ಕರಾವಳಿ

ಸುರತ್ಕಲ್: ಬಿಜೆಪಿ ಕಾರ್ಪೋರೇಟರ್ ಗೆ ಕೊಲೆ ಬೆದರಿಕೆ!

ಸಮಗ್ರ ನ್ಯೂಸ್: ಇಲ್ಲಿನ ಕಾಟಿಪಳ್ಳ 3ನೇ ಬ್ಲಾಕ್ ನಲ್ಲಿ ಬಿಜೆಪಿ ಕಾರ್ಪೋರೇಟರ್ ಒಬ್ಬರ ಮೇಲೆ ಯುವಕನೊಬ್ಬ ಹಲ್ಲೆಗೆ ಯತ್ನಿಸಿ ಕೊಲೆ ಬೆದರಿಕೆಯೊಡ್ಡಿದ ಘಟನೆ ನಡೆದಿದ್ದು ಈ ಕುರಿತು ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆಯ ವಿವರ:ಬಿಜೆಪಿ ಕಾರ್ಪೋರೇಟರ್ ಲೋಕೇಶ್ ಬೊಳ್ಳಾಜೆ ಎಂಬವರು ದೂರಿದ್ದು ಅದರಲ್ಲಿ ಸ್ಥಳೀಯ ನಿವಾಸಿ ಗಣೇಶ್ ದೇವಾಡಿಗ ಎಂಬವನನ್ನು ಆರೋಪಿ ಎಂದು ಹೆಸರಿಸಲಾಗಿದೆ. ಕಾಟಿಪಳ್ಳದಲ್ಲಿ ಹಿಂದೂ ಸೇವಾ ಚಾರಿಟೇಬಲ್ ಟ್ರಸ್ಟ್ ಕಟ್ಟಿಕೊಂಡಿರುವ ಎ.ಪಿ. ಮೋಹನ್, ಗಣೇಶ್ ದೇವಾಡಿಗ ಹಾಗೂ ಗಿರೀಶ್ ಎಂಬವರು ಕಳೆದ ಕೆಲವು

ಸುರತ್ಕಲ್: ಬಿಜೆಪಿ ಕಾರ್ಪೋರೇಟರ್ ಗೆ ಕೊಲೆ ಬೆದರಿಕೆ! Read More »

ಪುತ್ತೂರು: ಬೈಕ್ ಡಿಕ್ಕಿ ಹೊಡೆದು ಪಾದಚಾರಿ ಸಾವು| ಸುಳ್ಯ ಮೂಲದ ಬೈಕ್ ಸವಾರ ಗಂಭೀರ

ಸಮಗ್ರ ನ್ಯೂಸ್: ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರ್ ಬಳಿ ಬೈಕೊಂದು ಅಪಘಾತವಾಗಿ ವೃದ್ಧರೋರ್ವರು ಮೃತಪಟ್ಟು, ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಸೋಮವಾರ ರಾತ್ರಿ 8 ಗಂಟೆ ಸಮಯದಲ್ಲಿ ನಡೆದಿದೆ. ಮೃತರನ್ನು ಕಾವು ಮಿನೋಜಿಕಲ್ಲು ನಾರಾಯಣ ನಾಯ್ಕ ಎಂದು ಗುರುತಿಸಲಾಗಿದ್ದು, ಗಾಯಾಳು ಯುವಕನನ್ನು ಉಬರಡ್ಕ ನಿವಾಸಿ ಗುರುಪ್ರಸಾದ್ ಎಂದು ಗುರುತಿಸಲಾಗಿದೆ. ಅಪಘಾತವಾಗಿ ಬಿದ್ದಿದ್ದ ಗಾಯಾಳುಗಳನ್ನು ಅದೇ ದಾರಿಯಾಗಿ ಕಚೇರಿಯಿಂದ ಬರುತ್ತಿದ್ದ ಪುತ್ತೂರಿನ ಯುವ ನ್ಯಾಯವಾದಿ ಹಿಂದೂ ಜಾಗರಣ ವೇದಿಕೆಯ ಮುಖಂಡ ಚಿನ್ಮಯ್ ರೈ ಈಶ್ವರಮಂಗಲ, ಅರಿಯಡ್ಕ

