ಕರಾವಳಿ

ಸಂಘದ ಸ್ವಯಂ ಸೇವಕ ಹುದ್ದೆಯಿಂದ ಮುರಳೀಕೃಷ್ಣ ಹಸಂತಡ್ಕ ಬಿಡುಗಡೆ| ಪಕ್ಷದ ಜವಾಬ್ದಾರಿ ವಹಿಸಲು ವಿಎಚ್ ಪಿ ಸೂಚನೆ

ಸಮಗ್ರ ನ್ಯೂಸ್: ಮೂರು ದಶಕಗಳ ಪರಿವಾರ ಸಂಘಟನೆಗಳ ವಿವಿಧ ಜವಾಬ್ದಾರಿ ನಿರ್ವಹಿಸಿದ ಮುರಳಿಕೃಷ್ಣ ಹಸಂತಡ್ಕ ಅವರನ್ನು ಸಂಘದ ಸ್ವಯಂ ಸೇವಕ ಹುದ್ದೆಯಿಂದ ಬಿಡುಗಡೆ ಮಾಡಲಾಗಿದೆ. ರಾಷ್ಟ್ರೀಯ ಸ್ವಯಂ ಸೇವಕ ಸಂಘದಲ್ಲಿ ಸಕ್ರೀಯರಾಗಿದ್ದು ಪರಿವಾರ ಸಂಘಟನೆಗಳಲ್ಲಿ ಸುದೀರ್ಘ 28 ವರ್ಷಗಳ ಕಾಲ ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸಿದ ಮುರಳಿಕೃಷ್ಣ ಹಸಂತಡ್ಕ ಅವರನ್ನು ಇದೀಗ ಸಂಘದಿಂದ ಪೂರ್ಣವಾಗಿ ಬಿಡುಗಡೆಗೊಳಿಸಿ ಪಕ್ಷ ಸಂಘಟನೆಯನ್ನು ಮಾಡುವಂತೆ ವಿಶ್ವಹಿಂದು ಪರಿಷದ್ ಸೂಚನೆ ನೀಡಿದೆ. ಈ ಬೆಳವಣಿಗೆ ಪುತ್ತೂರಿನ ಮುಂದಿನ ರಾಜಕೀಯದಲ್ಲಿ ಕುತೂಹಲ ಮೂಡಿಸಿದೆ. ವಿದ್ಯಾರ್ಥಿ ಜೀವನದಲ್ಲೇ […]

ಸಂಘದ ಸ್ವಯಂ ಸೇವಕ ಹುದ್ದೆಯಿಂದ ಮುರಳೀಕೃಷ್ಣ ಹಸಂತಡ್ಕ ಬಿಡುಗಡೆ| ಪಕ್ಷದ ಜವಾಬ್ದಾರಿ ವಹಿಸಲು ವಿಎಚ್ ಪಿ ಸೂಚನೆ Read More »

