ಕರಾವಳಿ

ಹವಾಮಾನ ವರದಿ(Weather Report) ಕರ್ನಾಟಕದ ಈ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಸಮಗ್ರ ನ್ಯೂಸ್: ಕರ್ನಾಟಕದ ದಕ್ಷಿಣ ಹಾಗೂ ಉತ್ತರ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಒಳನಾಡಿನ ಬೀದರ್, ಬಾಗಲಕೋಟೆ, ಬೆಳಗಾವಿ, ಗದಗ, ಹಾವೇರಿ, ರಾಯಚೂರು, ಕಲಬುರಗಿ, ಯಾದಗಿರಿ, ಕೊಪ್ಪಳ, ವಿಜಯಪುರ ಹಾಗೂ ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ತುಮಕೂರು, ವಿಜಯನಗರ, ಶಿವಮೊಗ್ಗ, ರಾಮನಗರ ಜಿಲ್ಲೆಗಳ ಕೆಲವು ಕಡೆಗಳಲ್ಲಿ ಮತ್ತು

ಹವಾಮಾನ ವರದಿ(Weather Report) ಕರ್ನಾಟಕದ ಈ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ Read More »

ಸುಬ್ರಹ್ಮಣ್ಯ: ಅಸ್ವಸ್ಥಗೊಂಡಿದ್ದ ಕಾಡಾನೆ ಸಾವು

ಸಮಗ್ರ ನ್ಯೂಸ್: ಅಸ್ವಸ್ಥಗೊಂಡು ತಿರುಗಾಡುತ್ತಿದ್ದ ಕಾಡಾನೆಯೊಂದು ಕುಕ್ಕೆ ಸುಬ್ರಹ್ಮಣ್ಯ ಸಮೀಪದ ಕೊಂಬಾರು ವ್ಯಾಪ್ತಿಯಲ್ಲಿ ಸಾವನ್ನಪ್ಪಿರುವುದಾಗಿ ವರದಿಯಾಗಿದೆ‌‌. ಕಾಡಾನೆಯು ಸಂಪೂರ್ಣ ನಿತ್ರಾಣಗೊಂಡ ಸ್ಥಿತಿಯಲ್ಲಿ ಕೊಂಬಾರು ಬಳಿ ಹಳ್ಳವೊಂದರಲ್ಲಿ ಪತ್ತೆಯಾಗಿತ್ತು. ಕೆಲವು ದಿನಗಳ ಹಿಂದೆ ಸುಬ್ರಹ್ಮಣ್ಯ ಸಮೀಪದ ಚೇರು ಭಾಗದಲ್ಲಿ ಈ ಕಾಡಾನೆ ಸಂಚಾರ ಮಾಡಿ ಬಳಿಕ ಎರ್ಮಾಯಿಲ್ ಎಂಬಲ್ಲಿ ಮತ್ತೆ ರಸ್ತೆಯಲ್ಲೇ ನಡೆದಾಡಲು ಕಷ್ಟಪಡುವ ಸ್ಥಳೀಯರಿಗೆ ಕಾಣಸಿತ್ತು. ಅರಣ್ಯ ಅಧಿಕಾರಿಗಳ ತಂಡ ಮಾಹಿತಿ ಮಾಹಿತಿ ಲಭ್ಯವಾದ ತಕ್ಷಣವೇ ನುರಿತ ವೈದ್ಯಾಧಿಕಾರಿಗಳನ್ನು ಸಂಪರ್ಕಿಸಿ ಪರಿಶೀಲನೆಗೆ ಮುಂದಾಗಿದ್ದರು. ವೈದ್ಯಕೀಯ ತಜ್ಞರು ಹೇಳುವ

ಸುಬ್ರಹ್ಮಣ್ಯ: ಅಸ್ವಸ್ಥಗೊಂಡಿದ್ದ ಕಾಡಾನೆ ಸಾವು Read More »

‘ಅರುಣ್ ಕುಮಾರ್ ಯಾವ ಸೀಮೆ ಹಿಂದುತ್ವವಾದಿರೀ?’ | ಪುತ್ತಿಲ ವಿರುದ್ದ ಹರಿಹಾಯ್ದ ಕಲ್ಲಡ್ಕ‌ ಪ್ರಭಾಕರ ಭಟ್

