ಕರಾವಳಿ

ಧರ್ಮಸ್ಥಳ: ಲಾಡ್ಜ್ ಗೆ ಬಂದ ಅನ್ಯಕೋಮಿನ ಜೋಡಿ ಪೊಲೀಸ್ ವಶಕ್ಕೆ

ಸಮಗ್ರ ನ್ಯೂಸ್: ಲಾಡ್ಜ್ ಗೆ ಬಂದ ಅನ್ಯಕೋಮಿನ ಜೋಡಿಯನ್ನು ಹಿಂದೂ ಕಾರ್ಯಕರ್ತರು ಹಿಡಿದು ಧರ್ಮಸ್ಥಳ ಪೊಲೀಸರ ವಶಕ್ಕೆ ನೀಡಿದ ಘಟನೆ ಧರ್ಮಸ್ಥಳದಲ್ಲಿ ಜ.25ರಂದು ಬೆಳಗ್ಗೆ ನಡೆದಿದೆ. ಧರ್ಮಸ್ಥಳ ಗ್ರಾಮದ ಕನ್ಯಾಡಿಯಲ್ಲಿ ಖಾಸಗಿ ಲಾಡ್ಜ್ ಗಳಲ್ಲಿ ಐಡಿ ಕಾರ್ಡ್ ನೀಡಿ ರೂಂ ಪಡೆಯಲು ಯತ್ನಿಸುತ್ತಿದ್ದು ಆದ್ರೆ ಯಾವ ಲಾಡ್ಜ್ ಮಾಲೀಕರು ಕೂಡ ಅನ್ಯಕೋಮಿನ ಜೋಡಿ ಅಗಿದ್ದರಿಂದ ರೂಂ ನೀಡದೆ ವಾಪಸ್ ಕಳುಹಿಸಿದ್ದರು. ಈ ಬಗ್ಗೆ ಮಾಹಿತಿ ತಿಳಿದ ಹಿಂದೂ ಸಂಘಟನೆ ಕಾರ್ಯಕರ್ತರು ಜ.25 ರಂದು ಬೆಳಗ್ಗೆ ಇಬ್ಬರನ್ನು ಹಿಡಿದು

ಧರ್ಮಸ್ಥಳ: ಲಾಡ್ಜ್ ಗೆ ಬಂದ ಅನ್ಯಕೋಮಿನ ಜೋಡಿ ಪೊಲೀಸ್ ವಶಕ್ಕೆ Read More »

ರಾಜ್ಯದ ಹಲವೆಡೆ ಬಿರುಸಿನ ಮಳೆ| ಕೃಷಿ ಹಾನಿ; ಕಾಫಿ, ಅಡಿಕೆ ನಷ್ಟ| ಫೆ.2ರವರೆಗೂ ಮಳೆ ಸಾಧ್ಯತೆ

ಸಮಗ್ರ ನ್ಯೂಸ್: ಕೊಡಗು, ಚಿಕ್ಕಮಗಳೂರು, ಚಾಮರಾಜನಗರ, ಮೈಸೂರು, ಮಂಡ್ಯ, ದ.ಕ ಜಿಲ್ಲೆಯ ವಿವಿಧೆಡೆ ಮಂಗಳವಾರ ಬಿರುಸಿನ ಮಳೆಯಾಗಿದೆ. ಮಡಿಕೇರಿ ನಗರವೂ ಸೇರಿದಂತೆ ಕೊಡಗು ಜಿಲ್ಲೆಯ ಭಾಗಮಂಡಲ, ಸಂಪಾಜೆ ಸಮೀಪದ ಚೆಂಬು, ವಿರಾಜಪೇಟೆ ತಾಲ್ಲೂಕಿನ ಸಿದ್ದಾಪುರ, ಅಮ್ಮತ್ತಿ, ಸೋಮವಾರಪೇಟೆ ಭಾಗದಲ್ಲಿ ಮಳೆ ಸುರಿದಿದೆ. ಒಣಗಿಸಲು ಕಣದಲ್ಲಿ ಹಾಕಿದ್ದ ಕಾಫಿ ಹಾಗೂ ಕೊಯ್ಲು ಮಾಡಿದ್ದ ಕಾಫಿ ಮಳೆಯಿಂದ ಹಾಳಾಗಿದೆ. ಭಾಗಮಂಡಲದ ಕೆಲವೆಡೆ ಇನ್ನೂ ಭತ್ತದ ಕೊಯ್ಲು ಆಗಿಲ್ಲ. ಮಳೆಯಿಂದ ಬೆಳೆಗಾರರು ಕಂಗಾಲಾಗಿದ್ದಾರೆ. ದ.ಕ ಜಿಲ್ಲೆಯ ಸುಳ್ಯ ತಾಲೂಕಿನ ಹಲವೆಡೆ ಚದುರಿದಂತೆ

