ಕರಾವಳಿ

ಹವಾಮಾನ ವರದಿ| ಈ ಬಾರಿ ಮುಂಗಾರು ಕೊಂಚ ವಿಳಂಬ| ಜೂ.4ರಂದು ಕೇರಳ ಪ್ರವೇಶ

ಸಮಗ್ರ ನ್ಯೂಸ್: ಕಳೆದ ವರ್ಷ ಮೇ 29ಕ್ಕೆ ಮುಂಗಾರು ರಾಜ್ಯಕ್ಕೆ ಪ್ರವೇಶಿಸಿತ್ತು. 2021 ರಲ್ಲಿ ಜೂನ್ 3, 2020ರಲ್ಲಿ ಜೂನ್ 1, 20019ರಲ್ಲಿ ಜೂನ್ 8 ಹಾಗೂ 2018 ರಲ್ಲಿ ಮೇ 29ಕ್ಕೆ ಕೇರಳಕ್ಕೆ ಮುಂಗಾರು ಆಗಮನವಾಗಿತ್ತು. ಆದರೆ ಈ ಬಾರಿ ಜೂನ್ 4ರ ವೇಳೆಗೆ ಕೇರಳಕ್ಕೆ ಮುಂಗಾರು ಆಗಮನವಾಗಲಿದ್ದು, ನಂತರ ಕರ್ನಾಟಕ ಪ್ರವೇಶಿಸಲಿದೆ. ಈ ವರ್ಷ ವಾಡಿಕೆಯಂತೆ ಮಳೆಯಾಗಲಿದೆ ಎಂದು ಹೇಳಲಾಗಿದೆ. ಸಾಮಾನ್ಯವಾಗಿ ಜೂನ್ 1 ರಂದು ನೈಋತ್ಯ ಮಾನ್ಸೂನ್ ಕೇರಳ ಪ್ರವೇಶಿಸುತ್ತದೆ. ಇದೀಗ ಈ

ಹವಾಮಾನ ವರದಿ| ಈ ಬಾರಿ ಮುಂಗಾರು ಕೊಂಚ ವಿಳಂಬ| ಜೂ.4ರಂದು ಕೇರಳ ಪ್ರವೇಶ Read More »

ರಮಾನಾಥ ರೈ ನಿವೃತ್ತಿಯಾಗಲು ಬಿಡುವುದಿಲ್ಲ – ಖಾದರ್

ಸಮಗ್ರ ನ್ಯೂಸ್: ರಮಾನಾಥ ರೈ ಅವರು ಚುನಾವಣೆ ರಾಜಕೀಯದಿಂದ ನಿವೃತ್ತಿ ಘೋಷಿಸಿದ ಬೆನ್ನಲ್ಲೇ ಮಾಜಿ‌ ಸಚಿವ ಯು ಟಿ‌ ಖಾದರ್ ಸುದ್ದಿಗೋಷ್ಠಿ ನಡೆಸಿ ರಮಾನಾಥ ರೈ ಅವರನ್ನು ರಾಜಕೀಯದಿಂದ ನಿವೃತ್ತಿಯಾಗಲು ನಾವು ಬಿಡುವುದಿಲ್ಲ ಎಂದು ತಿಳಿಸಿದ್ದಾರೆ. ರಮಾನಾಥ ರೈ ಅವರು ಅತ್ಯಂತ ಹಿರಿಯ ನಾಯಕರು. ಜಿಲ್ಲೆಯ ಅಭಿವೃದ್ಧಿ ಗೆ ಅಪಾರವಾದ ಕೊಡುಗೆಯನ್ನು ಕೊಟ್ಟವರು. ಅತ್ಯಂತ ಪ್ರಾಮಾಣಿಕ ರಾಜಕೀಯ ಮಾಡಿ ಎಲ್ಲರಿಗೂ ಮಾದರಿಯಾಗಿದ್ದಾರೆ. ಅವರು ನಿವೃತ್ತಿ ಯಾಗಲು ಜನತೆ ಮತ್ತು ಪಕ್ಷ ಎಂದಿಗೂ ಬಿಡುವುದಿಲ್ಲ. ರಾಜಕೀಯ ದಲ್ಲಿ ಯಾವಾಗಲೂ

ರಮಾನಾಥ ರೈ ನಿವೃತ್ತಿಯಾಗಲು ಬಿಡುವುದಿಲ್ಲ – ಖಾದರ್ Read More »

