ಕರಾವಳಿ

ಚಂಡಮಾರುತ ಆರ್ಭಟ; ಕರ್ನಾಟಕ ಕರಾವಳಿಯಲ್ಲಿ ಕಟ್ಟೆಚ್ಚರ ವಹಿಸಲು ಸೂಚನೆ

ಸಮಗ್ರ ನ್ಯೂಸ್: ಬಂದರು ನಗರಿ ಮಂಗಳೂರಿನ ಕರಾವಳಿ , ಕೇರಳದ ಹಲವು ಭಾಗದಲ್ಲಿ ಭಾರೀ ಚಂಡಮಾರುತ ಆರ್ಭಟ ಹೆಚ್ಚಾಗಲಿದೆ ಎಂದು ರಾಷ್ಟ್ರೀಯ ಸಾಗರ ಮತ್ತು ವಾತಾವರಣ ಸಂಶೋಧನಾ ಕೇಂದ್ರ ಮಾಹಿತಿ ನೀಡಿದೆ. ಇಂದು ರಾತ್ರಿ ಕರಾವಳಿ ಮತ್ತು ಕೇರಳದ ಹಲವೆಡೆ ಎತ್ತರದ ಅಲೆಗಳು ಮತ್ತು ಸಮುದ್ರದ ಅಲೆಗಳು 1.4 ರಿಂದ 2.0 ಮೀಟರ್ ಎತ್ತರದಷ್ಟು ಆರ್ಭಟ ಹೆಚ್ಚಾಗಲಿದೆ. ವೀನುಗಾರರು ಸಮುದ್ರಕ್ಕೆ ಇಳಿಯದಂತೆ ಮುನ್ನೆಚ್ಚರಿಕೆ ನೀಡಲಾಗಿದೆ. ಅಷ್ಟೇ ಅಲ್ಲದೇ ಸಮುದ್ರ ದಡಗಳಲ್ಲಿ ವಾಸಿಸುವ ಕರಾವಳಿ ನಿವಾಸಿಗಳು ಸಮುದ್ರ ತೀರಕ್ಕೆ

ಚಂಡಮಾರುತ ಆರ್ಭಟ; ಕರ್ನಾಟಕ ಕರಾವಳಿಯಲ್ಲಿ ಕಟ್ಟೆಚ್ಚರ ವಹಿಸಲು ಸೂಚನೆ Read More »

ಯಕ್ಷಗಾನ ಗಾರುಡಿಗ ಬಲಿಪ ನಾರಾಯಣ ಭಾಗವತ ಇನ್ನಿಲ್ಲ

ಸಮಗ್ರ ನ್ಯೂಸ್: ತೆಂಕುತಿಟ್ಟು ಯಕ್ಷ ರಂಗದ ಖ್ಯಾತ ಭಾಗವತರಾದ ಬಲಿಪ ನಾರಾಯಣ ಭಾಗವತರು ಇಂದು(ಫೆ.16) ಸಂಜೆ ನಿಧನರಾದರು. ಇದರೊಂದಿಗೆ ಯಕ್ಷಲೋಕದಲ್ಲಿ ತನ್ನದೇ ಸ್ವರಸ್ಥಾಯಿ ನಿರ್ಮಿಸಿದ್ದ ಗಾನ ಕೋಗಿಲೆ ತನ್ನ ಹಾಡು ನಿಲ್ಲಿಸಿದೆ. ಗುರುವಾರ ಸಂಜೆ ಸುಮಾರು 6.30ರ ವೇಳೆಗೆ ಬಲಿಪ ನಾರಾಯಣ ಭಾಗವತರು ಅಸ್ತಂಗತರಾದರೆಂದು ಬಲ್ಲ ಮೂಲಗಳಿಂದ ತಿಳಿದುಬಂದಿದೆ. ಅವರ ಅಂತಿಮ ವಿಧಿ ವಿಧಾನ ಇಂದು(ಫೆ.16) ತಡರಾತ್ರಿ ನಡೆಯಲಿದೆ ಎಂದು ಕುಟುಂಬದ ಮೂಲಗಳಿಂದ ತಿಳಿದು ಬಂದಿದೆ. ಮೂಲತಃ ಯಕ್ಷಗಾನದ ತವರುನೆಲ ಕಾಸರಗೋಡು ಜಿಲ್ಲೆಯ ಪಡ್ರೆ ಗ್ರಾಮದವರಾದ ಅವರು

