ಕರಾವಳಿ

ಸುಬ್ರಹ್ಮಣ್ಯ: ಮತದಾರರ ಭೇಟಿಗೆ ಹಗ್ಗದ ಸಹಾಯದಿಂದ ಹೊಳೆ ದಾಟಿದ ಬಿಎಲ್ಒ!!

ಸಮಗ್ರ ನ್ಯೂಸ್: ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯಕ್ಕೆ ನಿಯೋಜನೆ ಗೊಂಡಿರುವ ಬೂತ್ ಮಟ್ಟದ ಅಧಿಕಾರಿಗಳು ಹಗ್ಗಕ್ಕೆ ಕಟ್ಟಿರುವ ಪರಿಕರದ ಸಹಾಯದಿಂದ ಹೊಳೆ ದಾಟಿ ಮತದಾರರ ಎಸ್‌ಐಆರ್‌ ಪ್ರಕ್ರಿಯೆಗೆ ನೆರವಾದರು.ಸುಳ್ಯ ವಿಧಾನಸಭಾ ವ್ಯಾಪ್ತಿಯ ಸುಬ್ರಹ್ಮಣ್ಯ ಸಮೀಪದ ಐನೆಕಿದು ಗ್ರಾಮದ ಬಾಣೂರು ಕಟ್ಟೆಮನೆ ಸಮೀಪ ಹೊಳೆಯ ಆಚೆ ಮೂರು ಮನೆಗಳಿವೆ. ಅಲ್ಲಿಗೆ ನೇರ ರಸ್ತೆ ಸಂಪರ್ಕವಿಲ್ಲ. ರಸ್ತೆ ಮಾರ್ಗವಾಗಿ ತೆರಳಬೇಕಾದರೆ ಬಾಳುಗೋಡು ಮಾರ್ಗವಾಗಿ ಸುತ್ತು ಬಳಸಿ ಹೋಗಬೇಕಾಗುತ್ತದೆ. ಈ ಕಾರಣ ಬಿಳಿನೆಲೆಬೈಲು ಸರ್ಕಾರಿ ಶಾಲೆಯ ಶಿಕ್ಷಕರಾಗಿರುವ

ಸುಬ್ರಹ್ಮಣ್ಯ: ಮತದಾರರ ಭೇಟಿಗೆ ಹಗ್ಗದ ಸಹಾಯದಿಂದ ಹೊಳೆ ದಾಟಿದ ಬಿಎಲ್ಒ!! Read More »

ಮತದಾರರ ಪಟ್ಟಿ ಪರಿಷ್ಕರಣೆ| ಜು.29ರೊಳಗೆ ಎಸ್ಐಆರ್ ಫಾರಂ ಹಿಂತಿರುಗಿಸಲು ಡಿಸಿ ಮನವಿ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸದ್ಯ ನಡೆಯುತ್ತಿರುವ ಎನ್‌ಐಆರ್ ಪ್ರಕ್ರಿಯೆಯನ್ನು ಯಶಸ್ವಿಗೊಳಿಸಲು ಸಾರ್ವಜನಿಕರ ಸಕ್ರಿಯ ಸಹಭಾಗಿತ್ವ ಅತ್ಯಗತ್ಯವಾಗಿದೆ. ಈ ಹಿನ್ನೆಲೆಯಲ್ಲಿ, ಬೂತ್ ಮಟ್ಟದ ಅಧಿಕಾರಿಗಳು (ಬಿಎಲ್‌ಒ) ಮನೆ ಮನೆಗೆ ತಲುಪಿಸಿರುವ ಎಸ್‌ಐಆರ್ (SIR) ಅರ್ಜಿಗಳನ್ನು ಮತದಾರರು ಜುಲೈ 29 ರ ಒಳಗಾಗಿ ಸರಿಯಾಗಿ ಭರ್ತಿ ಮಾಡಿ ಹಿಂತಿರುಗಿಸಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಎಚ್. ವಿ. ಅವರು ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ. ಅರ್ಹ ಮತದಾರರ ಹಕ್ಕನ್ನು ರಕ್ಷಿಸುವ ಈ ಪ್ರಕ್ರಿಯೆಯಲ್ಲಿ ನಾಗರಿಕರು ಆಡಳಿತದೊಂದಿಗೆ ಕೈಜೋಡಿಸುವುದು ಅನಿವಾರ್ಯವಾಗಿದೆ.

