ಕರಾವಳಿ

ಬೆಳ್ತಂಗಡಿ: ಮನೆಯಂಗಳದಲ್ಲೇ ಮಾರಕಾಸ್ತ್ರಗಳಿಂದ‌ ಕೊಚ್ಚಿ ನಿವೃತ್ತ ಶಿಕ್ಷಕನ ಬರ್ಬರ ಕೊಲೆ

ಸಮಗ್ರ ನ್ಯೂಸ್: ಮನೆಯ ಅಂಗಳದಲ್ಲಿಯೇ ವ್ಯಕ್ತಿಯನ್ನು ಮಾರಾಕಾಸ್ತ್ರದಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದ ಎಸ್.ಪಿ.ಬಿ ಕಾಂಪೌಂಡಿನಲ್ಲಿ ನಡೆದಿದೆ. ಕೊಲೆಯಾದ ಎಸ್.ಪಿ.ಬಾಲಕೃಷ್ಣ ಭಟ್ (73) ಅವರು ನಿವೃತ್ತ ಶಿಕ್ಷಕ ಎನ್ನಲಾಗಿದೆ. ಅವರ ಮನೆಯ ಎದುರೇ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ‌ ಮಾಡಲಾಗಿದೆ ಎನ್ನಲಾಗಿದ್ದು, ತಲೆಗೆ ಭಾರೀ ಹೊಡೆತ ಬಿದ್ದಿದೆ ಎಂದು ಪ್ರಕರಣ ಉಲ್ಲೇಖಿಸಿ ಮಾಧ್ಯಮಗಳು ವರದಿ ಮಾಡಿವೆ. ಸ್ಥಳಕ್ಕೆ ಧರ್ಮಸ್ಥಳ ಪೊಲೀಸರು ಧಾವಿಸಿದ್ದು ಪ್ರಕರಣದ ಕುರಿತು ತನಿಖೆ ಆರಂಭಿಸಿದ್ದಾರೆ. ಕೊಲೆಯನ್ನು ಯಾರು, ಯಾಕೆ […]

ಬೆಳ್ತಂಗಡಿ: ಮನೆಯಂಗಳದಲ್ಲೇ ಮಾರಕಾಸ್ತ್ರಗಳಿಂದ‌ ಕೊಚ್ಚಿ ನಿವೃತ್ತ ಶಿಕ್ಷಕನ ಬರ್ಬರ ಕೊಲೆ Read More »

ಪುತ್ತೂರು: ವಿದ್ಯಾರ್ಥಿನಿಗೆ ಚೂರಿ ಇರಿತ ಪ್ರಕರಣ| ಗಾಯಾಳು ಆರೋಪವೇನು? ನಿಜಕ್ಕೂ ಅಲ್ಲಿ ನಡೆದದ್ದೇನು? ಇಲ್ಲಿದೆ ಇದುವರೆಗಿನ ಅಪ್ಡೇಟ್

ಸಮಗ್ರ ನ್ಯೂಸ್: ಮುಸ್ಲಿಂ ವಿದ್ಯಾರ್ಥಿನಿಯೋರ್ವಳು ತನಗೆ ಹಿಂದೂ ಯುವಕ ಚೂರಿ ಇರಿದಿದ್ದಾನೆ ಎಂದು ಆರೋಪಿಸಿ ಆಸ್ಪತ್ರೆಗೆ ದಾಖಲಾದ ಘಟನೆ ಪುತ್ತೂರಿನಲ್ಲಿ ‌ನಡೆದಿದ್ದು, ಪ್ರಕರಣ ಬೇರೆಯದೇ ತಿರುವು ಪಡೆದುಕೊಂಡಿದೆ. ಪುತ್ತೂರು ಕಾಲೇಜಿನ ಮುಸ್ಲಿಂ ವಿದ್ಯಾರ್ಥಿನಿಗೆ ಅದೇ ಕಾಲೇಜಿನ ವಿದ್ಯಾರ್ಥಿಯೋರ್ವ ಚೂರಿಯಿಂದ ಇರಿದಿದ್ದಾಗಿ ಆರೋಪ ಮಾಡಿದ್ದು ಪೊಲೀಸರು ಸತ್ಯಾಸತ್ಯತೆಗಳ ಬಗ್ಗೆ ತನಿಖೆ ಆರಂಭಿಸಿದ್ದಾರೆ. ಪುತ್ತೂರಿನ ಕೊಂಬೆಟ್ಟುವಿನಲ್ಲಿರುವ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳು ತನಗೆ ಅದೇ ಕಾಲೇಜಿನ ವಿದ್ಯಾರ್ಥಿಯೊಬ್ಬ ಚೂರಿಯಿಂದ ಇರಿದಿರುವುದಾಗಿ ಆರೋಪಿಸಿ ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾಳೆ. ಅವಳ ಕೈಯಲ್ಲಿ ಗೀರಿದ ಗುರುತು