ಕಡಬ: ಅವಸರ ತಂದ ಅಪಘಾತ| ಬೈಕ್ ಸವಾರ ಸಾವು; ಚರಂಡಿಗೆ ಉರುಳಿದ ಇನ್ನೋವಾ

ಸಮಗ್ರ ನ್ಯೂಸ್: ಖಾಸಗಿ ಬಸ್ಸ್ ಅನ್ನು ಓವರ್‌ಟೇಕ್ ಮಾಡುವ ಭರದಲ್ಲಿ ಬೈಕೊಂದು ಸ್ಕಿಡ್ ಆಗಿ ಬಿದ್ದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಸುಬ್ರಹ್ಮಣ್ಯ – ಧರ್ಮಸ್ಥಳ ರಾಜ್ಯ ಹೆದ್ದಾರಿಯ ಇಚಿಲಂಪಾಡಿ ಸಮೀಪದ ನೂಜಿಬಾಳ್ತಿಲ ಎಂಬಲ್ಲಿ ಸೋಮವಾರ(ಆ.26)ದಂದು ನಡೆದಿದೆ. ಮೃತ ಸವಾರನನ್ನು ಶಿವಮೊಗ್ಗ ಜಿಲ್ಲೆಯ ಹಾರನಹಳ್ಳಿ ಗ್ರಾಮದ ಗುತ್ಯಪ್ಪ ಎಂಬವರ ಪುತ್ರ ದೇವರಾಜ್ (22) ಎಂದು ಗುರುತಿಸಲಾಗಿದೆ. ಈತ ತನ್ನ ಸ್ನೇಹಿತರೊಂದಿಗೆ ಬೈಕಿನಲ್ಲಿ ಧರ್ಮಸ್ಥಳ ಯಾತ್ರೆ ಮುಗಿಸಿ ಸುಬ್ರಹ್ಮಣ್ಯಕ್ಕೆ‌ ತೆರಳುತ್ತಿದ್ದ ವೇಳೆ ನೂಜಿಬಾಳ್ತಿಲ ಬೆಥನಿ‌ ಕಾಲೇಜಿನ ಮುಂಭಾಗದಲ್ಲಿ

ಕಡಬ: ಅವಸರ ತಂದ ಅಪಘಾತ| ಬೈಕ್ ಸವಾರ ಸಾವು; ಚರಂಡಿಗೆ ಉರುಳಿದ ಇನ್ನೋವಾ Read More »

ಆಲಂಕಾರು: ಆ.30ರಂದು ಹಿಂದೂ ಜಾಗರಣ ವೇದಿಕೆಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿಯ 9 ನೇ ವರ್ಷದ ಅಟ್ವಿ ಮಡಿಕೆ ಒಡೆಯುವ ಉತ್ಸವ

ಸಮಗ್ರ ನ್ಯೂಸ್: ಆಲಂಕಾರು ಹಿಂದೂ ಜಾಗರಣ ವೇದಿಕೆಯ ಆಶ್ರಯದಲ್ಲಿ ಮೊಸರು ಕುಡಿಕೆ ಉತ್ಸವ ಸಮಿತಿಯ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಠಮಿ ಪ್ರಯುಕ್ತ 9 ನೇ ವರ್ಷದ ಅಟ್ವಿ ಮಡಿಕೆ ಒಡೆಯುವ ಉತ್ಸವವು ಆ.30ರಂದು ಮಧ್ಯಾಹ್ನ ಗಂಟೆ 2.30 ರಿಂದ ಆಲಂಕಾರು ಪೇಟೆಯಲ್ಲಿ ನಡೆಯಲಿದೆ. ಆಲಂಕಾರು ವರ್ತಕ ಸಂಘದ ಅಧ್ಯಕ್ಷರು ಮತ್ತು ಉದ್ಯಮಿ ಲಕ್ಷ್ಮೀನಾರಾಯಣ ಪ್ರಭು ಉದ್ಘಾಟನೆ ಉತ್ಸವಕ್ಕೆ ಚಾಲನೆ ನೀಡಲಿದ್ದಾರೆ. ಕಾರ್ಯಕ್ರಮಗಳು ಸಾರ್ವಜನಿಕ ಅಟ್ಟಿ ಮಡಿಕೆ ಒಡೆಯುವುದು, ಶ್ರೀ ಭಾರತಿ ಶಾಲೆಯ ಪುಟಾಣಿ ಮಕ್ಕಳ ಶ್ರೀ ಕೃಷ್ಣ

ಆಲಂಕಾರು: ಆ.30ರಂದು ಹಿಂದೂ ಜಾಗರಣ ವೇದಿಕೆಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿಯ 9 ನೇ ವರ್ಷದ ಅಟ್ವಿ ಮಡಿಕೆ ಒಡೆಯುವ ಉತ್ಸವ Read More »

ಕೊಲೆ ಆರೋಪಿ ನಟ ದರ್ಶನ್‌ಗೆ ರಾಜಾತಿಥ್ಯ| ಪರಪ್ಪನ ಅಗ್ರಹಾರ ಜೈಲಿನ 7 ಸಿಬ್ಬಂದಿ ಅಮಾನತು| ಶೀಘ್ರದಲ್ಲಿ ಬೇರೆ ಕಾರಾಗೃಹಗಳಿಗೆ ಸ್ಥಳಾಂತರ – ಸಿಎಂ