ಪುತ್ತೂರು: ಬೈಕ್ ಡಿಕ್ಕಿ ಹೊಡೆದು ಪಾದಚಾರಿ ಸಾವು| ಸುಳ್ಯ ಮೂಲದ ಬೈಕ್ ಸವಾರ ಗಂಭೀರ Read More »

ಪಣಂಬೂರು:”7.5 ಕೋ.ರೂ ವೆಚ್ಚದಲ್ಲಿ ಪಣಂಬೂರು ಬೀಚ್ ಅಭಿವೃದ್ಧಿ”
-ಶಾಸಕ ವೈ.ಭರತ್ ಶೆಟ್ಟಿ

ಸಮಗ್ರ ನ್ಯೂಸ್: ಅಂತರಾಷ್ಟ್ರೀಯ ಮಟ್ಟದ ಸೌಕರ್ಯವನ್ನು ಪಣಂಬೂರು ಬೀಚ್‍ನಲ್ಲಿ ಬರುವ ಪ್ರವಾಸಿಗರಿಗೆ ನೀಡುವ ಸಲುವಾಗಿ ಸರಕಾರಿ ಖಾಸಗೀ ಸಹಭಾಗಿತ್ವದಲ್ಲಿ ಅಭಿವೃದ್ಧಿ ಪಡಿಸಲಾಗುತ್ತಿದೆ ಎಂದು ಶಾಸಕರಾದ ಡಾ.ಭರತ್ ಶೆಟ್ಟಿ ವೈ ನುಡಿದರು. ಸೋಮವಾರ ಸಂಜೆ 7.5 ಕೋಟಿ ರೂ.ವೆಚ್ಚದಲ್ಲಿ ಪಣಂಬೂರು ಬೀಚ್ ಅಭಿವೃದ್ಧಿ ಕಾರ್ಯಗಳಿಗೆ ಶಿಲಾನ್ಯಾಸ ನೆರವೇರಿಸಿ ಅವರು ಮಾತನಾಡಿದರು.ಮಂಗಳೂರು ಉತ್ತರ ಕ್ಷೇತ್ರವು ದೊಡ್ಡದಾದ ಬೀಚ್‍ ಅನ್ನು ಹೊಂದಿದೆ. ಪಣಂಬೂರು ಬೀಚ್ ಅಂತರಾಷ್ಟ್ರೀಯ ಮಟ್ಟಕ್ಕೆ ಬೆಳೆಸಬೇಕಿದೆ. ಈ ಹಿಂದೆ ಸರಕಾರಕ್ಕೆ 10 ಸಾವಿರ ರೂ.ಗಳ ಕನಿಷ್ಠ ಆದಾಯ ಬರುತ್ತಿತ್ತು.ಇದೀಗ

ಪಣಂಬೂರು:”7.5 ಕೋ.ರೂ ವೆಚ್ಚದಲ್ಲಿ ಪಣಂಬೂರು ಬೀಚ್ ಅಭಿವೃದ್ಧಿ”
-ಶಾಸಕ ವೈ.ಭರತ್ ಶೆಟ್ಟಿ
Read More »