ಮತದಾರರ ಪಟ್ಟಿ ಪರಿಷ್ಕರಣೆ| ಜು.29ರೊಳಗೆ ಎಸ್ಐಆರ್ ಫಾರಂ ಹಿಂತಿರುಗಿಸಲು ಡಿಸಿ ಮನವಿ Read More »

ಮಂಗಳೂರಿನಲ್ಲಿ ಮತ್ತೆ 11 ಮಂದಿ ಬಾಂಗ್ಲಾ ವಲಸಿಗರು ಪತ್ತೆ

ಸಮಗ್ರ ನ್ಯೂಸ್: ಕಡಲ‌ ನಗರಿ ಮಂಗಳೂರಿನಲ್ಲಿ ಅಕ್ರಮ ವಲಸಿಗರ ವಿರುದ್ಧ ಪೊಲೀಸರು ಕಾರ್ಯಾಚರಣೆಯನ್ನು ಮತ್ತಷ್ಟು ತೀವ್ರಗೊಳಿಸಿದ್ದು, ಉರ್ವಾ ಸಮೀಪದ ಕಟ್ಟಡ ನಿರ್ಮಾಣ ಪ್ರದೇಶದಲ್ಲಿ ದಾಳಿ ನಡೆಸಿ ನಾಲ್ವರು ಅಪ್ರಾಪ್ತರು ಸೇರಿದಂತೆ 11 ಮಂದಿ ಬಾಂಗ್ಲಾದೇಶದ ಪ್ರಜೆಗಳನ್ನು ವಶಕ್ಕೆ ಪಡೆದಿದ್ದಾರೆ. ಇತ್ತೀಚೆಗೆ ಸುರತ್ಕಲ್‌ನಲ್ಲಿ ನಡೆದ ಕಾರ್ಯಾಚರಣೆಯ ಬೆನ್ನಲ್ಲೇ ಈ ದಾಳಿ ನಡೆದಿದ್ದು, ಇದರೊಂದಿಗೆ ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಕಳೆದ ಕೆಲವು ದಿನಗಳಲ್ಲಿ ಬಂಧಿತರಾದ ಅಕ್ರಮ ವಲಸಿಗರ ಒಟ್ಟು ಸಂಖ್ಯೆ 17ಕ್ಕೆ ಏರಿಕೆಯಾಗಿದೆ. ಬಂಧಿತ ಆರೋಪಿಗಳು ಪಶ್ಚಿಮ ಬಂಗಾಳದ ನಕಲಿ

ಮಂಗಳೂರಿನಲ್ಲಿ ಮತ್ತೆ 11 ಮಂದಿ ಬಾಂಗ್ಲಾ ವಲಸಿಗರು ಪತ್ತೆ Read More »

