ಕರಾವಳಿ

ರೈಲು‌‌ ಹಳಿಗಳ ಮೇಲೆ ಗುಡ್ಡ ಕುಸಿತದ ಮಣ್ಣು ತೆರವು| ಮಂಗಳೂರು – ಸಕಲೇಶಪುರ ರೈಲು ಸಂಚಾರ ಪುನರಾರಂಭ

ಸಮಗ್ರ ನ್ಯೂಸ್: ಸಕಲೇಶಪುರ ಟು ಬಾಳ್ಳುಪೇಟೆ ಮಾರ್ಗಮಧ್ಯದ ರೈಲು ಹಳಿಗಳ ಮೇಲೆ ಭೂ ಕುಸಿತ ಉಂಟಾಗಿ ಸಂಚಾರಕ್ಕೆ ಅಡ್ಡಿಯಾಗಿತ್ತು. ಭೂ ಕುಸಿತದ ಮಣ್ಣನ್ನು ತೆರವುಗೊಳಿಸಲಾಗಿದ್ದು, ಸಂಚಾರ ಸುರಕ್ಷತೆಯ ಪರೀಕ್ಷೆಯನ್ನು ನಡೆಸಲಾಗಿದೆ. ಹೀಗಾಗಿ ನಾಳೆ(ಆ.14)ರಿಂದ ಈ ಮಾರ್ಗದಲ್ಲಿ ರೈಲುಗಳ ಸಂಚಾರ ಪುನರಾರಂಭಗೊಳಿಸಲಾಗುತ್ತಿದೆ. ಈ ಕುರಿತಂತೆ ನೈರುತ್ಯ ರೈಲ್ವೆಯ ಮೈಸೂರು ವಿಭಾಗವು ಮಾಹಿತಿ ನೀಡಿದ್ದು, ಸಕಲೇಶಪುರ-ಬಳ್ಳುಪೇಟೆ ನಿಲ್ದಾಣಗಳ ನಡುವೆ ಭೂಕುಸಿತಕ್ಕೆ ಸಂಬಂಧಿಸಿದಂತೆ, ಹಳಿಯನ್ನು ಪುನಃಸ್ಥಾಪಿಸಲಾಗಿದೆ ಮತ್ತು ರೈಲು ಕಾರ್ಯಾಚರಣೆಗೆ ಯೋಗ್ಯವಾಗಿದೆ ಎಂದು ಪ್ರಮಾಣೀಕರಿಸಲಾಗಿದೆ ಎಂದು ತಿಳಿಸಿದೆ. ದಿನಾಂಕ 11.08.2024ರ ನೈರುತ್ಯ […]

ರೈಲು‌‌ ಹಳಿಗಳ ಮೇಲೆ ಗುಡ್ಡ ಕುಸಿತದ ಮಣ್ಣು ತೆರವು| ಮಂಗಳೂರು – ಸಕಲೇಶಪುರ ರೈಲು ಸಂಚಾರ ಪುನರಾರಂಭ Read More »

ಸುಬ್ರಹ್ಮಣ್ಯ: ಕೆಎಸ್ಎಸ್ ಕಾಲೇಜಿನ ಉಪನ್ಯಾಸಕ ವಿನ್ಯಾಸ್ ಹೊಸೋಳಿಕೆ ಅವರಿಗೆ ಮಂಗಳೂರು ವಿ.ವಿ ಯಿಂದ ಪಿ ಎಚ್ ಡಿ ಪದವಿ

ಸಮಗ್ರ ನ್ಯೂಸ್: ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಪದವಿ ಕಾಲೇಜಿನ ವಾಣಿಜ್ಯಶಾಸ್ತ್ರ ಮತ್ತು ಉದ್ಯಮ ಆಡಳಿತ ವಿಭಾಗದ ಉಪನ್ಯಾಸಕ ವಿನ್ಯಾಸ್ ಹೊಸೋಳಿಕೆ ಅವರು ಮಂಡಿಸಿದ “ಮಾರ್ಕೆಟಿಂಗ್ ಸ್ಟ್ರಾಟಜಿಸ್ ಆಫ್ ಸೋಷಿಯಲ್ ಎಂಟರ್ಪ್ರೈಸಸ್ – ಎ ಸ್ಟಡಿ ವಿಥ್ ಸೆಲೆಕ್ಟ್ ಸೋಶಿಯಲ್ ಎಂಟರ್ಪ್ರೈಸಸ್” ಎಂಬ ಪ್ರಬಂಧಕ್ಕೆ ಮಂಗಳೂರು ವಿಶ್ವವಿದ್ಯಾನಿಲಯ ಡಾಕ್ಟರೇಟ್ ಪದವಿಯನ್ನು ನೀಡಿದೆ. ಅವರು ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನ ನಿವೃತ್ತ ವಾಣಿಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರು ಮತ್ತು ಪ್ರಾಂಶುಪಾಲರು ಆದ ಪ್ರೋ. ಡಾ. ಉದಯ್ ಕುಮಾರ್ ಇರ್ವತ್ತೂರು ಇವರ ಮಾರ್ಗದರ್ಶನದಲ್ಲಿ ಮಂಡಿಸಿದ