ರಾಜ್ಯದ ಹಲವೆಡೆ ಬಿರುಸಿನ ಮಳೆ| ಕೃಷಿ ಹಾನಿ; ಕಾಫಿ, ಅಡಿಕೆ ನಷ್ಟ| ಫೆ.2ರವರೆಗೂ ಮಳೆ ಸಾಧ್ಯತೆ Read More »

ಉಪ್ಪಿನಂಗಡಿ: ಆಡಳಿತ ಪಕ್ಷದಿಂದ ಗ್ರಾ.ಪಂ ಸಾಮಾನ್ಯ ಸಭೆ ಬಹಿಷ್ಕಾರ| ಅಸಾಂವಿಧಾನಿಕ ನಡೆ ಎಂದು SDPI ಆಕ್ರೋಶ

ಸಮಗ್ರ ನ್ಯೂಸ್: ಪುತ್ತೂರು ತಾಲೂಕಿನ ಉಪ್ಪಿನಂಗಡಿ ಗ್ರಾಮ ಪಂಚಾಯತ್ ನಲ್ಲಿ ನಡೆದ ಸಾಮಾನ್ಯ ಸಭೆಯನ್ನು ಸ್ವತಃ ಆಡಳಿತ ಪಕ್ಷದ ಅಧ್ಯಕ್ಷರು ಮತ್ತು ಸದಸ್ಯರು ತಮ್ಮ ಸ್ವಾರ್ಥಕ್ಕಾಗಿ ಅಧಿಕಾರಿಗಳ ಮೇಲಿನ ದ್ವೇಷ ಸಾಧನೆಗಾಗಿ ಬಹಿಷ್ಕರಿಸಿದ್ದು ಅಸಂವಿಧಾನಿಕ ನಡೆಯಾಗಿದೆ. ಈ ಸಂಬಂಧ ತಕ್ಷಣ ಗ್ರಾಮಸ್ಥರೊಂದಿಗೆ ಕ್ಷಮೆ ಕೇಳಿ ಮತ್ತೆ ಸಭೆ ನಡೆಸಬೇಕು ತಪ್ಪಿದಲ್ಲಿ ಉನ್ನತ ಅಧಿಕಾರಿಗಳು ಪಂಚಾಯತ್ ಆಡಳಿತ ಸಮಿತಿಯನ್ನು ವಿಸರ್ಜಿಸುವಂತೆ ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಉಪ್ಪಿನಂಗಡಿ ಬ್ಲಾಕ್ ಸಮಿತಿಯು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದೆ. ಜನ ಸಾಮಾನ್ಯರು

ಉಪ್ಪಿನಂಗಡಿ: ಆಡಳಿತ ಪಕ್ಷದಿಂದ ಗ್ರಾ.ಪಂ ಸಾಮಾನ್ಯ ಸಭೆ ಬಹಿಷ್ಕಾರ| ಅಸಾಂವಿಧಾನಿಕ ನಡೆ ಎಂದು SDPI ಆಕ್ರೋಶ Read More »

ಎರಡು ದಿನ‌ ಕರ್ನಾಟಕದಲ್ಲಿ ಸಾಧಾರಣ ಮಳೆ‌ ಸಾಧ್ಯತೆ |ಹವಾಮಾನ ಇಲಾಖೆ ಮಾಹಿತಿ

ಸಮಗ್ರ ನ್ಯೂಸ್: ಮುಂದಿನ ದಿನ 48 ಗಂಟೆಗಳಲ್ಲಿ ದಕ್ಷಿಣ ಒಳನಾಡಿನ ಹಲವೆಡೆ ಹಗುರದಿಂದ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆಯಲಿದೆ. ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆಯಲಿದೆ. ಕನಿಷ್ಠ ಉಷ್ಣಾಂಶವು ಒಳನಾಡಿನ ಒಂದೆರಡು ಕಡೆಗಳಲ್ಲಿ ಸಾಮಾನ್ಯಕ್ಕಿಂತ 4 ರಿಂದ 5 ಡಿಗ್ರಿ ಸೆಲ್ಸಿಯಸ್​ನಷ್ಟು ಕಡಿಮೆಯಾಗುವ ಸಾಧ್ಯತೆ ಇದೆ. ಮುಂದಿನ 24 ಗಂಟೆಗಳಲ್ಲಿ ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದೆ, ಕೆಲವು ಕಡೆಗಳಲ್ಲಿ ಬೆಳಗಿನ ಜಾವ ಮಂಜು ಮುಸುಕುವ

