ಕರಾವಳಿ

ಕಾರ್ಕಳ ಖಾಸಗಿ ಶಾಲೆಯಲ್ಲಿ ಈದ್ ಮಿಲಾದ್ ಆಚರಣೆ, ಹಿಂದೂ ವಿದ್ಯಾರ್ಥಿಗಳ ಪೋಷಕರಿಂದ ಆಕ್ರೋಶ

ಸಮಗ್ರ ನ್ಯೂಸ್: ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಸಚ್ಚರಿಪೇಟೆಯ ಖಾಸಗಿ ಶಾಲೆಯಲ್ಲಿ ಈದ್ ಮಿಲಾದ್ ಆಚರಣೆ ಮಾಡಿರುವುದಕ್ಕೆ ಹಿಂದೂ ಮಕ್ಕಳ ಪೋಷಕರಿಂದ ಆಕ್ಷೇಪ ವ್ಯಕ್ತವಾಗಿದೆ. ಸಚ್ಚರಿಪೇಟೆಯ ಲಯನ್ಸ್ ಇಂಗ್ಲೀಷ್ ಮೀಡಿಯಂ ಶಾಲೆಯಲ್ಲಿ ಈದ್ ಮಿಲಾದ್ ಆಚರಿಸಲಾಗಿತ್ತು. ಬಿಜೆಪಿ ಮುಖಂಡರು ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಕಾರ್ಯಕ್ರಮದ ವೀಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆದ ಬೆನ್ನಲ್ಲೇ ಹಿಂದೂ ಶಾಲೆಯ ಮಕ್ಕಳ ಪೋಷಕರಿಂದ ಕಾರ್ಯಕ್ರಮದ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾಗಿದೆ. ಈ ಬಗ್ಗೆ ಶ್ರೀರಾಮ ಸೇನೆ ಮುಖಂಡ ಪ್ರಮೋದ್ ಮುತಾಲಿಕ್ ಕೂಡ […]

ಕಾರ್ಕಳ ಖಾಸಗಿ ಶಾಲೆಯಲ್ಲಿ ಈದ್ ಮಿಲಾದ್ ಆಚರಣೆ, ಹಿಂದೂ ವಿದ್ಯಾರ್ಥಿಗಳ ಪೋಷಕರಿಂದ ಆಕ್ರೋಶ Read More »

ಸ್ನೇಹ, ಪ್ರೇಮದ ನಾಟಕವಾಡಿ ಮಹಿಳೆಯರನ್ನು ವಂಚಿಸಿದ ಆರೋಪಿ ಸೆರೆ

ಸಮಗ್ರ ನ್ಯೂಸ್: ಮಹಿಳೆಯರನ್ನು ಸ್ನೇಹ, ಪ್ರೇಮದ ನಾಟಕವಾಡಿ ಬಲೆಗೆ ಬೀಳಿಸಿ ಆಭರಣ, ನಗದು ಇತ್ಯಾದಿಗಳನ್ನು ದೋಚುತ್ತಿದ್ದ ಕಾರ್ಕಳದ ಬೆಲ್ಮಣ್ ನಿವಾಸಿ ರೋಹಿತ್ ಮಥಾಯಿಸ್ (33) ಎಂಬಾತನನ್ನು ಸೆ.17 ರಂದು ಮಂಗಳೂರು ಕಂಕನಾಡಿ ಪೊಲೀಸರು ಬಂಧಿಸಿದ್ಧಾರೆ. 2021ರಲ್ಲಿ ಮಂಗಳೂರಿನ ಕುಲಶೇಖರದ ಕಾಸ್ತಾಲಿನೊ ಕಾಲೋನಿ ಸೆಕ್ರೆಡ್ ಹಾರ್ಟ್ ಎಂಬಲ್ಲಿರುವ ಮಹಿಳೆಯೊಬ್ಬರ ಜೊತೆ ಕೆಲ ಸಮಯ ವಾಸವಿದ್ದು ಅವರ ಚಿನ್ನಾಭರಣ ಮತ್ತು ನಗದು ಲಪಟಾಯಿಸಿಕೊಂಡು ಮುಂಬಯಿಯಲ್ಲಿ ತಲೆಮರಿಸಿಕೊಂಡಿದ್ದ. ಇದೇ ರೀತಿ ಮಂಗಳೂರಿನ ಇನ್ನೋರ್ವ ಮಹಿಳೆಯನ್ನು ಬುಟ್ಟಿಗೆ ಹಾಕಿಕೊಳ್ಳಲು ಆತ ಪ್ರಯತ್ನಿಸಿದ್ದ. ಆರಂಭದಲ್ಲಿ