ಸುಬ್ರಹ್ಮಣ್ಯ: ಕೆಎಸ್ಎಸ್ ಕಾಲೇಜಿನ ಉಪನ್ಯಾಸಕ ವಿನ್ಯಾಸ್ ಹೊಸೋಳಿಕೆ ಅವರಿಗೆ ಮಂಗಳೂರು ವಿ.ವಿ ಯಿಂದ ಪಿ ಎಚ್ ಡಿ ಪದವಿ Read More »

ಸುಬ್ರಹ್ಮಣ್ಯ: ಪರಿಸರ ರಕ್ಷಣೆಗಾಗಿ‌ ಯುವಕರ ಮಾದರಿ‌ ಕಾರ್ಯ| ಕಮಿಲದ ಬಾಂಧವ್ಯ ಗೆಳೆಯರ ಬಳಗದಿಂದ ರಸ್ತೆ ಬದಿ ಸ್ವಚ್ಛತೆ| ಕಸ ಹಾಕುವವರ ಪತ್ತೆಗೆ ಸಿಸಿ ಕ್ಯಾಮೆರಾ ಅಳವಡಿಕೆ

ಸಮಗ್ರ ನ್ಯೂಸ್: ಸುಳ್ಯದ ಗುತ್ತಿಗಾರು ಗ್ರಾಮದ ಕಮಿಲದ ಬಾಂಧವ್ಯ ಗೆಳೆಯರ ಬಳಗವು ಭಾನುವಾರ ಬಳ್ಪ-ಕಮಿಲ ರಸ್ತೆಯ ಸುಮಾರು 2 ಕಿಮೀ ಕಾಡಿನ ನಡುವೆ ಹಾದು ಹೋಗುವ ರಸ್ತೆಯ ಇಕ್ಕೆಲೆಗಳಲ್ಲಿ ಸ್ವಚ್ಛತೆಯನ್ನು ಮಾಡಿದರು. ಕಾಡು-ಪರಿಸರ ಸಂರಕ್ಷಣೆ, ಸ್ವಚ್ಛತೆಯ ಉದ್ದೇಶದಿಂದ ಕೆಲಸಕ್ಕೆ ಇಳಿದ ಯುವಕರಿಗೆ ಕಾಡಿನ ದಾರಿಯಲ್ಲಿ ದೊರೆತದ್ದು 2 ಲೋಡ್‌ ಪಿಕ್‌ಅಪ್‌ನಲ್ಲಿ ತುಂಬುವಷ್ಟು ತ್ಯಾಜ್ಯ. ಇನ್ನೂ ಇದೆ. ಇದು ಒಂದು ದಿನ ಕೆಲಸ. ಕಮಿಲದ ಬಾಂಧವ್ಯ ಗೆಳೆಯರ ಬಳಗವು ಅರಣ್ಯದ ಕಾಳಜಿಯ ಉದ್ದೇಶದೊಂದಿಗೆ ಆರಂಭದಲ್ಲಿ ಕಾಡಿನ ದಾರಿಯಲ್ಲಿ ಸ್ವಚ್ಛತೆ

ಸುಬ್ರಹ್ಮಣ್ಯ: ಪರಿಸರ ರಕ್ಷಣೆಗಾಗಿ‌ ಯುವಕರ ಮಾದರಿ‌ ಕಾರ್ಯ| ಕಮಿಲದ ಬಾಂಧವ್ಯ ಗೆಳೆಯರ ಬಳಗದಿಂದ ರಸ್ತೆ ಬದಿ ಸ್ವಚ್ಛತೆ| ಕಸ ಹಾಕುವವರ ಪತ್ತೆಗೆ ಸಿಸಿ ಕ್ಯಾಮೆರಾ ಅಳವಡಿಕೆ Read More »

ಅಂಗನವಾಡಿಯಲ್ಲಿ ವಿತರಿಸಿದ‌ ಬೆಲ್ಲದ ಪೊಟ್ಟಣದಲ್ಲಿ ಸತ್ತ ಇಲಿ!!

