ಕರಾವಳಿ

ಪುತ್ತೂರು ಶಾಸಕ ಸಂಜೀವ ಮಠಂದೂರಿಗೆ ಬಿಸಿತುಪ್ಪವಾದ “ಅಣಬೆ” ಹೇಳಿಕೆ| ಬಿಜೆಪಿ ಕಾರ್ಯಕರ್ತರಿಂದ ಶಾಸಕರಿಗೆ ನಡುರಸ್ತೆಯಲ್ಲೇ ತರಾಟೆ

ಸಮಗ್ರ ನ್ಯೂಸ್: ಪುತ್ತೂರು ಶಾಸಕ ಸಂಜೀವ ಮಠಂದೂರು ಅಣಬೆ ಹೇಳಿಕೆ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಗೃಹ ಸಚಿವ ಅಮಿತ್ ಷಾ ಕಾರ್ಯಕ್ರಮದ ಬಗ್ಗೆ ಆಮಂತ್ರಣ ಪತ್ರಿಕೆ ಹಂಚಲು ಪುತ್ತೂರಿನಲ್ಲಿ ಕಾಲ್ನಡಿಗೆ ಜಾಥಾ ನಡೆಸುತ್ತಿದ್ದಾಗ ಬಿಜೆಪಿ ಕಾರ್ಯಕರ್ತರೇ ಎರಡು ಗುಂಪುಗಳಾಗಿ ಮಾತಿನ ಚಕಮಕಿ ನಡೆಸಿದ್ದು ಕೈ ಕೈ ಮಿಲಾಯಿಸಲು ಮುಂದಾಗಿದ್ದಾರೆ. ಅಮಿತ್ ಷಾಗೆ ಸ್ವಾಗತ ಕೋರಿ ಹಿಂದು ಸಂಘಟನೆ ಮುಖಂಡ ಅರುಣ್ ಕುಮಾರ್ ಪುತ್ತಿಲ ಬ್ಯಾನರ್ ಅಳವಡಿಸಿದ್ದರು. ಚುನಾವಣೆ ಸಂದರ್ಭದಲ್ಲಿ ಪ್ರತ್ಯೇಕ ಬ್ಯಾನರ್ ಹಾಕಿದ್ದ ವಿಚಾರದಲ್ಲಿ ಮಾಧ್ಯಮದ ಪ್ರಶ್ನೆಗೆ

ಪುತ್ತೂರು ಶಾಸಕ ಸಂಜೀವ ಮಠಂದೂರಿಗೆ ಬಿಸಿತುಪ್ಪವಾದ “ಅಣಬೆ” ಹೇಳಿಕೆ| ಬಿಜೆಪಿ ಕಾರ್ಯಕರ್ತರಿಂದ ಶಾಸಕರಿಗೆ ನಡುರಸ್ತೆಯಲ್ಲೇ ತರಾಟೆ Read More »

“ಪಿಲಿ”ಗೆ ಕೋರ್ಟ್ ತಡೆ!!

ಸಮಗ್ರ ನ್ಯೂಸ್: ಫೆ.10 ರಂದು ಬಿಡುಗಡೆಯಾಗಲಿರುವ “ಪಿಲಿ”ತುಳು ಸಿನಿಮಾ ಥಿಯೇಟರ್ ಗಳಲ್ಲಿ ಪ್ರದರ್ಶಿಸದಂತೆ ನ್ಯಾಯಾಲಯ ತಡೆ ನೀಡಿದೆ. ಈ ಚಿತ್ರಕ್ಕೆ 40 ಲಕ್ಷ ರೂ.ಬಂಡವಾಳ ಹೂಡಿದ್ದ ನಿರ್ಮಾಪಕ ಮಂಜೀತ್ ನಾಗರಾಜ್ ಅವರ ಬದಲು ಪುತ್ತೂರಿನ ಭರತ್ ಭಂಡಾರಿ ಎಂಬಾತ ಬೇರೆ ನಿರ್ಮಾಪಕರ ಹೆಸರನ್ನು ಬಳಸಿಕೊಂಡು ಚಿತ್ರ ಬಿಡುಗಡೆಗೆ ಸಿದ್ಧತೆ ಮಾಡಿಕೊಂಡಿದ್ದು ಇದಕ್ಕೆ ತಡೆ ನೀಡುವಂತೆ ನಿರ್ಮಾಪಕ ಮಂಜೀತ್ ನಾಗರಾಜ್ ಅವರು ನ್ಯಾಯಾಲಯದ ಮೊರೆಹೋಗಿದ್ದರು. ಮನವಿ ಪುರಸ್ಕರಿಸಿದ ನ್ಯಾಯಾಲಯ ನಾಳೆ ಬಿಡುಗಡೆಗೊಳ್ಳಲಿರುವ “ಪಿಲಿ” ಚಿತ್ರದ ಪ್ರದರ್ಶನವನ್ನು ತಡೆ ಹಿಡಿದಿದೆ.