ಎರಡು ದಿನ‌ ಕರ್ನಾಟಕದಲ್ಲಿ ಸಾಧಾರಣ ಮಳೆ‌ ಸಾಧ್ಯತೆ |ಹವಾಮಾನ ಇಲಾಖೆ ಮಾಹಿತಿ Read More »

ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಎಎಪಿ ಚುನಾವಣೆಗೆ ಸಿದ್ದತೆ| ಹಲವರು ಪಕ್ಷಕ್ಕೆ ಸೇರ್ಪಡೆ

ಸಮಗ್ರ ನ್ಯೂಸ್: ಆಮ್ ಆದ್ಮಿ ಪಾರ್ಟಿ ಸುಳ್ಯ ವಿಧಾನಸಭಾ ಕ್ಷೇತ್ರದ ಚುನಾವಣಾ ಸಿದ್ದತಾ ಸಭೆಯು ದೇವಮ್ಮ ಕಾನತ್ತಿಲ ಕಾಂಪ್ಲೆಕ್ಸ್ ಸಭಾಂಗಣದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಗುರುಪ್ರಸಾದ್ ನೇತೃತ್ವದಲ್ಲಿ ಸುರೇಶ್ ಮುಂಡಕಜೆ, ಕಿರಣ್, ರಮೇಶ್, ರಂಜಿತ್ ಅಲ್ಲದೇ ಜಯರಾಜ್ ಕೇರ್ಪಳ ಅವರು ಅಧಿಕೃತವಾಗಿ ಪಕ್ಷ ಸೇರ್ಪಡೆಯಾದರು. ರಾಷ್ಟ್ರೀಯ ಸಮಿತಿ ಸದಸ್ಯ ಅಶೋಕ ಎಡಮಲೆ, ಜಿಲ್ಲಾ ನಾಯಕ ರಶೀದ್ ಜಟ್ಟಿಪಳ್ಳ, ವಿಧಾನಸಭಾ ಕ್ಷೇತ್ರ ಅಭ್ಯರ್ಥಿ ಆಕಾಂಕ್ಷಿ ಸುಮನಾ ಬೆಳ್ಳಾರ್ಕರ್, ನಾಯಕರಾದ ರಾಮಕೃಷ್ಣ ಬೀರಮಂಗಲ ಕಲಂದರ್ ಎಲಿಮಲೆ, ನಳಿನ್ ಕುಮಾರ್ ರೈ,

ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಎಎಪಿ ಚುನಾವಣೆಗೆ ಸಿದ್ದತೆ| ಹಲವರು ಪಕ್ಷಕ್ಕೆ ಸೇರ್ಪಡೆ Read More »

ಸುಳ್ಯ: ನಾಪತ್ತೆಯಾಗಿದ್ದ ಮಹಿಳೆ ಪತ್ತೆ

ಸಮಗ್ರ ನ್ಯೂಸ್: ಜ.21 ರಂದು ಮರ್ಕಂಜದಿಂದ ಔಷಧಿಗೆಂದು ತೆರಳಿದ ವಿವಾಹಿತ ಮಹಿಳೆ ನಾಪತ್ತೆ ಯಾಗಿದ್ದು ಇದೀಗ ಇದೀಗ ಜ.22 ಪತ್ತೆಯಾದ ಬಗ್ಗೆ ವರದಿ ಯಾಗಿದೆ. ಕೀರ್ತಿಶ್ರೀ ಎಂಬಾಕೆ ಗಂಡನ ಮನೆಗೂ, ತಾಯಿ ಮನೆಗೂ ಹೋಗದೇ ನಾಪತ್ತೆಯಾಗಿದ್ದಾರೆ ಎಂದು ಪತಿ ರಾಜಶೇಖರ ಪೋಲೀಸರಿಗೆ ದೂರು ನೀಡಿದ್ದರು. ಆದರೆ ಜ.22 ರಂದು ಸಂಜೆ ಮಡಿಕೇರಿಯಲ್ಲಿ ಪತ್ತೆಯಾದ ಅವಳನ್ನು ಸುಳ್ಯ ಪೊಲೀಸ್ ಠಾಣೆಗೆ ಹಾಜರು ಪಡಿಸಿ ಬಳಿಕ ತಾಯಿ ಮನೆಗೆ ಕಳುಹಿಸಲಾಗಿದೆ ಎಂದು ತಿಳಿದುಬಂದಿದೆ.