ಯಕ್ಷಗಾನ ಗಾರುಡಿಗ ಬಲಿಪ ನಾರಾಯಣ ಭಾಗವತ ಇನ್ನಿಲ್ಲ Read More »

ಮಂಗಳೂರು ಕುಕ್ಕರ್ ಬಾಂಬ್ ಸ್ಪೋಟ‌ ಪ್ರಕರಣಕ್ಕೆ ಟ್ವಿಸ್ಟ್| ತಮಿಳುನಾಡಿನಲ್ಲಿ ಎನ್ಐಎ ನಿಂದ ಇಬ್ಬರ ಬಂಧನ

ಸಮಗ್ರ ನ್ಯೂಸ್: ಮಂಗಳೂರಲ್ಲಿ ನಡೆದ ಕುಕ್ಕರ್‌ ಬಾಂಬ್‌ ಸ್ಪೋಟ ದಿನದಿಂದ ದಿನಕ್ಕೆ ತಿರುವು ಪಡೆದುಕೊಳ್ಳುತ್ತಿದ್ದು, ಪ್ರಕರಣಕ್ಕೆ ತಮಿಳುನಾಡು ಲಿಂಕ್‌ ಹಿನ್ನೆಲೆ ತಿರುಪ್ಪೂರು ಜಿಲ್ಲೆಯ 2 ಸ್ಥಳಗಳಲ್ಲಿ ಬೆಳ್ಳಂಬೆಳಗ್ಗೆ ಎನ್‌ಐಎ ದಾಳಿ ನಡೆಸಿ, ಇಬ್ಬರ ಬಂಧಿಸಿದ್ದಾರೆ. ಇಂದು(ಫೆ.15) ತಮಿಳುನಾಡಿನ ತಿರುಪ್ಪೂರು ಜಿಲ್ಲೆಗಳಲ್ಲಿ ಎನ್‌ಐಎ ದಾಳಿ ನಡೆಸಿ, ಕುಕ್ಕರ್‌ ಬಾಂಬ್‌ ಬ್ಲಾಸ್ಟ್‌ ಕೇಸ್‌ ಸಂಬಂಧಿಸಿದ ಇಬ್ಬರ ಮನೆಯಲ್ಲಿ 5 ಗಂಟೆಗಳ ಕಾಲ ಶೋಧ ಕಾರ್ಯಾಚರಣೆ ನಡೆಸಿ ಬಳಿ ಬಂಧಿಸಿದ್ದಾರೆ. ನ.19 ರಂದು ಮಂಗಳೂರಿನಲ್ಲಿ ಆಟೋದಲ್ಲಿ ಕುಕ್ಕರ್‌ ಬಾಂಬ್‌ ಸ್ಫೋಟಗೊಂಡಿತ್ತು. ಘಟನೆಯಲ್ಲಿ

ಮಂಗಳೂರು ಕುಕ್ಕರ್ ಬಾಂಬ್ ಸ್ಪೋಟ‌ ಪ್ರಕರಣಕ್ಕೆ ಟ್ವಿಸ್ಟ್| ತಮಿಳುನಾಡಿನಲ್ಲಿ ಎನ್ಐಎ ನಿಂದ ಇಬ್ಬರ ಬಂಧನ Read More »