ಸ್ನೇಹ, ಪ್ರೇಮದ ನಾಟಕವಾಡಿ ಮಹಿಳೆಯರನ್ನು ವಂಚಿಸಿದ ಆರೋಪಿ ಸೆರೆ Read More »

ಸಿಎಂ ವಿರುದ್ಧ ಆಕ್ಷೇಪಾರ್ಹ ಪೋಸ್ಟ್ ಹಾಕಿದ ಶಾಸಕ ಹರೀಶ್ ಪೂಂಜಾ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ

ಸಮಗ್ರ ನ್ಯೂಸ್: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಮಾನ ಆಗುವ ರೀತಿಯಲ್ಲಿ ಆಕ್ಷೇಪಾರ್ಹ ಪೋಸ್ಟ್ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಇದೀಗ ಬೆಳ್ತಂಗಡಿ ಶಾಸಕ ಹರೀಶ್ ಪೂಜಾ ವಿರುದ್ಧ ಪೊಲೀಸರು ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಬೆಳ್ತಂಗಡಿಯ ಬಿಜೆಪಿ ಶಾಸಕ ಹರೀಶ್ ಪೂಂಜಾ, ಅವರ ಸಾಮಾಜಿಕ ಜಾಲತಾಣದ ಖಾತೆಯಲ್ಲಿ ಅವಮಾನ ಅಗುವ ರೀತಿಯಲ್ಲಿ ನಿವಾಸದ ಫೋಟೋ ಮತ್ತು ಕಚೇರಿಯಲ್ಲಿ ಕುಳಿತಿರುವ ಫೋಟೋಗಳನ್ನು ಬಳಸಿ ಅದನ್ನು ಎಡಿಟ್ ಮಾಡಿ ಸಿದ್ದರಾಮಯ್ಯ ಕಲೆಕ್ಟರ್ ಮಾಸ್ಟರ್ (CM) ಎಂದು ಪೋಸ್ಟ್

ಸಿಎಂ ವಿರುದ್ಧ ಆಕ್ಷೇಪಾರ್ಹ ಪೋಸ್ಟ್ ಹಾಕಿದ ಶಾಸಕ ಹರೀಶ್ ಪೂಂಜಾ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ Read More »

ಪ್ರಕ್ಷುಬ್ಧಗೊಂಡಿದ್ದ ಬಂಟ್ವಾಳ ಶಾಂತ| ಪರಿಸ್ಥಿತಿ ತಿಳಿಗೊಳಿಸಿದ ಪೊಲೀಸರು| ಬಿಸಿ ರೋಡ್ ನಲ್ಲಿ ಏನೇನು ನಡೆಯಿತು? ಇಲ್ಲಿದೆ ಸಂಪೂರ್ಣ ಮಾಹಿತಿ…