ಬೆಳ್ತಂಗಡಿ: ಗೃಹಿಣಿಯ ಮಾನಭಂಗಕ್ಕೆ ಯತ್ನ

ಸಮಗ್ರ ನ್ಯೂಸ್: ಕೆಲಸ ಕೊಡಿಸುವ ನೆಪದಲ್ಲಿ ಗೃಹಿಣಿಯೊಬ್ಬರನ್ನು ಮಾನಭಂಗಕ್ಕೆ ಯತ್ನಿಸಿದ ಘಟನೆ ಮೇ 14ರಂದು ಉಜಿರೆಯಲ್ಲಿ ನಡೆದಿದೆ. ಉಜಿರೆಯ ಉದ್ಯಮಿ ಪ್ರಭಾಕರ ಹೆಗ್ಡೆ ಕೃತ್ಯ ನಡೆಸಿರುವುದಾಗಿ ದೂರಿನಲ್ಲಿ ತಿಳಿಸಿದ್ದಾರೆ . ಚಿಕ್ಕಮಗಳೂರು ಜಿಲ್ಲೆಯ ಹಂಗರವಳ್ಳಿ ನಿವಾಸಿ ಸುಜಾತಾ ದೂರು ನೀಡಿದವರು.ಸುಜಾತಾ ಮತ್ತು ಅವರ ಪತಿ ಕಿರಣ್‌ ಗೌಡ ಅವರು ಪ್ರಭಾಕರ್‌ ಹೆಗ್ಡೆ ಅವರ ಸಂಸ್ಥೆಗೆ ಕೆಲಸ ಹುಡುಕಿಕೊಂಡು ಬಂದಿದ್ದರು. ಈ ಸಂದರ್ಭದಲ್ಲಿ ಅವರ ಮನೆಯಲ್ಲೇ ಆಶ್ರಯ ನೀಡಿ ಮೇ 14ರಂದು ಪತಿ ಕಿರಣ್‌ ಅವರನ್ನು ತಮ್ಮ ಸಂಸ್ಥೆಯ

ಬೆಳ್ತಂಗಡಿ: ಗೃಹಿಣಿಯ ಮಾನಭಂಗಕ್ಕೆ ಯತ್ನ Read More »

ಸುಳ್ಯ ನ.ಪಂ.ನ ಪ್ರಥಮ ಅವಧಿಯ ಅಧಿಕಾರವಧಿ ಮುಕ್ತಾಯ

ಸಮಗ್ರ ನ್ಯೂಸ್: ಸುಳ್ಯ ನಗರ ಪಂಚಾಯತ್‌ನ ಪ್ರಥಮ ಎರಡೂವರೆ ವರ್ಷದ ಅಧ್ಯಕ್ಷ, ಉಪಾಧ್ಯಕ್ಷರ ಅಧಿಕಾರ ಅವಧಿ ಮುಕ್ತಾಯಗೊಂಡಿದ್ದು, ಮುಂದಿನ ಎರಡೂವರೆ ವರ್ಷದ ಅವಧಿಗೆ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆಗೆ ಮೀಸಲಾತಿ ಪ್ರಕಟಗೊಳ್ಳಬೇಕಿದೆ. ಸುಳ್ಯ ನಗರ ಪಂಚಾಯತ್‌ನ ಪ್ರಥಮ ಅವಧಿಯ ಎರಡೂವರೆ ವರ್ಷದಲ್ಲಿ ವಿನಯಕುಮಾರ್ ಕಂದಡ್ಕ ಅಧ್ಯಕ್ಷರಾಗಿ ಹಾಗೂ ಉಪಾಧ್ಯಕ್ಷರಾಗಿ ಸರೋಜಿನಿ ಪೆಲತಡ್ಕ ಕಾರ್ಯನಿರ್ವಹಿಸಿದ್ದರು. ಮೇ ೫ಕ್ಕೆ ಅವರ ಅಧಿಕಾರವಧಿ ಮುಕ್ತಾಯಗೊಂಡಿದೆ. ಮುಂದಿನ ನ.ಪಂ.ನ ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಆಗುವಲ್ಲಿವರೆಗೆ ಆಡಳಿತ ನೋಡಿಕೊಳ್ಳಲು ಆಡಳಿತಾಧಿಕಾರಿ ನೇಮಕಗೊಳ್ಳಬೇಕಿದ್ದು, ಶೀಘ್ರ ನೇಮಕವಾಗುವ ನಿರೀಕ್ಷೆಯಿದೆ.