ಸಮಗ್ರ ನ್ಯೂಸ್: ಅಂಗನವಾಡಿ ಕೇಂದ್ರದಲ್ಲಿ ಇತ್ತೀಚೆಗೆ ವಿತರಿಸಲಾದ ಬೆಲ್ಲದ ಪೊಟ್ಟಣದಲ್ಲಿ ಸತ್ತ ಇಲಿ ಪತ್ತೆಯಾಗಿದೆ ಎಂಬ ಆರೋಪ ಗುಡಿಬಂಡೆ ತಾಲೂಕಿನ ಹಂಪಸಂದ್ರ ಗ್ರಾಮದಿಂದ ವರದಿಯಾಗಿದೆ. ಗರ್ಭಿಣಿಯರು, ಬಾಣಂತಿಯರಿಗೆ ಅಂಗನವಾಡಿ ಕೇಂದ್ರದಲ್ಲಿ ಈ ಪೊಟ್ಟಣಗಳನ್ನು ವಿತರಿಸಲಾಗಿತ್ತು. ಗರುಡಾಚಾರ್ಲಹಳ್ಳಿ ಗ್ರಾಮದ ನಿವಾಸಿ ರತ್ನಮ್ಮ ಎಂಬುವರಿಗೆ ನೀಡಿದ ಎರಡು ಬೆಲ್ಲದ ಪೊಟ್ಟಣಗಳ ಪೈಕಿ ಒಂದರಲ್ಲಿ ಈ ಸತ್ತ ಇಲಿ ಕಂಡುಬಂದಿವೆ. ಕೂಡಲೇ ಅವರು ಪೊಟ್ಟಣಗಳನ್ನು ಅಂಗನವಾಡಿ ಕಾರ್ಯಕರ್ತೆ ಗಮನಕ್ಕೆ ತಂದಿದ್ದಾರೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮೂಲಕ ಅಂಗನವಾಡಿಗಳಿಗೆ ಪೂರೈಸುವ

ಅಂಗನವಾಡಿಯಲ್ಲಿ ವಿತರಿಸಿದ‌ ಬೆಲ್ಲದ ಪೊಟ್ಟಣದಲ್ಲಿ ಸತ್ತ ಇಲಿ!! Read More »

ವಿದ್ಯಾರ್ಥಿನಿ, ಶಿಕ್ಷಕಿ ಹಾಗೂ ಗ್ರಾ.ಪಂ ಅಧ್ಯಕ್ಷೆಗೆ ಸ್ವಾತಂತ್ರ್ಯೋತ್ಸವದ ಆಮಂತ್ರಣ| ಸುಳ್ಯದ ಅಚ್ರಪ್ಪಾಡಿ ಶಾಲೆ ಮಾಜಿ ಶಿಕ್ಷಕಿ ಶ್ವೇತಾ ವೇಣುಗೋಪಾಲ್ ಸೇರಿ ಜಿಲ್ಲೆಯ ಮೂವರಿಗೆ ಅವಕಾಶ

ಸಮಗ್ರ ನ್ಯೂಸ್: ಹೊಸದಿಲ್ಲಿಯಲ್ಲಿ ನಡೆಯುವ 78ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲು ರಾಜ್ಯದ ನಾಲ್ಕು ಪಿಎಂಶ್ರೀ ಶಾಲೆಗಳ ನಾಲ್ವರು ವಿದ್ಯಾರ್ಥಿಗಳು ಹಾಗೂ ನಾಲ್ವರು ಶಿಕ್ಷಕರು ವಿಶೇಷ ಅವಕಾಶ ಪಡೆದುಕೊಂಡಿದ್ದು, ಇದರಲ್ಲಿ ಮೈಸೂರು ಶೈಕ್ಷಣಿಕ ವಿಭಾಗದಿಂದ ದ.ಕ. ಜಿಲ್ಲೆಯ ಓರ್ವ ವಿದ್ಯಾರ್ಥಿನಿ, ಶಿಕ್ಷಕಿ ಹಾಗೂ ಗ್ರಾಮ ಪಂಚಾಯತ್ ಅಧ್ಯಕ್ಷೆಯೊಬ್ಬರಿಗೆ ಭಾಗವಹಿಸಲು ವಿಶೇಷ ಆಮಂತ್ರಣ ದೊರಕಿದೆ. ದ.ಕ. ಜಿಲ್ಲೆಯ ಮಂಗಳೂರಿನ ಶಕ್ತಿನಗರ ನಾಲ್ಯಪದವು ಕುವೆಂಪು ಶತಮಾನೋತ್ಸವ ಉನ್ನತೀಕರಿಸಿದ ಮಾದರಿ ಸ.ಹಿ.ಪ್ರಾ. ಶಾಲೆಯ 8ನೇ ತರಗತಿ ವಿದ್ಯಾರ್ಥಿನಿ ಪೂರ್ವಿ ಯು. ಶೆಟ್ಟಿ ಹಾಗೂ