ಸಮಗ್ರ ನ್ಯೂಸ್: ಮುಸ್ಲಿಂ ಮತ್ತು ಹಿಂದೂ ಮುಖಂಡರ ಪ್ರಚೋದನಕಾರಿ ಹೇಳಿಕೆಯಿಂದ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿಸಿ ರೋಡ್​​ನಲ್ಲಿ ಪರಿಸ್ಥಿತಿ ಪ್ರಕ್ಷುಬ್ಧಗೊಂಡಿತ್ತು. ಆದರೆ, ದಕ್ಷಿಣ ಕನ್ನಡ ಜಿಲ್ಲೆಯ ಪೊಲೀಸರ ಕಾರ್ಯಚಟುವಟಿಕೆಯಿಂದ ಪರಿಸ್ಥಿತಿ ತಿಳಿಗೊಂಡಿದೆ. ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರುವಲ್ಲಿ ದಕ್ಷಿಣ ಜಿಲ್ಲೆಯ ಪೊಲೀಸರು ಯಶಸ್ವಿಯಾಗಿದ್ದಾರೆ. ಪ್ರಚೋದನಕಾರಿ ಹೇಳಿಕೆ ನೀಡಿದ ಮುಸ್ಲಿಂ ಮುಖಂಡರನ್ನು ಪೊಲೀಸರು ಬಂಧಿಸಿದ್ದಾರೆ. ಇನ್ನು, ವಿಶ್ವ ಹಿಂದೂ ಪರಿಷತ್​ ಮುಖಂಡ ಶರಣ್ ಪಂಪ್​ವೆಲ್ ವಿರುದ್ಧ ಪ್ರಕರಣ ದಾಖಲಾಗಿದೆ. ಬಿಸಿ ರೋಡ್​ನಲ್ಲಿ ಸೋಮವಾರ (ಸೆ.16) ಬೆಳಗ್ಗೆ ಈದ್​

ಪ್ರಕ್ಷುಬ್ಧಗೊಂಡಿದ್ದ ಬಂಟ್ವಾಳ ಶಾಂತ| ಪರಿಸ್ಥಿತಿ ತಿಳಿಗೊಳಿಸಿದ ಪೊಲೀಸರು| ಬಿಸಿ ರೋಡ್ ನಲ್ಲಿ ಏನೇನು ನಡೆಯಿತು? ಇಲ್ಲಿದೆ ಸಂಪೂರ್ಣ ಮಾಹಿತಿ… Read More »

ಮಂಗಳೂರು: ಮಸೀದಿಗೆ ಕಲ್ಲೆಸೆದ ಪ್ರಕರಣ| ಐದು ಮಂದಿಯನ್ನು ಬಂಧಿಸಿದ ಪೊಲೀಸರು

ಸಮಗ್ರ ನ್ಯೂಸ್: ಮಂಗಳೂರು ಹೊರವಲಯದ ಸುರತ್ಕಲ್ ಸಮೀಪದ ಕಾಟಿಪಳ್ಳ 3ನೇ ಬ್ಲಾಕ್ ನ ಜುಮಾ ಮಸೀದಿಗೆ ಕಲ್ಲೆಸೆದ ಪ್ರಕರಣ ಸಂಬಂಧ ಐದು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರು ಸುರತ್ಕಲ್ ಆಶ್ರಯ ಕಾಲನಿ ನಿವಾಸಿ ಭರತ್, ಕಟ್ಲ ಆಶ್ರಯ ಕಾಲನಿ ನಿವಾಸಿ ಚೆನ್ನಪ್ಪ, ಹಳೆಯಂಗಡಿ ಖಂಡಿಗೆ ಪಾಡಿ ನಿವಾಸಿ ನಿತಿನ್, ಈಶ್ವರ ನಗರ ನಿವಾಸಿ ಮನು, ಮುಂಚೂರು ನಿವಾಸಿ ಸುಜಿತ್ ಎಂದು ತಿಳಿದು ಬಂದಿದೆ. ಆರೋಪಿಗಳು ಜನತಾ ಕಾಲನಿ ಸ್ಮಶಾನದ ಕಡೆಯಿಂದ ಎರಡು ಬೈಕ್ ಗಳಲ್ಲಿ ಬಂದು, ಮಸೀದಿಯ

ಮಂಗಳೂರು: ಮಸೀದಿಗೆ ಕಲ್ಲೆಸೆದ ಪ್ರಕರಣ| ಐದು ಮಂದಿಯನ್ನು ಬಂಧಿಸಿದ ಪೊಲೀಸರು Read More »