ಗ್ರಾಮ ಪಂಚಾಯತ್ ನೌಕರರಿಗೆ ಬಿಗ್ ಶಾಕ್| ಪಂಚಾಯತ್ ನೌಕರರು ಸರ್ಕಾರಿ ನೌಕರರಲ್ಲ – ಸಚಿವ ಕೋಟಾ

ಸಮಗ್ರ ನ್ಯೂಸ್: ರಾಜ್ಯದ ಗ್ರಾಮ ಪಂಚಾಯಿತಿ ನೌಕರರಿಗೆ ರಾಜ್ಯ ಸರ್ಕಾರ ಬಿಗ್ ಶಾಕ್ ನೀಡಿದ್ದು, ಗ್ರಾಮ ಪಂಚಾಯಿತಿ ನೌಕರರು ಸರ್ಕಾರಿ ನೌಕರರಾಗಿರುವುದಿಲ್ಲ ಎಂದು ಸಚಿವ ಕೋಟಾ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ. ವಿಧಾನಪರಿಷತ್ ನಲ್ಲಿ ಈ ಕುರಿತು ಮಾಹಿತಿ ನೀಡಿರುವ ಸಚಿವರು, ಗ್ರಾಮಪಂಚಾಯಿತಿ ನೌಕರರು ಸರ್ಕಾರಿ ನೌಕರರಾಗುವುದಿಲ್ಲ. ಸದರಿ ನೌಕರರು ಸ್ಥಳೀಯ ಪ್ರಾಧಿಕಾರವಾದ ಗ್ರಾಮ ಪಂಚಾಯಿತಿಯ ನೌಕರರಾಗಿದ್ದು, ಸಿ ಮತ್ತು ಡಿ ದರ್ಜೆ ನೌಕರರೆಂದು ಪರಿಗಣಿಸಿ ಸರ್ಕಾರಿ ನೌಕರರಂತೆ ವೇತನ ಶ್ರೇಣಿ ನಿಗದಿಪಡಿಸಲು ಆಡಳಿತಾತ್ಮಕವಾಗಿ ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಗ್ರಾಮ ಪಂಚಾಯತ್ ನೌಕರರಿಗೆ ಬಿಗ್ ಶಾಕ್| ಪಂಚಾಯತ್ ನೌಕರರು ಸರ್ಕಾರಿ ನೌಕರರಲ್ಲ – ಸಚಿವ ಕೋಟಾ Read More »

ಮಂಗಳೂರು: ಪಬ್ ನಲ್ಲಿ ಮ್ಯೂಸಿಕ್ ಅವಕಾಶ ಇಲ್ಲ..!!| ಪೊಲೀಸರ ಹೊಸ ರೂಲ್ಸ್ ಗೆ ಗ್ರಾಹಕರ ಆಕ್ರೋಶ!!|ದಿನಕ್ಕೊಂದು ರೂಲ್ಸ್ ತಂದರೆ ಉದ್ಯಮಿಗಳ ಪಾಡೇನು?

ಸಮಗ್ರ ನ್ಯೂಸ್: ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಪೊಲೀಸ್ ಇಲಾಖೆ ಹೊಸದಾಗಿ ಜಾರಿ ಮಾಡ್ತ ಇರೋ ರೂಲ್ಸ್ ಗಳು ಮತ್ತಷ್ಟು ಪರಿಸ್ಥಿತಿಯನ್ನು ಹದಗೆಡಿಸುತ್ತಿದ್ದು ಉದ್ಯಮಿಗಳು ಇಕ್ಕಟ್ಟಿಗೆ ಸಿಲುಕಿಕೊಂಡಿದ್ದಾರೆ. ಎಜುಕೇಷನ್ ಹಬ್, ಬೀಚ್ ಸಿಟಿ ಎಂದೆಲ್ಲ ಕರೆಯಲ್ಪಡುವ ಮಂಗಳೂರಲ್ಲಿ ಕಳೆದೆರಡು ದಿನಗಳಿಂದ ಹೊಸ ರೂಲ್ಸ್ ಒಂದು ಜಾರಿಗೆ ಬಂದಿದೆ. ಕೆಲದಿನಗಳ ಹಿಂದೆ ಎಡಿಜಿಪಿ ಅಲೋಕ್ ಕುಮಾರ್ ಅವರು ಮಂಗಳೂರಿಗೆ ಬಂದು ನಾಗರಿಕರನ್ನು ಭೇಟಿಯಾಗಿ ಹೋದ ಮರುಕ್ಷಣವೇ ಹೊಸ ರೂಲ್ಸ್ ಒಂದನ್ನು ಪೊಲೀಸ್ ಇಲಾಖೆ ಜಾರಿಗೆ ತಂದಿದ್ದು ಇದಕ್ಕೆ