ವಿದ್ಯಾರ್ಥಿನಿ, ಶಿಕ್ಷಕಿ ಹಾಗೂ ಗ್ರಾ.ಪಂ ಅಧ್ಯಕ್ಷೆಗೆ ಸ್ವಾತಂತ್ರ್ಯೋತ್ಸವದ ಆಮಂತ್ರಣ| ಸುಳ್ಯದ ಅಚ್ರಪ್ಪಾಡಿ ಶಾಲೆ ಮಾಜಿ ಶಿಕ್ಷಕಿ ಶ್ವೇತಾ ವೇಣುಗೋಪಾಲ್ ಸೇರಿ ಜಿಲ್ಲೆಯ ಮೂವರಿಗೆ ಅವಕಾಶ Read More »

ಕಡಬ: ಸ್ಕೂಟರ್ ಡಿಕ್ಕಿ ಹೊಡೆದು ಗಾಯಗೊಂಡಿದ್ದ ಪಾದಚಾರಿ ಸಾವು

ಸಮಗ್ರ ನ್ಯೂಸ್: ರಸ್ತೆದಾಟಲು ನಿಂತಿದ್ದ ವೃದ್ದರೊಬ್ಬರಿಗೆ ಸ್ಕೂಟರ್ ಡಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡು ಬಳಿಕ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಕಡಬ ತಾಲೂಕಿನ ಕೋಡಿಂಬಾಳದಿಂದ ವರದಿಯಾಗಿದೆ. ಕೋಡಿಂಬಾಳ ಗ್ರಾಮದ ಶ್ಯಾಮಿಯಾನ ಅಂಗಡಿಯೊಂದರ ಬಳಿ ಸ್ಕೂಟರ್ ಸವಾರ ಸ್ಕೂಟರ್ ಸವಾರ ಮಹಮ್ಮದ್ ನೌಫಾಲ್ ಎಂಬಾತ ಅಜಾಗರೂಕತೆ ಮತ್ತು ನಿರ್ಲಕ್ಷತನದಿಂದ ಚಲಾಯಿಸಿ ರಸ್ತೆಯ ಬದಿಯಲ್ಲಿ ರಸ್ತೆ ದಾಟಲು ನಿಂತಿದ್ದ ಕೋಡಿಂಬಾಳದ ಹುಕ್ರ (ವ 75 ) ಎಂಬವರಿಗೆ ಡಿಕ್ಕಿ ಹೊಡೆದಿರುವುದಾಗಿ ಪೊಲೀಸರಿಗೆ ನೀಡಿದ ದೂರಿನಲ್ಲಿ ಉಲ್ಲೇಖಿಸಲಾಗಿದೆ . ಅಪಘಾತದ ಪರಿಣಾಮ

ಕಡಬ: ಸ್ಕೂಟರ್ ಡಿಕ್ಕಿ ಹೊಡೆದು ಗಾಯಗೊಂಡಿದ್ದ ಪಾದಚಾರಿ ಸಾವು Read More »

ಉಳ್ಳಾಲ: ರೌಡಿ ಶೀಟರ್ ಟಾರ್ಗೆಟ್ ಇಲ್ಯಾಸ್ ಕೊಲೆ ಪ್ರಕರಣದ ಆರೋಪಿಯ ಅಟ್ಟಾಡಿಸಿ ಕೊಲೆ| ತಾಯಿ ಜೊತೆ ಇದ್ದಾಗಲೇ ಹಂತಕರ ಮಚ್ಚಿಗೆ ಬಲಿಯಾದ ಸಮೀರ್