“ಪಿಲಿ”ಗೆ ಕೋರ್ಟ್ ತಡೆ!! Read More »

ಸುಳ್ಯ: ಸಾಹಿತಿ , ಜ್ಯೋತಿಷಿ ಭೀಮರಾವ್ ವಾಷ್ಠರ್ ರಿಗೆ ಸನ್ಮಾನಗಳ ಸರಮಾಲೆ

ಸಮಗ್ರ ನ್ಯೂಸ್: ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆದ ಕರ್ನಾಟಕ ರಾಜ್ಯ ಅಲೆಮಾರಿ ಮತ್ತು ಅರೆ ಅಲೆಮಾರಿ ಜನಾಂಗಗಳ ಒಕ್ಕೂಟ ಆಯೋಜಿಸಿದ್ದ ಸಾಹಿತ್ಯ ಜಾನಪದ ಸಂಗೀತ ಕಲೋತ್ಸವ ಸಮಾರಂಭದಲ್ಲಿ ಸುಳ್ಯದ ಸಾಹಿತಿ ಮತ್ತು ಖ್ಯಾತ ಜ್ಯೋತಿಷಿ ಹಾಗೂ ಗಾಯಕರಾದ ಎಚ್ .ಭೀಮರಾವ್ ವಾಷ್ಠರ್ ಅವರನ್ನು ಕರ್ನಾಟಕ ರಾಜ್ಯ ಅಲೆಮಾರಿ ಮತ್ತು ಅರೆ ಅಲೆಮಾರಿ ಜನಾಂಗಗಳ ಒಕ್ಕೂಟದ ಗೌರವಾಧ್ಯಕ್ಷ ಶ್ರೀ ರವೀಂದ್ರ ಶೆಟ್ಟಿ ರವರು ವಾಷ್ಠರ್ ರವರ ಅಪಾರ ಸಾಧನೆ ಪರಿಗಣಿಸಿ ಸನ್ಮಾನಿಸಿ ಗೌರವಿಸಿದರು. ಐವರ್ನಾಡಿನಲ್ಲಿ ನಡೆದ ಅಯ್ಯಪ್ಪ ಸ್ವಾಮೀ

ಸುಳ್ಯ: ಸಾಹಿತಿ , ಜ್ಯೋತಿಷಿ ಭೀಮರಾವ್ ವಾಷ್ಠರ್ ರಿಗೆ ಸನ್ಮಾನಗಳ ಸರಮಾಲೆ Read More »