ಸುಳ್ಯ ನ.ಪಂ.ನ ಪ್ರಥಮ ಅವಧಿಯ ಅಧಿಕಾರವಧಿ ಮುಕ್ತಾಯ Read More »

ಸುಳ್ಯ: ಜೀವಬಲಿಗಾಗಿ ಕಾಯುತ್ತಿವೆ ಮೆಸ್ಕಾಂ ವಿದ್ಯುತ್ ಕಂಬಗಳು

ಸಮಗ್ರ ನ್ಯೂಸ್: ವಿದ್ಯುತ್ ಕಂಬಗಳು ತುಕ್ಕು ಹಿಡಿದು ಧರೆಗುರುಳುವ ಸ್ಥಿತಿಯಲ್ಲಿರುವುದು ಸುಳ್ಯ ನಗರದ ಕೆಲವು ಕಡೆಗಳಲ್ಲಿ ಕಂಡುಬಂದಿದೆ. ಸುಳ್ಯ ನಗರದ ವಿವೇಕಾನಂದ ಸರ್ಕಲ್ ಬಳಿ ಅಂಬೆಟಡ್ಕ ಭಾಗದಲ್ಲಿ ಹಾದು ಹೋಗುವ ವಿದ್ಯುತ್ ತಂತಿಗಳಿಗೆ ಅಳವಡಿಸಿರುವ ಕಂಬಗಳು ತುಕ್ಕು ಹಿಡಿದಿರುವುದು ಕಂಡುಬಂದಿದೆ. ಇಲ್ಲಿ ಹೈ ವೋಲ್ಟೇಜ್ ವಿದ್ಯುತ್ ಹಾದುಹೋಗುವುದರಿಂದ ಇದರಿಂದ ಸಮಸ್ಯೆಗಳು ಕಟ್ಟಿಟ್ಟ ಬುತ್ತಿಯಾಗಿದೆ. ಮುಂದಿನ ದಿನಗಳಲ್ಲಿ ಅತಿಯಾದ ಗಾಳಿ ಮಳೆ ಬರುವುದರಿಂದ ಈ ಕಂಬಗಳು ತುಂಡಾಗಿ ನೆಲಕ್ಕೆ ಉರುಳುವ ಸಂಭವ ಕೂಡ ಇದೆ. ಈ ರಸ್ತೆಯಲ್ಲಿ ದಿನದಲ್ಲಿ

ಸುಳ್ಯ: ಜೀವಬಲಿಗಾಗಿ ಕಾಯುತ್ತಿವೆ ಮೆಸ್ಕಾಂ ವಿದ್ಯುತ್ ಕಂಬಗಳು Read More »

ಸುಳ್ಯ: ಅಡ್ತಲೆ – ಮರ್ಕಂಜ ಡಾಂಬರೀಕರಣಗೊಂಡ ರಸ್ತೆಯ ಸ್ಥಿತಿ ದೇವರಿಗೇ ಪ್ರೀತಿ!!

ಸಮಗ್ರ ನ್ಯೂಸ್: ಸುಳ್ಯ ತಾಲೂಕಿನ ಅರಂತೋಡು ಗ್ರಾಮದ ಅಡ್ತಲೆ ರಸ್ತೆಯು ನೂತನವಾಗಿ ಡಾಮರೀಕರಣಗೊಂಡಿದೆ. ಈ ರಸ್ತೆ ಬದಿ ಅರ್ಧ ಅಡಿ ಸಹ ಜಾಗ ಇಲ್ಲ, ಮತ್ತು ವಿದ್ಯುತ್ ಕಂಬಗಳು ರಸ್ತೆಯಲ್ಲಿಯೇ ಇದ್ದು ಪ್ರಯಾಣಿಕರಿಗೆ ಅಪಾಯ ಮಾಡುವಂತಿದೆ. ರಸ್ತೆ ಬದಿಯೇ ಚರಂಡಿ ಮತ್ತು ವಿದ್ಯುತ್ ಕಂಬಗಳು ಇರುವುದರಿಂದ, ಮುಂದೆ ಅಪಾಯಕಾರಿ ಘಟನೆಗಳು ಸಂಭವಿಸುವ ಸಾಧ್ಯತೆ ಹೆಚ್ಚಾಗಿದೆ. ಲೋಕೋಪಯೋಗಿ ಇಲಾಖೆ ಹಾಗೂ ಮೆಸ್ಕಾಂನಿಂದ ಈ ಬಗ್ಗೆ ಮಳೆಗಾಲ ಆರಂಭಕ್ಕೆ ಮೊದಲು ಕ್ರಮ ಕೈಗೊಳ್ಳಬೇಕು ಎಂಬುದು ಗ್ರಾಮಸ್ಥರ ಬೇಡಿಕೆ. ಈ ರಸ್ತೆಯ