ಮಂಗಳೂರು: ಮಸೀದಿ ಮೇಲೆ‌ ಕಿಡಿಗೇಡಿಗಳಿಂದ ಕಲ್ಲು ತೂರಾಟ

ಸಮಗ್ರ ನ್ಯೂಸ್: ಮಂಗಳೂರಿನ ಕಾಟಿಪಳ್ಳದ ಮಸೀದಿಯ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದಾರೆ. ನಿನ್ನೆ ತಡರಾತ್ರಿ ಈ ಘಟನೆ ನಡೆದಿದ್ದು, ಸ್ಥಳದಲ್ಲಿ ಬಿಗುವಿನ ವಾತಾವರಣದಿಂದ ಕೂಡಿರುವುದಾಗಿ ತಿಳಿದು ಬಂದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಹೊರವಲಯದ ಸುರತ್ಕಲ್ ಬಳಿಯಲ್ಲಿರುವ ಕಾಟಿಪಳ್ಳದ 3ನೇ ಬ್ಲಾಕ್ ನಲ್ಲಿರುವ ಬದ್ರಿಯಾ ಮಸೀದಿಯ ಮೇಲೆ ಕಿಡಿಗೇಡಿಗಳು ನಿನ್ನೆ ರಾತ್ರಿ 10.30ರ ಸುಮಾರಿಗೆ ಕಲ್ಲು ತೂರಾಟ ನಡೆಸಿದ್ದಾರೆ. ಕಿಡಿಗೇಡಿಗಳ ಕಲ್ಲೆಸೆತದಿಂದ ಬದ್ರಿಯಾ ಮಸೀದಿಯ ಕಿಟಕಿ ಗಾಜುಗಳು ಪುಡಿಪುಡಿಯಾಗಿವೆ. ಈ ಕೃತ್ಯವನ್ನು ಎರಡು ಬೈಕ್ ನಲ್ಲಿ

ಮಂಗಳೂರು: ಮಸೀದಿ ಮೇಲೆ‌ ಕಿಡಿಗೇಡಿಗಳಿಂದ ಕಲ್ಲು ತೂರಾಟ Read More »

ಪುತ್ತೂರು:ನಾಯಿಗಳಿಗೆ ಉಚಿತ ಸಂತಾನಹರಣ ಚಿಕಿತ್ಸೆ

ಸಮಗ್ರ ನ್ಯೂಸ್:ಮಲ್ಪೆ ಮಧ್ವರಾಜ್ ಎನಿಮಲ್ ಕೇರ್ ಟ್ರಸ್ಟ್ ಹಾಗೂ ಡಬ್ಲ್ಯೂವಿಎಸ್ ಜಂಟಿ ಆಶ್ರಯದಲ್ಲಿ ಪುತ್ತೂರು ಯುವ ರೋಟರಿ ಕ್ಲಬ್ ಸಹಕಾರದೊಂದಿಗೆ ಮನೆ ನಾಯಿಗಳಿಗೆ ಉಚಿತ ಸಂತಾನಹರಣ ಚಿಕಿತ್ಸೆಯ ಬಗ್ಗೆ ಚರ್ಚೆಯು ಸೆ.13 ರಂದು ಪುತ್ತೂರಿನ ಪ್ರೆಸ್ ಕ್ಲಬ್ ನಲ್ಲಿ ನಡೆಯಿತು. ನಾಯಿಗಳಿಗೆ ಉಚಿತವಾಗಿ ಸಂತಾನಹರಣ ಚಿಕಿತ್ಸೆಯು ಸೆ.18 ರಿಂದ 23 ರ ವರೆಗೆ ಮುರ ಸಮೀಪದ ಪೋಳ್ಯ ಖುಷಿ ಕಂಪೌಂಡ್ ನಲ್ಲಿ ಆರು ದಿನಗಳ ಕಾಲ ನಡೆಯಲಿದೆ ಎಂದು ಮಧ್ವರಾಜ್ ಎನಿಮಲ್ ಕೇರ್ ನ ಟ್ರಸ್ಟಿ ಮಮತಾ