ಸುರತ್ಕಲ್: 8 ಮಂದಿ ಅಕ್ರಮ ಬಾಂಗ್ಲಾ ವಲಸಿಗರು‌ ಪತ್ತೆ

ಸಮಗ್ರ ನ್ಯೂಸ್: ಸುರತ್ಕಲ್ ನ‌ ಮುಕ್ಕದ ಶ್ರೀನಿವಾಸ ಆಸ್ಪತ್ರೆಯ ಕಟ್ಟಡ ನಿರ್ಮಾಣ ಕಾಮಗಾರಿಯಲ್ಲಿ ತೊಡಗಿದ್ದ 8 ಮಂದಿ ಅಕ್ರಮ ಬಾಂಗ್ಲಾದೇಶದ ಪ್ರಜೆಗಳನ್ನು ಸುರತ್ಕಲ್ ಪೊಲೀಸರು ಗುರುವಾರ ರಾತ್ರಿ ವಶಕ್ಕೆ ಪಡೆದುಕೊಂಡು ವಿಚಾರಣೆಯ ಬಳಿಕ ಬಂಧಿಸಿದ್ದಾರೆ. ಬಂಧಿತರನ್ನು ಮುಹಮ್ಮದ್‌ ಮುಖ್ತಾರ್‌ ಅಲಿ ( 36), ಮುಹಮ್ಮದ್‌ ರಾಕಿಬುರ್‌ ಹುಸೈನ್‌ (44), ಮುಹಮ್ಮದ್‌ ಅಝರುಲ್‌ ಇಸ್ಲಾಂ ( 36), ಮುಹಮ್ಮದ್‌ ಝೈದ್‌ ಹುಸನ್‌ (18), ಮುಹಮ್ಮದ್‌ ಬಿಲಾಲ್‌ ಹುಸೈನ್‌ (36), ಮುಹಮ್ಮದ್‌ ಹಾಸಿಬುಲ್‌ ಹಸನ್‌ ಶನ್ಟೊ ( 37), ಮುಹಮ್ಮದ್‌

ಸುರತ್ಕಲ್: 8 ಮಂದಿ ಅಕ್ರಮ ಬಾಂಗ್ಲಾ ವಲಸಿಗರು‌ ಪತ್ತೆ Read More »

ಸುಳ್ಯ: “ಅಧಿಕಾರ ಬಳಸಿಕೊಂಡು 2ನೇ ಮದುವೆಗೆ ಸಿದ್ಧತೆ”| ಕೆಪಿಸಿಸಿ ಮಾಜಿ ಕಾರ್ಯದರ್ಶಿ ಟಿ.ಎಂ ಶಹೀದ್ ಮೇಲೆ ಗಂಭೀರ ಆರೋಪ ಮಾಡಿದ ಪತ್ನಿ

ಸಮಗ್ರ ನ್ಯೂಸ್: “ನನ್ನ ಪತಿ ಟಿ.ಎಂ.ಶಹೀದ್ ತೆಕ್ಕಿಲ್ ರವರು ನನ್ನ ಮದುವೆಯ ಸಂದರ್ಭದಲ್ಲಿ ನನ್ನ ತಂದೆ ನನಗಾಗಿ ನೀಡಿದ್ದ 110 ಪವನ್ ಚಿನ್ನ ಮತ್ತು ನನಗೆ ನೀಡಿರುವ ಆಸ್ತಿಯನ್ನು ಕಬಳಿಸಿ, ಇದೀಗ ನನಗೆ ಮತ್ತು ನನ್ನ ಮಕ್ಕಳಿಗೆ ಅನ್ಯಾಯ ಮಾಡಿದ್ದಾರೆ. ಅದರ ಬಗ್ಗೆ ಅವರಲ್ಲಿ ಮಾತನಾಡಿದರೆ ‘ ನೀನು ಸಿ.ಎಂ. ಅಲ್ಲ ಪಿ.ಎಂ. ಬಳಿ ಹೋದರೂ ನನ್ನನ್ನು ಏನೂ ಮಾಡಲು ಸಾಧ್ಯವಿಲ್ಲ’ ಎಂದು ಗದರಿಸುತ್ತಿದ್ದಾರೆ”, ಅಲ್ಲದೇ ರಾಜಕೀಯ ಪ್ರಭಾವ ಬಳಸಿಕೊಂಡು ಎರಡನೇ ಮದುವೆಗೆ ಸಿದ್ಧತೆ ನಡೆಸುತ್ತಿದ್ದಾರೆ” ಎಂದು