ಮಂಗಳೂರು: ಪಬ್ ನಲ್ಲಿ ಮ್ಯೂಸಿಕ್ ಅವಕಾಶ ಇಲ್ಲ..!!| ಪೊಲೀಸರ ಹೊಸ ರೂಲ್ಸ್ ಗೆ ಗ್ರಾಹಕರ ಆಕ್ರೋಶ!!|ದಿನಕ್ಕೊಂದು ರೂಲ್ಸ್ ತಂದರೆ ಉದ್ಯಮಿಗಳ ಪಾಡೇನು? Read More »

ಪುತ್ತೂರು: ಭೀಕರ ರಸ್ತೆ ಅಪಘಾತ|ಗ್ರಾಮ ಪಂಚಾಯತ್ ಸದಸ್ಯ ಮೃತ್ಯು

ಸಮಗ್ರ ನ್ಯೂಸ್: ಪುತ್ತೂರಿನ ಸಂಟ್ಯಾರು ಸಮೀಪ ಭೀಕರ ರಸ್ತೆ ಅಪಘಾತ ಸಂಭವಿಸಿ ಗ್ರಾಮ ಪಂಚಾಯತ್ ಸದಸ್ಯ ಮೃತಪಟ್ಟ ಘಟನೆ ಫೆ.14 ರಂದು ರಾತ್ರಿ ನಡೆದಿದೆ. ಕಾರಲ್ಲಿದ್ದವರನ್ನು ಬೆಟ್ಟಂಪಾಡಿಯ ದಿಲೀಪ್ ಕುಮಾರ್ ರಾವ್ , ಶಶಿಕುಮಾರ್ , ನವನೀತ್ ಹಾಗೂ ನಿಡ್ಪಳ್ಳಿ ಗ್ರಾಮ ಪಂಚಾಯತ್ ಸದಸ್ಯ ಮುರಳಿಧರ್ ಭಟ್ ಎಂದು ಸ್ಥಳೀಯರು ಗುರುತಿಸಿದ್ದಾರೆ. KA21 P 5049 ನೋಂದಾಣಿಯ ಫಾರ್ಡ್ ಫೀಗೋ ಕಾರು ಬೆಟ್ಟಂಪಾಡಿ ಕಡೆ ಹೋಗುತ್ತಿದ್ದ ವೇಳೆ ಸಂಟ್ಯಾರು ಸಮೀಪದ ಬಳಕ್ಕ ಎಂಬಲ್ಲಿ ಅಪಘಾತ ಸಂಭವಿಸಿದ್ದು ,

ಪುತ್ತೂರು: ಭೀಕರ ರಸ್ತೆ ಅಪಘಾತ|ಗ್ರಾಮ ಪಂಚಾಯತ್ ಸದಸ್ಯ ಮೃತ್ಯು Read More »

ಸುನಿಲ್ ಕುಮಾರ್ ವಿರುದ್ದ ಸ್ಪರ್ಧೆಯಿಂದ ಹಿಂದೆ ಸರಿಯಲಾರೆ; ಬಿಜೆಪಿ ಸಚಿವ, ಶಾಸಕರೇ ನನಗೆ ಬೆಂಬಲ‌ ನೀಡಿದ್ದಾರೆ| ಸ್ಪೋಟಕ ಹೇಳಿಕೆ ನೀಡಿದ ಪ್ರಮೋದ್ ಮುತಾಲಿಕ್

ಸಮಗ್ರ ನ್ಯೂಸ್: ಕಾರ್ಕಳದಲ್ಲಿ ಸ್ಪರ್ಧಿಸಲು ಬಿಜೆಪಿ ಸಚಿವರು, ಶಾಸಕರು ತನುಮನ ಧನದ ಸಹಕಾರ ನೀಡುವ ಭರವಸೆ ನೀಡಿದ್ದಾರೆ ಎಂದು ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಸ್ಪೋಟಕ ಹೇಳಿಕೆ ನೀಡಿದ್ದಾರೆ, ‘ಸಚಿವ ಸುನಿಲ್‌ ಕುಮಾರ್‌ ತಮ್ಮನ್ನು ಮುಖ್ಯಮಂತ್ರಿ ಅಭ್ಯರ್ಥಿ ಎಂಬಂತೆ ಬಿಂಬಿಸಿಕೊಳ್ಳುತ್ತಿದ್ದಾರೆ. ಮುಖ್ಯಮಂತ್ರಿ ಹುದ್ದೆಯ ಸ್ಪರ್ಧೆಯಲ್ಲಿರುವವರೂ ಸೇರಿದಂತೆ ಬಿಜೆಪಿಯ ಕೆಲವು ಸಚಿವರು ಹಾಗೂ ಶಾಸಕರು ತನು-ಮನ-ಧನದ ಬೆಂಬಲ ನೀಡುವುದಾಗಿ ಭರವಸೆ ನೀಡಿದ್ದಾರೆ. ಹೀಗಾಗಿ ಕಾರ್ಕಳ ಕ್ಷೇತ್ರದಿಂದ ಸ್ಪರ್ಧಿಸುವುದು ಖಚಿತ’ ಎಂದು ಶ್ರೀರಾಮಸೇನೆಯ ಸಂಸ್ಥಾಪಕ ಪ್ರಮೋದ್‌ ಮುತಾಲಿಕ್ ಹೇಳಿದರು.