ಸಮಗ್ರ ನ್ಯೂಸ್: ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್‌ಗೆ ಪರಪ್ಪನ ಆಗ್ರಹಾರ ಜೈಲಿನಲ್ಲಿ ವಿಶೇಷ ಆತಿಥ್ಯ ನೀಡಿ ಕರ್ತವ್ಯ ಲೋಪ ಎಸಗಿದ ಆರೋಪದಡಿ 7 ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೈಲರ್‌ ಶರಣಪ್ಪ ಪ್ರಭು, ಎಸ್‌ ಖಂಡೇಲ್‌ ವಾಲ್, ಅಸಿಸ್ಟೆಂಟ್ ಜೈಲರ್‌ ಎಲ್‌.ಎಸ್. ತಿಪ್ಪೇಸ್ವಾಮಿ, ಶ್ರೀಕಾಂತ್ ತಲ್ವಾರ್, ಹೆಡ್‌ ವಾರ್ಡರ್‌ ವೆಂಕಪ್ಪ, ಸಂಪತ್ ಕುಮಾರ್, ವಾರ್ಡರ್ ಬಸಪ್ಪ ತೇಲಿ ಎಂಬವರನ್ನು ಅಮಾನತು ಮಾಡಲಾಗಿದೆ ಎಂದು

ಕೊಲೆ ಆರೋಪಿ ನಟ ದರ್ಶನ್‌ಗೆ ರಾಜಾತಿಥ್ಯ| ಪರಪ್ಪನ ಅಗ್ರಹಾರ ಜೈಲಿನ 7 ಸಿಬ್ಬಂದಿ ಅಮಾನತು| ಶೀಘ್ರದಲ್ಲಿ ಬೇರೆ ಕಾರಾಗೃಹಗಳಿಗೆ ಸ್ಥಳಾಂತರ – ಸಿಎಂ Read More »

ಕುಕ್ಕೆ ಸುಬ್ರಹ್ಮಣ್ಯ: ಪಾರ್ಕಿಂಗ್ ನಿಯಮ ಉಲ್ಲಂಘಿಸಿದರೆ ದಂಡ ಫಿಕ್ಸ್

ಸಮಗ್ರ ನ್ಯೂಸ್: ಕುಕ್ಕೆ ಸುಬ್ರಹ್ಮಣ್ಯದ ಪೇಟೆಯಲ್ಲಿ ಸುಗಮ ಸಂಚಾರ ಹಿನ್ನೆಲೆಯಲ್ಲಿ ಇತ್ತೀಚೆಗೆ ಹೊಸದಾಗಿ ಜಾರಿ ಮಾಡಲಾಗಿರುವ ಪಾರ್ಕಿಂಗ್‌ ಹಾಗೂ ಸಂಚಾರ ನಿಯಮ ಉಲ್ಲಂಘಿಸಿದಲ್ಲಿ ಶನಿವಾರದಿಂದ ದಂಡ ವಾಪತಿಸಬೇಕಾದ ನಿಯಮ ಜಾರಿಗೆ ಬಂದಿದೆ. ಪ್ರಸಿದ್ಧ ಯಾತ್ರಾ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿನ ವಾಹನ ದಟ್ಟಣೆ ನಿಯಂತ್ರಿಸುವ ಉದ್ದೇಶದಿಂದ ಸುಬ್ರಹ್ಮಣ್ಯ ಪೊಲೀಸ್‌ ವತಿಯಿಂದ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ, ಸುಬ್ರಹ್ಮಣ್ಯ ಗ್ರಾಮ ಪಂಚಾಯತ್‌, ವಿವಿಧ ಇಲಾಖೆಗಳು, ಸಾರ್ವಜನಿಕರ ಸಭೆ ನಡೆಸಿ ಹೊಸ ಪಾರ್ಕಿಂಗ್‌ ಹಾಗೂ ಸಂಚಾರ ನಿಯಮ ಜಾರಿಗೊಳಿಸಲಾಗಿತ್ತು. ಹೊಸ ನಿಯಮದ ಬಗ್ಗೆ