ಸಂಪಾಜೆ: ಅಕ್ರಮ ಮರ ಸಾಗಾಟ| ಲಾರಿ ಮತ್ತು ಮರದ ದಿಮ್ಮಿ ಸಹಿತ ಆರೋಪಿಯ ಬಂಧನ

ಸಮಗ್ರ ನ್ಯೂಸ್: ಕೊಡಗು ಜಿಲ್ಲಾ ಸಂಪಾಜೆ ವಲಯಾರಣ್ಯ ವ್ಯಾಪ್ತಿಯ ಅರಣ್ಯ ತನಿಖಾ ಠಾಣೆ ಸಂಪಾಜೆಯಲ್ಲಿ ಮಡಿಕೇರಿಯಿಂದ ಮಂಗಳೂರು ಕಡೆಗೆ ಲಾರಿಯಲ್ಲಿ ಅಕ್ರಮವಾಗಿ ಹೆಬ್ಬಲಸು ಮರದ ತುಂಡುಗಳನ್ನು ಸಾಗಿಸುತ್ತಿದ್ದ ಆರೋಪದಲ್ಲಿ ವ್ಯಕ್ತಿಯೋರ್ವನನ್ನು ಬಂಧಿಸಲಾಗಿದೆ. ಆರೋಪಿಯನ್ನು ಮಂಗಳೂರು ಅಸೈಗೋಳಿಯ ಮಹಮ್ಮದ್ ಸಪ್ವಾನ್ ಎಂದು ಗುರುತಿಸಲಾಗಿದೆ. ಆರೋಪಿ ಹಾಗೂ ಮರ ಸಾಗಾಟಕ್ಕೆ ಬಳಸಿದ್ದ ವಾಹನವನ್ನು ಸಂಪಾಜೆ ಅರಣ್ಯ ಇಲಾಖೆ ಅಧಿಕಾರಿಗಳು ವಶಕ್ಕೆ ಪಡೆದಿದ್ದು, ಒಟ್ಟು 12 ಹೆಬ್ಬಲಸು ಮರದ ದಿಮ್ಮಿಗಳು ಲಭ್ಯವಾಗಿವೆ. ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ತನಿಖೆ ಕೈಗೊಳ್ಳಲಾಗಿದೆ. ಮಡಿಕೇರಿ

ಸಂಪಾಜೆ: ಅಕ್ರಮ ಮರ ಸಾಗಾಟ| ಲಾರಿ ಮತ್ತು ಮರದ ದಿಮ್ಮಿ ಸಹಿತ ಆರೋಪಿಯ ಬಂಧನ Read More »

ಮಂಗಳೂರು ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣ| ಉಗ್ರ ಶಾರೀಕ್ ಆಸ್ಪತ್ರೆಯಿಂದ ಡಿಸ್ಚಾರ್ಜ್

ಸಮಗ್ರ ನ್ಯೂಸ್: ಮಂಗಳೂರು ಕುಕ್ಕರ್ ಬಾಂಬ್ ಸ್ಪೋಟದಲ್ಲಿ ಗಾಯಗೊಂಡಿದ್ದ ಶಂಕಿತ ಉಗ್ರ ಶಾರಿಕ್ ಚೇತರಿಸಿಕೊಂಡಿದ್ದು, ವಿಕ್ಟೋರಿಯಾ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ. ಮಂಗಳೂರಿನಲ್ಲಿ ಆಟೋದಲ್ಲಿ ಕುಕ್ಕರ್​ ಬಾಂಬ್ ಸ್ಫೋಟದಲ್ಲಿ ಗಾಯಗೊಂಡಿದ್ದ ಶಾರಿಕ್ ನನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆ ಗೆ ದಾಖಲಿಸಲಾಗಿತ್ತು. ಸುಟ್ಟು ಗಾಯಗೊಂಡಿದ್ದ ಶಂಕಿತ ಉಗ್ರ ಶಾರಿಕ್​ ಚೇತರಿಸಿಕೊಂಡಿದ್ದು ವಿಕ್ಟೋರಿಯಾ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ. ಎರಡೂವರೆ ತಿಂಗಳ ಬಳಿಕ ಶಾರಿಕ್ ಆಸ್ಪತ್ರೆಯಿಂದ ಡಿಸ್ಚಾರ್ಜ್​ ಆಗಿದ್ದಾನೆ. ಶಾರಿಕ್ ಸಂಪೂರ್ಣವಾಗಿ ಗುಣಮುಖನಾಗಿದ್ದು ಸದ್ಯ ವಿಕ್ಟೋರಿಯಾ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಿ

ಮಂಗಳೂರು ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣ| ಉಗ್ರ ಶಾರೀಕ್ ಆಸ್ಪತ್ರೆಯಿಂದ ಡಿಸ್ಚಾರ್ಜ್ Read More »

ಕರಾವಳಿಯಲ್ಲಿ ಹೆಚ್ಚಾಗ್ತಿದೆ ತಾಪಮಾನ| ಎಚ್ಚರವಹಿಸಲು ಆರೋಗ್ಯ ಇಲಾಖೆ ಸೂಚನೆ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಉಷ್ಣಾಂಶ ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಮಾಹಿತಿಯಂತೆ ಮಂಗಳೂರಿನಲ್ಲಿ ಮಾ.3 ರಿಂದ 39 ಡಿಗ್ರಿ ಸೆಲ್ಸಿಯಸ್‌ ಆಸುಪಾಸಿನಲ್ಲಿ ಉಷ್ಣಾಂಶ ದಾಖಲಾಗಿದೆ. ಇದು ದೇಶದಲ್ಲಿಯೇ ಅತ್ಯಧಿಕವಾಗಿದ್ದು, ವಾಡಿಕೆಗಿಂತ 3 ಡಿಗ್ರಿ ಸೆಲ್ಸಿಯಸ್‌ ಹೆಚ್ಚಳವಾಗಿದೆ. ವಾಡಿಕೆಗಿಂತ 1 ಡಿಗ್ರಿ ಸೆಲ್ಸಿಯಸ್‌ ಏರಿಕೆಯಾಗಿದೆ. 2017ರಲ್ಲಿ 37.9 ಡಿಗ್ರಿ ಸೆಲ್ಸಿಯಸ್‌ ಉಷ್ಣಾಂಶ ದಾಖಲಾಗಿದ್ದು ಮಾರ್ಚ್‌ ತಿಂಗಳ ಈವರೆಗಿನ ದಾಖಲೆಯಾಗಿದೆ. ಉಭಯ ಜಿಲ್ಲೆಗಳಲ್ಲಿ ದಿನವಿಡೀ ಸೆಕೆ ಮತ್ತು ಉರಿಬಿಸಿಲಿನಿಂದ ಕೂಡಿದ

ಕರಾವಳಿಯಲ್ಲಿ ಹೆಚ್ಚಾಗ್ತಿದೆ ತಾಪಮಾನ| ಎಚ್ಚರವಹಿಸಲು ಆರೋಗ್ಯ ಇಲಾಖೆ ಸೂಚನೆ Read More »

ಪುತ್ತೂರು: ಎನ್ಐಎ ತಂಡ ಸಂಚರಿಸುತ್ತಿದ್ದ ವಾಹನಕ್ಕೆ ಬೈಕ್ ಡಿಕ್ಕಿ| ಪಾಣಾಜೆ ಸೊಸೈಟಿ ಸಿಇಒ ದುರ್ಮರಣ

