ಕರಾವಳಿ

ಬೆಳ್ತಂಗಡಿ: ಬಸ್‌ಗಳ ನಡುವೆ ಅಪಘಾತ – ಇಬ್ಬರು ಗಂಭೀರ

ಬೆಳ್ತಂಗಡಿ: ಮಕ್ಕಳ ಪ್ರವಾಸದ ಬಸ್‌ ಹಾಗೂ ಕೆಎಸ್‌‌ಆರ್‌‌ಟಿಸಿ ಬಸ್‌ ನಡುವೆ ಅಪಘಾತದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ನಿಡ್ಲೆ ಗ್ರಾಮದ ಬೂಡುಜಾಲು ಸಮೀಪ ಸಂಭವಿಸಿದೆ ಟೂರಿಸ್ಟ್‌ ಬಸ್‌ ಚಾಲಕ ಅಭಿಷೇಕ್‌ ಹಾಗೂ ಬಸ್‌ ಪ್ರಯಾಣಿಕ ದುಗೇಶ್‌ ಗಂಭೀರ ಗಾಯಗೊಂಡವರು. ಸಿಂಧನೂರಿನ ಕಾಲೇಜು ವಿದ್ಯಾರ್ಥಿಗಳ ಪ್ರವಾಸದ ಟೂರಿಸ್ಟ್‌ ಬಸ್‌ ಧರ್ಮಸ್ಥಳ ಕಡೆಗೆ ಪ್ರಯಾಣಿಸುತ್ತಿದ್ದಾಗ ಕೊಕ್ಕಡ ಕಡೆಗೆ ಹೋಗುವ ಕೆಎಸ್ಸಾರ್ಟಿಸಿ ಬಸ್‌ ಢಿಕ್ಕಿ ಹೊಡೆದಿದೆ. ಇನ್ನು ಚಾಲಕರ ಸಹಿತ ಬಸ್‌ನಲ್ಲಿದ್ದ ಮಕ್ಕಳು ಹಾಗೂ ಪ್ರಯಾಣಿಕರು ಗಾಯಗೊಂಡಿದ್ದು ಗಾಯಾಳುಗಳನ್ನು ಸ್ಥಳೀಯ […]

ಬೆಳ್ತಂಗಡಿ: ಬಸ್‌ಗಳ ನಡುವೆ ಅಪಘಾತ – ಇಬ್ಬರು ಗಂಭೀರ Read More »

ಮೂಡಬಿದ್ರೆ: ಅಂತರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿಗೆ ವಿದ್ಯುಕ್ತ ತೆರೆ

ಸಮಗ್ರ ನ್ಯೂಸ್: ಮೂಡಬಿದ್ರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ನಡೆಯುತ್ತಿದ್ದ ಅಂತಾರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿಗೆ ಮಂಗಳವಾರ ಅದ್ದೂರಿಯ ತೆರೆ ಬಿದ್ದಿದೆ. ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಡಿ.21ರಂದು ಜಾಂಬೂರಿಗೆ ಚಾಲನೆ ನೀಡಿದ್ದರೆ, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ರವಿವಾರ ಆಗಮಿಸಿ ಜಾಂಬೂರಿಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದರು. ದೇಶ ವಿದೇಶದ ಸ್ಕೌಟ್ಸ್ ಮತ್ತು ಗೈಡ್ಸ್‌ನ ಸಾವಿರಾರು ವಿದ್ಯಾರ್ಥಿಗಳು, ಶಿಕ್ಷಕರು, ಸಾರ್ವಜನಿಕರ ಸಹಿತ ಲಕ್ಷಾಂತರ ಮಂದಿ ದೇಶದಲ್ಲೇ ಪ್ರಪ್ರಥಮ ಬಾರಿಗೆ ನಡೆದ ಜಾಂಬೂರಿಗೆ ಸಾಕ್ಷಿಯಾಗಿದ್ದರು. ಮಂಗಳವಾರ ಮುಂಜಾನೆ ಸಾವಿರಾರು ವಿದ್ಯಾರ್ಥಿಗಳು ಯೋಗ ಪ್ರದರ್ಶನ

