ಕರಾವಳಿ

ಸುಳ್ಯ: ಪಶುಪಾಲನಾ ಮತ್ತು ಪಶು ವೈದ್ಯಕೀಯ ಇಲಾಖೆ ಖಾಲಿ ಖಾಲಿ| ಶೇ.90ರಷ್ಟು ಸಿಬ್ಬಂದಿ ‌ಕೊರತೆ; ಕರ್ತವ್ಯ ನಿರ್ವಹಣೆಯೇ ಸವಾಲು

ಸಮಗ್ರ ನ್ಯೂಸ್: ಸುಳ್ಯ ತಾಲ್ಲೂಕಿನ ಪಶು ಪಾಲನಾ ಮತ್ತು ಪಶು ವೈದ್ಯಕೀಯ ಇಲಾಖೆಯ ಪಶು ಆಸ್ಪತ್ರೆಯಲ್ಲಿ ವೈದ್ಯರು ಸೇರಿ ಶೇ 90ರಷ್ಟು ಹುದ್ದೆಗಳು ಖಾಲಿ ಇದ್ದು, ಇಲಾಖೆಯ ಕೆಲಸ ನಿರ್ವಹಣೆಗೆ ತೊಂದರೆ ಆಗಿದೆ. ಸುಳ್ಯ ತಾಲ್ಲೂಕು ಪಶು ವೈದ್ಯಕೀಯ ಇಲಾಖೆಗೆ 53 ಹುದ್ದೆಗಳು ಮಂಜೂರಾಗಿದ್ದು, ಈ ಪೈಕಿ ನಾಲ್ವರು ಪಶು ವೈದ್ಯರು ಮತ್ತು ಒಬ್ಬರು ವಾಹನ ಚಾಲಕ ಹುದ್ದೆಗಳನ್ನು ಹೊರತುಪಡಿಸಿ ಉಳಿದ 48 ಹುದ್ದೆಗಳು ಖಾಲಿ ಇವೆ. ತಾಲ್ಲೂಕಿನಲ್ಲಿ 20,300 ಹಸುಗಳು, 43 ಎಮ್ಮೆಗಳು 2,700 ಮೇಕೆಗಳು, […]

ಸುಳ್ಯ: ಪಶುಪಾಲನಾ ಮತ್ತು ಪಶು ವೈದ್ಯಕೀಯ ಇಲಾಖೆ ಖಾಲಿ ಖಾಲಿ| ಶೇ.90ರಷ್ಟು ಸಿಬ್ಬಂದಿ ‌ಕೊರತೆ; ಕರ್ತವ್ಯ ನಿರ್ವಹಣೆಯೇ ಸವಾಲು Read More »

ಮುಂದಿನ 24 ಗಂಟೆಗಳಲ್ಲಿ ಭಾರೀ ಮಳೆ ಸಾಧ್ಯತೆ| ಕರಾವಳಿಯ ಮೂರು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ

ಸಮಗ್ರ ನ್ಯೂಸ್: ಮುಂದಿನ 24 ಗಂಟೆಗಳ ಕಾಲ ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡದಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದ್ದು,ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆಯು ಈ ಮೂರೂ ಜಿಲ್ಲೆಗಳಿಗೆ ‘ರೆಡ್ ಅಲರ್ಟ್ ಘೋಷಿಸಿದೆ. ಮುನ್ನೆಚ್ಚರಿಕೆ ಕ್ರಮವಾಗಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ಜಿಲ್ಲಾಡಳಿತ ಈಗಾಗಲೇ ರಜೆ ಘೋಷಿಸಿದೆ. ಇನ್ನು ಮಲೆನಾಡು ಭಾಗದ ಶಿವಮೊಗ್ಗ ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳ ಘಟ್ಟ ಪ್ರದೇಶಗಳಲ್ಲಿ ‘ಆರೆಂಜ್ ಅಲರ್ಟ್’ ನೀಡಲಾಗಿದೆ. ಮತ್ತೊಂದೆಡೆ, ರಾಜಧಾನಿ ಬೆಂಗಳೂರು,

