ಕರಾವಳಿ

ಕರಾವಳಿ, ಒಳನಾಡಿನ ಹಲವೆಡೆ ವ್ಯಾಪಕ ಮಳೆ ಮುನ್ಸೂಚನೆ| ಮುಂದಿನ 48 ಗಂಟೆಗಳಲ್ಲಿ ಭಾರೀ ಮಳೆ ಸಾಧ್ಯತೆ

ಸಮಗ್ರ ನ್ಯೂಸ್: ರಾಜ್ಯದ ಕರಾವಳಿ, ದಕ್ಷಿಣ ಒಳನಾಡು, ಉತ್ತರ ಒಳನಾಡು ವ್ಯಾಪ್ತಿಯ ಕೆಲವು ಜಿಲ್ಲೆಗಳಲ್ಲಿ ಮುಂದಿನ 48 ಗಂಟೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ. ಬುಧವಾರ ಸಹ ಕೊಡಗು, ಮೈಸೂರು, ಚಾಮರಾಜನಗರ, ಮಂಡ್ಯ ಜಿಲ್ಲೆಯ ಅಲ್ಲಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದ್ದು ‘ಯೆಲ್ಲೊ ಅಲರ್ಟ್‌’ ನೀಡಲಾಗಿದೆ. ಕರಾವಳಿ ಭಾಗದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲೂ ಮಳೆಯಾಗಲಿದೆ. ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್‌, ಕಲಬುರಗಿ, ರಾಯಚೂರು, ಯಾದಗಿರಿ, ಕೊಪ್ಪಳ

ಕರಾವಳಿ, ಒಳನಾಡಿನ ಹಲವೆಡೆ ವ್ಯಾಪಕ ಮಳೆ ಮುನ್ಸೂಚನೆ| ಮುಂದಿನ 48 ಗಂಟೆಗಳಲ್ಲಿ ಭಾರೀ ಮಳೆ ಸಾಧ್ಯತೆ Read More »

ಸುಳ್ಯ: ಸ್ನಾನಕ್ಕೆಂದು ತೆರಳಿದ ನಿವೃತ್ತ ಶಿಕ್ಷಕ ಪಯಸ್ವಿನಿಯಲ್ಲಿ ಶವವಾಗಿ ಪತ್ತೆ

ಸಮಗ್ರ ನ್ಯೂಸ್: ಸ್ನಾನಕ್ಕೆಂದು ತೆರಳಿದ ವ್ಯಕ್ತಿಯೊಬ್ಬರು ಸಂಜೆಯ ವೇಳೆಗೆ ಶವವಾಗಿ ಪತ್ತೆಯಾಗಿರುವ ಘಟನೆ ಎ.30 ರಂದು ಸುಳ್ಯ ಸಮೀಪದ ಅರಂಬೂರಿನಲ್ಲಿ‌ ನಡೆದಿದೆ. ಮೃತ ವ್ಯಕ್ತಿಯನ್ನು ಅರಂಬೂರು ಮಜಿಗುಂಡಿ ನಿವಾಸಿ ನಿವೃತ್ತ ಶಿಕ್ಷಕ ದಿನೇಶ್ .ಕೆ (65) ಎಂದು ಗುರುತಿಸಲಾಗಿದೆ. ಇವರು ಬೆಳಿಗ್ಗೆ ಮನೆಯಿಂದ ಸ್ನಾನ ಮಾಡಲೆಂದು ಪಯಸ್ವಿನಿ‌ ನದಿಗೆ ಹೋದವರು ಬಹಳ ಹೊತ್ತು ಕಳೆದರೂ ಮರಳಿ ಮನೆಗೆ ಬಾರದ ಹಿನ್ನೆಲೆಯಲ್ಲಿ ಮನೆಯವರು ಮತ್ತು ಸ್ಥಳೀಯರು ವಿಷಯ ತಿಳಿದು ಸುತ್ತಮುತ್ತಲಿನ ಪ್ರದೇಶದಲ್ಲಿ ಹುಡುಕಾಟ ನಡೆಸಿದ್ದಾರೆ. ಸಂಜೆ ವೇಳೆ ಅವರ

ಸುಳ್ಯ: ಸ್ನಾನಕ್ಕೆಂದು ತೆರಳಿದ ನಿವೃತ್ತ ಶಿಕ್ಷಕ ಪಯಸ್ವಿನಿಯಲ್ಲಿ ಶವವಾಗಿ ಪತ್ತೆ Read More »

ಬೆಳ್ಳಾರೆ: ಪ್ರವೀಣ್ ನೆಟ್ಟಾರು ಮನೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಭೇಟಿ

ಸಮಗ್ರ ನ್ಯೂಸ್: ಕಳೆದ ಜುಲೈ ತಿಂಗಳಲ್ಲಿ ದುಷ್ಕರ್ಮಿಗಳಿಂದ ಹತ್ಯೆಯಾದ ಬಿಜೆಪಿ ಯುವ ನಾಯಕ ಬೆಳ್ಳಾರೆಯ ಪ್ರವೀಣ್ ನೆಟ್ಟಾರು ಮನೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಇಂದು ಭೇಟಿ ನೀಡಿದರು. ಪ್ರವೀಣ್ ನೆಟ್ಟಾರು ಮನೆಗೆ ಆಗಮಿಸಿದ ಜೆ.ಪಿ.ನಡ್ಡಾ ಅವರನ್ನು ಮನೆಯವರು ಸ್ವಾಗತಿಸಿದರು. ಬಳಿಕ ಜೆ.ಪಿ. ನಡ್ಡಾ ಅವರು ದಿ.ಪ್ರವೀಣ್ ನೆಟ್ಟಾರು ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿದರು. ಬಳಿಕ ಬಿಜೆಪಿ ವತಿಯಿಂದ ನಿರ್ಮಿಸಿಕೊಡಲಾದ ನೂತನ ಮನೆಯನ್ನು ವೀಕ್ಷಿಸಿದರು. ಮನೆಯವರ ಜೊತೆ ಮಾತುಕತೆ ನಡೆಸಿದರು. ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್

ಬೆಳ್ಳಾರೆ: ಪ್ರವೀಣ್ ನೆಟ್ಟಾರು ಮನೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಭೇಟಿ Read More »

ಓದಿನಲ್ಲಿ ಗೆಲುವು ಕಂಡ ಆಳ್ವಾಸ್‍ನ ಇಬ್ಬರು ಕುವರಿಯರು

ಸತತ ಪ್ರಯತ್ನ ಸನ್ಮಾರ್ಗಕ್ಕೆ ದಾರಿ ಎಂಬಂತೆ ಯಶಸ್ಸು ಕಂಡ ಆಳ್ವಾಸ್ ಪದವಿ ಪೂರ್ವ ಕಾಲೇಜಿನ ಕಣ್ಮಣಿಗಳಾದ ಅನನ್ಯ ಕೆ.ಎ. ಮತ್ತು ದಿಶಾ ರಾವ್ ಸಾಂಸ್ಕೃತಿಕ ಮತ್ತು ಕ್ರೀಡೆಗೆ ಹೆಸರುವಾಸಿಯಾಗಿರುವ ಆಳ್ವಾಸ್ ಕಾಲೇಜು ಇದೀಗ ಶಿಕ್ಷಣದಲ್ಲೂ ದಾಖಲೆ ಬರೆಯುವಂತೆ ಮಾಡಿದ್ದಾರೆ. ಹೆಣ್ಣು ಅಬಲೆ ಅಲ್ಲ ಸಬಲೆ ಎಂಬ ಮಾತು ಸುಳ್ಳಲ್ಲ , ಸಾಧಿಸುವೆನೆಂಬ ಛಲವಿದ್ದರೆ ಸಂಪೂರ್ಣ ಅಂಕ ಗಳಿಸುವುದಕ್ಕೂ ಸೈ ಎಂದು ಕರ್ನಾಟಕ ಪದವಿ ಪೂರ್ವ ಶಿಕ್ಷಣ ಇಲಾಖೆಯಲ್ಲೆ ವಿಸ್ಮಯ ಸೃಷ್ಟಿ ಮಾಡಿ ರಾಜ್ಯದಲ್ಲೇ ಪ್ರಥಮ ಸ್ಥಾನ ಪಡೆದ

ಓದಿನಲ್ಲಿ ಗೆಲುವು ಕಂಡ ಆಳ್ವಾಸ್‍ನ ಇಬ್ಬರು ಕುವರಿಯರು Read More »

ಇಂದು ಸುಳ್ಯಕ್ಕೆ ಆಗಮಿಸಲಿದ್ದಾರೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ

ಸಮಗ್ರ ಸಮಾಚಾರ: ಸುಳ್ಯಕ್ಕೆ ಇಂದು ಸಂಜೆ ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಆಗಮಿಸಲಿದ್ದಾರೆ. ಸುಳ್ಯದ ಶ್ರೀ ಚೆನ್ನಕೇಶವ ದೇವಸ್ಥಾನದ ಬಳಿ ಸಂಜೆ ೪.೩೦ಕ್ಕೆ ನಡೆಯುವ ಚುನಾವಣಾ ಪ್ರಚಾರ ಸಭೆಯಲ್ಲಿ ಅವರು ಭಾಗವಹಿಸಲಿದ್ದಾರೆ.ಇಂದು ಸಂಜೆ ೪ ಗಂಟೆಗೆ ಸುಳ್ಯಕ್ಕೆ ಹೆಲಿಕಾಫ್ಟರ್ ಮೂಲಕ ಜೆ.ಪಿ.ನಡ್ಡಾ ಆಗಮಿಸಲಿದ್ದಾರೆ. ಬಳಿಕ ರಸ್ತೆ ಮಾರ್ಗದ ಮೂಲಕ ಜೆ.ಪಿ.ನಡ್ಡಾ ಅವರು ನೇರವಾಗಿ ಬೆಳ್ಳಾರೆಯ ಪ್ರವೀಣ್ ನೆಟ್ಟಾರು ಅವರ ಮನೆಗೆ ಭೇಟಿ ನೀಡಲಿದ್ದಾರೆ. ನಳಿನ್‌ಕುಮಾರ್ ಕಟೀಲ್ ನೇತೃತ್ವದಲ್ಲಿ ಬಿಜೆಪಿ ವತಿಯಿಂದ ಪ್ರವೀಣ್ ನೆಟ್ಟಾರು

ಇಂದು ಸುಳ್ಯಕ್ಕೆ ಆಗಮಿಸಲಿದ್ದಾರೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ Read More »

ಮೇ.೧ ರಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಮಂಗಳೂರಿಗೆ

ಸಮಗ್ರ ನ್ಯೂಸ್; ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು ಮೇ ೧ರಂದು ಮಂಗಳೂರಿಗೆ ಆಗಮಿಸಿ ವಿವಿಧ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ಕುರಿತು ವಿಧಾನ ಪರಿಷತ್ ಸದಸ್ಯ ಬಿ.ಎಂ. ಫಾರುಕ್ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಮಧ್ಯಾಹ್ನ ಕೃಷ್ಣಾಪುರದ ಫಿಝ ಗಾರ್ಡನ್ ಹೆಲಿಪಾಡ್ ಗೆ ಅಗಮಿಸಲಿದ್ದು, ಸುರತ್ಕಲ್ ನಲ್ಲಿ ಪತ್ರಿಕಾಗೋಷ್ಠಿ ನಡೆಸಲಿದ್ದಾರೆ. ಬಳಿಕ ಸುಂಕದಕಟ್ಟೆ ಅಂಬಿಕಾ ಅನ್ನಪೂರ್ಣೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಲಿದ್ದಾರೆ. ನಂತರ ಬಲವಂಡಿ ದೈವಸ್ಥಾನ, ಗುರುಪುರ ಕಂಬಳ ದರ್ಗಾ ಭೇಟಿ ನೀಡಲಿದ್ದಾರೆ. ಸಂಜೆ ೫ ಗಂಟೆಗೆ ಗುರುಪುರ ಕೈಕಂಬದ ವಸ್ತು

ಮೇ.೧ ರಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಮಂಗಳೂರಿಗೆ Read More »

ಸುಳ್ಯದಲ್ಲಿ ಮತ್ತೆ ಮಳೆಪಯಸ್ವಿನಿಯ ನೀರು ಸಂಗ್ರಹಣದಿಂದ ನೀರು ಹೊರಕ್ಕೆ

ಸಮಗ್ರ ಸಮಾಚಾರ:ಕೆಲ ದಿನಗಳ ಹಿಂದೆ ಹಾಗೂ ಶನಿವಾರ ಸುಳ್ಯ ತಾಲೂಕಿನಲ್ಲಿ ಉತ್ತಮ ಮಳೆಯಾಗಿದ್ದು, ಸುಳ್ಯದ ಪಯಸ್ವಿನಿ ನದಿಯಲ್ಲಿ ನೀರಿನ ಮಟ್ಟ ಮತ್ತೆ ತುಸು ಏರಿಕೆಯಾಗಿದೆ. ನದಿಯ ಸಂಗ್ರಹಣದಿಂದ ನೀರನ್ನು ಹೊರಕ್ಕೆ ಬಿಡಲಾಗಿದೆ. ಪಯಸ್ವಿನಿಯಲ್ಲಿ ನೀರಿನ ಮಟ್ಟ ಇಳಿಕೆಗೊಂಡ ಹಿನ್ನಲೆಯಲ್ಲಿ ನಗರಕ್ಕೆ ಕುಡಿಯುವ ನೀರು ಪೊರೈಸಲು ಪಯಸ್ವಿನಿಯ ಜಾಕ್‌ವೆಲ್ ಬಳಿ ನೀರನ್ನು ಮಣ್ಣು ಹಾಕಿ ಹಿಡಿದಿಡಲಾಗಿತ್ತು. ಸುಳ್ಯದಲ್ಲಿ ಮಳೆಯಾದ ಹಿನ್ನಲೆಯಲ್ಲಿ ನದಿಯಲ್ಲಿ ನೀರು ಏರಿಕೆಗೊಂಡಿದ್ದು, ನದಿಯಿಂದ ನಗರಕ್ಕೆ ನೀರು ಸರಬರಾಜು ಮಾಡುವ ನೀರು ಸಂಗ್ರಹಣ ಸ್ಥಳದಲ್ಲಿ ನೀರಿನ ಮಟ್ಟ