ಪುತ್ತೂರು:ನಾಯಿಗಳಿಗೆ ಉಚಿತ ಸಂತಾನಹರಣ ಚಿಕಿತ್ಸೆ Read More »

ಉಪ್ಪಿನಂಗಡಿ: ಅಪ್ರಾಪ್ತ ಕಾಲೇಜು ವಿದ್ಯಾರ್ಥಿನಿಯ ಅತ್ಯಾಚಾರ| ಪೋಕ್ಸೋ ಪ್ರಕರಣ ದಾಖಲು

ಸಮಗ್ರ ನ್ಯೂಸ್: ಅಪ್ರಾಪ್ತ ಕಾಲೇಜು ವಿದ್ಯಾರ್ಥಿನಿಯನ್ನು ಪುಸಲಾಯಿಸಿ ಕಾಡಿಗೆ ಕರೆದೊಯ್ದು ಅತ್ಯಾಚಾರವೆಸಗಿದ ಪ್ರಕರಣಕ್ಕೆ ಸಂಬಂಧಿಸಿ ವಿಟ್ಲ ನಿವಾಸಿ ಸತೀಶ್ (38) ಎಂಬಾತನ ವಿರುದ್ಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ನೆಲ್ಯಾಡಿ ಕಾಲೇಜೊಂದರ ವಿದ್ಯಾರ್ಥಿನಿಯನ್ನು ಜೂ.14 ರಂದು ಪುತ್ತೂರಿನಲ್ಲಿ ಪರಿಚಯಿಸಿಕೊಂಡ ಆರೋಪಿಯು ಫೋನ್ ಮೂಲಕ ಸಂಪರ್ಕ ಸಾಧಿಸಿಕೊಂಡು ಆತ್ಮೀಯತೆ ಬೆಳೆಸಿದ್ದಲ್ಲದೆ, ಕಳೆದ ಜು. 21 ರಂದು ಆಕೆಯನ್ನು ನೆಲ್ಯಾಡಿಗೆ ಬರಲು ಹೇಳಿ, ನೆಲ್ಯಾಡಿಗೆ ಬಂದ ಆಕೆಯನ್ನು ಪಿಕಪ್ ವಾಹನದಲ್ಲಿ ಬಜತ್ತೂರು ಗ್ರಾಮದ ಕಾಂಚನ ಎಂಬಲ್ಲಿನ

ಉಪ್ಪಿನಂಗಡಿ: ಅಪ್ರಾಪ್ತ ಕಾಲೇಜು ವಿದ್ಯಾರ್ಥಿನಿಯ ಅತ್ಯಾಚಾರ| ಪೋಕ್ಸೋ ಪ್ರಕರಣ ದಾಖಲು Read More »

ಮಂಗಳೂರು: ಹೆತ್ತತಾಯಿಯನ್ನು ರಕ್ಷಿಸಲು ‘ಬಾಹುಬಲಿ’ಯಾದ ಮಗಳು| ಅಪಘಾತದಲ್ಲಿ ಗಾಯಗೊಂಡ ತಾಯಿ ಮಗಳ ಕಾರಣ ಬಚಾವ್

ಸಮಗ್ರ ನ್ಯೂಸ್: ರಸ್ತೆ ದಾಟುತ್ತಿದ್ದ ಮಹಿಳೆಗೆ ಆಟೋ ಡಿಕ್ಕಿ ಹೊಡೆದು ಮಹಿಳೆ ಗಂಭೀರವಾಗಿ ಗಾಯಗೊಂಡ ಘಟನೆ ಮಂಗಳೂರು ಹೊರವಲಯದ ಮುಲ್ಕಿ ಬಳಿಯ ಕಿನ್ನಿಗೋಳಿ‌ ರಾಮನಗರದಲ್ಲಿ ನಡೆದಿದೆ. ರಾಜರತ್ನಪುರ ನಿವಾಸಿ 35 ವರ್ಷದ ಚೇತನ ಗಂಭೀರವಾಗಿ ಗಾಯಗೊಂಡಿದ್ದಾರೆ. ಮಹಿಳೆ ಏಕಾಏಕಿ ರಸ್ತೆ ದಾಟಲು ಮುಂದಾಗಿದ್ದು, ಈ ವೇಳೆ ಕಟೀಲಿನಿಂದ ಕಿನ್ನಿಗೋಳಿ‌ ಕಡೆಗೆ ಬರುತ್ತಿದ್ದ ಆಟೋ, ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಪಿಗ್ಮಿ ಕಲೆಕ್ಷನ್ ಮುಗಿಸಿ ಟ್ಯೂಶನ್ ಗೆ ತೆರಳಿದ್ದ ಹೈಸ್ಕೂಲ್ ಓದುವ ಮಗಳನ್ನ ಕರೆತರಲು ಟ್ಯೂಷನ್ ಸೆಂಟರ್ ನತ್ತ

