ಕರಾವಳಿ

ಸುಬ್ರಹ್ಮಣ್ಯ: ಗೂಡ್ಸ್ ರೈಲಿನಿಂದ ಅನಿಲ ಸೋರಿಕೆ; ತಪ್ಪಿದ ಭಾರೀ ಅವಘಡ

ಸಮಗ್ರ ನ್ಯೂಸ್: ನಿಂತಿದ್ದ ಗೂಡ್ಸ್ ರೈಲಿನಿಂದ ಅನಿಲ ಸೋರಿಕೆ ಕಾಣಿಸಿಕೊಂಡ ಘಟನೆ ನೆಟ್ಟಣದ ಸುಬ್ರಹ್ಮಣ್ಯ ರೋಡ್‌ ರೈಲು ನಿಲ್ದಾಣದಲ್ಲಿ ಶನಿವಾರ(ಡಿ.31) ನಸುಕಿನ ಜಾವ ಸಂಭವಿಸಿದೆ. ಲೋಕೊಪೈಲೆಟ್‌ನ ಸಮಯಪ್ರಜ್ಞೆಯಿಂದ ಭಾರೀ ಅವಘಡವೊಂದು ತಪ್ಪಿದಂತಾಗಿದೆ. ಮಂಗಳೂರಿನಿಂದ ಮಹಾರಾಷ್ಟ್ರಕ್ಕೆ ಅನಿಲ ತುಂಬಿಕೊಂಡು ಹೋಗುತ್ತಿದ್ದ ಸುಮಾರು 43 ಗೂಡ್ಸ್ ಪ್ಯಾನೆಲ್‌ಗ‌ಳ ಗೂಡ್ಸ್ ರೈಲು ಸುಬ್ರಹ್ಮಣ್ಯ ರೋಡ್ ರೈಲ್ವೇ ನಿಲ್ದಾಣದಲ್ಲಿ ಕ್ರಾಸಿಂಗ್‌ಗಾಗಿ ನಿಲುಗಡೆಗೊಂಡಿತ್ತು. ರಾತ್ರಿ ಗಂಟೆ 2.30ರ ಸುಮಾರಿಗೆ ರೈಲಿನಿಂದ ಲೋಕೊಪೈಲೆಟ್ ಕೆಳಗಿಳಿದು ಬಂದ ವೇಳೆ ನಾಲ್ಕನೇ ಟ್ಯಾಂಕ್‌ನಿಂದ ಅನಿಲ ಸೋರಿಕೆಯಾಗುತ್ತಿರುವುದನ್ನು ಗಮನಿಸಿದ್ದಾರೆ. ಕೂಡಲೇ […]

ಸುಬ್ರಹ್ಮಣ್ಯ: ಗೂಡ್ಸ್ ರೈಲಿನಿಂದ ಅನಿಲ ಸೋರಿಕೆ; ತಪ್ಪಿದ ಭಾರೀ ಅವಘಡ Read More »

ಶಿರಾಡಿಯಲ್ಲಿ ಒಂಟಿಸಲಗ ದಾಳಿ| ತಂದೆ ಸಾವು; ಮಗ ಗಂಭೀರ

ಸಮಗ್ರ ನ್ಯೂಸ್: ಒಂಟಿ ಸಲಗವೊಂದು ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೋರ್ವರು ಸಾವಿಗೀಡಾದ ಘಟನೆ ದ.ಕ ಜಿಲ್ಲೆಯ ಕಡಬ ತಾಲೂಕಿನ ಶಿರಾಡಿಯಲ್ಲಿ ನಡೆದಿದೆ. ಇಲ್ಲಿನ ಗುಂಡ್ಯ ಹೊಳೆ ಬದಿಗೆ ತೆರಳಿದವರ ಮೇಲೆ ಒಂಟಿ ಸಲಗವೊಂದು ದಾಳಿ ನಡೆಸಿದ್ದು ಪರಿಣಾಮ ಓರ್ವ ಮೃತಪಟ್ಟು, ಇನ್ನೋರ್ವ ಗಂಭೀರ ಗಾಯಗೊಂಡಿದ್ದಾರೆ. ಶಿರಾಡಿ ಗ್ರಾಮದ ಜನತಾ ಕಾಲನಿ ನಿವಾಸಿಗಳಾದ ತಿಮ್ಮಪ್ಪ ( 45) ಮತ್ತು ಅವರ ಪುತ್ರ ಶರಣ್ (18) ಶನಿವಾರದಂದು ಗುಂಡ್ಯ ಹೊಳೆ ಬದಿಗೆ ತೆರಳಿದ್ದರು. ಈ ವೇಳೆ ಕಾಡಿನಿಂದ ಹೊಳೆಯತ್ತ ಆಗಮಿಸಿದ್ದ