ಸುನಿಲ್ ಕುಮಾರ್ ವಿರುದ್ದ ಸ್ಪರ್ಧೆಯಿಂದ ಹಿಂದೆ ಸರಿಯಲಾರೆ; ಬಿಜೆಪಿ ಸಚಿವ, ಶಾಸಕರೇ ನನಗೆ ಬೆಂಬಲ‌ ನೀಡಿದ್ದಾರೆ| ಸ್ಪೋಟಕ ಹೇಳಿಕೆ ನೀಡಿದ ಪ್ರಮೋದ್ ಮುತಾಲಿಕ್ Read More »

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ| ಪರಪ್ಪನ ಅಗ್ರಹಾರದಿಂದ 14 ಆರೋಪಿಗಳು ಬೇರೆಡೆಗೆ ಶಿಪ್ಟ್

ಸಮಗ್ರ ನ್ಯೂಸ್ : ಬಿಜೆಪಿ ಕಾರ್ಯಕರ್ತ ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣದ ಓರ್ವ ಆರೋಪಿ ಹೊರತುಪಡಿಸಿ ಉಳಿದ 14 ಆರೋಪಿಗಳನ್ನು ಎನ್‌ಐಎ ಅಧಿಕಾರಿಗಳ ನಿರ್ದೇಶನ ಮೇರೆಗೆ ಪರಪ್ಪನ ಅಗ್ರಹಾರ ಜೈಲಿನಿಂದ ಬೇರೆ ಬೇರೆ ಸೆಂಟ್ರಲ್‌ ಜೈಲಿಗೆ ಶಿಫ್ಟ್‌ ಮಾಡಲಾಗಿದೆ. ಸುಳ್ಯ ತಾಲೂಕಿನ ಬೆಳ್ಳಾರೆ ಸಮೀಪದ ಪೆರುವಾಜೆ ಕ್ರಾಸ್ ಬಳಿ ಅಕ್ಷಯ್ ಹೆಸರಿನ ಕೋಳಿ ಮಾಂಸದ ಅಂಗಡಿ ಹೊಂದಿದ್ದ ಬಿಜೆಪಿ ಯುವ ಮೋರ್ಚಾ ಸದಸ್ಯ 31 ವರ್ಷದ ಪ್ರವೀಣ್ ಕುಮಾರ್ ನೆಟ್ಟಾರು ಅವರನ್ನು ಜುಲೈ 26 ರಂದು ರಾತ್ರಿ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ| ಪರಪ್ಪನ ಅಗ್ರಹಾರದಿಂದ 14 ಆರೋಪಿಗಳು ಬೇರೆಡೆಗೆ ಶಿಪ್ಟ್ Read More »

