ಕರಾವಳಿ

ಎ.15 ರಿಂದ ರಾಜ್ಯದಲ್ಲಿ ಮತ್ತೆ ಮಳೆ‌ ಸಾಧ್ಯತೆ| ಕರಾವಳಿ ಮಲೆನಾಡಿನಲ್ಲೂ ಮಳೆ ನಿರೀಕ್ಷೆ

ಸಮಗ್ರ ನ್ಯೂಸ್: ಕರ್ನಾಟಕ ಬಹುತೇಕ ಎಲ್ಲ ಕಡೆ ಸುರಿದು ಕೊಂಚ ಬ್ರೇಕ್ ನೀಡಿದ್ದ ಪೂರ್ವ ಮುಂಗಾರು ಮಳೆ ಇದೇ ಏಪ್ರಿಲ್ 15ರಿಂದ ಮತ್ತೆ ಅಬ್ಬರ ಆರಂಭಿಸುವ ಮುನ್ಸೂಚನೆ ನೀಡಿದೆ. ಈ ಬಗ್ಗೆ ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ವರದಿ ತಿಳಿಸಿದೆ. ಏಪ್ರಿಲ್ 15ರಿಂದ ಮೂರು ದಿನ ಕರಾವಳಿ, ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿನ ಭಾಗದಲ್ಲಿ ವ್ಯಾಪಕವಾಗಿ ಗುಡುಗು ಮಿಂಚು ಸಹಿತ ಮಳೆ ಸುರಿಯಲಿದೆ. ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಬರಲಿದೆ.

ಎ.15 ರಿಂದ ರಾಜ್ಯದಲ್ಲಿ ಮತ್ತೆ ಮಳೆ‌ ಸಾಧ್ಯತೆ| ಕರಾವಳಿ ಮಲೆನಾಡಿನಲ್ಲೂ ಮಳೆ ನಿರೀಕ್ಷೆ Read More »

“ರಾಜಕಾರಣದಲ್ಲಿ ನಾನಿಲ್ಲ, ಚುನಾವಣಾ ಪ್ರಚಾರಕ್ಕೂ ಬರಲ್ಲ”| ಬೇಸರ ವ್ಯಕ್ತಪಡಿಸಿದ ಸಚಿವ ಎಸ್.ಅಂಗಾರ

ಸಮಗ್ರ ನ್ಯೂಸ್: ರಾಜ್ಯ ವಿಧಾನಸಭಾ ಚುನಾವಣೆಗೆ ಬಿಜೆಪಿ ಮೊದಲ ಪಟ್ಟಿ ಬಿಡುಗಡೆ ಮಾಡಿದ್ದು, ಹಾಲಿ ಸಚಿವ ಹಾಗೂ ಸುಳ್ಯ ಕ್ಷೇತ್ರದ ಶಾಸಕ ಎಸ್.ಅಂಗಾರರಿಗೆ ಕೋಕ್ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ವ್ಯಪ್ತಪಡಿಸಿದ ಸಚಿವ ಎಸ್.ಅಂಗಾರ ರಾಜಕೀಯ ನಿವೃತ್ತ ಕುರಿತ ಮಾತನ್ನಾಡಿದ್ದಾರೆ. ಸತತ ಆರು ಬಾರಿ‌ ಗೆದ್ದರೂ ಯಾವುದೇ ಲಾಭಿ ಮಾಡದೇ ಪಕ್ಷನಿಷ್ಟನಾಗಿ ಕೆಲಸ ಮಾಡಿದ್ದಕ್ಕೆ ಬಿಜೆಪಿ ತಕ್ಕ ಪಾಠ ಕಲಿಸಿದೆ. ಪ್ರಾಮಾಣಿಕ ರಾಜಕಾರಣಕ್ಕೆ ಇಂದು ಬೆಲೆ ಇಲ್ಲವಾಗಿದೆ. ಹೀಗಾಗಿ‌ ಇನ್ಮುಂದೆ ಚುನಾವಣೆ ಹಾಗೂ ರಾಜಕಾರಣಕ್ಕೆ ನಾನಿಲ್ಲ.