ಸಮಗ್ರ ನ್ಯೂಸ್: ಪುತ್ತೂರು ವಿಧಾನಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ, ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ವಿರುದ್ಧ ಆರ್‌ಎಸ್ಎಸ್ ಹಿರಿ ನಾಯಕ ಡಾ. ಕಲ್ಲಡ್ಕ ಪ್ರಭಾಕರ್ ಭಟ್ ಹರಿಹಾಯ್ದಿದ್ದಾರೆ. ಅರುಣ್ ಕುಮಾರ್ ಪುತ್ತಿಲ ಪ್ರವೀಣ್ ನೆಟ್ಟಾರು ಮನೆ ಗೃಹಪ್ರವೇಶಕ್ಕೆ ಆಗಮಿಸಿದ್ದ ಡಾ. ಪ್ರಭಾಕರ್ ಭಟ್ ಸುದ್ದಿಗಾರರೊಂದಿಗೆ ಜೊತೆ ಮಾತನಾಡಿ ಪುತ್ತೂರು ಪಕ್ಷೇತರ ಅಭ್ಯರ್ಥಿ ಅರುಣ್ ಪುತ್ತಿಲ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಅರುಣ್ ಪುತ್ತಿಲ ಯಾವ ಸೀಮೆಯ ಹಿಂದುತ್ವವಾದಿರಿ ಎಂದು ತರಾಟೆಗೆ ತಗೊಂಡ ಅವರು ದೇವಸ್ಥಾನದ ದುಡ್ಡು ಹೊಡೆದ,

‘ಅರುಣ್ ಕುಮಾರ್ ಯಾವ ಸೀಮೆ ಹಿಂದುತ್ವವಾದಿರೀ?’ | ಪುತ್ತಿಲ ವಿರುದ್ದ ಹರಿಹಾಯ್ದ ಕಲ್ಲಡ್ಕ‌ ಪ್ರಭಾಕರ ಭಟ್ Read More »

ಸುಳ್ಯ: ಭಾರೀ ಗಾಳಿ ಮಳೆಗೆ ಚಿಕನ್ ಸೆಂಟರ್ ಮೇಲೆ ಮರ ಬಿದ್ದು ಅವಘಡ

ಸಮಗ್ರ ನ್ಯೂಸ್ : ಬುಧವಾರ ಸಂಜೆ ಸುರಿದ ಭಾರೀ ಗಾಳಿ ಮಳೆಗೆ ಚಿಕನ್ ಸೆಂಟರ್ ಮೇಲೆ ಮರ ಬಿದ್ದು ಅವಘಡ ಸಂಭವಿಸಿದ ಘಟನೆ ಸುಳ್ಯದಲ್ಲಿ ನಡೆದಿದೆ. ಇಲ್ಲಿನ ಪರಿವಾರಕಾನ ಬಳಿ ಇರುವ ನಿತ್ಯ ಚಿಕನ್ ಸೆಂಟರ್ ಇದಾಗಿದ್ದು, ಮರ ಬಿದ್ದ ಪರಿಣಾಮ ಅಪಾರ ನಷ್ಟ ಉಂಟಾಗಿದೆ ಎಂದು ತಿಳಿದು ಬಂದಿದೆ.

ಸುಳ್ಯ: ಭಾರೀ ಗಾಳಿ ಮಳೆಗೆ ಚಿಕನ್ ಸೆಂಟರ್ ಮೇಲೆ ಮರ ಬಿದ್ದು ಅವಘಡ Read More »