ಸುಳ್ಯ: ಕಲ್ಯಾಣ ಮಂಟಪಕ್ಕೆ ಬಾರದ ವರ| ಕಾದು ಸುಸ್ತಾದ ವಧು; ಮದುವೆ ರದ್ದು

ಸಮಗ್ರ ನ್ಯೂಸ್: ಸುಳ್ಯದ ಪುರಭವನದಲ್ಲಿ ನಡೆಯಬೇಕಾಗಿದ್ದ ಮದುವೆಯೊಂದು ವರ ಬಾರದ ಕಾರಣ ರದ್ದುಗೊಂಡ ಘಟನೆ ವರದಿಯಾಗಿದ್ದು , ವರನ ಮೊದಲ ಪತ್ನಿ ಗಂಡನ ಮೇಲೆ ಬೆಳ್ಳಾರೆ ಪೋಲೀಸ್ ಠಾಣೆಯಲ್ಲಿ ದೂರು ನೀಡಿರುವ ಘಟನೆ ನಡೆದಿದೆ. ಸುಳ್ಯದ ಉಬರಡ್ಕ ಗ್ರಾಮದ ಯುವತಿಗೆ ಪುತ್ತೂರು ತಾಲೂಕು ಬೆಟ್ಟಂಪಾಡಿ ಗ್ರಾಮದ ಯುವಕನೊಂದಿಗೆ ಮದುವೆ ನಿಗದಿಯಾಗಿತ್ತು. ಫೆ.9ರಂದು ಕೆ.ವಿ.ಜಿ. ಪುರಭವನದಲ್ಲಿ ಮದುವೆ ನಡೆಯಬೇಕಾಗಿತ್ತು. ಮದುಮಗನ ಕಡೆಯ ಬಂದುಮಿತ್ರರು ಆಗಮಿಸಿದ್ದು ಟೌನ್‌ಹಾಲ್ ಅಲಂಕಾರವೂ ನಡೆದಿತ್ತು. ಫೆ.8ರಂದು ವಧುವಿನ ಮನೆಯಲ್ಲಿ ಡಿ.ಜೆ. ಅಳವಡಿಸಿ ಮದುವೆ ಸಂಭ್ರಮ

ಸುಳ್ಯ: ಕಲ್ಯಾಣ ಮಂಟಪಕ್ಕೆ ಬಾರದ ವರ| ಕಾದು ಸುಸ್ತಾದ ವಧು; ಮದುವೆ ರದ್ದು Read More »

ಪುತ್ತೂರು: ಕ್ಯಾಂಪ್ಕೋ ಸುವರ್ಣ ಮಹೋತ್ಸವಕ್ಕೆ ಕೇಂದ್ರ ಸಚಿವ ಅಮಿತ್ ಶಾ ಭೇಟಿ ಹಿನ್ನೆಲೆ| ಫೆ.11 ರಂದು ಕೆಎಸ್ಆರ್‌ ಟಿಸಿ ಸಂಚಾರದಲ್ಲಿ ವ್ಯತ್ಯಯ

ಸಮಗ್ರ ನ್ಯೂಸ್: ಪುತ್ತೂರಿನಲ್ಲಿ ಫೆ.11ರಂದು ಕ್ಯಾಂಪ್ಕೋ ಸಂಸ್ಥೆಯ ಸುವರ್ಣ ಮಹೋತ್ಸವದ ಸಂಭ್ರಮಾಚರಣೆಯ ಕಾರ್ಯಕ್ರಮಕ್ಕೆ ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಹಾಗೂ ಸಚಿವರುಗಳು ಭಾಗವಹಿಸಲಿದ್ದು, ಈ ಹಿನ್ನೆಲೆಯಲ್ಲಿ KSRTC ಸಂಚಾರದಲ್ಲಿ ವ್ಯತ್ಯಯವಾಗುವ ಸಾಧ್ಯತೆಯಿದೆ. ಕಾರ್ಯಕ್ರಮಕ್ಕೆ ಆಗಮಿಸುವ ಸಾರ್ವಜನಿಕರ ಅನುಕೂಲಕ್ಕಾಗಿ ಕೆಎಸ್‌ಆರ್‌ಟಿಸಿ ಪುತ್ತೂರು ವಿಭಾಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಬಸ್ಸುಗಳನ್ನು ನಿಯೋಜನೆ ಮಾಡಲು ಕಾರ್ಯಕ್ರಮದ ಸಂಯೋಜಕರಿಂದ ಬೇಡಿಕೆ ಬಂದಿದೆ. ಅದರಂತೆ ಪುತ್ತೂರು ವಿಭಾಗದಿಂದ ಸದರಿ ಕಾರ್ಯಕ್ರಮದ ಪ್ರಯುಕ್ತ ಗರಿಷ್ಠ ಸಂಖ್ಯೆಯಲ್ಲಿ ಬಸ್ಸುಗಳನ್ನು ನಿಯೋಜನೆ

ಪುತ್ತೂರು: ಕ್ಯಾಂಪ್ಕೋ ಸುವರ್ಣ ಮಹೋತ್ಸವಕ್ಕೆ ಕೇಂದ್ರ ಸಚಿವ ಅಮಿತ್ ಶಾ ಭೇಟಿ ಹಿನ್ನೆಲೆ| ಫೆ.11 ರಂದು ಕೆಎಸ್ಆರ್‌ ಟಿಸಿ ಸಂಚಾರದಲ್ಲಿ ವ್ಯತ್ಯಯ Read More »