“ರಾಜಕಾರಣದಲ್ಲಿ ನಾನಿಲ್ಲ, ಚುನಾವಣಾ ಪ್ರಚಾರಕ್ಕೂ ಬರಲ್ಲ”| ಬೇಸರ ವ್ಯಕ್ತಪಡಿಸಿದ ಸಚಿವ ಎಸ್.ಅಂಗಾರ Read More »

ಸುಳ್ಯ: ಕೈ ತಪ್ಪಿದ ಕೈ ಟಿಕೆಟ್| ಕೆಪಿಸಿಸಿ ಉಸ್ತುವಾರಿ ಹೆಚ್.ಎಂ ನಂದಕುಮಾರ್ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕೆ

ಸಮಗ್ರ ನ್ಯೂಸ್: ಕಾಂಗ್ರೆಸ್ ಅಭ್ಯರ್ಥಿ ಆಕಾಂಕ್ಷಿಯಾಗಿದ್ದು ಕೈ ಟಿಕೆಟ್ ವಂಚಿತರಾದ ಕೆಪಿಸಿಸಿ ಸದಸ್ಯ ಹೆಚ್.ಎಂ.ನಂದಕುಮಾರ್ ಅವರು ವಿಧಾನಸಭಾ ಚುನಾವಣೆಗೆ ಮೀಸಲು ಕ್ಷೇತ್ರವಾದ ಸುಳ್ಯದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ನಿರ್ಧರಿಸಿದ್ದಾರೆ. ಮಂಗಳವಾರ ನಡೆದ ನಂದಕುಮಾರ್ ಅಭಿಮಾನಿ ಕಾರ್ಯಕರ್ತರ ಕೋರ್ ಕಮಿಟಿ ಸಭೆಯಲ್ಲಿ ನಂದಕುಮಾರ್ ಅವರು ಚುನಾವಣೆಗೆ ಸ್ಪರ್ಧಿಸಲು ನಿರ್ಧಾರ ಕೈಗೊಳ್ಳಲಾಯಿತು. ನಾಮಪತ್ರ ಸಲ್ಲಿಕೆಯ ದಿನಾಂಕವನ್ನು ಏ.12ರಂದು ಪ್ರಕಟಿಸಲಾಗುವುದು. ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಲಾಗುವುದು. ಕಾಂಗ್ರೆಸ್ ಪಕ್ಷದ ವತಿಯಿಂದ ಬಿ ಫಾರಂ ನೀಡದಿದ್ದರೆ ಪಕ್ಷೇತರ ಅಭ್ಯರ್ಥಿ ಯಾಗಿ

ಸುಳ್ಯ: ಕೈ ತಪ್ಪಿದ ಕೈ ಟಿಕೆಟ್| ಕೆಪಿಸಿಸಿ ಉಸ್ತುವಾರಿ ಹೆಚ್.ಎಂ ನಂದಕುಮಾರ್ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕೆ Read More »

ಬಿಜೆಪಿ ಟಿಕೆಟ್ ಹಂಚಿಕೆಯಲ್ಲಿ ನಳಿನ್ ಕುಮಾರ್ ಮೇಲುಗೈ| ಬಿಎಸ್ವೈ ಸೇರಿದಂತೆ ಹಿರಿಯ ನಾಯಕರ ಕಡೆಗಣನೆ