ಕುಕ್ಕೆ ಸುಬ್ರಹ್ಮಣ್ಯ: ಪಾರ್ಕಿಂಗ್ ನಿಯಮ ಉಲ್ಲಂಘಿಸಿದರೆ ದಂಡ ಫಿಕ್ಸ್ Read More »

ಸುಳ್ಯ: ಅಪಘಾತದಲ್ಲಿ ಸಾವನ್ನಪ್ಪಿದ ಜೊತೆಗಾರ| ಮನಕಲಕಿದ ಶ್ವಾನಗಳ ಮೂಕರೋದನೆ

ಸಮಗ್ರ ನ್ಯೂಸ್: ಅಪಘಾತದಲ್ಲಿ ನಾಯಿಯೊಂದು ಸಾವನ್ನಪ್ಪಿದ್ದು, ಸದಾ ಅದರ ಜತೆಗಿರುತ್ತಿದ್ದ ಇತರ ನಾಯಿಗಳು ಮೃತದೇಹದ ಬಳಿ ರೋದಿಸುತ್ತಿದ್ದ ಮನಕಲಕುವ ದೃಶ್ಯ ಸುಳ್ಯ ಪೈಚಾರ್‌ ಜಂಕ್ಷನ್‌ನಲ್ಲಿ ಕಂಡುಬಂತು. ಮಾಣಿ- ಮೈಸೂರು ಹೆದ್ದಾರಿಯ ಪೈಚಾರ್‌ ಜಂಕ್ಷನ್‌ನಲ್ಲಿ 4-5 ನಾಯಿಗಳು ಓಡಾಡಿಕೊಂಡಿದ್ದು, ಇವುಗಳಲ್ಲೊಂದು ಬಸ್ಸಿನಡಿಗೆ ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದೆ. ಇದರ ಮೃತದೇಹದ ಬಳಿಯಲ್ಲಿ ನೆರೆದ ಇತರ ನಾಯಿಗಳು ತುಂಬಾ ರೋದಿಸಿದವು. ಇದರ ವೀಡಿಯೋ ಜಾಲತಾಣದಲ್ಲಿ ವೈರಲ್‌ ಆಗಿದೆ. ಬಳಿಕ ನಾಯಿಯ ಮೃತದೇಹವನ್ನು ತೆರವು ಮಾಡಲಾಯಿತು.

ಸುಳ್ಯ: ಅಪಘಾತದಲ್ಲಿ ಸಾವನ್ನಪ್ಪಿದ ಜೊತೆಗಾರ| ಮನಕಲಕಿದ ಶ್ವಾನಗಳ ಮೂಕರೋದನೆ Read More »

