ಕರಾವಳಿ

ಬೆಳ್ತಂಗಡಿ: ಬಿಜೆಪಿ ವಿಜಯೋತ್ಸವ ವೇಳೆ ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಸಮಗ್ರ ನ್ಯೂಸ್: ಬಿಜೆಪಿಯ ವಿಜಯೋತ್ಸವದಲ್ಲಿ ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಹಲ್ಲೆ ನಡೆಸಿದ ಆರೋಪ ಕೇಳಿ‌ ಬಂದಿದೆ. ಹಲ್ಲೆಗೊಳಗಾದ ವ್ಯಕ್ತಿ ಕಾಂಗ್ರೆಸ್ ಕಾರ್ಯಕರ್ತ ದಯಾನಂದ ಪೂಜಾರಿ ಎಂದು ಗುರುತಿಸಲಾಗಿದೆ. ಬೆಳ್ತಂಗಡಿ ತಾಲೂಕಿನ ಪೆರಾಡಿಯಲ್ಲಿ ಬಿಜೆಪಿಯ ವಿಜಯೋತ್ಸವದಲ್ಲಿ ಹಲ್ಲೆ ನಡೆಸಿದ್ದಾರೆಂದು ಕಾಂಗ್ರೆಸ್ ಕಾರ್ಯಕರ್ತ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಬಿಜೆಪಿಯ ವಿಜಯೋತ್ಸವ ಮೆರವಣಿಗೆಯ ಒಳಗೆ ಇವರನ್ನು ಎಳೆದುಕೊಂಡು ಹೋಗಿ ಹಲ್ಲೆ ಮಾಡಿರುವುದಾಗಿ ಆರೋಪಿಸಲಾಗಿದ್ದು ಹಲ್ಲೆಗೆ ಒಳಗಾದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯ ಬಗ್ಗೆ ಮಾಹಿತಿ ತಿಳಿದು ಮಾಜಿ ಶಾಸಕ ವಸಂತ

ಬೆಳ್ತಂಗಡಿ: ಬಿಜೆಪಿ ವಿಜಯೋತ್ಸವ ವೇಳೆ ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು Read More »

ಸುಳ್ಯ: ದೈವಂಕಟ್ಟು ಮಹೋತ್ಸವಕ್ಕೆ ಸಜ್ಜಾಗಿದೆ ಕೋಲ್ಚಾರು| ಅಂತಿಮ ಹಂತದ ಸಿದ್ದತೆಗಳು ಪೂರ್ಣ| 15 ಸಾವಿರ ಭಕ್ತಾದಿಗಳು ಸೇರುವ ನಿರೀಕ್ಷೆ

ಸಮಗ್ರ ನ್ಯೂಸ್: ಸುಮಾರು 50 ವರ್ಷಗಳ ಬಳಿಕ ಸುಳ್ಯ ತಾಲೂಕಿನ ಕೋಲ್ಚಾರಿನಲ್ಲಿರುವ ಕೋಲ್ಚಾರು ತರವಾಡು ವಯನಾಟ್ ಕುಲವನ್ ದೇವಸ್ಥಾನದಲ್ಲಿ ನಡೆಯಲಿರುವ ದೈವಂಕಟ್ಟು ಮಹೋತ್ಸವಕ್ಕೆ ಅಂತಿಮ ಹಂತದ ಸಿದ್ದತೆಗಳು ಪೂರ್ಣಗೊಂಡಿವೆ. ಸುಮಾರು 15ಸಾವಿರಕ್ಕೂ ಹೆಚ್ಚು ಭಕ್ತಾದಿಗಳು ಸೇರುವ ಈ ಕಾರ್ಯಕ್ರಮಕ್ಕೆ ಇಡೀ ಕೋಲ್ಚಾರು ಗ್ರಾಮ ಸಜ್ಜಾಗಿದೆ. ಗ್ರಾಮದಲ್ಲಿ ಕೇಸರಿ ರಂಗು ಕಣ್ಮನ ಸೆಳೆಯುತ್ತಿದ್ದು, ಭಕ್ತರನ್ನು ಸ್ವಾಗತಿಸಲು ತಯಾರಾಗಿ ನಿಂತಿದೆ. ಶ್ರೀ ವಯನಾಟ್ ಕುಲವನ್ ದೇವಸ್ಥಾನದ ಸುತ್ತಮುತ್ತಲಿನ ಪ್ರದೇಶಗಳನ್ನು ಅಲಂಕರಿಸಿ ತಳಿರು ತೋರಣಗಳಿಂದ ಸಿಂಗರಿಸಲಾಗಿದೆ. ಆಡಳಿತ ಮಂಡಳಿ ಹಾಗೂ ಪದಾಧಿಕಾರಿಗಳು