ಮುಂದಿನ 24 ಗಂಟೆಗಳಲ್ಲಿ ಭಾರೀ ಮಳೆ ಸಾಧ್ಯತೆ| ಕರಾವಳಿಯ ಮೂರು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ Read More »

ಭಾರೀ ಮಳೆ ಹಿನ್ನೆಲೆ| ದ.ಕ ಜಿಲ್ಲೆಯ ಶಾಲೆ, ಪಿಯು ಕಾಲೇಜುಗಳಿಗೆ ಜು.3ರಂದು ರಜೆ ಘೋಷಣೆ

ಸಮಗ್ರ ನ್ಯೂಸ್: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನಲೆ ಹವಮಾನ ಇಲಾಖೆ ನಾಳೆ ಅರೆಂಜ್ ಅಲರ್ಟ್ ಘೋಷಿಸಿದೆ. ಈ ಹಿನ್ನಲೆ ದ.ಕ.ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢ ಹಾಗೂ ಪಿಯು ಕಾಲೇಜುಗಳಿಗೆ ಜುಲೈ 3ರ ಶುಕ್ರವಾರ ರಜೆ ಘೋಷಿಸಲಾಗಿದೆ ಎಂದು ದ.ಕ.ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ತಿಳಿಸಿದ್ದಾರೆ. ಜಿಲ್ಲಾಧಿಕಾರಿ ಆದೇಶ ಉಲ್ಲಂಘಿಸಿ ತರಗತಿ ನಡೆಸಿದರೆ ಕಾನೂನು ಕ್ರಮದ ಎಚ್ಚರಿಕೆ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢ ಶಾಲೆ

ಭಾರೀ ಮಳೆ ಹಿನ್ನೆಲೆ| ದ.ಕ ಜಿಲ್ಲೆಯ ಶಾಲೆ, ಪಿಯು ಕಾಲೇಜುಗಳಿಗೆ ಜು.3ರಂದು ರಜೆ ಘೋಷಣೆ Read More »

ರಾಜ್ಯದಲ್ಲಿ ಬಿರುಸುಗೊಂಡ ಮುಂಗಾರು| ಉಡುಪಿ, ದ.ಕ ಜಿಲ್ಲೆಗೆ ರೆಡ್ ಅಲರ್ಟ್

ಸಮಗ್ರ ನ್ಯೂಸ್: ರಾಜ್ಯದಲ್ಲಿ ಮುಂಗಾರು ಮಳೆ ಮತ್ತೆ ಬಿರುಸುಗೊಂಡಿದ್ದು, ಹಲವು ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಹಾಗೂ ಮಳೆಯ ವಾತಾವರಣ ಮುಂದುವರಿದಿದೆ. ಹವಾಮಾನ ಇಲಾಖೆ ನೀಡಿರುವ ಮುನ್ಸೂಚನೆಯಂತೆ ಕರಾವಳಿ ಭಾಗದಲ್ಲಿ ಮಳೆಯ ತೀವ್ರತೆ ಹೆಚ್ಚಾಗಲಿದ್ದು, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಕರಾವಳಿಯ ಜೊತೆಗೆ ಮಲೆನಾಡಿನ ಘಟ್ಟ ಪ್ರದೇಶಗಳಿಗೂ ಆರೆಂಜ್ ಅಲರ್ಟ್ ನೀಡಲಾಗಿದೆ. ಭಾರಿ ಮಳೆಯ ಹಿನ್ನೆಲೆಯಲ್ಲಿ ರಸ್ತೆ ಸಂಚಾರದಲ್ಲಿ ಎಚ್ಚರಿಕೆ ವಹಿಸುವಂತೆ ವಾಹನ ಸವಾರರಿಗೆ ಸೂಚಿಸಲಾಗಿದೆ. ಭೂಕುಸಿತ ಹಾಗೂ ನೀರು ನಿಲ್ಲುವ