ಪುತ್ತೂರು: ಚೂರಿ ಇರಿತ ಪ್ರಕರಣದ ವಿದ್ಯಾರ್ಥಿಗಳಿಬ್ಬರ ಮನೆಗೆ ಶಾಸಕ ಅಶೋಕ್ ರೈ ಭೇಟಿ

ಸಮಗ್ರ ನ್ಯೂಸ್: ಪುತ್ತೂರಿ‌ನ ಕೊಂಬೆಟ್ಟು ಸರಕಾರಿ ಕಾಲೇಜಿನ ವಿದ್ಯಾರ್ಥಿನಿಯು ಸಹ ಪಾಠಿ ವಿದ್ಯಾರ್ಥಿ ವಿರುದ್ಧ ಚೂರಿ ಇರಿತದ ಆರೋಪದ ಬಗ್ಗೆ ತನಿಖೆ ನಡೆಯು ತ್ತಿದ್ದು, ಶಾಸಕ ಅಶೋಕ್‌ ಕುಮಾರ್‌ ರೈ ವಿದ್ಯಾರ್ಥಿಗಳಿಬ್ಬರ ಮನೆಗೂ ಭೇಟಿ ನೀಡಿದರು. ಬಳಿಕ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ| ಯತೀಶ್‌ ಎನ್‌. ಬಳಿ ದೂರವಾಣಿ ಮೂಲಕ ಮಾತನಾಡಿದ ಶಾಸಕರು, ಕಾಲೇಜಿನಲ್ಲಿ ಏನು ಘಟನೆ ನಡೆದಿದೆಯೋ ಅದರ ಬಗ್ಗೆ ಕೂಲಂಕಷವಾಗಿ, ನ್ಯಾಯಯುತವಾಗಿ ತನಿಖೆ ನಡೆಸಬೇಕು. ಇದರಲ್ಲಿ ಯಾವುದೇ ರಾಜಕೀಯ ಒತ್ತಡವಿಲ್ಲ. ತನಿಖೆ ನಡೆಸಿ ಸತ್ಯಾಸತ್ಯತೆಯನ್ನು ಹೊರ ತನ್ನಿ.

ಪುತ್ತೂರು: ಚೂರಿ ಇರಿತ ಪ್ರಕರಣದ ವಿದ್ಯಾರ್ಥಿಗಳಿಬ್ಬರ ಮನೆಗೆ ಶಾಸಕ ಅಶೋಕ್ ರೈ ಭೇಟಿ Read More »

ಡೈರಿ ರಿಚ್ ಐಸ್ ಕ್ರೀಂ ಮಾಲೀಕರ ಸೊಸೆ ಸುಳ್ಯದ ಐಶ್ವರ್ಯ ಅನುಮಾನಾಸ್ಪದ ಸಾವು ಪ್ರಕರಣಕ್ಕೆ ಮರುಜೀವ| ನೂತನ ಪ್ರಾಸಿಕ್ಯೂಟರ್ ನೇಮಿಸಿದ ರಾಜ್ಯ ಸರ್ಕಾರ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಕನಕಮಜಲು ಮೂಲದ ಮಹಿಳೆ ಐಶ್ವರ್ಯ ಬೆಂಗಳೂರಿನಲ್ಲಿ ಅನುಮಾನಾಸ್ಪದವಾಗಿ ಸಾವಿಗೆ ಶರಣಾಗಿದ್ದ ಪ್ರಕರಣಕ್ಕೆ ಮರುಜೀವ ನೀಡಲಾಗಿದ್ದು ನೂತನ ಪಬ್ಲಿಕ್‌ ಪ್ರಾಸಿಕ್ಯೂಟರ್‌ ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಸರ್ಕಾರದ ಪರ ಹೈಕೋರ್ಟ್‌ಗೆ ಹಿರಿಯ ವಕೀಲ ಶ್ಯಾಮ್ ಸುಂದರ್ ಅವರನ್ನು ಪಬ್ಲಿಕ್ ಪ್ರಾಸಿಕ್ಯೂಟರ್ ಆಗಿ ರಾಜ್ಯ ಸರ್ಕಾರ ನೇಮಿಸಿದೆ. 2023ರ ಅಕ್ಟೋಬರ್ 26ರಂದು ಸುಳ್ಯ ಮೂಲದ ಐಶ್ವರ್ಯ ಗೋವಿಂದರಾಜ ನಗರದ ತಮ್ಮ ತಂದೆಯ ಮನೆಯಲ್ಲಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದರು.

ಡೈರಿ ರಿಚ್ ಐಸ್ ಕ್ರೀಂ ಮಾಲೀಕರ ಸೊಸೆ ಸುಳ್ಯದ ಐಶ್ವರ್ಯ ಅನುಮಾನಾಸ್ಪದ ಸಾವು ಪ್ರಕರಣಕ್ಕೆ ಮರುಜೀವ| ನೂತನ ಪ್ರಾಸಿಕ್ಯೂಟರ್ ನೇಮಿಸಿದ ರಾಜ್ಯ ಸರ್ಕಾರ Read More »