ಬೆಳ್ತಂಗಡಿ: ಸೋಮಾವತಿ ನದಿಗೆ ವಿಷಪ್ರಾಶನ| ನೂರಾರು ಮೀನುಗಳ ಮಾರಣಹೋಮ

ಸಮಗ್ರ ನ್ಯೂಸ್: ಬೆಳ್ತಂಗಡಿ ನಗರಕ್ಕೆ ಕುಡಿಯುವ ನೀರಿನ ಪ್ರಮುಖ ಆಶ್ರಯವಾಗಿದ್ದ ಸೋಮಾವತಿ ನದಿ ನೀರಿಗೆ ಕಿಡಿಕೇಡಿಗಳು ವಿಷ ಪದಾರ್ಥ ಹಾಕಿರುವ ಪರಿಣಾಮ ಸಾವಿರಾರು ಮೀನುಗಳ ಮಾರಣಹೋಮ ನಡೆದಿದೆ. ಇಂದು ಬೆಳ್ಳಂಬೆಳಗ್ಗೆ ಘಟನೆ ವರದಿಯಾಗಿದ್ದು, ನಗರಕ್ಕೆ ನೀರು ಸರಬರಾಜು ಮಾಡುತ್ತಿದ್ದ ನದಿಯಲ್ಲಿದ್ದ ಘಟಕಕ್ಕೆ ವಿಷ ಪ್ರಾಶನ ಮಾಡಿದ ಪರಿಣಾಮ ಸಾವಿರಾರು ಮೀನುಗಳ ಮಾರಣ ಸತ್ತುಬಿದ್ದಿವೆ.‌ ನಗರಕ್ಕೆ ಪ್ರಸಕ್ತ ಪ್ರತಿ ದಿನ 10 ಲಕ್ಷ ಲೀಟರ್ ನೀರಿನ ಅವಶ್ಯಕತೆಯಿದ್ದು ಇದೇ ನೀರನ್ನು ಅವಲಂಬಿಸಲಾಗಿತ್ತು. ಆದರೆ ವಿಷ ಪ್ರಾಶನವಾಗಿರುವ ಪರಿಣಾಮ ನೀರು

ಬೆಳ್ತಂಗಡಿ: ಸೋಮಾವತಿ ನದಿಗೆ ವಿಷಪ್ರಾಶನ| ನೂರಾರು ಮೀನುಗಳ ಮಾರಣಹೋಮ Read More »

ಅನಾರೋಗ್ಯ ಹಿನ್ನಲೆ| ಸಚಿವ ಎಸ್.ಅಂಗಾರ ಆಸ್ಪತ್ರೆಗೆ ದಾಖಲು

ಸಮಗ್ರ ನ್ಯೂಸ್: ಅನಾರೋಗ್ಯದ ಹಿನ್ನೆಲೆಯಲ್ಲಿ ಸುಳ್ಯ ಶಾಸಕ ಹಾಗೂ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್‌.ಅಂಗಾರ ಅವರು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಜಠರದ ಅಲ್ಸರ್‌ ಕಾಯಿಲೆಯಿಂದ ಬಳಲುತ್ತಿದ್ದ ಅವರನ್ನು ಮಂಗಳವಾರ ಆಸ್ಪತ್ರೆಗೆ ದಾಖಲಿಸಿದ್ದು, ಬುಧವಾರ(ಎ.26) ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ನಡೆಸಲಾಗಿದೆ. ಸದ್ಯ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.

ಅನಾರೋಗ್ಯ ಹಿನ್ನಲೆ| ಸಚಿವ ಎಸ್.ಅಂಗಾರ ಆಸ್ಪತ್ರೆಗೆ ದಾಖಲು Read More »

ಪುತ್ತೂರು: ಚುನಾವಣೆ ಅಖಾಡದಲ್ಲಿ ಸಂಚಲನ ಸೃಷ್ಟಿಸಿದ ಪುತ್ತಿಲರ ಪ್ರಣಾಳಿಕೆ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಚುನಾವಣಾ ಕಾವು ಏರತೊಡಗುತ್ತಿದ್ದಂತೆಯೇ ಮಳೆಯ ಸಿಂಚನವಾಗುತ್ತಿದೆ. ಬುಧವಾರ ಹನಿಮಳೆಯೊಂದಿಗೆ ಬಿಜೆಪಿ, ಕಾಂಗ್ರೆಸ್ ಪಕ್ಷಗಳು ಪ್ರಚಾರ ನಡೆಸಿದರೆ, ಭಾರಿ ಸಂಚಲನವನ್ನೇ ಸೃಷ್ಟಿಸಿರುವ ಪುತ್ತೂರು ಕ್ಷೇತ್ರದಲ್ಲಿ ಹಿಂದು ಸಂಘಟನೆಗಳ ಮುಖಂಡ ಹಾಗೂ ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ತನ್ನ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದರು. ಜಿಲ್ಲೆಯಲ್ಲಿ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಣಾಳಿಕೆಯೊಂದನ್ನು ಬಿಡುಗಡೆ ಮಾಡುತ್ತಿರುವುದು ಈ ಚುನಾವಣೆಯಲ್ಲಿ ಇದೇ ಮೊದಲಾಗಿದ್ದು, ಪ್ರಚಾರದ ದೃಷ್ಟಿಯಿಂದ ಗಮನ ಸೆಳೆಯುತ್ತಿದೆ. ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಸದ್ದು ಮಾಡಿದ್ದಷ್ಟೇ ಅಲ್ಲ,