ಹಿಂದೂ ಕಾರ್ಯಕರ್ತರು ಅಣಬೆಗಳಿದ್ದಂತೆ, ಹೆಚ್ಚು ಬಾಳಿಕೆ ಇಲ್ಲ!! ವಿವಾದಾತ್ಮಕ ಹೇಳಿಕೆ ನೀಡಿದ ಪುತ್ತೂರು ಶಾಸಕ ಸಂಜೀವ ಮಠಂದೂರು| ಶಾಸಕರ ಹೇಳಿಕೆ ವಿರುದ್ದ ಕಾರ್ಯಕರ್ತರು ಗರಂ

ಸಮಗ್ರ ನ್ಯೂಸ್: ನಾಡಿನ ಹಿಂದೂ ಕಾರ್ಯಕರ್ತರನ್ನು ಅಣಬೆಗೆ ಹೋಲಿಸುವ ಮೂಲಕ ಪುತ್ತೂರು ಶಾಸಕ ಸಂಜೀವ ಮಠಂದೂರು ಚುನಾವಣೆ ಹೊತ್ತಿನಲ್ಲಿ ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ. ಇನ್ನು ಶಾಸಕರ ವಿರುದ್ದ ಹಿಂದೂ ಸಂಘಟನೆಗಳು ಕಿಡಿಕಿಡಿಕಾರಿವೆ. ಶಾಸಕ ಸಂಜೀವ ಮಠಂದೂರು ಪುತ್ತೂರಿನಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಹಿಂದೂಗಳನ್ನು ‘ಅಣಬೆ’ ಗೆ ಹೋಲಿಸಿ ಮಾತನಾಡಿದ್ದಾರೆ. ಈಗ ‘ಅಣಬೆ’ ಹೇಳಿಕೆ ವಿರುದ್ದ ಸೋಶಿಯಲ್ ಮೀಡಿಯಾದಲ್ಲಿ ಆಕ್ರೋಶ ವ್ಯಕ್ತವಾಗುತ್ತಿದೆ. ಪುತ್ತೂರಿಗೆ ಅಮಿತ್ ಶಾ ಭೇಟಿಗೆ ಶುಭಕೋರಿ ನಗರದಲ್ಲಿ ಹಿಂದೂ ಮುಖಂಡ ಅರುಣ್ ಪುತ್ತಿಲ ಬೆಂಬಲಿಗರು ಕಟೌಟ್, ಬ್ಯಾನರ್

ಹಿಂದೂ ಕಾರ್ಯಕರ್ತರು ಅಣಬೆಗಳಿದ್ದಂತೆ, ಹೆಚ್ಚು ಬಾಳಿಕೆ ಇಲ್ಲ!! ವಿವಾದಾತ್ಮಕ ಹೇಳಿಕೆ ನೀಡಿದ ಪುತ್ತೂರು ಶಾಸಕ ಸಂಜೀವ ಮಠಂದೂರು| ಶಾಸಕರ ಹೇಳಿಕೆ ವಿರುದ್ದ ಕಾರ್ಯಕರ್ತರು ಗರಂ Read More »

ಗ್ಯಾಸ್ ಟ್ಯಾಂಕರ್ ರೈಲಿನಲ್ಲಿ ಅಡುಗೆ ಅನಿಲ ಸೋರಿಕೆ ಅನುಮಾನ| ಸುಬ್ರಹ್ಮಣ್ಯ ರೋಡ್ ರೈಲು ನಿಲ್ದಾಣದಲ್ಲಿ ಪರಿಶೀಲನೆ