ಮೂಡಬಿದ್ರೆ: ಅಂತರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿಗೆ ವಿದ್ಯುಕ್ತ ತೆರೆ Read More »

ಮಲೆನಾಡಲ್ಲಿ ನಿಲ್ಲದ ಕಾಡಾನೆ ದಾಳಿ| ಕೂದಲೆಳೆ ಅಂತರದಲ್ಲಿ ಪಾರಾದ ದಂಪತಿ| ಮರೀಚಿಕೆಯಾದ ಶಾಶ್ಬತ ಪರಿಹಾರ

ಸಮಗ್ರ ನ್ಯೂಸ್: ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನಲ್ಲಿ ಹೊಲದಲ್ಲಿ ರಾಗಿ ಕಾಯುತ್ತಾ ಮಲಗಿದ್ದ ರೈತನ ಮೇಲೆ ಕಾಡಾನೆ ದಾಳಿ ಮಾಡಿ ಕೊಂದ ಘಟನೆ ನಡೆದು 24 ಗಂಟೆಯೂ ಆಗಿಲ್ಲ. ಮತ್ತೊಂದು ಆನೆ ದಾಳಿ ಪ್ರಕರಣ ದಾಖಲಾಗಿದೆ. ತರೀಕೆರೆ ತಾಲೂಕಿನ ರಾಗಿಬಸವನಹಳ್ಳಿಯಲ್ಲಿ ಹೊಲದಲ್ಲಿ ರಾಗಿ ಕಾಯುತ್ತಾ ಮಲಗಿದ್ದ 65 ವರ್ಷದ ಈರಣ್ಣ ಎಂಬುವರ ಮೇಲೆ ದಾಳಿ ಮಾಡಿದ ಕಾಡಾನೆ ಅವರನ್ನ ಕೊಂದಿತ್ತು. ಇಂದು ಬೆಳಗ್ಗೆ ಮೂಡಿಗೆರೆ ತಾಲೂಕಿನ ಬಣಕಲ್ ಸಮೀಪ ರಸ್ತೆಬದಿ ಆಶ್ರಯ ಪಡೆದಿದ್ದವರ ಮೇಲೂ ಕಾಡಾನೆ ದಾಳಿ

ಮಲೆನಾಡಲ್ಲಿ ನಿಲ್ಲದ ಕಾಡಾನೆ ದಾಳಿ| ಕೂದಲೆಳೆ ಅಂತರದಲ್ಲಿ ಪಾರಾದ ದಂಪತಿ| ಮರೀಚಿಕೆಯಾದ ಶಾಶ್ಬತ ಪರಿಹಾರ Read More »

ಜಲೀಲ್ ಹತ್ಯೆ ಪ್ರಕರಣ| ಇಬ್ಬರು ಮಹಿಳೆಯರ ವಿಚಾರಣೆ| ಕೊಲೆಯ ಹಿಂದೆ ಇದೆಯಾ ಗಾಂಜಾ ಘಮಲು?

ಸಮಗ್ರ ನ್ಯೂಸ್: ಮಂಗಳೂರಿನ ಕಾಟಿಪಳ್ಳದಲ್ಲಿ ನಡೆದ ಜಲೀಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರ ಮಹಿಳೆಯನ್ನು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.ಜಲೀಲ್‌ ಹತ್ಯೆ ನಡೆಸಿ ದುಷ್ಕರ್ಮಿಗಳು ಪರಾರಿಯಾಗಿದ್ದರ ಬಗ್ಗೆ ಪೊಲೀಸರು ಮಾಹಿತಿ ಕಲೆಹಾಕುತ್ತಿದ್ದಾರೆ. ಈ ನಡುವೆ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಮಹಿಳೆಯರನ್ನು ವಿಚಾರಣೆ ನಡೆಸಿದ್ದಾರೆ. ಆದರೆ ಅವರಿಗೆ ಗಾಂಜಾ ಮಾಫಿಯಾ ನಡೆಸುತ್ತಿದ್ದರು ಎಂದು ತಿಳಿದುಬಂದಿದೆ. ಡಿ24ರ ಶನಿವಾರ ಸಂಜೆ ಜಲೀಲ್‌ ಅಂಗಡಿಯಲ್ಲಿದ್ದ. ಆಗ ಇಬ್ಬರು ದುಷ್ಕರ್ಮಿಗಳು ಬೈಕ್‌ನಲ್ಲಿ ಬಂದು ಜಲೀಲ್ ಜೊತೆ ಕೆಲ ಕಾಲ ಮಾತಿನ ಚಕಮಕಿ ನಡೆಸಿದ