ಸುಳ್ಯ: ನಾಪತ್ತೆಯಾಗಿದ್ದ ಮಹಿಳೆ ಪತ್ತೆ Read More »

ಕಡಬ: ಕುಮಾರಧಾರಾ ನದಿಯಲ್ಲಿ ತೆಪ್ಪ ಮಗುಚಿ ಮಹಿಳೆ‌ ಸಾವು

ಸಮಗ್ರ ನ್ಯೂಸ್: ಕುಮಾರಧಾರ ನದಿಯಲ್ಲಿ ತೆಪ್ಪ ಮಗುಚಿ ಮಹಿಳೆಯೋರ್ವರು ಮೃತಪಟ್ಟ ಘಟನೆ ‌‌ಕಡಬ ತಾಲೂಕಿನ ಕೊಯಿಲ‌ ಎಂಬಲ್ಲಿ ನಡೆದಿದೆ. ಇಲ್ಲಿನ ಏಣಿತ್ತಡ್ಕ ನಿವಾಸಿ ಬಾಳಪ್ಪ ನಾಯ್ಕ ಎಂಬುವವರ ಪತ್ನಿ ಗೀತಾ(46) ಮೃತ ಮಹಿಳೆ. ಇವರು ಕುಮಾರಧಾರ ಹೊಳೆಯ ಇನ್ನೊಂದು ಮಗ್ಗುಲಲ್ಲಿರುವ ಅರೆಲ್ತಡ್ಕ ಎಂಬಲ್ಲಿಂದ ಹುಲ್ಲು ಸಂಗ್ರಹಿಸಿ ಪ್ಲಾಸ್ಟಿಕ್ ಗೋಣಿ ಚೀಲದಲ್ಲಿ ತುಂಬಿಸಿಕೊಂಡು ಹೊಳೆಯನ್ನು ತೆಪ್ಪದ ಮುಖಾಂತರ ದಾಟುತ್ತಾ ನದಿಯ ಮದ್ಯ ಭಾಗಕ್ಕೆ ಬಂದಾಗ ಜೊರಾದ ಗಾಳಿ ಬೀಸಿದ್ದು ಈ ವೇಳೆ ತೆಪ್ಪ ಮಗುಚಿ ಬಿದ್ದಿದೆ. ತೆಪ್ಪದಲ್ಲಿದ್ದ ಇನ್ನಿಬ್ಬರು

ಕಡಬ: ಕುಮಾರಧಾರಾ ನದಿಯಲ್ಲಿ ತೆಪ್ಪ ಮಗುಚಿ ಮಹಿಳೆ‌ ಸಾವು Read More »

ಸುಳ್ಯ: ಔಷಧಿಗೆಂದು ಆಸ್ಪತ್ರೆಗೆ ಹೋದ ಮಹಿಳೆ ನಾಪತ್ತೆ

ಸಮಗ್ರ ನ್ಯೂಸ್: ಔಷಧಿ ತರಲು ಆಸ್ಪತ್ರೆಗೆ ಹೋದವರು ಮರಳಿ ಮನೆಗೆ ಬಾರದೆ ಕಾಣೆಯಾಗಿರು ಬಗ್ಗೆ ಸುಳ್ಯ ತಾಲೂಕು ಮರ್ಕಂಜ ಗ್ರಾಮದಿಂದ ವರದಿಯಾಗಿದೆ. ಮರ್ಕಂಜದ ರಾಜಶೇಖರ ಎಂಬವರ ಪತ್ನಿ ನವ ವಿವಾಹಿತೆ ಕೀರ್ತಿಶ್ರೀ (26) ನಾಪತ್ತೆಯಾದವರು. ಇವರು ಜ.21ರಂದು ಎಲಿಮಲೆಯಲ್ಲಿರುವ ಆಸ್ಪತ್ರೆ ಔಷಧಿಗೆ ಹೋದವರು ಮರಳಿ ಮನೆಗೆ ಬಾರದೆ ಕಾಣೆಯಾಗಿದ್ದಾರೆ. ಆರೋಗ್ಯ ಸರಿ ಇಲ್ಲವೆಂದು ನನ್ನ ಪತ್ನಿ ನನ್ನ ಬಳಿ ಹೇಳಿದ್ದು ನಾನು ಆಕೆಯನ್ನು ಆಸ್ಪತ್ರೆಗೆ ಹೋಗಲೆಂದು ನನ್ನ ಮನೆಯಿಂದ ನನ್ನ ಜೀಪಿನಲ್ಲಿ ಬೆಳಿಗ್ಗೆ 10 ಗಂಟೆಗೆಕರೆದುಕೊಂಡು ಹೋಗಿದ್ದು