ಪುತ್ತೂರು: ವಿದ್ಯಾರ್ಥಿನಿಗೆ ಚೂರಿ ಇರಿತ ಪ್ರಕರಣ| ಗಾಯಾಳು ಆರೋಪವೇನು? ನಿಜಕ್ಕೂ ಅಲ್ಲಿ ನಡೆದದ್ದೇನು? ಇಲ್ಲಿದೆ ಇದುವರೆಗಿನ ಅಪ್ಡೇಟ್ Read More »

ಪುತ್ತೂರು: ಕಾಲೇಜು ವಿದ್ಯಾರ್ಥಿನಿಗೆ ಚೂರಿ ಇರಿದ ಸಹಪಾಠಿ ವಿದ್ಯಾರ್ಥಿ

ಸಮಗ್ರ ನ್ಯೂಸ್: ಮುಸ್ಲಿಂ ಯುವತಿಯೋರ್ವಳಿಗೆ ಹಿಂದೂ ಯುವಕ ಚೂರಿಯಿಂದ ಇರಿದ ಘಟನೆ ಆ 20 ರಂದು ನಡೆದಿದೆ. ಬನ್ನೂರು ಮೂಲದ ಪುತ್ತೂರು ಸರಕಾರಿ ಕಾಲೇಜಿನ ವಿದ್ಯಾರ್ಥಿನಿಗೆ,‌ ಅದೇ ಕಾಲೇಜಿನ ವಿದ್ಯಾರ್ಥಿಯೋರ್ವ ಚೂರಿಯಿಂದ ಇರಿದಿದ್ದು, ಗಾಯಗೊಂಡ ಯುವತಿಯನ್ನು ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪುತ್ತೂರು ನಗರ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ.

ಪುತ್ತೂರು: ಕಾಲೇಜು ವಿದ್ಯಾರ್ಥಿನಿಗೆ ಚೂರಿ ಇರಿದ ಸಹಪಾಠಿ ವಿದ್ಯಾರ್ಥಿ Read More »

ಪುತ್ತೂರು: ದ್ವಿಚಕ್ರ ವಾಹನ ಸವಾರನ ಮೇಲೆ ಕಾಡು ಹಂದಿ ದಾಳಿ|

ಸಮಗ್ರ ನ್ಯೂಸ್: ದ್ವಿಚಕ್ರ ವಾಹನ ಸವಾರನ ಮೇಲೆ ಕಾಡು ಹಂದಿಯೊಂದು ದಾಳಿ ಮಾಡಿದ ಪರಿಣಾಮ, ಗಾಯಗೊಂಡ ಘಟನೆ ಇಂದು (ಆ.20) ಮುಂಜಾನೆ ಪುತ್ತೂರು ತಾಲೂಕು ಅರಿಯಡ್ಕ ಗ್ರಾಮದ ಕೌಡಿಚ್ಚಾರು ಸಮೀಪದ ಕುರುಂಜ ಮಣ್ಣಾಪು ಎಂಬಲ್ಲಿ ನಡೆದಿದೆ. ಗಾಯಗೊಂಡ ಧನುಷ್(30) ಕುಂಬ್ರ ಪೆಟ್ರೋಲ್ ಬಂಕ್ ನಲ್ಲಿ ಮ್ಯಾನೇಜರ್ ಆಗಿರುವ ಧನುಷ್ ಎಂದಿನಂತೆ ಇಂದು ಬೆಳಗ್ಗೆ ಸ್ಕೂಟರ್ ನಲ್ಲಿ ಪೆಟ್ರೋಲ್ ಬಂಕ್ ಗೆ ಹೋಗುತ್ತಿದ್ದ ವೇಳೆ ಕಾಡು ಹಂದಿ ದಾಳಿ ನಡೆಸಿದೆ. ಕುರುಂಜ ಮಣ್ಣಾಪು ತಲುಪಿದಾಗ ಏಕಾಏಕಿ ಕಾಡು ಹಂದಿಯೊಂದು

ಪುತ್ತೂರು: ದ್ವಿಚಕ್ರ ವಾಹನ ಸವಾರನ ಮೇಲೆ ಕಾಡು ಹಂದಿ ದಾಳಿ| Read More »