ರಾಜ್ಯದಲ್ಲಿ ಬಿರುಸುಗೊಂಡ ಮುಂಗಾರು| ಉಡುಪಿ, ದ.ಕ ಜಿಲ್ಲೆಗೆ ರೆಡ್ ಅಲರ್ಟ್ Read More »

ರೆಡ್ ಅಲರ್ಟ್ ಹಿನ್ನೆಲೆ| ದ.ಕ ಜಿಲ್ಲೆಯಾದ್ಯಂತ ಜು.2ರಂದು ಶಾಲೆ, ಪಿಯುಸಿ ಕಾಲೇಜುಗಳಿಗೆ ರಜೆ ಘೋಷಣೆ

ಸಮಗ್ರ ನ್ಯೂಸ್: ಕರಾವಳಿ ಜಿಲ್ಲೆ ದಕ್ಷಿಣ ಕನ್ನಡದಲ್ಲಿ ಮಳೆಯ ಅಬ್ಬರ ಜೋರಾಗಿದ್ದು, ಹವಾಮಾನ ಇಲಾಖೆಯು ನಾಳೆ ಜಿಲ್ಲೆಯಲ್ಲಿ ‘ರೆಡ್ ಅಲರ್ಟ್’ ಘೋಷಿಸಿದೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲೆಯಾದ್ಯಂತ ನಾಳೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ದರ್ಶನ್ ಆದೇಶ ಹೊರಡಿಸಿದ್ದಾರೆ. ಜಿಲ್ಲಾಧಿಕಾರಿಗಳ ಆದೇಶದಂತೆ, ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳು ಮತ್ತು ಪದವಿ ಪೂರ್ವ (PU) ಸೇರಿದಂತೆ ಎಲ್ಲ ಕಾಲೇಜುಗಳಿಗೆ ನಾಳೆ ರಜೆ ಇರಲಿದೆ. ವಿದ್ಯಾರ್ಥಿಗಳ

ರೆಡ್ ಅಲರ್ಟ್ ಹಿನ್ನೆಲೆ| ದ.ಕ ಜಿಲ್ಲೆಯಾದ್ಯಂತ ಜು.2ರಂದು ಶಾಲೆ, ಪಿಯುಸಿ ಕಾಲೇಜುಗಳಿಗೆ ರಜೆ ಘೋಷಣೆ Read More »

ಮಂಗಳೂರು: ಮನೆಯ ಮೇಲ್ಛಾವಣಿ, ಗೋಡೆ ಕುಸಿದು ಮೂವರು ಸಾವು| ನಿದ್ದೆ ಮಾಡುತ್ತಿದ್ದವರು ಚಿರನಿದ್ರೆಗೆ!!

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಂಗಳವಾರ ರಾತ್ರಿಯಿಂದ ಸುರಿಯುತ್ತಿರುವ ನಿರಂತರ ಮಳೆಗೆ ಮಂಗಳೂರು ನಗರದ ಕಂಕನಾಡಿಯಲ್ಲಿ ಭೀಕರ ದುರಂತ ಸಂಭವಿಸಿದೆ. ಇಲ್ಲಿನ ಹಳೆಯ ಹಂಚಿನ ಮನೆಯೊಂದರ ಮೇಲ್ಚಾವಣಿ ಹಾಗೂ ಗೋಡೆ ಬುಧವಾರ ಮುಂಜಾನೆ ದಿಢೀರನೆ ಕುಸಿದು ಬಿದ್ದ ಪರಿಣಾಮ, ಮನೆಯೊಳಗೆ ನಿದ್ದೆಯ ಮಂಪರಿನಲ್ಲಿದ್ದ ಮೂವರು ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ್ದಾರೆ. ಮೃತರನ್ನು ಒಬ್ಬ ಮಹಿಳೆ ಹಾಗೂ ಇಬ್ಬರು ಬಾಲಕಿಯರು ಎಂದು ಗುರುತಿಸಲಾಗಿದೆ. ಘಟನೆಯ ನಡೆದ ತಕ್ಷಣ ಸ್ಥಳೀಯರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಜಂಟಿಯಾಗಿ ರಕ್ಷಣಾ ಕಾರ್ಯಾಚರಣೆ