ಸುಳ್ಯ: ದೈವಂಕಟ್ಟು ಮಹೋತ್ಸವಕ್ಕೆ ಸಜ್ಜಾಗಿದೆ ಕೋಲ್ಚಾರು| ಅಂತಿಮ ಹಂತದ ಸಿದ್ದತೆಗಳು ಪೂರ್ಣ| 15 ಸಾವಿರ ಭಕ್ತಾದಿಗಳು ಸೇರುವ ನಿರೀಕ್ಷೆ Read More »

‘ನೀನು ಯಾರಿಗೆ ಓಟು ಹಾಕಿದ್ದೀ’ ಎಂದು ರಿಕ್ಷಾ ಚಾಲಕನಿಗೆ ಜೀವಬೆದರಿಕೆ ಹಾಕಿದ ಬಿಜೆಪಿ ಕಾರ್ಯಕರ್ತ

ಸಮಗ್ರ ನ್ಯೂಸ್: ‘ನೀನು ಯಾರಿಗೆ ಓಟು ಹಾಕಿದ್ದೀ’ ಎಂದು ರಿಕ್ಷಾ ಚಾಲಕನಿಗೆ ಜೀವ ಬೆದರಿಕೆ ಹಾಕಿದ ಬಗ್ಗೆ ಬಿಜೆಪಿ ಕಾರ್ಯಕರ್ತನ ವಿರುದ್ಧ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಯನ್ನು ಪಳ್ಳಿ ಗ್ರಾಮದ ವಾಸಿ ಚರಣ್ ಎಂದು ಗುರುತಿಸಲಾಗಿದೆ.ರಿತೇಶ್ ಪಳ್ಳಿಯಲ್ಲಿ ಅಟೋರಿಕ್ಷಾ ಚಾಲಕನಾಗಿ ಕೆಲಸ ಮಾಡಿಕೊಂಡಿದ್ದು, ಮೇ.13 ರಂದು ನಿಂಜೂರಿಗೆ ಬಾಡಿಗೆ ಬಿಟ್ಟು ರಿಕ್ಷಾದಲ್ಲಿ ಹಿಂತಿರುಗುತ್ತಿದ್ದರು. ಈ ವೇಳೆ ಪಳ್ಳಿ ಗ್ರಾಮದ ವಾಸಿ ಚರಣ್ ಎಂಬಾತನು ತನ್ನ KA19 MH 3171 ನೋಂದಣಿಯ ಕಾರಿನಲ್ಲಿ ಬಂದು

‘ನೀನು ಯಾರಿಗೆ ಓಟು ಹಾಕಿದ್ದೀ’ ಎಂದು ರಿಕ್ಷಾ ಚಾಲಕನಿಗೆ ಜೀವಬೆದರಿಕೆ ಹಾಕಿದ ಬಿಜೆಪಿ ಕಾರ್ಯಕರ್ತ Read More »

