನ್ಯಕ್ಕೆ ಒಳಗಾಗಿ ಆಸ್ಪತ್ರೆಯಲ್ಲಿ

ಪುತ್ತೂರಿಗೆ: ಪೊಲೀಸರಿಂದ ದೌರ್ಜನ್ಯಕ್ಕೊಳಗಾದವರ ಭೇಟಿಯಾದ ಯತ್ನಾಳ್ Read More »

ಸುಳ್ಯ: ಕೋಲ್ಚಾರು ವಯನಾಟ್ ಕುಲವನ್ ದೈವಂಕಟ್ಟು ಮಹೋತ್ಸವಕ್ಕೆ ವಿಧ್ಯುಕ್ತ ತೆರೆ| ಮೂರು ದಿನಗಳ ಭಕ್ತಿ ಸಂಭ್ರಮಕ್ಕೆ ಸಾಕ್ಷಿಯಾದ ಭಕ್ತಗಣ

ಸಮಗ್ರ ನ್ಯೂಸ್: ಕಲಿಯುಗದ ಪ್ರತ್ಯಕ್ಷ ದೈವನೆನಿಸಿದ ಶ್ರೀ ವಯನಾಟ್ ಕುಲವನ್ ಕೋಲ ರೂಪದಲ್ಲಿ ಅವತರಿಸಿ, ನೆರೆದ ಭಕ್ತ ಸಮೂಹಕ್ಕೆ ಚೈತನ್ಯ ಮೂರ್ತಿ ಪರಮಶಿವನ ಅಂಶಾವತಾರ ಶ್ರೀ ವಯನಾಟ್ ಕುಲವನ್ ದೈವ ಅಭಯ ನೀಡಿದ್ದು, ಕೋಲ್ಚಾರಿನಲ್ಲಿ ಮೂರು ದಿನಗಳ ದೈವಂಕಟ್ಟು ಮಹೋತ್ಸವ ಸಂಪನ್ನವಾಯಿತು. ವಯನಾಟ್ ಕುಲವನ್, ಶ್ರೀ ವಿಷ್ಣುಮೂರ್ತಿ ದೈವಗಳ ಕೊಲಗಳ ಸಮಾಗಮವಾಗುವುದರೊಂದಿಗೆ ಕೋಲ್ಚಾರು ಕುಟುಂಬಸ್ಥರ ಶ್ರೀ ವಯನಾಟ್ ಕುಲವನ್ ದೈವಸ್ಥಾನದಲ್ಲಿ ನಡೆದ ಶ್ರೀ ವಯನಾಟ್ ಕುಲವನ್ ದೈವಸ್ಥಾನದಲ್ಲಿ ಮೂರು ದಿನಗಳ ಕಾಲ ನಡೆದ ಶ್ರೀ ವಯನಾಟ್ ಕುಲವನ್

ಸುಳ್ಯ: ಕೋಲ್ಚಾರು ವಯನಾಟ್ ಕುಲವನ್ ದೈವಂಕಟ್ಟು ಮಹೋತ್ಸವಕ್ಕೆ ವಿಧ್ಯುಕ್ತ ತೆರೆ| ಮೂರು ದಿನಗಳ ಭಕ್ತಿ ಸಂಭ್ರಮಕ್ಕೆ ಸಾಕ್ಷಿಯಾದ ಭಕ್ತಗಣ Read More »

ಪುತ್ತೂರಿನಲ್ಲಿ ನಡೆದ ರಾಜಕೀಯ ಪ್ರೇರಿತ ದೌರ್ಜನ್ಯ ಖಂಡನೀಯ : ಆಮ್ ಆದ್ಮಿ ಪಾರ್ಟಿ

ಸಮಗ್ರ ನ್ಯೂಸ್: ಪುತ್ತೂರಿನಲ್ಲಿ ನಡೆದ ರಾಜಕೀಯ ಪ್ರೇರಿತ ದೌರ್ಜನ್ಯದ ಬಗ್ಗೆ ಆಮ್ ಆದ್ಮಿ ಪಾರ್ಟಿ ಖಂಡಿಸಿರುವುದಾಗಿ ಮಾದ್ಯಮಕ್ಕೆ ತಿಳಿಸಿದ್ದಾರೆ. ಕರಾವಳಿಯಲ್ಲಿ ಮತ ದ್ವೇಷ ರಾಜಕಾರಣ ಹೆಚ್ಚಾಗಿದ್ದು, ಜಾತಿ ರಾಜಕಾರಣಕ್ಕೆ ಕಾಲಿಟ್ಟು ಇದೀಗ ಪುತ್ತೂರಿನಲ್ಲಿ ರಾಜಕಾರಣಿಗಳ ಆಡಳಿತ, ಭ್ರಷ್ಟಾಚಾರ, ನಿರ್ಲಕ್ಷ ವಿರೋಧಿಸಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿ ಬ್ಯಾನರ್ ಅಳವಡಿಸಿದ ಪ್ರಕರಣದಲ್ಲಿ, ಅತ್ಯಂತ ಹೀನಾಯವಾಗಿ ದೈಹಿಕ ಹಲ್ಲೆ ಮತ್ತು ಮಾನಸಿಕ ಹಿಂಸೆ ನೀಡಲ್ಪಟ್ಟ ಘಟನೆ ಅತ್ಯಂತ ಖಂಡನೀಯವಾಗಿದೆ. ರಾಜಕೀಯ ಕಾರಣಕ್ಕಾಗಿ ಧರ್ಮ, ಜಾತಿ ಮತ್ತು ಪಕ್ಷದ ದೃಷ್ಟಿಯಿಂದ ಕಾನೂನಿನ ದುರುಪಯೋಗ

ಪುತ್ತೂರಿನಲ್ಲಿ ನಡೆದ ರಾಜಕೀಯ ಪ್ರೇರಿತ ದೌರ್ಜನ್ಯ ಖಂಡನೀಯ : ಆಮ್ ಆದ್ಮಿ ಪಾರ್ಟಿ Read More »