ಸಮಗ್ರ ನ್ಯೂಸ್: ಅಡುಗೆ ಅನಿಲ ಸೋರಿಕೆಯಾಗಿದೆ ಎಂಬ ಗುಮಾನಿಯ ಮೇರೆಗೆ ಅಗ್ನಿಶಾಮಕ ದಳ ಹಾಗೂ ಗ್ಯಾಸ್ ಕಂಪೆನಿಯ ಸಿಬ್ಬಂದಿಗಳು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ ಘಟನೆ ನೆಟ್ಟಣದ ಸುಬ್ರಹ್ಮಣ್ಯ ರೋಡ್ ರೈಲ್ವೇ ನಿಲ್ದಾಣದಲ್ಲಿ ಫೆ.9ರ ಗುರುವಾರ ಬೆಳಿಗ್ಗೆ ನಡೆದಿದೆ. ಮಂಗಳೂರಿನಿಂದ ಆಗಮಿಸಿದ್ದ ಗ್ಯಾಸ್ ಟ್ಯಾಂಕರನ್ನು ಹೊತ್ತ ಗೂಡ್ಸ್ ರೈಲಿನಲ್ಲಿ ಅನಿಲ ಸೋರಿಕೆಯಾಗುತ್ತಿದೆ ಎಂಬ ಗುಮಾನಿ ವ್ಯಕ್ತವಾಗಿದೆ. ಇದಕ್ಕೆ ಪೂರಕವೆಂಬಂತೆ ಪರಿಸರದಲ್ಲಿ ಗ್ಯಾಸ್ ವಾಸನೆ ಬಂದಿತ್ತೆನ್ನಲಾಗಿದೆ‌. ತಕ್ಷಣವೇ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಲಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಪುತ್ತೂರಿನಿಂದ ಹಾಗೂ ಸುಳ್ಯದಿಂದ

ಗ್ಯಾಸ್ ಟ್ಯಾಂಕರ್ ರೈಲಿನಲ್ಲಿ ಅಡುಗೆ ಅನಿಲ ಸೋರಿಕೆ ಅನುಮಾನ| ಸುಬ್ರಹ್ಮಣ್ಯ ರೋಡ್ ರೈಲು ನಿಲ್ದಾಣದಲ್ಲಿ ಪರಿಶೀಲನೆ Read More »

ಸುರತ್ಕಲ್ ಹಲ್ಲೆ ಪ್ರಕರಣ; ಇತ್ತಂಡಗಳಿಂದ‌ ದೂರು ದಾಖಲು

ಸಮಗ್ರ‌ ನ್ಯೂಸ್: ಇತ್ತೀಚೆಗೆ ದುಷ್ಕರ್ಮಿಗಳಿಂದ ಹತ್ಯೆಗೀಡಾಗಿದ್ದ ಸುರತ್ಕಲ್‌ ಕಾಟಿಪಳ್ಳ ನಿವಾಸಿ ಫಾಝಿಲ್ ಸಹೋದರ ಆದಿಲ್ ಮೇಲೆ ವಾಹನಕ್ಕೆ ಸೈಡ್ ಕೊಡುವ ವಿಚಾರದಲ್ಲಿ ವಾಗ್ವಾದ ನಡೆದು ಇಬ್ಬರು ಯುವಕರು ಹಲ್ಲೆ ನಡೆಸಿರುವ ಘಟನೆ ಕಾಟಿಪಳ್ಳ ಬಳಿಯ ಗಣೇಶಪುರದಲ್ಲಿ ಫೆ.8ರ ರಾತ್ರಿ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಇತ್ತಂಡಗಳಿಂದ ದೂರು‌ ದಾಖಲಾಗಿದೆ. ವಾಹನಕ್ಕೆ ಸೈಡ್ ಕೊಡುವ ವಿಚಾರವಾಗಿ ಆದಿಲ್ ಮತ್ತು ನಾಗೇಶ್ ಎಂಬವರ ನಡುವೆ ವಾಗ್ವಾದ ನಡೆದಿತ್ತು. ಎರಡೂ ತಂಡಗಳ ನಡುವೆ ಮಾತಿನ ಚಕಮಕಿ ನಡೆದು ನಾಗೇಶ್ ಮತ್ತು ಆತನ ಜೊತೆಗಿದ್ದವರು

ಸುರತ್ಕಲ್ ಹಲ್ಲೆ ಪ್ರಕರಣ; ಇತ್ತಂಡಗಳಿಂದ‌ ದೂರು ದಾಖಲು Read More »

ಪುತ್ತೂರಿಗೆ ಅಮಿತ್ ಶಾ ಭೇಟಿ ಹಿನ್ನೆಲೆ ಅರಂತೋಡು- ಎಲಿಮಲೆ ರಸ್ತೆ ಕಾಮಗಾರಿ ಸ್ಥಗಿತ| ಅಪೂರ್ಣ ರಸ್ತೆಯಲ್ಲಿ ಸಾರ್ವಜನಿಕರ ಪರದಾಟ