ಭಟ್ಕಳದಲ್ಲಿ ಹಾರಿಸಿದ್ದು ಪಾಕಿಸ್ತಾನ ಧ್ವಜವಲ್ಲ- ಉ.ಕ ಎಸ್ಪಿ ಸ್ಪಷ್ಟನೆ

ಸಮಗ್ರ ನ್ಯೂಸ್: ಹೊನ್ನಾವರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ, ಭಟ್ಕಳ ಶಂಶುದ್ದೀನ್ ವೃತ್ತದಲ್ಲಿ ಹಸಿರು, ಕೇಸರಿ ಬಾವುಟ ಹಿಡಿದು ಕಾಂಗ್ರೆಸ್ ಬೆಂಬಲಿಗರು ವಿಜಯೋತ್ಸವ ಆಚರಿಸಿದರು. ಆದರೆ ಪಾಕಿಸ್ತಾನ ಧ್ವಜ ಹಾರಿಸಿದ್ದಾರೆ, ಮುಸ್ಲಿಂ ಧ್ವಜ ಹಾರಿಸಿದ್ದಾರೆ ಎಂಬ ವಾಟ್ಸಾಪ್ ಬರಹಗಳು ಎಲ್ಲೆಡೆ ಹರಿದಾಡಿದ್ದವು. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಉತ್ತರ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್‌ರವರು ಭಟ್ಕಳದಲ್ಲಿ ಹಾರಿಸಲಾದ ಧ್ವಜ ಪಾಕಿಸ್ತಾನದ ಧ್ವಜವಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಕಾಂಗ್ರೆಸ್ ಬೆಂಬಲಿಗರು ಬಳಸಿದ ಧ್ವಜ ಪಾಕಿಸ್ತಾನದ ಧ್ವಜ

ಭಟ್ಕಳದಲ್ಲಿ ಹಾರಿಸಿದ್ದು ಪಾಕಿಸ್ತಾನ ಧ್ವಜವಲ್ಲ- ಉ.ಕ ಎಸ್ಪಿ ಸ್ಪಷ್ಟನೆ Read More »

ಸುಳ್ಯಕ್ಕೆ ಆಗಮಿಸಿದ ಭಾಗೀರಥಿ ಮುರುಳ್ಯ

ಸಮಗ್ರ ನ್ಯೂಸ್: ಸುಳ್ಯ ವಿಧಾನ ಸಭಾ ಕ್ಷೇತ್ರದಿಂದ ಗೆದ್ದ ಅಭ್ಯರ್ಥಿ ಭಾಗೀರಥಿ ಮುರುಳ್ಯ ಅವರು ಶನಿವಾರ ರಾತ್ರಿ ಸುಳ್ಯಕ್ಕೆ ಆಗಮಿಸಿದ್ದರು. ಸುಳ್ಯಕ್ಕೆ ಆಗಮಿಸಿದ ಭಾಗೀರಥಿ ಮುರುಳ್ಯ ಅವರಿಗೆ ಕನಕಮಜಲು, ಜಾಲ್ಸೂರಿನಲ್ಲಿ ಅದ್ದೂರಿ ಸ್ವಾಗತಿಸಿ, ಅಭಿನಂದಿಸಲಾಯಿತು. ಸುಳ್ಯಕ್ಕೆ ಆಗಮಿಸಿದ ಭಾಗೀರಥಿ ಮುರುಳ್ಯ ಅವರು ಸುಳ್ಯ ಬಿಜೆಪಿ ಕಛೇರಿ ಬಳಿಕ ಮಾತನಾಡಿ, ಸುಳ್ಯದ ಅಭಿವೃದ್ಧಿಗೆ ಎಲ್ಲರ ಸಹಕಾರ ಯಾಚಿಸಿ ಗೆಲುವಿಗೆ ಕಾರಣಕರ್ತರಾದವರಿಗೆ ಕೃತಜ್ಞತೆ ಸಲ್ಲಿಸಿದರು. ಬಳಿಕ ಬಿಜೆಪಿ ಕಛೇರಿಗೆ ತೆರಳಿದರು. ಬಿಜೆಪಿ ಪಕ್ಷದ ಪ್ರಮುಖರಾದ ಹರೀಶ್ ಕಂಜಿಪಿಲಿ, ಎಸ್.ಎನ್.ಮನ್ಮಥ, ಎ.ವಿ.ತೀರ್ಥರಾಮ,

ಸುಳ್ಯಕ್ಕೆ ಆಗಮಿಸಿದ ಭಾಗೀರಥಿ ಮುರುಳ್ಯ Read More »

ಸುಳ್ಯ: ನಮ್ಮ ಅಭ್ಯರ್ಥಿ ಸೋತರೂ ಸರಕಾರದ ಯೋಜನೆ ಪ್ರತಿಯೊಬ್ಬ ಅರ್ಹರಿಗೆ ತಲುಪಿಸುತ್ತೇವೆ – ಪಿ ಸಿ ಜಯರಾಮ.