ಪುತ್ತೂರು: ಚುನಾವಣೆ ಅಖಾಡದಲ್ಲಿ ಸಂಚಲನ ಸೃಷ್ಟಿಸಿದ ಪುತ್ತಿಲರ ಪ್ರಣಾಳಿಕೆ Read More »

Weather Report| ಹವಾಮಾನ ವರದಿ| ಚಂಡಮಾರುತ ಪರಿಣಾಮ; ಮುಂದಿನ 24ಗಂಟೆಗಳಲ್ಲಿ ರಾಜ್ಯಾದ್ಯಂತ ಮಳೆ ಸಾಧ್ಯತೆ

ಸಮಗ್ರ ನ್ಯೂಸ್: ಮುಂದಿನ 24 ಗಂಟೆಗಳಲ್ಲಿ ಬೆಂಗಳೂರು, ಮೈಸೂರು, ಶಿವಮೊಗ್ಗ ಸೇರಿದಂತೆ 20ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ತಮಿಳುನಾಡಿನಲ್ಲಿ ಚಂಡಮಾರುತ ಅಪ್ಪಳಿಸುವ ಸಾಧ್ಯತೆ ಇದ್ದು, ಇದರ ಪರಿಣಾಮ ಕರ್ನಾಟಕದ ಮೇಲೂ ಆಗುತ್ತಿದೆ. ರಾಜ್ಯದ ಹಲವೆಡೆ ಕಳೆದ ಎರಡು ದಿನಗಳಿಂದ ಮೋಡಕವಿದ ವಾತಾವರಣವಿದ್ದು, ಬಹಳಷ್ಟು ಕಡೆ ಮಳೆಯಾಗಿದೆ. ಉತ್ತರ ಒಳನಾಡಿನ ಬೀದರ್, ಬಾಗಲಕೋಟೆ, ಧಾರವಾಡ, ರಾಯಚೂರು, ಕಲಬುರಗಿ, ಯಾದಗಿರಿ, ಕೊಪ್ಪಳ, ವಿಜಯಪುರ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ದಾವಣಗೆರೆ,

Weather Report| ಹವಾಮಾನ ವರದಿ| ಚಂಡಮಾರುತ ಪರಿಣಾಮ; ಮುಂದಿನ 24ಗಂಟೆಗಳಲ್ಲಿ ರಾಜ್ಯಾದ್ಯಂತ ಮಳೆ ಸಾಧ್ಯತೆ Read More »

ಬೆಳ್ತಂಗಡಿ: ಹದಿನೈದು ವರ್ಷದ ಪ್ರೀತಿ ಹನಿಮೂನ್ ದಿನ ಬಂದ ಮೆಸೇಜ್‌ನಿಂದ ಕಳಚಿ ಬಿತ್ತು!! ಗಂಡನ ವಾಟ್ಸಪ್ ಚೆಕ್ ಮಾಡಿದಾಕೆ ಪ್ರಾಣವನ್ನೇ ಕಳೆದುಕೊಂಡ್ಳು! ನಿಷ್ಕಲ್ಮಶ ಪ್ರೀತಿ ಸಾವಲ್ಲಿ ಅಂತ್ಯ| ಪ್ರೀತಿ ಕೊಂದ ಕೊಲೆಗಾರ