ಶಿರಾಡಿಯಲ್ಲಿ ಒಂಟಿಸಲಗ ದಾಳಿ| ತಂದೆ ಸಾವು; ಮಗ ಗಂಭೀರ Read More »

”ತೆಂಗಿನಮರವನ್ನೂ ಹತ್ತುವೆ, ಸಮುದ್ರವನ್ನೂ ಈಜುವೆ” | ಟೀಕಾಕಾರರ ಕಿವಿಹಿಂಡಿದ ಸಚಿವ ಎಸ್.ಅಂಗಾರ

ಸಮಗ್ರ ನ್ಯೂಸ್: ‘ನನ್ನ ಬಗ್ಗೆ ಯಾರೂ ಕೇವಲವಾಗಿ ಮಾತನಾಡಬೇಕಿಲ್ಲ. ನಾನು ರಾಜಕೀಯ ಹೊರತಾಗಿಯೂ ಜನಸಾಮಾನ್ಯನಂತೆ ಕೆಲಸದಲ್ಲಿ ತೊಡಗಿಕೊಳ್ಳಲು ಹೇಸುವವನಲ್ಲ, ನಾನು ಈಗಲೂ ತೆಂಗಿನಮರ ಏರಬಲ್ಲೆ, ಸಮುದ್ರಕ್ಕೆ ತಳ್ಳಿದರೂ ಈಜಿ ದಡ ಸೇರುವೆ’ ಎಂದು ಬಂದರು, ಹಾಗೂ‌ ಮೀನುಗಾರಿಕೆ ಸಚಿವ ಎಸ್.ಅಂಗಾರ ಹೇಳಿದರು. ಅವರು ದ.ಕ ಜಿಲ್ಲೆಯ ಸುಳ್ಯ ತಾಲೂಕಿನ ಗುತ್ತಿಗಾರು ಸರ್ಕಾರಿ ಪ್ರೌಢಶಾಲೆಯ ಸುವರ್ಣ ಮಹೋತ್ಸವದಲ್ಲಿ ಮಾತನಾಡುತ್ತಾ, ‘ಸಚಿವನಾಗಿ ನಾನು ಕಾರ್ಯಕ್ಷೇತ್ರದಲ್ಲಿ ಬಹಳಷ್ಟು ಕೆಲಸಗಳನ್ನು ಮಾಡಿದ್ದೇನೆ, ಮುಂದೆಯೂ ಮಾಡಬಲ್ಲೆ, ನನ್ನನ್ನು ಯಾರೂ ಕೇವಲವೆಂದು ಭಾವಿಸಬಾರದು, ರಾಜಕೀಯ ಹೊರತಾಗಿಯೂ

”ತೆಂಗಿನಮರವನ್ನೂ ಹತ್ತುವೆ, ಸಮುದ್ರವನ್ನೂ ಈಜುವೆ” | ಟೀಕಾಕಾರರ ಕಿವಿಹಿಂಡಿದ ಸಚಿವ ಎಸ್.ಅಂಗಾರ Read More »