ಸಮಗ್ರ ನ್ಯೂಸ್: ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುತ್ತದೆ ಹಾಗೂ ಸುಳ್ಯ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿಯಾಗಬೇಕಾದರೆ ಸುಳ್ಯದಲ್ಲೂ ಕಾಂಗ್ರೆಸ್ ಶಾಸಕರು ಗೆಲ್ಲಬೇಕೆಂಬ ನಿಟ್ಟಿನಲ್ಲಿ ಪ್ರತೀ ಗ್ರಾಮ ಮಟ್ಟದಲ್ಲೂ ನಮ್ಮ ಪಕ್ಷದ ನಾಯಕರುಗಳು ಮತ್ತು ಕಾರ್ಯಕರ್ತರು ಉತ್ತಮವಾಗಿ ಪ್ರಚಾರ ಸಮಿತಿಯ ನೇತೃತ್ವದಲ್ಲಿ ಪ್ರಚಾರ ಕಾರ್ಯ ನಡೆಸಿದ್ದರು ಆದರೆ ಅಷ್ಟು ಪರಿಣಾಮಕಾರಿ ಫಲ ನೀಡಿಲ್ಲ. ಇಂದಿನ ಜನಾಭಿಪ್ರಾಯವನ್ನು ಗೌರವದಿಂದ ನಾವು ಸ್ವೀಕರಿಸುತ್ತೇವೆ. ಕಾಂಗ್ರೆಸ್ ಪಕ್ಷ ಬಹುಮತದೊಂದಿಗೆ ಅಧಿಕಾರಕ್ಕೆ ಬಂದಿದ್ದು ನಮ್ಮ ಪಕ್ಷ ಚುನಾವಣಾ ಪ್ರಚಾರ ಸಂದರ್ಭದಲ್ಲಿ ನೀಡಿದ

ಸುಳ್ಯ: ನಮ್ಮ ಅಭ್ಯರ್ಥಿ ಸೋತರೂ ಸರಕಾರದ ಯೋಜನೆ ಪ್ರತಿಯೊಬ್ಬ ಅರ್ಹರಿಗೆ ತಲುಪಿಸುತ್ತೇವೆ – ಪಿ ಸಿ ಜಯರಾಮ. Read More »

ಸಿಎಂ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಬಸವರಾಜ ಬೊಮ್ಮಾಯಿ

ಸಮಗ್ರ ನ್ಯೂಸ್: ಕಾಂಗ್ರೆಸ್ ಪಕ್ಷವು ಸ್ಪಷ್ಟ ಬಹುಮತದೊಂದಿಗೆ ವಿಧಾನಸಭಾ ಚುನಾವಣೆಯಲ್ಲಿ ಸರ್ಕಾರ ರಚಿಸುವತ್ತ ದಾಪುಗಾಲಿಟ್ಟಿದೆ. ಈ ಬೆನ್ನಲ್ಲೇ ಮುಖ್ಯಮಂತ್ರಿ ಸ್ಥಾನಕ್ಕೆ ಬಸವರಾಜ ಬೊಮ್ಮಾಯಿ ರಾಜೀನಾಮೆಯನ್ನು ಸಲ್ಲಿಸಿದ್ದಾರೆ. ಹಾವೇರಿಯ ಶಿಗ್ಗಾಂವಿಯಿಂದ ಬೆಂಗಳೂರಿಗೆ ಆಗಮಿಸಿದಂತ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ನೇರವಾಗಿ ರಾಜಭವನಕ್ಕೆ ತೆರಳಿ, ರಾಜ್ಯಪಾಲರಿಗೆ ತನ್ನ ರಾಜೀನಾಮೆ ಪತ್ರವನ್ನು ಸಲ್ಲಿಸಿದರು. ಕರ್ನಾಟಕ ವಿಧಾನಸಭೆಯ 224 ಕ್ಷೇತ್ರಗಳಿಗೆ ನಡೆದಂತ ಮತದಾನ ಮತಎಣಿಕೆ ಕಾರ್ಯ ಇಂದು ನಡೆಯಿತು. ಕಾಂಗ್ರೆಸ್ ಸ್ಪಷ್ಟ ಬಹುಮತದ ಮೂಲಕ ಸರ್ಕಾರ ರಚನೆಯತ್ತ ದಾಪುಗಾಲು ಇಟ್ಟಿದೆ. 224 ಕ್ಷೇತ್ರಗಳಲ್ಲಿ