ಜಲೀಲ್ ಹತ್ಯೆ ಪ್ರಕರಣ| ಇಬ್ಬರು ಮಹಿಳೆಯರ ವಿಚಾರಣೆ| ಕೊಲೆಯ ಹಿಂದೆ ಇದೆಯಾ ಗಾಂಜಾ ಘಮಲು? Read More »

ಸುರತ್ಕಲ್ ಹತ್ಯೆ ಪ್ರಕರಣ| ಸಿಎಂ ಬೊಮ್ಮಾಯಿ ಜೊತೆ ಚರ್ಚಿಸಿದ ಬಾವಾ!

ಸಮಗ್ರ ನ್ಯೂಸ್: ಮಂಗಳೂರಿನ ಕೃಷ್ಣಾಪುರದಲ್ಲಿ ನಡೆದಿರುವ ಅಬ್ದುಲ್ ಜಲೀಲ್ ಹತ್ಯೆಗೆ ಸಂಬಂಧಿಸಿ ಮಂಗಳೂರು ಉತ್ತರ ಕ್ಷೇತ್ರದ ಮಾಜಿ ಶಾಸಕ ಮೊಯಿದೀನ್ ಬಾವಾ ಅವರು ರಾಜ್ಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜೊತೆ ಚರ್ಚಿಸಿದರು. ಈ ವೇಳೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪದೇ ಪದೇ ಶಾಂತಿ ಹದಗೆಡುತ್ತಿದ್ದು ಅಮಾಯಕ ಯುವಕರು ಬಲಿಯಾಗುತ್ತಿರುವುದನ್ನು ಸಿಎಂ ಗಮನಕ್ಕೆ ತಂದರು. ಮುಖ್ಯಮಂತ್ರಿ ಅವರು ಈ ಬಗ್ಗೆ ಕಠಿಣ ಕ್ರಮ ಕೈಗೊಂಡು ಆರೋಪಿಗಳನ್ನು ತಕ್ಷಣವೇ ಬಂಧಿಸುವ ಮೂಲಕ ಕಾನೂನು ಸುವ್ಯವಸ್ಥೆಗೆ ಧಕ್ಕೆ ಉಂಟುಮಾಡುವವರ ವಿರುದ್ಧ ಕಠಿಣ

ಸುರತ್ಕಲ್ ಹತ್ಯೆ ಪ್ರಕರಣ| ಸಿಎಂ ಬೊಮ್ಮಾಯಿ ಜೊತೆ ಚರ್ಚಿಸಿದ ಬಾವಾ! Read More »