ಸಮಗ್ರ ನ್ಯೂಸ್: ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಸೇರಿದಂತೆ ಬಹುತೇಕ ಬಿಜೆಪಿಯ ಹಿರಿಯರಿಗೆ ಟಿಕೆಟ್ ವಿಚಾರದಲ್ಲಿ ದೊಡ್ಡ ಹಿನ್ನಡೆಯಾಗಿದ್ದು, ವಿಧಾನಸಭಾ ಚುನಾವಣೆಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಸಂದರ್ಭದಲ್ಲಿ ಬಿಜೆಪಿ ಅವರನ್ನು ಕಡೆಗಣಿಸಿದೆ ಎನ್ನಲಾಗಿದೆ. ಕರಡು ಪಟ್ಟಿಯಲ್ಲಿನ ಬಹುತೇಕ ಅಭ್ಯರ್ಥಿಗಳಿಗೆ ಬಿಎಸ್‌ವೈ ಅನುಮೋದನೆ ನೀಡಿದ್ದು, ಅದಾದ ಬಳಿಕ ಪರಿಷ್ಕರಣೆ ವೇಳೆ ರಾಜಾಹುಲಿಯ‌ನ್ನು ಕಡೆಗಣಿಸಲಾಗಿದೆ. ಟಿಕೆಟ್ ಹಂಚಿಕೆ ವಿಚಾರದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಮೇಲುಗೈ ಸಾಧಿಸಿದ್ದು, ಹಿರಿಯರು ಬಿಜೆಪಿಯಲ್ಲಿ ಮೂಲೆಗುಂಪಾಗಿದ್ದಾರೆ. ಯಡಿಯೂರಪ್ಪನವರ ಅನುಪಸ್ಥಿತಿಯಲ್ಲಿ ಅಭ್ಯರ್ಥಿಗಳ ಪಟ್ಟಿಯನ್ನು ಪಕ್ಷದ

ಬಿಜೆಪಿ ಟಿಕೆಟ್ ಹಂಚಿಕೆಯಲ್ಲಿ ನಳಿನ್ ಕುಮಾರ್ ಮೇಲುಗೈ| ಬಿಎಸ್ವೈ ಸೇರಿದಂತೆ ಹಿರಿಯ ನಾಯಕರ ಕಡೆಗಣನೆ Read More »

ಹವಾಮಾನ ವರದಿ: ಇನ್ನೆರಡು ದಿನ ಉರಿಬಿಸಿಲು

ಸಮಗ್ರ ನ್ಯೂಸ್: ಬಿಸಿಲಿನ ಬೇಗೆಗೆ ತತ್ತರಿಸಿರುವ ರಾಜ್ಯದ ಜನತೆಗೆ ಬಿಗ್ ಶಾಕ್, ಮುಂದಿನ ಎರಡು ದಿನ ರಾಜ್ಯದಲ್ಲಿ ತಾಪಮಾನ 3 ಡಿಗ್ರಿ ಸೆಲ್ಸಿಯಸ್ ಹೆಚ್ಚಳವಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆ ಕ್ಷೀಣಿಸುತ್ತಿರುವ ಸೂಚನೆ ಬೆನ್ನಲ್ಲೇ ಬಿಸಿಲ ತಾಪಮಾನ ಹೆಚ್ಚಳವಾಗಿದೆ. ಮುಂದಿನ 24 ಗಂಟೆಯಲ್ಲಿ ಕರಾವಳಿ ಜಿಲ್ಲೆಗಳಲ್ಲಿ 2 ರಿಂದ 3 ಡಿಗ್ರಿ ಹಾಗೂ ಒಳನಾಡು ಜಿಲ್ಲೆಗಳಲ್ಲಿ ಗರಿಷ್ಠ ಉಷ್ಣಾಂಶ 2 ಡಿಗ್ರಿ ಸೆಲ್ಸಿಯಸ್ ಡಿಗ್ರಿ ಹೆಚ್ಚಳವಾಗುವ ಸಾಧ್ಯತೆ

ಹವಾಮಾನ ವರದಿ: ಇನ್ನೆರಡು ದಿನ ಉರಿಬಿಸಿಲು Read More »

ಸಚಿವ ಅಂಗಾರರಿಗೆ ಕೋಕ್| ಬಿಜೆಪಿಯಲ್ಲಿ ಭುಗಿಲೆದ್ದ ಅಸಮಾಧಾನದ ಹೊಗೆ| ಶುರುವಾಯ್ತು ರಾಜೀನಾಮೆ ಪರ್ವ