ಮಡಿಕೇರಿ: ಲಾರಿ – ಟ್ಯಾಂಕರ್ ನಡುವೆ ಡಿಕ್ಕಿ; ಓರ್ವ ಸಾವು

ಸಮಗ್ರ ನ್ಯೂಸ್: ಲಾರಿ ಮತ್ತು ಟ್ಯಾಂಕರ್ ನಡುವೆ ಢಿಕ್ಕಿ ಸಂಭವಿಸಿ ಓರ್ವ ಸಾವನ್ನಪ್ಪಿರುವ ಘಟನೆ ಗುಡ್ಡೆಹೊಸೂರುವಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಕುಶಾಲನಗರದಿಂದ ಸುಂಟಿಕೊಪ್ಪಕ್ಕೆ ಬರುತ್ತಿದ್ದ ಲಾರಿ ಮತ್ತು ಕುಶಾಲನಗರದ ಕಡೆ ತೆರಳುತ್ತಿದ್ದ ಟ್ಯಾಂಕರ್ ನಡುವೆ ಢಿಕ್ಕಿ ಸಂಭವಿಸಿದೆ. ಮೃತ ವ್ಯಕ್ತಿಯನ್ನು ಲಾರಿಯಲ್ಲಿದ್ದ ಸುಂಟಿಕೊಪ್ಪದ ಕಾರ್ಮಿಕ ರಾಜು ಎಂದು ಗುರುತಿಸಲಾಗಿದೆ. ಲಾರಿ ಚಾಲಕ 7ನೇ ಹೊಸಕೋಟೆಯ ಜಬ್ಬಾರ್ ಅವರಿಗೂ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮಡಿಕೇರಿ: ಲಾರಿ – ಟ್ಯಾಂಕರ್ ನಡುವೆ ಡಿಕ್ಕಿ; ಓರ್ವ ಸಾವು Read More »

ಕಾರ್ಕಳದಲ್ಲಿ ಸಾಮೂಹಿಕ ಅತ್ಯಾಚಾರ ನಡೆದಿಲ್ಲ| ಉಡುಪಿ ಪಶ್ಚಿಮ ವಲಯ ಐಜಿಪಿ ಸ್ಪಷ್ಟನೆ

ಸಮಗ್ರ ನ್ಯೂಸ್: ಕಾರ್ಕಳದಲ್ಲಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿಲ್ಲ ಎಂದು ಉಡುಪಿ ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್ ಸ್ಪಷ್ಟನೆ ನೀಡಿದ್ದಾರೆ. ಹಿಂದೂ ಯುವತಿಯನ್ನು ಕೇವಲ 3 ತಿಂಗಳಲ್ಲಿ ಪುಸಲಾಯಿಸಿದ ಆರೋಪಿ ಅಲ್ತಾಫ್ ಹಾಗೂ ಯುವಕರಿಬ್ಬರು, ಕಾರಿನಲ್ಲಿ ಪಾರ್ಟಿ ಮಾಡುವುದಾಗಿ ಕರೆದೊಯ್ದು ಬಿಯರ್‌ನಲ್ಲಿ ಡ್ರಗ್ಸ್ ಮಿಶ್ರಣ ಮಾಡಿ ಕೊಟ್ಟು ಪ್ರಜ್ಞೆ ತಪ್ಪಿಸಿ ಅತ್ಯಾಚಾರ ಮಾಡಿದ್ದಾರೆ. ಇದರಲ್ಲಿ ಯುವಕ ಅಲ್ತಾಫ್ ಅತ್ಯಾಚಾರ ಮಾಡಿದ್ದು, ಇದು ಗ್ಯಾಂಗ್ ರೇಪ್ ಅಲ್ಲವೆಂದು ಉಡುಪಿ ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್

ಕಾರ್ಕಳದಲ್ಲಿ ಸಾಮೂಹಿಕ ಅತ್ಯಾಚಾರ ನಡೆದಿಲ್ಲ| ಉಡುಪಿ ಪಶ್ಚಿಮ ವಲಯ ಐಜಿಪಿ ಸ್ಪಷ್ಟನೆ Read More »