ಕರಾವಳಿ

ಬೆಳ್ತಂಗಡಿ: ನಿಡ್ಲೆ ಗ್ರಾಮ ಲೆಕ್ಕಾಧಿಕಾರಿಪೃಥ್ವಿರಾಜ್ ಪಿ.ಶೆಟ್ಟಿ ಗೆ ವರ್ಷದ ಅತ್ಯುತ್ತಮ ಕಂದಾಯ ಅಧಿಕಾರಿ ಪ್ರಶಸ್ತಿ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಪೃಥ್ವಿರಾಜ್ ಪಿ. ಶೆಟ್ಟಿ ಯವರು ಸೆ.27 ರಂದು ಮಾನ್ಯ ಕಂದಾಯ ಸಚಿವರ ಅಧ್ಯಕ್ಷತೆಯಲ್ಲಿ ವಿಕಾಸ ಸೌಧದ ಕೊಠಡಿ ಸಂಖ್ಯೆ 419 ರಲ್ಲಿ ನಡೆದ ಕಂದಾಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ಹಾಗೂ ಅಭಿನಂದನಾ ಸಭೆಯಲ್ಲಿ ಅತ್ಯುತ್ತಮ ಕಂದಾಯ ಅಧಿಕಾರಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಈ ಪ್ರಶಸ್ತಿಯನ್ನು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಸಾರ್ವಜನಿಕರಿಗೆ ಅಚ್ಚುಕಟ್ಟಾಗಿ ಒದಗಿಸಿರುವ ಅಧಿಕಾರಿಗಳ ಸೇವೆಯನ್ನು ಗುರುತಿಸಿ ಜಿಲ್ಲಾಧಿಕಾರಿಗಳಿಗೆ, ಸಹಾಯಕ ಆಯುಕ್ತರುಗಳಿಗೆ, ತಹಶೀಲ್ದಾರಗಳಿಗೆ ಹಾಗೂ ಗ್ರಾಮಾಡಳಿತ […]

ಬೆಳ್ತಂಗಡಿ: ನಿಡ್ಲೆ ಗ್ರಾಮ ಲೆಕ್ಕಾಧಿಕಾರಿಪೃಥ್ವಿರಾಜ್ ಪಿ.ಶೆಟ್ಟಿ ಗೆ ವರ್ಷದ ಅತ್ಯುತ್ತಮ ಕಂದಾಯ ಅಧಿಕಾರಿ ಪ್ರಶಸ್ತಿ Read More »

ಮುಂದುವರಿದ ಮಳೆಯಬ್ಬರ| ಕರಾವಳಿ ಸೇರಿದಂತೆ ಹಲವು ಜಿಲ್ಲೆಗಳಿಗೆ ಎಲ್ಲೋ ಅಲರ್ಟ್

ಸಮಗ್ರ ನ್ಯೂಸ್: ಕರ್ನಾಟಕದ ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಮುಂದಿನ ಎರಡು ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಕಲಬುರಗಿ, ವಿಜಯಪುರ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ವಿಜಯನಗರ, ತುಮಕೂರು, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಕೊಡಗು, ಹಾಸನ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಯಾದಗಿರಿ, ರಾಯಚೂರು, ಕೊಪ್ಪಳ, ಹಾವೇರಿ, ಗದಗ, ಧಾರವಾಡದಲ್ಲಿ

ಮುಂದುವರಿದ ಮಳೆಯಬ್ಬರ| ಕರಾವಳಿ ಸೇರಿದಂತೆ ಹಲವು ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ Read More »