ವಿಟ್ಲ: ಆಡು ಕಳ್ಳರನ್ನು ಹಿಡಿದ ಸಾರ್ವಜನಿಕರು

ಸಮಗ್ರ ನ್ಯೂಸ್: ಆಡುಗಳಿಗೆ ಹೊಂಚು ಹಾಕಿ ಕಳ್ಳತನ ಮಾಡುತ್ತಿದ್ದ ಇಬ್ಬರನ್ನು ಸಾರ್ವಜನಿಕರು ಹಿಡಿದು ಪೊಲೀಸರಿಗೊಪ್ಪಿಸಿದ ಘಟನೆ ವಿಟ್ಲದಲ್ಲಿ ನಡೆದಿದೆ. ಸಾಲೆತ್ತೂರು ನಿವಾಸಿಗಳಾದ ಅಜೀಮ್‌ (19), ಅನಸ್ (19) ಪೊಲೀಸ್ ವಶವಾದವರು. ಪೆರುವಾಯಿ, ಅಡ್ಯನಡ್ಕ, ಕೇಪು, ಮರಕ್ಕಿಣಿ, ಅಳಿಕೆ ಮುಂತಾದ ಪ್ರದೇಶಗಳಿಂದ ಗುಡ್ಡಕ್ಕೆ ಮೇಯಲೆಂದು ಬಿಡುತ್ತಿದ್ದ ಆಡುಗಳು ನಾಪತ್ತೆಯಾಗುತ್ತಿದ್ದವು. ಆಡುಗಳ ನಾಪತ್ತೆ ಹಿಂದೆ ಖದೀಮರ ಕೈಚಳಕವನ್ನು ಪತ್ತೆ ಹಚ್ಚುವ ಸಲುವಾಗಿ ಆಡು ಮಾಲಕರು ಕಾಯುತ್ತಿದ್ದರು. ಶುಕ್ರವಾರ ಮುಂಜಾನೆ ಕಳ್ಳರ ಪತ್ತೆಗಾಗಿ ಮಾಲಕರು ಕಾಯುತ್ತಿದ್ದ ವೇಳೆ ಕೇಪು ಕಲ್ಲಂಗಳ ದ್ವಾರದ

ವಿಟ್ಲ: ಆಡು ಕಳ್ಳರನ್ನು ಹಿಡಿದ ಸಾರ್ವಜನಿಕರು Read More »

ಮಂಗಳೂರು: ಹೆಲ್ಮೆಟ್ ಧರಿಸಿಲ್ಲವೆಂದು ಕಾರು ಮಾಲೀಕನಿಗೆ ನೋಟೀಸ್ ನೀಡಿದ ಟ್ರಾಫಿಕ್ ಪೊಲೀಸರು!!

ಸಮಗ್ರ ನ್ಯೂಸ್: ಹೆಲ್ಮೆಟ್​ ಧರಿಸದೆ ದ್ವಿಚಕ್ರ ವಾಹನದಲ್ಲಿ ಸಂಚರಿಸಿ ನಿಯಮ‌ ಉಲ್ಲಂಘಿಸಿದರೆ ಟ್ರಾಫಿಕ್​ ಪೊಲೀಸರು ದಂಡ ಹಾಕೋದು ಸಾಮಾನ್ಯ. ಆದರೆ, ಅಟೋಮೇಶನ್​ನ ಎಡವಟ್ಟಿನಿಂದಾಗಿ ಮಂಗಳೂರಲ್ಲಿ ಕಾರು ಮಾಲೀಕರೊಬ್ಬರಿಗೆ ಹೆಲ್ಮಟ್​ ಧರಿಸಿಲ್ಲ ಎಂದು ಪೊಲೀಸರು ನೋಟಿಸ್​ ಕೊಟ್ಟಿದ್ದಾರೆ! ಮಂಗಳೂರು ನಗರದ ಮಂಗಳಾದೇವಿ ರಸ್ತೆಯಲ್ಲಿ ನ.29ರಂದು ಕಾರಿನ ಮಾಲೀಕರೊಬ್ಬರು ತೆರಳಿದ್ದು, ಅವರಿಗೆ ಸಂಚಾರಿ ಠಾಣೆಯಿಂದ ಸಹಸವಾರ ಹೆಲ್ಮೆಟ್​ ಹಾಕಿಲ್ಲ ಎಂಬ ಕಾರಣವೊಡ್ಡಿ ಡಿ.22ರಂದು 500ರೂ. ದಂಡದ ನೋಟಿಸ್​ ಹೋಗಿದೆ. ಇದನ್ನು ನೋಡಿ ಶಾಕ್​ ಆದ ಕಾರಿನ ಮಾಲೀಕರು ಪರಿಶೀಲನೆಗೆ ಮುಂದಾದಾಗ