ಉಪ್ಪಿನಂಗಡಿ: ಜಾರ್ಖಂಡ್ ಮೂಲದ ಬಾಲಕಿ ನೇಣು‌ಬಿಗಿದು ಆತ್ಮಹತ್ಯೆ

ಸಮಗ್ರ ನ್ಯೂಸ್: ಉಪ್ಪಿನಂಗಡಿ ಠಾಣಾ ವ್ಯಾಪ್ತಿಯ ಕರಾಯ ಗ್ರಾಮದ ಕೊಂಬೆಟ್ಟಿಮಾರು ಎಂಬಲ್ಲಿ ಕೃಷಿ ಕೂಲಿ ಕಾರ್ಮಿಕರಾಗಿ ಆಗಮಿಸಿದ್ದ ಕುಟುಂಬವೊಂದರ 14 ರ ಹರೆಯದ ಬಾಲಕಿ ನೇಣು ಬಿಗಿದು ಆತ್ಮಹತ್ಯೆಗೈದ ಘಟನೆ ಆ.18ರ ರಾತ್ರಿ ಸಂಭವಿಸಿದೆ. ಮೂಲತಃ ಜಾಖಂಡ್ ರಾಜ್ಯದ ಲಾತೆಹಾರ್ ಜಿಲ್ಲೆಯ ಜಲ್ತಾ ಪರ್ಸಾರಿ ಲೆಡ್ಪಾ ನಿವಾಸಿಯಾಗಿರುವ ಸರ್ಜು ಬುಯ್ಯಾನ್ ತನ್ನ ಪತ್ನಿ ಮಗಳೊಂದಿಗೆ ವಾರದ ಹಿಂದೆ ಕರಾಯ ಗ್ರಾಮದ ಒರ್ವರ ತೋಟದ ಕೆಲಸಕ್ಕೆ ಆಗಮಿಸಿದ್ದರು. ಬಾಲಕಿ ತೋಟದ ಮಾವಿನ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆಗೈದಿರುತ್ತಾಳೆ ಎಂದು

ಉಪ್ಪಿನಂಗಡಿ: ಜಾರ್ಖಂಡ್ ಮೂಲದ ಬಾಲಕಿ ನೇಣು‌ಬಿಗಿದು ಆತ್ಮಹತ್ಯೆ Read More »

ಮಂಗಳೂರು: ಕಾಂಗ್ರೆಸ್ ಪ್ರತಿಭಟನೆಯಲ್ಲಿ ಕಾರ್ಯಕರ್ತರ ಪುಂಡಾಟ| ಬಸ್ ಗೆ ಕಲ್ಲು ತೂರಿದ ಮೂವರು ಅರೆಸ್ಟ್

ಸಮಗ್ರ ನ್ಯೂಸ್: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಶನ್‌ ಗೆ ರಾಜ್ಯಪಾಲರು ಅನುಮತಿ ನೀಡಿರುವ ವಿಚಾರವಾಗಿ ಕಾಂಗ್ರೆಸ್ ಕರೆ ಕೊಟ್ಟಿದ್ದ ಪ್ರತಿಭಟನೆಯಲ್ಲಿ ಬಸ್ಸಿಗೆ ಕಲ್ಲು ಹೊಡೆದ ಪ್ರಕರಣ ಸಂಬಂಧ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ಶಾಹುಲ್ ಹಮಿದ್, ಅನ್ವರ್ ಮತ್ತು ಕಿಶೋರ್ ಶೆಟ್ಟಿ ಯನ್ನು ಬಂಧಿಸಲಾಗಿದ್ದು, ಇನ್ನುಳಿದ ಆರೋಪಿಗಳನ್ನು ಪತ್ತೆಗೆ ಕ್ರಮ‌ ವಹಿಸಲಾಗಿದೆ ಎಂದು ಪೊಲೀಸ್ ಕಮಿಷನರ್ ಅನುಪಮ್ ಅಗ್ರವಾಲ್ ತಿಳಿಸಿದ್ದಾರೆ. ಪಾದಯಾತ್ರೆ ಬಳಿಕ ಸಭೆ ಮುಗಿಯುತ್ತಲೇ ರಸ್ತೆಗಿಳಿದ ಕಾರ್ಯಕರ್ತರು ಅಲ್ಲೇ ಸಂಚರಿಸುತ್ತಿದ್ದ ಖಾಸಗಿ ಸಿಟಿ ಬಸ್ ಗೆ ಕಲ್ಲು

ಮಂಗಳೂರು: ಕಾಂಗ್ರೆಸ್ ಪ್ರತಿಭಟನೆಯಲ್ಲಿ ಕಾರ್ಯಕರ್ತರ ಪುಂಡಾಟ| ಬಸ್ ಗೆ ಕಲ್ಲು ತೂರಿದ ಮೂವರು ಅರೆಸ್ಟ್ Read More »