ಸುಳ್ಯ: “ಅಧಿಕಾರ ಬಳಸಿಕೊಂಡು 2ನೇ ಮದುವೆಗೆ ಸಿದ್ಧತೆ”| ಕೆಪಿಸಿಸಿ ಮಾಜಿ ಕಾರ್ಯದರ್ಶಿ ಟಿ.ಎಂ ಶಹೀದ್ ಮೇಲೆ ಗಂಭೀರ ಆರೋಪ ಮಾಡಿದ ಪತ್ನಿ Read More »

ಜು.8ರಿಂದ ಗಡಾಯಿಕಲ್ಲು ಚಾರಣಕ್ಕೆ ತಾತ್ಕಾಲಿಕ ಬ್ರೇಕ್

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಳೆ ತೀವ್ರಗೊಂಡಿರುವ ಹಿನ್ನೆಲೆಯಲ್ಲಿ, ಬೆಳ್ತಂಗಡಿ ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣವಾದ ‘ಗಡಾಯಿಕಲ್ಲು’ ಚಾರಣಕ್ಕೆ ಜುಲೈ 8 ರಿಂದ ಜಾರಿಗೆ ಬರುವಂತೆ ತಾತ್ಕಾಲಿಕ ನಿಷೇಧ ಹೇರಲಾಗಿದೆ. ಚಾರಣಿಗರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು, ಮುನ್ನೆಚ್ಚರಿಕಾ ಕ್ರಮವಾಗಿ ಅರಣ್ಯ ಇಲಾಖೆಯ ವನ್ಯಜೀವಿ ವಿಭಾಗವು ಸಾರ್ವಜನಿಕರ ಹಾಗೂ ಚಾರಣಿಗರ ಪ್ರವೇಶಕ್ಕೆ ಕಡ್ಡಾಯ ನಿಬಂಧನೆ ವಿಧಿಸಿ ಅಧಿಕೃತ ಪ್ರಕಟಣೆ ಹೊರಡಿಸಿದೆ. ಈ ವರ್ಷ ಜೂನ್ 1 ರಂದು ಗಡಾಯಿಕಲ್ಲು ಚಾರಣಕ್ಕೆ ಅಧಿಕೃತವಾಗಿ ಚಾಲನೆ ನೀಡಲಾಗಿತ್ತು. ಆದರೆ, ಆರಂಭಗೊಂಡ ಕೆಲವೇ

ಜು.8ರಿಂದ ಗಡಾಯಿಕಲ್ಲು ಚಾರಣಕ್ಕೆ ತಾತ್ಕಾಲಿಕ ಬ್ರೇಕ್ Read More »

ರಾಜ್ಯಾದ್ಯಂತ ಮುಂದಿನ‌ 3 ದಿನ ಭಾರೀ ಮಳೆ ಸಾಧ್ಯತೆ| 11 ಜಿಲ್ಲೆಗಳಲ್ಲಿ ಆರೆಂಜ್ ಹಾಗೂ 8 ಜಿಲ್ಲೆಗಳಲ್ಲಿ ಎಲ್ಲೋ ಅಲರ್ಟ್ ಘೋಷಣೆ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಮುಂಗಾರು ಮಳೆ ಮತ್ತೆ ಚುರುಕುಗೊಂಡಿದ್ದು, ಮುಂದಿನ 48 ಗಂಟೆಗಳ ಕಾಲ ವರುಣನ ಆರ್ಭಟ ಹೆಚ್ಚಾಗಲಿರುವ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆಯು (IMD) ಭಾರಿ ಮಳೆ ಮುನ್ನೆಚ್ಚರಿಕೆ ನೀಡಿದೆ. ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಅತಿ ಭಾರಿ ಮಳೆಯಾಗುವ ಮುನ್ಸೂಚನೆ ಇರುವುದರಿಂದ ರಾಜ್ಯದ ಒಟ್ಟು 11 ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್’ ಘೋಷಿಸಲಾಗಿದ್ದು, ಸಾಧಾರಣದಿಂದ ಭಾರಿ ಮಳೆಯಾಗುವ ಸಾಧ್ಯತೆ ಇರುವ 8 ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಜಾರಿ ಮಾಡಲಾಗಿದೆ. ವಿಶೇಷವಾಗಿ ದಕ್ಷಿಣ ಕನ್ನಡ, ಉಡುಪಿ, ಉತ್ತರ