ಸಮಗ್ರ ನ್ಯೂಸ್: ರೌಡಿಶೀಟರ್ ಟಾರ್ಗೆಟ್ ಇಲ್ಯಾಸ್ ಕೊಲೆ ಪ್ರಕರಣದ ಆರೋಪಿಯನ್ನು ಅಟ್ಟಾಡಿಸಿ ತಲವಾರಿನಿಂದ ಕಡಿದು ಹತ್ಯೆ ನಡೆಸಿರುವ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಕಲ್ಲಾಪುವಿನಲ್ಲಿ ರಾ.ಹೆ.66ರ ಪಕ್ಕದಲ್ಲಿರುವ ವಿ.ಕೆ.ಫರ್ನಿಚರ್ ಕಟ್ಟಡದ ಹಿಂಭಾಗದಲ್ಲಿ ಭಾನುವಾರ ಮಧ್ಯರಾತ್ರಿ ವೇಳೆ ನಡೆದಿದೆ. ಉಳ್ಳಾಲ ಕಡಪ್ಪುರ ನಿವಾಸಿ ಸಮೀರ್ (35) ಹತ್ಯೆಯಾದವರು ಎಂದು ಪೊಲೀಸ್ ಮೂಲಗಳು ತಿಳಿಸಿವೆ. ತಾಯಿ ಜೊತೆಗೆ ಕಲ್ಲಾಪುವಿನ ರೆಸ್ಟೋರೆಂಟ್ ಒಂದಕ್ಕೆ ಊಟಕ್ಕೆಂದು ಬಂದ ಸಂದರ್ಭ ಕಾರಿನಲ್ಲಿ ಹಿಂಬಾಲಿಸಿದ್ದ ತಂಡ ಸಮೀರ್ ಇಳಿಯುತ್ತಿದ್ದಂತೆ ತಲವಾರಿನಿಂದ ಕಡಿದು ಕೊಲೆಗೆ ಯತ್ನಿಸಿದೆ.

ಉಳ್ಳಾಲ: ರೌಡಿ ಶೀಟರ್ ಟಾರ್ಗೆಟ್ ಇಲ್ಯಾಸ್ ಕೊಲೆ ಪ್ರಕರಣದ ಆರೋಪಿಯ ಅಟ್ಟಾಡಿಸಿ ಕೊಲೆ| ತಾಯಿ ಜೊತೆ ಇದ್ದಾಗಲೇ ಹಂತಕರ ಮಚ್ಚಿಗೆ ಬಲಿಯಾದ ಸಮೀರ್ Read More »

SDPI ಬೆಳ್ಳಾರೆ ಬ್ಲಾಕ್ ಪ್ರತಿನಿಧಿ ಸಭೆ,ಆಂತರಿಕ ಚುನಾವಣೆ

ಸಮಗ್ರ ನ್ಯೂಸ್: ಬೆಳ್ಳಾರೆ ಬ್ಲಾಕ್ ನ 2024-27 ನೇಯ ಸಾಲಿಗೆ ಪದಾಧಿಕಾರಿಗಳನ್ನು ಚುನಾವಣೆಯ ಮೂಲಕ ಆ.10 ರಂದು ಆಯ್ಕೆ ಮಾಡಲಾಯಿತು. ನೂತನ ಸಮಿತಿಯ ಅಧ್ಯಕ್ಷರಾಗಿ ರಫೀಕ್ ಎಂ ಎ ಕಾರ್ಯದರ್ಶಿಯಾಗಿ ಹಮೀದ್ ಮರಕ್ಕಡ, ಕೋಶಾಧಿಕಾರಿಯಾಗಿ, ಇರ್ಷಾದ್ ಸರ್ವೆ, ಉಪಾಧ್ಯಕ್ಷರಾಗಿ ಅಬ್ದುಲ್ ರಹಿಮಾನ್ ತಂಬಿನಮಕ್ಕಿ, ಜೊತೆ ಕಾರ್ಯದರ್ಶಿಯಾಗಿ ಅಝೀಝ್ ಅಯ್ಯನಕಟ್ಟೆ,ಸಮಿತಿ ಸದಸ್ಯರಾಗಿ ಮೊಯ್ದೀನ್ ಬೆಳ್ಳಾರೆ ಹಾಗೂ ಯೂಸಫ್ ಹಾಜಿ ಬೇರಿಕೆ ಯವರು ಆಯ್ಕೆಯಾದರು. ಚುನಾವಣೆ ಪ್ರಕ್ರಿಯೆಯ ಆರ್. ಓ ಆಗಿ,ಎಸ್‌ಡಿಪಿಐ ದ.ಕ ಜಿಲ್ಲಾ ಸಮಿತಿ ಸದಸ್ಯರಾದ ಅಶ್ರಫ್ ತಲಪಾಡಿ