ಸುಳ್ಯ: ಔಷಧಿಗೆಂದು ಆಸ್ಪತ್ರೆಗೆ ಹೋದ ಮಹಿಳೆ ನಾಪತ್ತೆ Read More »

ಮಂಗಳೂರು: ರೈಲು ಹಳಿ ಮೇಲೆ ಅಪರಿಚಿತ ಯುವಕನ ಶವ ಪತ್ತ

ಸಮಗ್ರ ನ್ಯೂಸ್ : ಅಪರಿಚಿತ ಯುವಕನೊಬ್ಬನ ಮೃತದೇಹವು ಕುಳಾಯಿಗುಡ್ಡೆ ರೈಲ್ವೆ ಸೇತುವೆಯಿಂದ ಸುರತ್ಕಲ್ ಕಡೆಗೆ 200 ಮೀಟರ್ ದೂರದಲ್ಲಿರುವ ರೈಲ್ ಹಳಿಗಳ ಮೇಲೆ ಪತ್ತೆಯಾಗಿದೆ. ವ್ಯಕ್ತಿಯ ವಯಸ್ಸು ಸುಮಾರು 30 ವರ್ಷ ಎಂದು ಅಂದಾಜಿಸಲಾಗಿದ್ದು, ಈತ ರೈಲಿಗೆ ಸಿಲುಕಿ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಮೃತ ವ್ಯಕ್ತಿಯು ಕಪ್ಪು ನೈಟ್ ಪ್ಯಾಂಟ್, ಹಳದಿ ಬಣ್ಣದ ಪೂರ್ಣ ತೋಳಿನ ಶರ್ಟ್ ಮತ್ತು ಕಪ್ಪು ಜರ್ಕಿನ್ ಧರಿಸಿರುತ್ತಾರೆ. ಮೃತ ವ್ಯಕ್ತಿಯ ಸಂಬಂಧಿಕರು ಸುರತ್ಕಲ್ ಪೊಲೀಸ್ ಠಾಣೆಯನ್ನು 0824-2220540 ಗೆ ಸಂಪರ್ಕಿಸಲು ಕೋರಲಾಗಿದೆ.

ಮಂಗಳೂರು: ರೈಲು ಹಳಿ ಮೇಲೆ ಅಪರಿಚಿತ ಯುವಕನ ಶವ ಪತ್ತ Read More »

ಸುಳ್ಯ:ಜಿಲ್ಲಾ ಯುವಜನ ಮೇಳ ಮೆರವಣಿಗೆಯಲ್ಲಿ ಸ್ಪಂದನ ಗೆಳೆಯರ ಬಳಗಕ್ಕೆ ಪ್ರಥಮ ಸ್ಥಾನ

ಸಮಗ್ರ ನ್ಯೂಸ್: ಸುಳ್ಯದಲ್ಲಿ ನಡೆದ ದ. ಕ. ಜಿಲ್ಲಾ ಯುವಜನ ಮೇಳ ಮೆರವಣಿಗೆಯಲ್ಲಿ ಸ್ಪಂದನ ಗೆಳೆಯರ ಬಳಗಕ್ಕೆ ಪ್ರಥಮ ಸ್ಥಾನ ಲಭಿಸಿದೆ. ಜ.21ರ ಶನಿವಾರ ದಂದು ಸುಳ್ಯದಲ್ಲಿ ನಡೆದ ದ. ಕ. ಜಿಲ್ಲಾ ಮಟ್ಟದ ಯುವಜನ ಮೇಳ 2022-23ರ ವರ್ಣರಂಜಿತ ಮೆರವಣಿಗೆಯಲ್ಲಿ ವಿಶೇಷ ಆಕರ್ಷಣೆಯೊಂದಿಗೆ ಭಾಗವಹಿಸಿ ಪ್ರಥಮ ಸ್ಥಾನವನ್ನು ಸ್ಪಂದನ ಗೆಳೆಯರ ಬಳಗ ಅಡ್ತಲೆ ಪಡೆದುಕೊಂಡಿತು. ಈ ವೇಳೆ ಸ್ಪಂದನ ಗೆಳೆಯರ ಬಳಗದ ಸದಸ್ಯರು ಭಾಗವಹಿಸಿದ್ದರು.

ಸುಳ್ಯ:ಜಿಲ್ಲಾ ಯುವಜನ ಮೇಳ ಮೆರವಣಿಗೆಯಲ್ಲಿ ಸ್ಪಂದನ ಗೆಳೆಯರ ಬಳಗಕ್ಕೆ ಪ್ರಥಮ ಸ್ಥಾನ Read More »