ಸಮಗ್ರ ನ್ಯೂಸ್: ಪುತ್ತೂರಿನಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ ( ಎನ್.ಐ.ಎ) ತಂಡ ಸಂಚರಿಸುತಿದ್ದ ಪೊಲೀಸ್ ವಾಹನ ಹಾಗೂ ಬೈಕ್ ಅಪಘಾತ ನಡೆದು ಬೈಕ್ ಸವಾರ ಮೃತಪಟ್ಟ ಘಟನೆ ಮಾ.5 ರಂದು ನಡೆದಿದೆ. ಮೃತರನ್ನು ಪಾಣಾಜೆ ಕೃಷಿ ಪತ್ತಿನ ಸಹಕಾರಿ ಸಂಘದ ಕಾರ್ಯನಿರ್ವಹಣಾಧಿಕಾರಿ ಬಿ. ಲಕ್ಷ್ಮಣ ನಾಯ್ಕ(50) ಎಂದು ಗುರುತಿಸಲಾಗಿದೆ. ಪೊಲೀಸ್ ವಾಹನ ಜಿಲ್ಲೆಯ ಡಿಆರ್​​ಗೆ ಸೇರಿದ್ದಾಗಿದ್ದು, ಸುಳ್ಯ ಕಡೆಯಿಂದ ಪುತ್ತೂರಿಗೆ ಆಗಮಿಸುತ್ತಿದ್ದ ಸಂದರ್ಭ ಪುತ್ತೂರಿನಿಂದ ಆರ್ಲಪದವು ಕಡೆಗೆ ಹೋಗುತ್ತಿದ್ದ ಬೈಕ್ ಪೊಲೀಸ್ ವಾಹನಕ್ಕೆ ಡಿಕ್ಕಿಯಾಗಿದೆ. ಪ್ರವೀಣ್ ನೆಟ್ಟಾರು

ಪುತ್ತೂರು: ಎನ್ಐಎ ತಂಡ ಸಂಚರಿಸುತ್ತಿದ್ದ ವಾಹನಕ್ಕೆ ಬೈಕ್ ಡಿಕ್ಕಿ| ಪಾಣಾಜೆ ಸೊಸೈಟಿ ಸಿಇಒ ದುರ್ಮರಣ Read More »

ಪ್ರವೀಣ್ ಹತ್ಯೆಗೆ ಮೂರು ಬಾರಿ ಸಂಚು| ಎನ್ಐಎ ನಿಂದ ರಿವೀಲ್ ಆಯ್ತು‌ ಮಾಹಿತಿ

ಸಮಗ್ರ ನ್ಯೂಸ್: ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ಐಎ ಹೊಸತೊಂದು ಮಾಹಿತಿ ರಿವೀಲ್ ಮಾಡಿದೆ. ಪ್ರವೀಣ್ ಹತ್ಯೆಯಾಗಿದ್ದು ಮೂರನೇ ಯತ್ನದಲ್ಲಿ ಎನ್ನಲಾಗುತ್ತಿದೆ. ಪ್ರವೀಣ್ ಕೊಲೆಯಾಗುವ ಮೊದಲು ಎರಡು ಬಾರಿ ಹತ್ಯೆ ಯತ್ನ ನಡೆದಿತ್ತು. ಜು.23 ಮತ್ತು ಜು.24 ರಂದೇ ಹತ್ಯೆಗೆ ಸಂಚು ರೂಪಿಸಲಾಗಿತ್ತು. ಜು.23 ರಂದು ಅದೇ ಬೈಕ್​ನಲ್ಲಿ ಕೊಲ್ಲಲು ತಂಡ ಬಂದಿದ್ದು, ಆದರೆ ಅಂಗಡಿ ಬಳಿ ಜನ ಇದ್ದಿದ್ದರಿಂದ ವಾಪಾಸ್ ಹೋಗಿದ್ದಾರೆ. ಜು.24 ರಂದು ಸಂಜೆ 4.30 ಕ್ಕೆ ಕೊಲ್ಲಲು ಸಂಚು

ಪ್ರವೀಣ್ ಹತ್ಯೆಗೆ ಮೂರು ಬಾರಿ ಸಂಚು| ಎನ್ಐಎ ನಿಂದ ರಿವೀಲ್ ಆಯ್ತು‌ ಮಾಹಿತಿ Read More »