ಸುರತ್ಕಲ್ ಹತ್ಯೆ ಹಿನ್ನೆಲೆ| ಮಂಗಳೂರು ನಗರದಲ್ಲಿ ಸೆಕ್ಷನ್ ಜಾರಿ; ಮದ್ಯ ಮಾರಾಟಕ್ಕೂ ಬ್ರೇಕ್

ಸಮಗ್ರ ನ್ಯೂಸ್: ಮಂಗಳೂರು ಹೊರವಲಯದ ಸುರತ್ಕಲ್ ಕಾಟಿಪಳ್ಳದಲ್ಲಿ ನಡೆದ ಜಲೀಲ್ ಹತ್ಯೆ ಪ್ರಕರಣ ಹಿನ್ನೆಲೆಯಲ್ಲಿ ನಗರದಾದ್ಯಂತ ಪ್ರಕ್ಷುಬ್ಧ ವಾತಾವರಣ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ನಗರದಲ್ಲಿ ಸೆಕ್ಷನ್​ 144 ಜಾರಿಯಾಗಿದೆ. ಮುಂಜಾಗ್ರತಾ ಕ್ರಮವಾಗಿ ನಾಲ್ಕು ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೆಕ್ಷನ್ 144 ಜಾರಿಯಲ್ಲಿದೆ. ಪೂರ್ವನಿಯೋಜಿತ ಕಾರ್ಯಕ್ರಮಗಳಿಗೆ ಇದರಿಂದ ವಿನಾಯತಿ ನೀಡಲಾಗಿದ್ದು ಎರಡು ದಿನಗಳ ಕಾಲ ಸುರತ್ಕಲ್ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿದೆ ಎಂದು ಮಂಗಳೂರು ಪೋಲಿಸ್ ಕಮಿಷನರ್ ಎನ್.ಶಶಿಕುಮಾರ್ ಹೇಳಿಕೆ ನೀಡಿದ್ದಾರೆ. ‘ಇದೀಗ ಆರೋಪಿಗಳ ಪತ್ತೆಗೆ ಎಂಟು ಅಧಿಕಾರಿಗಳಿರುವ

ಸುರತ್ಕಲ್ ಹತ್ಯೆ ಹಿನ್ನೆಲೆ| ಮಂಗಳೂರು ನಗರದಲ್ಲಿ ಸೆಕ್ಷನ್ ಜಾರಿ; ಮದ್ಯ ಮಾರಾಟಕ್ಕೂ ಬ್ರೇಕ್ Read More »

ಉಪ್ಪಿನಂಗಡಿ: ಕುದುರೆ ಸವಾರಿ ಮಾಡುತ್ತಿದ್ದ ವೇಳೆ ಬಸ್ ಡಿಕ್ಕಿ| ಕುದುರೆ ಸಾವು, ಸವಾರ ಗಂಭೀರ

ಸಮಗ್ರ ನ್ಯೂಸ್: ಕುದುರೆಯೊಂದಕ್ಕೆ ಸರ್ಕಾರಿ ಬಸ್ ಢಿಕ್ಕಿ ಹೊಡೆದ ಪರಿಣಾಮ ಕುದುರೆ ಸಾವನ್ನಪ್ಪಿದ್ದು, ಕುದುರೆ ಸವಾರ ಗಂಭೀರ ಗಾಯಗೊಂಡ ಘಟನೆ ಬೆಳ್ತಂಗಡಿ ತಾಲೂಕಿನ ಇಳಂತಿಲ ಗ್ರಾಮದ ಪದುಮಲೆ ಎಂಬಲ್ಲಿ ಡಿ.25 ರ ಭಾನುವಾರ ನಡೆದಿದೆ. ಸಚಿನ್ ಪೆಲಪ್ಪಾರು ಗಾಯಗೊಂಡ ಕುದುರೆ ಸವಾರ. ಉಪ್ಪಿನಂಗಡಿಯಲ್ಲಿ ಸಚಿನ್ ಕುದುರೆ ಸವಾರಿ ಮಾಡುತ್ತಿದ್ದ ವೇಳೆ ಬೆಳ್ತಂಗಡಿ ಕಡೆಗೆ ಬರುತಿದ್ದ ಸರ್ಕಾರಿ ಬಸ್ ಕುದುರೆಗೆ ಢಿಕ್ಕಿ ಹೊಡೆದ ಪರಿಣಾಮ ಕುದುರೆ ಹಾಗೂ ಸವಾರ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಉಪ್ಪಿನಂಗಡಿ ಸಮೀಪ ಪಿಲಿಗೂಡಿನ ಮೋನು

ಉಪ್ಪಿನಂಗಡಿ: ಕುದುರೆ ಸವಾರಿ ಮಾಡುತ್ತಿದ್ದ ವೇಳೆ ಬಸ್ ಡಿಕ್ಕಿ| ಕುದುರೆ ಸಾವು, ಸವಾರ ಗಂಭೀರ Read More »