ಸಮಗ್ರ ನ್ಯೂಸ್: ಈ ಮುದ್ದಾದ ಜೋಡಿಯನ್ನು ಒಮ್ಮೆ ನೋಡಿ. 22 ವರ್ಷದ ಸ್ನೇಹ, ಬರೋಬ್ಬರಿ 15 ವರ್ಷದ ಪ್ರೀತಿ ಇವರದ್ದು. ಈಕೆಯ ಹೆಸರು ಕೌಶಲ್ಯ. ಈತನ ಹೆಸರು ಸುಖೇಶ್. ಪ್ರೀತಿಸಿ ಖುಷಿಯಿಂದ ಮದುವೆಯೂ ಆಗಿದ್ದರು. ಆದರೆ ಬೆನ್ನ ಹಿಂದೆ ಸುರ ಸುಂದರಾಂಗ ಪತಿ ಮಾಡಿದ ಕೆಲಸ ಮಾತ್ರ ಊಹೆಗೂ ನಿಲುಕದ್ದು. 15 ವರ್ಷದಿಂದ ಪ್ರೀತಿಸಿ ಮದುವೆಯಾಗಿದ್ದವಳು ಜೊತೆಗಿರುವಾಗಲೇ ತನ್ನ ಅತ್ತಿಗೆಯ ಜೊತೆ ಸಂಬಂಧವಿಟ್ಟುಕೊಂಡಿದ್ದ. ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಬಡ ಕುಟುಂಬದ ಕೌಶಲ್ಯ ಶ್ರೀಮಂತನಾಗಿದ್ದ ಸುಕೇಶ್‌ನ್ನು

ಬೆಳ್ತಂಗಡಿ: ಹದಿನೈದು ವರ್ಷದ ಪ್ರೀತಿ ಹನಿಮೂನ್ ದಿನ ಬಂದ ಮೆಸೇಜ್‌ನಿಂದ ಕಳಚಿ ಬಿತ್ತು!! ಗಂಡನ ವಾಟ್ಸಪ್ ಚೆಕ್ ಮಾಡಿದಾಕೆ ಪ್ರಾಣವನ್ನೇ ಕಳೆದುಕೊಂಡ್ಳು! ನಿಷ್ಕಲ್ಮಶ ಪ್ರೀತಿ ಸಾವಲ್ಲಿ ಅಂತ್ಯ| ಪ್ರೀತಿ ಕೊಂದ ಕೊಲೆಗಾರ Read More »

ಎ.30ರಂದು ಸುಳ್ಯಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭೇಟಿ

ಸಮಗ್ರ ನ್ಯೂಸ್:‌ ಕರಾವಳಿಯಲ್ಲಿ ಚುನಾವಣಾ ಕಾವು ಜೋರಾಗಿದ್ದು, ಅಲ್ಲಲ್ಲಿ ರಾಷ್ಟ್ರೀಯ ನಾಯಕರು ಪ್ರಚಾರದಲ್ಲಿ ತೊಡಗಿದ್ದಾರೆ. ಇದೀಗ ಬಿಜಪಿ ರಾಷ್ಟ್ರೀಯ ಅಧ್ಯಕ್ಷ ಅಧ್ಯಕ್ಷ ಜೆಪಿ ನಡ್ಡಾ ಎ.30ರಂದು ಸುಳ್ಯಕ್ಕೆ ಆಗಮಿಸಲಿದ್ದಾರೆ ಎಂದು ತಿಳಿದು ಬಂದಿದೆ. ಬಿಜೆಪಿ ಅಧ್ಯಕ್ಷ ಜಗತ್ ಪ್ರಕಾಶ್ ನಡ್ಡಾ ಸುಳ್ಯದಲ್ಲಿ ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಜೆಪಿ ನಡ್ಡಾ ಸುಳ್ಯಕ್ಕೆ ಆಗಮಿಸುವುದನ್ನು ಬಿಜೆಪಿ ಮುಖಂಡರು ಖಚಿತ ಪಡಿಸಿದ್ದಾರೆ.

ಎ.30ರಂದು ಸುಳ್ಯಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭೇಟಿ Read More »