ಮಂಗಳೂರು: ಹೆಲ್ಮೆಟ್ ಧರಿಸಿಲ್ಲವೆಂದು ಕಾರು ಮಾಲೀಕನಿಗೆ ನೋಟೀಸ್ ನೀಡಿದ ಟ್ರಾಫಿಕ್ ಪೊಲೀಸರು!! Read More »

ಪುತ್ತೂರು: ಅಡಿಕೆಗೆ ಭವಿಷ್ಯವಿಲ್ಲ ಎಂದ ಗೃಹಸಚಿವರ ವಿರುದ್ಧ ಪ್ರತಿಭಟನೆಗೆ ಸಿದ್ಧತೆ

ಸಮಗ್ರ ನ್ಯೂಸ್: ಅಡಿಕೆ ಬೆಳೆಗೆ ಭವಿಷ್ಯವಿಲ್ಲ ಎಂದ ರಾಜ್ಯ ಗೃಹಸಚಿವ ಅರಗ ಜ್ಞಾನೇಂದ್ರ ಹೇಳಿಕೆಯನ್ನು ಖಂಡಿಸಿ ಜ.2 ರಂದು ಅಡಿಕೆ ಬೆಳೆಗಾರರನ್ನು ಸೇರಿಸಿಕೊಂಡು ಪ್ರತಿಭಟನೆ ನಡೆಸಲಾಗುವುದು ಎಂದು ಪುತ್ತೂರು ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಎಂ.ಬಿ.ವಿಶ್ವನಾಥ್ ರೈ ಹೇಳಿದರು. ಪುತ್ತೂರು ಪ್ರೆಸ್ ಕ್ಲಬ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಅಡಿಕೆ ಬೆಳೆ ಇತ್ತೀಚಿನ ದಿನಗಳಲ್ಲಿ ಹಲವು ಸಮಸ್ಯೆಗಳನ್ನು ಎದುರಿಸುತ್ತಿದೆ. ಎಲೆ ಚುಕ್ಕಿರೋಗ,ಕೊಳೆರೋಗ,ಹಳದಿ ರೋಗದಿಂದ ಅಡಿಕೆ ಗಿಡಗಳು ನಾಶವಾಗುತ್ತಿದೆ. ಈ ಸಮಸ್ಯೆಗಳನ್ನು ಪರಿಹರಿಸುವ ಕೆಲಸ ಮಾಡುವುದನ್ನು ಬಿಟ್ಟು ರಾಜ್ಯ

ಪುತ್ತೂರು: ಅಡಿಕೆಗೆ ಭವಿಷ್ಯವಿಲ್ಲ ಎಂದ ಗೃಹಸಚಿವರ ವಿರುದ್ಧ ಪ್ರತಿಭಟನೆಗೆ ಸಿದ್ಧತೆ Read More »

ದ.ಕ ಜಿಲ್ಲೆಯಲ್ಲಿ ಜಾನುವಾರು ಸಾಗಾಟ ನಿಷೇಧಿಸಿ ಜಿಲ್ಲಾಧಿಕಾರಿ ಎಂ.ಆರ್ ರವಿಕುಮಾರ್ ಆದೇಶ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಚರ್ಮಗಂಟು ರೋಗ ನಿಯಂತ್ರಣಕ್ಕೆ ಜಿಲ್ಲಾಡಳಿತ ಮುಂದಾಗಿದ್ದು,  ಜಿಲ್ಲೆಯೊಳಗೆ ಮತ್ತು ಹೊರ ಜಿಲ್ಲೆ ಅಥವಾ ನೆರೆ ರಾಜ್ಯದಿಂದ ಜಿಲ್ಲೆಗೆ ಜಾನುವಾರುಗಳ ಸಾಗಾಟವನ್ನು ನಿಷೇಧಿಸಿ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಅವರು ಆದೇಶಿಸಿದ್ದಾರೆ. ಕ್ಯಾಪ್ರಿಪಾಕ್ಸ್ ಎಂಬ ವೈರಾಣುವಿನಿಂದ ಹರಡುವ ಚರ್ಮಗಂಟು (ಲುಂಪಿ ಸ್ಕಿನ್ ಡಿಸೀಸ್) ರೋಗ ದನ ಮತ್ತು ಎಮ್ಮೆಗಳಲ್ಲಿ ಕಂಡುಬರುವ ವೈರಸ್ ಖಾಯಿಲೆಯಾಗಿದ್ದು, ರೋಗಗ್ರಸ್ಥ ಜಾನುವಾರುವಿನಿಂದ ಆರೋಗ್ಯವಂತ ಜಾನುವಾರುಗಳಿಗೆ ಹರಡುತ್ತಿದೆ. ಜಿಲ್ಲೆಯ 289 ಗ್ರಾಮಗಳಲ್ಲಿ ಜಾನುವಾರುಗಳಲ್ಲಿ ಚರ್ಮಗಂಟು ರೋಗ ಕಂಡು ಬಂದಿರುತ್ತದೆ. ಈವರೆಗೆ