ರಾಜ್ಯಾದ್ಯಂತ ಮುಂದಿನ‌ 3 ದಿನ ಭಾರೀ ಮಳೆ ಸಾಧ್ಯತೆ| 11 ಜಿಲ್ಲೆಗಳಲ್ಲಿ ಆರೆಂಜ್ ಹಾಗೂ 8 ಜಿಲ್ಲೆಗಳಲ್ಲಿ ಎಲ್ಲೋ ಅಲರ್ಟ್ ಘೋಷಣೆ Read More »

ಸುಳ್ಯ: ತೂಗುಸೇತುವೆಗಳ ಸರದಾರ, ಪದ್ಮಶ್ರೀ ಗಿರೀಶ್ ಭಾರದ್ವಾಜ್ ಇನ್ನಿಲ್ಲ

ಸಮಗ್ರ ನ್ಯೂಸ್: ತೂಗುಸೇತುವೆಗಳ ಸರದಾರ, ಪದ್ಮಶ್ರೀ ಪುರಸ್ಕೃತ ಡಾ.ಗಿರೀಶ್ ಭಾರದ್ವಾಜರು ಇಂದು(ಜು.7) ಮುಂಜಾನೆ ಸುಳ್ಯದ ಕೆ.ವಿ.ಜಿ. ಆಸ್ಪತ್ರೆಯಲ್ಲಿ ‌ನಿಧನರಾದರು. ಅವರಿಗೆ ಸುಮಾರು 76 ವರ್ಷ ವಯಸ್ಸಾಗಿತ್ತು. ಗಿರೀಶ್ ಭಾರದ್ವಾಜರು ಕೆಲ ದಿನಗಳ ಹಿಂದೆ ಉತ್ತರಕಾಂಡದಲ್ಲಿ ದೇವಸ್ಥಾನದಲ್ಲಿ ಗಳಿಗೆ ಹೋಗಿ ಬಂದಿದ್ದರು. ಹೃದಯ ಸಂಬಂಧಿ ಸಮಸ್ಯೆಯಿಂದ ಅವರು ಕೆಲ ದಿನಗಳಿಂದ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಇಂದು ಮುಂಜಾನೆ ತೀವ್ರ ಅಸ್ವಸ್ಥಗೊಂಡ ಅವರು ಕೊನೆಯುಸಿರೆಳೆದರು. ಭಾರತದಾದ್ಯಂತ ಹಳ್ಳಿ ಹಳ್ಳಿಗಳಲ್ಲಿ ೧೨೫ ಕ್ಕಿಂತ ಹೆಚ್ಚು ತೂಗುಸೇತುವೆಗಳನ್ನು ನಿರ್ಮಿಸಿದ ಸಮಾಜಸೇವಕ. ಇದಕ್ಕಾಗಿ ಅವರಿಗೆ ಸೇತು

ಸುಳ್ಯ: ತೂಗುಸೇತುವೆಗಳ ಸರದಾರ, ಪದ್ಮಶ್ರೀ ಗಿರೀಶ್ ಭಾರದ್ವಾಜ್ ಇನ್ನಿಲ್ಲ Read More »

ಸುಳ್ಯ: ಪಶುಪಾಲನಾ ಮತ್ತು ಪಶು ವೈದ್ಯಕೀಯ ಇಲಾಖೆ ಖಾಲಿ ಖಾಲಿ| ಶೇ.90ರಷ್ಟು ಸಿಬ್ಬಂದಿ ‌ಕೊರತೆ; ಕರ್ತವ್ಯ ನಿರ್ವಹಣೆಯೇ ಸವಾಲು