ಸುಳ್ಯ: ಅಡ್ತಲೆ – ಮರ್ಕಂಜ ಡಾಂಬರೀಕರಣಗೊಂಡ ರಸ್ತೆಯ ಸ್ಥಿತಿ ದೇವರಿಗೇ ಪ್ರೀತಿ!! Read More »

ಕೋವಿ ಠೇವಣಾತಿ ಇರಿಸಿದ ರೈತರು ವಾಪಾಸ್ ಪಡಕೊಳ್ಳಲು ದ.ಕ ಜಿಲ್ಲಾಧಿಕಾರಿ ಸೂಚನೆ

ಸಮಗ್ರ ನ್ಯೂಸ್: ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಠೇವಣಿ ಇರಿಸಲಾದ ಆಯುಧಗಳನ್ನು ವಾಪಸ್ ಪಡೆಯಲು ದ.ಕ.ಜಿಲ್ಲಾಧಿಕಾರಿ ರವಿಕುಮಾರ್ ಸೂಚನೆ ನೀಡಿದ್ದಾರೆ. ಮೇ.16 ರಿಂದ ಪೊಲೀಸ್ ಆಯುಕ್ತರ ಕಾರ್ಯ ವ್ಯಾಪ್ತಿಯನ್ನು ಹೊರತುಪಡಿಸಿ ಉಳಿದಂತೆ ಜಿಲ್ಲೆಯ ಎಲ್ಲಾ ಆಯುಧ ಪರವಾನಿಗೆದಾರರ ಆಯುಧಗಳನ್ನು ಈಗಾಗಲೇ ಪೊಲೀಸ್ ಠಾಣೆ, ಅಧಿಕೃತ ಕೋವಿ ಹಾಗು ಮದ್ದುಗುಂಡು ವ್ಯಾಪಾರಸ್ಥರಿಂದ ಠೇವಣಿ ಇರಿಸಿರುವುದರಿಂದ ಆಯುಧ ಪರವಾನಿಗೆದಾರರಿಗೆ ಹಿಂಪಡೆಯುವಂತೆ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ಕೋವಿ ಠೇವಣಾತಿ ಇರಿಸಿದ ರೈತರು ವಾಪಾಸ್ ಪಡಕೊಳ್ಳಲು ದ.ಕ ಜಿಲ್ಲಾಧಿಕಾರಿ ಸೂಚನೆ Read More »

ಕಲ್ಲಪಳ್ಳಿ : ವಿಜೃಂಭನೆಯಿಂದ ನಡೆದ ಒತ್ತೆಕೊಲ

ಸಮಗ್ರ ನ್ಯೂಸ್: ಶ್ರೀ ವಿಷ್ಣುಮೂರ್ತಿ ಒತ್ತೆಕೋಲ ಮೇ 15 ಮತ್ತು 16ರಂದು ಕಲ್ಲಪಳ್ಳಿಯ ಕೂಟುಪಿಲಾವು ಎಂಬಲ್ಲಿ ವಿಜೃಂಭನೆಯಿಂದ ನಡೆಯಿತು. ಕೂಟುಪಿಲಾವು ಶ್ರೀ ವಿಷ್ಣುಮೂರ್ತಿ ಸೇವಾಸಂಘದ ವತಿಯಿಂದ ನಡೆದ ಶ್ರೀ ವಿಷ್ಣುಮೂರ್ತಿ ಒತ್ತೆಕೋಲದಲ್ಲಿ ಸಾವಿರಾರು ಭಕ್ತರು ಶ್ರೀ ದೇವರ ಕೃಪೆಗೆ ಪಾತ್ರರಾದರು.