ಮಂಗಳೂರು: ಮನೆಯ ಮೇಲ್ಛಾವಣಿ, ಗೋಡೆ ಕುಸಿದು ಮೂವರು ಸಾವು| ನಿದ್ದೆ ಮಾಡುತ್ತಿದ್ದವರು ಚಿರನಿದ್ರೆಗೆ!! Read More »

ಕರಾವಳಿಯಲ್ಲಿ ಬೆಂಕಿ‌ ಹಚ್ಚಲು RSS ನಂತೆ ಸುರೇಶ್ ಭಟ್, ಗೌರಿ ಲಂಕೇಶ್ ಕೂಡಾ ಕಾರಣ‌ – ಲಕ್ಷ್ಮೀಶ ಗಬ್ಲಡ್ಕ

ಸಮಗ್ರ ನ್ಯೂಸ್: “ಸುರೇಶ್‌ ಭಟ್ ಬಾಕ್ರಬೈಲು ಕೋಮು ಸೌಹಾರ್ದತೆ ಹೆಸರಿನಲ್ಲಿ ‌ಅಪನಂಬಿಕೆ ಹೆಚ್ಚಿಸಲು ಕಾರಣರಾದ ವ್ಯಕ್ತಿಗಳಲ್ಲಿ ಒಬ್ಬರಾಗಿದ್ದಾರೆ. ಕರಾವಳಿಯ ಬೆಂಕಿ ಹಚ್ಚಲು ಸಂಘ ಪರಿವಾರದ ಕೆಲವು ಮಂದಿ ಹೇಗೆ ಕಾರಣರೋ ಅದೇ ರೀತಿ ಗೌರಿ ಲಂಕೇಶ್, ಸುರೇಶ್ ಭಟ್ ಕೂಡಾ ಕಾರಣರು.” ಎಂದು ಕಾಂಗ್ರೆಸ್ ಮುಖಂಡ, ಧಾರ್ಮಿಕ ದತ್ತಿ ಇಲಾಖೆಯ ಧಾರ್ಮಿಕ ಪರಿಷತ್ ಸದಸ್ಯ ಲಕ್ಷ್ಮೀಶ ಗಬ್ಲಡ್ಕ ಅಭಿಪ್ರಾಯಪಟ್ಟಿದ್ದಾರೆ. ಗೌರಿ ಲಂಕೇಶ್ ಕರ್ನಾಟಕದ ಹಿರಿಯ ಪತ್ರಕರ್ತೆ ಹಾಗು ಕೋಮುವಾದ ವಿರೋಧಿ ಹೋರಾಟಗಳಲ್ಲಿ ಮುಂಚೂಣಿಯಲ್ಲಿದ್ದ ಸಾಮಾಜಿಕ ಹೋರಾಟಗಾರ್ತಿ. ಆರೆಸ್ಸೆಸ್

ಕರಾವಳಿಯಲ್ಲಿ ಬೆಂಕಿ‌ ಹಚ್ಚಲು RSS ನಂತೆ ಸುರೇಶ್ ಭಟ್, ಗೌರಿ ಲಂಕೇಶ್ ಕೂಡಾ ಕಾರಣ‌ – ಲಕ್ಷ್ಮೀಶ ಗಬ್ಲಡ್ಕ Read More »