SDPI ಬೆಳ್ಳಾರೆ ಬ್ಲಾಕ್ ಪ್ರತಿನಿಧಿ ಸಭೆ,ಆಂತರಿಕ ಚುನಾವಣೆ Read More »

ಹವಾಮಾನ ವರದಿ| ಕರಾವಳಿ, ಮಲೆನಾಡಿನಲ್ಲಿ ಮತ್ತೆ ಮಳೆ ಶುರು| ಎಲ್ಲೋ ಅಲರ್ಟ್ ಘೋಷಣೆ

ಸಮಗ್ರ ನ್ಯೂಸ್: ಕರಾವಳಿಯಲ್ಲಿ ಮತ್ತೆ ವರುಣನ ಆರ್ಭಟ ಶುರುವಾಗಿದೆ, ಮೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ನೀಡಲಾಗಿದ್ದು, ಮುಂದಿನ ಮೂರು ದಿನ ಮುಂಗಾರು ಚುರುಕಾಗಿರಲಿದೆ. ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮನಕೂರು, ವಿಜಯನಗರದಲ್ಲಿ ಕೂಡ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕಳೆದ ಎರಡು ದಿನಗಳಿಂದ ಕೊಂಚ ಬಿಡುವು ಕೊಟ್ಟಿದ್ದ ಮಳೆ ಮತ್ತೆ ಕರಾವಳಿಯಲ್ಲಿ ಆತಂಕವನ್ನು ಸೃಷ್ಟಿ

ಹವಾಮಾನ ವರದಿ| ಕರಾವಳಿ, ಮಲೆನಾಡಿನಲ್ಲಿ ಮತ್ತೆ ಮಳೆ ಶುರು| ಎಲ್ಲೋ ಅಲರ್ಟ್ ಘೋಷಣೆ Read More »

12 ದಿನಗಳ ಬಳಿಕ ಮಂಗಳೂರು – ಬೆಂಗಳೂರು ರೈಲು ಸಂಚಾರ ಪುನರಾರಂಭ| ಪೂರ್ಣಗೊಂಡ ಮಾರ್ಗ ದುರಸ್ತಿ ಕಾರ್ಯ

ಸಮಗ್ರ ನ್ಯೂಸ್: ಮಂಗಳೂರು- ಬೆಂಗಳೂರು ರೈಲು ಮಾರ್ಗದ ಎಡಕುಮೇರಿ -ಕಡಗರವಳ್ಳಿ ನಡುವಣ ದೋಣಿಗಲ್‌ನಲ್ಲಿ ಭೂಕುಸಿತ ನಡೆದಲ್ಲಿ ದುರಸ್ತಿ ಕಾರ್ಯ ಪೂರ್ಣಗೊಂಡಿದ್ದು, ಸುಮಾರು 12 ದಿನಗಳ ಬಳಿಕ ಗುರುವಾರದಿಂದ ರೈಲು ಸಂಚಾರ ಪುನರಾರಂಭಗೊಂಡಿದೆ. ಭಾರೀ ಮಳೆಯಿಂದಾಗಿ ಕಡಗರವಳ್ಳಿ ಮತ್ತು ಯಡಕುಮೇರಿ ನಡುವಿನ ರೈಲು ಮಾರ್ಗದ ಕೆಳಬದಿಯಲ್ಲಿ ಭೂಕುಸಿತವಾಗಿತ್ತು, ರೈಲ್ವೆ ಇಲಾಖೆ ನಿರಂತರ ಮಳೆಯ ನಡುವೆಯೂ ಕ್ರಿಬ್‌ ಗೋಡೆ, ತಡೆಗೋಡೆ ನಿರ್ಮಾಣ ಕಾಮಗಾರಿಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಿದೆ. ಆಗಸ್ಟ್ 4 ರಂದು ಈ ಮಾರ್ಗದಲ್ಲಿ ರೈಲು ಸಂಚಾರಕ್ಕೆ ಅನುಮತಿ ನೀಡಲಾಗಿತ್ತು. ರೈಲಿನ

12 ದಿನಗಳ ಬಳಿಕ ಮಂಗಳೂರು – ಬೆಂಗಳೂರು ರೈಲು ಸಂಚಾರ ಪುನರಾರಂಭ| ಪೂರ್ಣಗೊಂಡ ಮಾರ್ಗ ದುರಸ್ತಿ ಕಾರ್ಯ Read More »