ಅಮೇರಿಕಾ ಪ್ರವಾಸ ಮುಗಿಸಿ ತಾಯ್ನಾಡಿಗೆ ವಾಪಸಾದ ಪಟ್ಲ ಸತೀಶ್ ಶೆಟ್ಟಿ ಯಕ್ಷತಂಡ

ಸಮಗ್ರ ನ್ಯೂಸ್: ಅಮೇರಿಕ ಪ್ರವಾಸ ಕೈಗೊಂಡಿದ್ದ ಯಕ್ಷಧ್ರುವ ಪಟ್ಲ ಫೌಂಡೇಶನ್ ಸ್ಥಾಪಕ ಪಟ್ಲಗುತ್ತು ಸತೀಶ್ ಶೆಟ್ಟಿ ಅವರು ತಮ್ಮ ತಂಡದ ಜೊತೆ ತಾಯ್ನಾಡಿಗೆ ಮರಳಿದ್ದು ಬಜ್ಪೆ ವಿಮಾನ ನಿಲ್ದಾಣದಲ್ಲಿ ಟ್ರಸ್ಟ್ ನ ಪದಾಧಿಕಾರಿಗಳು ಸ್ವಾಗತ ಕೋರಿದರು. ಪಟ್ಲ ಸತೀಶ್ ಶೆಟ್ಟಿ ಅವರ ನೇತೃತ್ವದಲ್ಲಿ 9 ಮಂದಿಯ ತಂಡ ಅಮೇರಿಕ ದೇಶದ ಬೇರೆ ಬೇರೆ ತಾಣಗಳಲ್ಲಿ ಯಕ್ಷಗಾನ ಪ್ರದರ್ಶಿಸಿ 75 ದಿನಗಳ ಬಳಿಕ ತಾಯ್ನಾಡಿಗೆ ಮರಳಿದೆ. ಈ ವೇಳೆ ತಮ್ಮ ಅಮೇರಿಕ ಪ್ರವಾಸದ ಕಥನವನ್ನು ಮಾಧ್ಯಮ ಪ್ರತಿನಿಧಿಗಳೊಂದಿಗೆ ಹಂಚಿಕೊಂಡ

ಅಮೇರಿಕಾ ಪ್ರವಾಸ ಮುಗಿಸಿ ತಾಯ್ನಾಡಿಗೆ ವಾಪಸಾದ ಪಟ್ಲ ಸತೀಶ್ ಶೆಟ್ಟಿ ಯಕ್ಷತಂಡ Read More »

ಪುತ್ತೂರಿನಿಂದ‌‌ ರೋಗಿಯನ್ನು ಸಾಗಿಸುತ್ತಿದ್ದ ಅಂಬ್ಯುಲೆನ್ಸ್ ಪಲ್ಟಿ| ರೋಗಿ‌ ಸಾವು; ಮೂವರಿಗೆ ಗಾಯ

ಸಮಗ್ರ ನ್ಯೂಸ್: ಪುತ್ತೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಆಂಬುಲೆನ್ಸ್ ಪಲ್ಟಿಯಾದ ಪರಿಣಾಮ ಆಂಬ್ಯುಲೆನ್ಸ್ ನಲ್ಲಿದ್ದ ರೋಗಿಯೋರ್ವರು ಮೃತಪಟ್ಟು, ಅವರ ಪತ್ನಿ, ಮಗ ಹಾಗೂ ಸಂಬಂಧಿಕರೋರ್ವ ಗಾಯಗೊಂಡ ಘಟನೆ ಮಂಗಳೂರು ಪಡೀಲು ಸಮೀಪ ನಡೆದಿದೆ. ಮೃತ ರೋಗಿಯನ್ನು ಕಡಬ ತಾಲೂಕಿನ ಹಳೆನೇರೆಂಕಿ ಗ್ರಾಮದ ರಾಮಜಾಲು ನಿವಾಸಿ ದಾಸಪ್ಪ ರೈ(73) ಎಂದು ಗುರುತಿಸಲಾಗಿದೆ. ಹಳೆನೇರೆಂಕಿ ಗ್ರಾಮದ ಕದ್ರ ನಿವಾಸಿ, ಕೂಲಿಕಾರ್ಮಿಕ ದಾಸಪ್ಪ ರೈಯವರಿಗೆ ಮಂಗಳವಾರದಂದು ತಡರಾತ್ರಿ 1.30ರ ವೇಳೆಗೆ ಸ್ಟ್ರೋಕ್ ಆಗಿ ಅನಾರೋಗ್ಯ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರ ಮನೆ ಸಮೀಪದ ನಿವಾಸಿ,

ಪುತ್ತೂರಿನಿಂದ‌‌ ರೋಗಿಯನ್ನು ಸಾಗಿಸುತ್ತಿದ್ದ ಅಂಬ್ಯುಲೆನ್ಸ್ ಪಲ್ಟಿ| ರೋಗಿ‌ ಸಾವು; ಮೂವರಿಗೆ ಗಾಯ Read More »