ಮಂಗಳೂರು: ಯುವಕನಿಗೆ ಚೂರಿ ಇರಿದು ಕೊಲೆಗೆ ಯತ್ನ| ಗಾಯಾಳು ಗಂಭೀರ

ಸಮಗ್ರ ನ್ಯೂಸ್: ಯುವಕನಿಗೆ ಚೂರಿಯಿಂದ ಇರಿದು ಕೊಲೆಗೆ ಯತ್ನಿಸಿರುವ ಘಟನೆ ಮಂಗಳೂರಿನ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಾ.3 ರ ತಡರಾತ್ರಿ ನಡೆದಿದೆ. ಉಳ್ಳಾಲ ಕೋಟೆಪುರ ನಿವಾಸಿ ಸದಕತ್ತುಲ್ಲಾ (34) ಎಂಬಾತನ ಮೇಲೆ ದಾಳಿ ನಡೆಸಲಾಗಿದ್ದು, ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆರೋಪಿಗಳನ್ನು ಛಬ್ಬಿ ಅಲಿಯಾಸ್ ಕಬೀರ್ ಮತ್ತು ರಾಝಿಕ್ ಎಂದು ‌ಗುರುತಿಸಲಾಗಿದ್ದು, ಇವರ ಜೊತೆಗೆ ಇನ್ನೂ ಇಬ್ಬರು ಸೇರಿಕೊಂಡಿದ್ದರು ಎನ್ನಲಾಗಿದೆ. ಇಬ್ಬರಿಗಾಗಿ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ. ಸದಕತ್ತುಲ್ಲಾ ಮನೆಯಲ್ಲಿದ್ದ ಸಂದರ್ಭ ಎದುರುಗಡೆ ಕರೆಸಿ ಚೂರಿಯಿಂದ ಹೊಟ್ಟೆ

ಮಂಗಳೂರು: ಯುವಕನಿಗೆ ಚೂರಿ ಇರಿದು ಕೊಲೆಗೆ ಯತ್ನ| ಗಾಯಾಳು ಗಂಭೀರ Read More »

ಮಂಗಳೂರು: ಯುವಕನಿಗೆ ಚೂರಿ ಇರಿದು ಕೊಲೆಗೆ ಯತ್ನ| ಗಾಯಾಳು ಗಂಭೀರ

ಸಮಗ್ರ ನ್ಯೂಸ್: ಯುವಕನಿಗೆ ಚೂರಿಯಿಂದ ಇರಿದು ಕೊಲೆಗೆ ಯತ್ನಿಸಿರುವ ಘಟನೆ ಮಂಗಳೂರಿನ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಾ.3 ರ ತಡರಾತ್ರಿ ನಡೆದಿದೆ. ಉಳ್ಳಾಲ ಕೋಟೆಪುರ ನಿವಾಸಿ ಸದಕತ್ತುಲ್ಲಾ (34) ಎಂಬಾತನ ಮೇಲೆ ದಾಳಿ ನಡೆಸಲಾಗಿದ್ದು, ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆರೋಪಿಗಳನ್ನು ಛಬ್ಬಿ ಅಲಿಯಾಸ್ ಕಬೀರ್ ಮತ್ತು ರಾಝಿಕ್ ಎಂದು ‌ಗುರುತಿಸಲಾಗಿದ್ದು, ಇವರ ಜೊತೆಗೆ ಇನ್ನೂ ಇಬ್ಬರು ಸೇರಿಕೊಂಡಿದ್ದರು ಎನ್ನಲಾಗಿದೆ. ಇಬ್ಬರಿಗಾಗಿ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ. ಸದಕತ್ತುಲ್ಲಾ ಮನೆಯಲ್ಲಿದ್ದ ಸಂದರ್ಭ ಎದುರುಗಡೆ ಕರೆಸಿ ಚೂರಿಯಿಂದ ಹೊಟ್ಟೆ

ಮಂಗಳೂರು: ಯುವಕನಿಗೆ ಚೂರಿ ಇರಿದು ಕೊಲೆಗೆ ಯತ್ನ| ಗಾಯಾಳು ಗಂಭೀರ Read More »