ಸಮಗ್ರ ನ್ಯೂಸ್: ಸಚಿವ ಎಸ್. ಅಂಗಾರರವರಿಗೆ ಚುನಾವಣಾ ಟಿಕೆಟ್ ನೀಡದ ಹಿನ್ನಲೆಯಲ್ಲಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಸ್ಥಾನಕ್ಕೆ ವೆಂಕಟ್ ವಳಲಂಬೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ. ಈ ಮೂಲಕ ಪಕ್ಷದಲ್ಲಿ ಅಸಮಾಧಾನದ ಹೊಗೆ ಭುಗಿಲೆದ್ದಿದೆ. ಜಿಲ್ಲಾ ಬಿಜೆಪಿ ಅಧ್ಯಕ್ಷರಿಗೆ ರಾಜೀನಾಮೆ ಸಂದೇಶ ಕಳುಹಿಸಿರುವ ಅವರು, ಕಳೆದ 30 ವರ್ಷಗಳ ಕಾಲ ಕ್ಷೇತ್ರ ಮತ್ತು ಪಕ್ಷಕ್ಕೆ ಯಾವುದೇ ಚ್ಯುತಿ ಬಾರದ ರೀತಿ ದುಡಿದ ಸಾಮಾನ್ಯ ಮನೆತನದಿಂದ ಬಂದಿರುವ ಸರಳ ಸಜ್ಜನಿಕೆಯ ಎಲ್ಲರ ಜನಮನ ಗೆದ್ದಿರುವ ಪಕ್ಷಾತೀತವಾಗಿ ಕ್ಷೇತ್ರದ ಅಭಿವೃದ್ಧಿಯನ್ನು ಮಾಡಿರುವ

ಸಚಿವ ಅಂಗಾರರಿಗೆ ಕೋಕ್| ಬಿಜೆಪಿಯಲ್ಲಿ ಭುಗಿಲೆದ್ದ ಅಸಮಾಧಾನದ ಹೊಗೆ| ಶುರುವಾಯ್ತು ರಾಜೀನಾಮೆ ಪರ್ವ Read More »

ಸುಳ್ಯ: ಹೊಳೆಗೆ ತೆರಳಿದ್ದ ಇಬ್ಬರು ಮಕ್ಕಳು ನೀರುಪಾಲು

ಸಮಗ್ರ ನ್ಯೂಸ್: ಮಕ್ಕಳಿಬ್ಬರು ಪೋಷಕರಿಗೆ ಗೊತ್ತಿಲ್ಲದೇ ಹೊಳೆಗೆ ಹೋಗಿ ನೀರಿನಲ್ಲಿ ಮುಳುಗಿ ಮೃತಪಟ್ಟ ಹೃದಯವಿದ್ರಾವಕ ಘಟನೆ ಸುಳ್ಯ-ಕೇರಳ ಗಡಿಭಾಗದ ಅಡೂರು ಎಂಬಲ್ಲಿ ಸಂಭವಿಸಿದೆ. ಪೋಷಕರಿಗೆ ತಿಳಿಯದೇ ನದಿಗೆ ಹೋಗಿದ್ದು ನದಿ ನೀರಿನಲ್ಲಿ ಮುಳುಗಿ ಕಂದಮ್ಮಗಳು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.ಅಡೂರು ದೇವರಡ್ಕದ ನಿವಾಸಿ ಶಾಫಿ ಎಂಬವರ ಪುತ್ರ ಮುಹಮ್ಮದ್ ಆಶೀಕ್ (7) ಮತ್ತು ಹಸೈನಾರ್ ರವರ ಪುತ್ರ ಮುಹಮ್ಮದ್ ಫಾಸಿಲ್(9) ನೀರಿನಲ್ಲಿ ಮುಳುಗಿ ಮೃತಪಟ್ಟವರು . ಮೃತದೇಹಗಳನ್ನು ಕಾಸರಗೋಡು ಆಸ್ಪತ್ರೆಯ ಶವಗಾರಕ್ಕೆ ರವಾನಿಸಲಾಗಿದೆ.

ಸುಳ್ಯ: ಹೊಳೆಗೆ ತೆರಳಿದ್ದ ಇಬ್ಬರು ಮಕ್ಕಳು ನೀರುಪಾಲು Read More »

ಇವರಾ ಸುಳ್ಯದ ಬಿಜೆಪಿ ಕ್ಯಾಂಡಿಡೇಟ್? ಮ್ಯಾರಥಾನ್ ಮೀಟಿಂಗ್ ನಲ್ಲಿ ಪ್ರಸ್ತಾಪವಾದ ಹೆಸರಾದ್ರೂ ಯಾವುದು? ಇಲ್ಲಿದೆ ಫುಲ್ ಡೀಟೈಲ್ಸ್