ಸಮಗ್ರ ನ್ಯೂಸ್: ಪುತ್ತೂರಿಗೆ ಕೇಂದ್ರ ಸಚಿವ ಅಮಿತ್ ಶಾ ಭೇಟಿ ಹಿನ್ನೆಲೆಯಲ್ಲಿ ಅರಂತೋಡು ಎಲಿಮಲೆ ರಸ್ತೆ ಕಾಮಗಾರಿ ಸ್ಥಗಿತಗೊಳಿಸಿದ್ದು, ಸಾರ್ವಜನಿಕರು ಅಪೂರ್ಣ ರಸ್ತೆಯಲ್ಲಿ ಸಂಚರಿಸಲು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಕೆಲ ದಿನಗಳ ಹಿಂದೆ ಗುದ್ದಲಿ ಪೂಜೆ ನಡೆಸಿ ಕಾಮಗಾರಿ ಪ್ರಾರಂಭಿಸಿ ರಸ್ತೆಯುದ್ದಕ್ಕೂ ಜಲ್ಲಿ ಹಾಕಲಾಗಿತ್ತು. ಆದರೆ ಇದೀಗ ಪುತ್ತೂರಿಗೆ ಕಾರ್ಯಕ್ರಮದ ಹಿನ್ನಲೆ ಕೇಂದ್ರ ಮಂತ್ರಿ ಅಮಿತ್ ಶಾ ಬರುವ ಕಾರಣ ಪುತ್ತೂರಿನ ಕೆಲ ರಸ್ತೆಗಳನ್ನು ಸರಿಪಡಿಸಲು ಕಾಂಟ್ರಾಕ್ಟರ್ ಅರಂತೋಡು ಎಲಿಮಲೆ ರಸ್ತೆ ಕಾಮಗಾರಿಯನ್ನು ಅರ್ಧಕ್ಕೆ ನಿಲ್ಲಿಸಿ ಹೋಗಿದ್ದಾರೆ

ಪುತ್ತೂರಿಗೆ ಅಮಿತ್ ಶಾ ಭೇಟಿ ಹಿನ್ನೆಲೆ ಅರಂತೋಡು- ಎಲಿಮಲೆ ರಸ್ತೆ ಕಾಮಗಾರಿ ಸ್ಥಗಿತ| ಅಪೂರ್ಣ ರಸ್ತೆಯಲ್ಲಿ ಸಾರ್ವಜನಿಕರ ಪರದಾಟ Read More »

ಸುರತ್ಕಲ್: ಹತ್ಯೆಗೀಡಾದ ಫಾಝಿಲ್ ಸಹೋದರನ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ

ಸಮಗ್ರ ನ್ಯೂಸ್: ಇತ್ತೀಚೆಗೆ ದುಷ್ಕರ್ಮಿಗಳಿಂದ ಹತ್ಯೆಗೀಡಾಗಿದ್ದ ಫಾಝಿಲ್ ಅವರ ಸಹೋದರನ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿದ ಘಟನೆ ಕಾಟಿಪಳ್ಳದ ಗಣೇಶ್’ಪುರ ಎಂಬಲ್ಲಿ ನಡೆದಿದೆ. ಫಾಝಿಲ್ ಸಹೋದರ ಆದಿಲ್ ಎಂಬವರಿಗೆ ಮೂವರು ದುಷ್ಕರ್ಮಿಗಳು ಹಲ್ಲೆ ನಡೆಸಿದ್ದಾರೆ. ಈ ವೇಳೆ ಸಾರ್ವಜನಿಕರು ಆರೋಪಿಗಳನ್ನುಹಿಡಿದು ಪೊಲೀಸರಿಗೆ ಒಪ್ಪಿಸಿದ್ದು, ಇಬ್ಬರನ್ನು ಪೊಲೀಸರು ವಶಕ್ಕೆಪಡೆದಿದ್ದಾರೆ. ಮತ್ತೋರ್ವ ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ. ಸ್ಥಳಕ್ಕೆ ಆಗಮಿಸಿದ ಸುರತ್ಕಲ್ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಸುರತ್ಕಲ್: ಹತ್ಯೆಗೀಡಾದ ಫಾಝಿಲ್ ಸಹೋದರನ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ Read More »