ದ.ಕ ಜಿಲ್ಲೆಯಲ್ಲಿ ಜಾನುವಾರು ಸಾಗಾಟ ನಿಷೇಧಿಸಿ ಜಿಲ್ಲಾಧಿಕಾರಿ ಎಂ.ಆರ್ ರವಿಕುಮಾರ್ ಆದೇಶ Read More »

ಸುಳ್ಯದ ಕೆವಿಜಿ ಡೆಂಟಲ್ ಕಾಲೇಜಿನಲ್ಲಿ ರ‍್ಯಾಗಿಂಗ್‌| ಹಲ್ಲೆಗೊಳಗಾದ ವಿದ್ಯಾರ್ಥಿನಿಯಿಂದ ದೂರು ದಾಖಲು| ಪ್ರಾಂಶುಪಾಲರಿಂದ ಆರೋಪ ನಿರಾಕರಣೆ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಪ್ರತಿಷ್ಠಿತ ಕೆವಿ‌ಜಿ ಡೆಂಟಲ್ ಕಾಲೇಜಿನಲ್ಲಿ ಸರ್ಕಾರಿ ಸೀಟ್ ವಿಚಾರವಾಗಿ ಡೆಂಡಲ್ ವಿದ್ಯಾರ್ಥಿನಿಗೆ ರ‍್ಯಾಗಿಂಗ್‌ ಮಾಡಿದ ಆರೋಪ ಕೇಳಿಬಂದಿದ್ದು, ಸುಳ್ಯ ಠಾಣೆಯಲ್ಲಿ ದೂರು ದಾಖಲಾದ ಬಗ್ಗೆ ವರದಿಯಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳ ಮೂಲದ ಆರು ವಿದ್ಯಾರ್ಥಿಗಳ ವಿರುದ್ಧ ದೂರು ದಾಖಲಾಗಿದೆ. ಬೆಂಗಳೂರಿನ ವೈಟ್ ಫೀಲ್ಡ್ ನಿವಾಸಿ, ಮೂರನೇ ವರ್ಷದ ಡೆಂಡಲ್ ವಿದ್ಯಾರ್ಥಿನಿಯೇ ರ‍್ಯಾಗಿಂಗ್‌ಗೆ ಒಳಗಾದ ಡೆಂಟಲ್ ವಿದ್ಯಾರ್ಥಿನಿ. ಇವರು ರ‍್ಯಾಂಕ್ ಹೋಲ್ಡರ್ ಆಗಿದ್ದಾರೆ. ಕೇರಳ ಮೂಲದ ಆರು ವಿದ್ಯಾರ್ಥಿಗಳ

ಸುಳ್ಯದ ಕೆವಿಜಿ ಡೆಂಟಲ್ ಕಾಲೇಜಿನಲ್ಲಿ ರ‍್ಯಾಗಿಂಗ್‌| ಹಲ್ಲೆಗೊಳಗಾದ ವಿದ್ಯಾರ್ಥಿನಿಯಿಂದ ದೂರು ದಾಖಲು| ಪ್ರಾಂಶುಪಾಲರಿಂದ ಆರೋಪ ನಿರಾಕರಣೆ Read More »