ರಾಜ್ಯದಲ್ಲಿ ‌ಮತ್ತೆ ಮುಂಗಾರು!! ಇನ್ನೆರಡು ದಿನ ಕರಾವಳಿ, ಮಲೆನಾಡಿಗೆ ರೆಡ್ ಅಲರ್ಟ್| ರಾಜ್ಯಾದ್ಯಂತ ಐದು ದಿನ ಉತ್ತಮ ಮಳೆ ಮುನ್ಸೂಚನೆ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಮುಂದಿನ ಐದು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಕರಾವಳಿ ಮತ್ತು ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಂತ ಮಲೆನಾಡು ಜಿಲ್ಲೆಗಳಿಗೆ ಗುಡುಗು ಮಿಂಚು ಮತ್ತು ಜೋರಾದ ಗಾಳಿಯೊಂದಿಗೆ ಅತ್ಯಧಿಕ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಸೆ. 25 ರಂದು ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಸೆ. 26ರಂದು ಕರಾವಳಿಯ ಎಲ್ಲಾ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ.ಸೆಪ್ಟೆಂಬರ್

ರಾಜ್ಯದಲ್ಲಿ ‌ಮತ್ತೆ ಮುಂಗಾರು!! ಇನ್ನೆರಡು ದಿನ ಕರಾವಳಿ, ಮಲೆನಾಡಿಗೆ ರೆಡ್ ಅಲರ್ಟ್| ರಾಜ್ಯಾದ್ಯಂತ ಐದು ದಿನ ಉತ್ತಮ ಮಳೆ ಮುನ್ಸೂಚನೆ Read More »

ಗುಂಡ್ಯ: KSRTC ಬಸ್ ಹಾಗೂ ಟ್ಯಾಂಕರ್ ‌ನಡುವೆ ಡಿಕ್ಕಿ| ಹಲವು ಪ್ರಯಾಣಿಕರಿಗೆ ಗಾಯ

ಸಮಗ್ರ ನ್ಯೂಸ್: ಕೆಎಸ್‌ಆರ್‌ಟಿಸಿ ಬಸ್ ಹಾಗೂ ಟ್ಯಾಂಕರ್‌ ನಡುವೆ ಡಿಕ್ಕಿ ಸಂಭವಿಸಿ ಬಸ್ಸಿನಲ್ಲಿದ್ದ ಹಲವು ಪ್ರಯಾಣಿಕರು ಗಾಯಗೊಂಡ ಘಟನೆ ಮಂಗಳೂರು-ಬೆಂಗಳೂರು ರಾ.ಹೆ. 75ರ ಶಿರಾಡಿ ಗ್ರಾಮದ ಗುಂಡ್ಯ ಸಮೀಪ ಸಂಭವಿಸಿದೆ. ಮಂಗಳೂರಿನಿಂದ ಬೆಂಗಳೂರು ಕಡೆಗೆ ಹೋಗುತ್ತಿದ್ದ ಟ್ಯಾಂಕರ್‌ ಹಾಗೂ ಸುಬ್ರಹ್ಮಣ್ಯದಿಂದ ಧರ್ಮಸ್ಥಳಕ್ಕೆ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ನಡುವೆ ಗುಂಡ್ಯ ಸಮೀಪ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಟ್ಯಾಂಕರ್‌ ಹಾಗೂ ಬಸ್‌ ಚಾಲಕ ಸಹಿತ ಬಸ್ಸಿನಲ್ಲಿದ್ದ 20ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. ಬಸ್‌ ಚಾಲಕ ಹಾಗೂ ನಿರ್ವಾಹಕನನ್ನು ಪುತ್ತೂರಿನ ಸರಕಾರಿ

ಗುಂಡ್ಯ: KSRTC ಬಸ್ ಹಾಗೂ ಟ್ಯಾಂಕರ್ ‌ನಡುವೆ ಡಿಕ್ಕಿ| ಹಲವು ಪ್ರಯಾಣಿಕರಿಗೆ ಗಾಯ Read More »

ರಾಜ್ಯದಲ್ಲಿ ಮತ್ತೆ ಮುಂದುವರಿದ ಮಳೆಯಬ್ಬರ| ಕರಾವಳಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ

ಸಮಗ್ರ ನ್ಯೂಸ್: ಕರ್ನಾಟಕದ ಕರಾವಳಿಯಲ್ಲಿ ಮತ್ತೆ ಮಳೆಯ ಅಬ್ಬರ ಹೆಚ್ಚಾಗಲಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಿಗೆ ರೆಡ್ ಅಲರ್ಟ್​ ಘೋಷಿಸಲಾಗಿದ್ದು, ಬೆಳಗಾವಿ, ಬೀದರ್, ಕಲಬುರಗಿ, ಯಾದಗಿರಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಿಗೆ ರೆಡ್ ಅಲರ್ಟ್​ ಘೋಷಿಸಲಾಗಿದ್ದು, ಬೆಳಗಾವಿ, ಬೀದರ್, ಕಲಬುರಗಿ, ಯಾದಗಿರಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಇದೇ ವೇಳೆ ಪಶ್ಚಿಮದ ಸಮುದ್ರದ ಮೇಲಿಂದ ಗಂಟೆಗೆ 35ರಿಂದ 45ಕಿ.ಮೀ. ವೇಗದ ಗಾಳಿ

ರಾಜ್ಯದಲ್ಲಿ ಮತ್ತೆ ಮುಂದುವರಿದ ಮಳೆಯಬ್ಬರ| ಕರಾವಳಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ Read More »

ಸುಳ್ಯ: ನೈತಿಕ ಪೊಲೀಸ್ ಗಿರಿ; ಇಬ್ಬರು ಅರೆಸ್ಟ್

ಸಮಗ್ರ ನ್ಯೂಸ್: ಬಸ್ಸಿನಲ್ಲಿ ವಿದ್ಯಾರ್ಥಿನಿಯೊಂದಿಗೆ ಅನುಚಿತವಾಗಿ ವರ್ತಿಸಿದ್ದಾನೆ ಎನ್ನಲಾದ ಯುವಕನಿಗೆ ಸುಳ್ಯದಲ್ಲಿ ತಂಡವೊಂದು ನೈತಿಕ ಪೊಲೀಸ್ ಗಿರಿ ನಡೆಸಿದ ಬಗ್ಗೆ ಪ್ರಕರಣ ದಾಖಲಾಗಿದ್ದು ಇಬ್ಬರನ್ನು ಅರೆಸ್ಟ್ ಮಾಡಲಾಗಿದೆ. ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ವರ್ಷಿತ್ ಚೊಕ್ಕಾಡಿ ಹಾಗೂ ಮಿಥುನ್ ಸುಳ್ಯ ಎಂಬವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕಾಸರಗೋಡಿನ ಅಬ್ದುಲ್ ನಿಯಾಝ್ (22) ಹಲ್ಲೆಗೊಳಗಾದ ಯುವಕ. ಬೆಂಗಳೂರಿನಿಂದ ಸುಳ್ಯಕ್ಕೆ ಬರುವ ಬಸ್ಸಿಗೆ ಸುಳ್ಯದಲ್ಲಿ ಡಿಪ್ಲೋಮ ಕಲಿಯುತ್ತಿರುವ ಸಕಲೇಶಪುರದ ವಿದ್ಯಾರ್ಥಿನಿ ಹತ್ತಿದ್ದು, ಬಸ್ಸಿನಲ್ಲಿ ನಿಯಾಝ್ ಹತ್ತಿರ ಕುಳಿತ್ತಿದ್ದಾರೆ. ಈ ವೇಳೆ

ಸುಳ್ಯ: ನೈತಿಕ ಪೊಲೀಸ್ ಗಿರಿ; ಇಬ್ಬರು ಅರೆಸ್ಟ್ Read More »