ಮಂಗಳೂರು: ಹೆತ್ತತಾಯಿಯನ್ನು ರಕ್ಷಿಸಲು ‘ಬಾಹುಬಲಿ’ಯಾದ ಮಗಳು| ಅಪಘಾತದಲ್ಲಿ ಗಾಯಗೊಂಡ ತಾಯಿ ಮಗಳ ಕಾರಣ ಬಚಾವ್ Read More »

ಕಡಬ: ಮನೆಯೊಂದರ ಪಕ್ಕ‌ ಅಕ್ರಮ ಕಸಾಯಿಖಾನೆ| ಗೋ ವಧೆ ನಡೆಸುತ್ತಿದ್ದವರ ಮೇಲೆ ಪೊಲೀಸರ ದಿಢೀರ್ ದಾಳಿ; ಇಬ್ಬರು ವಶಕ್ಕೆ

ಸಮಗ್ರ ನ್ಯೂಸ್: ಮನೆಯೊಂದರ ಹಿಂಬದಿ ಅಕ್ರಮವಾಗಿ ‌ನಡೆಯುತ್ತಿದ್ದ ಕಸಾಯಿಖಾನೆಗೆ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ಮಾಡಿದ್ದು ಇಬ್ಬರನ್ನು ವಶಕ್ಕೆ ಪಡೆದ ಘಟನೆ ಸೆ.6 ರ ಮುಂಜಾನೆ ನಡೆದಿದೆ. ತಾಲೂಕಿನ ಕುಟ್ರುಪ್ಪಾಡಿ ಗ್ರಾ.ಪಂ ವ್ಯಾಪ್ತಿಯ ಕಾರ್ಕಳ ಎಂಬಲ್ಲಿ ಮನೆಯೊಂದರಲ್ಲಿ ಜಾನುವಾರು ವಧೆ ಮಾಡುತ್ತಿರುವ ಕುರಿತು ಬಜರಂಗದಳಕ್ಕೆ ಮಾಹಿತಿ ಲಭಿಸಿತ್ತು. ಪೊಲೀಸರಿಗೆ ಮಾಹಿತಿ ರವಾನಿಸಿದ ಮೇರೆಗೆ ಕಡಬ ಠಾಣಾ ಎಸ್.ಐ ನೇತೃತ್ವದ ಪೊಲೀಸರು ದಾಳಿ ಮಾಡಿರುವುದಾಗಿ ತಿಳಿದು ಬಂದಿದೆ.ಸ್ಥಳದಲ್ಲಿ ಗೋವಧೆ ಮಾಡಲು ಬಳಸಿದ ಸಾಧನ, ದನದ ರುಂಡ, ಸುಮಾರು

ಕಡಬ: ಮನೆಯೊಂದರ ಪಕ್ಕ‌ ಅಕ್ರಮ ಕಸಾಯಿಖಾನೆ| ಗೋ ವಧೆ ನಡೆಸುತ್ತಿದ್ದವರ ಮೇಲೆ ಪೊಲೀಸರ ದಿಢೀರ್ ದಾಳಿ; ಇಬ್ಬರು ವಶಕ್ಕೆ Read More »