ಸಮಗ್ರ ನ್ಯೂಸ್: ಸುಳ್ಯ ತಾಲ್ಲೂಕಿನ ಪಶು ಪಾಲನಾ ಮತ್ತು ಪಶು ವೈದ್ಯಕೀಯ ಇಲಾಖೆಯ ಪಶು ಆಸ್ಪತ್ರೆಯಲ್ಲಿ ವೈದ್ಯರು ಸೇರಿ ಶೇ 90ರಷ್ಟು ಹುದ್ದೆಗಳು ಖಾಲಿ ಇದ್ದು, ಇಲಾಖೆಯ ಕೆಲಸ ನಿರ್ವಹಣೆಗೆ ತೊಂದರೆ ಆಗಿದೆ. ಸುಳ್ಯ ತಾಲ್ಲೂಕು ಪಶು ವೈದ್ಯಕೀಯ ಇಲಾಖೆಗೆ 53 ಹುದ್ದೆಗಳು ಮಂಜೂರಾಗಿದ್ದು, ಈ ಪೈಕಿ ನಾಲ್ವರು ಪಶು ವೈದ್ಯರು ಮತ್ತು ಒಬ್ಬರು ವಾಹನ ಚಾಲಕ ಹುದ್ದೆಗಳನ್ನು ಹೊರತುಪಡಿಸಿ ಉಳಿದ 48 ಹುದ್ದೆಗಳು ಖಾಲಿ ಇವೆ. ತಾಲ್ಲೂಕಿನಲ್ಲಿ 20,300 ಹಸುಗಳು, 43 ಎಮ್ಮೆಗಳು 2,700 ಮೇಕೆಗಳು,

ಸುಳ್ಯ: ಪಶುಪಾಲನಾ ಮತ್ತು ಪಶು ವೈದ್ಯಕೀಯ ಇಲಾಖೆ ಖಾಲಿ ಖಾಲಿ| ಶೇ.90ರಷ್ಟು ಸಿಬ್ಬಂದಿ ‌ಕೊರತೆ; ಕರ್ತವ್ಯ ನಿರ್ವಹಣೆಯೇ ಸವಾಲು Read More »

ಮುಂದಿನ 24 ಗಂಟೆಗಳಲ್ಲಿ ಭಾರೀ ಮಳೆ ಸಾಧ್ಯತೆ| ಕರಾವಳಿಯ ಮೂರು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ

ಸಮಗ್ರ ನ್ಯೂಸ್: ಮುಂದಿನ 24 ಗಂಟೆಗಳ ಕಾಲ ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡದಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದ್ದು,ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆಯು ಈ ಮೂರೂ ಜಿಲ್ಲೆಗಳಿಗೆ ‘ರೆಡ್ ಅಲರ್ಟ್ ಘೋಷಿಸಿದೆ. ಮುನ್ನೆಚ್ಚರಿಕೆ ಕ್ರಮವಾಗಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ಜಿಲ್ಲಾಡಳಿತ ಈಗಾಗಲೇ ರಜೆ ಘೋಷಿಸಿದೆ. ಇನ್ನು ಮಲೆನಾಡು ಭಾಗದ ಶಿವಮೊಗ್ಗ ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳ ಘಟ್ಟ ಪ್ರದೇಶಗಳಲ್ಲಿ ‘ಆರೆಂಜ್ ಅಲರ್ಟ್’ ನೀಡಲಾಗಿದೆ. ಮತ್ತೊಂದೆಡೆ, ರಾಜಧಾನಿ ಬೆಂಗಳೂರು,

ಮುಂದಿನ 24 ಗಂಟೆಗಳಲ್ಲಿ ಭಾರೀ ಮಳೆ ಸಾಧ್ಯತೆ| ಕರಾವಳಿಯ ಮೂರು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ Read More »