ಸಮಗ್ರ ನ್ಯೂಸ್: ಚುನಾವಣೆ ದಿನಾಂಕ ನಿಗದಿಯಾಗಿ ವಾರ ಕಳೆದರೂ ಭಾರತೀಯ ಜನತಾ ಪಕ್ಷ ಮಾತ್ರ ಇನ್ನು ಅಭ್ಯರ್ಥಿಗಳ ಹುಡುಕಾಟದಲ್ಲಿದೆ. ಕಳೆದೆಲ್ಲ ಚುನಾವಣೆಗೆ ಹೋಲಿಸಿದರೆ ಅಭ್ಯರ್ಥಿ ಆಯ್ಕೆಗೆ ನಾನಾ ರೀತಿಯ ಕಸರತ್ತು, ಮ್ಯಾರಥಾನ್ ಮೀಟಿಂಗ್ ಗಳು ನಡೆಯುತ್ತಿರುವುದು ಇದೆ ಮೊದಲು ಅಂತಾನೆ ಹೇಳಬಹುದು. ಕೇಸರಿ ಪಾಳಯದಲ್ಲಿ ಅಭ್ಯರ್ಥಿಯಾಗುವುದಕ್ಕೇನು ಕೊರತೆ ಇಲ್ಲ. ಲಕ್ಷಾಂತರ ಕಾರ್ಯಕರ್ತರನ್ನು ಹೊಂದಿದ ಪಕ್ಷ ಅಂದರೆ ಅದು ಭಾರತೀಯ ಜನತಾ ಪಾರ್ಟಿ . ಈ ಬಾರಿ ಮಾತ್ರ ಟಿಕೆಟ್ ಹಂಚಿಕೆ ಮಾಡುವಲ್ಲಿ ಮೀನ ಮೇಷ ಎಣಿಸುತ್ತಿರುವ ಬಿಜೆಪಿ

ಇವರಾ ಸುಳ್ಯದ ಬಿಜೆಪಿ ಕ್ಯಾಂಡಿಡೇಟ್? ಮ್ಯಾರಥಾನ್ ಮೀಟಿಂಗ್ ನಲ್ಲಿ ಪ್ರಸ್ತಾಪವಾದ ಹೆಸರಾದ್ರೂ ಯಾವುದು? ಇಲ್ಲಿದೆ ಫುಲ್ ಡೀಟೈಲ್ಸ್ Read More »

ಸುಳ್ಯ: ದಾಖಲೆಯಿಲ್ಲದೆ ಸಾಗಿಸುತ್ತಿದ್ದ ಲಕ್ಷಾಂತರ ರೂ ನಗದು ವಶಕ್ಕೆ ಪಡೆದ‌ ಚುನಾವಣಾ ಅಧಿಕಾರಿಗಳು

ಸಮಗ್ರ ನ್ಯೂಸ್: ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಲಕ್ಷಾಂತರ ರೂ. ಹಣವನ್ನು ಚುಬಾವಣಾಧಿಕಾರಿಗಳು ವಶಕ್ಕೆ ಪಡೆದುಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಸಂಪಾಜೆಯ ಕಲ್ಲುಗುಂಡಿಯಿಂದ ವರದಿಯಾಗಿದೆ. ಬ್ಯಾಂಕ್‌ವೊಂದು ತನ್ನ ಎಟಿಎಂಗೆ ಹಣ ತುಂಬಿಸಲು ಲಕ್ಷಾಂತರ ರೂ. ಹಣವನ್ನು ಸಾಗಿಸುತ್ತಿತ್ತು. ಇದನ್ನು ಕಲ್ಲುಗುಂಡಿಯ ಚೆಕ್ ಪೋಸ್ಟ್ ಬಳಿ ಪೊಲೀಸರು ಹಾಗೂ ಚುನಾವಣಾಧಿಕಾರಿಗಳು ತಡೆಹಿಡಿದಿದ್ದಾರೆ. ಹಣ ಸಾಗಿಸಲು ಅನುಮತಿ ಪಡೆದುಕೊಂಡಿರುವ ದಾಖಲೆಗಳನ್ನು ಚುನಾವಣಾಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಆದರೆ ಅಲ್ಲಿ ಸರಿಯಾದ ದಾಖಲೆಗಳು ಇಲ್ಲದಿರುವುದರಿಂದ ಎಟಿಎಂ ಹಣ ಸಾಗಿಸುತ್ತಿದ್ದ ವಾಹನವನ್ನು