ಮೂಡಬಿದಿರೆ ಜಾಂಬೂರಿ ಹಿನ್ನಲೆ| ದ.ಕ ಜಿಲ್ಲೆಯಲ್ಲಿ 3 ದಿನ ಬಸ್ ಸಂಚಾರದಲ್ಲಿ ವ್ಯತ್ಯಯ| ಕೆಎಸ್ಆರ್ ಟಿಸಿ ಯಿಂದ ಪ್ರಕಟಣೆ

ಸಮಗ್ರ ನ್ಯೂಸ್: ಮೂಡುಬಿದಿರೆಯಲ್ಲಿ ಜಾಂಬೂರಿ ನಡೆಯುತ್ತಿದ್ದು, ಈ ಹಿನ್ನೆಲೆ ರಾಜ್ಯ, ಹೊರ ರಾಜ್ಯಗಳಿಂದ ಸ್ಕೌಟ್ಸ್‌ ಮತ್ತು ಗೈಡ್ಸ್‌ನ 50,000ಕ್ಕಿಂತಲೂ ಹೆಚ್ಚಿನ ವಿದ್ಯಾರ್ಥಿಗಳು ಜಾಂಬೂರಿಗೆ ಆಗಮಿಸಿದ್ದಾರೆ. ಅಲ್ಲದೇ ಅವರ ಜೊತೆಗೆ ಪೋಷಕರು, ಶಿಕ್ಷಕರು ಸಹ ಆಗಮಿಸಿದ್ದಾರೆ. ಇವರೆಲ್ಲರೂ ಜಾಂಬೂರಿ ಮುಗಿಸಿ ತಮ್ಮ ಊರುಗಳಿಗೆ ಹಿಂದಿರುಗುವ ವೇಳೆ ಡಿಸೆಂಬರ್‌ 26ರಿಂದ 28ರವರೆಗೆ ಮೂರು ದಿನಗಳ ಕಾಲ ಜಿಲ್ಲೆಯಲ್ಲಿ ಕೆಎಸ್‌ಆರ್‌ಟಿಸಿ ಬಸ್‌ ಸಂಚಾರದಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆ ಇದೆ ಎನ್ನುವ ಮಾಹಿತಿ ಹೊರಬಿದ್ದಿದೆ. ಕಾರ್ಯಕ್ರಮ ಮುಗಿಸಿ ತಮ್ಮ ಊರುಗಳಿಗೆ ಹಿಂತಿರುಗುವಾಗ ಮೂಡಬಿದಿರೆಯಿಂದ

ಮೂಡಬಿದಿರೆ ಜಾಂಬೂರಿ ಹಿನ್ನಲೆ| ದ.ಕ ಜಿಲ್ಲೆಯಲ್ಲಿ 3 ದಿನ ಬಸ್ ಸಂಚಾರದಲ್ಲಿ ವ್ಯತ್ಯಯ| ಕೆಎಸ್ಆರ್ ಟಿಸಿ ಯಿಂದ ಪ್ರಕಟಣೆ Read More »