ಮಹಾರಾಷ್ಟ್ರದಲ್ಲಿ ರಾಜ್ಯದ ಅಡಿಕೆ ಸಾಗಾಟ‌ ಲಾರಿಗಳ ಜಪ್ತಿ| ದಾಖಲೆ ನೀಡಿದಲ್ಲಿ ಬಿಡುಗಡೆಗೆ ಕ್ರಮ – ಅಶೋಕ್ ರೈ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯಿಂದ ಮಹಾರಾಷ್ಟ್ರಕ್ಕೆ ಸಾಗಾಟವಾಗುತ್ತಿದ್ದ ಸುಮಾರು 70 ಅಡಿಕೆ ತುಂಬಿದ ಲಾರಿಗಳನ್ನು ಅಲ್ಲಿನ ಸರ್ಕಾರಿ ಅಧಿಕಾರಿಗಳು ವಶಕ್ಕೆ ಪಡೆದು, ಅಡಿಕೆಯನ್ನು ನಾಶಪಡಿಸುವುದಾಗಿ ಬೆದರಿಕೆ ಹಾಕಿರುವ ಗಂಭೀರ ವಿಚಾರ ಬೆಳಕಿಗೆ ಬಂದಿದೆ. ಈ ಕುರಿತು ಸೂಕ್ತ ದಾಖಲೆಗಳನ್ನು ನೀಡಿದಲ್ಲಿ ಮುಖ್ಯಮಂತ್ರಿಗಳ ಮೂಲಕ ಮಹಾರಾಷ್ಟ್ರ ಸರ್ಕಾರದೊಂದಿಗೆ ಮಾತುಕತೆ ನಡೆಸಿ ಸಮಸ್ಯೆ ಬಗೆಹರಿಸುವುದಾಗಿ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಭರವಸೆ ನೀಡಿದ್ದಾರೆ. ಪುತ್ತೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಶಾಸಕರು, “ನಮ್ಮ ಜಿಲ್ಲೆಯಿಂದ ಹೋದ 70 ಅಡಿಕೆ

ಮಹಾರಾಷ್ಟ್ರದಲ್ಲಿ ರಾಜ್ಯದ ಅಡಿಕೆ ಸಾಗಾಟ‌ ಲಾರಿಗಳ ಜಪ್ತಿ| ದಾಖಲೆ ನೀಡಿದಲ್ಲಿ ಬಿಡುಗಡೆಗೆ ಕ್ರಮ – ಅಶೋಕ್ ರೈ Read More »

ಸುಳ್ಯ: ವಿದ್ಯುತ್ ಕಂಬದ ಸಹಿತ ಕಾಂಕ್ರೀಟ್ ಕಾಮಗಾರಿ| ವಿಲಕ್ಷಣ ಘಟನೆಗೆ ಕಾರಣವಾದ ಈ ರಸ್ತೆ!!

ಸಮಗ್ರ ನ್ಯೂಸ್: ರಸ್ತೆ ಬದಿ ಹಾದು ಹೋಗುವ ‌ವಿದ್ಯುತ್ ಕಂಬಗಳ ಸಹಿತ ರಸ್ತೆಯನ್ನು ಕಾಂಕ್ರೀಟೀಕರಣ ಮಾಡಿದ ವಿಲಕ್ಷಣ ಘಟನೆ ಸುಳ್ಯದಲ್ಲಿ ಬೆಳಕಿಗೆ ಬಂದಿದ್ದು ಸಾಮಾಜಿಕ ಜಾಲತಾಣಗಳಲ್ಲಿ ಗುಲ್ಲೆಬ್ಬಿಸುತ್ತಿದೆ. ಸುಳ್ಯದ ಪ.ಪೂ ಕಾಲೇಜು ಬಳಿಯಿಂದ ಶಾಸ್ತ್ರಿ ಸರ್ಕಲ್‌ಗೆ ಹೋಗುವ ಒಳರಸ್ತೆಯಿದು. ಇಲ್ಲಿ ಸ್ಥಳೀಯ ಆಡಳಿತ ರಸ್ತೆಯನ್ನು ಅಭಿವೃದ್ಧಿ ಮಾಡಲು ಕಾಂಕ್ರಿಟೀಕರಣ ಕಾಮಗಾರಿ ಕೈಗೆತ್ತಿಕೊಂಡಿದ್ದು, ಗುತ್ತಿಗೆದಾರ ಹಾಗೂ ಇಂಜಿನಿಯರ್ ರ ಜುಗಲ್ ಬಂದಿಗೆ ರಸ್ತೆಯ ಬದಿಯ ವಿದ್ಯುತ್ ಕಂಬಗಳನ್ನು ಸೇರಿಸಿ ರಸ್ತೆ‌ ನಿರ್ಮಿಸಲಾಗಿದೆ. ರಸ್ತೆಗೆ ಡಿವೈಡರ್ ಹಾಕಿದಂತೆ ಕಂಬಗಳು ಕಾಣುತ್ತಿದ್ದು