ಕುಮಾರಧಾರದಲ್ಲಿ ಕುಸಿತಗೊಂಡ ನೀರಿನ ಮಟ್ಟ/ ಪುಣ್ಯ ಸ್ನಾನಕ್ಕೆ ಅವಕಾಶ

ಸಮಗ್ರ ನ್ಯೂಸ್‌: ಕುಮಾರಧಾರ ನದಿಯಲ್ಲಿ ಅಧಿಕ ಪ್ರಮಾಣದ ನೀರು ಹರಿದು ಬರುತ್ತಿದ್ದು ಸ್ಥಾನಘಟ್ಟದಲ್ಲಿ ನೀರಿನ ಸೆಳೆತ ಜಾಸ್ತಿ ಇರುವುದರಿಂದ ಸಂಭಾವ್ಯ ಅಪಾಯ ತಪ್ಪಿಸುವ ನಿಟ್ಟಿನಲ್ಲಿ ಮುಂಜಾಗೃತಾ ಕ್ರಮವಾಗಿ ಕುಮಾರಧಾರ ನದಿಯಲ್ಲಿ ಭಕ್ತರಿಗೆ ಸ್ನಾನ ಮಾಡಲು ಜಿಲ್ಲಾಡಳಿತದಿಂದ ನಿರ್ಬಂಧ ವಿದಿಸಿತ್ತು. ಇದೀಗ ನೀರಿನ ಮಟ್ಟ ಕಡಿಮೆಯಾದ ಹಿನ್ನೆಲೆಯಲ್ಲಿ ನಿರ್ಬಂಧ ತೆರವುಗೊಳಿಸಿ. ಭಕ್ತರಿಗೆ ಪುಣ್ಯ ಸ್ನಾನ ಮಾಡಲು ಜಿಲ್ಲಾಧಿಕಾರಿಗಳು ಅವಕಾಶ ಮಾಡಿಕೊಟ್ಟಿದ್ದಾರೆ. ರಕ್ಷಣೆಗಾಗಿ ಕುಮಾರಧಾರದಲ್ಲಿ ಗೃಹ ರಕ್ಷಕ ಸಿಬ್ಬಂದಿ ಮತ್ತು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಭದ್ರತಾ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ.

ಕುಮಾರಧಾರದಲ್ಲಿ ಕುಸಿತಗೊಂಡ ನೀರಿನ ಮಟ್ಟ/ ಪುಣ್ಯ ಸ್ನಾನಕ್ಕೆ ಅವಕಾಶ Read More »

ದೇವರ ಆಭರಣವನ್ನೇ ಲಪಾಯಿಟಿಸಿದ ಅರ್ಚಕ

ಸಮಗ್ರ ನ್ಯೂಸ್:ಗಂಗೊಳ್ಳಿ ಖಾರ್ವಿಕೇರಿಯ ಶ್ರೀ ಮಹಾಂಕಾಳಿ ಅಮ್ಮನವರ ದೇವಸ್ಥಾನದ 21 ಲಕ್ಷ ಮೌಲ್ಯದ ಚಿನ್ನದ ಅಭರಣಗಳನ್ನು ಕಳವುಗೈದು ಅದಕ್ಕೆ ಕೆಲವು ನಕಲಿ ಚಿನ್ನಾಭರಣಗಳನ್ನು ದೇವರ ಮೂರ್ತಿ ಮೇಲೆ ಹಾಕಿ ವಂಚಿಸಿದ ಘಟನೆ ಗಂಗೊಳ್ಳಿಯಯಲ್ಲಿ ಸಂಭವಿಸಿದೆ. ಶಿರಸಿ ತಾಲೂಕಿನ ಸಾಲಕಣಿ ಗ್ರಾಮದ ಮೂರೆಗಾರ ಎಂಬಲ್ಲಿನ ನರಸಿಂಹ ಭಟ್ (43) ಬಂಧಿತ ಆರೋಪಿ.ಮಹಾಂಕಾಳಿ ದೇವಸ್ಥಾನದಲ್ಲಿ ದೇವಿಯ ಮೂರ್ತಿಗೆ ಆಡಳಿತ ಮಂಡಳಿ ಹಾಗೂ ಭಕ್ತಾದಿಗಳು ಸೇವೆ, ಹರಕೆ ರೂಪದಲ್ಲಿ ನೀಡಿದ ಚಿನ್ನಾಭರಣಗಳು ಪ್ರತಿದಿನ ದೇವರ ಮೂರ್ತಿಯ ಮೇಲೆ ಇರುತ್ತಿದ್ದವು. ಸೆ.21ರಂದು ಸಂಜೆ

ದೇವರ ಆಭರಣವನ್ನೇ ಲಪಾಯಿಟಿಸಿದ ಅರ್ಚಕ Read More »