ಸುಳ್ಯ ಜಾತ್ರೋತ್ಸವದಲ್ಲಿ ಅನ್ಯಧರ್ಮಿಯರಿಗೆ ವ್ಯಾಪಾರ ನಿಷೇಧಿಸಲು ಹಿಂ.ಜಾ.ವೇ.ಮನವಿ

ಸಮಗ್ರ ನ್ಯೂಸ್: ಸುಳ್ಯದ ಪ್ರಸಿದ್ಧ ದೇವಸ್ಥಾನ ಚನ್ನಕೇಶವ ದೇವರ ಜಾತ್ರಾ ಸಂಧರ್ಭದಲ್ಲಿ ಅನ್ಯ ಧರ್ಮಿಯರಿಗೆ ಸಂತೆ ಮೈದಾನದಲ್ಲಿ ಏಲಂಗೆ ಅವಕಾಶ ನೀಡದಂತೆ ದೇವಸ್ಥಾನದ ಅಡಳಿತ ಮಂಡಳಿಗೆ ಹಿಂದು ಜಾಗರಣ ವೇದಿಕೆ ಸುಳ್ಯ ತಾಲೂಕು ವತಿಯಿಂದ ಮನವಿ ನೀಡಲಾಯಿತು. ಈ ಸಂಧರ್ಭದಲ್ಲಿ ಹಿಂ.ಜಾ.ವೇ. ನಗರ ಸಂಚಾಲಕ್ ನಿಕೇಶ್ ಉಬರಡ್ಕ, ಸಹ ಸಂಚಾಲಕ್ ಪ್ರಶಾಂತ್ ಕಾಯರ್ತ್ತೋಡಿ, ಸಮಿತಿ ಸದಸ್ಯರುಗಳಾದ, ಕೀರ್ತನ್ ಪೆರುಮುಂಡ,ಕೌಶಲ್, ರಕ್ಷಿತ್ ಐವರ್ನಾಡು ಮತ್ತಿತರರು ಉಪಸ್ಥಿತರಿದ್ದರು.

ಸುಳ್ಯ ಜಾತ್ರೋತ್ಸವದಲ್ಲಿ ಅನ್ಯಧರ್ಮಿಯರಿಗೆ ವ್ಯಾಪಾರ ನಿಷೇಧಿಸಲು ಹಿಂ.ಜಾ.ವೇ.ಮನವಿ Read More »

ರಂಗಸ್ಥಳದಲ್ಲೇ ಹೃದಯಾಘಾತ; ಹಿರಿಯ ಯಕ್ಷಗಾನ ಕಲಾವಿದ ಗುರುವಪ್ಪ ಬಾಯಾರು ಸಾವು

ಸಮಗ್ರ ನ್ಯೂಸ್: ಹಿರಿಯ ಯಕ್ಷಗಾನ ಕಲಾವಿದ ಗುರುವಪ್ಪ ಬಾಯಾರು (58) ರಂಗಸ್ಥಳದಲ್ಲೇ ಸಂಭವಿಸಿದ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಇವರು ದ.ಕ ಜಿಲ್ಲೆಯ ಮಂಗಳೂರು ತಾಲೂಕಿನ ಕಟೀಲು ಮೇಳದ ಕಲಾವಿದರಾಗಿದ್ದರು. ಕಟೀಲಿನ ಸರಸ್ವತೀ ಸದನದಲ್ಲಿ ʼತ್ರಿಜನ್ಮ ಮೋಕ್ಷʼ ಯಕ್ಷಗಾನ ನಡೆಯುತ್ತಿದ್ದ ಸಂದರ್ಭದಲ್ಲಿ ಇವರಿಗೆ ಹೃದಯಾಘಾತವಾಗಿದೆ. ಕಟೀಲು ದೇವಸ್ಥಾನದಲ್ಲಿ ಆರು ಯಕ್ಷಗಾನ ಮೇಳಗಳಿದ್ದು, ಇವರು ನಾಲ್ಕನೇ‌ ಮೇಳದ ಕಲಾವಿದರಾಗಿದ್ದಾರೆ. ʼತ್ರಿಜನ್ಮ ಮೋಕ್ಷʼ ಯಕ್ಷಗಾನದ ಅಂತಿಮ ಭಾಗದಲ್ಲಿ ಶಿಶುಪಾಲ- ದಂತವಕ್ತ್ರರ ವಧೆಯ ಪ್ರಸಂಗವಿದ್ದು, ಇದರಲ್ಲಿ ಗುರುವಪ್ಪ ಅವರು ಶಿಶುಪಾಲನ ಪಾತ್ರ ವಹಿಸಿದ್ದರು. ಕಾರ್ಯಕ್ರಮದ

ರಂಗಸ್ಥಳದಲ್ಲೇ ಹೃದಯಾಘಾತ; ಹಿರಿಯ ಯಕ್ಷಗಾನ ಕಲಾವಿದ ಗುರುವಪ್ಪ ಬಾಯಾರು ಸಾವು Read More »