ಸುಳ್ಯ: ದಾಖಲೆಯಿಲ್ಲದೆ ಸಾಗಿಸುತ್ತಿದ್ದ ಲಕ್ಷಾಂತರ ರೂ ನಗದು ವಶಕ್ಕೆ ಪಡೆದ‌ ಚುನಾವಣಾ ಅಧಿಕಾರಿಗಳು Read More »

ಸುಳ್ಯ: ನಂದಕುಮಾರ್ ಗೆ ಬಿ ಫಾರಂ ನೀಡುವಂತೆ ಕಾರ್ಯಕರ್ತರಿಂದ ಹೆಚ್ಚಿದ ಒತ್ತಡ| ಕೃಷ್ಣಪ್ಪ ಪರ ಪ್ರಚಾರಕ್ಕಿಲ್ಲದ ಕಾರ್ಯಕರ್ತರು, ಬೂತ್ ಮಟ್ಟದಲ್ಲಿ ಮುಖಭಂಗ

ಸಮಗ್ರ ನ್ಯೂಸ್: ಸುಳ್ಯ ಕ್ಷೇತ್ರದಲ್ಲಿ ಅಭ್ಯರ್ಥಿಯಾಗಿ ಘೋಷಣೆಯಾಗಿರುವ ಕೃಷ್ಣಪ್ಪರ ಆಯ್ಕೆಯಿಂದ ಅಸಮಾಧಾನ ಗೊಂಡಿರುವ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಅಭಿಮಾನಿಗಳು ಕ್ಷೇತ್ರದಾದ್ಯಂತ ತಟಸ್ಥರಾಗಿದ್ದು, ಕೃಷ್ಣಪ್ಪರವರು ಕೆಲವು ನಾಯಕರೊಂದಿಗೆ ಪ್ರಚಾರಕ್ಕೆ ಪ್ರಾರಂಭಿಸಿದ್ದಾರೆ. ಆದರೆ ಕ್ಷೇತ್ರದ ಪ್ರತೀ ಗ್ರಾಮಗಳ ಬೂತ್ ಗಳಲ್ಲಿ ಕಾರ್ಯಕರ್ತರು ಹೈಕಮಾಂಡ್ ನಡೆಯಿಂದ ಆಕ್ರೋಷಿತರಾಗಿದ್ದಾರೆ. ನಂದಕುಮಾರ್ ಪರ ಸುಳ್ಯದಲ್ಲಿ ಅಲೆ ಎದ್ದಿದ್ದು ಕೃಷ್ಣಪ್ಪರ ಪರವಾಗಿ ಪ್ರಚಾರಕ್ಕೆ ತೆರಳುವ ನಾಯಕರನ್ನು ತರಾಟೆಗೆ ತೆಗೆದುಕೊಳ್ಳುವುದು ವರದಿಯಾಗುತ್ತಿದೆ. ಇದು ನಾಯಕರು ಇರಿಸು ಮುರಿಸಿಗೆ ಕಾರಣವಾಗಿದೆ. ಬಿ ಫಾರಂ ನಂದಕುಮಾರ್ ರವರಿಗೆ ನೀಡಿ ಅಭ್ಯರ್ಥಿಯಾಗಿಸಿದರೆ

ಸುಳ್ಯ: ನಂದಕುಮಾರ್ ಗೆ ಬಿ ಫಾರಂ ನೀಡುವಂತೆ ಕಾರ್ಯಕರ್ತರಿಂದ ಹೆಚ್ಚಿದ ಒತ್ತಡ| ಕೃಷ್ಣಪ್ಪ ಪರ ಪ್ರಚಾರಕ್ಕಿಲ್ಲದ ಕಾರ್ಯಕರ್ತರು, ಬೂತ್ ಮಟ್ಟದಲ್ಲಿ ಮುಖಭಂಗ Read More »