ಸುಳ್ಯದಲ್ಲಿ ಮತ್ತೆ ಮಳೆಪಯಸ್ವಿನಿಯ ನೀರು ಸಂಗ್ರಹಣದಿಂದ ನೀರು ಹೊರಕ್ಕೆ Read More »

ಮಂಗಳೂರು: ವರ್ಕ್ ಫ್ರಂ ಹೋಮ್ ಹೆಸರಲ್ಲಿ 1.45 ಲಕ್ಷ ರೂ. ವಂಚನೆ

ಫೆ. 20ರಂದು ಫೇಸ್ಬುಕ್ನಲ್ಲಿ “ವರ್ಕ್ ಫ್ರಂ ಹೋಮ್ ವಿದ್ ಅಮೆಜಾನ್’ ಎಂಬ ಜಾಹೀರಾತು ಕಂಡ ವ್ಯಕ್ತಿಯೊಬ್ಬರು ಅದನ್ನು ಕ್ಲಿಕ್ ಮಾಡಿದಾಗ ವಾಟ್ಸ್ಆ್ಯಪ್ ಪೇಜ್ ತೆರೆದುಕೊಂಡಿತ್ತು. ಅದರಲ್ಲಿ ಲಿಂಕ್ವೊಂದನ್ನು ಕಳುಹಿಸಲಾಗಿತ್ತು. ಫೆ.21ರಂದು ಲಿಂಕನ್ನು ಕ್ಲಿಕ್ ಮಾಡಿ ಅದರಲ್ಲಿ ತಿಳಿಸಿದಂತೆ ನೋಂದಣಿ ಮೊತ್ತವಾಗಿ 200 ರೂ. ಪಾವತಿಸಿದ್ದರು.

ಮಂಗಳೂರು: ವರ್ಕ್ ಫ್ರಂ ಹೋಮ್ ಹೆಸರಲ್ಲಿ 1.45 ಲಕ್ಷ ರೂ. ವಂಚನೆ Read More »

Weather report: ಹವಾಮಾನ ವರದಿ| ಮುಂದಿನ 48 ಗಂಟೆಗಳಲ್ಲಿ ರಾಜ್ಯಾದ್ಯಂತ ಗುಡುಗು ಸಹಿತ ಮಳೆ ಸಾಧ್ಯತೆ

ಸಮಗ್ರ ನ್ಯೂಸ್: ರಾಜ್ಯದ ದಕ್ಷಿಣ, ಉತ್ತರ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 48 ಗಂಟೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಒಳನಾಡಿನ ಬೀದರ್, ಕಲಬುರಗಿ, ವಿಜಯಪುರ, ರಾಯಚೂರು, ಯಾದಗಿರಿ ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಮಳೆಯಾಗಲಿದೆ. ರಾಯಚೂರಿನಲ್ಲಿ 7 ಸೆಂ.ಮೀ ಮಳೆಯಾಗಿದೆ, ಕೆಂಭಾವಿ, ಇಳಕಲ್, ಶೋರಾಪುರ, ಸಂತೆಬೆನ್ನೂರು, ಕಾಟಿಕೆರೆ, ಯುಗಟಿ, ಕುರ್ಡಿ, ಮಾನ್ವಿ, ಗಬ್ಬೂರು,

Weather report: ಹವಾಮಾನ ವರದಿ| ಮುಂದಿನ 48 ಗಂಟೆಗಳಲ್ಲಿ ರಾಜ್ಯಾದ್ಯಂತ ಗುಡುಗು ಸಹಿತ ಮಳೆ ಸಾಧ್ಯತೆ Read More »