ಕಟೀಲು: ಬಾವಿಗೆ ಬಿದ್ದ ಚಿರತೆಯ ರಕ್ಷಿಸಿದ ಪಶು ವೈದ್ಯೆ

ಸಮಗ್ರ ನ್ಯೂಸ್: ಕಟೀಲು ಸಮೀಪದ ನಿಡ್ಡೋಡಿಯಲ್ಲಿ ಬಾವಿಯೊಳಗೆ ಬಿದ್ದಿದ್ದ ಸುಮಾರು ಒಂದು ವರ್ಷ ಪ್ರಾಯದ ಹೆಣ್ಣು ಚಿರತೆಯನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ತಜ್ಞ ವೈದ್ಯರು ಮತ್ತು ಸ್ಥಳೀಯರ ನೆರವಿನಲ್ಲಿ ಕಾರ್ಯಾಚರಣೆ ನಡೆಸಿ ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ. ಡಾ ಮೇಘನಾ ಪೆಮ್ಯಯ್ಯ, ಡಾ.ಯಶಸ್ವಿ ನಾರಾವಿ, ಡಾ ಪೃಥ್ವಿ ಮತ್ತು ಡಾ. ನಫೀಸಾ ನೇತೃತ್ವದ ಮಂಗಳೂರಿನ ಚಿಟ್ಟೆಪಿಲಿ ರಕ್ಷಣಾ ತಂಡವು ಅರಣ್ಯ ಅಧಿಕಾರಿಗಳು ಮತ್ತು ಸ್ಥಳೀಯರ ಸಹಾಯದಿಂದ ಚಿರತೆಯನ್ನು ರಕ್ಷಿಸಿ ಕಾಡಿಗೆ ಬಿಟ್ಟಿದ್ದಾರೆ. ತುಂಬಾ ಆಳವಾಗಿದ್ದ ಬಾವಿಯ ತಳಭಾಗದಲ್ಲಿ ಮಣ್ಣು ಜರಿದು

ಕಟೀಲು: ಬಾವಿಗೆ ಬಿದ್ದ ಚಿರತೆಯ ರಕ್ಷಿಸಿದ ಪಶು ವೈದ್ಯೆ Read More »

ಕಾರ್ಕಳದಿಂದ ಪ್ರಮೋದ್ ಮಾತಾಲಿಕ್ ಸ್ಪರ್ಧೆ |’ನಿಮ್ಮ ಬಗ್ಗೆ ಮೊದಲೇ ಅನುಮಾನವಿತ್ತು’ | ಸರಣಿ ಟ್ವೀಟ್ ಮಾಡಿದ ಸಚಿವ ಸುನಿಲ್ ಕುಮಾರ್

ಸಮಗ್ರ ನ್ಯೂಸ್: ವಿಧಾನಸಭಾ ಚುನಾವಣೆ 2023ಕ್ಕೆ ಕಾರ್ಕಳ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತೇನೆ ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಘೋಷಣೆ ಮಾಡಿದ್ದಾರೆ. ಸೋಮವಾರ ಕಾರ್ಕಳ ಶಾಸಕ, ಇಂಧನ ಸಚಿವ ವಿ. ಸುನಿಲ್ ಕುಮಾರ್ ಸರಣಿ ಟ್ವೀಟ್ ಮಾಡಿದ್ದಾರೆ. ‘ಪ್ರಿಯ ಮುತಾಲಿಕ್ ಜೀ, ನೀವು ಆಮಿಷಕ್ಕೆ ಒಳಗಾಗಿಯೇ ಕಾರ್ಕಳದಿಂದ ಚುನಾವಣೆಗೆ ಸ್ಪರ್ಧಿಸಲು ಬಯಸಿದ್ದೀರಿ ಎಂದು ನಮಗೆ ಮೊದಲೇ ಅನುಮಾನವಿತ್ತು. ಅದೀಗ ನಿಜವಾಗಿದೆ!’ ಎಂದು ಹೇಳಿದ್ದಾರೆ. ‘ಸ್ವಂತ ಬುದ್ಧಿಯಿಂದ ನೀವು ನನ್ನ ವಿರುದ್ಧ ಚುನಾವಣೆಗೆ ಸ್ಪರ್ಧಿಸುತ್ತಿಲ್ಲ ಎಂಬುದು

ಕಾರ್ಕಳದಿಂದ ಪ್ರಮೋದ್ ಮಾತಾಲಿಕ್ ಸ್ಪರ್ಧೆ |’ನಿಮ್ಮ ಬಗ್ಗೆ ಮೊದಲೇ ಅನುಮಾನವಿತ್ತು’ | ಸರಣಿ ಟ್ವೀಟ್ ಮಾಡಿದ ಸಚಿವ ಸುನಿಲ್ ಕುಮಾರ್ Read More »