ಕಲ್ಲಪಳ್ಳಿ : ವಿಜೃಂಭನೆಯಿಂದ ನಡೆದ ಒತ್ತೆಕೊಲ Read More »

ಭಾಗೀರಥಿ ಮುರುಳ್ಯ ಭರ್ಜರಿ ಗೆಲುವು|ಸುಳ್ಯ ಬಿಜೆಪಿ ವತಿಯಿಂದ ಕಾರ್ಯಕರ್ತರಿಗೆ ಅಭಿನಂದನಾ ಸಭೆ

ಸಮಗ್ರ ನ್ಯೂಸ್: ಸುಳ್ಯ ಮಂಡಲ ಭಾರತೀಯ ಜನತಾ ಪಾರ್ಟಿ ವತಿಯಿಂದ ಸುಳ್ಯ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯ ಅವರ ಅಭೂತಪೂರ್ವ ಗೆಲುವಿಗೆ ಕಾರಣಕರ್ತರಾದ ಕಾರ್ಯಕರ್ತರಿಗೆ ಅಭಿನಂದನಾ ಸಭೆ ಸುಳ್ಯದ ಬೂಡು ಕೇರ್ಪಳ ಬಂಟರ ಭವನದಲ್ಲಿ ಮಂಗಳವಾರ ನಡೆಯಿತು. ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಸುದರ್ಶನ ಮೂಡುಬಿದಿರೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ವಿಧಾನ ಸಭಾ ಚುನಾವಣೆಯಲ್ಲಿ ಸುಳ್ಯದ ಭಾಗೀರಥಿ ಮುರುಳ್ಯ ಅವರು ಬಾರೀ ಅಂತರದಿಂದ ಗೆಲುವು ಸಾಧಿಸುವ ಮೂಲಕ ಸುಳ್ಯ ಬಿಜೆಪಿಯ ಭದ್ರಕೋಟೆ ಎಂಬುದನ್ನು ಸಾಬೀತು ಪಡಿಸಲಾಗಿದೆ

ಭಾಗೀರಥಿ ಮುರುಳ್ಯ ಭರ್ಜರಿ ಗೆಲುವು|ಸುಳ್ಯ ಬಿಜೆಪಿ ವತಿಯಿಂದ ಕಾರ್ಯಕರ್ತರಿಗೆ ಅಭಿನಂದನಾ ಸಭೆ Read More »

ಸುಳ್ಯ: ಕೋಲ್ಚಾರು ತರವಾಡು ವಯನಾಟ್ ಕುಲವನ್ ದೈವಂಕಟ್ಟು ಮಹೋತ್ಸವ| ವಿಜೃಂಭಣೆಯಿಂದ ಸಾಗಿದ ಹಸಿರುವಾಣಿ ಮೆರವಣಿಗೆ

ಸಮಗ್ರ ನ್ಯೂಸ್: ಸುಳ್ಯ ತಾಲೂಕಿನ ಕೋಲ್ಚಾರು ತರವಾಡು ಕುಟುಂಬದ ವಯನಾಟ್ ಕುಲವನ್ ದೈವಸ್ಥಾನದಲ್ಲಿ ದೈವಕಟ್ಡು ಮಹೋತ್ಸವದ ಹಿನ್ನಲೆ ಭಕ್ತಿ ಸಡಗರದಿಂದ ಹಸಿರುವಾಣಿ ಮೆರವಣಿಗೆ ಸಾಗಿಬಂದಿತು. ಇಂದು(ಮೇ.16) ಬೆಳಿಗ್ಗೆ ಗಂಟೆ 8.30 ರಿಂದ ಕೋಲ್ಟಾರು ಐನ್ ಮನೆಯಿಂದ ಮತ್ತು ಶ್ರೀ ಶಾರದಾಂಬಾ ಭಜನಾ ಮಂದಿರದ ಬಳಿಯಿಂದ ಹಸಿರುವಾಣಿ ಮೆರವಣಿಗೆಯಲ್ಲಿ ನೂರಾರು ವಾಹನಗಳೊಂದಿಗೆ ಸಾಗಿ ಬಂದು ಉಗ್ರಾಣ ತುಂಬುವ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಆಡಳಿತ ಸಮಿತಿ ಅದ್ಯಕ್ಷ ಪುರುಷೋತ್ತಮ ಕೋಲ್ಚಾರು ಶ್ರೀ ತಂಬುರಾಟಿ ಭಗವತಿ ಕ್ಷೇತ್ರ‌ ಕುತ್ತಿಕೋಲು ಆಡಳಿತ

ಸುಳ್ಯ: ಕೋಲ್ಚಾರು ತರವಾಡು ವಯನಾಟ್ ಕುಲವನ್ ದೈವಂಕಟ್ಟು ಮಹೋತ್ಸವ| ವಿಜೃಂಭಣೆಯಿಂದ ಸಾಗಿದ ಹಸಿರುವಾಣಿ ಮೆರವಣಿಗೆ Read More »