ಸುಳ್ಯ: ವಿದ್ಯುತ್ ಕಂಬದ ಸಹಿತ ಕಾಂಕ್ರೀಟ್ ಕಾಮಗಾರಿ| ವಿಲಕ್ಷಣ ಘಟನೆಗೆ ಕಾರಣವಾದ ಈ ರಸ್ತೆ!! Read More »

ಉಪ್ಪಿನಂಗಡಿ: ಜೀವನದಿ ನೇತ್ರಾವತಿಗೆ ನೇರವಾಗಿ ಸೇರುತ್ತಿದೆ ವಸತಿ, ಶೌಚಾಲಯಗಳ ತ್ಯಾಜ್ಯ ನೀರು!! ಕಣ್ಮುಚ್ಚಿ ಕುಳಿತ ಆರೋಗ್ಯ ಇಲಾಖೆ

ಸಮಗ್ರ ನ್ಯೂಸ್: ದ.ಕ ಜಿಲ್ಲೆಯ ಜೀವ ನದಿ ನೇತ್ರಾವತಿ ನದಿಯಲ್ಲಿ ಈ ಬಾರಿ ಮುಂಗಾರು ಮಳೆಯ ನೀರು ಹರಿಯದಿದ್ದರೂ ವಸತಿ ಸಮುಚ್ಚಯಗಳ ಶೌಚಾಲಯದ ತ್ಯಾಜ್ಯ ಸೇರಿದಂತೆ ಮಲಿನ ನೀರು ಹರಿಯುತ್ತಿದ್ದು, ನಾಗರಿಕ ಸಮಾಜ ತಲೆತಗ್ಗಿಸುವಂತಾಗಿದೆ. ಈ ಬಗ್ಗೆ ನದಿಯ ಒಡಲಿನಲ್ಲಿ ವಸತಿ ಸಮುಚ್ಚಯದಿಂದ ಹರಿದು ಬಂದು ಸಂಗ್ರಹವಾಗಿರುವ ಮಲಿನ ನೀರು ಹರಿಯುವ ನದಿಯನ್ನು ಸೇರುತ್ತಿರುವ ದೃಶ್ಯವನ್ನು ಸೆರೆ ಹಿಡಿದಿರುವ ಉಪ್ಪಿನಂಗಡಿ ನೆಲ ಜಲ ಸಂರಕ್ಷಣಾ ಸಮಿತಿ ಅಧ್ಯಕ್ಷ ಕೈಲಾರ್ ರಾಜಗೋಪಾಲ ಭಟ್ ಜಿಲ್ಲೆಯ ಜೀವ ನದಿಯನ್ನು ಈ

ಉಪ್ಪಿನಂಗಡಿ: ಜೀವನದಿ ನೇತ್ರಾವತಿಗೆ ನೇರವಾಗಿ ಸೇರುತ್ತಿದೆ ವಸತಿ, ಶೌಚಾಲಯಗಳ ತ್ಯಾಜ್ಯ ನೀರು!! ಕಣ್ಮುಚ್ಚಿ ಕುಳಿತ ಆರೋಗ್ಯ ಇಲಾಖೆ Read More »