ಸಿಎಂ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಬಸವರಾಜ ಬೊಮ್ಮಾಯಿ Read More »

ಕಾಂಗ್ರೆಸ್ ಎಂದಿಗೂ ಬಿಜೆಪಿಗೆ ಸಮಾನವಲ್ಲ; ಉಚಿತಗಳಿಗೆ ಮನಸೋಲದೇ ಇದು ಕರುನಾಡ ಜನತೆ ನೀಡಿದ ಭಿಕ್ಷೆಯಿದು ನೆನಪಿರಲಿ

ಸಮಗ್ರ ನ್ಯೂಸ್: ಕರ್ನಾಟಕದಲ್ಲಿ ಬಿಜೆಪಿ ಆಡಳಿತವನ್ನು ಕೊನೆಗಾಣಿಸಿ ಕಾಂಗ್ರೆಸ್ ಗೆ 136 ಸ್ಥಾನವನ್ನು ಕೊಟ್ಟು ಜನತೆ ಗೆಲ್ಲಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಹವ್ಯಾಸಿ ಪತ್ರಕರ್ತ ಎಲ್.ಕೆ ಮಂಜುನಾಥ್ ಬರೆದುಕೊಂಡ ಪೇಸ್ ಬುಕ್ ಬರಹವನ್ನು ಯಥಾವತ್ ಪ್ರಕಟಿಸಲಾಗಿದೆ. ಸದ್ಯದ ಕಾಲಘಟ್ಟದಲ್ಲಿ ಇದು ಅರ್ಥಪೂರ್ಣವಾಗಿದೆ – ಸಂ ಕಾಂಗ್ರೆಸ್‌ ಪಕ್ಷದ ನಾಯಕರು ಹಣಬಲದಿಂದ, ಕಾರ್ಯಕರ್ತರ ಶ್ರಮದಿಂದ, ನೇಮಿಸಿಕೊಂಡ ಏಜೆನ್ಸಿಗಳಿಂದ, ಐದು ಗ್ಯಾರಂಟಿಗಳುಳ್ಳ ಪ್ರಣಾಳಿಕೆಯಿಂದ ಚುನಾವಣೆ ಗೆದ್ದಿದ್ದೇವೆ ಎಂದು ಭಾವಿಸಿಕೊಂಡರೆ, ಮೆರೆದಾಡಿದರೆ ಮುಠ್ಠಾಳತನವಾಗುತ್ತದೆ. ಈ ಯಾವ ಬಲಾಬಲಗಳಲ್ಲೂ ಬಿಜೆಪಿ ಪಕ್ಷಕ್ಕೆ ಕಾಂಗ್ರೆಸ್‌ ಸರಿಸಮವಾಗಲಾರದು.

ಕಾಂಗ್ರೆಸ್ ಎಂದಿಗೂ ಬಿಜೆಪಿಗೆ ಸಮಾನವಲ್ಲ; ಉಚಿತಗಳಿಗೆ ಮನಸೋಲದೇ ಇದು ಕರುನಾಡ ಜನತೆ ನೀಡಿದ ಭಿಕ್ಷೆಯಿದು ನೆನಪಿರಲಿ Read More »

ಕೊಡಿಯಾಲಬೈಲು: ಮೇ 20-21ರಂದು ಶ್ರೀ ಮಹಾಮ್ಮಾಯಿ ಮಾರಿಯಮ್ಮ ದೇವಸ್ಥಾನದ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ

ಸಮಗ್ರ ನ್ಯೂಸ್: ಸುಳ್ಯ ನಗರ ವ್ಯಾಪ್ತಿಯ ಕೊಡಿಯಾಲಬೈಲು ಶ್ರೀ ಮಹಾಮ್ಮಾಯಿ ಮಾರಿಯಮ್ಮ ದೇವಸ್ಥಾನ ಮತ್ತು ಪರಿವಾರ ದೈವಗಳ ನವೀಕರಣ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಹಾಗೂ ನೇಮೋತ್ಸವ ಮೇ 20-21 ರಂದು ನಡೆಯಲಿದೆ. ಈ ಕುರಿತು ಮೇ 13 ರಂದು ಸುಳ್ಯ ಪತ್ರಿಕಾ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಜೀರ್ಣೋದ್ಧಾರ ಸಮಿತಿ ಪ್ರಧಾನ ಕಾರ್ಯದರ್ಶಿ ಹರೀಶ್ ರೈ ಉಬರಡ್ಕರವರು ಬ್ರಹ್ಮಕಲಶೋತ್ಸವ ಹಾಗೂ ನೇಮೋತ್ಸವ ನಡೆಸಲು ಎಲ್ಲಾ ಸಿದ್ಧತೆಗಳನ್ನು ಮಾಡಲಾಗಿದೆ. ದೇವಸ್ಥಾನ 20 ಲಕ್ಷ ರೂ ವೆಚ್ಚದಲ್ಲಿ ಜೀರ್ಣೋದ್ಧಾರಗೊಂಡಿದೆ. ಕುಂಟಾರು ರವೀಶ

ಕೊಡಿಯಾಲಬೈಲು: ಮೇ 20-21ರಂದು ಶ್ರೀ ಮಹಾಮ್ಮಾಯಿ ಮಾರಿಯಮ್ಮ ದೇವಸ್ಥಾನದ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ Read More »

ಹೊಸ ಇತಿಹಾಸ ದಾಖಲಿಸಿದ ಸುಳ್ಯ| ಕರ್ನಾಟಕದ ವಿಧಾನಸಭೆಗೆ ಸುಳ್ಯದ ದ್ರೌಪದಿ ಮುರ್ಮು ಭಾಗೀರಥಿ ಮುರುಳ್ಯ ಭರ್ಜರಿ ಎಂಟ್ರಿ| ಸಾಮಾನ್ಯ ಕಾರ್ಯಕರ್ತೆಯನ್ನು ಶಾಸಕಿಯನ್ನಾಗಿಸಿದ ಸುಳ್ಯದ ಜನತೆ

ಸಮಗ್ರ ನ್ಯೂಸ್: ವೃತ್ತಿಯಲ್ಲಿ ಟೈಲರಿಂಗ್, ಹೈನುಗಾರಿಕೆ, ಗೌರವ ಶಿಕ್ಷಕಿಯಾಗಿ ಕೆಲಸ ಮಾಡಿ, ಪ್ರಸ್ತುತ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಸುಳ್ಯದಿಂದ ಸ್ಪರ್ಧಿಸಿ ಸುಮಾರು 35 ವರ್ಷಗಳ ನಂತರ ಇಂದು ಸುಳ್ಯ ಮೀಸಲು ಕ್ಷೇತ್ರದ ನೂತನ ಶಾಸಕಿಯಾಗಿ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯ ಅವರು ಆಯ್ಕೆಯಾಗಿದ್ದಾರೆ. ಸತತವಾಗಿ 35 ವರ್ಷಗಳಿಂದ ಬಿಜೆಪಿಯ ಹಿಡಿತದಲ್ಲಿರುವ ಸುಳ್ಯ ಮೀಸಲು ಕ್ಷೇತ್ರದಲ್ಲಿ ಈ ಸಲ ಎಸ್.ಅಂಗಾರ ಅವರನ್ನು ಬದಲಾವಣೆ ಮಾಡಿ ಹೊಸ ಮುಖಕ್ಕೆ ಟಿಕೆಟ್‌ ನೀಡಿದ್ದು,

ಹೊಸ ಇತಿಹಾಸ ದಾಖಲಿಸಿದ ಸುಳ್ಯ| ಕರ್ನಾಟಕದ ವಿಧಾನಸಭೆಗೆ ಸುಳ್ಯದ ದ್ರೌಪದಿ ಮುರ್ಮು ಭಾಗೀರಥಿ ಮುರುಳ್ಯ ಭರ್ಜರಿ ಎಂಟ್ರಿ| ಸಾಮಾನ್ಯ ಕಾರ್ಯಕರ್ತೆಯನ್ನು ಶಾಸಕಿಯನ್ನಾಗಿಸಿದ ಸುಳ್ಯದ ಜನತೆ Read More »