ದಶಕದ ಬಳಿಕ‌ ರಬ್ಬರ್ ದರದಲ್ಲಿ ಚೇತರಿಕೆ| ಕರಾವಳಿಯ ರಬ್ಬರ್ ಬೆಳೆಗಾರರ ಮುಖದಲ್ಲಿ ಮಂದಹಾಸ

ಸಮಗ್ರ ನ್ಯೂಸ್: ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ರಬ್ಬರ್​ ದರ ಏರಿಕೆಯಾಗಿದ್ದು, ಬೆಳೆಗಾರರ ​​ಮುಖದಲ್ಲಿ ಮಂದಹಾಸ ಮೂಡಿದೆ. ಬರೋಬ್ಬರಿ 13 ವರ್ಷಗಳ ನಂತರ ರಬ್ಬರ್ ಬೆಲೆ ಏರಿಕೆಯಾಗಿದೆ. ಅಂದರೆ 2011ರಲ್ಲಿ ರಬ್ಬರ್​ ಬೆಲೆ ಕೆಜಿಗೆ 242ರೂ. ಈ ಬಳಿಕ ರಬ್ಬರ್​ ಬೆಲೆ ಕಳೆದ ವರ್ಷ ರಬ್ಬರ್​ ಬೆಲೆ ಕೆಜಿಗೆ 149 ರೂ.ಗೆ ಇಳಿಕೆಯಾಗಿತ್ತು. ಈ ವರ್ಷ ರಬ್ಬರ್ (ಆರ್‌ಎಸ್‌ಎಸ್ 4 ಗ್ರೇಡ್) ಕೆಜಿಗೆ 239 ರೂ., ಆರ್‌ಎಸ್‌ಎಸ್ 5 ಗ್ರೇಡ್ ಕೆಜಿಗೆ 234 ರೂ. ಮತ್ತು ಲ್ಯಾಟೆಕ್ಸ್ ಬೆಲೆಯು ಕೆಜಿಗೆ

ದಶಕದ ಬಳಿಕ‌ ರಬ್ಬರ್ ದರದಲ್ಲಿ ಚೇತರಿಕೆ| ಕರಾವಳಿಯ ರಬ್ಬರ್ ಬೆಳೆಗಾರರ ಮುಖದಲ್ಲಿ ಮಂದಹಾಸ Read More »

ಪುತ್ತೂರು: ಪುಳುವಾರು ಗ್ರಾಮ ದೈವಸ್ಥಾನ ಮತ್ತು ದಾರಂದಕುಕ್ಕು ವೀರ ಮಾರುತಿ ಫ್ರೆಂಡ್ಸ್ ಬಳಗದ ಜಂಟಿ ಆಶ್ರಯದಲ್ಲಿ ಆ.25 ರಂದು ಕೇಸರ್ಡ್ ಒಂಜಿ ದಿನ| ಆಮಂತ್ರಣ ಬಿಡುಗಡೆ

ಸಮಗ್ರ ನ್ಯೂಸ್: ಪುತ್ತೂರಿನ ಚಿಕ್ಕ ಮುಡ್ನೂರು ಗ್ರಾಮ ಪುಳುವಾರು ಗ್ರಾಮ ದೈವಸ್ಥಾನ ಮತ್ತು ದಾರಂದಕುಕ್ಕು ವೀರ ಮಾರುತಿ ಫ್ರೆಂಡ್ಸ್ ಬಳಗದ ಜಂಟಿ ಆಶ್ರಯದಲ್ಲಿ ಆ.25 ರಂದು ನಡೆಯಲಿರುವ ಕೇಸರ್ಡ್ ಒಂಜಿ ದಿನ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಇಂದು (ಆ.18) ನಡೆಯಿತು.

ಪುತ್ತೂರು: ಪುಳುವಾರು ಗ್ರಾಮ ದೈವಸ್ಥಾನ ಮತ್ತು ದಾರಂದಕುಕ್ಕು ವೀರ ಮಾರುತಿ ಫ್ರೆಂಡ್ಸ್ ಬಳಗದ ಜಂಟಿ ಆಶ್ರಯದಲ್ಲಿ ಆ.25 ರಂದು ಕೇಸರ್ಡ್ ಒಂಜಿ ದಿನ| ಆಮಂತ್ರಣ ಬಿಡುಗಡೆ Read More »

ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ನಡೆಸಲು ಅನುಮತಿ ನೀಡಿರುವುದು ಖಂಡನೀಯ – ಸುಳ್ಯ ಮಹಿಳಾ ಕಾಂಗ್ರೆಸ್

ಸಮಗ್ರ ನ್ಯೂಸ್: ರಾಜ್ಯದ ಅಭಿವೃದ್ದಿಯ ಹರಿಕಾರ, ಗ್ಯಾರೆಂಟಿಗಳ ಸರದಾರ ರಾಜಕೀಯ ಜೀವನದಲ್ಲಿ ಯಾವುದೇ ಕಪ್ಪು ಚುಕ್ಕೆಇಲ್ಲದೆ ಈ ನಾಡಿನ 2 ನೇ ಬಾರಿಯ ಮುಖ್ಯಮಂತ್ರಿಯಾದ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ತನಿಖೆ ನಡೆಸಲು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದು ಮತ್ತು ಕೇಂದ್ರ ಸರಕಾರವು ರಾಜ್ಯಭವನವನ್ನು ದುರ್ಬಳಕೆ ಮಾಡಿಕೊಂಡು ಕಾಂಗ್ರೆಸ್ ಸರಕಾರವನ್ನು ಅಸ್ಥಿರಗೊಳಿಸಲು ಹೊರಟಿರುವುದನ್ನು ಸುಳ್ಯ ತಾಲೂಕು ಮಹಿಳಾ ಕಾಂಗ್ರೆಸ್ ಘಟಕ ಖಂಡಿಸುತ್ತದೆ ಎಂದು ಮಹಿಳಾ ಕಾಂಗ್ರೆಸ್ ಘಟಕದ ಅಧ್ಯಕ್ಷರಾದ ಗೀತಾ ಕೋಲ್ಚಾರ್ ರವರು ಖಂಡಿಸಿದ್ದಾರೆ

ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ನಡೆಸಲು ಅನುಮತಿ ನೀಡಿರುವುದು ಖಂಡನೀಯ – ಸುಳ್ಯ ಮಹಿಳಾ ಕಾಂಗ್ರೆಸ್ Read More »

‘ನನ್ನ ಮೇಲೆ ಪ್ರಶ್ನೆ ಮಾಡಿದರೆ ದೇವರಿಗೆ ಇಡುತ್ತೇನೆ’ ಎಂದ ಶಾಸಕ ಹರೀಶ್ ಪೂಂಜಾ| ಗ್ರಾಮಸ್ಥರನ್ನೇ ಅವಾಚ್ಯವಾಗಿ ನಿಂದಿಸಿದ ವಿಡಿಯೋ ವೈರಲ್!!

ಸಮಗ್ರ ನ್ಯೂಸ್: ತನ್ನದೇ ಕ್ಷೇತ್ರದ ಜನರಿಗೆ ಶಾಸಕ ಹರೀಶ್ ಪೂಂಜಾ ಅವಾಚ್ಯ ಶಬ್ದಗಳಿಂದ ಬೈದು, ಬಳಿಕ ಪ್ರಶ್ನೆ ಮಾಡಿದರೆ ದೇವರ ಮೇಲೆ ಇಡುತ್ತೇನೆ ಎಂದು ದೇವರ ಹೆಸರಿನಲ್ಲಿ ಹೆದರಿಸಿದ ಘಟನೆ ನಡೆದಿದ್ದು, ಇದೀಗ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇತ್ತೀಚಿಗೆ ಸುರಿದ ಭಾರೀ ಮಳೆಗೆ ಬೆಳ್ತಂಗಡಿ ತಾಲೂಕಿನ ಸವಾಣಾಲು ಗ್ರಾಮದ ಪಿಲಿಕಲ ರಸ್ತೆ ಬಿರುಕು ಬಿಟ್ಟು ವಾಹನ ಸಂಚಾರ ಹಾಗೂ ಜನರ ಓಡಾಟಕ್ಕೆ ಅಡಚಣೆ ಉಂಟಾಗಿತ್ತು. ಇಲ್ಲಿಗೆ ಭೇಟಿ ನೀಡಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾರನ್ನು

‘ನನ್ನ ಮೇಲೆ ಪ್ರಶ್ನೆ ಮಾಡಿದರೆ ದೇವರಿಗೆ ಇಡುತ್ತೇನೆ’ ಎಂದ ಶಾಸಕ ಹರೀಶ್ ಪೂಂಜಾ| ಗ್ರಾಮಸ್ಥರನ್ನೇ ಅವಾಚ್ಯವಾಗಿ ನಿಂದಿಸಿದ ವಿಡಿಯೋ ವೈರಲ್!! Read More »