ಗಣರಾಜ್ಯೋತ್ಸವ ಫರೇಡ್ ಗೆ ಪುತ್ತೂರಿನ‌ ವಜೀದಾಬಾನು ಆಯ್ಕೆ

ಸಮಗ್ರ ನ್ಯೂಸ್ : 2023 ನೇ ಸಾಲಿನಲ್ಲಿ ದೆಹಲಿಯಲ್ಲಿ ನಡೆಯಲಿರುವ ಭಾರತ ಗಣರಾಜ್ಯೋತ್ಸವ ಫರೇಡ್ ನಲ್ಲಿ ಭಾಗವಹಿಸಲು ಪುತ್ತೂರಿನ ಡಾ| ವಜಿದಾಬಾನು ಆಯ್ಕೆಯಾಗಿದ್ದಾರೆ. ಎನ್ ಎಸ್ ಎಸ್ ವತಿಯಿಂದ ನಡೆದ ದಕ್ಷಿಣ ಪ್ರಾಂತೀಯ ಪ್ರೀ ಆರ್ ಡಿ ತರಬೇತಿ ಶಿಬಿರದಲ್ಲಿ ಕರ್ನಾಟಕದಿಂದ ಆಯ್ಕೆಗೊಂಡಿರುವ ಏಳು ಮಂದಿಯಲ್ಲಿ ಇವರು ಒಬ್ಬರಾಗಿದ್ದಾರೆ. ಇವರು ಪುತ್ತೂರು ಅಂಬಿಕಾ ಪದವಿಪೂರ್ವ ಕಾಲೇಜಿನ ಹಿರಿಯ ವಿದ್ಯಾರ್ಥಿನಿ. ಈಕೆ ಪುತ್ತೂರಿನ ಮೊಟ್ಟೆತ್ತಡ್ಕ ಇಸ್ಮಾಯಿಲ್ ಮತ್ತು ಸುಫಿಯಾ ಬಾನು ದಂಪತಿಗಳ ಪುತ್ರಿ. ಪ್ರಸ್ತುತ ಎ.ಜೆ ದಂತ ವೈದ್ಯಕೀಯ

ಗಣರಾಜ್ಯೋತ್ಸವ ಫರೇಡ್ ಗೆ ಪುತ್ತೂರಿನ‌ ವಜೀದಾಬಾನು ಆಯ್ಕೆ Read More »

ಸೌದಿಯಿಂದ ಬಂದ ಮಂಗಳೂರು ಮೂಲದ ವ್ಯಕ್ತಿಗೆ ಕೋವಿಡ್ ದೃಢ

ಸಮಗ್ರ ನ್ಯೂಸ್: ಸೌದಿ ಅರೇಬಿಯದಿಂದ ಆಗಮಿಸಿದ ಮಂಗಳೂರು ಮೂಲದ ವ್ಯಕ್ತಿಗೆ ಕೋವಿಡ್‌ ದೃಢಪಟ್ಟಿದ್ದು, ಅವರ ಗಂಟಲ ದ್ರವ ಮಾದರಿಯನ್ನು ಜಿನೋಮಿಕ್‌ ಸೀಕ್ವೆನ್ಸಿಂಗ್‌ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಬೆಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ಮಂಗಳೂರಿನ ವ್ಯಕ್ತಿಯನ್ನು ಅಲ್ಲಿ ಕೋವಿಡ್‌ ತಪಾಸಣೆಗೆ ಒಳಪಡಿಸಿದಾಗ ಕೋವಿಡ್‌ ದೃಢಪಟ್ಟಿದೆ. ಸೌಮ್ಯ ಗುಣಲಕ್ಷಣ ಹೊಂದಿದ ಕಾರಣ ಅವರನ್ನು ಮಂಗಳೂರಿನ ಅವರ ಮನೆಯಲ್ಲಿ ಗೃಹ ನಿಗಾವಣೆಯಲ್ಲಿರಿಸಲಾಗಿದೆ. ಹೈರಿಸ್ಕ್ ದೇಶಗಳ ಪೈಕಿ ಸೌದಿ ಅರೇಬಿಯಾ ಇಲ್ಲ. ಆದರೆ ರ್‍ಯಾಂಡಮ್‌ ಆಗಿ ತಪಾಸಣೆ ವೇಳೆ ಪಾಸಿಟಿವ್‌ ಕಂಡುಬಂದಿದೆ. ದಕ್ಷಿಣ ಕನ್ನಡ

ಸೌದಿಯಿಂದ ಬಂದ ಮಂಗಳೂರು ಮೂಲದ ವ್ಯಕ್ತಿಗೆ ಕೋವಿಡ್ ದೃಢ Read More »